Author: kannadanewsnow05

ನವದೆಹಲಿ : ಎರಡು AI ಸಂಬಂಧಿತ ಆ್ಯಪ್ ಗಳಿಂದ ಬೃಹತ್ ಪ್ರಮಾಣದ ದತ್ತಾಂಶಗಳು ಸೋರಿಕೆಯಾಗಿರುವುದನ್ನು ಸೈಬರ್ ಭದ್ರತಾ ತಜ್ಞರು ಪತ್ತೆ ಮಾಡಿದ್ದು, ಇದರಿಂದ ಜಾಗತಿಕವಾಗಿ ಕೋಟ್ಯಂತರ ಬಳಕೆದಾರರ ಸೂಕ್ಷ ವೈಯಕ್ತಿಕ ಹಾಗೂ ಮಾಧ್ಯಮ ಕಡತಗಳು ಬಹಿರಂಗಗೊಂಡಿವೆ. ಸೈಬರ್ ನ್ಯೂಸ್ ಈ ಎರಡು ಪ್ರತ್ಯೇಕ ಸೋರಿಕೆಗಳನ್ನು ವರದಿ ಮಾಡಿದ್ದು, ಕೋಟ್ಯಂತರ ದಾಖಲೆಗಳ ವಿಚಾರದಲ್ಲಿ ರಾಜಿ ಮಾಡಿಕೊಳ್ಳಬೇಕಾಗಿದೆ ಎಂದು ಭದ್ರತಾ ಸಂಶೋಧಕರು ಹೇಳಿದ್ದಾರೆ. ಹೌದು, ಇತ್ತೀಚೆಗೆ ಎರಡು ಪ್ರಮುಖ ಕೃತಕ ಬುದ್ಧಿಮತ್ತೆ (AI) ಆಧಾರಿತ ಆ್ಯಪ್‌ಗಳಿಂದ ಬೃಹತ್ ಪ್ರಮಾಣದ ದತ್ತಾಂಶ ಸೋರಿಕೆಯಾಗಿರುವ (Data Leak) ಆತಂಕಕಾರಿ ವರದಿಗಳು ಹೊರಬಂದಿವೆ. ಸೈಬರ್ ಭದ್ರತಾ ಸಂಶೋಧಕರ ಪ್ರಕಾರ, ಇದರಿಂದ ಜಾಗತಿಕವಾಗಿ ಕೋಟ್ಯಂತರ ಬಳಕೆದಾರರ KYC (Know Your Customer) ದಾಖಲೆಗಳು ಮತ್ತು ವೈಯಕ್ತಿಕ ಫೈಲ್‌ಗಳು ಬಹಿರಂಗಗೊಂಡಿವೆ. ಈ ಪ್ರಕರಣದ ಪ್ರಮುಖ ವಿವರಗಳು ಇಲ್ಲಿವೆ: 1. IDMerit ಡಾಟಾ ಸೋರಿಕೆ (ID Verification Tool) ಈ ಪ್ರಕರಣವು ಅತ್ಯಂತ ಗಂಭೀರವಾಗಿದ್ದು, ಡಿಜಿಟಲ್ ಗುರುತು ದೃಢೀಕರಣ ಒದಗಿಸುವ IDMerit ಎಂಬ…

Read More

ಧಾರವಾಡ : ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಧಾರವಾಡದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುತ್ತಿದೆ ಧಾರವಾಡದ ಶ್ರೀನಗರ ವೃತ್ತದಲ್ಲಿ ಉದ್ಯೋಗ ಆಕಾಂಕ್ಷಿಗಳು ಈ ಒಂದು ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ. ಖಾಲಿ ಇರುವ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡುವಂತೆ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಿದ್ದಾರೆ. ಕಾಂಗ್ರೆಸ್ ನಾಯಕರ ಫೋಟೋ ಹಿಡಿದು ಪ್ರತಿಭಟನಾಕಾರರು ಆಕ್ರೋಶ ಹೊರಹಾಕಿದ್ದಾರೆ ಪ್ರತಿಭಟನಾಕಾರರನ್ನು ನಿಯಂತ್ರಿಸಲು ಧಾರವಾಡ ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಇವನು ಪ್ರತಿಭಟನೆಯಲ್ಲಿ ಉದ್ಯೋಗ ಆಕಾಂಕ್ಷಿಗಳು ವಿದ್ಯಾರ್ಥಿ ಸಂಘಟನೆಗಳು ಭಾಗಿಯಾಗಿದ್ದು ಬೃಹತ್ಪ್ರಮಾಣದಲ್ಲಿ ಉದ್ಯೋಗ ಆಕಾಂಕ್ಷಿಗಳು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ರಾಜ್ಯದಲ್ಲಿ ಸರ್ಕಾರಿ ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ವಿದ್ಯಾರ್ಥಿಗಳ ಆಕ್ರೋಶ ಕಟ್ಟೆಯೊಡೆದಿದೆ. ವಿದ್ಯಾಕಾಶಿ ಧಾರವಾಡದಲ್ಲಿ ಇಂದು ಸಾವಿರಾರು ನಿರುದ್ಯೋಗಿ ಯುವಕರು ಮತ್ತು ವಿದ್ಯಾರ್ಥಿಗಳು ಬೀದಿಗಿಳಿದು ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ. ಸರ್ಕಾರಿ ನೇಮಕಾತಿ ಪ್ರಕ್ರಿಯೆ ವಿಳಂಬವಾಗುತ್ತಿರುವುದನ್ನು ಖಂಡಿಸಿ ವಿದ್ಯಾರ್ಥಿಗಳು ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಿದ್ದಾರೆ. ಕಾಂಗ್ರೆಸ್ ನಾಯಕರ ಫೋಟೋ ಹಿಡಿದು ಪ್ರತಿಭಟನೆ ವಿಶೇಷವೆಂದರೆ, ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಕಾಂಗ್ರೆಸ್ ನಾಯಕರ ಫೋಟೋಗಳನ್ನು ಕೈಯಲ್ಲಿ…

Read More

ಮಂಡ್ಯ : ರಾಜ್ಯದಲ್ಲಿ ಅಮಾನವೀಯ ಘಟನೆ ಒಂದು ನಡೆದಿದ್ದು, ವ್ಯಕ್ತಿಯನ್ನು ವಿವಸ್ತ್ರಗೊಳಿಸಿ ಕಾಲಿನ ಮೇಲೆ ಸೈಜ್ ಗಲ್ಲು ಎತ್ತಿ ಹಾಕಿ ಕ್ರೌರ್ಯ ಮೆರೆದಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾರಣಾಂತಿಕ ಹಲ್ಲೆಗೆ ಯುವತಿಯ ಲವ್ ಮ್ಯಾರೇಜ್ ಇದೀಗ ಕಾರಣವಾಗಿದೆ ಎನ್ನುವ ವಿಚಾರ ಬಹಿರಂಗವಾಗಿದೆ. ಪ್ರಕಾಶ್ ಹಾಗೂ ಆತನ ಬಾಮೈದ ನವೀನ್ ಮೇಲೆ ಈ ಒಂದು ಹಲ್ಲೆ ನಡೆದಿದೆ. ಮೊನ್ನೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಕನಕನಹಳ್ಳಿ ಈ ಒಂದು ಹಲ್ಲೆ ನಡೆದಿದೆ. ಬೊಮ್ಮಲಾಪುರ ಗ್ರಾಮದ ನಿವಾಸಿಗಳ ಆದ ಗಿರೀಶ್, ಸಂಜು, ಗಣೇಶ್, ಪುಟ್ಟರಾಜು, ನಿಂಗಣ್ಣ ಮತ್ತು ಪಟಾಲಮ್ಮನಿಂದ ಈ ಒಂದು ದೌರ್ಜನ್ಯ ನಡೆದಿತ್ತು. ಮಂಡ್ಯ ಜಿಲ್ಲೆಯ ಕೆಆರ್ ಪೇಟೆ ತಾಲೂಕಿನ ಬೊಮ್ಮಲಾಪುರ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿತ್ತು. ಈ ಹಿಂದೆ ಅದೇ ಊರಿನ ನಿಂಗಣ್ಣ ಎಂಬುವವರ ಪುತ್ರಿ ನಾಪತ್ತೆಯಾಗಿದ್ದಳು. ಬಳಿಕ ಪ್ರೀತಿಸಿದ ಹುಡುಗನೊಂದಿಗೆ ಯುವತಿ ಮದುವೆಯಾಗಿದ್ದಳು. ಲವ್ ಮ್ಯಾರೇಜ್ ಆಗಲು ಪ್ರಕಾಶ್ ಸಹಾಯ ಮಾಡಿದ ಆರೋಪ ಕೇಳಿ ಬಂದಿದೆ. ಪ್ರಕಾಶ್ ಮೇಲೆ ಯುವತಿಯ…

