Author: kannadanewsnow05

ಹಾಸನ : ಹಾಸನ ಜಿಲ್ಲೆಯಲ್ಲಿ ಮಳೆಯ ಆರ್ಭಟಕ್ಕೆ ಭಾರಿ ಅವಾಂತರ ಸೃಷ್ಟಿಯಾಗಿದ್ದು, ನಿಯಂತ್ರಣ ತಪ್ಪಿ ಮೀನು ಸಾಗಿಸುತ್ತಿದ್ದ ಲಾರಿ ಒಂದು ಪಲ್ಟಿಯಾಗಿದೆ. ಹಾಸನ ಜಿಲ್ಲೆಯ ರಾಟೆ ಮನೆ ಬಳಿ ಈ ಒಂದು ಅಪಘಾತ ನಡೆದಿದೆ. ಮಂಗಳೂರಿನಿಂದ ಬೆಂಗಳೂರಿಗೆ ಮೀನು ಸಾಗಿಸುತ್ತಿದ್ದ ಲಾರಿ ಪಲ್ಟಿಯಾಗಿದೆ. KA-20 AB-4796 ನಂಬರಿನ ಲಾರಿ ಅಪಘಾತವಾಗಿದ್ದು, ಕೆಲ ಕಾಲ ಸಂಚಾರ ದಟ್ಟಣೆ ಉಂಟಾಗಿತ್ತು ಈ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಚಾಲಕನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಅದೃಷ್ಟವಶಾತ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

Read More

ಬೆಂಗಳೂರು : ರಾಜ್ಯದಲ್ಲಿ ಇದೀಗ ಕೊರೊನಾ ಸೋಂಕು ಏರಿಕೆ ಆಗುತ್ತಿದ್ದು, ಈಗಾಗಲೇ ಇಂದಿನಿಂದಲೇ ರಾಜ್ಯದ 8 ಮೆಡಿಕಲ್ ಕಾಲೇಜುಗಳಲ್ಲಿ ಕೊರೋನ ಟೆಸ್ಟ್ ನಡೆಸಲಾಗುತ್ತಿದೆ. ಇದರ ಬೆನ್ನಲ್ಲೇ ಬೆಂಗಳೂರಿನಲ್ಲಿ ನಿನ್ನೆ ಸೋಂಕಿಗೆ ವೃದ್ಧರೊಬ್ಬರು ಸಾವನ್ನಪ್ಪಿದ್ದರು. ಇದೀಗ ಬೆಂಗಳೂರಿನಲ್ಲಿ ಮತ್ತೆ ಎರಡು ಕೊರೊನ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಹೌದು ಬೆಂಗಳೂರಲ್ಲಿ ಮತ್ತೆ ಎರಡು ಕೊರೊನ ಪೊಸಿಟೀವ್ ಕೇಸ್ ಪತ್ತೆಯಾಗಿದ್ದು, ಮಲ್ಲೇಶ್ವರಂ ಮತ್ತು ರಾಜಾಜಿನಗರದಲ್ಲಿ ಇಬ್ಬರಿಗೆ ಕೊರೊನ ಪೋಸಿಟಿವ್ ವರದಿ ಬಂದಿದೆ. 38 ವರ್ಷದ ಯುವಕ ಮತ್ತು 45 ವರ್ಷದ ವ್ಯಕ್ತಿಗಳಿಗೆ ಇದೀಗ ಕೊರೊನಾ ಪಾಸಿಟಿವ್ ವರದಿ ಬಂದಿದೆ. ಟ್ರಾವೆಲ್ ಹಿಸ್ಟರಿ ಇಲ್ಲದೆ ಇಬ್ಬರಿಗೂ ಇದೀಗ ಕೊರೊನಾ ಸೋಂಕು ಒಕ್ಕರಿಸಿದೆ.ಹಾಗಾಗಿ ರಾಜ್ಯದಲ್ಲಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳು ಬಂದಿದ್ದು, ಇದೀಗ ಸೋಂಕಿತರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ.

