Author: kannadanewsnow05

ಬೆಂಗಳೂರು : ಜಿ ರಾಮ್ ಜಿ ಯೋಜನೆಯಲಿ ಇರುವುದು ಗೋಡ್ಸೆ ರಾಮ ಮನ್ರೇಗಾ ಹೆಸರು ಬದಲಾಯಿಸಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ. ಅದು ಶ್ರೀರಾಮನ ಹೆಸರು ಅಲ್ಲ ಅದು ಗೋಡ್ಸೆ ರಾಮ. ದಶರಥ ರಾಮನು ಅಲ್ಲ, ಸೀತಾರಾಮನು ಅಲ್ಲ, ಕೌಸಲ್ಯ ರಾಮನು ಅಲ್ಲ. ಇರೋದು ಗೋಡ್ಸೆ ರಾಮ ಮಹಾತ್ಮ ಗಾಂಧಿಯನ್ನು ಕೇಂದ್ರ ಮತ್ತೆ ಕೊಂದು ಹಾಕಿದೆ ಎಂದು ಕಿಡಿ ಕಾರಿದರು. ಮನರೇಗಾ ಯೋಜನೆಯನ್ನು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಅಧಿಕಾರಾವಧಿಯಲ್ಲಿ ಜಾರಿಗೆ ತರಲಾಯಿತು. ಆದರೆ ಈಗ ಮಹಾತ್ಮ ಗಾಂಧಿಯವರ ಹೆಸರಿನ ಕಾಯ್ದೆ ಬದಲಾವಣೆ ಮಾಡಿ ವಿಬಿ ಜಿ ರಾಮ್ ಜಿ ಎಂದು ಹೆಸರಿಟ್ಟಿದ್ದಾರೆ. ಈ ಮೂಲಕ ಮಹಾತ್ಮ ಗಾಂಧಿಯವರನ್ನು ಎರಡನೇ ಬಾರಿ ಕೊಲೆ ಮಾಡುತ್ತಿದ್ದಾರೆ. ಈ ಯೋಜನೆಯಡಿ ಕೇಂದ್ರ ಸರ್ಕಾರ 60% ಅನುದಾನ, ರಾಜ್ಯಗಳು 40% ಅನುದಾನ ನೀಡಬೇಕು. ಇದನ್ನು ನಮ್ಮ ಪಕ್ಷ ಗಂಭೀರವಾಗಿ ಪರಿಗಣಿಸಿದ್ದು, ಕಾನೂನಿನ ಸಮರಕ್ಕೆ ಮುಂದಾಗಿದೆ. ವಿಶೇಷ ಅಧಿವೇಶನ ಕರೆದು ಈ ಬಗ್ಗೆ ಚರ್ಚೆ ಮಾಡಲಾಗುವುದು.…

Read More

ಗದಗ : ಗದಗ ಜಿಲ್ಲೆಯ ಲಕ್ಕುಂಡಿಯಲ್ಲಿ ದೊರೆತ ನಿಧಿಯನ್ನು ಸರ್ಕಾರಕ್ಕೆ ಹಸ್ತಾಂತರಿಸಿದ ಬಾಲಕ ಪ್ರಜ್ವಲ್ ಗೆ ಇದೀಗ ಉಚಿತ ಶಿಕ್ಷಣ ನೀಡಲಾಗುತ್ತದೆ ಎಂದು ಬಿಹೆಚ್ ಪಾಟೀಲ್ ಪದವಿ ಪೂರ್ವ ಕಾಲೇಜು ಘೋಷಣೆ ಮಾಡಿದೆ. ಈ ಕುರಿತು ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷ ಸಿದ್ದಲಿಂಗಯ್ಯ ಪಾಟೀಲ್ ಭರವಸೆ ನೀಡಿದ್ದಾರೆ. ಪ್ರಜ್ವಲ್ ಗೆ ಪಿಯುಸಿವರೆಗೆ ಉಚಿತ ಶಿಕ್ಷಣ ನೀಡುವುದಾಗಿ ಭರವಸೆ ನೀಡಿದ್ದಾರೆ. ಈಗಾಗಲೇ ಆತ 8ನೇ ತರಗತಿಯಲ್ಲಿ ಓದುತ್ತಿದ್ದಾನೆ. ನಿನ್ನೆ ನಮ್ಮ ಎಲ್ಲಾ ಆಡಳಿತ ಮಂಡಳಿ ಸೇರಿ ಅವನಿಗೆ ಸನ್ಮಾನಿಸಿದ್ದೇವೆ. ಪಿಯುಸಿ ದ್ವಿತೀಯ ವರ್ಷದವರೆಗೂ ನಮ್ಮ ಕಾಲೇಜಿನಲ್ಲಿ ಆತನಿಗೆ ಉಚಿತ ಶಿಕ್ಷಣ ನೀಡಬೇಕು ಎಂದು ನಿರ್ಣಯ ಮಾಡಿದ್ದೇವೆ ಎಂದು ತಿಳಿಸಿದರು.

