Author: kannadanewsnow05

ಬೆಂಗಳೂರು : ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಡ್ರೈವರ್ ಗಳು ಕುಡಿದು ಬಂದು ಕರ್ತವ್ಯಕ್ಕೆ ಹಾಜರಾಗುತ್ತಿದ್ದರು. ಕುಡಿದು ಬರುತ್ತಿದ್ದ ಎಲೆಕ್ಟ್ರಿಕ್ ಬಸ್ ಡ್ರೈವರ್‌ಗಳ ಬಳಿ ಲಂಚ ಪಡೆದು ಡ್ಯೂಟಿ ನೀಡಿದ್ದಕ್ಕೆ ಬಿಎಂಟಿಸಿ ಅಧಿಕಾರಿ ಸೇರಿ 9 ಮಂದಿಯನ್ನು ಅಮಾನತು ಮಾಡಲಾಗಿದೆ. ಹೌದು ಬಿಎಂಟಿಸಿ ಚಾಲಕರು ಕುಡಿದು ಡ್ರೈವ್‌ ಮಾಡುತ್ತಿರುವ ವೀಡಿಯೋ ವೈರಲ್ ಆಗಿತ್ತು. ಕುಡಿದು ಬರುತ್ತಿದ್ದ ಬಸ್ ಡ್ರೈವರ್‌ಗಳಿಗೆ ಲಂಚ ಪಡೆದು ಅಧಿಕಾರಿಗಳು ಡ್ಯೂಟಿ ನೀಡುತ್ತಿದ್ದರು. ಈ ಹಿನ್ನೆಲೆಯಲ್ಲಿ ಡಿಪೋ ಮ್ಯಾನೇಜರ್ ಸೇರಿದಂತೆ 9 ಚಾಲಕರು ಸಸ್ಪೆಂಡ್ ಆಗಿದ್ದಾರೆ. ಡಿಪೋ- 35 ರ (ಕನ್ನಹಳ್ಳಿ) ಎಲೆಕ್ಟ್ರಿಕ್ ಬಸ್‌ಗಳನ್ನು ಡ್ರೈವಿಂಗ್ ಮಾಡಲು ಚಾಲಕರು ಕುಡಿದು ಬರುತ್ತಿದ್ದರು. ಸುಮಾರು 150 ಕ್ಕೂ ಹೆಚ್ಚು ಡ್ರೈವರ್‌ಗಳ ಬಳಿ ಅಧಿಕಾರಿಗಳು ಸಾವಿರಾರು ರೂಪಾಯಿ ಹಣ ಪಡೆದು ಬಸ್ ಓಡಿಸಲು ಅವಕಾಶ ನೀಡಿದ್ದರು. ಇದರಿಂದ ಅಪಘಾತ ಪ್ರಮಾಣ ಕೂಡ ಹೆಚ್ಚಳವಾಗಿದೆ. ಅದಕ್ಕಾಗಿ ಕಠಿಣ ಕ್ರಮಕೈಗೊಳ್ಳಲಾಗಿದೆ. ಅಮಾನತುಗೊಂಡವರು ಘಟಕ ವ್ಯವಸ್ಥಾಪಕ ಎಂ.ಜಿ.ಕೃಷ್ಣ, ಸಂಚಾರ ನಿರೀಕ್ಷಕ ಶ್ರೀನಿವಾಸ ಡಿ, ಅರುಣ್ ಕುಮಾರ್.ಇ.ಎಸ್. (ಸಹಾಯಕ…