Read More

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ದಿನಕ್ಕೊಂದು ಸ್ಫೋಟಕ ತಿರುವುಗಳು ಸಿಗುತ್ತಿವೆ. ಇದೀಗ ಪ್ರಕರಣದ ಮೂವರು ಆರೋಪಿಗಳು ಪೊಲೀಸರ ತನಿಖೆಯ ರೀತಿಗೆ ಆಕ್ಷೇಪ ವ್ಯಕ್ತಪಡಿಸಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದು, ತನಿಖಾಧಿಕಾರಿಗಳು ಸಾಕ್ಷ್ಯಗಳನ್ನು ತಿರುಚಿದ್ದಾರೆ ಎಂಬ ಗಂಭೀರ ಆರೋಪ ಮಾಡಿದ್ದಾರೆ. ಪೊಲೀಸರ ವಿರುದ್ಧ ಆರೋಪಿಗಳ ಗಂಭೀರ ದೂರು ಆರೋಪಿಗಳು ನ್ಯಾಯಾಲಯಕ್ಕೆ ಸಲ್ಲಿಸಿರುವ ಅರ್ಜಿಯಲ್ಲಿ ಪ್ರಮುಖವಾಗಿ ಎರಡು ಅಂಶಗಳನ್ನು ಪ್ರಸ್ತಾಪಿಸಿದ್ದಾರೆ: ಮೊಬೈಲ್ ವಶದ ಸ್ಥಳದ ಬಗ್ಗೆ ಗೊಂದಲ: ಪೊಲೀಸರು ನಮ್ಮ ಮೊಬೈಲ್‌ಗಳನ್ನು ಕಾಮಾಕ್ಷಿಪಾಳ್ಯ ಠಾಣೆಯಲ್ಲಿ ವಶಕ್ಕೆ ಪಡೆದಿಲ್ಲ. ಬೇರೆ ಯಾವುದೋ ಸ್ಥಳದಲ್ಲಿ ಮೊಬೈಲ್ ವಶಪಡಿಸಿಕೊಂಡು, ಮಹಜರು ವರದಿಯಲ್ಲಿ ಕಾಮಾಕ್ಷಿಪಾಳ್ಯ ಎಂದು ಸುಳ್ಳು ದಾಖಲಿಸಿದ್ದಾರೆ ಎಂದು ಆರೋಪಿಸಿದ್ದಾರೆ. ವೈಟ್ ಟೈಲ್ಸ್ Vs ಮೊಜಾಕ್ ಫ್ಲೋರ್: ದೋಷಾರೋಪ ಪಟ್ಟಿಯಲ್ಲಿ (Charge Sheet) ಲಗತ್ತಿಸಲಾದ ಫೋಟೋಗಳಲ್ಲಿ ಬಿಳಿ ಬಣ್ಣದ ಟೈಲ್ಸ್ (White Tiles) ಕಂಡುಬರುತ್ತಿದೆ. ಆದರೆ, ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಹಳೆಯ ಮಾದರಿಯ ಮೊಜಾಕ್ ನೆಲವಿದೆ. ಈ ವ್ಯತ್ಯಾಸವು ಪೊಲೀಸರು ಪ್ರಕರಣದ ದಾರಿ ತಪ್ಪಿಸುತ್ತಿರುವುದಕ್ಕೆ ಸಾಕ್ಷಿ ಎಂದು ಆರೋಪಿಗಳು…