Read More

ಬೆಂಗಳೂರು : ರಾಕಿಂಗ್ ಸ್ಟಾರ್ ನಟ ಯಶ್ ಬರ್ತಡೇಗೆ ಬ್ಯಾನರ್ ಹಾಕಿದ್ದಕ್ಕೆ ಇದೀಗ ಎಫ್ಐಆರ್ ದಾಖಲಾಗಿದೆ. ಈ ಕುರಿತು ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಬೆಂಗಳೂರಿನ ಗಾಲ್ಫ್ ಕ್ಲಬ್ ಮುಂದೆ ಇರುವಂತಹ ನಟ ಯಶ್ ಅವರ ನಿವಾಸದ ಮುಂದೆ ಜನವರಿ 8ರಂದು ಯಶ್ ಬರ್ತಡೇ ಹಿನ್ನಲೆಯಲ್ಲಿ ವೇಣು ಕ್ರಿಯೇಷನ್ಸ್ ವಿರುದ್ಧ ಇದೀಗ ಕೇಸ್ ದಾಖಲಾಗಿದೆ. ಜಿಬಿಎ ಅಧಿಕಾರಿಗಳು ನೀಡಿದ ದೂರಿನ ಅನ್ವಯ ಪೊಲೀಸರು FIR ದಾಖಲಿಸಿಕೊಂಡಿದ್ದಾರೆ.

