Subscribe to Updates
Get the latest creative news from FooBar about art, design and business.
Author: kannadanewsnow05
ಮಂಡ್ಯ : ನವೆಂಬರ್ ಗೆ ಸಚಿವ ಸಂಪುಟ ಪುನಾರಚನೆ ಆಗಲಿದೆ ಎಲ್ಲರಿಗೂ ಮಂತ್ರಿ ಆಗಬೇಕೆಂಬ ಆಸೆ ಇರುತ್ತದೆ ಸೀನಿಯರ್ಗಳು ಇದ್ದಾರೆ ಅವರಿಗೆಲ್ಲ ಮಂತ್ರಿ ಆಸೆ ಇದೆ ಈ ಬಗ್ಗೆ ನಿರ್ಧಾರ ಕೈಗೊಳ್ಳುವುದು ಹೈಕಮಾಂಡ್ಗೆ ಬಿಟ್ಟಿದ್ದು ಎಂದು ವಸತಿ ಸಭಾ ಜಮೀರ್ ಅಹ್ಮದ್ ಖಾನ್ ಸಚಿವ ಸಂಪುಟ ಪುನಾರಚನೆ ಕುರಿತು ಮಹತ್ವದ ಸುಳಿವು ನೀಡಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ ಅವರು, ಈಗಾಗಲೇ ಡಿಸಿಎಂ ಡಿಕೆ ಶಿವಕುಮಾರ್ ಸಿಎಂ ಆಗಬೇಕು ಎಂದು ಹೇಳಿಕೆ ನೀಡಿರುವ ಸಂಸದ ಎಲ್ ಆರ್ ಶಿವರಾಮೇಗೌಡ ಹಾಗೂ ಶಾಸಕ ಡಾ.ರಂಗನಾಥ್ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ನೋಟಿಸ್ ನೀಡಿದ್ದು ಇದರ ಬೆನ್ನಲ್ಲೆ ಸಚಿವ ಜಮೀರ್ ಅಹ್ಮದ್ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಬೇಕು ಅಂತ ಬಯಸುತ್ತೇನೆ ಎಂದು ಹೇಳಿಕೆ ನೀಡಿದ್ದಾರೆ.ಡಿಕೆ ಶಿವಕುಮಾರ್ ಗು ಮುಖ್ಯಮಂತ್ರಿ ಆಗಬೇಕು ಅನ್ನುವ ಆಸೆ ಇದೆ ಹಾಗಾಗಿ ಅವರು ಸಹ ಸಿಎಂ ಆಗಬೇಕು ಅಂತ ನಾನು ಬಯಸುತ್ತೇನೆ ಐದು ವರ್ಷ ಸಿಎಂ ಸಿದ್ದರಾಮಯ್ಯ ಅವಧಿ ಪೂರೈಸುತ್ತಾರೆ ಎಂದಿದ್ದಾರೆ.
BREAKING : ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಲಿ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ತನಿಖೆಯಲ್ಲಿ ಸ್ಪೋಟಕ ಅಂಶ ಬಯಲು!