Read More

ಬೆಂಗಳೂರು : ಅತ್ಯಾಚಾರದ ಪ್ರಕರಣದಲ್ಲಿ ಮಡೆನೂರು ಮನು ವಶಕ್ಕೆ ಪಡೆದ ಪ್ರಕರಣ ಸಂಬಂಧ ಈಗ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದು ವಿಷಯ ಗೊತ್ತಿದ್ದರೂ ಅತ್ಯಾಚಾರ ಸಂತ್ರಸ್ತರಿಗೆ ದೂರು ನೀಡದಂತೆ ತಡೆದಿದ್ದ ಕೆಲ ನಟ ನಟಿಯರನ್ನು ತನಿಖೆಗೆ ಒಳಪಡಿಸಲು ಪೊಲೀಸರು ಸಿದ್ಧತೆ ಮಾಡಿಕೊಂಡಿದ್ದಾರೆ ಹಾಗಾಗಿ ಕೆಲವು ಸಿನಿ ತಾರೆಯರಿಗೆ ಇದೀಗ ಭಯ ಶುರುವಾಗಿದೆ. ಅತ್ಯಾಚಾರ ಆರೋಪ ಹೊತ್ತಿರುವ ಮಡೇನೂರು ಮನು ಹಾಗೂ ಸಂತ್ರಸ್ತೆಯ ಇಬ್ಬರ ನಡುವಿನ 31 ತಿಂಗಳ ವಾಟ್ಸಾಪ್ ಚಾಟ್ ಈಗ ಪೊಲೀಸರು ಪಡೆದುಕೊಂಡಿದ್ದಾರೆ. ಸಂತ್ರಸ್ತ ಹಾಗೂ ನಟ ಮನು ಮದ್ಯ ಸಾವಿರಾರು ಸಂದೇಶಗಳ ವಿನಿಮಯವಾಗಿದ್ದು, 2022ರ ನವೆಂಬರ್ ಇಂದ 2025 ಮೇ ವರೆಗಿನ ವಾಟ್ಸಾಪ್ ಚಾಟ್ ಇದೀಗ ಪೊಲೀಸರು ಪಡೆದುಕೊಂಡಿದ್ದಾರೆ. ಮದುವೆ ಹೆಸರಿನಲ್ಲಿ ಅತ್ಯಾಚಾರ ಎಸಗಿ ದೈಹಿಕ ಹಲ್ಲೆ ಮಾಡಿದ್ದಾನೆ. ಜೀವ ಬೆದರಿಕೆ ಹಾಕಿದ್ದಾನೆ ಎಂದು ಸಂತ್ರಸ್ತೇ ದೂರಿನಲ್ಲಿ ಉಲ್ಲೆಖಿಸಿದ್ದಾರೆ. ನಟ ಮನುವನ್ನು ಕಸ್ಟಡಿಗೆ ಪಡೆದು ಇದೀಗ ಪೊಲೀಸರು ಹೇಳಿಕೆ ದಾಖಲಿಸಿದ್ದಾರೆ. ಮನುಗೆ ಸೇರಿದ ಎರಡು ಮೊಬೈಲ್ ಹಾಗೂ ಸಂತ್ರಸ್ತೇ ಎರಡು…

