Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಕೊಲೆ ಆರೋಪಿ ದರ್ಶನ್ ಪಾಲಿಗೆ ಇಂದು ಬಿಗ್ ಡೇ ಸದ್ಯ ಬೆಂಗಳೂರು ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ದರ್ಶನ್, ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡುವಂತೆ ಪ್ರಾಸಿಕ್ಯೂಷನ್ ಅರ್ಜಿ ಸಲ್ಲಿಸಿದೆ. ಇನ್ನೊಂದು ಕಡೆ ನಟ ದರ್ಶನ್ ಪರ ವಕೀಲರು ಹಾಸಿಗೆ ದಿಂಬು ನೀಡುವಂತೆ ಕೋರಿ ಮತ್ತೊಂದು ಅರ್ಜಿ ಸಲ್ಲಿಸಿದ್ದಾರೆ. ಹಾಗಾಗಿ ಕೋರ್ಟ್ ನಲ್ಲಿ ಎರಡು ಪ್ರಮುಖ ಅರ್ಜಿಗಳ ವಿಚಾರಣೆ ಇಂದು ನಡೆಯಲಿದೆ. ಬಳ್ಳಾರಿ ಜಿಲ್ಲೆಗೆ ಶಿಫ್ಟ್ ಮಾಡುವಂತೆ ಸಲ್ಲಿಸಿದ ಅರ್ಜಿಯ ವಿಚಾರಣೆ ಇಂದು ಬೆಂಗಳೂರಿನ 57ನೇ ಸೆಷನ್ಸ್ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಲಿದೆ. ಹಾಸಿಗೆ ದಿಂಬು ಕೋರಿ ಇನ್ನೊಂದು ಅರ್ಜಿ ಸಲ್ಲಿಸಲಾಗಿದೆ. ದರ್ಶನ್, ಜಗದೀಶ್, ಲಕ್ಷ್ಮಣ್, ನಾಗರಾಜ್, ಪ್ರಧೋಷ್ ಆರೋಪಿಗಳ ಶಿಫ್ಟ್ ಕುರಿತು ಅರ್ಜಿ ಸಲ್ಲಿಸಲಾಗಿದೆ. ಬಳ್ಳಾರಿ ಜೈಲಿಗೆ ಸ್ಥಳಾಂತರಿಸುವಂತೆ ಪ್ರಾಸಿಕ್ಯೂಷನ್ ಕೋರಿದ್ದು, ಕೋರ್ಟ್ ಗೆ ಆಕ್ಷೇಪಣೆ ಸಲ್ಲಿಸಲಿರುವ ಆರೋಪಿಗಳ ಪರ ವಕೀಲರು. ಇಂದು ನ್ಯಾಯಾಲಯ ವಿಚಾರಣೆ ನಡೆಸಿ ಆದೇಶ ನೀಡಲಿದೆ.
ದಕ್ಷಿಣಕನ್ನಡ : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಗಿರೀಶ್ ಮಟ್ಟಣ್ಣನವರ್ ಮಹೇಶ್ ತಿಮರೋಡಿ ಸೇರಿದಂತೆ ಹಲವರ ವಿರುದ್ಧ ಪ್ರಕರಣಗಳು ದಾಖಲಾಗಿದ್ದು ಇದೀಗ ಗಿರೀಶ್ ಮಟ್ಟನನ್ನವರು ವಿರುದ್ಧ ಮತ್ತೊಂದು ಕೇಸ್ ದಾಖಲಾಗಿದೆ. ಧರ್ಮಸ್ಥಳದ ಕುರಿತು ಯೌಟ್ಯೂಬ್ ಚಾನೆಲ್ ಸಂದರ್ಶನ ಒಂದರಲ್ಲಿ ಆಶೀಲವಾಗಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಗಿರೀಶ್ ಮಟ್ಟಣ್ಣನವರ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದ್ದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಾಜೇಂದ್ರ ದಾಸ ಎಂಬುವವರಾದೂರಿನ ಮೇರೆಗೆ ಇದೀಗ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಧರ್ಮಸ್ಥಳ ಕ್ಷೇತ್ರದ ಬಗ್ಗೆ ಅಪಪ್ರಚಾರ ನಡೆಸುತ್ತಿರುವ ಆರೋಪದ ಹಿನ್ನೆಲೆಯಲ್ಲಿ ಯುಟ್ಯೂಬ್ ಚಾನೆಲ್ ಗೆ ಸಂದರ್ಶನದ ವೇಳೆ ಅಶ್ಲೀಲವಾಗಿ ಮಾತನಾಡಿದ್ದಾರೆ ಅಶ್ಲೀಲವಾಗಿ ಮಾತನಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟ ಆರೋಪ ಕೇಳಿಬಂದಿದ್ದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಬಿಎನ್ಎಸ್ ಸೆಕ್ಷನ್ 296ರ ಅಡಿ ಪ್ರಕರಣ ದಾಖಲಾಗಿದೆ.