ಚಾಮರಾಜನಗರ : ಇತ್ತೀಚಿಗೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಪಚ್ಚೆದೊಡ್ಡಿ ಗ್ರಾಮದಲ್ಲಿ ಹುಲಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ತನಿಖೆಯಲ್ಲಿ ಸ್ಪೋಟಕ ಅಂಶ ಬಯಲಾಗಿದ್ದು, ಪ್ರಾಥಮಿಕ ತನಿಖೆಯಲ್ಲಿ ಸೇಡಿನ ಹತ್ಯೆ ಎಂಬುದು ಬಯಲಾಗಿದೆ. ಹೌದು ಹುಲಿಯನ್ನು ಕೊಂದಿದ್ದು, ಕಳ್ಳ ಬೇಟೆಗೆ ಅಲ್ಲ ಬದಲಿಗೆ ಸೇಡು ತೀರಿಸಿಕೊಳ್ಳಲು ಎಂದು ತನಿಖೆಯಲ್ಲಿ ಬಯಲಾಗಿದೆ. ಅಲ್ಲದೇ ಮೃತ ಹುಲಿಯ ಇನ್ನುಳಿದ ಕಳೆಬರವನ್ನ ಅರಣ್ಯ ಸಿಬ್ಬಂದಿಗಳು ಪತ್ತೆ ಹಚ್ಚಿದ್ದಾರೆ. ಹುಲಿಯ ತಲೆ ಹಾಗು ಮುಂಗಾಲು ಮಣ್ಣಿನಲ್ಲಿ ಹೂಳಲಾಗಿತ್ತು. ಹುಲಿಯ ಮಧ್ಯ ಭಾಗದ ದೇಹವನ್ನು ಎಲೆಗಳಲ್ಲಿ ಮುಚ್ಚಿಟ್ಟಲಾಗಿತ್ತು. ಹುಲಿಯ ಹಿಂಭಾಗದ ದೇಹವನ್ನು ಮರದ ಕೆಳಗೆ ಎಸೆಯಲಾಗಿತ್ತು. ಹುಲಿಗೆ ವಿಷ ಹಾಕಿ ಸತ್ತ ಬಳಿಕ ಕೊಡಲಿಯಿಂದ ಕತ್ತರಿಸಿರುವ ಶಂಕೆ ವ್ಯಕ್ತವಾಗಿದೆ. ಆರೋಪಿ ಕೊಡಲಿಯಿಂದ ಕೊಚ್ಚಿ ಮೂರು ಭಾಗ ಮಾಡಿದ್ದಾನೆ. ಹಸು ಕೊಂದಿದ್ದಕ್ಕೆ ಹುಲಿ ಕೊಂದರಾ ಎಂಬ ಆಯಾಮದಲ್ಲಿ ತನಿಖೆ ನಡೆಸಲಾಗುತ್ತಿದೆ. ಕಣ್ಮರೆ ಆಗಿರುವ ಹಸುವಿನ ಮಾಹಿತಿಯನ್ನು ಕಲೆ ಹಾಕಲು ಸಿಬ್ಬಂದಿಗಳು ಮುಂದಾಗಿದ್ದಾರೆ.
ಬೆಂಗಳೂರು : ಗ್ಯಾರಂಟಿ ಯೋಜನೆಗೆ NDRF ಹಣ ಬಳಕೆ ಮಾಡಲಾಗಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಹೇಳಿಕೆಗೆ ಇದೀಗ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದು, NDRF ಹಣವನ್ನು ಗ್ಯಾರಂಟಿ ಯೋಜನೆಗೆ ಬಳಸಿಕೊಂಡಿಲ್ಲ ಎಂದು ಸ್ಪಷ್ಟನೆ ನೀಡಿದರು. ಬೆಳಗಾವಿಯ ವಿಮಾನ ನಿಲ್ದಾಣದಲ್ಲಿ ಮಧ್ಯಮಗಳೊಂದಿಗೆ ಮಾತನಾಡಿದ ಅವರು, NDRF ಹಣವನ್ನು ಗ್ಯಾರಂಟಿ ಯೋಜನೆಗೆ ಬಳಸಿಕೊಂಡಿಲ್ಲ. ಬಿಜೆಪಿಯವರಿಗೆ ಒಂದು ರೀತಿ ಕಾಮಾಲೆ ರೋಗ ಇದ್ದಂತೆ. ಗ್ಯಾರಂಟಿ ಯೋಜನೆ ಸಕ್ಸಸ್ ಆಗಿದ್ದಕ್ಕೆ ಸಹಿಸಿಕೊಳ್ಳಲು ಆಗುತ್ತಿಲ್ಲ. ಗ್ಯಾರಂಟಿ ಜಾರಿ ಮಾಡಲು ಆಗಲ್ಲ ಎಂದು ಮೋದಿ ಹೇಳಿದ್ದರು. ಕರ್ನಾಟಕದಲ್ಲಿ ಎರಡೂವರೆ ವರ್ಷದಿಂದ ಗ್ಯಾರಂಟಿ ಸಕ್ಸಸ್ ಆಗಿದೆ ಎಂದರು. ಹಾಗಾಗಿ ಬಿಜೆಪಿಯವರಿಗೆ ತಳಮಳ ಆಗಿ ಬಿಟ್ಟಿದೆ. ನಮ್ಮ ಯೋಜನೆಗಳನ್ನು ಬಿಜೆಪಿಯವರು ಕಾಪಿ ಮಾಡುತ್ತಿದ್ದಾರೆ.ಬಿಹಾರ್, ದೆಹಲಿಕ್ಸ್ ರಾಜಸ್ತಾನ್ ಹಾಗು ಮಹಾರಾಷ್ಟ್ರದಲ್ಲಿ ಏನು ಮಾಡಿದ್ದಾರೆ? ಎಂದು ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಇನ್ನು MLC ಸಿಟಿ ರವಿ ಹೈಕಮಾಂಡ್ ಗೆ ಸಿದ್ದರಾಮಯ್ಯ ಸೆಡ್ಡು ಹೊಡೆದಿದ್ದಾರೆ ಎಂಬ ಹೇಳಿಕೆ ವಿಚಾರವಾಗಿ, ಬಿಜೆಪಿಯವರಿಗೆ ಯಾಕೆ…
ಬೆಂಗಳೂರು : ಬೆಂಗಳೂರಲ್ಲಿ ಇಸ್ರೇಲ್ ರಾಯಭಾರಿ ಕಚೇರಿಯಲ್ಲಿ 6 ‘RDX’ ಇಟ್ಟಿರೋದಾಗಿ ಇ-ಮೇಲ್ ಬೆದರಿಕೆ ಸಂದೇಶ ಬಂದಿದ್ದು, ಶುಕ್ರವಾರ ಪ್ರಾರ್ಥನೆ ವೇಳೆ ಬ್ಲಾಸ್ಟ್ ಆಗುತ್ತೆ ಎಂದು ಬೆದರಿಕೆ ಸಂದೇಶ ಬಂದಿದೆ. ಸೆ.22 ರಂದು Cho_ramaswami@hotmail ಎಂಬ ಐಡಿಯಿಂದ ಮೇಲ್ ಸಂದೇಶ ಬಂದಿದೆ.ಜೊತೆಗೆ ಹೈಕೋರ್ಟ್ ಗು ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಇ-ಮೇಲ್ ಸಂದೇಶ ಬಂದಿದೆ.ಸದ್ಯ ರಾಮಸ್ವಾಮಿ ಪತ್ತೆ ಹಚ್ಚಲು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಬೆಂಗಳೂರು : ಇಷ್ಟು ದಿನ ಕಾಂಗ್ರೆಸ್ ನಲ್ಲಿ ಸೆಪ್ಟೆಂಬರ್, ಅಕ್ಟೊಬರ್ ನವೆಂಬರ್ ನಲ್ಲಿ ಕ್ರಾಂತಿ ಆಗಲಿದೆ ಎಂದು ಕಾಂಗ್ರೆಸ್ ನಾಯಕರು ಸೇರಿ ಬಿಜೆಪಿ ನಾಯಕರು ಹೇಳಿದ್ದೆ ಹೇಳಿದ್ದು, ಇದೀಗ ಶಾಸಕ ಪ್ರದೀಪ್ ಈಶ್ವರ್ ರಾಜ್ಯ ಬಿಜೆಪಿಯಲ್ಲಿ ಅಕ್ಟೊಬರ್ ಕ್ರಾಂತಿ ಆಗಲಿದೆ ಎಂದು ಸ್ಫೋಟಕವಾದ ಭವಿಷ್ಯ ನುಡಿದಿದ್ದಾರೆ. ಬೆಂಗಳೂರಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯಲ್ಲಿ ಅಕ್ಟೊಬರ್ ಕ್ರಾಂತಿ ಆಗುತ್ತದೆ. ಆರ್.ಅಶೋಕ್ ವಿಪಕ್ಷ ಸ್ಥಾನಕ್ಕೆ ಕಂಟಕವಿದೆ. ಆರ್.ಅಶೋಕ್ ಔಟ್ ಗೊಯಿಂಗ್ ವಿಪಕ್ಷ ನಾಯಕ. ಸುನೀಲ್ ಕುಮಾರ್ ಇನ್ ಕಮಿಂಗ್ ವಿಪಕ್ಷ ನಾಯಕ ಎಂದು ಪದ್ಮನಾಭನಗರದ ಜ್ಯೋತಿಷ್ಯಾಲಯ ಸುಳ್ಳು ಹೇಳುತ್ತದೆ. ಹೀಗಾಗಿ ಬೇರೆ ಜ್ಯೋತಿಷ್ಯಾಲಯಕ್ಕೆ ಹೋಗಿದ್ದೆ. ಆರ್.ಅಶೋಕ್ ಚೇರ್ ಅಕ್ಟೊಬರ್ ತಿಂಗಳಲ್ಲಿ ಅಲ್ಲಾಡುತ್ತೆ ಬಿಜೆಪಿಯ ಮನೆ ಒಡೆದು ನೂರು ಬಾಗಿಲು ಆಗಿದೆ ಎಂದರು.
ಬೆಂಗಳೂರು : ರಾಜ್ಯದಲ್ಲಿ ಸೆಪ್ಟೆಂಬರ್ 22 ರಿಂದ ಸಾಮಾಜಿಕ ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ ಆರಂಭವಾಗಿದ್ದು ಇದುವರೆಗೂ ಬೆಂಗಳೂರು ಹೊರತುಪಡಿಸಿ, 63% ರಷ್ಟು ಜಾತಿ ಗಣತಿ ಸಮೀಕ್ಷೆ ನಡೆದಿದೆ ಇದೀಗ ಇಂದಿನಿಂದ ಬೆಂಗಳೂರಿನಲ್ಲಿ ಜಾತಿ ಗಣತಿ ಸಮೀಕ್ಷೆ ಆರಂಭವಾಗಿದ್ದು, ಆರಂಭದಲ್ಲೇ ಹಲವು ವಿಘ್ನಗಳು ಎದುರಾಗಿವೆ.ಇದೀಗ ಹಲವು ಸಮಸ್ಯೆ ಎದುರಿಸುತ್ತಿರುವ ಸಿಬ್ಬಂದಿಗಳು ಸಮಸ್ಯೆ ಬಗೆಹರಿಸಿ ಎಂದು 200ಕ್ಕೂ ಹೆಚ್ಚು ಸಿಬ್ಬಂದಿಗಳು ಜಾತಿಗಣತಿ ಸಮೀಕ್ಷೆಯನ್ನು ಬಹಿಷ್ಕರಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಹೌದು ಬೆಂಗಳೂರಿನಲ್ಲಿ ಜಾತಿಗಣತಿಗೆ ಆರಂಭದಲ್ಲೇ ವಿಘ್ನವಾಗಿದ್ದು, ಸಿಬ್ಬಂದಿಯನ್ನು ಸೆಲೆಕ್ಟ್ ಮಾಡಿದ್ದೆ ಒಂದು ವಾರ್ಡಿಗೆ ಸಿಬ್ಬಂದಿಯನ್ನು ನಿಯೋಜಿಸಿದ್ದೇ ಮತ್ತೊಂದು ವಾರ್ಡ್ ಗೆ ನೂರಕ್ಕೆ ಎಷ್ಟು ಸಿಬ್ಬಂದಿಗೆ ವಾರ್ಡ್ ಬದಲಾಗಿದೆ. ದೂರ ಹೋಗಿ ಸಮೀಕ್ಷೆ ಮಾಡುವುದು ಹೇಗೆ ಅಂತ ಅವರು ಅಳಲು ತೋಡಿಕೊಳ್ಳುತ್ತಿದ್ದಾರೆ. ಸ್ಥಳಕ್ಕೆ ಹೋಗುವುದರಲ್ಲಿ ನಮಗೆ ಸಮಯ ಆಗುತ್ತದೆ ಸಮೀಕ್ಷೆ ಮಾಡುವುದು ಹೇಗೆ ಅಂತ ಸಿಬ್ಬಂದಿಗಳು ಆಕ್ರೋಶ ಹೊರಹಾಕಿದ್ದಾರೆ.