Subscribe to Updates
Get the latest creative news from FooBar about art, design and business.
Author: kannadanewsnow05
ಹಾಸನದಲ್ಲಿ : ಹಾಸನದಲ್ಲಿ ಜಾತಿಗಣತಿ ನಡೆಸುವ ಸಿಬ್ಬಂದಿಗಳಿಗೆ ಸಂಕಷ್ಟ ತಪ್ಪಿಲ್ಲ. ಜಾತಿ ಗಣತಿ ತೆರಳುತ್ತಿದ್ದ ಶಿಕ್ಷಕಿಯ ಮೇಲೆ ಇದೀಗ ಮತ್ತೆ ಬೀದಿ ನಾಯಿ ದಾಳಿ ಮಾಡಿದೆ. ಮೊನ್ನೆ ತಾನೇ ಏಳು ಜನರು ಹಾಗು ಓರ್ವ ಶಿಕ್ಷಕಿಯ ಮೇಲೆ ಬೀದಿನಾಯಿ ದಾಳಿ ಮಾಡಿದ್ದ ಘಟನೆ ನಡೆದಿತ್ತು. ಇದೀಗ ಸ್ಕೂಟಿಯಲ್ಲಿ ತೇರಳುತ್ತಿದ್ದ ವೇಳೆ ಶಿಕ್ಷಕಿ ಮೇಲೆ ನಾಯಿ ಏಕಾಏಕಿ ದಾಳಿ ಮಾಡಿದೆ. ಈ ವೇಳೆ ಸ್ಕೂಟಿಯಿಂದ ಕೆಳಗೆ ಬಿದ್ದ ಶಿಕ್ಷಕಿಗೆ ಎಡಗೈ ಮುರಿದು ಹೋಗಿದೆ. ಬೇಲೂರು ಹಳೇಗೆಂಡಿಹಳ್ಳಿ ಎಂಬ ಗ್ರಾಮದಲ್ಲಿ ಒಂದು ಘಟನೆ ನಡೆದಿದೆ. ಸರ್ಕಾರಿ ಉರ್ದು ಪ್ರಾಥಮಿಕ ಶಾಲೆಯ ಲುಕ್ನ ಎನ್ನುವ ಶಿಕ್ಷಕಿಗೆ ಗಂಭೀರವಾದ ಗಾಯಗಳಾಗಿವೆ . ಸ್ಕೂಟಿ ನಿಲ್ಲಿಸುತ್ತಿದ್ದ ವೇಳೆ ಬೀದಿ ನಾಯಿ ದಾಳಿ ಮಾಡಿದೆ. ಸದ್ಯ ತಾಲೂಕು ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಬೆಂಗಳೂರು : ಬೆಂಗಳೂರಲ್ಲಿ ಮತ್ತೊಂದು ಅಗ್ನಿ ದುರಂತ ಸಂಭವಿಸಿದ್ದು, ಗ್ಯಾಸ್ ಲೀಕ್ ಆಗಿ ಅಗ್ನಿ ಅವಘಡ ಸಂಭವಿಸಿ 7 ಜನ ಕಾರ್ಮಿಕರಿಗೆ ಗಂಭೀರವಾಗಿ ಗಾಯಗಳಾಗಿವೆ . ಕಾಡುಮನೆ ಸರ್ಕಲ್ ಬಳಿ ಇರುವ ಬಿಡದೆ ಕೈಗಾರಿಕಾ ಪ್ರದೇಶದಲ್ಲಿ ಈ ಒಂದು ಅಗ್ನಿ ದುರಂತ ಸಂಭವಿಸಿದೆ. ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಕಾಡುಮನೆ ವೃತ್ತದ ಬಳಿ ಒಂದೇ ಶೆಡ್ ನಲ್ಲಿ 7 ಜನ ಕಟ್ಟಡ ಕಾರ್ಮಿಕರ ವಾಸವಾಗಿದ್ದರು. ಗ್ಯಾಸ್ ಸೋರಿಕೆಯಾಗಿ ಏಕಾಏಕಿ ಬೆಂಕಿ ಹೊತ್ತಿಕೊಂಡಿದೆ. ಘಟನೆಯಲ್ಲಿ 7 ಕಟ್ಟಡ ಕಾರ್ಮಿಕರಿಗೆ ಗಂಭೀರವಾದ ಗಾಯಗಳಾಗಿವೆ. ತಕ್ಷಣ ಗಾಯಾಳುಗಳನ್ನು ತಕ್ಷಣ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಸದ್ಯ ಘಟನಾ ಸ್ಥಳಕ್ಕೆ ಎಸ್ ಪಿ ಶ್ರೀನಿವಾಸ್ ಗೌಡ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆ ಕುರಿತಂತೆ ಬಿಡದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ನವೆಂಬರ್ ನಲ್ಲಿ ಕ್ರಾಂತಿ ಅಗಲಿದೆ ಎಂದು ವಿಪಕ್ಷ ನಾಯಕರು ಹೇಳುತ್ತಿದ್ದರೆ, ಇನ್ನೊಂದು ಕಡೆ ಕಾಂಗ್ರೆಸ್ ಹಲವು ಸಚಿವರು ಸಂಪುಟ ಪುನರ್ ರಚನೆ ಆಗಲಿದೆ ಎಂದು ಹೇಳಿಕೆ ನೀಡಿದ್ದರು. ಇದಕ್ಕೆ ಪುಷ್ಟಿ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಮುಂದಿನ ದಿನಗಳಲ್ಲಿ ಸಂಪುಟ ಪುನರ್ ರಚನೆ ಆಗಲಿದ್ದು ಎಸ್ ಟಿ ಸಮುದಾಯದವರಿಗೆ ಸಚಿವ ಸ್ಥಾನ ನೀಡುವ ಕುರಿತು ಚರ್ಚಿಸಲಾಗುತ್ತದೆ ಎಂದು ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಎಸ್ ಟಿ ಸಮುದಾಯದ ನಾಯಕರಿಗೆ ಸಚಿವ ಸ್ಥಾನ ನೀಡುವ ವಿಚಾರವಾಗಿ ಮುಂದಿನ ದಿನಗಳಲ್ಲಿ ಸಂಪುಟ ಪುನರ್ ರಚನೆ ಆಗುತ್ತದೆ. ಸಂಪುಟ ಪುನರ್ ರಚನೆಯ ವೇಳೆ ಸಚಿವ ಸ್ಥಾನ ನೀಡುವ ಕುರಿತು ನೋಡೋಣ ಎಂದು ತಿಳಿಸಿದರು. ಸಾಮಾಜಿಕ ಶೈಕ್ಷಣಿಕ ಸಮೀಕ್ಷೆಗೆ ಎಂದು ಕೊನೆಯ ದಿನವಾಗಿದ್ದು, ಸಮೀಕ್ಷೆಗೆ ಕೊನೆಯ ದಿನದಲ್ಲಿ ಮೀಟಿಂಗ್ ಕರೆದಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇನ್ನು ಸುಪ್ರೀಂಕೋರ್ಟ್ ಸಿಜೆಐ ಬಿ.ಆರ್ ಗವಾಯಿ ಅವರ ಮೇಲೆ ಹಿರಿಯವಕೀಲ ಶೂ ಎಸೆದಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ…
