Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಸಚಿವ ಚೆಲುವರಾಯಸ್ವಾಮಿ ವಿರುದ್ಧ ಭೂಕಬಳಿಕೆ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ 2 ಕೇಸ್ ದಾಖಲಾಗಿತ್ತು. ಈ ಕೇಸ್ ಗಳನ್ನು ರದ್ದು ಕೋರಿ ಸಚಿವ ಚೆಲುವರಾಯಸ್ವಾಮಿ ಅರ್ಜಿ ಸಲ್ಲಿಸಿದ್ದರು. ಇದೀಗ ಹೈಕೋರ್ಟ್ ಪೀಠವು ಭೂ ಕಬಳಿಕೆ ನಿಷೇಧ ಕೋರ್ಟ್ ನ 2 ಕೇಸ್ ಗಳನ್ನು ರದ್ದುಗೊಳಿಸಿ ಆದೇಶ ನೀಡಿದೆ. ಈ ಹಿನ್ನೆಲೆ ಸಚಿವ ಚೆಲುವರಾಯ ಸ್ವಾಮಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ. ಬೆಂಗಳೂರಿನ ದಾಸನಪುರ ಹೋಬಳಿ ಮಾಕಳಿಯ 3 ಎಕರೆ 13 ಗುಂಟೆ ಜಮೀನು ಕಬಳಿಕೆ ಸಂಬಂಧ ಎರಡು ಕೇಸ್ ದಾಖಲಾಗಿತ್ತು. ಈ ಕೇಸ್ ಗಳನ್ನು ರದ್ದು ಮಾಡುವಂತೆ ಚೆಲುವರಾಯಸ್ವಾಮಿ ಅರ್ಜಿ ಸಲ್ಲಿಸಿದ್ದರು ಜಮೀನಿಗೆ ಸಂಬಂಧಿಸಿದಂತೆ 1923 ರಿಂದಲೇ ಕ್ರಯಪತ್ರವಾಗಿದ್ದು, ಶತಮಾನದ ಹಳೆಯ ದಾಖಲೆ ಇರುವ ಜಮೀನು ಎಂದು ಇದೀಗ 2 ಕೇಸ್ ರದ್ದುಗೊಳಿಸಲಾಗಿದೆ. ನ್ಯಾ ಕೃಷ್ಣ ಎಸ್ ದೀಕ್ಷಿತ್ ಹಾಗೂ ಜೀ ಬಸವರಾಜ್ ಅವರಿದ್ದ ಪೀಠ ಈ ಆದೇಶ ಹೊರಡಿಸಿದೆ.
ಬೆಂಗಳೂರು : ಇತ್ತೀಚಿಗೆ ಬೆಂಗಳೂರಿನಲ್ಲಿ ಆಯೋಜಿಸಿದ್ದ 16ನೇ ಅಂತರಾಷ್ಟ್ರೀಯ ಚಲನ ಚಿತ್ರೋತ್ಸವದಲ್ಲಿ ಕನ್ನಡದ ಹಲವು ಕಲಾವಿದರು ಭಾಗಿಯಾಗದ್ದಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಅಸಮಾಧಾನಗೊಂಡಿದ್ದು, ನಮಗೆ ನಿಮ್ಮ ನಟ್ಟು ಬೋಲ್ಟ್ ಎಲ್ಲಿ ಹೇಗೆ ಸರಿ ಮಾಡಬೇಕೆನ್ನುವುದು ಗೊತ್ತಿದೆ ಎಂದು ಹೇಳಿಕೆ ನೀಡಿದರು. ಇದೀಗ ಈ ಒಂದು ಹೇಳಿಕೆಗೆ ವ್ಯಾಪಕ ಟೀಕೆಗಳು ವ್ಯಕ್ತವಾಗಿದ್ದು, ಇದಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಟೀಕೆ ಮಾಡಲಿ ಅಂತಾನೆ ನಾನು ಆ ಹೇಳಿಕೆ ನೀಡಿದ್ದೇನೆ ಎಂದು ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಟೀಕೆ ಮಾಡಲಿ ಎಂದೆ ನಾನು ಆ ಹೇಳಿಕೆ ನೀಡಿದ್ದು, ಚಿತ್ರರಂಗದವರಿಗೆ ಎಷ್ಟು ಸಹಾಯ ಮಾಡಿದ್ದೇನೆ ಎಂದು ನನಗೂ ಮತ್ತು ಅವರಿಗೂ ಗೊತ್ತಿದೆ. ನೆಲ, ಜಲ, ಭಾಷೆ ವಿಚಾರದಲ್ಲಿ ಎಲ್ಲರೂ ಒಗ್ಗಟ್ಟಾಗಿ ಇರಬೇಕು. ಅವರು ಬೆಳೆಯಲಿ ಅಂತ ಫಿಲಂ ಫೆಸ್ಟಿವಲ್ ಮಾಡುತ್ತಿರುವುದು. ಅವರೇ ಪ್ರಚಾರ ಮಾಡಬೇಕು ನಾವು ಮಾಡುವುದಕ್ಕೆ ಆಗುತ್ತಾ? ಎಂದು ಪ್ರಶ್ನಿಸಿದರು. ಟಿ.ಎಸ್ ನಾಗಭರಣ ಅವರಿಗೆ ಅಹ್ವಾನ ಕೊಡದೆ ಇರಬಹುದು. ಯಾವ ಇಲಾಖೆಯದ್ದು…
ಕಲಬುರ್ಗಿ : ಇಂದು ಬೆಳ್ಳಂ ಬೆಳಗ್ಗೆ ಕಲ್ಬುರ್ಗಿ ನಗರದ ಕಾಕಡೆ ಚೌಕ್ ಬಳಿ ರೌಡಿಶೀಟರ್ ಅನ್ನು ಭೀಕರವಾಗಿ ಕೊಲೆ ಮಾಡಲಾಗಿದ್ದು, ಈ ಒಂದು ಘಟನೆ ನಡೆದ ಬಳಿಕ ಕಲ್ಬುರ್ಗಿಯಲ್ಲಿ ಮತ್ತೊಂದು ಭೀಕರವಾದ ಕೊಲೆ ಆಗಿರುವ ಘಟನೆ ವರದಿಯಾಗಿದೆ. ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತು ಪ್ರಿಯಕರನನ್ನು ಪತಿ ಕೊಲೆ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕೊಲೆಯಾದ ವ್ಯಕ್ತಿಯನ್ನು ಶಾಂತಿ ನಗರದ ನಿವಾಸಿ ಅಹಮದ್ ಫಜಲ್ ಅಲಿಯಾಸ್ ಬಬ್ಲೂ (30) ಎಂದು ತಿಳಿದುಬಂದಿದ್ದು, ಈತನನ್ನು ಕೊಲೆ ಮಾಡಿರುವ ಚಂದ್ರಶೇಖರ್ ಎಂಬ ವ್ಯಕ್ತಿಯನ್ನು