ಹುಬ್ಬಳ್ಳಿ : ಹುಬ್ಬಳ್ಳಿಯ ಈದ್ಗ ಮೈದಾನ ಹೆಸರು ಬದಲಾವಣೆಗೆ ಇದೀಗ ಬಿಜೆಪಿ ಮುಂದಾಗಿದೆ. ಹುಬ್ಬಳ್ಳಿ ಮತ್ತು ಧಾರವಾಡ ಮಹಾನಗರ ಪಾಲಿಕೆ ಚುಕ್ಕಾಣಿ ಹಿಡಿದಿರುವ ಬಿಜೆಪಿ ಹುಬ್ಬಳ್ಳಿ ನಗರದ ಹೃದಯ ಭಾಗದಲ್ಲಿರುವ ಈ ವಿಧಾನದ ಹೆಸರು ಬದಲಾವಣೆಗೆ ಮುಂದಾಗಿದೆ ಅದಕ್ಕೆ ರಾಣಿ ಚೆನ್ನಮ್ಮ ಮೈದಾನ ಎಂದು ಹೆಸರು ಬದಲಾವಣೆ ಮಾಡಲು ಬಿಜೆಪಿ ಮುಂದಾಗಿದೆ. 2022 ರಲ್ಲಿ ಈದ್ಗ ಮೈದಾನದ ಹೆಸರು ಬದಲಾವಣೆಗೆ ಠರಾವು ಪಾಸ್ ಮಾಡಿತ್ತು. ರಾಣಿ ಚೆನ್ನಮ್ಮ ಮೈದಾನ ಅಂತ ಹೆಸರು ಬದಲಾಯಿಸಲು ಠರಾವು ಪಾಸ್ ಮಾಡಿತ್ತು. ಇದೀಗ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಿ ಹೆಸರು ಬದಲಾವಣೆ ಮಾಡಲು ನಿರ್ಧರಿಸಿದ್ದು, ಹೆಸರು ಬದಲಿಸಿ, ಹುಬ್ಬಳ್ಳಿ ಧಾರವಾಡ ಪಾಲಿಕೆ ಮುಂದಾಗಿದೆ. ಹುಬ್ಬಳ್ಳಿ ನಗರದ ಹೃದಯ ಭಾಗದಲ್ಲಿ 1.5 ಎಕರೆ ವಿಸ್ತೀರ್ಣದಲ್ಲಿ ಈದ್ಗಾ ಮೈದಾನವಿದೆ. ಸದ್ಯ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ದಿನದಲ್ಲಿರುವ ಜಾಗ ಇದರಿಂದ ಹೆಸರು ಬದಲಿಸುವ ಅಧಿಕಾರ ಪಾಲಿಕೆಗೆ ಇದೆ ಎಂದ ಬಿಜೆಪಿ ಆದರೆ ಇದಕ್ಕೆ ಕಾಂಗ್ರೆಸ್ ನಾಯಕರು ಮತ್ತು ವ್ಯಕ್ತಪಡಿಸಿದ್ದು ಬಿಜೆಪಿ…
ಯಾದಗಿರಿ : ರಾಜ್ಯದಲ್ಲಿ ಹೃದಯ ವಿದ್ರಾವಕ ಘಟನೆ ಒಂದು ನಡೆದಿದ್ದು, ಹೃದಯಾಘಾತದಿಂದ ಇಬ್ಬರು ಸಹೋದರರು ಸಾವನ್ನಪ್ಪಿರುವ ಘೋರ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕೆಂಬಾವಿ ಪಟ್ಟಣದಲ್ಲಿ ಈ ಒಂದು ದುರಂತ ಸಂಭವಿಸಿದೆ. ಹೌದು ಹೃದಯಾಘಾತದಿಂದ ಶಂಶುದ್ದೀನ್ (42) ಹಾಗೂ ಇರ್ಫಾನ್ (38) ಎನ್ನುವವರು ಸಹೋದರರು ಸಾವನಪ್ಪಿದ್ದಾರೆ. ಅಣ್ಣನಿಗೆ ಹೃದಯಾಘಾತ ಆಗಿರುವ ಸುದ್ದಿ ತಿಳಿದು ತಮ್ಮನಿಗೂ ಹೃದಯಾಘಾತ ಸಂಭವಿಸಿದೆ. ಎದೆ ನೋವು ಕಾಣಿಸಿಕೊಳ್ಳುತ್ತಿದ್ದಂತೆ ಇಬ್ಬರು ಆಸ್ಪತ್ರೆಗೆ ದಾಖಲಾಗಿದ್ದಾರೆ ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಇಬ್ಬರು ಸಹೋದರರು ಸಾವನಪ್ಪಿದ್ದಾರೆ ಕೆಂಭಾವಿ ಪಟ್ಟಣದಲ್ಲಿ ಸಾವಿನಲ್ಲೂ ಸಹೋದರರು ಒಂದಾಗಿದ್ದಾರೆ. ಸಹೋದರರ ಸಾವಿನಿಂದ ಕುಟುಂಬಸ್ಥರ ಆಕ್ರಂದನ ಇದೀಗ ಇದೀಗ ಮುಗಿಲು ಮುಟ್ಟಿದೆ. ಕೆಂಭಾವಿ ಪಟ್ಟಣ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮಂಡ್ಯ : ಗಣೇಶ ಮೂರ್ತಿಯನ್ನು ವಿಸರ್ಜನೆ ಮಾಡುವ ವೇಳೆ ವ್ಯಕ್ತಿಯೊಬ್ಬ ನೀರು ಪಾಲಾಗಿರುವ ಘಟನೆ ಮದ್ದೂರು ತಾಲೂಕಿನ ಕಾರ್ಕಳ್ಳಿ ಗ್ರಾಮದಲ್ಲಿ ಸೋಮವಾರ ರಾತ್ರಿ ನಡೆದಿದೆ. ಮದ್ದೂರು ತಾಲೂಕಿನ ಸಿಎಂ ಕೆರೆ ಹೋಬಳಿಯ ಕಾರ್ಕಳ್ಳಿ ಗ್ರಾಮದ ರವಿಕುಮಾರ್ (40) ಎಂಬ ದುರ್ದೈವಿಯಾಗಿದ್ದಾನೆ. ಗೌರಿ – ಗಣೇಶ ಹಬ್ಬದ ಅಂಗವಾಗಿ ಕಾರ್ಕಳ್ಳಿ ಗ್ರಾಮದ ಪರಿಶಿಷ್ಟ ಜಾತಿ ಕಾಲೋನಿಯಲ್ಲಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಲಾಗಿತ್ತು. ವಿಸರ್ಜನೆ ಅಂಗವಾಗಿ ಸೋಮವಾರ ಸಂಜೆ ಗ್ರಾಮದಲ್ಲಿ ಅದ್ದೂರಿಯಾಗಿ ಮೆರವಣಿಗೆ ಕೂಡ ನಡೆಸಲಾಗಿತ್ತು. ಮಧ್ಯರಾತ್ರಿ 1 ಗಂಟೆ ವೇಳೆಗೆ ಕ್ಯಾತಘಟ್ಟ ಗ್ರಾಮದ ಬಳಿಯ ಹೆಬ್ಬಾಳ ನಾಲೆಗೆ ವಿಸರ್ಜನೆ ಮಾಡಲು 20 ರಿಂದ 30 ಜನ ಆಗಮಿಸಿ ಪೂಜೆ ಸಲ್ಲಿಸಿ ಗಣೇಶ ಮೂರ್ತಿಯನ್ನು ವಿಸರ್ಜನೆ ಮಾಡಲು ನೀರಿಗೆ ಇಳಿದಿದ್ದಾರೆ. ಆದರೆ, ನೀರಿನ ರಭಸಕ್ಕೆ ಬಸವರಾಜು ಎನ್ನುವವರು ಕೊಚ್ಚಿ ಹೋಗಿದ್ದಾನೆ. ತಕ್ಷಣವೇ ಸ್ಥಳೀಯರು ರಕ್ಷಣೆಗೆ ಮುಂದಾದರೂ ಸಹ ಯಾವುದೇ ಪ್ರಯೋಜನವಾಗಿಲ್ಲ. ಮಂಗಳವಾರ ಮುಂಜಾನೆಯಿಂದಲೇ ಕೆ.ಎಂ.ದೊಡ್ಡಿ ಪೋಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದು,…