ಬೆಂಗಳೂರು : ಕನ್ನಡ ಬಿಗ್ ಬಾಸ್ ಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು ಒಂದೆಡೆ ಮಾಲಿನ್ಯ ನಿಯಂತ್ರಣ ಮಂಡಳಿ ನೋಟಿಸ್ ಜಾರಿ ಮಾಡಿದ್ದು, ಇನ್ನೊಂದು ಕಡೆ ಪೊಲೀಸ್ ಅನುಮತಿಯನ್ನು ಸಹ ಪಡೆದಿಲ್ಲ. ಈ ಹಿಂದೆ ವಿದ್ಯುತ್ ಸಂಪರ್ಕ ಕಡಿತಕ್ಕೆ ನೋಟಿಸ್ ಜಾರಿ ಮಾಡಲಾಗಿತ್ತು . ಅನಧಿಕೃತ ಎಂದು ವಿದ್ಯುತ್ ಸಂಪರ್ಕ ಕಡಿತಕ್ಕೆ ಸೂಚನೆ ನೀಡಲಾಗಿತ್ತು. BMRDA ಯ STF ತಂಡದಿಂದ AEE ಗೆ ಸೂಚನೆ ನೀಡಲಾಗಿತ್ತು. ಈಗಾಗಲೇ ಮಾಯನ್ಯ ನಿಯಂತ್ರಣ ಮಂಡಳಿ ನೋಟಿಸ್ ಇಡಲಾಗಿದೆ. 35 ಎಕರೆ ಪ್ರದೇಶದಲ್ಲಿರುವ ಜಾಲಿವುಡ್ ಸ್ಟುಡಿಯೋ ರಾಮನಗರ ತಾಲೂಕಿನ ಬಿಡದಿಯಲ್ಲಿರುವಂತಹ ಸ್ಟುಡಿಯೋಗೆ ಎರಡೆರಡು ಸಂಕಷ್ಟ ಎದುರಾಗಿದ್ದು, ಸ್ಟುಡಿಯೋಗೆ ಬೀಗ ನಡೆಯಬೇಕು ಅಂತ ಹಿರಿಯ ಪರಿಸರಾಧಿಕಾರಿ ವಸುದೇವರಿಂದ ವರದಿ ಜಿಲ್ಲಾಧಿಕಾರಿಗೆ ನೀಡಿದ್ದಾರೆ. ರಾಜ್ಯ ನೀರು ಸಂಸ್ಕರಣ ಘಟಕ ಮಾಡದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಬಿಗ್ ಬಾಸ್ ಶೋ ಮನೆ ಬಂದ್ ಮಾಡುವಂತೆ ನಿನ್ನೆ ನೋಟಿಸ್ ನೀಡಿತ್ತು. ಇದೀಗ ಪೊಲೀಸ್ ಇಲಾಖೆಯಿಂದ ಅನುಮತಿ ಸಿಕ್ಕಿಲ್ಲ ಅನುಮತಿ…
ಬಾಗಲಕೋಟೆ : ಧರ್ಮ ಒಡೆಯುವ ಕೆಲಸಕ್ಕೆ ಕೈ ಹಾಕಿದರೆ ಸಿದ್ದರಾಮಯ್ಯ ಸಿಎಂ ಸ್ಥಾನ ಕಳೆದುಕೊಳ್ಳಲಿದ್ದಾರೆ ಎಂದು ಬಾಗಲಕೋಟೆ ಜಿಲ್ಲೆ ಗುಳೇದಗುಡ್ಡದ ಅಮರೇಶ್ವರ ಮಠದ ನೀಲಕಂಠೇಶ್ವರ ಸ್ವಾಮೀಜಿ ಸ್ಪೋಟಕ ಭವಿಷ್ಯ ನುಡಿದಿದ್ದಾರೆ. ನಿನ್ನೆ ಬೆಂಗಳೂರಲ್ಲಿ ಬಸವ ಸಂಸ್ಕೃತಿ ಅಭಿಯಾನದಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿಯಾದ ಹಿನ್ನೆಲೆ ಬಾಗಲಕೋಟೆ ಜಿಲ್ಲೆ ಗುಳೇದಗುಡ್ಡದ ಅಮರೇಶ್ವರ ಮಠದ ನೀಲಕಂಠೇಶ್ವರ ಸ್ವಾಮೀಜಿ ಮಾತನಾಡಿ, ಧರ್ಮ ಒಡೆಯುವ ಕೆಲಸಕ್ಕೆ ಕೈ ಹಾಕಿದರೆ ಸಿದ್ದರಾಮಯ್ಯ ಸಿಎಂ ಸ್ಥಾನ ಕಳೆದುಕೊಳ್ಳಲಿದ್ದಾರೆ. ಕೆಲವು