Read More

ಕಲಬುರ್ಗಿ : ಕಳೆದ ವಾರವಷ್ಟೇ ಕಲಬುರ್ಗಿಯಲ್ಲಿ ಕಾಂಗ್ರೆಸ್ ಮುಖಂಡ ಮಾರಾಕಾಸ್ತ್ರ ಹಿಡಿದು ಮದುವೆ ಕಾರ್ಯಕ್ರಮದಲ್ಲಿ ಡ್ಯಾನ್ಸ್ ಮಾಡಿದ್ದ ಘಟನೆ ನಡೆದಿತ್ತು. ಇದೀಗ ಆ ಒಂದು ಘಟನೆ ಮಾಸುವ ಮುನ್ನವೇ ಮತ್ತೊಂದು ಘಟನೆ ನಡೆದಿದ್ದು ಮದುವೆ ಕಾರ್ಯಕ್ರಮದಲ್ಲಿ ಕೈಯಲ್ಲಿ ಮಾರಕಾಸ್ತ್ರ ಹಿಡಿದು ಡ್ಯಾನ್ಸ್ ಮಾಡಿದ್ದಾರೆ. ಹೌದು ಕಲಬುರ್ಗಿ ನಗರದ ಶಕ್ತಿನಗರ ಬಡಾವಣೆಯಲ್ಲಿ ಪುಂಡರು ಈ ಒಂದು ಕೃತ್ಯ ಎಸಗಿದ್ದಾರೆ. ಕೈಯಲ್ಲಿ ಮಾರಕಾಸ್ತ್ರ ಹಿಡಿದು ಕೆಲವು ಕಿಡಿಗೇಡಿಗಳು ಡ್ಯಾನ್ಸ್ ಮಾಡಿದ್ದಾರೆ. ಮದುವೆ ಮೆರವಣಿಗೆಯಲ್ಲಿ ಮಾರಕಾಸ್ತ್ರದಲ್ಲಿ ಹಿಡಿದು ಡ್ಯಾನ್ಸ್ ಮಾಡಿದ್ದಾರೆ. ಸಾರ್ವಜನಿಕವಾಗಿ ಮಾರಕಾಸ್ತ್ರಗಳನ್ನು ಪ್ರದರ್ಶನ ಮಾಡೋ ಹಾಗಿಲ್ಲ ಎನ್ನುವ ನಿಯಮ ಇದ್ದರೂ ಕೂಡ ಪೊಲೀಸರ ಯಾವುದೇ ಭಯವಿಲ್ಲದೆ ನಿರ್ಭೀತರಾಗಿ ಈ ರೀತಿ ಪುಂಡರು ಮದುವೆ ಕಾರ್ಯಕ್ರಮದ ಮೆರವಣಿಗೆಯಲ್ಲಿ ಮಾರಕಾಸ್ತ್ರ ಪ್ರದರ್ಶಿಸಿ ಡ್ಯಾನ್ಸ್ ಮಾಡಿದ್ದಾರೆ.

