Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : BMRCL ಬೆಂಗಳೂರಿನ ನಮ್ಮ ಮೆಟ್ರೋ ಪ್ರಯಾಣಿಕರಿಗೆ ಇದೀಗ ಬಿಗ್ ಶಾಕ್ ನೀಡಲು ಮುಂದಾಗಿದೆ. ಈಗಾಗಲೇ ನಮ್ಮ ಮೆಟ್ರೋ ಪ್ರಯಾಣದ ಟಿಕೆಟ್ ದರ ಏರಿಕೆ ಮಾಡಿರುವ ಬಿಎಮ್ಆರ್ಸಿಎಲ್ ಮತ್ತೆ ಟಿಕೆಟ್ ಪ್ರೈಸ್ ಏರಿಸಲು ಇದೀಗ ಚಿಂತನೆ ನಡೆಸುತ್ತಿದೆ ಎಂದು ತಿಳಿದು ಬಂದಿದೆ. ಹೌದು ನಮ್ಮ ಮೆಟ್ರೋ ದರ ಏರಿಕೆಯಾಗುವ ಸಾಧ್ಯತೆಯಿದೆ. ಫೆಬ್ರವರಿಯಿಂದ ನಮ್ಮ ಮೆಟ್ರೋ ದರವನ್ನು ಏರಿಕೆ ಮಾಡಲು BMRCL ಮುಂದಾಗಿದೆ.2025 ರಲ್ಲಿ 71% ದರವನ್ನು ಏರಿಕೆ ಮಾಡಲಾಗಿತ್ತು. ಆದರೆ ಈಗ 5% ದರ ಏರಿಕೆಗೆ ಸಿದ್ಧತೆ ನಡೆಯುತ್ತಿದೆ. ಶುಲ್ಕ ನಿಗದಿ ಸಮಿತಿ (FFC) ಪ್ರತಿ ವರ್ಷ ಟಿಕೆಟ್ ಶುಲ್ಕದಲ್ಲಿ 5% ರಷ್ಟು ಹೆಚ್ಚಳವನ್ನು ಸೂಚಿಸಿದ ಕಾರಣ ಏರಿಕೆಯಾಗಲಿದೆ. ಕಳೆದ ವರ್ಷ 71% ದರವನ್ನು ಏರಿಕೆ ಮಾಡಿ ಜನರ ಕೆಂಗಣ್ಣಿಗೆ ಗುರಿಯಾಗಿ ದೇಶದ ಅತ್ಯಂತ ದುಬಾರಿ ಸೇವೆ ನೀಡುವ ಸಂಸ್ಥೆಯಾಗಿ ಹೊರಹೊಮ್ಮಿತ್ತು. ಇದೀಗ ಮೆಟ್ರೋ ರೈಲು ನಿರ್ವಹಣೆ ಕಾಯ್ದೆ 2002 ರ 33 ರ ಅಡಿಯಲ್ಲಿ ಕಾನೂನುಬದ್ಧವಾಗಿ ಬದ್ಧವಾಗಿರುವ FFC…
ಬೆಂಗಳೂರು : ಕನ್ನಡ ಚಲನಚಿತ್ರ ನಿರ್ಮಾಪಕರಾದ 2026-28ನೇ ಸಾಲಿನ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಎಂ.ಜಿ. ರಾಮಮೂರ್ತಿರವರು ಆಯ್ಕೆಯಾಗಿದ್ದಾರೆ. ಈ ಸಂದರ್ಭದಲ್ಲಿ ಮುಖ್ಯ ಚುನಾವಣೆ ಅಧಿಕಾರಿಗಳು ಸಂಜೀವ್ ಸಹಾಯಕ ಚುನಾವಣೆ ಅಧಿಕಾರಿ ಶ್ರೀನಿವಾಸ್ ರವರು ಪ್ರಮಾಣಪತ್ರ ನೀಡಿದರು. ಅಧ್ಯಕ್ಷರಾದ ಎಂ.ಜಿ.