Author: kannadanewsnow05

ಬೆಂಗಳೂರು : ಕೇರಳದ ಶಾಸಕನಂತೆ ವೈನಾಡಿನ ಚಂದ ವಸೂಲಿ ಗಾರ್ನಂತೆ ವರ್ತಿಸುವ ಸಿಎಂ ಸಿದ್ದರಾಮಯ್ಯ ರನ್ನು ಕರ್ನಾಟಕದ ಜನತೆ ಇನ್ನೆಷ್ಟು ದಿನ ಸಹಿಸಬೇಕು ಎಂದು ಸಿದ್ದರಾಮಯ್ಯ ವಿರುದ್ಧ ವಿಪಕ್ಷ ನಾಯಕ ಆರ್ ಅಶೋಕ್ ಆಕ್ರೋಶ ಹೊರಹಾಕಿದ್ದಾರೆ. ✔️ ಎರಡು ತಿಂಗಳ ಹಿಂದಷ್ಟೇ ಕನ್ನಡಿಗರ ತೆರಿಗೆ ಹಣದಿಂದ ₹10 ಕೋಟಿ ರೂಪಾಯಿಯನ್ನ ವಯನಾಡಿಗೆ ಬಿಡುಗಡೆ ಮಾಡಿದಿರಿ. ✔️ ಕೇರಳದಲ್ಲಿ ಆನೆ ದಾಳಿಗೆ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ₹15 ಲಕ್ಷ ಪರಿಹಾರ ಕೊಟ್ಟಿರಿ. ✔️ ಭೂಕುಸಿತದ ನಂತರ ವಯನಾಡಿನಲ್ಲಿ 100 ಮನೆಗಳನ್ನು ನಿರ್ಮಿಸುವ ಘೋಷಣೆ ಮಾಡಿದಿರಿ. ✔️ ಈಗ ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಮೂಲಕ (KSTDC) ವಯನಾಡಿನ ಪ್ರವಾಸೋದ್ಯಮಕ್ಕೆ ಜಾಹೀರಾತು ಕೊಟ್ಟಿದ್ದೀರಿ. ಅಸಲಿಗೆ ನೀವು ಕರ್ನಾಟಕದ ಮುಖ್ಯಮಂತ್ರಿಯೋ ಅಥವಾ ಕೇರಳದ ಶಾಸಕರೋ? ಅಥವಾ ವಯನಾಡಿನ ಚಂದಾ ವಸೂಲಿಗಾರರೋ? ❌ ನೆರೆಯಿಂದ ಉತ್ತರ ಕರ್ನಾಟಕ ಮುಳುಗಿದೆ ❌ ರೈತರು ಕಂಗಾಲಾಗಿದ್ದಾರೆ ❌ ಮನೆಗಳು ಕೊಚ್ಚಿ ಹೋಗಿವೆ ❌ 12.5 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ…