Read More

ಬೆಂಗಳೂರು : ಬೆಂಗಳೂರಲ್ಲಿ ನಡೆದುಕೊಂಡು ಹೋಗುತ್ತಿದ್ದ ವೃದ್ಧನ ಮೇಲೆ ಕಾರು ಚಾಲಕನೊಬ್ಬ ಹಲ್ಲೆ ನಡೆಸಿದ್ದಾನೆ. ಕೆಂಗೇರಿಯ ನಾಗದೇವನಹಳ್ಳಿಯ ವಿನಾಯಕ ಲೇಔಟ್ ನಲ್ಲಿ ಈ ಒಂದು ಘಟನೆ ಸಂಭವಿಸಿದೆ. ಕಾರು ಚಾಲಕ ನವೀನ್ ಎಂಬಾತನಿಂದ ನಂಜುಂಡಪ್ಪ (65) ಎನ್ನುವ ವೃದ್ಧನ ಮೇಲೆ ಹಲ್ಲೆ ನಡೆದಿದೆ. ಹಿಂದಿನಿಂದ ಕಾರಿನಲ್ಲಿ ಬಂದು ಚಾಲಕ ನವೀನ್ ಹಾರ್ನ್ ಮಾಡಿದ್ದಾನೆ. ಪಕ್ಕದಲ್ಲಿ ಅಷ್ಟು ದೊಡ್ಡ ರಸ್ತೆ ಇದೆ ಹೋಗಿ ಅಂತ ನಂಜುಂಡಪ್ಪ ಹೇಳಿದ್ದಾರೆ. ರೊಚ್ಚಿಗೆದ್ದು ಅವಾಚ್ಯ ಶಬ್ದದಿಂದ ಬೈದು ನಂಜುಂಡಪ್ಪ ಮೇಲೆ ನವೀನ್ ಹಲ್ಲೆ ಮಾಡಿದ್ದಾನೆ. ಕಾರಿನಲ್ಲಿದ್ದ ನವೀನ್ ಪೋಷಕರು ಬಂದು ಸಮಾಧಾನ ಮಾಡಿದ್ದಾರೆ. ಆದರೂ ಬೈಯುತ್ತ ಅಟ್ಟಿಸಿಕೊಂಡು ಹೋಗಿ ಚಾಲಕ ನವೀನ್ ಹಲ್ಲೆಗೈದಿದ್ದಾನೆ. ಬಳಿಕ ಎರಡು ನೂರು ಮೀಟರ್ ದೂರ ನಡೆದುಕೊಂಡು ಹೋಗಿದ್ದ ನಂಜುಂಡಪ್ಪ. ಆಗ ಕಾರು ತೆಗೆದುಕೊಂಡು ಹೋಗಿ ಅಲ್ಲಿ ಅಡ್ಡ ಹಾಕಿ ಮತ್ತೆ ಹಲ್ಲೆ ಮಾಡಿದ್ದಾನೆ. ರಸ್ತೆ ಮೇಲೆ ಬೀಳಿಸಿ ಚಾಲಕ ನವೀನ್ ಹಲ್ಲೆ ಮಾಡಿದ್ದಾನೆ. ಘಟನೆ ಸಂಭಂದ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ…