ರಾಮಮೂರ್ತಿ. ನಂದಿಯಾಳ್ ಎಸ್ ಜೆ. ಬಾಮ ಗಿರೀಶ್. ಆರ್ ಎಸ್ ಗೌಡ್ರು. ರಮೇಶ್ ಯಾದವ್ ರವರು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಎಂ.ಜಿ.ರಾಮಮೂರ್ತಿರವರು ಮಾತನಾಡಿ ಕನ್ನಡ ಚಲನಚಿತ್ರ ಮೇರುನಟ ಡಾ||ರಾಜ್ ಕುಮಾರ್ ರವರು ನಿರ್ಮಾಪಕರನ್ನ ಅನ್ನದಾತರು ಎಂದು ಕರೆಯುತ್ತಿದ್ದಾರೆ. ನಿರ್ಮಾಪಕ ಉಳಿದರೆ ಕನ್ನಡ ಚಿತ್ರರಂಗ ಉಳಿಯುತ್ತದೆ. ನಿರ್ಮಾಪಕ ಹಾಕಿದ ಹಣ ವಾಪಸ್ಸು ಬರಬೇಕು. ಕೆಲವು ನಿರ್ಮಾಪಕರು ಆರ್ಥಿಕವಾಗಿ ಸಂಕಷ್ಟದಲ್ಲಿ ಇದ್ದಾರೆ ಅವರನ್ನ ಗುರುತಿಸಿ ನಿರ್ಮಾಪಕರ ಸಂಘದಿಂದ ಆರ್ಥಿಕವಾಗಿ ಸಹಾಯ ಮಾಡಬೇಕು ಎಂಬ ಉದ್ದೇಶವಿದೆ. ಕನ್ನಡ ಚಲನಚಿತ್ರ ಅನ್ಯ ಭಾಷೆಗಳ ನಡುವೆ ಪೈಪೋಟಿ ಇದೆ, ಕನ್ನಡ ಚಿತ್ರಗಳಿಗೆ ಜನರು ಚಿತ್ರಮಂದಿರಕ್ಕೆ ಬಂದು ನೋಡಿ, ನಿರ್ಮಾಪಕ, ನಿರ್ದೇಶಕ ಮತ್ತು ನಟ, ನಟಿ ಕಲಾವಿದರಿಗೆ ಪ್ರೋತ್ಸಾಹ ನೀಡಬೇಕು ಎಂದು ಹೇಳಿದರು.
ಬೀದರ್ : ಹೈದರಾಬಾದ್ನ ಕಟ್ಟಾ ಮೈಸಮ್ಮ ದೇವಸ್ಥಾನದಲ್ಲಿ ಬೀದರ್ ಮೂಲದ ಯುವಕನೊಬ್ಬ ಮೂತ್ರ ವಿಸರ್ಜಿಸಿ ವಿಕೃತಿ ಮೆರೆದಿದ್ದಾನೆ. ಈ ಘಟನೆಗೆ ಸಂಬಂಧಿಸಿದಂತೆ ಆತನನ್ನು ಬಂಧಿಸಲಾಗಿದ್ದು, ಹಿಂದೂಪರ ಸಂಘಟನೆಗಳು ಮತ್ತು ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿವೆ. ಹೌದು ಕರ್ನಾಟಕದ ಬೀದರ್ ಮೂಲದ 26 ವರ್ಷದ ವ್ಯಕ್ತಿಯೊಬ್ಬ ಹೈದರಾಬಾದ್ನ ಕಟ್ಟಾ ಮೈಸಮ್ಮ ದೇವಸ್ಥಾನ ಪ್ರವೇಶಿಸಿ ಆವರಣದಲ್ಲೇ ಮೂತ್ರ ವಿಸರ್ಜಿಸಿ ವಿಕೃತಿ ಮೆರೆದಿರುವ ಘಟನೆ ನಡೆದಿದೆ. ಈ ಸಂಬಂಧ ಆತನನ್ನು ಭಕ್ತರು ಥಳಿಸಿದ್ದು, ಬಳಿಕ ಪೊಲೀಸರು