ಸಚಿವರು ಆ ಕಡೆ, ಕೆಲವು ಸಚಿವರು ಈ ಕಡೆ ಇದ್ದಾರೆ. ನವಂಬರನಲ್ಲಿ ಇದರಿಂದಲೇ ಸಿಎಂ ಸ್ಥಾನಕ್ಕೆ ಕುತ್ತು ಬರುವ ಸಾಧ್ಯತೆ ಇದೆ ಎಂದು ಭವಿಷ್ಯ ನುಡಿದಿದ್ದಾರೆ. ಸರ್ಕಾರದ ಸಚಿವರು ಕೆಲವರು ಆ ಕಡೆ, ಕೆಲವರು ಈ ಕಡೆ ಮಾತನಾಡುವುದು ಕೇಳಿ ನವಂಬರನಲ್ಲಿ ಸಿದ್ದರಾಮಯ್ಯನವರಿಗೆ ಕುತ್ತು ಬರುತ್ತದೆಯೇನೋ ಎಂದು ನಮಗೆ ಎನಿಸುತ್ತಿದೆ.ಮೊನ್ನೆಯೇ ಸಿದ್ದರಾಮಯ್ಯನವರಿಗೆ ಆ ಸಭೆಗೆ ಹೋದರೆ ಸ್ವಲ್ಪ ಹೆಚ್ಚು ಕಡಿಮೆ ಆಗಬಹುದು ಅಂತ ಹೇಳಿದ್ದೆವು. ಸಿದ್ದರಾಮಯ್ಯನವರು ಒಳ್ಳೆಯ ಕೆಲಸ ಮಾಡುತ್ತಿದ್ದಾರೆ.ವೀರಶೈವ ಲಿಂಗಾಯತರೆಲ್ಲಾ…
ಬೆಂಗಳೂರು : ರಾಜ್ಯದಲ್ಲಿ ಸಾಮಾಜಿಕ ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ ಅವಧಿಯನ್ನು ಅಕ್ಟೋಬರ್ 12ರ ವರೆಗೆ ವಿಸ್ತರಿಸಲಾಗಿದ್ದು, ಇದರ ಬೆನ್ನಲ್ಲೆ ದಸರಾ ರಜಾ ಅವಧಿ ವಿಸ್ತರಣೆ ಮಾಡುವಂತೆ ಇದೀಗ ಶಿಕ್ಷಕರು ಮನವಿ ಮಾಡಿಕೊಂಡಿದ್ದಾರೆ. ಸಮೀಕ್ಷೆಗಳು ವಿಸ್ತರಣೆ ಬೆನ್ನಲ್ಲೇ ಸರ್ಕಾರಕ್ಕೆ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಸಚಿವರಿಗೆ ಮನವಿ ಮಾಡಿಕೊಳ್ಳಲಾಗಿದೆ. ಕಳೆದ ಸೆಪ್ಟೆಂಬರ್ 20 ರಿಂದ ಅಕ್ಟೋಬರ್ 7ರ ತನಕ ದಸರಾ ರಜೆ ಇತ್ತು. ಶಿಕ್ಷಕರು ಸೆಪ್ಟೆಂಬರ್ 22 ರಿಂದ ಜಾತಿಗಣತಿ ಮಾಡುತ್ತಿದ್ದಾರೆ ಬೆಂಗಳೂರಿನಲ್ಲಿ ಸರ್ವೇ ಇನ್ನೂ ಗೊಂದಲದಲ್ಲಿ ನಡೆಯುತ್ತಿದೆ. ಹೀಗಾಗಿ ಶಿಕ್ಷಕರು ದೈಹಿಕ ಹಾಗೂ ಬೌದ್ಧಿಕವಾಗಿ ಒತ್ತಡದಲ್ಲಿ ಇದ್ದಾರೆ. ಅವರಿಗೆ ದೈಹಿಕ ಹಾಗು ಮಾನಸಿಕ ವಿರಾಮದ ಅವಶ್ಯಕತೆ ಇದೆ ಹಾಗಾಗಿ ಅಕ್ಟೋಬರ್ 17ರವರೆಗೆ ದಸರಾ ರಜಾ ಅವಧಿ ವಿಸ್ತರಣೆ ಮಾಡುವಂತೆ ಶಿಕ್ಷಣ ಸಚಿವ ಮಧು ಬಂಗಾರಪ್ಪಗೆ ರಾಜ್ಯ ಸರ್ಕಾರಿ ನೌಕರರ ಸಂಘ ಮನವಿ ಮಾಡಿದೆ.