Read More

ಕಲಬುರ್ಗಿ : ಕಲಬುರ್ಗಿ ಜಿಲ್ಲೆಯ ಚಿತ್ತಾಪುರದಲ್ಲಿ ಆರ್ಎಸ್ಎಸ್ ಪಥ ಸಂಚಲನಕ್ಕೆ ಅನುಮತಿ ಕೋರಿ ರಿಟ್ ಅರ್ಜಿ ಸಲ್ಲಿಸಲಾಗಿತ್ತು. ಇಂದು ಕಲಬುರ್ಗಿ ಹೈಕೋರ್ಟ್ ಪೀಠದಲ್ಲಿ ಅರ್ಜಿಯ ಕುರಿತಂತೆ ವಿಚಾರಣೆ ನಡೆಯಿತು. ವಿಚಾರಣೆ ವೇಳೆ ನವೆಂಬರ್ 5ರಂದು ಮಧ್ಯಾಹ್ನ 3 ಗಂಟೆಗೆ ಅಡ್ವಕೇಟ್ ಜನರಲ್ ಕಚೇರಿಯಲ್ಲಿಯೇ ಮತ್ತೊಂದು ಸಭೆ ನಡೆಸಲು ಹೈಕೋರ್ಟ್ ಸೂಚನೆ ನೀಡಿತು. ವಿಚಾರಣೆಯ ವೇಳೆ ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಶಾಂತಿ ಸಭೆಗೆ ರಿಟ್ ಅರ್ಜಿದಾರರೇ ಹಾಜರಾಗಿರಲಿಲ್ಲ. ವಿವಾದ ಶೀಘ್ರ ಮುಗಿಸಲು ಅರ್ಜಿದಾರರೇ ಸಹಕರಿಸುತ್ತಿಲ್ಲ ಬೇರೆ ವ್ಯಕ್ತಿಗಳು ಹಾಜರಾಗಿದ್ದಾರೆ ಎಂದು ಶಶಿಕಿರಣ್ ಶೆಟ್ಟಿ ಹೈಕೋರ್ಟ್ ಗೆ ಹೇಳಿಕೆ ನೀಡಿದರು. ಅರ್ಜಿದಾರರ ಮನೆಯಲ್ಲಿ ಸಾವು ಸಂಭವಿಸಿದ್ದರಿಂದ ಅವರು ಬಂದಿರಲಿಲ್ಲ ಎಂದು ಅರ್ಜಿದಾರರ ಪರವಾಗಿ ಹಿರಿಯ ವಕೀಲ ಅರುಣ್ ಶ್ಯಾಮ್ ಇದೆ ವೇಳೆ ತಿಳಿಸಿದರು. ಈ ವೇಳೆ ಅರ್ಜಿದಾರರೇ ಶಾಂತಿ ಸಭೆಗೆ ಹಾಜರಾಗದಕ್ಕೆ ಹೈಕೋರ್ಟ್ ಅಸಮಾಧಾನ ಹೊರಹಾಕಿದ್ದು, ಅರ್ಜಿದಾರರು ಅಥವಾ ಅವರ ವಕೀಲರು ಸಭೆಗೆ ಹಾಜರಾಗಬಹುದಿತ್ತು. ನೀವು ಅರ್ಹತೆ ಮೇಲೆ ವಾದ ಮಂಡಿಸಿ ವಿಚಾರಣೆ…

Read More

ಕಲಬುರ್ಗಿ : ಕಲಬುರ್ಗಿ ಜಿಲ್ಲೆಯ ಚಿತ್ತಾಪುರದಲ್ಲಿ ಆರ್ಎಸ್ಎಸ್ ಪಥ ಸಂಚಲನಕ್ಕೆ ಅನುಮತಿ ಕೋರಿ ರಿಟ್ ಅರ್ಜಿ ಸಲ್ಲಿಸಲಾಗಿತ್ತು. ಇಂದು ಕಲಬುರ್ಗಿ ಹೈಕೋರ್ಟ್ ಪೀಠದಲ್ಲಿ ಅರ್ಜಿಯ ಕುರಿತಂತೆ ವಿಚಾರಣೆ ನಡೆಯಿತು. ವಿಚಾರಣೆ ವೇಳೆ ನವೆಂಬರ್ 5ರಂದು ಮಧ್ಯಾಹ್ನ 3 ಗಂಟೆಗೆ ಅಡ್ವಕೇಟ್ ಜನರಲ್ ಕಚೇರಿಯಲ್ಲಿಯೇ ಮತ್ತೊಂದು ಸಭೆ ನಡೆಸಲು ಹೈಕೋರ್ಟ್ ಸೂಚನೆ ನೀಡಿತು.ಬಳಿಕ ವಿಚಾರಣೆಯನ್ನು ನವೆಂಬರ್ 7ಕ್ಕೆ ಹೈಕೋರ್ಟ್ ಮುಂದೂಡಿತು. ವಿಚಾರಣೆಯ ವೇಳೆ ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಶಾಂತಿ ಸಭೆಗೆ ರಿಟ್ ಅರ್ಜಿದಾರರೇ ಹಾಜರಾಗಿರಲಿಲ್ಲ. ವಿವಾದ ಶೀಘ್ರ ಮುಗಿಸಲು ಅರ್ಜಿದಾರರೇ ಸಹಕರಿಸುತ್ತಿಲ್ಲ ಬೇರೆ ವ್ಯಕ್ತಿಗಳು ಹಾಜರಾಗಿದ್ದಾರೆ ಎಂದು ಶಶಿಕಿರಣ್ ಶೆಟ್ಟಿ ಹೈಕೋರ್ಟ್ ಗೆ ಹೇಳಿಕೆ ನೀಡಿದರು. ಅರ್ಜಿದಾರರ ಮನೆಯಲ್ಲಿ ಸಾವು ಸಂಭವಿಸಿದ್ದರಿಂದ ಅವರು ಬಂದಿರಲಿಲ್ಲ ಎಂದು ಅರ್ಜಿದಾರರ ಪರವಾಗಿ ಹಿರಿಯ ವಕೀಲ ಅರುಣ್ ಶ್ಯಾಮ್ ಇದೆ ವೇಳೆ ತಿಳಿಸಿದರು. ಈ ವೇಳೆ ಅರ್ಜಿದಾರರೇ ಶಾಂತಿ ಸಭೆಗೆ ಹಾಜರಾಗದಕ್ಕೆ ಹೈಕೋರ್ಟ್ ಅಸಮಾಧಾನ ಹೊರಹಾಕಿದ್ದು, ಅರ್ಜಿದಾರರು ಅಥವಾ ಅವರ ವಕೀಲರು ಸಭೆಗೆ ಹಾಜರಾಗಬಹುದಿತ್ತು. ನೀವು…