ಬಂಧಿಸಿದ್ದಾರೆ. ಸಫಿಲ್ಗುಡದಲ್ಲಿರುವ ಕಟ್ಟಾ ಮೈಸಮ್ಮ ದೇವಸ್ಥಾನವನ್ನು ಅಕ್ರಮವಾಗಿ ಪ್ರವೇಶಿಸಿದ 26 ವರ್ಷದ ಅಲ್ತಾಫ್ ಈ ಕೃತ ಎಸಗಿದಾತ. ಆತ ಮೂತ್ರ ವಿಸರ್ಜನೆ ಮಾಡುತ್ತಿದ್ದನ್ನು ಗಮನಿಸಿದ ಕೆಲವರು ಆತನನ್ನು ಈ ಬಗ್ಗೆ ಪ್ರಶ್ನಿಸಿದ್ದಾರೆ. ಮಾತ್ರವಲ್ಲದೇ ಆಕ್ರೋಶಗೊಂಡು ಥಳಿಸಿದ್ದಾರೆ. ಇದರ ವಿಡಿಯೋ, ಇಂಟರ್ನೆಟ್ನಲ್ಲಿ ವೈರಲ್ ಆಗಿದೆ. ಘಟನೆ ಬೆನ್ನಲ್ಲೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಆತನನ್ನು ಬಂಧಿಸಿದ್ದು, ಬಿಎನ್ಎಸ್ ಕಾನೂನಿನಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬಳ್ಳಾರಿ : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಈ ಹಿಂದೆ ಬಿಜೆಪಿ ಪಾದಯಾತ್ರೆ ನಡೆಸಿತ್ತು. ಇದೀಗ ಬಳ್ಳಾರಿ ಗಲಭೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಿಜೆಪಿ ಪಾದಯಾತ್ರೆ ಬಹುತೇಕ ಫಿಕ್ಸ್ ಅಂತ ಹೇಳಲಾಗುತ್ತಿದೆ ಈ ಬಾರಿ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಬಳ್ಳಾರಿ ಪಾದಯಾತ್ರೆ, ಬಿಜೆಪಿ ಹಮ್ಮಿಕೊಂಡಿದೆ. ಬಿಜೆಪಿ ನಾಯಕರ ಪಾದಯಾತ್ರೆಯ ಕಾರ್ಯಕ್ರಮ ಬಹುತೇಕ ಪಕ್ಕ ಎಂದು ಹೇಳಲಾಗುತ್ತಿದೆ ಬಳ್ಳಾರಿಯಲ್ಲಿ ಇಂದು ಬಿಜೆಪಿ ನಾಯಕರಿಂದ ಸುದ್ದಿಗೋಷ್ಠಿ ನಡೆಯಲಿದೆ ರಿಪಬ್ಲಿಕ್ ಆಫ್ ಬಳ್ಳಾರಿ ಆರೋಪದ ಅಡಿ ಸಿಎಂ ಸಿದ್ದರಾಮಯ್ಯ ಪಾದಯಾತ್ರೆ ಮಾಡಿದ್ದರು. ಇಂದು ಸಿದ್ದರಾಮಯ್ಯ ಸರ್ಕಾರದ ವಿರುದ್ಧವೇ ರಿಪಬ್ಲಿಕ್ ಆಫ್ ಬಳ್ಳಾರಿ ಅಸ್ತ್ರ ಉಪಯೋಗಿಸಲು ಬಿಜೆಪಿ ಸಿದ್ಧತೆ ಮಾಡಿಕೊಂಡಿದೆ.