ಇದೀಗ ಅಶೋಕ್ ನಗರ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಚಂದ್ರಶೇಖರ ಪತ್ನಿ ನಿರ್ಮಲಾ ಅವರು 6 ವರ್ಷಗಳ ಹಿಂದೆ ಫಜಲ್ಗೆ ಪರಿಚಯವಾಗಿದ್ದರು. ಆಗಾಗ ಅವರ ಮನೆಗೆ ಹೋಗಿ ಬರುವುದು ಮಾಡುತ್ತಿದ್ದನು. ಮಾರ್ಚ್ 2ರ ಸಂಜೆ 4ರ ಸುಮಾರಿಗೆ ಶಾಂತಿ ನಗರದಲ್ಲಿರುವ ಚಂದ್ರಶೇಖರ ಮನೆಗೆ ಫಜಲ್ ಹೋಗಿದ್ದರು. ಪತ್ನಿಯೊಂದಿಗಿನ ಸಂಬಂಧದಿಂದ ರೋಸಿ ಹೋಗಿದ್ದ ಚಂದ್ರಶೇಖರ ಫಜಲ್ ಜೊತೆ ಗಲಾಟೆ ಮಾಡಿ ಫಜಲ್…
ಬೆಂಗಳೂರು : ಬೆಳಗಾವಿಯಲ್ಲಿ ಕಂಡಕ್ಟರ್ ಮೇಲೆ ಹಲ್ಲೆ ಖಂಡಿಸಿ ಇದೆ ಮಾರ್ಚ್ 22ರಂದು ಕನ್ನಡ ಪರ ಸಂಘಟನೆಗಳು ಅಖಂಡ ಕರ್ನಾಟಕ ಬಂದ್ ಗೆ ಕರೆ ನೀಡಿವೆ. ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಈ ಒಂದು ಕರ್ನಾಟಕ ಬಂದ್ ನಡೆಯುತ್ತೆ. ಇದೀಗ ಇದೆ ವಿಚಾರವಾಗಿ ಸಚಿವ ರಾಮಲಿಂಗ ರೆಡ್ಡಿ ಅವರು ಮಾರ್ಚ್ 22 ರಂದು ಕರ್ನಾಟಕ ಬಂದ್ ಮಾಡುವ ಅವಶ್ಯಕತೆ ಇಲ್ಲ ಎಂದು ತಿಳಿಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವ ರಾಮಲಿಂಗಾರೆಡ್ಡಿ ಅವರು, ಬೆಳಗಾವಿಯಲ್ಲಿ ಕಂಡಕ್ಟರ್ ಮೇಲೆ ಹಲ್ಲೆ ನಡೆದು 8-10 ದಿನಗಳಾಗಿವೆ. ನಮ್ಮ ಬಸ್ ಗಳಿಗೆ ಹಾಗೂ ಸಿಬ್ಬಂದಿಗೆ ಮಹಾರಾಷ್ಟ್ರದವರು ಮಸಿ ಬಳಿದರು. ಈಗ ಕರ್ನಾಟಕ ಬಂದ ಅವಶ್ಯಕತೆ ಇಲ್ಲ. ಹೋರಾಟಗಾರರ ಕನ್ನಡದ ಮೇಲಿನ ಅಭಿಮಾನವನ್ನು ಸ್ವಾಗತಿಸುತ್ತೇವೆ. ಮಾರ್ಚ್ 22 ರಂದು ಬಂದ ಅವಶ್ಯಕತೆ ಇಲ್ಲ ಎಂದು ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.