ಚಾಮರಾಜನಗರ : ಕಳೆದ ಕೆಲವು ದಿನಗಳ ಹಿಂದೆ ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಲಿಗಳಿಗೆ ವಿಷ ಹಾಕಿ ಐದು ಹುಲಿಗಳನ್ನು ಕೊಲೆಗೈದಿದ್ದ ಪ್ರಕರಣ ನಡೆದಿತ್ತು. ಇದೀಗ ಚಾಮರಾಜನಗರ ಜಿಲ್ಲೆಯ ಬಿಳಿಗಿರಿರಂಗನ ಬೆಟ್ಟದಲ್ಲಿ ಮತ್ತೆ ಹುಲಿ ಪ್ರತ್ಯಕ್ಷವಾಗಿದೆ. ಹೌದು ಬಿ ಆರ್ ಹೆಲ್ತ್ ನಲ್ಲಿ ಅರಣ್ಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಹೈ ಅಲರ್ಟ್ ಆಗಿದ್ದಾರೆ. ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಬಿಳಿಗಿರಿರಂಗನ ಬೆಟ್ಟದಲ್ಲಿ ಹುಲಿ ಪ್ರತ್ಯಕ್ಷವಾಗಿದ್ದು, ಯಾರು ಕೂಡ ಒಬ್ಬರೇ ಓಡಾಡದಂತೆ ಅರಣ್ಯ ಸಿಬ್ಬಂದಿಗಳು ಮೈಕ್ ಮೂಲಕ ಜನರಲ್ಲಿ ಮನವಿ ಮಾಡಿದರು.
ರಾಯಚೂರು : ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ವೇಳೆ ಮಂಡ್ಯ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಏಕಾಏಕಿ ಕುಸಿದು ಬಿದ್ದು ಇಬ್ಬರು ಸಾವನ್ನಪ್ಪಿದ್ದರು. ಅದೇ ರೀತಿ ಘಟನೆ ರಾಯಚೂರಿನಲ್ಲೂ ಸಹ ಸಂಭವಿಸಿದೆ. ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಡಿಜೆಗೆ ಡ್ಯಾನ್ಸ್ ಮಾಡುತ್ತಿರುವಾಗಲೇ ರಾಯಚೂರು ನಗರದ ಮಂಗಳವಾರ ಪೇಟೆಯ ಯುವಕ ಅಭಿಷೇಕ್ (24) ಕುಸಿದುಬಿದ್ದು ಮೃತಪಟ್ಟಿದ್ದಾನೆ. ನಿನ್ನೆ (ಆಗಸ್ಟ್ 31_ ರಾತ್ರಿಯಿಡಿ ಡ್ಯಾನ್ಸ್ ಮಾಡಿದ್ದ ಅಭಿಷೇಕ್ ಇಂದು (ಸೆಪ್ಟೆಂಬರ್ 1) ಬೆಳಗಿನ ಜಾವ ಗಣೇಶ ವಿಸರ್ಜನೆ ಮಾರ್ಗ ಮಧ್ಯೆ ರಾಯಚೂರು ನಗರದ ತೀನ್ ಖಂದಿಲ್ ಸರ್ಕಲ್ ಬಳಿ ಕುಸಿದು ಬಿದ್ದಿದ್ದು, ಕೂಡಲೇ ಅಭಿಷೇಕ್ ನನ್ನು ಆಸ್ಪತ್ರೆಗೆ ರವಾನಿಸಲಾಗಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ಯುವಕ ಅಭಿಷೇಕ್ ಕೊನೆಯುಸಿರೆಳೆದಿದ್ದಾನೆ. ನಿನ್ನೆಯೂ ಸಹ ಮಂಡೆ ಮತ್ತು ಚಿಕ್ಕಬಳ್ಳಾಪುರದಲ್ಲಿ ಹೃದಯಾಘಾತಕ್ಕೆ ಇಬ್ಬರು ಬಲಿಯಾಗಿದ್ದರು.