ಪೂರ್ವಜರು ಅಥವಾ ಹಿರಿಯರು ತಾವು ಕಷ್ಟಪಟ್ಟು ದುಡಿದ ಹಣವನ್ನು ಸುರಕ್ಷಿತಗೊಳಿಸಲು ಹಿಂದಿನ ಕಾಲದಲ್ಲಿ ಹೂತಿಡುತ್ತಿದ್ದರು, ಆದರೆ ಆ ನಿಧಿ ಎಲ್ಲಿರುತ್ತದೆ ಎಂಬುದು ಈಗಿನ ಕಾಲದವರಿಗೆ ತಿಳಿದಿರುವುದಿಲ್ಲ. ಹಾಗಾದರೆ ಅಕ್ಕಪಕ್ಕದಲ್ಲಿರುವ ನಿಧಿಯನ್ನು ಯಾವ ಉಪಾಯದಿಂದ ತಿಳಿದುಕೊಳ್ಳಬಹುದು ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ಕೊಳ್ಳೇಗಾಲದ ಪುರಾತನ ಪೂಜೆಗಳು ಮತ್ತು ಕೇರಳದ ಕುಟ್ಟಿಚಾತನ್ ಪೂಜಾ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 5 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ…
ಬೆಂಗಳೂರು : ಕಳೆದ ಕೆಲವು ದಿನಗಳ ಹಿಂದೆ ಎಸ್ ಎಸ್ ಎಲ್ ಸಿ ಪೂರ್ವ ಸಿದ್ಧತಾ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಶ್ನೆ ಪತ್ರಿಕೆ ಲೀಕ್ ಮಾಡಿದ ಶಿಕ್ಷಕರು ಮತ್ತು ವಿದ್ಯಾರ್ಥಿಗಳನ್ನು ಇದೀಗ ಬಂಧಿಸಲಾಗಿದೆ. ಶಿಕ್ಷಕರು ವಿದ್ಯಾರ್ಥಿಗಳು ಸೇರಿದಂತೆ 8 ಜನರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ತುಮಕೂರು, ರಾಮನಗರ, ಕಲ್ಬುರ್ಗಿ ಜಿಲ್ಲೆಯ ಶಾಲೆಗಳ ಶಿಕ್ಷಕರು ಹಾಗೂ ಕೆಲವು ವಿದ್ಯಾರ್ಥಿಗಳು ಅರೆಸ್ಟ್ ಆಗಿದ್ದಾರೆ. ಬೆಂಗಳೂರು ಉತ್ತರ ವಿಭಾಗದ ಸೆನ್ ಠಾಣೆಯಲ್ಲಿ ಈ ಒಂದು ಪ್ರಕರಣ ದಾಖಲಾಗಿತ್ತು. ಹಿಂದಿ ವಿಷಯದ ಪ್ರಶ್ನೆ ಪತ್ರಿಕೆ ಯೂಟ್ಯೂಬ್ ನಲ್ಲಿ ಹರಿದಾಡಿತ್ತು. ಈ ಸಂಬಂಧ ಇದೀಗ ಪೊಲೀಸರು ಶಿಕ್ಷಕರು ಹಾಗೂ ವಿದ್ಯಾರ್ಥಿಗಳನ್ನು ಅರೆಸ್ಟ್ ಮಾಡಿದ್ದಾರೆ. ಹಿಂದಿ ವಿಷಯದ ಪ್ರಶ್ನೆ ಪತ್ರಿಕೆ ಯೂಟ್ಯೂಬ್ ನಲ್ಲಿ ಹರಿದಾಡಿತ್ತು ಈ ಬಗ್ಗೆ ಪದವಿ ಪೂರ್ವ ಶಿಕ್ಷಣ ಇಲಾಖೆ ಅಧಿಕಾರಿ ದೂರು ನೀಡಿದ್ದರು ಪೊಲೀಸರ ತನಿಖೆ ವೇಳೆ ಪ್ರಶ್ನೆ ಪತ್ರಿಕೆ ಲೀಕ್ ಆಗಿರುವುದು ಬಯಲಾಗಿದೆ. ತುಮಕೂರು ಶಾಲೆಯೊಂದರ ಮುಖ್ಯೋಪಾಧ್ಯಾಯ ವಿಡಿ ಗಿರೀಶ್…