Read More

ಶಿವಮೊಗ್ಗ : ರಾಜ್ಯದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿಯಾಗಿದ್ದು, ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಕೆಎಸ್ಆರ್ಟಿಸಿ ಡಿಪೋದ ಭದ್ರತಾ ಸಿಬ್ಬಂದಿಯೊಬ್ಬರು ಕರ್ತವ್ಯ ನಿರತರಾಗಿದ್ದಾಗಲೇ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಸಂದೀಪ್ (41) ಮೃತ ಕೆ ಎಸ್ ಆರ್ ಟಿ ಸಿ ಸಿಬ್ಬಂದಿ. ಸಂದೀಪ್ ಸಾಗರದ ಮಾರಿಕಾಂಬ ದೇವಾಲಯದ ಹಿಂಭಾಗದ ರಸ್ತೆಯ ನಿವಾಸಿಯಾಗಿದ್ದಾರೆ. ಸಂದೀಪ್ ಬುಧವಾರ ರಾತ್ರಿ ಪಾಳಿಯಲ್ಲಿ ಕೆಲಸ ಮಾಡುತ್ತಿದ್ದರು. ಇವರಿಗೆ ಏಕಾಏಕಿ ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣ ಸಂದೀಪ್​ರನ್ನು ಸಹೋದ್ಯೋಗಿಗಳು ಕೆ ಎಸ್ ಆರ್ ಟಿ ಸಿ ಬಸ್ಸಿನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಆದರೆ ಅಷ್ಟರಲ್ಲೇ ಸಂದೀಪ್ ಸಾವನ್ನಪ್ಪಿದ್ದಾರೆ. ಸಾಗರದ ಸರ್ಕಾರಿ ಆಸ್ಪತ್ರೆಯಲ್ಲಿ ಸಂದೀಪ್ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಇರಿಸಲಾಗಿದೆ. ಇನ್ನು KSRTC ಭದ್ರತಾ ಸಿಬ್ಬಂದಿ ಸಂದೀಪ್ ಹೃದಯಘಾತದಿಂದ ಸಾವನ್ನಪ್ಪಿರುವ ವಿಚಾರ ತಿಳಿದು, ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಕೆಎಸ್​ಆರ್​ಟಿಸಿ ಸಿಬ್ಬಂದಿ ಸಂದೀಪ್​ ಅವರ ಅಗಲಿಕೆಗೆ ಸಂತಾಪ ಸೂಚಿಸಿದ್ದಾರೆ.

Read More

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆ ಕುರಿತು ಈಗಾಗಲೇ ಭಾರಿ ಚರ್ಚೆ ನಡೆಯುತ್ತಿದ್ದು, ಇದರ ಮಧ್ಯ ಕಾಂಗ್ರೆಸ್ ಮಾಜಿ ಸಂಸದ ಡಿಕೆ ಸುರೇಶ್ ಅವರು ಸಿದ್ದರಾಮಯ್ಯ ಎಷ್ಟು ದಿನ ಸಿಎಂ ಆಗಿರುತ್ತಾರೋ ಅಷ್ಟು ದಿನವೂ ಅವರೇ ಮುಖ್ಯಮಂತ್ರಿ ಎಂದು ಹೇಳಿಕೆ ನೀಡಿದರು. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಸಿದ್ದರಾಮಯ್ಯನವರೇ ನಮ್ಮ ನಾಯಕರು ಅವರ ನೇತೃತ್ವದಲ್ಲಿಯೆ ಪಕ್ಷ ಸಂಘಟನೆ ನಡೆಯಲಿದೆ. ನಾಯಕತ್ವ ಬದಲಾವಣೆ ಎಲ್ಲವೂ ಕೂಡ ಊಹಾಪೋಹ. ಯಾವುದೇ ವಿಚಾರ ಕೂಡ ಪಕ್ಷದ ಮುಂದೆ ಇಲ್ಲ. ಐದು ವರ್ಷ ಆದಮೇಲೆ ಕೂಡ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಆಗಿರಬಹುದು. ಅವರು ನಮ್ಮ ನಾಯಕರು ಅವರ ನಾಯಕತ್ವದಲ್ಲಿ ನಾವು ಪಕ್ಷವನ್ನು ಸಂಘಟನೆ ಮಾಡುತ್ತಿದ್ದೇವೆ ಪಕ್ಷವನ್ನು ಕಟ್ಟುತ್ತಿದ್ದು, ಮುಂದಿನ ಎಲ್ಲಾ ಚುನಾವಣೆಗಳು ಅವರ ನೇತೃತ್ವದಲ್ಲಿ ನಡೆಯಲಿವೆ ಎಂದು ತಿಳಿಸಿದರು.

