Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಕಾಂಗ್ರೆಸ್ ಹಿರಿಯ ಶಾಸಕ ಎಚ್ ವೈ ಮೇಟಿ (79) ನಿಧನರಾಗಿದ್ದಾರೆ. ಬಾಗಲಕೋಟೆ ಕಾಂಗ್ರೆಸ್ ಶಾಸಕ ಎಚ್ ವೈ ಮೇಟಿ ನಿಧನರಾಗಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಹೆಚ್ ವೈ ಮೇಟಿ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಇಂದು ಚಿಕಿತ್ಸೆ ಫಲಕಾರಿಯಾಗದೆ ಅವರು ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬೆಂಗಳೂರಿನ ಕಾಸಿಗೆ ಆಸ್ಪತ್ರೆಯಲ್ಲಿ ಎಚ್ ವೈ ಮೇಟಿ ದಾಖಲಾಗಿದ್ದರು, ಚಿಕಿತ್ಸೆಫಲಕಾರಿಯಾಗದೆ ಶಾಸಕ ಎಚ್ ವೈ ಮೇಟಿ ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ ಸಿಎಂ ಸಿದ್ದರಾಮಯ್ಯ ಅವರು ಕೂಡ ಶಾಸಕ ಎಚ್ ವೈ ಮೇಟಿ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದರು. ರಾಜಕೀಯದಲ್ಲಿ ನಡೆದುಬಂದ ಹಾದಿ ಹುಲ್ಲಪ್ಪ ಯಮನಪ್ಪ ಮೇಟಿ ಒಬ್ಬ ಭಾರತೀಯ ರಾಜಕಾರಣಿ. ಅವರು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಸದಸ್ಯರು , 14 ನೇ ಕರ್ನಾಟಕ ವಿಧಾನಸಭೆಯ ಸದಸ್ಯರು ಮತ್ತು ಸಿದ್ದರಾಮಯ್ಯ ಸಂಪುಟದಲ್ಲಿ ಮಾಜಿ ಸಚಿವರು . 2013 ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ , ಮೇಟಿ ಬಾಗಲಕೋಟೆ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾದರು, 2018…
ಹಾಸನ : ಹಾಸನದಲ್ಲಿ ಕ್ಷುಲ್ಲಕ ಕಾರಣಕ್ಕೆ ಯುವಕನ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ. ಹಾಸನ ಹೊರವಲಯದ ಗೆಂಡೆಕಟ್ಟೆ ಅರಣ್ಯದಲ್ಲಿ ಈ ಒಂದು ಘಟನೆ ನಡೆದಿದ್ದು, ಬಟ್ಟೆ ಬಿಚ್ಚಿ ಭರತ ಎನ್ನುವ ಯುವಕನ ಮೇಲೆ ಯುವಕರ ಗುಂಪು ಹಲ್ಲೆ ಮಾಡಿದೆ. ಈ ಒಂದು ಘಟನೆಗೆ ಯುವತಿ ಹಾಗು ಹಣದ ವಿಚಾರಕ್ಕೆ ಈ ಒಂದು ಗ್ಯಾಂಗ್ ಹಲ್ಲೆ ನಡೆಸಿರುವ ಅನುಮಾನ ವ್ಯಕ್ತವಾಗಿದೆ. ಯುವಕ ಭರತ್ ಎಷ್ಟೇ ಬೇಡಿಕೊಂಡರೂ ಕೂಡ ಕಿಡಿಗೇಡಿಗಳು ಆತನ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ. ಘಟನೆ ಕುರಿತಂತೆ ಬಡಾವಣೆ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ
ಬೆಂಗಳೂರು : ನಟ ದರ್ಶನ್ ಮತ್ತು ಗ್ಯಾಂಗ್ನಿಂದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈ ಹಿಂದೆ ನಟ ದರ್ಶನ್ ಪವಿತ್ರಾಗೌಡ ಸೇರಿದಂತೆ ಎಲ್ಲಾ ಆರೋಪಿಗಳ ಜಾಮೀನು ಸುಪ್ರೀಂಕೋರ್ಟ್ ರದ್ದು ಮಾಡಿತ್ತು. ಇದೀಗ ಪವಿತ್ರ ಗೌಡ ಮರು ಪರಿಶೀಲನ ಕೋರಿ ಮತ್ತೊಂದು ಅರ್ಜಿ ಸಲ್ಲಿಸಿದ್ದಾರೆ. ಹೌದು ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ಪವಿತ್ರ ಗೌಡ ಸೇರಿದಂತೆ ಎಲ್ಲಾ ಆರೋಪಿಗಳ ಜಮೀನು ರದ್ದು ಮಾಡಿತ್ತು. ಇದೀಗ ಮರು ಪರಿಶೀಲನೆ ಕೋರಿ ಪವಿತ್ರ ಗೌಡ ಮತ್ತೊಂದು ಅರ್ಜಿ ಸಲ್ಲಿಸಿದ್ದು ಜಾಮೀನು ಮಂಜೂರು ಮಾಡುವಂತೆ ಕೋರಿ ಪವಿತ್ರ ಗೌಡ ಅರ್ಜಿ ಸಲ್ಲಿಸಿದ್ದಾರೆ. ಸುಪ್ರೀಂ ಕೋರ್ಟ್ ನಲ್ಲಿ ನವೆಂಬರ್ 6 ರಂದು ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ಇನ್ನು ಪವಿತ್ರ ಗೌಡ ಪುನರ್ ಪರಿಶೀಲನೆ ಅರ್ಜಿ ಸಲ್ಲಿಸಿದ್ದಾರೆ ಎಂದು ಸರ್ಕಾರದ ಪರ ವಕೀಲ ಅನಿಲ್ ನಿಶಾನಿ ಪ್ರತಿಕ್ರಿಯೆ ನೀಡಿದ್ದಾರೆ. ಗುರುವಾರ ದ್ವಿಸದಸ್ಯ ಪೀಠದಲ್ಲಿ ಅರ್ಜಿಯ ವಿಚಾರಣೆ ನಡೆಯಲಿದೆ. ಪುನರ್ ಪರಿಶೀಲನ ಅರ್ಜಿ ಪ್ರತಿಯನ್ನು ನಮಗೆ ನೀಡಿಲ್ಲ…
ಬೆಂಗಳೂರು : ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸೋ ಘಟನೆ ನಡೆದಿದ್ದು, ರಸ್ತೆಯಲ್ಲಿ ಹೋಗುತ್ತಿದ್ದ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ. ಮಹಿಳೆಗೆ ಖಾಸಗಿ ಅಂಗ ತೋರಿಸಿ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿದೆ. ಬೆಂಗಳೂರಿನ ಇಂದಿರಾನಗರದಲ್ಲಿ ಈ ಒಂದು ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಯುವತಿಯ ದೂರಿನ ಅನ್ವಯ ಅಪರಿಚಿತನ ವಿರುದ್ಧ ಇದೀಗ ಅಪರಿಚಿತ ವ್ಯಕ್ತಿಯ ವಿರುದ್ಧ ಎಫ್ಐಆರ್ ದಾಖಲಾಗಿದೆ.ಸದ್ಯ ಆರೋಪಿಗಾಗಿ ಇಂದಿರಾನಗರ ಠಾಣೆ ಪೊಲೀಸ್ರು ಇದೀಗ ತೀವ್ರ ಹುಡುಕಾಟ ನಡೆಸುತ್ತಿದ್ದಾರೆ.
BREAKING : ಬೆಂಗಳೂರಲ್ಲಿ ಭೀಕರ ಅಪಘಾತ : ಕೆಟ್ಟು ನಿಂತ ಕಾರಿಗೆ, ಕ್ಯಾಂಟರ್ ಡಿಕ್ಕಿಯಾಗಿ ಡ್ಯಾನ್ಸರ್ ಸುಧೀಂದ್ರ ಸಾವು!
ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಭೀಕರವಾದ ಅಪಘಾತ ಸಂಭವಿಸಿದ್ದು, ಕೆಟ್ಟು ನಿಂತಿದ್ದ ಕಾರಿಗೆ ಕ್ಯಾಂಟರ್ ಡಿಕ್ಕಿಯಾಗಿ ಡ್ಯಾನ್ಸರ್ ಸುಧೀಂದ್ರ ಸಾವನಪ್ಪಿದ್ದಾರೆ. ರಸ್ತೆಯ ಮಧ್ಯೆ ಡ್ಯಾನ್ಸರ್ ಸುಧೀಂದ್ರ ಅವರ ಕಾರು ಕೆಟ್ಟು ನಿಂತಿತು. ಕಾರು ಪರಿಶೀಲನೆಯ ವೇಳೆ ವೇಗವಾಗಿ ಬಂದಂತಹ ಕ್ಯಾಂಟರ್ ಡಿಕ್ಕಿ ಹೊಡೆದಿದೆ. ನೆಲಮಂಗಲ ತಾಲೂಕಿನ ಪೇಮ್ಮನಹಳ್ಳಿ ಬಳಿ ಈ ಒಂದು ದುರ್ಘಟನೆ ಸಂಭವಿಸಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಪೆಮ್ಮನಹಳ್ಳಿ ಗ್ರಾಮದಲ್ಲಿ ಕ್ಯಾಂಟರ್ ಗುದ್ದಿದ ರಬಸಕ್ಕೆ ಸ್ಥಳದಲ್ಲೇ ಡ್ಯಾನ್ಸರ ಸುಧೀಂದ್ರ ಸಾವನಪ್ಪಿದ್ದಾರೆ.ಮೃತ ಸುಧೀಂದ್ರ ವಿವಿಧ ರಿಯಾಲಿಟಿ ಶೋಗಳಲ್ಲಿ ಭಾಗಿಯಾಗಿದ್ದರು.ಅಪಘಾತದ ಕುರಿತು ದಾಬಸ್ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಡ್ಯ : ಮಂಡ್ಯದಲ್ಲಿ ಘೋರವಾದ ದುರಂತ ಒಂದು ಸಂಭವಿಸಿದ್ದು, ಜಮೀನಿನಲ್ಲಿ ವಿದ್ಯುತ್ ಪ್ರವಹಿಸಿ ರೈತ ಸಾವನಪ್ಪಿದ್ದಾನೆ. ಸಾಗ್ಯ ಗ್ರಾಮದಲ್ಲಿ ರೈತರ (38) ದುರ್ಮರಣ ಹೊಂದಿದ್ದಾರೆ. ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಸಾಗ್ಯ ಗ್ರಾಮದಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ. ಜಮೀನುನಲ್ಲಿ ವಿದ್ಯುತ್ ತಂತಿಗೆ ತೆಂಗಿನ ಗರಿಗಳು ತಾಗಿವೆ. ತೆಂಗಿನ ಗರಿಗಳನ್ನು ಜಮೀನಿನಿಂದ ಹೊರ ಹಾಕುವಾಗ ಈ ಒಂದು ದುರಂತ ಸಂಭವಿಸಿದೆ. ಘಟನೆ ಕುರಿತಂತೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಬೆಂಗಳೂರಿನಲ್ಲಿ ಸೀರಿಯಲ್ ನಟಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿದ್ದು ಫೇಸ್ಬುಕ್ನಲ್ಲಿ ಗುಪ್ತಂಗದ ವಿಡಿಯೋ ಕಳುಹಿಸಿ ಕಾಮುಕನೊಬ್ಬ ಟಾರ್ಚರ್ ಕೊಡುತ್ತಿದ್ದ. ಕಾಮುಕನ ಕಿರುಕುಳಕ್ಕೆ ಬೇಸತ್ತು ಸಿರಿಯಲ್ ನಟಿ ಬೆಂಗಳೂರಿನ ಅನ್ನಪೂರ್ಣೇಶ್ವರಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ ದೂರಿನ ಅನ್ವಯ ಕೇರಳ ಮೂಲದ ನವೀನ್ ಎನ್ನುವ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಕನ್ನಡ ತೆಲುಗು ಧಾರಾವಾಹಿಗಳಲ್ಲಿ ಕಿರುತೆರೆ ನಟಿ ನಟಿಸುತ್ತಿದ್ದು, ಮೂರು ತಿಂಗಳಿನಿಂದ ನಟಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಫೇಸ್ಬುಕ್ ನಲ್ಲಿ ಫ್ರೆಂಡ್ ರಿಕ್ವೆಸ್ಟ್ ಕಳುಹಿಸುತ್ತಾನೆ. ಆದರೆ ರಿಕ್ವೆಸ್ಟ್ ಅನ್ನು ನಟಿ ಸ್ವೀಕರಿಸಲ್ಲ ಬಳಿಕ ಮೆಸೆಂಜರ್ ನಲ್ಲಿ ಮೆಸೇಜ್ ಹಾಕುತ್ತಾನೆ ಕಾಟ ಹೆಚ್ಚಾಗುತ್ತಿದ್ದಂತೆ ಆತನನ್ನ ನಟಿ ಬ್ಲಾಕ್ ಮಾಡಿದ್ದಾಳೆ. ಆದರೂ ಸಹ ಬೇರೆ ಐಡಿಯಿಂದ ಅಶ್ಲೀಲ ಫೋಟೋ ಕಳುಹಿಸಿ ವಿಕೃತಿ ಮೇರಿದಿದ್ದಾನೆ. ಕಿರುಕುಳ ನೀಡಿದ ಆರೋಪಿಗೆ ನಟಿ ಬುದ್ಧಿವಾದ ಹೇಳಿದ್ದಾಳೆ. ಆರೋಪಿಯನ್ನು ಭೇಟಿಯಾಗಿ ನಟಿ ಬುದ್ದಿವಾದ ಹೇಳಿದ್ದಾಳೆ. ಆದರೂ ಬುದ್ಧಿ ಕಲಿಯದ ಆಸಾಮಿ ಮತ್ತೆ ಕಿರುಕುಳ ನೀಡಲು ಆರಂಭಿಸಿದ್ದಾನೆ.…
ಬಾಗಲಕೋಟೆ : ಬಾಗಲಕೋಟೆಯಲ್ಲಿ ಸಾವಿನಲ್ಲು ದಂಪತಿಗಳು ಒಂದಾಗಿರುವ ಘಟನೆ ವರದಿಯಾಗಿದೆ. ಹೃದಯಾಘಾತದಿಂದ ಆಸ್ಪತ್ರೆಯಲ್ಲಿ ಶಶಿಧರ್ ಪತ್ತಾರ್ (40) ಸಾವನ್ನಪ್ಪಿದ್ದಾರೆ. ಪತಿಯ ಸಾವಿನ ಸುದ್ದಿ ತಿಳಿದು ಶಶಿಧರ್ ಅವರ ಪತ್ನಿ ಸರೋಜಾ ಅವರು ಕೂಡ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಬಾಗಲಕೋಟೆ ಜಿಲ್ಲೆಯ ಬಿಳಗಿಯ ನಿವಾಸಿ ಆಗಿರುವ ಇವರು ಸಾವಿನಲ್ಲೂ ಕೂಡ ಒಂದಾಗಿದ್ದಾರೆ. ಕಳೆದ 15 ವರ್ಷಗಳ ಹಿಂದೆ ಇಬ್ಬರ ಮದುವೆ ಆಗಿತ್ತು.