ಬೆಂಗಳೂರು : ಬೆಂಗಳೂರಿನಲ್ಲಿ ಮಹಿಳಾ ಟೆಕ್ಕಿ ನಿಗೂಢ ಸಾವು ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಮಂಗಳೂರು ಮೂಲದ ಮಹಿಳಾ ಟೆಕ್ಕಿ ಶರ್ಮಿಳ (34) ಕೊಲೆ ಆಗಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಘಟನೆಗೆ ಸಂಬಂಧಿಸಿದಂತೆ ಕೇರಳ ಮೂಲದ ಕರ್ನಲ್ ಕುರೈ ಎಂಬ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಆದರೆ ಬಂಧಿತ ಆರೋಪಿ ಶರ್ಮಿಳ ಮೇಲೆ ಅತ್ಯಾಚಾರ ಮಾಡಿರುವ ಶಂಕೆ ವ್ಯಕ್ತವಾಗಿದೆ. ಹೌದು ರಾಮಮೂರ್ತಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿತ್ತು. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಮೂಲದ ಟೆಕ್ಕಿ ಶರ್ಮಿಳಾ ಹತ್ಯೆಯಾಗಿದೆ. ಕೊಲೆಯಾದ ಶರ್ಮಿಳ ಬೆಂಗಳೂರಿನ ಪ್ರತಿಷ್ಠಿತ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ರಾಮಮೂರ್ತಿ ನಗರದ ಸುಬ್ರಮಣ್ಯ ಲೇಔಟ್ ನಲ್ಲಿ ಶರ್ಮಿಳಾ ವಾಸವಿದ್ದರು . ಕೇರಳ ಮೂಲದ ಆರೋಪಿ ಕರ್ನಲ್ ಕುರೈನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. BNS ಸೆಕ್ಷನ್ 103, 64/2, 67, 238 ಅಡಿ ಕೆ ಎಸ್ ದಾಖಲಿಸಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಶರ್ಮಿಳಾ ವಾಸವಿದ್ದ ಪಕ್ಕದ…