Read More

ಬೆಂಗಳೂರು : 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿ.ಯು.ಸಿ. ಪರೀಕ್ಷೆ-1 ಮತ್ತು ಪರೀಕ್ಷೆ-2 ರ ‘ಅಂತಿಮ ವೇಳಾಪಟ್ಟಿ’ ಯನ್ನು ಪ್ರಕಟಿಸಲಾಗಿದೆ. ಈ ವಿಚಾರಕ್ಕೆ ಸಂಬಂಧಪಟ್ಟಂತೆ ಈ ಕುರಿತು ಸುತ್ತೋಲೆ ಹೊರಡಿಸಿದ ಪರೀಕ್ಷಾ ಮಂಡಳಿ ‘ಮೇಲಿನ ವಿಷಯ ಹಾಗೂ ಉಲ್ಲೇಖಕ್ಕೆ ಸಂಬಂಧಿಸಿದಂತೆ 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿ.ಯು.ಸಿ. ಪರೀಕ್ಷೆ-1 ಮತ್ತು ಪರೀಕ್ಷೆ-2 ರ ಅಂತಿಮ ವೇಳಾಪಟ್ಟಿಯನ್ನು ಮಂಡಳಿಯ ಜಾಲತಾಣದಲ್ಲಿ ದಿನಾಂಕ:04-11-2025 ರಂದು ಪ್ರಕಟಿಸಲಾಗಿದೆ’. ‘ರಾಜ್ಯದ ಎಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರುಗಳು ಹಾಗೂ ಪ್ರೌಢಶಾಲಾ ಮುಖ್ಯ ಶಿಕ್ಷಕರು ತಮ್ಮ ಶಾಲಾ/ಕಾಲೇಜುಗಳ “ಪ್ರಕಟಣಾ ಫಲಕ” ದಲ್ಲಿ ವೇಳಾಪಟ್ಟಿಯನ್ನು ಪ್ರಕಟಿಸಿ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲು ತಿಳಿಸಿದೆ.

Read More

ಬಾಗಲಕೋಟೆ : ಕಾಂಗ್ರೆಸ್ ಹಿರಿಯ ಶಾಸಕ ಹಾಗೂ ಮಾಜಿ ಸಚಿವರಾಗಿದಂತಹ ಎಚ್ ವೈ ಮೇಟಿ ಅವರು ಅನಾರೋಗ್ಯದಿಂದ ನಿನ್ನೆ ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ಸಾವನಪ್ಪಿದ್ದರು. ಇಂದು ಹುಟ್ಟೂರಾದ ಬಾಗಲಕೋಟೆ ಜಿಲ್ಲೆಯ ತಿಮ್ಮಾಪುರ ಗ್ರಾಮಕ್ಕೆ ಮೃತ ದೇಹ ಶಿಫ್ಟ್ ಮಾಡಲಾಗಿತ್ತು. ಇದೀಗ ಸಕಲ ಸರ್ಕಾರಿ ಗೌರವಗಳೊಂದಿಗೆ ಹಾಗೂ ಕುರುಬ ಸಮಾಜದ ಸಂಪ್ರದಾಯದಂತೆ ಎಚ್ ವೈ ಮೇಟಿ ಅವರ ತಂದೆ ತಾಯಿ ಪಕ್ಕದಲ್ಲೇ ಅವರ ಅಂತ್ಯಕ್ರಿಯೆ ನೆರವೇರಿತು. ಸಿಎಂ ಸಿದ್ದರಾಮಯ್ಯ ಹಾಗೂ ಅನೇಕ ಗಣ್ಯರು ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದರು. ಅಂತ್ಯಕ್ರಿಯೆ ಬಳಿಕ ಸಿಎಂ ಸಿದ್ದರಾಮಯ್ಯ ಮಾತನಾಡಿ, ಎಚ್ ವೈ ಮೇಟಿಗೆ ಇನ್ನೊಂದು ಹೆಸರೇ ನಿಷ್ಠಾವಂತ. ಮೇಟಿ ನನ್ನ ಜೊತೆಗೆ ಹೆಚ್ಚು ಮಾತನಾಡುತ್ತಿರಲಿಲ್ಲ ಎದುರು ಕೂಡುತ್ತಿರಲಿಲ್ಲ. ಆದರೆ ನನ್ನ ನಿರ್ಧಾರಕ್ಕೆ ಯಾವಾಗಲೂ ಬದ್ಧರಾಗಿರುತ್ತಿದ್ದರು ನಾನು ಏನೇ ತೀರ್ಮಾನ ಮಾಡಿದರು ಅದಕ್ಕೆ ಅವರು ಬದ್ಧರಾಗಿರುತ್ತಿದ್ದರು. ನಾನು ಕಾಂಗ್ರೆಸ್ ಸೇರಿದಾಗ ಮೇಟಿ ಕೂಡ ಕಾಂಗ್ರೆಸ್ ಸೇರಿದರು. ನಾನು ಹೆಚ್ ವೈ ಮೇಟಿ ಅವರಿಗಿಂತ ಒಂದು ವರ್ಷ ಚಿಕ್ಕವನು ಆದರೆ ನನ್ನನ್ನು…