Read More

ಬೆಂಗಳೂರು : ನೈಋುತ್ಯ ಮುಂಗಾರು ಶನಿವಾರ ಕೇರಳ ಮತ್ತು ಕರ್ನಾಟಕ ಕರಾವಳಿಗೆ ಪ್ರವೇಶಿಸುವುದರೊಂದಿಗೆ, ಈ ಬಾರಿ ವಾಡಿಕೆಗಿಂತ ಒಂದು ವಾರ ಮುಂಚಿತವಾಗಿ ಮಳೆಗಾಲ ಆರಂಭವಾಗಿದೆ. 16 ವರ್ಷಗಳ ನಂತರ ಇಂತಹದ್ದೊಂದು ವಿಶೇಷ ದಾಖಲೆ ನಿರ್ಮಾಣವಾಗಿದೆ. ರಾಜ್ಯದಲ್ಲಿ ಒಂದು ವಾರಗಳ ಕಾಲ ವ್ಯಾಪಕ ಮಳೆಯಾಗುವ ಸಾಧ್ಯತೆಯಿದ್ದು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಮುಂಗಾರು ಅವಧಿಗೂ ಮುನ್ನವೇ ಆಗಮಿಸಿ ಬೇಸಿಗೆಯ ಬೇಗೆಗೆ ತೆರೆ ಎಳೆದಿದೆ. ಹೌದು ನೈಋುತ್ಯ ಮುಂಗಾರು ಶನಿವಾರ ಕೇರಳ ಮತ್ತು ಕರ್ನಾಟಕ ಕರಾವಳಿಗೆ ಪ್ರವೇಶಿಸುವುದರೊಂದಿಗೆ, ಈ ಬಾರಿ ವಾಡಿಕೆಗಿಂತ ಒಂದು ವಾರ ಮುಂಚಿತವಾಗಿ ಮಳೆಗಾಲ ಆರಂಭವಾಗಿದೆ. ಕೇರಳದಲ್ಲಿ ಒಂದು ವಾರ ಮುಂಚೆಯೇ ಮುಂಗಾರು ಮಳೆ ಆರಂಭವಾಗಲಿದೆ. ಜೂನ್ ಮೊದಲ ವಾರದಲ್ಲಿ ಮುಂಗಾರು ಮಳೆ ಆರಂಭವಾಗುತ್ತಿದ್ದು ಈ ಬಾರಿ ಒಂದು ವಾರದ ಮುಂಚೆಯೇ ಆರಂಭವಾಗಿದೆ. 2009ರಲ್ಲಿ ಮೇ 25ರಂದು ಕೇರಳಕ್ಕೆ ಮುಂಗಾರು ಪ್ರವೇಶವಾಗಿತ್ತು. ಹದಿನಾರು ವರ್ಷಗಳ ಹಿಂದೆ ಒಂದು ವಾರ ಮುಂಚೆ ಮುಂಗಾರು ಪ್ರವೇಶವಾಗಿತ್ತು. ವಿಶೇಷವೆಂದರೆ, ಕೇರಳಕ್ಕೆ ಪ್ರವೇಶಿಸಿ…