Read More

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಭೀಕರವಾದ ಕೊಲೆಯಾಗಿದ್ದು, ಬರ್ತಡೇ ಪಾರ್ಟಿ ಬಿಲ್ ವಿಚಾರಕ್ಕೆ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದೆ. ಸ್ನೇಹಿತರಿಂದಲೇ ಬರ್ತಡೇ ಬಾಯ್ ಸಂದೀಪ್ (23) ಎನ್ನುವ ಯುವಕನನ್ನು ಸ್ನೇಹಿತರೆ ಕೊಲೆ ಮಾಡಿದ್ದಾರೆ. ಜಿಗಣಿ ಪೊಲೀಸ್ ಠಾಣಾ ವ್ಯಾಪ್ತಿಯ ಹಾರಗದ್ದೆ ವಡ್ಡರ ಪಾಳ್ಯದಲ್ಲಿ ಈ ಒಂದು ಕೊಲೆ ನಡೆದಿದೆ. ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಹಾರಗದ್ದೆ ವಡ್ರ ಪಾಳ್ಯದಲ್ಲಿ ಸ್ನೇಹಿತರಾದ ಸಂತೋಷ್ ಮತ್ತು ಸಾಗರ್ ನಿಂದ ಸಂದೀಪ್ ಕೊಲೆ ಆಗಿದೆ. ಅಕ್ಟೋಬರ್ 16ರಂದು ಸಂದೀಪನ ಬರ್ತಡೇ ಇತ್ತು ಪಾರ್ಟಿಗೆ ಎಂದು ಸಂದೀಪ್ ಸ್ನೇಹಿತರನ್ನು ಬಾರ್ ಗೆ ಕರೆದುಕೊಂಡು ಹೋಗಿದ್ದ. ಪಾರ್ಟಿ ಮುಗಿದ ಬಳಿಕ ಸಂದೀಪ್ ಮೊದಲು ಬಿಲ್ ಕಟ್ಟಿದ್ದಾನೆ. ಎರಡನೇ ಸಲ ಬಿಲ್ ಕಟ್ಟುವಂತೆ ಸ್ನೇಹಿತರು ಸಂದೀಪ್ ಗೆ ಒತ್ತಾಯಿಸಿದ್ದಾರೆ. ನನ್ನ ಹತ್ತಿರ ಹಣ ಇಲ್ಲ ಎಂದಿದ್ದಕ್ಕೆ ಸಂತೋಷ ಬಾರ್ ಬಳಿ ಗಲಾಟೆ ಮಾಡಿದ್ದಾನೆ. ಇದರಿಂದ ಬೇಸರಗೊಂಡು ಸಂದೀಪ್ ವಾಪಸ್ ಊರಿಗೆ ಬಂದಿದ್ದಾನೆ. ಅಷ್ಟಕ್ಕೆ ಸುಮ್ಮನಾಗದೆ ವಾಲಿಬಾಲ್ ಕೋರ್ಟ್ ಬಳಿ ಕರೆಸಿ…