ದಾವಣಗೆರೆ : ರಾಜ್ಯಾದ್ಯಂತ ಸೆಪ್ಟೆಂಬರ್ 22 ರಿಂದ ಶೈಕ್ಷಣಿಕ ಆರ್ಥಿಕ ಮತ್ತು ಸಾಮಾಜಿಕ ಸಮೀಕ್ಷೆ ಆರಂಭಿಸಲಾಗಿದ್ದು, ಈಗಾಗಲೇ ಜಾತಿಗಣಿತಿ ವೇಳೆ ಹೃದಯಾಘಾತದಿಂದ ಶಿಕ್ಷಕರು ಮೃತಪಟ್ಟಿರುವ ಒಂದೆರಡು ಪ್ರಕರಣಗಳು ನಡೆದಿದ್ದುz ಇದೀಗ ದಾವಣಗೆರೆಯಲ್ಲಿ ಶಿಕ್ಷಕರೊಬ್ಬರಿಗೆ ಜಾತಿಗಣಿತಿ ವೇಳೆ ಹೃದಯಘಾತವಾಗಿದೆ. ಅದೃಷ್ಟವಶಾತ್ ಸ್ಥಳೀಯರ ಸಮಯ ಪ್ರಜ್ಞೆಯಿಂದ ಶಿಕ್ಷಕನ ಜೀವ ಉಳಿದಿದೆ. ಹೌದು ಜಾತಿ ಗಣತಿ ವೇಳೆ ದಾವಣಗೆರೆ ತಾಲ್ಲೂಕಿನ ಹಳೆಕಡ್ಲೆಬಾಳು ಶಾಲೆಯ ಶಿಕ್ಷಕರೊಬ್ಬರಿಗೆ ಹೃದಯಾಘಾತವಾಗಿದೆ. ಶಿಕ್ಷಕ ಪ್ರಕಾಶ್ ನಾಯಕ್ (44)ಗೆ ಹೃದಯಾಘಾತವಾಗಿದ್ದು, ತಕ್ಷಣ ಚಿಕಿತ್ಸೆಗಾಗಿ ದಾವಣಗೆರೆ ನಗರದ ಹೈಟೆಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರು ಶಸ್ತ್ರಚಿಕಿತ್ಸೆ ನೆರವೇರಿಸಿ ಸ್ಟೆಂಟ್ ಅಳವಡಿಸಿದ್ದಾರೆ. ಸ್ಥಳೀಯರ ಸಮಯಪ್ರಜ್ಞೆಯಿಂದ ಶಿಕ್ಷಕ ಪ್ರಕಾಶ್ ನಾಯಕ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ದಾವಣಗೆರೆ ಡಿಸಿ ಜಿಎಂ ಗಂಗಾಧರ ಸ್ವಾಮಿ ಫೋನ್ ಮೂಲಕ ಪ್ರಕಾಶ್ ನಾಯಕ್ಗೆ ಧೈರ್ಯ ತುಂಬಿದರು. ಸಮೀಕ್ಷೆ ವೇಳೆ ಸಿಬ್ಬಂದಿ ಸಾಕಷ್ಟು ಕಿರುಕುಳ ಎದುರಿಸುತ್ತಿದ್ದಾರೆ. ಇದರಿಂದಾಗಿ ಅವರು ಮಾನಸಿಕವಾಗಿ ಒತ್ತಡಕ್ಕೆ ಒಳಗಾಗುತ್ತಿದ್ದಾರೆ ಎಂದು ಪ್ರಕಾಶ್ ನಾಯಕ್ ಜತೆಗಿದ್ದವರು ಡಿಸಿ ಜಿಎಂ ಗಂಗಾಧರ ಸ್ವಾಮಿ ಬಳಿ ಫೋನ್ನಲ್ಲಿ…