Read More

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559 ಸಾಮಾನ್ಯವಾಗಿ ಮನೆಯಲ್ಲಿ ನೈರುತ್ಯದಲ್ಲಿ ವಾಯುವ್ಯದಲ್ಲಿ ಪಶ್ಚಿಮದಲ್ಲಿ ದಕ್ಷಿಣದಲ್ಲಿ ಮಲಗುವ ಕೋಣೆಗಳು ಇರುವುದು ಸರ್ವೇಸಾಮಾನ್ಯ ಆದರೆ ಬಹಳಷ್ಟು ಮನೆಗಳಲ್ಲಿ ನಾವು ನೈರುತ್ಯದಲ್ಲಿ ಬೆಡ್ರೂಮ್ ಮಲಗು ಕೊಣೆ ಮಾಡಿದ್ದೇವೆ ಎನ್ನುವ ವಿಚಾರ ತಿಳಿಸುತ್ತಾರೆ ಹೊರತಾಗಿ ನೈರುತ್ಯದ ಪ್ರಭಾವ ಏನು ಎತ್ತ ಎನ್ನುವುದನ್ನು ಅರಿತುಕೊಂಡಿಲ್ಲ. ಈಗಾಗಲೇ ಈಶಾನ್ಯದ ಕೋಣೆಯನ್ನು ಮಲಗೋ ಕೋಣೆ ಅಥವಾ ಸ್ಟಡಿ ರೂಮ್ ಮಾಡಿದ್ದಲ್ಲಿ ಏನು ಎತ್ತ ಎನ್ನುವ ವಿಚಾರವನ್ನು ಈಗಾಗಲೇ ತಿಳಿಸಲಾಗಿದೆ ಆದರೆ ನೈರುತ್ಯ ಕೋಣೆಯನ್ನು ಮಕ್ಕಳಿಗಾಗಿ ಮೀಸಲಿರಿಸಿದ್ದಲ್ಲಿ ಅದು ಎಷ್ಟು ಸಮಂಜಸ ಅಥವಾ ಸೂಕ್ತ ಎಂಬುವುದನ್ನು ತಿಳಿಯೋಣ. ಮನೆಯ ವಾಸ್ತು ವಿಚಾರಕ್ಕೆ ಬಂದಾಗ ಶೀಘ್ರವಾಗಿ ಪರಿಣಾಮ ಮತ್ತು ಫಲಿತಾಂಶ ಏನಾದರೂ ಇದೆ ಅಂದಾಗ ಅದು ನೈರುತ್ಯದ ಭಾಗ ನೈರುತ್ಯದ ಭಾಗ ರಾಹು ರಾಕ್ಷಸತ್ವ ಮತ್ತು ಪೃಥ್ವಿ ತತ್ವಕ್ಕೆ ಸಂಬಂಧಪಟ್ಟಂತದ್ದು. ಸಾಮಾನ್ಯವಾಗಿ ಎಲ್ಲರೂ ತಿಳಿದಿರುವ ಹಾಗೆ ಮನೆಯ ಯಜಮಾನ ಮತ್ತು ಯಜಮಾನಿಯ…

Read More

ಬೆಳಗಾವಿ : ಕೋಡಿಮಠದ ಶ್ರೀಗಳು ಆಗಾಗ ದೇಶದ, ರಾಜ್ಯದ ಬಗ್ಗೆ ಭವಿಷ್ಯವನ್ನ ನುಡಿಯುತ್ತಲೇ ಇರುತ್ತಾರೆ. ಅದು ಯಾವಾಗಲೂ ನಿಜವಾಗಿದೆ ಕೂಡ. ಇದೀಗ ಮತ್ತೆ ಭವಿಷ್ಯ ನುಡಿದಿದ್ದಾರೆ. ಮತ್ತೆ ರಾಜಕೀಯ ಕುರಿತು ಭವಿಷ್ಯ ನುಡಿದಿದ್ದು, ಅನೇಕ ರಾಜಕೀಯ ಮುಖಂಡರಿಗೆ ಸಾವಿದೆ ಹಾಗೂ ಭಯವಿದೆ ಎಂದು ಹೇಳಿದ್ದಾರೆ. ಇನ್ನು ಕೊರೊನ ಸೋಂಕು ಕುರಿತು ಈಗಾಗಲೇ ಅಲ್ಲಲ್ಲಿ ಕೋವಿಡ್ ಪ್ರಕರಣಗಳು ಕಾಣಿಸಿಕೊಳ್ಳುತ್ತಿವೆ. ಈ ಸಂಬಂಧ ಈಗಾಗಲೇ ಜನರಿಗೆ ಆತಂಕ ಶುರುವಾಗಿದೆ. ಇದರ‌ನಡುವೆ ಕೋಡಿ ಮಠದ ಶ್ರೀಗಳು ಭವಿಷ್ಯ ನುಡಿದಿದ್ದಾರೆ. ಇನ್ನು ಐದು ವರ್ಷ ಮಹಾಮಾರಿ ಬೇರೆ ಬೇರೆ ರೂಪದಲ್ಲಿ ಇರಲಿದೆ. ಜನರು ಹುಷಾರಾಗಿ ಇರುವುದು ಒಳ್ಳೆಯದು. ಉಸಿರಾಟದ ತೊಂದರೆಯಾಗಿ ಸಾವು ಸಂಭವಿಸುವ ಸಾಧ್ಯತೆ ಇರಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ. ಲೋಕಕ್ಕೆ ವಾಯು ಹಾಗೂ ಜಲದಿಂದ ಗಂಡಾಂತರವಿದೆ. ಹಿಮಾಲಯ ಕರಗಿ ದೆಹಲಿವರೆಗೆ ತಲುಪುವ ಸಾಧ್ಯತೆ ಇದೆ. ಭೂಕಂಪಗಳು ಸಂಭವಿಸಲಿವೆ. ಮತೀಯ ಗಲಭೆಗಳು ಹೆಚ್ಚಾಗಲಿವೆ. ರಾಜಕೀಯವಾಗಿ ಅರಸನ ಮನೆಗೆ ಕಾರ್ಮೋಡ ಕವಿದಿತ್ತು. ಯುದ್ಧ ಭೀತಿ ಮತ್ತೆ ಆರಂಭವಾಗಲಿದೆ. ಜನರಲ್ಲಿ…