Read More

ಉತ್ತರಕನ್ನಡ : ರಾಜ್ಯದಲ್ಲಿ ಡಕೋಟಾ ಬಸ್ ಗಳು ಸಂಚರಿಸುತ್ತಿವೆ ಎನ್ನುವ ಅನುಮಾನ ವ್ಯಕ್ತವಾಗುತ್ತಿದೆ. ಏಕೆಂದರೆ ಸಚಿವರ ಸೂಚನೆ ಬಳಿಕವು ಇಲಾಖೆ ಮೈ ಮರೆತಿದೆ. ಇದೀಗ ಕೆಎಸ್ಆರ್ಟಿಸಿ ಬಸ್ ಸ್ಟೇರಿಂಗ್ ತುಂಡಾಗಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಉತ್ತರ ಕನ್ನಡದ ಮುಂಡಗೋಡು ತಾಲೂಕಿನ ಮಳಗಿ ಬಳಿ ಈ ಒಂದು ಅಪಘಾತ ಸಂಭವಿಸಿದೆ. ಹೌದು ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಸ್ಟೇರಿಂಗ್ ಕಟ್ ಆದ ಪರಿಣಾಮ ಪಕ್ಕದಲ್ಲಿದ್ದ ವಿದ್ಯುತ್ ಕಂಬಕ್ಕೆ ಬಸ್ ಡಿಕ್ಕಿ ಹೊಡೆದಿದೆ. ಈ ವೇಳೆ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 60ಕ್ಕೂ ಹೆಚ್ಚು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಶಿರಸಿಯಿಂದ ಹುಬ್ಬಳ್ಳಿಗೆ ಕೆಎಸ್ಆರ್ಟಿಸಿ ಬಸ್ ತೆರಳುತ್ತಿತ್ತು. ಈ ಕುರಿತು ಮುಂಡಗೋಡು ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ. ಅದೇ ರೀತಿ ಮೈಸೂರಿನಲ್ಲಿ ಕೆಎಸ್ಆರ್ಟಿಸಿ ಡಕೋಟಾ ಬಸ್ ಕೈಕೊಟ್ಟಿದೆ. ಬಸ್ ಅನ್ನು ಪ್ರಯಾಣಿಕರು ತಳ್ಳಿದ್ದಾರೆ. ಮಹಿಳೆಯರು ಮಕ್ಕಳು ಮತ್ತು ಹಿರಿಯರು ಬಸ್ ಅನ್ನು ತಳ್ಳಿದ್ದಾರೆ. ಮೈಸೂರು ಗ್ರಾಮಾಂತರ ಬಸ್ ನಿಲ್ದಾಣದಲ್ಲಿ…

