Subscribe to Updates
Get the latest creative news from FooBar about art, design and business.
Author: kannadanewsnow05
ಕೊಪ್ಪಳ, ಅಕ್ಟೋಬರ್ 6 : ಜನರ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯಲ್ಲಿ ಯಾವ ಜಾತಿಯವರನ್ನು ತುಳಿಯುವ ಪ್ರಶ್ನೆಯಿಲ್ಲ. ಸಮಸಮಾಜವನ್ನು ಬಯಸದವರು ಸಮೀಕ್ಷೆಯನ್ನು ವಿರೋಧಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕೊಪ್ಪಳದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮೇಲ್ಜಾತಿಗಳನ್ನು ತುಳಿಯಲು ಸಮೀಕ್ಷೆ ನಡೆಸಲಾಗುತ್ತಿದೆ ಎಂಬ ಕೇಂದ್ರ ಸಚಿವ ಸೋಮಣ್ಣ ಆರೋಪಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಜನರ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯನ್ನು ನಡೆಸದಿದ್ದರೆ, ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ. ಈ ಸಮೀಕ್ಷೆಯಲ್ಲಿ ಯಾವ ಜಾತಿಯವರನ್ನು ತುಳಿಯುವ ಪ್ರಶ್ನೆಯಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಸಮಸಮಾಜ ನಿರ್ಮಾಣವನ್ನು ವಿರೋಧಿಸುವವರು ಇಂತಹ ಹೇಳಿಕೆಗಳನ್ನು ನೀಡುವ ಮೂಲಕ ಜನರ ದಾರಿ ತಪ್ಪಿಸುತ್ತಿದ್ದಾರೆ. ಈಗಾಗಲೇ 1.10 ಕೋಟಿ ಕುಟುಂಬಗಳ ಸಮೀಕ್ಷಾ ಕಾರ್ಯ ಮುಗಿದಿದ್ದು, ನಿನ್ನೆವರೆಗೆ ಶೇ.63 ರಷ್ಟು ಸರ್ವೇ ಕಾರ್ಯ ಪ್ರಗತಿಯಾಗಿದೆ. ನಾಳೆ ಸಂಜೆವರೆಗೆ ಸಮೀಕ್ಷೆಯ ಪ್ರಗತಿಯನ್ನು ಪರಿಶೀಲಿಸಿ, ಸಮೀಕ್ಷೆ ಅವಧಿ ವಿಸ್ತರಣೆ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.…
ಕೊಪ್ಪಳ : ಬಿಜೆಪಿ ಒಂದೆ ಒಂದು ಮನೆ ಕೊಟ್ಟಿದ್ರೆ ರಾಜೀನಾಮೆ ಕೊಡುತ್ತೇನೆ ಎಂದು ಕೊಪ್ಪಳದಲ್ಲಿ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಸವಾಲು ಹಾಕಿದ್ದಾರೆ. ಧಮ್ಮು, ತಾಕತ್ತು ಬಗ್ಗೆ ವಿಪಕ್ಷ ನಾಯಕ ಆರ್ ಅಶೋಕ್ ಮಾತನಾಡುತ್ತಾರೆ. ನಾನು ಬಿಜೆಪಿ ನಾಯಕರಿಗೆ ಓಪನ್ ಚಾಲೆಂಜ್ ಹಾಕುತ್ತೇನೆ ಒಂದೇ ಒಂದು ಮನೆ ಕೊಟ್ಟಿದ್ದು ಸಾಬೀತು ಮಾಡಿದರೆ ಕೂಡಲೇ ರಾಜೀನಾಮೆ ನೀಡುತ್ತೇನೆ. ಇಂದು ಸಂಜೆ ರಾಜ್ಯಪಾಲರಿಗೆ ರಾಜೀನಾಮೆ ಕೊಡುತ್ತೇನೆ ಎಂದು ಸವಾಲು ಹಾಕಿದರು. ಕೊಪ್ಪಳದಲ್ಲಿ ವಿವಿಧ ಕಾರ್ಯಕ್ರಮಗಳಿಗೆ ಶಂಕು ಸ್ಥಾಪನೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ಜಮೀರ್ ಅಹ್ಮದ್ ಖಾನ್, ಬಿಜೆಪಿಯವರದು ಬರೀ ಸುಳ್ಳು. ಈ ಹಿಂದೆ ಹೆಗಡೆ ಸಂವಿಧಾನ ಬದಲಾವಣೆ ಮಾಡುತ್ತೇನೆ ಅಂದಿದ್ದರು. ಅಂಬೇಡ್ಕರ್ ಸಂವಿಧಾನ ಕೊಟ್ಟಿದ್ದಕ್ಕೆ ನಾವು ಇಲ್ಲಿ ಕುಳಿತಿದ್ದೇವೆ. ಸಿಎಂ ಸಿದ್ದರಾಮಯ್ಯ ಎಲ್ಲಾ ಗ್ಯಾರಂಟಿಗಳನ್ನು ಜಾರಿ ಮಾಡಿದ್ದಾರೆ ಎಂದರು.
ಬೆಂಗಳೂರು : ದೇಶದ ಬೇರೆ ರಾಜ್ಯಗಳಲ್ಲಿ ಕಾಫ್ ಸಿರಫ್ ದುರಂತ ಸಂಭವಿಸಿದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕಟ್ಟೆಚ್ಚರ ವಹಿಸಲಾದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಹಾಸನದ ಚೆನ್ನರಾಯಪಟ್ಟಣದಲ್ಲಿ ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಚಿವರು, ಕಳಪೆ ಕಾಫ್ ಸಿರಫ್ ಕರ್ನಾಟಕ ರಾಜ್ಯದಲ್ಲಿ ಸರಬರಾಜು ಆಗಿಲ್ಲ ಎಂದು ಸ್ಪಷ್ಟಪಡಿಸಿದರು. ಮುನ್ನೆಚ್ವರಿಕೆ ಕ್ರಮವಾಗಿ ಎಲ್ಲಾ ಕಂಪನಿಗಳ ಕಾಫ್ ಸಿರಫ್ಗಳ ಮಾದರಿ ಸಂಗ್ರಹಿಸಿ ತಪಾಸಣೆಗೆ ಒಳಪಡಿಸಲಾಗುತ್ತಿದೆ. ರಾಜ್ಯದಲ್ಲಿಯ ಕಾಫ್ ಸಿರಫ್ಗಳ ಟೆಸ್ಟ್ಗೆ ಇಲಾಖೆ ಮುಂಜಾಗ್ರತ ಕ್ರಮ ಕೈಗೊಂಡಿದೆ. ರಾಜ್ಯದಲ್ಲಿ ಈ ಮೊದಲಿನಿಂದಲು ಔಷಧಿ ನಿಯಂತ್ರಣ ಇಲಾಖೆ ಎಚ್ಚರಿಕೆ ವಹಿಸಿದೆ. ಹೆಚ್ಚಿನ ಔಷಧಿಗಳನ್ನು ತಪಾಸಣೆಗೆ ಒಳಪಡಿಸುತ್ತಿದ್ದು, ಇದರಲ್ಲಿ ಕರ್ನಾಟಕ ದೇಶದಲ್ಲೇ ಮುಂಚೂಣಿಯಲ್ಲಿದೆ ಎಂದು ತಿಳಿಸಿದರು. ರಾಜ್ಯ ಆರೋಗ್ಯ ಇಲಾಖೆಯಿಂದ ಕಾಫ್ ಸಿರಫ್ ಬಳಕೆ ಬಗ್ಗೆ ಮಾರ್ಗಸೂಚಿ ಬಿಡುಗಡೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಈಗಾಗಲೇ ಬೇರೆ ಬೇರೆ ಕಂಪನಿಗಳ ಎಲ್ಲಾ ಕಾಫ್ ಸಿರಫ್ಗಳ ಮಾದರಿ ಸಂಗ್ರಹಿಸಿ ತಪಾಸಣೆ ನಡೆಸಲಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಕರ್ನಾಟಕದಲ್ಲಿ…