Read More

ಬೆಂಗಳೂರು : ಕನ್ನಡ ಬಿಗ್ ಬಾಸ್ ಆರಂಭವಾದಾಗಿನಿಂದಲೂ ಹಲವಾರು ಸಂಕಷ್ಟ ಎದುರಾಗಿತ್ತು. ಇದೀಗ ಬಿಗ್ ಬಾಸ್ ಕನ್ನಡ ಶೋಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು ರಣಹದ್ದುಗಳ ಬಗ್ಗೆ ಕಿಚ್ಚ ಸುದೀಪ್ ಅಕ್ಷೇಪರ್ಹ ಪದ ಬಳಕೆ ಮಾಡಿದ್ದಾರೆ ಎಂದು ಆರೋಪಿಸಿ ಬೆಂಗಳೂರು ದಕ್ಷಿಣ ಡಿ ಎಫ್ ಓ ರಾಮಕೃಷ್ಣಪ್ಪ ಗೆ ದೂರು ನೀಡಲಾಗಿದೆ. ಹೌದು ವೀಕೆಂಡ್ ನಲ್ಲಿ ಕಿಚ್ಚ ಸುದೀಪ್ ಬಿಗ್ ಬಾಸ್ ಶೋ ಕಾರ್ಯಕ್ರಮದ ವೀಳೆ ರಣಹದ್ದುಗಳ ಬಗ್ಗೆ ಕಿಚ್ಚ ಸುದೀಪ್ ಆಕ್ಷೇಪ ಅರ್ಹ ಪದ ಬಳಕೆ ಮಾಡಿದ್ದಾರೆ ಎಂದು ಆರೋಪಿಸಿ ಬೆಂಗಳೂರು ದಕ್ಷಿಣ ಡಿ ಎಫ್ ಓ ರಾಮಕೃಷ್ಣಪ್ಪ ಅವರಿಗೆ ಕರ್ನಾಟಕ ರಣಹದ್ದು ಸಂರಕ್ಷಣಾ ಟ್ರಸ್ಟ್ ದೂರು ನೀಡಿದೆ. ಹೊಂಚು ಹಾಕಿ ಸಂಚು ಮಾಡಿ ಹಿಡಿಯುವುದು ಎಂಬ ಪದ ಬಳಕೆ ಮಾಡಿದ್ದಾರೆ. ರಣಹದ್ದು ಕುರಿತು ಬಿಗ್ ಬಾಸ್ ಶೋನಲ್ಲಿ ನಟ ಕಿಚ್ಚ ಸುದೀಪ್ ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದಾರೆ. ಹಾಗಾಗಿ ಸರಿಯಾದ ಮಾಹಿತಿಯನ್ನು ವೀಕ್ಷಕರಿಗೆ ತಿಳಿಸುವಂತೆ ಆಗ್ರಹಿಸಿದ್ದಾರೆ.

Read More

ತುಮಕೂರು : ಇಂದಿನ ಮಕ್ಕಳ ಮನಸ್ಸು ಬಹಳ ಸೂಕ್ಷ್ಮ. ಸ್ವಲ್ಪ ಗದರಿದರೂ ಸಾಕು ಸಿಟ್ಟಿನಲ್ಲಿ ತಮ್ಮ ಜೀವಕ್ಕೆ ಆಪತ್ತು ತಂದುಕೊಳ್ಳುತ್ತಾರೆ. ಇದೀಗ ಶಾಲೆಗೆ ತಪ್ಪದೆ ಹೋಗು ಎಂದಿದ್ದಕ್ಕೆ ಬಾಲಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಗೊಲ್ಲರಹಟ್ಟಿಯಲ್ಲಿ ನಡೆದಿದೆ. ಬಾವಿಗೆ ಹಾರಿ 8ನೇ ತರಗತಿ ವಿದ್ಯಾರ್ಥಿ ಜಗದೀಶ್ (14) ಆತ್ಮಹತ್ಯೆ ಶರಣಾಗಿರುವ ಬಾಲಕ ಎಂದು ತಿಳಿದು ಬಂದಿದೆ.ಶಾಲೆಗೆ ತಪ್ಪದೆ ಹೋಗು ಎಂದು ಬುದ್ದಿವಾದ ಹೇಳಿದ್ದಕ್ಕೆ ಇದರಿಂದ ಬಾಲಕ ಮನನೊಂದು, ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಕುರಿತು ಚಿಕ್ಕನಾಯಕನಹಳ್ಳಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Read More

ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಕಾನೂನು ವಿವಿಯಲ್ಲಿ ಕೆಲಸ ಮಾಡುತ್ತಿದ್ದ ಇಂಜಿನಿಯರ್ ಒಬ್ಬರನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ ವಿಠಲ ರಾಠೋಡ್ (60) ಎನ್ನುವವರನ್ನು ಕೊಲೆ ಮಾಡಲಾಗಿದ್ದು ಹುಬ್ಬಳ್ಳಿಯ ನವನಗರ್ ಠಾಣೆ ಪೋಲಿಸರಿಂದ ಮೂವರನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳನ್ನು ಮೇಘವ್ ಆತನ ಪತ್ನಿ ವಿಮಲ ಹಾಗೂ ಭಗವಾನ್ ಎಂದು ತಿಳಿದುಬಂದಿದೆ ನಿರ್ಮಾಣ ಹಂತದ ಕಟ್ಟಡದ ಮೇಲಿನಿಂದ ತಳ್ಳಿ ವಿಠಲ ರಾಠೋಡ್ನನ್ನು ಮೂವರು ಕೊಲೆ ಮಾಡಿದ್ದಾರೆ. ಕಟ್ಟಡದ ಮೇಲಿನಿಂದ ಬಿದ್ದು ಸಾವನಪ್ಪಿದ್ದಾರೆ ಎಂದು ಆರೋಪಿಗಳು ಬಿಂಬಿಸಿದ್ದರು. ವಿಚಾರಣೆ ಮಾಡಿದಾಗ ಕೊಲೆ ಮಾಡಿರುವ ವಿಷಯ ಬೆಳಕಿಗೆ ಬಂದಿದೆ. ಹುಬ್ಬಳ್ಳಿಯ ನವನಗರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಪತ್ನಿಗೆ ಪೊಲೀಸ್ ಕಾನ್ಸ್ಟೇಬಲ್ ನಿಂದ ವರದಕ್ಷಿಣೆ ಕಿರುಕುಳ ಆರೋಪ ಕೇಳಿ ಬಂದಿದೆ ಚಿಟಗುಪ್ಪ ಮೂಲದ ಕಾನ್ಸ್ಟೇಬಲ್ ಮ ಕೇಂದ್ರ ವಿರುದ್ಧ ಈ ಒಂದು ಕಿರುಕುಳ ಆರೋಪ ಕೇಳಿ ಬಂದಿದೆ. ಬೀದರ ಜಿಲ್ಲೆಯ ಔರಾದ್ನಲ್ಲಿ ಮಚೇಂದ್ರ ಪತ್ನಿ ಸೀನಾ ಈ ಒಂದು ಆರೋಪ ಮಾಡಿದ್ದು ಬೆಂಗಳೂರಿನ ಮೈಕೋಲೇಔಟ್ ಟ್ರಾಫಿಕ್ ಠಾಣೆಯ ಪಿಸಿ ಆಗಿರುವ ಮಚೇಂದ್ರ ಮೃದ ಈ ಒಂದು ಆರೋಪ ಮಾಡಿದ್ದಾರೆ. ಮಕ್ಕಳು ಆಗಿಲ್ಲ ವರದಕ್ಷಿಣೆ ನೀಡುವಂತೆ ಕಿರುಕುಳ ನೀಡುತ್ತಿರುವ ಆರೋಪ ಕೇಳಿಬಂದಿದೆ. ಮಚೇಂದ್ರ ಮತ್ತು ಆತನ ಕುಟುಂಬದ ಸದಸ್ಯರ ವಿರುದ್ಧ ಆರೋಪ ಕೇಳಿಬಂದಿದೆ. ಮಾನಸಿಕ ಹಿಂಸೆ ನೀಡಿ ಜೀವ ಬಿದರಿಕೆ ಹಾಕಿದ್ದಾರೆ ವರದಕ್ಷಿಣೆ ಕೊಡದಿದ್ದರೆ ಅಕ್ಕನ ಮಗಳನ್ನು ಮದುವೆಯಾಗುವುದಾಗಿ ಬೆದರಿಕೆ ಹಾಕಿದ್ದಾರೆ ಈ ಬಗ್ಗೆ ಮೈಕೋ ಲೇಔಟ್ ಪೊಲೀಸ್ ಠಾಣೆಗೆ ದೂರು ನೀಡಿದರು ಯಾವುದೇ ಕ್ರಮ ಕೈಗೊಂಡಿಲ್ಲ. ಈ ಹಿಂದೆ ಔರಾದ್ ತಾಲೂಕಿನ ಚಿಂತಾಕಿ ಠಾಣೆಯಲ್ಲೂ ಕೂಡ ಎಫ್ಐಆರ್ ದಾಖಲಾಗಿತ್ತು. ಆದರೂ ಕೂಡ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ…