Read More

ಬೆಂಗಳೂರು : ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವ ಆಡುತ್ತಿದ್ದು ಯಾವುದೇ ಸರಕಾರಿ ಕೆಲಸ ಆಗಬೇಕೆಂದರೆ ಪಿಯೂನ್ ಹಿಡಿದುಕೊಂಡು, ದೊಡ್ಡ ದೊಡ್ಡ ಸರ್ಕಾರಿ ಅಧಿಕಾರಿಗಳವರೆಗೂ ಲಂಚ ನೀಡದೆ ಯಾವುದೇ ಕೆಲಸ ಆಗುವುದಿಲ್ಲ. ಇದಕ್ಕೆ ನಿರ್ದರ್ಶನ ಎಂಬಂತೆ ಬೆಂಗಳೂರಿನಲ್ಲಿ ಪುತ್ರಿ ಸಾವನ್ನಪ್ಪಿದ್ದು ಆಕೆಯ ಶವ ಸಾಗಾಟದಿಂದ ಹಿಡಿದು ಮರಣೋತ್ತರ ಪರೀಕ್ಷೆವರೆಗೂ ಅಧಿಕಾರಿಗಳು ಲಂಚ ತೆಗೆದುಕೊಂಡಿರುವ ಕುರಿತು ಮೃತ ಯುವತಿಯ ತಂದೆ ಪೋಸ್ಟ್ ಹಂಚಿಕೊಂಡಿದ್ದಾರೆ. ಪುತ್ರಿ ಸಾವಿನ ಸಂಕಟದ ಮಧ್ಯ ತಂದೆಗೆ ಲಂಚದ ಕಾಟ ತಪ್ಪಿಲ್ಲ. ಬೆಂಗಳೂರಿನ ಶಿವಕುಮಾರ್ ಗೆ ಲಂಚದ ಕರಾಳ ಅನುಭವ ಆಗಿದೆ. ಪುತ್ರಿಯ ಶವ ಸಾಗಾಟ ಅಂತ್ಯಕ್ರಿಯೆ ಮರಣೋತ್ತರ ಪರೀಕ್ಷೆಯಲ್ಲಿ ಲಂಚ ಸ್ವೀಕರಿಸಿದ್ದಾರೆ. ಪ್ರತಿಯೊಂದರಲ್ಲೂ ಲಂಚಾವತಾರ ಕಂಡು ಶಿವಕುಮಾರ್ ಶಾಕ್ ಆಗಿದ್ದಾರೆ. ಖಾಸಗಿ ಸಂಸ್ಥೆಯಲ್ಲಿ ಮಾಜಿ ಮುಖ್ಯ ಹಣಕಾಸು ಸಿಬ್ಬಂದಿಯಾಗಿ ಶಿವಕುಮಾರ್ ಕಾರ್ಯನಿರ್ವಹಿಸುತ್ತಿದ್ದಾರೆ. ಕೋರಮಂಗಲ ಆಸ್ಪತ್ರೆಗೆ ಶವ ಸಾಗಿಸಲು ಅಂಬುಲೆನ್ಸ್ ಚಾಲಕನಿಗೆ 5,000 ನಿಗದಿ ಮಾಡಲಾಗಿದೆ. ನಿಗದಿತ ಹಣಕ್ಕಿಂತ ಹೆಚ್ಚು ಮಾಡಲಾಗಿದ್ದು ಮರಣೋತ್ತರ ಪರೀಕ್ಷೆಯ ವೇಳೆ ಹಣಕ್ಕಾಗಿ ಪೊಲೀಸರು ಒರಟು ವರ್ತನೆ ತೋರಿದ್ದಾರೆ.…