ಸರ್ಕಾರಿ ನೌಕರರದರೆ ಎಲ್ಲವನ್ನು ಸಹಿಸಿಕೊಳ್ಳಬೇಕಾ ಎಂದು ಆಕ್ರೋಶ ಹೊರ ಹಾಕಿದ್ದಾರೆ. ಒಬ್ಬರು ಸಿಬ್ಬಂದಿ ಸಂಪೂರ್ಣವಾಗಿ ಕುರುಡವಾಗಿದ್ದು, ನನಗೆ…
ಬೆಂಗಳೂರು : ಬೆಂಗಳೂರಲ್ಲಿ ಘೋರವಾದ ದುರಂತವೊಂದು ಸಂಭವಿಸಿದ್ದು, ಡಿನೋನೇಟರ್ ಗೆ ಮಿಂಚು ಬಡಿದು ಓರ್ವ ಸಾವನಪ್ಪಿದ್ದು, ಇಬ್ಬರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಉರಿಗಹಳ್ಳಿ ಬಳಿಯ ನೀವು ಸ್ಯಾಂಡ್ ಕ್ರಷರ್ ನಲ್ಲಿ ಈ ಒಂದು ಘಟನೆ ನಡೆದಿದೆ. ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಉರಗಹಳ್ಳಿಯಲ್ಲಿ ಉತ್ತರ ಭಾರತ ಮೂಲದ ಕಾರ್ಮಿಕ ಕಿಶನ್ (45) ಸಾವನ್ನಪ್ಪಿದ್ದಾರೆ. ಇನ್ನು ಘಟನೆಯೆಲ್ಲಿ ನಿಜಾಂ ಹಾಗೂ ಶರ್ಮ ಎಂಬವರಿಗೆ ಗಂಭೀರವಾದ ಗಾಯಳಾಗಿವೆ. ಬಂಡೆ ಸ್ಫೋಟಿಸಲು ದಿನಾನೆಟರ್ ಅಳವಡಿಸಲು ತಯಾರಿ ನಡೆದಿತ್ತು. ನಿನ್ನೆ ಸಂಜೆ ಡಿಟೋನೇಟರ್ ಗೆ ಮಿಂಚು ಬಡಿದು ಈ ಒಂದು ದುರಂತ ಸಂಭವಿಸಿದೆ. ಬಿಡದಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.
BIG NEWS : ಬೆಂಗಳೂರಿನಲ್ಲಿ ‘ಜಾತಿಗಣತಿಗೆ’ ಆರಂಭದಲ್ಲೇ ವಿಘ್ನ : ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ ಸಿಬ್ಬಂದಿಗಳು
ಬೆಂಗಳೂರು : ರಾಜ್ಯದಲ್ಲಿ ಸೆಪ್ಟೆಂಬರ್ 22 ರಿಂದ ಸಾಮಾಜಿಕ ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ ಆರಂಭವಾಗಿದ್ದು ಇದುವರೆಗೂ ಬೆಂಗಳೂರು ಹೊರತುಪಡಿಸಿ, 63% ರಷ್ಟು ಜಾತಿ ಗಣತಿ ಸಮೀಕ್ಷೆ ನಡೆದಿದೆ ಇದೀಗ ಇಂದಿನಿಂದ ಬೆಂಗಳೂರಿನಲ್ಲಿ ಜಾತಿ ಗಣತಿ ಸಮೀಕ್ಷೆ ಆರಂಭವಾಗಿದ್ದು, ಆರಂಭದಲ್ಲೇ ಹಲವು ವಿಘ್ನಗಳು ಎದುರಾಗಿವೆ. ಹೌದು ಬೆಂಗಳೂರಿನಲ್ಲಿ ಜಾತಿಗಣತಿಗೆ ಆರಂಭದಲ್ಲೇ ವಿಘ್ನವಾಗಿದ್ದು, ಸಿಬ್ಬಂದಿಯನ್ನು ಸೆಲೆಕ್ಟ್ ಮಾಡಿದ್ದೆ ಒಂದು ವಾರ್ಡಿಗೆ ಸಿಬ್ಬಂದಿಯನ್ನು ನಿಯೋಜಿಸಿದ್ದೇ ಮತ್ತೊಂದು ವಾರ್ಡ್ ಗೆ ನೂರಕ್ಕೆ ಎಷ್ಟು ಸಿಬ್ಬಂದಿಗೆ ವಾರ್ಡ್ ಬದಲಾಗಿದೆ. ದೂರ ಹೋಗಿ ಸಮೀಕ್ಷೆ ಮಾಡುವುದು ಹೇಗೆ ಅಂತ ಅವರು ಅಳಲು ತೋಡಿಕೊಳ್ಳುತ್ತಿದ್ದಾರೆ. ಸ್ಥಳಕ್ಕೆ ಹೋಗುವುದರಲ್ಲಿ ನಮಗೆ ಸಮಯ ಆಗುತ್ತದೆ ಸಮೀಕ್ಷೆ ಮಾಡುವುದು ಹೇಗೆ ಅಂತ ಸಿಬ್ಬಂದಿಗಳು ಆಕ್ರೋಶ ಹೊರಹಾಕಿದ್ದಾರೆ. ಒಬ್ಬರು ಸಿಬ್ಬಂದಿ ಸಂಪೂರ್ಣವಾಗಿ ಕುರುಡವಾಗಿದ್ದು, ನನಗೆ ಕಣ್ಣು ಕಾಣಿಸಲ್ಲ ಯಾವುದೇ ಆಪರೇಷನ್ ಮಾಡಲು ಸಹ ಬರದಂತೆ ಕಣ್ಣು ಕಾಣಿಸಲ್ಲ. ಹೀಗಿದ್ದ ಮೇಲೆ ನಮಗೆ ದೂರದ ಸ್ಥಳಕ್ಕೆ ನಿಯೋಜನೆ ಮಾಡಲಾಗಿದೆ. ಹೀಗಾದರೆ ಸಮೀಕ್ಷೆ ಮಾಡುವುದು ಹೇಗೆ ಎಂದು ಅಳಲು…
ಬೆಂಗಳೂರು : ಮಹಿಳೆಯೋರ್ವಳು ಪ್ರಿಯಕರನಿಗೆ ತನ್ನ ಸ್ನೇಹಿತೆಯನ್ನು ಪರಿಚಯಿಸಿದ್ದು ಈ ವೇಳೆ ಆತ ಮಹಿಳೆಯ ಸ್ನೇಹಿತೆಯನ್ನು ಪ್ರೀತಿಯ ಬಲೆಯಲ್ಲಿ ಬೀಳಿಸಿ ಓಯೋ ರೂಂಗೆ ಕರೆದುಕೊಂಡು ಹೋಗಿದ್ದಾನೆ. ಈ ವಿಷಯ ತಿಳಿದು ಮಹಿಳೆ ಅವರಿಬ್ಬರೂ ಇರುವ ಲಾಡ್ಜ್ ಗೆ ತೆರಳಿ ಗಲಾಟೆ ಮಾಡಿದ್ದಾಳೆ. ಆಗ ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಯಶೋಧ ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಆತ್ಮಹತ್ಯೆಗೂ ಮುನ್ನ ತನ್ನ ಪ್ರಿಯತಮ ಬೇರೊಂದು ಮಹಿಳೆಯೊಂದಿಗೆ ಇದ್ದ ಓಯೋ ರೂಂ ಮೇಲೆ ದಾಳಿ ಮಾಡಿ ಗಲಾಟೆ ಮಾಡಿದ್ದಳು. ಗಲಾಟೆಗೆ ಪ್ರಿಯತಮ ವಿಶ್ವನಾಥ್ ಸರಿಯಾಗಿ ರೆಸ್ಪಾನ್ಸ್ ಮಾಡಿದಿದ್ದಾಗ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಮೃತ ಯಶೋಧಗೆ ಗಂಡ ಇಬ್ಬರು ಮಕ್ಕಳಿದ್ದರು. ಹೀಗಿದ್ದರೂ, ಆಕೆ ಪಕ್ಕದ ಏರಿಯಾದ ಮನೆಯಲ್ಲಿ ಆಡಿಟರ್ ಆಗಿದ್ದ ವಿಶ್ವನಾಥ್ ಎಂಬಾತನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಳು. ಕಳೆದ 9 ವರ್ಷಗಳಿಂದ ಇಬ್ಬರೂ ಅಕ್ರಮ ಸಂಬಂಧ ಹೊಂದಿದ್ದರು. ಆದರೆ, ಇತ್ತೀಚೆಗೆ ಯಶೋಧ ತನ್ನ ಸ್ನೇಹಿತೆಯೊಬ್ಬರನ್ನು ಪ್ರಿಯಕರನಿಗೆ ಪರಿಚಯಿಸಿದ್ದರು. ಪ್ರಿಯಕರ ಯಶೋಧ ಸ್ನೇಹಿತೆ…
ಮೈಸೂರು : ಜಂಬೂ ಸವಾರಿ ಆರಂಭಕ್ಕೂ ಮುನ್ನ ನಡೆದ ವೈಭವದ ದಸರಾ ಮೆರವಣಿಗೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಂಪುಟ ಸಚಿವರೊಂದಿಗೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಮತ್ತು ಸಮಾಜ ಕಲ್ಯಾಣ ಸಚಿವ ಡಾ. ಎಚ್.ಸಿ. ಮಹದೇವಪ್ಪ ಅವರ ಮೊಮ್ಮಗ ಕಾಣಿಸಿಕೊಂಡ ವಿಚಾರವಾಗಿ ಸಚಿವ HC ಮಹದೇವಪ್ಪ ಇದೀಗ ಸ್ಪಷ್ಟನೆ ನೀಡಿದ್ದಾರೆ ಮೈಸೂರಿನಲ್ಲಿ ಮಾತನಾಡಿದ ಅವರು, ಸಿಎಂ ಪರೇಡ್ ವೇಳೆ ಮಹದೇವಪ್ಪ ಮೊಮ್ಮಗ ಕಾಣಿಸಿಕೊಂಡ ವಿಚಾರವಾಗಿ ಈ ಕುರಿತು, ಅಲ್ಲಿ ಯಾವ ಪ್ರೋಟೋಕಾಲ್ ಕೂಡ ಉಲ್ಲಂಘನೆಯಾಗಿಲ್ಲ ಅದು ಪ್ರೋಟೋಕಾಲ್ ವ್ಯಾಪ್ತಿಗೆ ಬರುವುದೇ ಇಲ್ಲ. ಪರೇಡ್ ಅಲ್ಲ ಮತ್ತು ಅಲ್ಲಿ ಯಾವ ಧ್ವಜ ವಂದನೆಯೂ ಇರಲಿಲ್ಲ. ಕೇವಲ ಜನರಿಗೆ ವಂದನೆ ಸಲ್ಲಿಸಲು ಎಲ್ಲರೂ ಒಟ್ಟಾಗಿ ಹೋಗಿದ್ದೆವು. ಆಚರಣೆ ಬಗ್ಗೆ ಗೊತ್ತಿಲ್ಲದವರು ಈ ರೀತಿ ಸುದ್ದಿ ಹಬ್ಬಿಸುತ್ತಾರೆ ಅಷ್ಟೇ ಎಂದು ಮೈಸೂರಿನಲ್ಲಿ ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್ ಸಿ ಮಹದೇವಪ್ಪ ಸ್ಪಷ್ಟಪಡಿಸಿದರು.