Read More

ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪವಿತ್ರ ಗೌಡ ಸೇರಿ ಹಲವು ಆರೋಪಿಗಳು ಮನೆ ಊಟ ಬೇಕು ಎಂದು ಅರ್ಜಿ ಸಲ್ಲಿಸಿದರು.ಇಂದು ಬೆಂಗಳೂರಿನ 57ನೇ ಸಿಸಿಹೆಚ್ ನ್ಯಾಯಾಲಯ ಈ ಒಂದು ಅರ್ಜಿಯ ವಿಚಾರಣೆ ನಡೆಸಿ ಪವಿತ್ರ ಗೌಡ, ನಾಗರಾಜ ಮತ್ತು ಲಕ್ಷ್ಮಣ್ಗೆ ವಾರಕ್ಕೊಮ್ಮೆ ಮನೆ ಊಟ ನೀಡಬೇಕು ಎಂದು ಆದೇಶ ಹೊರಡಿಸಿದೆ. ಮನೆ ಊಟಕ್ಕಾಗಿ ಪವಿತ್ರ ಗೌಡ ಸೇರಿದಂತೆ ಹಲವು ಆರೋಪಿಗಳು ಅರ್ಜಿ ಸಲ್ಲಿಸಿದ್ದರು. ಇಂದು 57ನೇ ಸಿಸಿಎಚ್ ನ್ಯಾಯಾಲಯ ವಿಚಾರ ನಡೆಸಿ ಈ ಒಂದು ಆದೇಶ ನೀಡಿದ್ದು ದಿನನಿತ್ಯ ಮನೆ ಊಟಕ್ಕೆ ಜೈಲು ಅಧಿಕಾರಿಗಳು ಆಕ್ಷೇಪ ವ್ಯಕ್ತಪಡಿಸಿದ್ದರು. ಈ ಹಿನ್ನಲೆಯಲ್ಲಿ ಆದೇಶವನ್ನು ಮಾರ್ಪಡಿಸಿದ್ದು ವಾರಕ್ಕೆ ಒಂದು ಬಾರಿ ಮನೆ ಊಟ ನೀಡಲು ಇದೀಗ ಮತ್ತೊಮ್ಮೆ ಆದೇಶ ಹೊರಡಿಸಿದೆ. ಈ ಮೂಲಕ ಪವಿತ್ರ ಗೌಡ ನಾಗರಾಜು ಮತ್ತು ಲಕ್ಷ್ಮಣ್ಗೆ ವಾರಕ್ಕೆ ಒಮ್ಮೆ ಮನೆ ಊಟ ಸಿಗುತ್ತದೆ.