ಬೆಂಗಳೂರು : ರಾಜ್ಯದಲ್ಲಿ ಸಾಮಾಜಿಕ ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ ಈಗಾಗಲೇ ಸೆಪ್ಟೆಂಬರ್ 22 ರಿಂದ ಆರಂಭವಾಗಿದ್ದು, ಸಮೀಕ್ಷೆ ಮುಗಿಯದ ಹಿನ್ನೆಲೆಯಲ್ಲಿ ಇದೀಗ ಶಿಕ್ಷಣ ಇಲಾಖೆ ಶಿಕ್ಷಕರ ಅವಧಿಯನ್ನು ಸಮೀಕ್ಷೆ ಕಾರ್ಯಕ್ಕೆ ವಿಸ್ತರಿಸಿದೆ. ಅಲ್ಲದೆ ಶಾಲಾ ಅವಧಿ ಕೂಡ ಪರಿಷ್ಕರಣೆ ಮಾಡಲಾಗಿದೆ. ಬೆಳಿಗ್ಗೆ 8ರಿಂದ ಮಧ್ಯಾಹ್ನ 1 ರವರೆಗೆ ಶಾಲೆಯಲ್ಲಿ ಶಿಕ್ಷಕರು ಕರ್ತವ್ಯ ನಿರ್ವಹಿಸಬೇಕು. ಬಳಿಕ ಮಧ್ಯಾಹ್ನ 1 ಗಂಟೆಯಿಂದ ಸಮೀಕ್ಷಾ ಕಾರ್ಯದಲ್ಲಿ ಅವರು ಭಾಗಿಯಾಗಬೇಕು. ಅಕ್ಟೊಬರ್ 12 ರವರೆಗೆ ಸಮೀಕ್ಷೆಯಲ್ಲಿ ಭಾಗಿಯಾಗಲು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಇನ್ನು ಗ್ರೇಟರ್ ಬೆಂಗಳೂರು ವ್ಯಾಪ್ತಿಯಲ್ಲಿ ಅಕ್ಟೋಬರ್ 24ರ ವರೆಗೆ ಸರ್ವೆ ಮಾಡಲು ಆದೇಶ ನೀಡಿದೆ. ಬೆಂಗಳೂರು ಹೊರತುಪಡಿಸಿ ರಾಜ್ಯದಲ್ಲಿ ಅಕ್ಟೋಬರ್ 12 ರವರೆಗೆ ಸಮೀಕ್ಷೆ ವಿಸ್ತರಿಸಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
ತೆಲಂಗಾಣ : ಕಳೆದ ಎರಡು ದಿನಗಳ ಹಿಂದೆ ಕನ್ನಡದ ಖ್ಯಾತ ನಟಿ ರಶ್ಮಿಕ ಮಂದಣ್ಣ ಜೊತೆಗೆ ಟಾಲಿವುಡ್ ಸ್ಟಾರ್ ನಟ ವಿಜಯ್ ದೇವರಕೊಂಡ ನಿಶ್ಚಿತಾರ್ಥ ನೆರವೇರಿತ್ತು. ಇದರ ಬೆನ್ನಲ್ಲೇ ಇದೀಗ ವಿಜಯ್ ದೇವರಕೊಂಡ ಚಲಿಸುತ್ತೀದ್ದ ಕಾರು ಅಪಘಾತವಾಗಿದೆ. ಹೌದು ಪುಟ್ಟಪರ್ತಿಯಿಂದ ಹೈದರಾಬಾದ್ ಗೆ ಹೋಗುವಾಗ ಈ ಒಂದು ಅಪಘಾತ ಸಂಭವಿಸಿದ್ದು, ಮುಂದೆ ಹೋಗುತ್ತಿದ್ದ ಬೊಲೆರೋ ವಾಹನಕ್ಕೆ ವಿಜಯ್ ದೇವರಕೊಂಡ ಕಾರು ಡಿಕ್ಕಿ ಹೊಡೆದಿದೆ. ಮತ್ತೊಂದು ಕಾರಿನಲ್ಲಿ ದೇವರಕೊಂಡ ಹೈದರಾಬಾದ್ ಗೆ ತೆರಳಿದ್ದಾರೆ. ಸದ್ಯಕ್ಕೆ ಪ್ರಾಣಾಪಯದಿಂದ ವಿಜಯ ದೇವರಕೊಂಡ ಪಾರಾಗಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ಅಷ್ಟೇ ರಶ್ಮಿಕ ಮಂದನ ಜೊತೆಗೆ ಎಂಗೇಜ್ಮೆಂಟ್ ಮಾಡಿಕೊಂಡಿರುವ ವಿಜಯ್ ದೇವರಕೊಂಡ ಫೆಬ್ರುವರಿಯಲ್ಲಿ ಈ ಜೋಡಿ ಹಸೆಮಣೆ ಏರಲಿದೆ ಎಂದು ತಿಳಿದು ಬಂದಿದೆ. https://twitter.com/igtelugu/status/1975202938420404715?t=RFtoiRSzeoBThV7uvfcSIQ&s=19
ಬೆಂಗಳೂರು : ಸೆಪ್ಟೆಂಬರ್ 22 ರಿಂದ ರಾಜ್ಯಾದ್ಯಂತ ಸಾಮಾಜಿಕ ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ ಆರಂಭವಾಗಿದ್ದು, ಈಗಾಗಲೇ ಬಹುತೇಕ ಜಿಲ್ಲೆಗಳಲ್ಲಿ ಸಮೀಕ್ಷೆ ಪೂರ್ಣಗೊಂಡಿದೆ. ಇದೀಗ ಬೆಂಗಳೂರಿನಲ್ಲಿ ಕಳೆದ ಎರಡು ದಿನಗಳ ಹಿಂದೆ ಸಮೀಕ್ಷೆ ಆರಂಭಿಸಲಾಗಿದ್ದು, ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಸಾಮಾಜಿಕ ಶೈಕ್ಷಣಿಕ ಆರ್ಥಿಕ ಸಮೀಕ್ಷೆ ನಡೆಸಿದ್ದು ಇಂದು ಒಂದು ದಿನ 2,66,066 ಮನೆಗಳ ಸಮೀಕ್ಷೆ ಪೂರ್ಣಗೊಂಡಿದೆ. ಹೌದು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿನ ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿ 31,815 ಮನೆಗಳ ಸಮೀಕ್ಷೆ ಪೂರ್ಣಗೊಂಡಿದೆ. ಪೂರ್ವ ನಗರ ಪಾಲಿಕೆ ವ್ಯಾಪ್ತಿಯಲ್ಲಿ 38,374 ಮನೆಗಳ ಸಮೀಕ್ಷೆ ಪೂರ್ಣಗೊಂಡಿದೆ. ಉತ್ತರ ನಗರ ಪಾಲಿಕೆ ವ್ಯಾಪ್ತಿಯಲ್ಲಿ 68,639 ಮನೆಗಳ ಸಮೀಕ್ಷೆ ಪೂರ್ಣಗೊಂಡಿದೆ. ಇನ್ನು ದಕ್ಷಿಣ ನಗರ ಪಾಲಿಕೆ ವ್ಯಾಪ್ತಿಯಲ್ಲಿ 39,315 ಮನೆಗಳ ಸಮೀಕ್ಷೆ ಪೂರ್ಣಗೊಂಡಿದೆ. ಅಲ್ಲದೆ ಪಶ್ಚಿಮ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಒಟ್ಟು 87,923 ಮನೆಗಳ ಸಮೀಕ್ಷೆ ಪೂರ್ಣಗೊಂಡಿದೆ.