Read More

ಬೆಂಗಳೂರು : ಸಾಮಾನ್ಯವಾಗಿ ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಮಧ್ಯಾಹ್ನದ ಬಿಸಿ ಊಟ ನೀಡಲಾಗುತ್ತಿತ್ತು ಒಂದರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಬಿಸಿಊಟ ನೀಡುವ ಮೂಲಕ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಹಾಜರಾತಿಗೆ ಸರ್ಕಾರ ಈ ಒಂದು ಯೋಜನೆ ರೂಪಿಸಿತ್ತು. ಇದೀಗ ಸರ್ಕಾರ ಮತ್ತೊಂದು ಹೆಜ್ಜೆ ಮುಂದಿಟ್ಟಿದ್ದು ಪಿಯುಸಿ ವಿದ್ಯಾರ್ಥಿಗಳಿಗೂ ಕೂಡ ಮಧ್ಯಾಹ್ನದ ಬಿಸಿ ಊಟ ನೀಡಲು ಶಿಕ್ಷಣ ಇಲಾಖೆ, ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ. ಹೌದು ಪಿಯುಸಿ ವಿದ್ಯಾರ್ಥಿಗಳಿಗೂ ಶಿಕ್ಷಣ ಇಲಾಖೆಯಿಂದ ಗುಡ್ ನ್ಯೂಸ್, ಸಿಕ್ಕಿದ್ದು ಇನ್ಮುಂದೆ ಪಿಯುಸಿ ವಿದ್ಯಾರ್ಥಿಗಳಿಗೂ ಕೂಡ ಮಧ್ಯಾಹ್ನದ ಬಿಸಿ ಊಟ ನೀಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಸರಕಾರಿ ಪಿಯು ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿಸಲು ಚಿಂತನೆ ನಡೆದಿದೆ ಸರ್ಕಾರಿ ಕಾಲೇಜುಗಳ ಪ್ರವೇಶ ಅತಿಸಲು ಶಿಕ್ಷಣ ಇಲಾಖೆ ಚಿಂತನೆ ನಡೆಸುತ್ತಿದೆ. ಈ ಮೂಲಕ ಇನ್ನು ಮುಂದೆ ಪಿಯುಸಿ ವಿದ್ಯಾರ್ಥಿಗಳಿಗೂ ಕೂಡ ಇನ್ಮುಂದೆ ಮಧ್ಯಾಹ್ನದ ಬಿಸಿ ಊಟ ನೀಡಲಾಗುತ್ತದೆ.

Read More

ಶಿವಮೊಗ್ಗ : ಶಿವಮೊಗ್ಗದಲ್ಲಿ ದುರಂತವೊಂದು ಸಂಭವಿಸಿದ್ದು, ಇಲ್ಲಿನ ಕೋಟೆ ರಸ್ತೆಯ ಸರ್ಕಾರಿ ಬಾಲಕಿಯರ ಹಾಸ್ಟೆಲ್‌ನ ಟೆರೇಸ್‌ ಮೇಲೆ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿಯ ಮೃತದೇಹ ಪತ್ತೆಯಾಗಿದೆ. ಭದ್ರಾವತಿ ತಾಲೂಕು ಗಂಗೂರಿನ ವನಿಷಾ (21) ಮೃತ ವಿದ್ಯಾರ್ಥಿನಿ. ಹಾಸ್ಟೆಲ್‌ನ ಟೆರೇಸ್‌ನಲ್ಲಿರುವ ನೀರಿನ ಟ್ಯಾಂಕ್‌ ಪಕ್ಕದಲ್ಲಿ ವನಿಷಾ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಟೆರೇಸ್‌ ಮೇಲೆ ಹೋದ ವಿದ್ಯಾರ್ಥಿನಿಯರು ಇದನ್ನು ಗಮನಿಸಿ ಕೂಡಲೇ ವಾರ್ಡನ್‌ಗೆ ಮಾಹಿತಿ ನೀಡಿದ್ದಾರೆ. ವಿದ್ಯಾರ್ಥಿನಿ ವನಿಷಾ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಗೆ ಕಾರಣ ತಿಳಿದು ಬಂದಿಲ್ಲ. ವನಿಷಾ, ಡಿವಿಎಸ್‌ ಕಾಲೇಜಿನಲ್ಲಿ ಅಂತಿಮ ವರ್ಷದ ಬಿಎಸ್ಸಿ ಪದವಿ ಓದುತ್ತಿದ್ದರು. ಕೋಟೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ತನಿಖೆ ನಡೆಸುತ್ತಿದ್ದಾರೆ