Read More

ಮೈಸೂರು : ಸಿಎಂ ಸಿದ್ದರಾಮಯ್ಯ ಸ್ವಕ್ಷೇತ್ರ ವರುಣಾದಲ್ಲಿ ಚೆಸ್ಕಾಂ ಅಧಿಕಾರಿಗಳು ಗೂಂಡಾ ವರ್ತನೆ ತೋರಿದ್ದು, ಕರೆಂಟ್ ಬಿಲ್ ಕಟ್ಟಿಲ್ಲವೆಂದು ವೃದ್ದೆಯನ್ನು ಅಧಿಕಾರಿಗಳು ತಳ್ಳಾಡಿರುವ ಘಟನೆ ವರದಿಯಾಗಿದೆ. 80 ವರ್ಷದ ಅಂಧ ವೃದ್ದೆ ಮಹದೇವಮ್ಮ ಮೇಲೆ ಚೆಸ್ಕಾಂ ಸಿಬ್ಬಂದಿಗಳು ಗೂಂಡಾ ವರ್ತನೆ ತೋರಿದ್ದಾರೆ. ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಚಿಕ್ಕಹೊಮ್ಮದಲ್ಲಿ ಈ ಒಂದು ಘಟನೆ ನಡೆದಿದೆ. ಭಾಗ್ಯಜ್ಯೋತಿ ಯೋಜನೆ ಅಡಿ ವೃದ್ದೆ ಮಹಾದೇವಮ್ಮ ವಿದ್ಯುತ್ ಸಂಪರ್ಕ ಪಡೆದಿದ್ದರು. ಭಾಗ್ಯಜ್ಯೋತಿ ಫಲಾನುಭವಿಗಳಿಗೆ 55 ಯೂನಿಟ್ ಉಚಿತವಾಗಿ ವಿದ್ಯುತ್ ನೀಡಲಾಗುತ್ತಿದೆ. ಆದರೂ ಕೂಡ ಅಂಧ ವೃದ್ದೆ ಮಹದೇವಮ್ಮ ಮನೆಗೆ 5,000 ಕರೆಂಟ್ ಬಿಲ್ ಬಂದಿದೆ. 5000 ಕರೆಂಟ್ ಬಿಲ್ ಕಟ್ಟುವಂತೆ ಚೆಸ್ಕಂ ಸಿಬ್ಬಂದಿಗಳು ಮನೆಗೆ ಬಂದಿದ್ದಾರೆ. ಬಿಲ್ ಕಟ್ಟದರಿಂದ ಫ್ಯೂಸ್ ಮತ್ತು ಮೀಟರ್ ಬೋರ್ಡ್ ತೆಗೆಯಲು ಯತ್ನಿಸಿದ್ದಾರೆ. ಈ ವೇಳೆ ಅಂಧ ವಿವೃದ್ದೆ ರುಧೆ ಮಹದೇವಮ್ಮ ಚೆಸ್ಕಾಂ ಸಿಬ್ಬಂದಿಯನ್ನು ಗೊಗರೆದಿದ್ದಾರೆ. ನಮ್ಮ ಕರ್ತವ್ಯಕ್ಕೆ ಅಡ್ಡಿಪಡಿಸುತ್ತಿದ್ದಿಯ ಎಂದು ವೃದ್ಧೆಯನ್ನು ನೂಕಿ ತಳ್ಳಿ ದರ್ಪ ಮೆರೆದಿದ್ದಾರೆ. ಚೆಸ್ಕಾಂ ಸಿಬ್ಬಂದಿ…

Read More

ಬೆಂಗಳೂರು : ಇತ್ತೀಚಿಗೆ RSS ಪಥಸಂಚಲನದಲ್ಲಿ ಭಾಗವಹಿಸಿದ್ದಕ್ಕಾಗಿ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ರೋಡಲಬಂಡಾ ಪಿಡಿಓ ಪ್ರವೀಣ್ ಕುಮಾರ್ ಅವರನ್ನು ಅಮಾನತುಗೊಳಿಸಿದ್ದ ರಾಜ್ಯ ಸರ್ಕಾರದ ಆದೇಶಕ್ಕೆ ಕೆಎಸ್‌ಎಟಿ ತಡೆ ನೀಡಿದೆ. ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಕಾನೂನು ಹೋರಾಟದಲ್ಲಿ ನೆರವಾಗಿದ್ದು, ಈ ಆದೇಶದಿಂದ ಸರ್ಕಾರದ ನಿರ್ಧಾರಕ್ಕೆ ತೀವ್ರ ಹಿನ್ನಡೆಯಾಗಿದೆ. ಹೌದು ಆರೆಸ್ಸೆಸ್​ ಶತಮಾನೋತ್ಸವ ಹಿನ್ನಲೆ ಅಕ್ಟೋಬರ್​ 12ರಂದು ಲಿಂಗಸುಗೂರು ಪಟ್ಟಣದಲ್ಲಿ ನಡೆದಿದ್ದ ಪಥಸಂಚಲನದಲ್ಲಿ ಸಂಘದ ಸಮವಸ್ತ್ರ ಧರಿಸಿ, ಕೈನಲ್ಲಿ ದೊಣ್ಣೆ ಹಿಡಿದ ಗಣವೇಷಧಾರಿಯಾಗಿ ಲಿಂಗಸುಗೂರು ತಾಲೂಕಿನ ರೋಡಲಬಂಡಾ ಪಿಡಿಓ ಪ್ರವೀಣ್​ ಭಾಗವಹಿಸಿದ್ದರು. ಅಮಾನತು ಬೆನ್ನಲ್ಲೇ ಪ್ರವೀಣ್​ ಜೊತೆ ಈ ಬಗ್ಗೆ ಚರ್ಚಿಸಿದ್ದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ, ಕಾನೂನುಬಾಹಿರ ಮತ್ತು ಅಕ್ರಮ ಅಮಾನತನ್ನು ಪ್ರಶ್ನಿಸಲು ನಾನು ವೈಯಕ್ತಿಕವಾಗಿ ಸಂಬಂಧಪಟ್ಟ ನ್ಯಾಯಾಧಿಕರಣ ಮತ್ತು ನ್ಯಾಯಾಲಯಗಳ ಮುಂದೆ ಹಾಜರಾಗುತ್ತೇನೆ ಎಂದು ಅವರಿಗೆ ಭರವಸೆ ನೀಡಿದ್ದರು. ಆರ್‌ಎಸ್‌ಎಸ್‌ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಸರ್ಕಾರಿ ನೌಕರರ ಹಕ್ಕನ್ನು ಎತ್ತಿಹಿಡಿದಿರುವ ಹೈಕೋರ್ಟ್‌ಗಳ ಅನೇಕ ತೀರ್ಪುಗಳಿವೆ. ಈ ಅಕ್ರಮ ಅಮಾನತು ರದ್ದಾಗುವುದರಲ್ಲಿ…