ಬೆಂಗಳೂರು : ಮುಸ್ಲಿಂ ಯುವತಿಯರನ್ನು ಮದುವೆಯಾದರೆ ಐದು ಲಕ್ಷ ರು. ಕೊಡುವುದಾಗಿ ಹೇಳಿಕೆ ನೀಡಿದ ಆರೋಪದ ಮೇಲೆ ತಮ್ಮ ವಿರುದ್ಧ ಕೊಪ್ಪಳ ಟೌನ್ ಪೊಲೀಸ್ ಠಾಣೆಯಲ್ಲಿ ದಾಖಾಗಿರುವ ಎಫ್ಐಆರ್ ರದ್ದು ಕೋರಿ ವಿಜಯಪುರದ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯಲ್ಲಿ ಕೊಪ್ಪಳ ಟೌನ್ ಠಾಣಾ ಪೊಲೀಸರು ಮತ್ತು ದೂರು ನೀಡಿರುವ ಉಮರ್ ಜುನೈದ್ ಖುರೇಷಿ, ಮೈನು ದ್ದೀನ್ ಬೀಳಗಿ ಮತ್ತು ಅಬ್ದುಲ್ ಕಲಾಂ ಅವರನ್ನು ಪ್ರತಿವಾದಿ ಮಾಡಿದ್ದಾರೆ. ವಿಚಾರಣೆ ನಿಗದಿಯಾಗ ಬೇಕಿದೆ. ಕೊಪ್ಪಳದಲ್ಲಿ ಗವಿಸಿದ್ದಪ್ಪ ಎನ್ನುವ ಯುವಕ ಅನ್ಯ ಕೋಮಿನ ಯುವಕರಿಂದ ಕೊಲೆಯಾಗಿದ್ದ. ಕುಟುಂಬದವರಿಗೆ ಸಾಂತ್ವನ ಹೇಳಲು ಆ.10ರಂದು ಯತ್ನಾಳ್ ಕೊಪ್ಪಳಕ್ಕೆ ಬಂದಿದ್ದ ಈ ಹೇಳಿಕೆ ನೀಡಿದ್ದರು. ಬಳಿಕ ವಿವಿಧ ಜಿಲ್ಲೆಗಳ ಪೊಲೀಸ್ ಠಾಣೆಗಳಲ್ಲಿ ಶಾಸಕ ಯತ್ನಾಳ ವಿರುದ್ಧ ಎಫ್ಐಆರ್ ದಾಖಲಾಗಿತ್ತು.
ಬೆಂಗಳೂರು : ನಿನ್ನೆ ತಾನೇ ಆಸ್ತಿ ನೋಂದಣಿ ಹಾಗು ಮುದ್ರಾಂಕ ಶುಲ್ಕ ಹೆಚ್ಚಳ ಮಾಡಿ ಕಂದಾಯ ಇಲಾಖೆ ಆದೇಶ ಹೊರಡಿಸಿತ್ತು. ಇದೀಗ ಹಲವು ವರ್ಷಗಳಿಂದತೆರಿಗೆ ಬಾಕಿ ಉಳಿಸಿಕೊಂಡಿರುವ 2.75 ಲಕ್ಷ ಆಸ್ತಿ ತೆರಿಗೆ ಸುಸ್ತಿದಾರರಿಗೆ ಬಿಬಿಎಂಪಿ ಡಿಮ್ಯಾಂಡ್ ನೋಟಿಸ್ ಜಾರಿ ಮಾಡಿದೆ. ನೋಟಿಸ್ ಜಾರಿ ಮಾಡಲಾಗಿರುವ ಸುಸ್ತಿದಾರರಿಂದ 786 ಕೋಟಿ ರು. ತೆರಿಗೆ ಬಾಕಿ ಬರಬೇಕಿದೆ. ಸುಸ್ತಿದಾರರು ಕೂಡಲೇ www.BBMPtax.karnataka.gov. inನಲ್ಲಿ ಆನ್ಲೈನ್ ಮೂಲಕ ಬಾಕಿ ತೆರಿಗೆ ಪಾವತಿಸಬೇಕಿದೆ. ಇಲ್ಲದಿದ್ದರೆ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳುವುದರ ಜತೆಗೆ ಚರ ಮತ್ತು ಸ್ಥಿರಾಸ್ತಿಗಳನ್ನು ಬಾಕಿ ತೆರಿಗೆ ವಸೂಲಿ ಮಾಡಲಾಗುವುದು ಎಂದು ಬಿಬಿಎಂಪಿ ಎಚ್ಚರಿಕೆ ನೀಡಿದೆ. ಸದ್ಯ ತೆರಿಗೆ ಬಾಕಿ ಉಳಿಸಿಕೊಂಡವರ ಪೈಕಿ ಮಹ ದೇವಪುರ ವಲಯದಲ್ಲಿ 65 ಸಾವಿರ ಸುಸ್ತಿದಾರರು 197 ಕೋಟಿ ರು., ದಕ್ಷಿಣ ವಲಯದ 25,162 ಸುಸ್ತಿದಾರರು 116 ಕೋಟಿ ರು., ಪೂರ್ವ ವಲಯ 37,574 ಸುಸ್ತಿದಾರರು 115 ಕೋಟಿ ರು., ಬೊಮ್ಮನಹಳ್ಳಿ ವಲಯ 45,293 ಸುಸ್ತಿದಾರರು 107 ಕೋಟಿ ರು.,…
ಬೆಂಗಳೂರು : ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಆಡಳಿತ ಮಂಗಳವಾರದಿಂದ ಚಾಲನೆಗೆ ಬರುತ್ತಿರುವ ಹಿನ್ನೆಲೆಯಲ್ಲಿ, ಜಿಬಿಎ ವ್ಯಾಪ್ತಿಯಲ್ಲಿ ಚುನಾವಣೆಗೆ ಸಂಬಂಧಿಸಿದಂತೆ ನಿಯಮ ರೂಪಿಸಿರುವ ರಾಜ್ಯ ಸರ್ಕಾರ ಅಧಿಸೂಚನೆ ಪ್ರಕಟಿಸಿದೆ. ಹಾಗಾಗಿ ಇಷ್ಟು ದಿನ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಎಂದು ಗುರುತಿಸಲ್ಪಡುತ್ತಿದ್ದದ್ದು ಇದೀಗ ಇತಿಹಾಸದ ಪುಟ ಸೇರಿತು. ಬಿಬಿಎಂಪಿ ಆಡಳಿತ ವ್ಯಾಪ್ತಿಯನ್ನು 5 ನಗರ ಪಾಲಿಕೆಗಳಿಗೆ ಹಂಚಿಕೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ಅಲ್ಲದೆ ಈ ನಗರ ಪಾಲಿಕೆಗಳ ಮೇಲೆ ನಿಗಾ ವಹಿಸಲು ಜಿಬಿಎ ರಚಿಸಲಾಗಿದ್ದು, ಮಂಗಳವಾರದಿಂದ ಬಿಬಿ ಎಂಪಿ ರದ್ದಾಗಿ ಜಿಬಿಎ ಆಡಳಿತ ಆರಂಭವಾಗಲಿದೆ. ಅದಕ್ಕೆ ಸಂಬಂಧಿಸಿದಂತೆ ಮಂಗಳವಾರ ಅಂತಿಮ ಅಧಿಸೂಚನೆ ಪ್ರಕಟವಾಗ ಲಿದೆ ಹಾಗೂ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿನ ನಾಮಫಲಕಗಳು ಮಂಗಳ ವಾರವೇ ಬದಲಾಗಲಿದೆ. ಅದಕ್ಕೂ ಮುನ್ನ ಜಿಬಿಎ ವ್ಯಾಪ್ತಿಯ ನಗರ ಪಾಲಿಕೆಗಳಲ್ಲಿ ಕೈಗೊಳ್ಳಲಾಗುವ ಚುನಾವಣೆಗಳಿಗೆ ಸಂಬಂಧಿಸಿದಂತೆ ನಿಯಮಗಳನ್ನು ರೂಪಿಸಿ ಸರ್ಕಾರ ಅಧಿಸೂಚನೆ ಪ್ರಕಟಿಸಿದೆ. ನಗರ ಪಾಲಿಕೆಯ ವಾರ್ಡ್ಗಳಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸುವವರ ವೆಚ್ಚದ ಮಿತಿಯನ್ನು 5 ಲಕ್ಷ…