ಬೆಂಗಳೂರು : ದುಬೈನಿಂದ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ನಟಿ ರನ್ಯ ರಾವ್ ಅವರನ್ನು ಇದೀಗ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಹೌದು ಕೆಂಪೇಗೌಡ ಅಂತರಾಷ್ಟ್ರೀಯ ಏರ್ಪೋರ್ಟ್ ನಲ್ಲಿ ರನ್ಯಾ ರಾವ್ ಅವರನ್ನು ವಶಕ್ಕೆ ಪಡೆಯಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ ಏರ್ಪೋರ್ಟ್ ನಲ್ಲಿ ವಿದೇಶದಿಂದ ಬಂದ ನಟಿ ರನ್ಯಾ ರಾವ್ ವಶಕ್ಕೆ ಪಡೆದ ಡಿ.ಆರ್.ಐ ತಂಡ. ಏರ್ಪೋರ್ಟ್ ಕಸ್ಟಮ್ಸ್ ಡಿ ಆರ್ ಐ ಅಧಿಕಾರಿಗಳಿಂದ ಸದ್ಯ ರನ್ಯಾ ರಾವ್ ಅವರನ್ನು ವಿಚಾರಣೆಗೆ ಒಳಪಡಿಸಲಾಗಿದೆ.ಕಳೆದ ರಾತ್ರಿ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಿದಾಗ ಅಧಿಕಾರಿಗಳು ರನ್ಯಾ ಅವರನ್ನು ವಶಕ್ಕೆ ಪಡೆದಿದ್ದಾರೆ. ಡಿಜಿಪಿ ರಾಮಚಂದ್ರ ರಾವ್ ಸಂಬಂಧಿಯಾಗಿರುವ ನಟಿ ರನ್ಯರಾವ್ ಖಚಿತ ಮಾಹಿತಿಯ ಮೇರೆಗೆ ಡಿ ಆರ್ ಐ ತಂಡ ಏರ್ಪೋರ್ಟ್ಗೆ ಬಂದಿತ್ತು. ನಟಿ ರನ್ಯಾ ಏರ್ಪೋರ್ಟಿಗೆ ಬರುತ್ತಿದ್ದಂತೆ ಅಧಿಕಾರಿಗಳು ಅವರನ್ನು ವಶಕ್ಕೆ…
ಬೆಂಗಳೂರು : ಇಡ್ಲಿ, ಬಟಾಣಿ ಕಲ್ಲಂಗಡಿ ಬಳಿಕ ಇದೀಗ ಬೆಲ್ಲದ ಸರದಿ. ಸಿಹಿಪ್ರಿಯರ ಇಷ್ಟದ ಬೆಲ್ಲದಲ್ಲೂ ಇದೀಗ ವಿಷಕಾರಿ ಅಂಶ ಇದೀಗ ಪತ್ತೆಯಾಗಿದೆ. ಹೌದು ಆಹಾರ ಇಲಾಖೆಯು ಬೆಳೆದ ಸ್ಯಾಂಪಲ್ಸ್ ಗಳನ್ನು ಲ್ಯಾಬ್ ಗೆ ಕಳುಹಿಸಿ ಪ್ರಯೋಗಗಾಲಯದಲ್ಲಿ ಟೆಸ್ಟ್ ಮಾಡಿಸಿದಾಗ, ವರದಿಯಲ್ಲಿ ಬೆಲ್ಲ ಅಸುರಕ್ಷಿತ ಅನ್ನೋದು ಬಯಲಾಗಿದೆ. ಫೆಬ್ರುವರಿಯಲ್ಲಿ ಲ್ಯಾಬ್ ಗೆ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಒಟ್ಟು 600ಕ್ಕೂ ಹೆಚ್ಚು ಸ್ಯಾಂಪಲ್ಸ್ ಗಳನ್ನು ಈ ವೇಳೆ ಪರೀಕ್ಷಿಸಲಾಗಿತ್ತು. ಈ ವೇಳೆ 200ಕ್ಕೂ ಹೆಚ್ಚು