Read More

ಬೆಂಗಳೂರು : ಇತ್ತೀಚಿಗೆ ಜಿಎಸ್​ಟಿ ಕಡಿತಾದ ಬೆನ್ನೆಲೆ ಕೆಎಂಎಫ್ ನಂದಿನಿ ತುಪ್ಪ ಸೇರಿದಂತೆ ಹಲವು ವಸ್ತುಗಳ ಮೇಲಿನ ದರ ಕಡಿಮೆ ಮಾಡಿತ್ತು. ಇದೀಗ ಗ್ರಾಹಕರಿಗೆ ದರ ಏರಿಕೆ ಶಾಕ್ ನೀಡಿದ್ದು ನಂದಿನಿ ತುಪ್ಪದ ದರ ಪ್ರತಿ ಲೀಟರ್ಗೆ 90 ರೂಪಾಯಿ ಏರಿಕೆಯಾಗಿದೆ. ಹೌದು ಜಿಎಸ್‌ಟಿ ಕಡಿತದ ಬಳಿಕ ಕೆಎಂಎಫ್ ರಾಜ್ಯದ ಜನತೆಗೆ ಸಿಹಿ ಸುದ್ದಿ ನೀಡಿತು. ಆದರೆ ತುಪ್ಪಕ್ಕೆ ಬೇಡಿಕೆ ಹೆಚ್ಚಾಗುತ್ತಿದ್ದಂತೆ ದಿಢೀರ್ ದರ ಏರಿಕೆ ಮಾಡಿದೆ ಈ ಮೂಲಕ ರಾಜ್ಯದ ಜನತೆಗೆ ಶಾಕ್ ನೀಡಿದೆ. ಒಂದು ಲೀಟರ್ ನಂದಿನಿ ತುಪ್ಪಕ್ಕೆ, ಇದೀಗ ರೂ.700 ನಿಗದಿ ಮಾಡಲಾಗಿದೆ.  ಈ ವಿಚಾರಕ್ಕೆ ಸಂಬಂಧಪಟ್ಟಂತೆ ಡಿಕೆ ಸುರೇಶ್ ಮಾತನಾಡಿದ್ದು ತುಪ್ಪ ಹಾಲಿನ ದರ ಸರ್ಕಾರ ಏರಿಕೆ ಮಾಡಿದೆ ಒಟ್ಟು ಸುಮಾರು 95 ಲಕ್ಷಕ್ಕಿಂತ ಒಂದು ಕೋಟಿ ಲೀಟರ್ ಪ್ರತಿದಿನ ಉತ್ಪತ್ತಿಯಾಗುತ್ತದೆ ನಾವು 50 ಲಕ್ಷ ಮಾತ್ರ ಹಾಲು ಮಾರಾಟ ಮಾಡಲಾಗುತ್ತೆ. ಉಳಿದ 50 ಲಕ್ಷ ಲೀಟರ್ಗೆ ರೈತರಿಗೆ ಹಣ ಕೊಡುತ್ತೇವೆ ಅದು ನಮಗೆ ನಷ್ಟ…