ಬಳ್ಳಾರಿ : ಬಳ್ಳಾರಿಯಲಿ ಬ್ಯಾನರ್ ಕಟ್ಟುವ ವಿಚಾರವಾಗಿ ಗಲಾಟೆ ನಡೆದು ಘರ್ಷಣೆಯ ವೇಳೆ ಫೈರಿಂಗ್ ಆಗಿ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಸಾವನಪ್ಪಿದ್ದ. ಇದೀಗ ರಾಜ್ಯ ಸರ್ಕಾರ ಈ ಒಂದು ಪ್ರಕರಣವನ್ನು ಸಿಐಡಿ ಗೆ ಹಸ್ತಾಂತರಿಸಿದ್ದು ಸಿಐಡಿ ಅಧಿಕಾರಿಗಳು ಇದೀಗ ತನಿಖೆ ಚುರುಕುಗಳಿಸಿದ್ದಾರೆ. ವಿಡಿಯೋ ಫೋಟೋ ಆಧರಿಸಿ, 40 ಜನರಿಗೆ ನೋಟಿಸ್ ನೀಡಿ ವಿಚಾರಣೆಗೆ ಕರಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ ಹೌದು ಬಳ್ಳಾರಿ ಗಲಭೆ ಪ್ರಕರಣದ ಸಿಐಡಿ ಅಧಿಕಾರಿಗಳ ತನಿಖೆ ಚುರುಕುಗೊಳಿಸಿದ್ದಾರೆ. ಇಡೀ ಘಟನೆಯ ಬಗ್ಗೆ ಸಿಐಡಿ ಅಧಿಕಾರಿಗಳು ಮಾಹಿತಿ ಪಡೆದಿದ್ದಾರೆ. ವಿಡಿಯೋ ಹಾಗೂ ಘಟನಾ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದಾರೆ. ಸಿಐಡಿ ಎಸ್ ಪಿ ಡಾ. ಹರ್ಷ ಪ್ರಿಯಂವದ ನೇತೃತ್ವದಲ್ಲಿ ತನಿಖೆ ಚುರುಕುಗೊಳಿಸಲಾಗಿದೆ. ಪೊಲೀಸರಿಂದ ನಾಲ್ಕು ಪ್ರಕರಣಗಳ ಫೈಲ್ಗಳನ್ನು ಸಿಐಡಿ ಅಧಿಕಾರಿಗಳು ಪಡೆದಿದ್ದಾರೆ ಎಂದು ತಿಳಿದುಬಂದಿದೆ. ಗಲಾಟೆ ಸಂದರ್ಭದಲ್ಲಿ ವಿಡಿಯೋದಲ್ಲಿ ಕಾಣಿಸಿಕೊಂಡ ವ್ಯಕ್ತಿಗಳಿಗೆ ನೋಟಿಸ್ ನೀಡುವ ಸಾಧ್ಯತೆ ಇದೆ ಈಗಾಗಲೇ ಸಿಐಡಿ ಅಧಿಕಾರಿಗಳು ಸುಮಾರು 40ಕ್ಕೂ ಹೆಚ್ಚು ಜನರ…
ಇಎಸ್-ಎನ್1 ಭೂ ವೀಕ್ಷಣಾ ಉಪಗ್ರಹ ಮತ್ತು ಇತರ 14 ಪೇಲೋಡ್ಗಳನ್ನು ಬಾಹ್ಯಾಕಾಶಕ್ಕೆ ನಿಯೋಜಿಸುವ ಪಿಎಸ್ಎಲ್ವಿ ಸಿ 62 ಮಿಷನ್ ನೊಂದಿಗೆ ಇಸ್ರೋ ತನ್ನ 2026 ರ ಉಡಾವಣಾ ಕ್ಯಾಲೆಂಡರ್ ಅನ್ನು ಜನವರಿ 12 ರಂದು ಪ್ರಾರಂಭಿಸಲಿದೆ.ಇಸ್ರೋದ ವಾಣಿಜ್ಯ ವಿಭಾಗವಾದ ನ್ಯೂಸ್ಪೇಸ್ ಇಂಡಿಯಾ ಲಿಮಿಟೆಡ್ (ಎನ್ಎಸ್ಐಎಲ್) ಕೈಗೊಂಡ ಇತರ 14 ಸಹ-ಪ್ರಯಾಣಿಕ ಉಪಗ್ರಹಗಳು ದೇಶೀಯ ಮತ್ತು ಸಾಗರೋತ್ತರ ಗ್ರಾಹಕರಿಗೆ ಸೇರಿವೆ. “ವಾಹನ ಮತ್ತು ಉಪಗ್ರಹಗಳ ಏಕೀಕರಣ ಪೂರ್ಣಗೊಂಡಿದೆ ಮತ್ತು ಉಡಾವಣಾ ಪೂರ್ವ ತಪಾಸಣೆಗಳು