ಬೆಲ್ಲ ಅಸುರಕ್ಷಿತ ಎಂದು ವರದಿಯಲ್ಲಿ ದೃಢವಾಗಿದೆ. ಬೆಲ್ಲದಲ್ಲಿ ಸಲ್ಫೈರ್ ಡೈಆಕ್ಸೈಡ್ ರಾಸಾಯನಿಕ ಬಳಕೆ ಮಾಡುತ್ತಿರುವ ಪತ್ತೆಯಾಗಿದೆ. ಇಂತಹ ಬೆಲ್ಲ ಸೇವನೆಯಿಂದ ಮೂಳೆ, ನಗರಗಳಲ್ಲಿ ಶಕ್ತಿ ಕಡಿಮೆ ಆಗುತ್ತದೆ. ಸಲ್ಫೈರ್ ಡೈಆಕ್ಸೈಡ್ ನಿಂದ ಮನುಷ್ಯನಲ್ಲಿ ನಿಶಕ್ತಿ ಕಾಣಿಸಿಕೊಳ್ಳುತ್ತದೆ. ಮಂಡಿ ನೋವು, ಸೊಂಟ ಮತ್ತು ಬೆನ್ನು ನೋವು ಹೆಚ್ಚಾಗುತ್ತದೆ. ಅಲ್ಲದೇ ಮನುಷನ ದೇಹದಲ್ಲಿ ವಿವಿಧ ಆರೋಗ್ಯದ ಸಮಸ್ಯೆ ಕಂಡು ಬರುತ್ತದೆ. ಈ ಬೆಲ್ಲ ತಿಂದರೆ ಆರೋಗ್ಯದ ಮೇಲೆ ಅಡ್ಡ ಪರಿಣಾಮ ಬೀರುತ್ತದೆ.…
ಬೆಂಗಳೂರು : ಡಿಸಿಎಂ ಡಿಕೆ ಶಿವಕುಮಾರ್ ಸಿಎಂ ಆಗೋದು ಗ್ಯಾರಂಟಿ. ಅದನ್ನು ತಪ್ಪಿಸೋಕೆ ಯಾರಿಂದಾನು ಸಾಧ್ಯವಿಲ್ಲ ಎಂದು ವೀರಪ್ಪ ಮೊಯ್ಲಿ ಹೇಳಿಕೆ ನೀಡಿದ್ದರು. ಇದೀಗ ಈ ಒಂದು ಹೇಳಿಕೆ ನಡುವೆ ರಾಜ್ಯ ರಾಜಕೀಯದಲ್ಲಿ ಭಾರಿ ಬದಲಾವಣೆ ಕಂಡುಬಂದಿದ್ದು, AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಇದೀಗ ಡಿಸಿಎಂ ಡಿಕೆ ಶಿವಕುಮಾರ್ ಅವರು ಭೇಟಿ ಮಾಡಿದ್ದಾರೆ. ಹೌದು ಇಂದು ಬೆಂಗಳೂರಿನ ಸದಾಶಿವ ನಗರದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಡಿಸಿಎಂ ಡಿಕೆ ಶಿವಕುಮಾರ್ ಅವರನ್ನ ಭೇಟಿ ಮಾಡಿದ್ಧು, ಭಾರಿ ಕುತೂಹಲ ಮೂಡಿಸಿದೆ. ಖರ್ಗೆ ಭೇಟಿ ಬಳಿಕ ಮಾತನಾಡಿದ ಅವರು, ನಾನು ಖರ್ಗೆಯವರನ್ನು ಭೇಟಿ ಮಾಡದೆ ಬಿಜೆಪಿ ಆಫೀಸ್ ಗೆ hoglab? ಖರ್ಗೆ ಕಾಂಗ್ರೆಸ್ ಅಧ್ಯಕ್ಷರು ಅವರು ರಾಜ್ಯಕ್ಕೆ ಬಂದಾಗ ನಾನು ಅವರಿಗೆ ಗೌರವ ಕೊಡದೆ ಇನ್ಯಾರಿಗೆ ಕೊಡೋಕೆ ಆಗುತ್ತೆ? ಇದು ನಮ್ಮ ಕರ್ತವ್ಯ ಪಕ್ಷದ ವಿಚಾರ ಹಾಗೂ ಹೊಸ ಕಾಂಗ್ರೆಸ್ ಭವನ ಉದ್ಘಾಟನೆ ವಿಚಾರವಾಗಿ ದಿನಾಂಕ ನೀಡುವ ಕುರಿತು ಮಾತುಕತೆ ಆಗಿದೆ ಎಂದು ತಿಳಿಸಿದರು.