Read More

ಹಾಸನ : ವಿರಾಜಪೇಟೆ ಕಾಂಗ್ರೆಸ್​ ಶಾಸಕ ಪೊನ್ನಣ್ಣ ಅವರ ಆಪ್ತ ಸಹಾಯಕ ಮಹೇಂದ್ರ ಅವರ ಪತ್ನಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸರ್ಕಾರಿ ಶಾಲೆಯಲ್ಲಿ ಶಿಕ್ಷಕಿಯಾಗಿದ್ದ 35 ವರ್ಷದ ಶೃತಿ ಹಾಸನ ಜಿಲ್ಲೆಯ ಸಕಲೇಶಪುರ ಪಟ್ಟಣದ ಪಿಡಬ್ಲ್ಯೂಡಿ ಕ್ವಾಟರ್ಸ್‌ನಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆಲ ತಿಂಗಳುಗಳಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಶೃತಿ ಮನೆಯಲ್ಲಿಯೇ ವಿಷ ಸೇವಿಸಿದ್ದು ತೀವ್ರವಾಗಿ ಅಸ್ವಸ್ಥಗೊಂಡಿದ್ದರು. ಹೀಗಾಗಿ ಅವರನ್ನು ಹಾಸನದ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಖಿನ್ನತೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಸಕಲೇಶಪುರ ನಗರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಕಲ್ಗನೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಶಿಕ್ಷಕಿಯಾಗಿದ್ದ ಶೃತಿ ಹಾಸನ ಜಿಲ್ಲೆಯ ಸಕಲೇಶಪುರ ಪಟ್ಟಣದ ಪಿಡಬ್ಲ್ಯೂಡಿ ಕ್ವಾಟರ್ಸ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯದಲ್ಲೇ ಮೃತಪಟ್ಟಿದ್ದಾರೆ. ಆದ್ರೆ, ಆತ್ಮಹತ್ಯೆಗೆ ನಿಖರ ಕಾರಣ ನಿಗೂಢವಾಗಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಇದೀಗ ತನಿಖೆ ಕೈಗೊಂಡಿದ್ದಾರೆ.