ಬೆಂಗಳೂರು : ಕೋಲಾರದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಟಿಟಿ ವಾಹನ ಡಿಕ್ಕಿಯಾಗಿ ಬೈಕ್ ನಲ್ಲಿ ತೆರಳುತ್ತಿದ್ದ ದಂಪತಿಗಳು ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಸುಣ್ಣಕಲ್ಲು ಕ್ರಾಸ್ ಬಳಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ರಾಮಾಂಜಲು (36) ಹಾಗೂ ಕಲಾವತಿ (27) ಮೃತ ದಂಪತಿಗಳು ಎಂದು ತಿಳಿದುಬಂದಿದೆ. ಮೃತರು ಆಂಧ್ರಪ್ರದೇಶದ ಅನ್ನಮಯ್ಯ ಜಿಲ್ಲೆಯ ಯರಂವಾರಪಲ್ಲಿ ನಿವಾಸಿಗಳು ಎಂದು ತಿಳಿದುಬಂದಿದೆ. ಸ್ವಗ್ರಾಮದಿಂದ ಬೆಂಗಳೂರಿಗೆ ಕೆಲಸಕ್ಕೆ ತೆರಳುವ ವೇಳೆ ಅಪಘಾತ ಸಂಭವಿಸಿದೆ. ರಾಯಲ್ಪಾಡು ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.
ಬೆಂಗಳೂರು : ಕಳೆದ ಕೆಲವು ದಿನಗಳಿಂದ ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಮಕ್ಕಳ ಸರಣಿ ಸಾವಿಗೆ ಕೆಮ್ಮಿನ ಸಿರಪ್ ಕಾರಣ ಎಂಬ ಶಂಕೆ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಕರ್ನಾಟಕ ಸರ್ಕಾರವು, ಶ್ರೀಸನ್ ಫಾರ್ಮಾ ಮತ್ತು ಕೇಸನ್ಸ್ ಫಾರ್ಮಾ ಪೂರೈಸುವ ಕೆಮ್ಮಿನ ಸಿರಪ್ಗಳ ಮಾರಾಟ ಮತ್ತು ಖರೀದಿಯನ್ನು ರಾಜ್ಯದಲ್ಲಿ ನಿಷೇಧಿಸಿದೆ. ಹೌದು ರಾಜ್ಯ ಪರವಾನಗಿ ಪ್ರಾಧಿಕಾರ ಮತ್ತು ಹೆಚ್ಚುವರಿ ಡ್ರಗ್ಸ್ ಕಂಟ್ರೋಲರ್ ಅವರು ಈ ಬಗ್ಗೆ ಸುತ್ತೋಲೆಯನ್ನು ಹೊರಡಿಸಿದ್ದಾರೆ. ತಮಿಳುನಾಡಿನ ಕಾಂಚೀಪುರಂ ಮೂಲದ ಶ್ರೀಸನ್ ಫಾರ್ಮಾ ತಯಾರಿಸಿದ ‘ಕೋಲ್ಡ್ರಿಫ್ ಸಿರಪ್’ ಮತ್ತು ಜೈಪುರದ ಕೇಸನ್ಸ್ ಫಾರ್ಮಾ ತಯಾರಿಸಿದ ‘ಡೆಕ್ಸ್ಟ್ರೋಮೆಥೋರ್ಫಾನ್ ಹೈಡ್ರೋಬ್ರೋಮೈಡ್ ಸಿರಪ್’ಗಳ ಮಾರಾಟ ಮತ್ತು ಖರೀದಿಯನ್ನು ಕರ್ನಾಟಕದಲ್ಲಿ ನಿಷೇಧಿಸಲಾಗಿದೆ. ಈ ಸಿರಪ್ಗಳು ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಮಕ್ಕಳ ಸಾವಿಗೆ ಕಾರಣವಾಗಿರುವ ಶಂಕೆಯನ್ನು ವ್ಯಕ್ತಪಡಿಸಲಾಗಿದೆ. ಈ ವಿಚಾರವಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು, ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಸಾವಿಗೆ ಕಾರಣವಾದ ಕೆಮ್ಮಿನ ಸಿರಪ್ಗಳು ರಾಜ್ಯಕ್ಕೆ ಸರಬರಾಜಾಗಿಲ್ಲದಿದ್ದರೂ, ಮುನ್ನೆಚ್ಚರಿಕಾ ಕ್ರಮವಾಗಿ ಎಲ್ಲಾ ಕೆಮ್ಮಿನ ಸಿರಪ್ಗಳ ಮಾದರಿಗಳನ್ನು ಪರೀಕ್ಷಿಸುವಂತೆ…
ಬೆಂಗಳೂರು : ಬೆಂಗಳೂರಿನಲ್ಲಿ ನೇಣು ಬಿಗಿದುಕೊಂಡು ಗೃಹಿಣಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವರದಿಯಾಗಿದೆ. ರಕ್ಷಿತಾ (26) L ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ ಎಂದು ತಿಳಿದು ಬಂದಿದ್ದು, 4 ವರ್ಷದ ಹಿಂದೆ ರವಿಶ್ ಎನ್ನುವ ವ್ಯಕ್ತಿಯ ಜೊತೆ ರಕ್ಷಿತಾ ಮದುವೆಯಾಗಿದ್ದರು. ಲಗ್ಗೆರೆಯ ಮುನೇಶ್ವರ ಬಳಿ ಈ ಒಂದು ಕುಟುಂಬ ವಾಸವಾಗಿತ್ತು. ಮೂರು ವರ್ಷದಿಂದ ರವೀಶ್ ಪತ್ನಿಯ ಜೊತೆಗೆ ಗಲಾಟೆ ಮಾಡುತ್ತಿದ್ದ. ಅಲ್ಲದೇ ರವೀಶ್ ಸಹೋದರ ಲೋಕೇಶ್ ರಕ್ಷಿತಾ ಜೊತೆ ಗಲಾಟೆ ಮಾಡಿದ್ದಾರೆ. ಮನೆಯಲ್ಲೇ ಸಹೋದರ ಲೋಕೇಶ್ ವಾಸವಾಗಿದ್ದ. ಗಲಾಟೆಯಿಂದ ಮನನೊಂದು ರಕ್ಷಿತಾ ಮನೆಯಲ್ಲಿಯೇ ಆತ್ಮಹತ್ಯೆ ಶರಣಾಗಿದ್ದಾರೆ. ಧನಲಕ್ಷ್ಮಿ ಬ್ಯಾಂಕ್ ಮ್ಯಾನೇಜರ್ ಆಗಿರುವ ಮೃತಳ ಪತಿ ರವೀಶ್, ಗಂಡ ರವಿಶನೇ ಕೊಲೆ ಮಾಡಿರುವ ಆರೋಪ ಕೇಳಿ ಬಂದಿದೆ. ರಕ್ಷಿತಾ ಸಂಬಂಧಿಕರು ಇದೀಗ ರವೀಶ್ ಮೇಲೆ ಅನುಮಾನ ವ್ಯಕ್ತಪಡಿಸುತ್ತಿದ್ದಾರೆ. ಮೂರು ವರ್ಷದ ಮಗಳ ಮೇಲು ಕೂಡ ಹಲ್ಲೆ ಮಾಡಿರುವ ಆರೋಪ ಕೇಳಿ ಬಂದಿದೆ.