ಪ್ರಗತಿಯಲ್ಲಿವೆ. ಪಿಎಸ್ಎಲ್ವಿ-ಸಿ 62 ಮಿಷನ್ ಜನವರಿ 12 ರಂದು ಬೆಳಿಗ್ಗೆ 10.17 ಕ್ಕೆ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದ ಮೊದಲ ಉಡಾವಣಾ ವೇದಿಕೆಯಿಂದ ಉಡಾವಣೆ ಮಾಡಲು ಉದ್ದೇಶಿಸಲಾಗಿದೆ ಎಂದು ಇಸ್ರೋ ಶನಿವಾರ ತಿಳಿಸಿದೆ. ಪಿಎಸ್ಎಲ್ವಿಯ 64 ನೇ ಹಾರಾಟವಾಗಲಿರುವ ಮಿಷನ್ಗಾಗಿ ಜನವರಿ 11 ರಂದು 25 ಗಂಟೆಗಳ ಕ್ಷಣಗಣನೆ ಪ್ರಾರಂಭವಾಗಲಿದೆ. ಭೂ ವೀಕ್ಷಣಾ ಉಪಗ್ರಹವನ್ನು ಥೈಲ್ಯಾಂಡ್ ಮತ್ತು ಯುನೈಟೆಡ್ ಕಿಂಗ್ಡಮ್ ಜಂಟಿಯಾಗಿ ನಿರ್ಮಿಸಿದೆ ಎಂದು ಇಸ್ರೋ ತಿಳಿಸಿದೆ.…
ಬೆಂಗಳೂರು : ಇತ್ತೀಚಿಗೆ ಈ ಒಂದು AI ಎನ್ನುವ ಆಪ್ ನಿಂದ ನಮಗೆ ಯಾವ ರೀತಿ ಬೇಕು ಆ ರೀತಿ ವಿಡಿಯೋ ಎಡಿಟ್ ಮಾಡಿಕೊಳ್ಳಬಹುದು. ಆದರೆ ಈ ಒಂದು ಆಪ್ ಒಳ್ಳೆಯದಕ್ಕಿಂತ ದುರುಪಯೋಗಕ್ಕೆ ಹೆಚ್ಚಾಗಿ ಬಳಸಲಾಗುತ್ತಿದೆ. ಇದೀಗ AI ಯುವತಿಯನ್ನು ನಂಬಿ ಯುವಕನೊಬ್ಬ ಬೆತ್ತಲೆಯಾಗಿ 1.5 ಲಕ್ಷ ಕಳೆದುಕೊಂಡಿರುವ ಘಟನೆ ನಡೆದಿದೆ. ಹೌದು ಡೇಟಿಂಗ್ ಆ್ಯಪ್ನಲ್ಲಿ ನಕಲಿ ಪ್ರೊಫೈಲ್ ಸೃಷ್ಟಿಸಿದ ಕಿಡಿಗೇ ಡಿಗಳು, ಯುವಕನಿಗೆ ವಿಡಿಯೋ ಕಾಲ್ ಮಾಡಿ ಬೆತ್ತಲೆ ಗೊಳಿಸಿ ಬ್ಲ್ಯಾಕ್ಮೇಲ್ ಮಾಡಿ ಒಂದೂವರೆ ಲಕ್ಷ ರು. ಸುಲಿಗೆ ಮಾಡಿದ್ದಾರೆ. ಈ ಸಂಬಂಧ 26 ವರ್ಷದ ಯುವಕ ಕೇಂದ್ರ ವಿಭಾಗದ ಸೆನ್ ಠಾಣೆಯಲ್ಲಿ ದೂರು ನೀಡಿದ್ದಾನೆ. ಈಜಿಪುರದಲ್ಲಿ ವಾಸವಾಗಿರುವ ಯುವಕ, ಖಾಸಗಿ ಕಂಪನಿಯಲ್ಲಿ ಕೆಲಸ ಮಾಡಿಕೊಂಡಿದ್ದಾನೆ. ಜ.5 ರಂದು ಡೇಟಿಂಗ್ ಆ್ಯಪ್ನಲ್ಲಿ ಪ್ರೊಫೈಲ್ ರಚಿಸಿದ ತಕ್ಷಣ ಇಶಾನಿ ಎಂಬ ಯುವತಿಯಿಂದ ರಿಕ್ವೆಸ್ಟ್ ಬಂದಿದೆ. ಬಳಿಕ ಪರಿಚಯ ಮಾಡಿಕೊಂಡು ಇಬ್ಬರು ಕೂಡ ಏಕಾಂತವಾಗಿ ಮಾತನಾ ಡಲು ಶುರು ಮಾಡಿದ್ದರು. ಖಾಸಗಿ ವಿಚಾರಗಳನ್ನು…