ಬಾಗಲಕೋಟೆ : ಆನ್ಲೈನ್ ಟ್ರೇಡಿಂಗ್ ಆಪ್ ಗಳು ಮುಗ್ಧ ಜನರನ್ನು ಆಕ್ರಮಿಸಿ ವಂಚನೆ ಎಸಗುತ್ತವೆ. ಈ ರೀತಿ ಅದೆಷ್ಟೋ ಉದಾಹರಣೆಗಳು ನಮ್ಮ ಕಣ್ಣ ಮುಂದೆವೆ ಆದರೂ ಕೂಡ ಕೆಲವರು ತಿಳಿದು ಆನ್ಲೈನ್ ನಲ್ಲಿ ಲಕ್ಷಾಂತರ ಮತ್ತು ಕೋಟ್ಯಾಂತರ ಹಣ ಹೂಡಿಕೆ ಮಾಡಿ ಮೋಸ ಹೋಗುತ್ತಿದ್ದಾರೆ ಇದೀಗ ಬಾಗಲಕೋಟೆಯಲ್ಲಿ ಸೈಬರ್ವಂಚಕರು ವ್ಯಾಪಾರಿ ಒಬ್ಬರಿಗೆ ಒಂದು ಕೋಟಿ ರೂಪಾಯಿಗೂ ಹೆಚ್ಚು ವಂಚನೆ ಎಸಗಿದ್ದಾರೆ. ಹೌದು ಆನ್ಲೈನ್ ಹೂಡಿಕೆ ವಂಚನೆ ಜಾಲಕ್ಕೆ ಸಿಲುಕಿದ ವ್ಯಾಪಾರಿಯೊಬ್ಬರು ಬರೋಬ್ಬರಿ 1.09 ಕೋಟಿ ರೂ. ಕಳೆದುಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಆಸ್ತಾ ಟ್ರೇಡ್ 903 ಸ್ಟ್ರಾಟಜಿ ಹಬ್ ಎಂಬ ಹೆಸರಿನ ನಕಲಿ ಆನ್ಲೈನ್ ಗ್ರೂಪ್ ಮೂಲಕ ಅಂತಾರಾಜ್ಯ ಆನಲೈನ್ ಖದೀಮರು ವ್ಯಾಪಾರಿಯ ವಿಶ್ವಾಸ ಗಳಿಸಿದ್ದಾರೆ. ಆಮೇಲೆ, ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ನೀಡುತ್ತೇವೆ ಎಂಬ ಆಮಿಷವೊಡ್ಡಿ ಹೆಸರಿನಲ್ಲಿ ಹಣ ಎಗರಿಸಿದ್ದಾರೆ. ಆಗಸ್ಟ್ 12 ರಂದು ನಕಲಿ ಇನ್ವೆಸ್ಟ್ಮೆಂಟ್ ಮಾರ್ಕೆಟ್ ಮೂಲಕ ಬಾಗಲಕೋಟೆ ಮೂಲದ ವ್ಯಾಪಾರಿಗೆ ಗಾಳ ಹಾಕಿದ್ದ ಆನ್ಲೈನ್ ವಂಚಕರು,…
ಬೆಂಗಳೂರು : ಗ್ರಾಮ ಪಂಚಾಯತಿ ಸದಸ್ಯನ ಮೇಲೆ ಫೈರಿಂಗ್ ಮಾಡಿದ್ದ ನಾಲ್ವರು ಆರೋಪಿಗಳನ್ನು ಇದೀಗ ನೆಲಮಂಗಲ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ನಗರದಲ್ಲಿ ಸಿನಿಮಾ ಸ್ಟೈಲ್ ನಲ್ಲಿ ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಸಲೀಂ ಕೊಲೆಗೆ ನಟೋರಿಯಸ್ ಗಳು ಬಿಗ್ ಸ್ಕೆಚ್ ಹಾಕಿದ್ದರು.ಮುಬಾರಕ್ ಶಾಧಿಕ್ ಹಾಗೂ ಆಸಿಫ್ ನರಸಿಂಹ ಬಂಧಿತ ಆರೋಪಿಗಳಾಗಿದ್ದು, ಇಬ್ಬರನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಇಸ್ಲಾಂಪುರದಲ್ಲಿ ಸಲೀಂ ಮೇಲೆ ಬಂಧಿತರು ಫೈರಿಂಗ್ ನಡೆಸಿದ್ದರು.