Read More

ಮೈಸೂರು : ನಿನ್ನೆ ಮೈಸೂರು ಜಿಲ್ಲೆಯ ಎಚ್ ಡಿ ಕೋಟೆ ತಾಲೂಕಿನ ಬೂದನೂರು ಗ್ರಾಮದಲ್ಲಿ ಕೆರೆಗೆ ಹಾರಿ ಒಂದೇ ಕುಟುಂಬದ ಮೂರು ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಕುಟುಂಬಕ್ಕೆ ಕಾನೂನು ಪದವಿ ಓದುತ್ತಿದ್ದ ಹಿರಿಯ ಮಗಳ ತೀರ್ಮಾನವೇ ಆತ್ಮಹತ್ಯೆಗೆ ಕಾರಣ ಎನ್ನಲಾಗುತ್ತಿದೆ. ಮಗಳು ಮನೆ ಬಿಟ್ಟು ಹೋಗಿದ್ದಕ್ಕೆ ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮರ್ಯಾದೆಗೆ ಹೆದರಿ ತಂದೆ ತಾಯಿ ಮತ್ತು ಮತ್ತೋರ್ವ ಪುತ್ರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಹೌದು ನಿನ್ನೆ ಮೈಸೂರು ಜಿಲ್ಲೆಯ ಎಚ್ ಡಿ ಕೋಟೆ ತಾಲೂಕಿನ ಬೂದನೂರು ಗ್ರಾಮದ ಮಹದೇವಸ್ವಾಮಿ ಪತ್ನಿ ಮಂಜುಳಾ ಹಾಗೂ ಪುತ್ರಿ ಹರ್ಷಿತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗ್ರಾಮದ ಕೆರೆಯಲ್ಲಿ ಮೂವರ ಮೃತ ದೇಹಗಳು ಪತ್ತೆಯಾಗಿವೆ. ಮಾದೇವಸ್ವಾಮಿ ಮತ್ತು ಮಂಜುಳಾ ದಂಪತಿಗಳಿಗೆ ಇಬ್ಬರು ಹೆಣ್ಣು ಮಕ್ಕಳು ಅರ್ಪಿತಾ ಮತ್ತು ಹರ್ಷಿತ ಇಬ್ಬರು ಹೆಣ್ಣುಮಕ್ಕಳ ಜೊತೆಗೆ ಪೋಷಕರು ವಾಸವಾಗಿದ್ದರು. ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಗ್ರಾಮ ಬಿಟ್ಟು ಮೈಸೂರು ಜಿಲ್ಲೆಯ ಎಚ್ ಡಿ ಕೋಟೆಯಲ್ಲಿ ವಾಸಿಸುತ್ತಿದ್ದರು. ಎಚ್ ಡಿ ಕೋಟೆಯಲ್ಲೂ ಕೂಡ…