Read More

ಬೆಂಗಳೂರು : ರಾಜ್ಯ ಕಾಂಗ್ರೆಸ್ ನಲ್ಲಿ ನಾಯಕತ್ವ ಬದಲಾವಣೆ ಗೊಂದಲದ ವಿಚಾರವಾಗಿ ಸಂಕ್ರಾಂತಿ ಮರುದಿನವೇ ಡಿಕೆ ಶಿವಕುಮಾರ್ ದೆಹಲಿ ಪ್ರಯಾಣ ಬೆಳೆಸಲಿದ್ದಾರೆ. ಜನವರಿ 16 ಹಾಗೂ ಜನವರಿ 22ರಂದು ಡಿಸಿಎಂ ಡಿಕೆ ಶಿವಕುಮಾರ್ ದೆಹಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಲು ಡಿಸಿಎಂ ಡಿಕೆ ಶಿವಕುಮಾರ್ ಇದೀಗ ಪ್ರಯತ್ನಿಸುತ್ತಿದ್ದಾರೆ.ಜನಮರಿ 16ರಂದು ರಾಹುಲ್ ಗಾಂಧಿ ಭೇಟಿ ಮಾಡಲು ಸಮಯ ಕೇಳಿದ್ದಾರೆ ಎಂದು ಹೇಳಲಾಗುತ್ತಿದೆ. ನಾಯಕತ್ವ ಬದಲಾವಣೆ ವಿಚಾರವಾಗಿ ಚರ್ಚಿಸುವ ಸಾಧ್ಯತೆ ಇದ್ದು ಅಸ್ಸಾಂ ವಿಧಾನಸಭಾ ಚುನಾವಣೆಗೆ ಸಂಬಂಧಪಟ್ಟಂತೆ ವೀಕ್ಷಕರ ಸಭೆಯ ಬಳಿಕ ರಾಹುಲ್ ಗಾಂಧಿ ಜೊತೆಗೆ ಡಿಕೆ ಶಿವಕುಮಾರ್ ಪ್ರತ್ಯೇಕವಾಗಿ ಚರ್ಚಿಸುವ ಸಾಧ್ಯತೆ ಇದೆ. ಇದೆ ಸಂದರ್ಭದಲ್ಲಿ ರಾಜ್ಯದಲ್ಲಿ ಆಗುತ್ತಿರುವ ಗೊಂದಲಗಳ ಕುರಿತಂತೆ ರಾಹುಲ್ ಗಾಂಧಿ ಅವರ ಜೊತೆಗೆ ಚರ್ಚಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಜನವರಿ 22ರಂದು ಕೂಡ ದೆಹಲಿಗೆ ಭೇಟಿ ನೀಡಲಿದ್ದಾರೆ. ತಿಂಗಳ ಅಂತ್ಯದ ವೇಳೆಗೆ ನಾಯಕತ್ವ ಗೊಂದಲಕ್ಕೆ ತೆರೆ ಬೀಳುವ ನಿರೀಕ್ಷೆ ಇದೆ. ನಾಯಕತ್ವ…

Read More

ಬೆಳಗಾವಿ : ಇತ್ತೀಚಿಗೆ ತಾನೇ ಬೆಳಗಾವಿ ಜಿಲ್ಲೆಯ ಬೈಲಹೊಂಗಲದಲ್ಲಿ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟದಿಂದ 7 ಜನ ಕಾರ್ಮಿಕರು ಸಾವನ್ನಪ್ಪಿದ್ದರು. ಇದೀಗ ಮತ್ತೊಂದು ದುರಂತ ಸಂಭವಿಸಿದ್ದು ಸಕ್ಕರೆ ಕಾರ್ಖಾನೆ, ಕೃಷಿ ಬೆಲ್ಟ್ ನಲ್ಲಿ ಸಿಲುಕಿ ಕಾರ್ಮಿಕ ಸಾವನ್ನಪ್ಪಿರುವ ಘಟನೆ ಹಿರಣ್ಯಕೇಶಿ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರದಲ್ಲಿ ಇರುವಂತಹ ಹಿರಣ್ಯಕೇಶಿ ಸಕ್ಕರೆ ಕಾರ್ಖಾನೆಯಲ್ಲಿ ಅಮೀನಾಭಾವಿ ಗ್ರಾಮದ ಕಾರ್ಮಿಕ ಸಚಿನ್ ದ್ಯಾಮಣ್ಣಿ (36) ಸಾವನ್ನಪ್ಪಿದ್ದಾರೆ ಕ್ರಶರ್ ನಲ್ಲಿ ಸುಣ್ಣ ಹಾಕುವಾಗ ಆಯತಪ್ಪಿ ಬಿದ್ದು ಸಚಿನ್ ಸಾವನ್ನಪ್ಪಿದ್ದರೆ. 10 ದಿನಗಳ ಹಿಂದೆ ದಿನಗೂಲಿ ಆಧಾರದ ಮೇಲೆ ಸಚಿನ್ ಕೆಲಸಕ್ಕೆ ಸೇರಿದ್ದರು. ಈ ಗುರುತು ಸಂಕೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More