ಸದ್ಯ ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಬೆಂಗಳೂರು : ಬೆಂಗಳೂರಿನಲ್ಲಿ ಗುಂಡು ತಾಕಿ ವ್ಯಕ್ತಿ ನಿಗೂಢವಾಗಿ ಸಾವನಪ್ಪಿದ್ದಾನೆ ಕಾವಲ್ ಬೈರಸಂದ್ರದ ಮೆಡಿಕಲ್ ಕಾಲೇಜು ಬಳಿ ಈ ಒಂದು ಘಟನೆ ಸಂಭವಿಸಿದೆ. ಸೆಕ್ಯೂರಿಟಿ ಗಾರ್ಡ್ ಲಖನ್ ವಿಶ್ವಕರ್ಮ ಎಂದು ತಿಳಿದು ಬಂದಿದೆ. ಆಸ್ಪತ್ರೆಯಲ್ಲಿ ವಿಶ್ವಕರ್ಮ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ ರಾತ್ರಿ ಕ್ವಾರ್ಟರ್ಸ್ ನಲ್ಲಿ ಸೆಕ್ಯೂರಿಟಿ ಸಿಬ್ಬಂದಿ ಸಾವನಪ್ಪಿದ್ದಾನೆ. ಡಬಲ್ ಬ್ಯಾರಲ್ ಗನ್ ಇಂದ ಫೈರಿಂಗ್ ಆಗಿ ಮೃತಪಟ್ಟಿದ್ದಾನೆ. ಡಿಜೆ ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೊಪ್ಪಳ : ಉಳಿದ ಅವಧಿಗೂ ಸಿದ್ದರಾಮಯ್ಯನವರೇ ಸಿಎಂ ಆಗಿ ಇರುತ್ತಾರೆ ಅಂದರೆ ಮುಂದಿನ 2 ವರ್ಷ 8 ತಿಂಗಳು ಸಹ ಸಿಎಂ ಸ್ಥಾನದಲ್ಲಿ ಸಿದ್ದರಾಮಯ್ಯ ಅವರೇ ಇರಲಿದ್ದಾರೆ ಎಂದು ಕೊಪ್ಪಳದಲ್ಲಿ ಮುಖ್ಯಮಂತ್ರಿ ಆರ್ಥಿಕ ಸಲಹೆಗಾರ ಹಾಗೂ ಶಾಸಕರಾದ ಬಸವರಾಜ್ ರೆಡ್ಡಿ ಹೇಳಿಕೆ ನೀಡಿದರು. ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ ಸಿಎಂ ನೇತೃತ್ವದಲ್ಲಿ ನಾವು ಎಲ್ಲರೂ ಒಗ್ಗಟ್ಟಾಗಿದ್ದೇವೆ. ನಮ್ಮ ಸರ್ಕಾರದಲ್ಲಿ ಭ್ರಷ್ಟಾಚಾರ ಇಲ್ಲ. ಹಾಗಾಗಿ ಉಳಿದ ಅವಧಿಗೂ ಸಿದ್ದರಾಮಯ್ಯನವರೇ ಸಿಎಂ ಆಗಿ ಇರುತ್ತಾರೆ ಅಂದರೆ ಮುಂದಿನ 2 ವರ್ಷ 8 ತಿಂಗಳು ಸಹ ಸಿಎಂ ಸ್ಥಾನದಲ್ಲಿ ಸಿದ್ದರಾಮಯ್ಯ ಅವರೇ ಇರಲಿದ್ದಾರೆ ಎಂದು ಬಸವರಾಜ್ ರಾಯರೆಡ್ಡಿ ಹೇಳಿಕೆ ನೀಡಿದರು.
ಕೊಪ್ಪಳ : ಸನ್ಮಾನದ ವೇಳೆ ಸಿಎಂ ಸಿದ್ದರಾಮಯ್ಯ ಪೇಟ ಧರಿಸಲು ನಿರಾಕರಿಸಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ. ವಿವಿಧ ಕಾಮಗಾರಿಗಳಿಗೆ ಶಂಕು ಸ್ಥಾಪನೆ ಕಾರ್ಯಕ್ರಮದಲ್ಲಿ ಈ ಒಂದು ಘಟನೆ ನಡೆದಿದ್ದು, ಕೊಪ್ಪಳದ ಹೊಸಪೇಟೆ ರಸ್ತೆಯಲ್ಲಿ ಈ ಒಂದು ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಸನ್ಮಾನದ ವೇಳೆ ಸಿಎಂ ಸಿದ್ದರಾಮಯ್ಯಗೆ ಸಚಿವರಾದ ಶಿವರಾಜ್ ತಂಗಡಗಿ ಹಾಗೂ ಶಾಸಕ ಹಿಟ್ನಾಳ್ ಪೇಟಾ ಹಾಕಲು ಹೋದಾಗ, ಸಿದ್ದರಾಮಯ್ಯ ಪೇಟಾ ಬೇಡ ಅಂತ ನಿರಾಕರಿಸಿದ್ದಾರೆ. ಇದೇ ಸಂದರ್ಭದಲ್ಲಿ ಕೊಪ್ಪಳದಲ್ಲಿ ಸಿಎಂ ಸಿದ್ದರಾಮಯ್ಯ ಇಂದಿರಾ ಕ್ಯಾಂಟೀನ್ ಅನ್ನು ಉದ್ಘಾಟಿಸಿದರು.
ಬೆಂಗಳೂರು : ಬೆಂಗಳೂರಲ್ಲಿ ಘೋರವಾದ ದುರಂತ ಸಂಭವಿಸಿದ್ದು, ಕಾರು ಹರಿದು ಒಂದುವರೆ ವರ್ಷದ ಮಗು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಮಾಗಡಿ ರಸ್ತೆಯ ಮನಿ ಬಳಿ ಈ ಒಂದು ಘಟನೆ ಸಂಭವಿಸಿದ್ದು, ಬೆಳಿಗ್ಗೆ ಮನೆಯಿಂದ ಕಾರು ಹೊರ ತೆಗೆಯುತ್ತಿದ್ದ ವೇಳೆ ಈ ಒಂದು ದುರಂತ ಸಂಭವಿಸಿದೆ. ಮನೆಯ ಮಾಲೀಕ ಸ್ವಾಮಿ ಎಂಬುವವರು ಕಾರು ಹೊರ ತೆಗೆಯುತ್ತಿದ್ದ ವೇಳೆ ಮನೆ ಬಾಡಿಗೆಗೆ ಇದ್ದ ಕುಟುಂಬದ ಮಗು ಸಾವನ್ನಪ್ಪಿದೆ. ಕಾರನ್ನು ರಿವರ್ಸ್ ತೆಗೆಯುವಾಗ ಈ ಒಂದು ದುರ್ಘಟನೆ ಸಂಭವಿಸಿದೆ. ಒಂದುವರೆ ವರ್ಷದ ಮಹಮ್ಮದ್ ಉಮರ್ ಫಾರೂಕ್ ಎನ್ನುವ ಮಗು ಸಾವನ್ನಪ್ಪಿದೆ. ಕಾಮಾಕ್ಷಿಪಾಳ್ಯ ಸಂಚಾರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಈ ಒಂದು ಮನೆಯಲ್ಲಿ ಕುಣಿಗಲ್ ನಿಂದ ಕುಟುಂಬ ಬೆಂಗಳೂರಿಗೆ ಬಂದಿತ್ತು. ಈ ವೇಳೆ ಬಾಡಿಗೆ ಇದ್ದ ಸಂಬಂಧಿಕರ ಮನೆಗೆ ಮಗುವಿನ ಪೋಷಕರು ಬಂದಿದ್ದರು. ಮನೆ ಹೊರಗಡೆ ಮಹಮ್ಮದ್ ಆಟ ಆಡುತ್ತಿದ್ದ ಆಗ ಮನೆಯ ಮಾಲಿಕ ಕಾರು ರಿವರ್ಸ್ ತೆಗೆದುಕೊಳ್ಳುವಾಗ ಮಗುವಿನ ಮೇಲೆ ಕಾರು ಹರಿದು…