Read More

ಯಾದಗಿರಿ : ಜಿಲ್ಲಾ ಕಾಂಗ್ರೆಸ್‌ನ ಮಹಿಳಾ ಘಟಕದ ಅಧ್ಯಕ್ಷೆಯಾಗಿದ್ದ ತನ್ನ ಪತ್ನಿಯನ್ನು ಕೆಳಗಿಳಿಸಿ ಆಕೆಯ ಸ್ಥಾನದಲ್ಲಿ ಬೇರೊಬ್ಬರನ್ನು ನೇಮಿಸಿದ್ದಕ್ಕೆ ಆಕ್ರೋಶಗೊಂಡ ಪತಿ, ಜಿಲ್ಲಾ ಕಾಂಗ್ರೆಸ್‌ ಕಚೇರಿಗೇ ಬೆಂಕಿಯಿಟ್ಟ ಘಟನೆ ಯಾದಗಿರಿಯಲ್ಲಿ ನಡೆದಿದೆ. ಯಾದಗಿರಿ ಜಿಲ್ಲಾ ಕಾಂಗ್ರೆಸ್‌ನ ಮಹಿಳಾ ಘಟಕದ ಅಧ್ಯಕ್ಷೆಯಾಗಿದ್ದ ಮಂಜುಳಾ ಗೂಳಿಯವರನ್ನು ಶುಕ್ರವಾರವಷ್ಟೇ ಬದಲಾವಣೆ ಮಾಡಲಾಗಿತ್ತು. ಅವರ ಸ್ಥಾನಕ್ಕೆ ಮಹಿಳಾ ಘಟಕದ ಅಧ್ಯಕ್ಷೆಯಾಗಿ ನಿಲೋಫರ್ ಬಾದಲ್‌ ಎಂಬುವರನ್ನು ಆಯ್ಕೆ ಮಾಡಲಾಗಿತ್ತು. ವಿರೋಧದ ಮಧ್ಯೆಯೂ ಪತ್ನಿಯ ಸ್ಥಾನಕ್ಕೆ ನಿಲೋಫರ್ ಬಾದಲ್‌ರನ್ನು ಆಯ್ಕೆ ಮಾಡಿದ್ದಕ್ಕೆ ಮಂಜುಳಾ ಅವರ ಪತಿ, ಪಿಯು ಉಪನ್ಯಾಸಕನಾಗಿರುವ ಶಂಕರ್ ಗೂಳಿ ಆಕ್ರೋಶಗೊಂಡಿದ್ದ. ಹೀಗಾಗಿ, ಶಂಕರ್‌ ಗೂಳಿ ರೌಡಿಶೀಟರ್‌ ಬಾಪುಗೌಡ ಅಗತೀರ್ಥ ಎಂಬಾತನ ಜೊತೆಗೂಡಿ ಶನಿವಾರ ಬೆಳಗಿನ ಜಾವ ನಗರದ ಕನಕದಾಸ ವೃತ್ತದಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಯ ಕಟ್ಟಡದ ಬಾಗಿಲು ಮತ್ತು ಕಿಟಕಿಗೆ ಪೆಟ್ರೋಲ್ ಸುರುವಿ, ಬೆಂಕಿಯಿಟ್ಟಿದ್ದಾನೆ. ಘಟನೆಯಿಂದಾಗಿ ಕಚೇರಿಯ ಕಿಟಕಿ, ಬಾಗಿಲು, ಎಸಿ, ಸೋಫಾ ಪೀಠೋಪಕರಣಗಳು ಸುಟ್ಟು ಕರಕಲಾಗಿವೆ. ರಾತ್ರಿ ವೇಳೆ ಬೆಂಕಿ ಹಚ್ಚಿದ್ದರಿಂದ ಯಾವುದೇ ಪ್ರಾಣ ಹಾನಿ…

Read More

ಬೆಂಗಳೂರು : ಪೂರ್ವ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಕಾರಣ, ರಾಜ್ಯದ ಆರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಹೀಗಾಗಿ ರೆಡ್ ಅಲರ್ಟ್ ಅನ್ನು ಹವಾಮಾನ ಇಲಾಖೆ ಘೋಷಿಸಿದೆ. ಇದಲ್ಲದೇ ರಾಜ್ಯದ ವಿವಿಧೆಡೆ ಸಾಧಾರಣ ಮಳೆಯಾಗುವ ಮುನ್ಸೂಚನೆಯನ್ನು ನೀಡಿದೆ. ಈ ಬಗ್ಗೆ ಹವಾಮಾನ ಇಲಾಖೆಯ ತಜ್ಞ ಸಿಎಸ್ ಪಾಟೀಲ್ ಮಾಹಿತಿ ನೀಡಿದ್ದು, ಮೇ.24ರಿಂದ ಮೇ.27ರವರೆಗೆ ರಾಜ್ಯದ ಆರು ಜಿಲ್ಲೆಗಳಲ್ಲಿ ಪೂರ್ವ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಪರಿಣಾಮವಾಗಿ ಭಾರೀ ಮಳೆಯಾಗಲಿದೆ. ಹೀಗಾಗಿ 6 ಜಿಲ್ಲೆಗಳಲ್ಜ್ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದಿದ್ದಾರೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಭಾಗದಲ್ಲಿ ವ್ಯಾಪಕ ಮಳೆಯ ಎಚ್ಚರಿಕೆಯನ್ನು ನೀಡಿದ್ದು, ಮೇ 24ರಿಂದ ಮೇ 27ರವರೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಹಾಸನ, ಧಾರವಾಡ, ಚಾಮರಾಜನಗರ ಜಿಲ್ಲೆಗೆ ಆರೆಂಟ್ ಅಲರ್ಟ್ ಘೋಷಿಸಿದ್ದು, ಉಳಿದ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Read More