Read More

ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಮತ್ತೊಂದು ಬಿಗ್ ಟ್ವಿಸ್ಟ್ ಸಿಕ್ಕಿದ್ದು ಕ್ರಾಸ್ ಎಕ್ಸಾಮಿನ್ ವೇಳೆ ಪೊಲೀಸರಿಂದಲೇ ಎಡವಟ್ಟು ಆಗಿದೆ ಎಂದು ಆರೋಪಿಗಳ ಪರ ವಕೀಲರು ಈ ಒಂದು ಗಂಭೀರವಾದ ಆರೋಪ ಮಾಡಿದ್ದಾರೆ. ಹೌದು ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿಗಳಿಂದ ಕೋರ್ಟ್‌ಗೆ ದಿನಕ್ಕೊಂದು ಅರ್ಜಿ ಸಲ್ಲಿಕೆಯಾಗುತ್ತಿದೆ. ನಿನ್ನೆ ಕೋರ್ಟ್‌ಗೆ ಮೂವರು ಆರೋಪಿಗಳು ಅರ್ಜಿ ಸಲ್ಲಿಕೆ ಮಾಡಿದ್ದಾರೆ. ನಮ್ಮ ಮೊಬೈಲ್ ವಶಕ್ಕೆ ಪಡೆಯುವಾಗ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ವಶಕ್ಕೆ ಪಡೆದುಕೊಂಡಿಲ್ಲ. ಬೇರೊಂದು ಜಾಗದಲ್ಲಿ ವಶಕ್ಕೆ ಪಡೆದು ಅದನ್ನ ಕಾಮಾಕ್ಷಿಪಾಳ್ಯ ಎಂದಿದ್ದಾರೆ ಎಂದು ಆರೋಪಿಸಿದ್ದಾರೆ. ದೋಷಾರೋಪ ಪಟ್ಟಿ ಸಲ್ಲಿಕೆಯಾದಾಗ ಫೋಟೋದಲ್ಲಿ ವೈಟ್ ಕಲರ್ ಟೈಲ್ಸ್ ಇದೆ. ಪೊಲೀಸ್ ಠಾಣೆಯಲ್ಲಿ ಹಳೆಯ ಮಾದರಿ ಮೊಜಾಕ್ ಇದೆ. ಹೀಗಾಗಿ, ಪ್ರಕರಣದ ದಾರಿ ತಪ್ಪಿಸಿದ್ದಾರೆ. ಆದ್ದರಿಂದ ಖುದ್ದಾಗಿ ನ್ಯಾಯಾಧೀಶರೇ ಜೈಲಿಗೆ ಭೇಟಿ ಕೊಡಬೇಕು. ಅಲ್ಲದೇ, ಸ್ಟೇಷನ್ ಸಿಸಿಟಿವಿಯನ್ನು ವಶಕ್ಕೆ ಪಡೆಯಬೇಕು. ಬದಲಾವಣೆ ಮಾಡದಂತೆ ಎಚ್ಚರಿಕೆ ವಹಿಸಬೇಕು ಅಂತ ಕೋರ್ಟ್‌ಗೆ ಅರ್ಜಿ ಸಲ್ಲಿಕೆ…

Read More

ತುಮಕೂರು : ತುಮಕೂರಿನಲ್ಲಿ ಸಿನಿಮೀಯ ರೀತಿ ದರೋಡೆ ಪ್ರಕರಣ ಒಂದು ನಡೆದಿದ್ದು, ಚಿನ್ನದ ಅಂಗಡಿ ದರೋಡೆ ಮಾಡಿದ್ದವರ ಬಂಧನಕ್ಕೆ ಹೆದ್ದಾರಿಯೇ ಬಂದ್ ಮಾಡಲಾಗಿದೆ. ತಾವರೆಕೆರೆಯಲ್ಲಿ ಬ್ಯಾರಿಕೆಡ್ ಅಳವಡಿಸಿ ಹೆದ್ದಾರಿಯಲ್ಲಿ ಬಂದ್ ಮಾಡಿದ್ದಾರೆ. ಹೆದ್ದಾರಿ ಯಾವಾಗ ಬಂದ್ ಆಗುತ್ತೋ ತಕ್ಷಣ ದರೋಡೆಕೋರರು ತಮ್ಮ ಬೊಲೆರೋ ಕಾರನ್ನು ವಾಪಸ್ ತಿರುಗಿಸಿದ್ದಾರೆ. ಹೆದ್ದಾರಿ ಬಂದ್ ಹಿನ್ನೆಲೆಯಲ್ಲಿ ಪೊಲೀಸರ ಕೈಗೂ ಸಿಗದೇ ಎಸ್ಕೇಪ್ ಆಗಿದ್ದಾರೆ. ಆದರೆ ಸ್ಥಳೀಯರು ಈ ಒಂದು ದರಡೆ ಕೋರರ ಬೆನ್ನು ಬಿದ್ದಿದ್ದಾರೆ ಒಂದು ರೀತಿಯ ಸಿನಿಮಾ ರೀತಿಯ ಶೈಲಿಯಲ್ಲಿ ಕಳ್ಳರನ್ನು ಚೇಸಿಂಗ್ ಮಾಡಿದ್ದಾರೆ. ತುಮಕೂರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಒಂದು ರೋಚಕ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸರಿಯಾಗಿದೆ ಕೃತೇ ನಡೆದ ಕೆಲವೇ ಗಂಟೆಗಳಲ್ಲಿ ದರೋಡೆಕೋರರನ್ನು ಬಂಧಿಸಲಾಗಿದೆ. ಆದರೆ ಹೆದ್ದಾರಿ ಬಳಿಯೇ ಬೋಲೇರೋ ವಾಹನ ಬಿಟ್ಟು ಕಾಡಿನಲ್ಲಿ ಪರಾರಿಯಾಗಿದ್ದಾರೆ ಆದರೆ ಪೊಲೀಸರು ಕಾಡಿನಲ್ಲಿ ಕೋಂಬಿಂಗ್ ಕಾರ್ಯಚರಣೆ ನಡೆಸಿ ಮೂರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನು ದರೋಡೆ ಮಾಡಿ ಬೃಹತ್ ಮರದ ಬುಡದಲ್ಲಿ ಇಟ್ಟಿದ ಚಿನ್ನದ ಸಮೇತ…