Read More

ಬೆಂಗಳೂರು : ಬೆಂಗಳೂರಲ್ಲಿ ಪಶ್ಚಿಮ ಬಂಗಾಳ ಮೂಲದ ಮಹಿಳೆಯ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ವರ್ತೂರು ಪೊಲೀಸ್ ಠಾಣೆಯ ಮೂವರು ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ಅಪರಾಧ ವಿಭಾಗದ ಸಿಬ್ಬಂದಿಯಾದ ಸಂಜಯ್ ರಾಥೋಡ್, ಸಂತೋಷ್ ಕುದರಿ ಹಾಗೂ ಅರ್ಚನಾ ಅವರನ್ನು ಅಮಾನತುಗೊಳಿಸಿ ವೈಟ್‌ಫೀಲ್ಡ್ ವಿಭಾಗದ ಡಿಸಿಪಿ ಕೆ. ಪರಶುರಾಮ ಆದೇಶಿಸಿದ್ದಾರೆ. ಪಶ್ಚಿಮ ಬಂಗಾಳ ಮೂಲದ ಸುಂದರಿ ಬೀಬಿ (34) ಬೆಂಗಳೂರಿನ ವರ್ತೂರು ಠಾಣೆ ವ್ಯಾಪ್ತಿಯ ಅಪಾರ್ಟ್‌ಮೆಂಟ್‌ನ ಫ್ಲ್ಯಾಟ್‌ವೊಂದರಲ್ಲಿ ಮನೆ ಕೆಲಸ ಮಾಡಿಕೊಂಡಿದ್ದರು. ಅಕ್ಟೋಬರ್ 31ರಂದು ಫ್ಲ್ಯಾಟ್‌ನಲ್ಲಿ ಕಸ ಗುಡಿಸುವಾಗ ಕೆಳಗೆ ಬಿದ್ದಿರುವ 100 ರೂಪಾಯಿಯನ್ನು ಮಾಲೀಕರಿಗೆ ಕೊಟ್ಟಿದ್ದಾರೆ. ಆದರೆ ಹಣದ ಜೊತೆಗೆ ಮನೆಯಲ್ಲಿ ಚಿನ್ನದ ಉಂಗುರು ಕಳ್ಳತನವಾಗಿದೆ ಎಂದು ಆರೋಪಿಸಿದ್ದ ಫ್ಲ್ಯಾಟ್‌ ಮಾಲೀಕರು ವರ್ತೂರು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ಸಂಬಂಧ ಸುಂದರಿ ಬೀಬಿ ಹಾಗೂ ಆಕೆಯ ಪತಿಯನ್ನು ಠಾಣೆಗೆ ಕರೆದೊಯ್ದಿದ್ದ ಪೊಲೀಸರು ಮನಬಂದಂತೆ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ಸಾಮಾಜಿಕ ಕಾರ್ಯಕರ್ತರೊಬ್ಬರು ಮಧ್ಯ ಪ್ರವೇಶಿಸಿದ ಬಳಿಕ ದಂಪತಿಯನ್ನು ಬಿಟ್ಟು ಕಳಿಸಿರುವ…

Read More

ನವದೆಹಲಿ : ಕಳೆದ ಕೆಲವು ದಿನಗಳ ಹಿಂದೆ ಬೆಂಗಳೂರಿನ ಮಹದೇವಪುರ ಲೋಕಸಭಾ ಕ್ಷೇತ್ರದಲ್ಲಿ ಮತಗಳ್ಳತನ ನಡೆದಿದೆ. ಅಲ್ಲದೆ ಆಳಂದ್ ಕ್ಷೇತ್ರದಲ್ಲೂ ಕೂಡ ಮತಗಳ್ಳತನ ನಡೆದಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪ ಮಾಡಿದ್ದರು. ಇದರ ಬೆನ್ನಲ್ಲೆ ಇದೀಗ ಹರಿಯಾಣದಲ್ಲಿ 25 ಲಕ್ಷ ಮತಗಳ ಅಂತರ ನಡೆದಿದೆ ಎಂದು ಗಂಭೀರವಾಗಿ ಆರೋಪಿಸಿದ್ದಾರೆ. ದೆಹಲಿಯ ಕಾಂಗ್ರೆಸ್ ಕಚೇರಿಯಲ್ಲಿ ರಾಹುಲ್ ಗಾಂಧಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಹರಿಯಾಣ ವಿಧಾನಸಭಾ ಚುನಾವಣೆಯಲ್ಲೂ ಮತಗಳ್ಳತನ ನಡೆದಿದೆ. ಸಿಎಂ ನಯಾಬ್ ಸಿಂಗ್ ಸೈನಿ ಮಾತು ಉಲ್ಲೇಖಿಸಿ ಈ ಒಂದು ಆರೋಪ ಮಾಡಿದ್ದು, ಸಿಎಂ ನವಾಬ್ ಸಿಂಗ್ ಸೈನಿ ವ್ಯವಸ್ಥೆ ಎಂದು ಹೇಳಿದ್ದಾರೆ ಅವರ ಮುಖದಲ್ಲಿ ನಗು ನೋಡಿ ನಮ್ಮ ಬಳಿ ಎಲ್ಲಾ ವ್ಯವಸ್ಥೆಗಳಿವೆ ಅಂತ ಸಿಎಂ ಹೇಳಿದ್ದರು. 22 ಸಾವಿರ ಮತಗಳ ಅಂತರ ನಮ್ಮ ಹಾಗೂ ಅವರ ನಡುವೆ ಇದೆ. ಈ ಮಹಿಳೆ ಹರಿಯಾಣದ 10 ಬೂತ್ ಗಳಲ್ಲಿ ಮತದಾನ ಮಾಡಿದ್ದಾಳೆ. ಬೇರೆ ಬೇರೆ ಹೆಸರಿನಲ್ಲಿ ಈ ಮಹಿಳೆ ಮತದಾನ…

Read More