ಚಾಮರಾಜನಗರ : ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡಿಪುರದಲ್ಲಿ ಕುಟುಂಬ ನಾಪತ್ತೆ ಕೇಸ್ ಗೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಬಂಡಿಪುರಕ್ಕೆ ಬಂದಿದ್ದ ದಂಪತಿ ಮತ್ತು 10 ವರ್ಷದ ಬಾಲಕ ನಾಪತ್ತೆಯಾಗಿದ್ದಾರೆ ಎನ್ನಲಾಗಿತ್ತು. ಆದರೆ ಇದೀಗ ಈ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಬೆಂಗಳೂರು ಮೂಲದ ಜೆ. ನಿಶಾಂತ್(40) ಮತ್ತು ಅವರ ಪತ್ನಿ, ಪುತ್ರ ನಾಪತ್ತೆಯಾಗಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಈಗ ಬಿಬಿಎಂಪಿ ನೌಕರ ಅಂತ ಹೇಳಿ ರೂಮ್ ಬುಕ್ ಮಾಡಿದ್ದ ನಿಶಾಂತ್. ಬಿಬಿಎಂಪಿ ನೌಕರ ಎಂದು ಫೇಕ್ ಐಡಿ ನೀಡಿದ್ದ ನಿಶಾಂತ್, ನಾಪತ್ತೆಯಾಗಿರುವ ನಿಶಾಂತ್ ಮೈತುಂಬ ಸಾಲ ಮಾಡಿಕೊಂಡಿದ್ದ ಎನ್ನಲಾಗಿದೆ. ನಿಶಾಂತ್ ಸದ್ಯ ಯಾವುದೇ ಕೆಲಸ ಕಾರ್ಯ ಮಾಡುತ್ತಿರಲಿಲ್ಲ ಸಾಲಕ್ಕೆ ಹೆದರಿ ಕುಟುಂಬದ ಸಮೇತ ನಿಶಾಂತ್ ಬಂಡಿಪುರಕ್ಕೆ ಬಂದಿದ್ದ. ಈ ವೇಳೆ ಕಂಟ್ರಿ ಕ್ಲಬ್ ರೆಸಾರ್ಟ್ ನಲ್ಲಿ ಬಿಬಿಎಂಪಿ ನೌಕರ ಎಂದು ರೂಮ್ ಪಡೆದಿದ್ದ. ಪತ್ನಿ ಚಂದನ ಪುತ್ರನೊಂದಿಗೆ ಬಂಡಿಪುರಕ್ಕೆ ಬಂದಿದ್ದ ಎನ್ನಲಾಗಿದೆ.ಸ್ಥಳಕ್ಕೆ ಚಾಮರಾಜನಗರ ಎಸ್ಪಿ ಡಾ.ಬಿ.ಟಿ. ಕವಿತಾ ಭೇಟಿ ನೀಡಿ…
ಕಲಬುರ್ಗಿ : ಇಂದು ಕಲ್ಬುರ್ಗಿಯಲ್ಲಿ ಬೆಳ್ಳಂ ಬೆಳಿಗ್ಗೆ ಭೀಕರವಾದಂತಹ ಮರ್ಡರ್ ನಡೆದಿದ್ದು, ಕಬ್ಬಿಣದ ರಾಡ್ ನಿಂದ ಹೊಡೆದು ರೌಡಿಶೀಟರ್ ಓರ್ವನನ್ನು ಕೊಲೆ ಮಾಡಲಾಗಿದೆ. ಈ ಒಂದು ಘಟನೆ ಕಲಬುರ್ಗಿಯ ಕಾಕಡೆ ಚೌಕ್ ಬಳಿ ಲಂಗರ್ ಹನುಮಾನ್ ದೇವಸ್ಥಾನದ ಸಮೀಪ ವೀರೇಶ್ ಸಾರಥಿ(40) ಎನ್ನುವ ರೌಡಿ ಶೀಟರ್ ನನ್ನು ದುಷ್ಕರ್ಮಿಗಳು ಹತ್ಯೆಗೈದಿದ್ದಾರೆ. ಕೊಲೆಯಾದ ರೌಡಿಶೀಟರ್ ಕಲಬುರಗಿ ಭವಾನಿ ನಗರದ ನಿವಾಸಿಯಾಗಿದ್ದಾನೆ ಎಂದು ತಿಳಿದುಬಂದಿದ್ದು, ಕೊಲೆಗೂ ಮುನ್ನ ದುಷ್ಕರ್ಮಿಗಳು ದೇಗುಲದ ಬಳಿ ಕರೆಸಿಕೊಂಡು ಕೊಲೆ ಮಾಡಿದ್ದಾರೆ. ಸದ್ಯ ಘಟನಾ ಸ್ಥಳಕ್ಕೆ ಉಪನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ರಾಮನಗರ : ಅರಣ್ಯದಲ್ಲಿ ಪಾರ್ಟಿ ಮಾಡುತ್ತಿದ್ದನ್ನು ಪ್ರಶ್ನಿಸಿದ ಅರಣ್ಯ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿರುವ ಘಟನೆ ರಾಮನಗರ ಜಿಲ್ಲೆಯ ಕನಕಪುರ ತಾಲ್ಲೂಕಿನ ಕುರುಬಳ್ಳಿ ದೊಡ್ಡಿಯ ಅರಣ್ಯ ಪ್ರದೇಶದಲ್ಲಿ ನಡೆದಿದೆ.ಘಟನೆ ಸಂಬಂಧ ಓರ್ವ ರೌಡಿ ಶೀಟರ್ ಸೇರಿದಂತೆ ಮೂವರನ್ನು ಬಂಧಿಸಲಾಗಿದೆ. ರಾಮನಗರ ಜಿಲ್ಲೆಯ ಕನಕಪುರ ತಾಲ್ಲೂಕಿನ ಕುರುಬಳ್ಳಿ ದೊಡ್ಡಿಯ ಅರಣ್ಯ ಪ್ರದೇಶದಲ್ಲಿ ಕುಳಿತು ಆರೋಪಿಗಳು ಪಾರ್ಟಿ ಮಾಡುತ್ತಿದ್ದರು ಪಾರ್ಟಿ ಮಾಡುತ್ತಿರುವುದನ್ನು ಅರಣ್ಯ ಇಲಾಖೆ ಸಿಬ್ಬಂದಿ ವೇಳೆ ಪ್ರಶ್ನೆ ಮಾಡಿದ್ದಾರೆ. ಪ್ರಶ್ನೆ ಮಾಡಿದ ಅರಣ್ಯ ಇಲಾಖೆಗೆ ಸಿಬ್ಬಂದಿ ಜೊತೆಗೂ ಗಲಾಟೆ ಮಾಡಿದ್ದಾರೆ. ಗಲಾಟೆ ಮಾಡಿ ವಾಹನಕ್ಕೆ ಬೆಂಕಿ ಹಚ್ಚಲು ಆರೋಪಿಗಳು ಮುಂದಾಗಿದ್ದರು. ಕೂಡಲೇ ಸಿಬ್ಬಂದಿಗಳು 112 ಕರೆ ಮಾಡಿ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ತಕ್ಷಣ ಘಟನಾ ಸ್ಥಳಕ್ಕೆ ಬಂದ ಪೋಲೀಸರ ಜೊತೆಗೂ ಗಲಾಟೆ ಮಾಡಿದ್ದಾರೆ. ಪೊಲೀಸರ ಮೇಲೆ ಹಲ್ಲೆ ಮಾಡಿ ಟ್ಯಾಬ್ ಒಡೆದು ಹಾಕಿದ್ದಾರೆ. ಹಲ್ಲೆ ಮಾಡಿದ ರೌಡಿ ಶೀಟರ್ ಕಿರಣ್, ಸುಂದರ್ ಹಾಗು ಪ್ರತಾಪ್ ಎನ್ನುವ ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಪರಾರಿಯಾದ ಇನ್ನಿಬ್ಬರು…