Read More

ದಾವಣಗೆರೆ : ಎಂಕಾಂ ಪದವಿ ವ್ಯಾಸಂಗ ಮಾಡಿ ಸುಂದರ ಬದುಕು ಕಟ್ಟಿಕೊಳ್ಳಬೇಕಿದ್ದ ಯುವಕನೋರ್ವ ಬೆಟ್ಟಿಂಗ್​​ನಲ್ಲಿ ಹಣವನ್ನು ಕಳೆದುಕೊಂಡು, ನಂತರ ಲಕ್ಷಾಂತರ ರೂಪಾಯಿ ಸಾಲ ಮಾಡಿಕೊಂಡಿದ್ದಲ್ಲದೇ, ವೃದ್ಧೆಯೊಬ್ಬರನ್ನು ಕೊಲೆ ಮಾಡಿ ಬಂಧನಕ್ಕೆ ಒಳಗಾಗಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಶಿಕಾರಿಪುರ ತಾಲೂಕಿನ ಕಾಳೇನಹಳ್ಳಿ ನಿವಾಸಿ ಅಭಿಷೇಕ್(23) ಕೊಲೆ ಆರೋಪಿ. ಜಿಲ್ಲೆಯ ಹೊನ್ನಾಳಿ ತಾಲೂಕಿನ ನ್ಯಾಮತಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿನ ಆರುಂಡಿ ಗ್ರಾಮದಲ್ಲಿ ಫೆ. 2 ರಂದು ಒಂಟಿ ಮನೆಯಲ್ಲಿದ್ದ 64 ವರ್ಷದ ಕಮಲಮ್ಮ ಅನ್ನೋ ವೃದ್ದೆಯ ಕೊಲೆ ಆಗಿತ್ತು. ಮೊದಲಿಗೆ ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಊಹಿಸಲಾಗಿತ್ತು. ಯಾವಾಗ ಮೃತ ಕಮಲಮ್ಮನ ಮೈಮೇಲಿನ ಒಡವೆ ಕಾಣಲಿಲ್ಲವೋ ಆಗಲೇ ಅದು ಸಾಮಾನ್ಯ ಸಾವು ಅಲ್ಲ, ಕೊಲೆ ಎಂದು ಸಂಬಂಧಿಕರು ತೀರ್ಮಾನ ಮಾಡಿ ತಕ್ಷಣ ಹೊನ್ನಾಳಿ ಪೊಲೀಸರಿಗೆ ಮಾ‌ಹಿತಿ ನೀಡಿದ್ದರು. ಶಿವಮೊಗ್ಗದಲ್ಲಿ ಮರಣೋತ್ತರ ಪರೀಕ್ಷೆ ಮಾಡಿಸಿ ನಂತರ ಮೃತದೇಹದ ಅಂತ್ಯಕ್ರಿಯೆ ನೆರವೇರಿಸಲಾಗಿತ್ತು. ಇತ್ತ ಸಾವಿನ ಪ್ರಕರಣದ ಬೆನ್ನುಬಿದ್ದಿದ್ದ ದಾವಣಗೆರೆ ಪೊಲೀಸರು ಎಲ್ಲಾ ಆಯಾಮಗಳಲ್ಲಿ ತನಿಖೆ ಆರಂಭ ಮಾಡಿದ್ದರು.…

Read More

ಬೆಂಗಳೂರು: ಕರ್ನಾಟಕ ಜನಸಂದಣಿ ನಿಯಂತ್ರಣ (ಕಾರ್ಯಕ್ರಮ ಮತ್ತು ಗುಂಪುಗೂಡುವ ಸ್ಥಳಗಳಲ್ಲಿ ಜನಸಂದಣಿಯ ನಿಯಂತ್ರಣ) ಮಸೂದೆಯು ಕಾಯಿದೆ ರೂಪ ಪಡೆಯವವರೆಗೆ ಜನಸಂದಣಿ ನಿಯಂತ್ರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ಪ್ರಮಾಣೀಕೃತ ಕಾರ್ಯವಿಧಾನ (ಎಸ್‌ಒಪಿ) ಜಾರಿಗೊಳಿಸಲು ರಾಜ್ಯ ಸರ್ಕಾರಕ್ಕೆ ಸೋಮವಾರ ಹೈಕೋರ್ಟ್‌ ಸೂಚನೆ ನೀಡಿತು. ಅಲ್ಲದೆ, ಚಿನ್ನಸ್ವಾಮಿ ಕ್ರೀಡಾಂಗಣದ ಮುಂದೆ ನಡೆದ ಕಾಲ್ತುಳಿತ ಸಂಬಂಧ ದಾಖಲಿಸಿಕೊಂಡಿದ್ದ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ(ಪಿಐಎಲ್) ಅರ್ಜಿಯನ್ನು ವಿಲೇವಾರಿ ಮಾಡಿತು. ಐಪಿಎಲ್‌ನಲ್ಲಿ ರಾಯಲ್ಸ್​ ಚಾಲೆಂಜರ್ಸ್​ ಜಯಗಳಿಸಿದ ಹಿನ್ನೆಲೆಯಲ್ಲಿ ಹಮ್ಮಿಕೊಂಡಿದ್ದ ವಿಜಯೋತ್ಸವದಲ್ಲಿ ನಡೆದ ಕಾಲ್ತುಳಿತ ಪ್ರಕರಣ ಸಂಬಂಧ ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಕ್ರು ಮತ್ತು ನ್ಯಾಯಮೂರ್ತಿ ಸಿ.ಎಂ.ಪೂಣಚ್ಚ ಅವರಿದ್ದ ವಿಭಾಗೀಯ ಪೀಠ ನಡೆಸಿತು. ಇದು ನಾಗರಿಕರ ಸುರಕ್ಷತೆಯ ದೃಷ್ಟಿಯಿಂದ ಬಹಳ ಮಹತ್ವದ ಬೆಳವಣಿಗೆ. ಸಾರ್ವಜನಿಕ ಸ್ಥಳಗಳಲ್ಲಿ ಮತ್ತು ಸಮಾರಂಭಗಳಲ್ಲಿ ಜನಸಂದಣಿಯನ್ನು ವ್ಯವಸ್ಥಿತವಾಗಿ ನಿರ್ವಹಿಸಲು Standard Operating Procedure (SOP) ಅಥವಾ ಮಾರ್ಗಸೂಚಿಗಳನ್ನು ರೂಪಿಸುವಂತೆ ಹೈಕೋರ್ಟ್ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಈ ಸುದ್ದಿಯ…

Read More