Read More

ಶಿವಮೊಗ್ಗ : ರಾಜ್ಯದಲ್ಲಿ ಮತ್ತೊಂದು ಭೀಕರವಾದ ಅಪಘಾತ ಸಂಭವಿಸಿದ್ದು, ಮರಕ್ಕೆ ಗೂಡ್ಸ್ ವಾಹನ ಡಿಕ್ಕಿಯಾಗಿ ಸ್ಥಳದಲ್ಲಿ ಮೂವರು ಸಾವನಪ್ಪಿದ್ದಾರೆ. ಶಿವಮೊಗ್ಗದ ಗೊಂದಿ ಚಟ್ನಿಹಳ್ಳಿ ಗ್ರಾಮದ ಬಳಿ ಈ ಒಂದು ಘಟನೆ ನಡೆದಿದೆ. ಮೃತರನ್ನು ಅಸಾದುಲ್ಲ (35) ಸಾಧಿಕ್ (31) ಫೈರೋಜ್ (33) ಮೃತ ದುರ್ದೈವಿಗಳು ಎಂದು ತಿಳಿದುಬಂದಿದೆ. ನಿದ್ದೆ ಮಂಪರಿನಲ್ಲಿ ಗೂಡ್ಸ್ ವಾಹನ ಮರಕ್ಕೆ ಡಿಕ್ಕಿ ಹೊಡೆದಿದೆ. ಬಾಳೆಹೊನ್ನೂರಿನಲ್ಲಿ ಕಾರ್ಪೆಂಟರ್ ಕೆಲಸ ಮುಗಿಸಿ ಗೂಡ್ಸ್ ವಾಹನದಲ್ಲಿ ವಾಪಸ್ ಆಗುವ ವೇಳೆ ಈ ಒಂದು ಭೀಕರವಾದ ಅಪಘಾತ ಸಂಭವಿಸಿದೆ. ಅದೃಷ್ಟ ವಶಾಂತ್ ಚಾಲಕ ಪ್ರಣಾಪಯದಿಂದ ಪಾರಾಗಿದ್ದು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಶಿವಮೊಗ್ಗ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Read More

ಬೆಂಗಳೂರು : ನಮ್ಮ ಮೆಟ್ರೋ ನೇರಳೆ ಮಾರ್ಗದಲ್ಲಿ ತಾಂತ್ರಿಕ ಸಮಸ್ಯೆ ಉಂಟಾದ ಹಿನ್ನೆಲೆಯಲ್ಲಿ ಚಲ್ಲಘಟ್ಟ ಮತ್ತು ವೈಟ್ ಫೀಲ್ಡ್ ಮಾರ್ಗದಲ್ಲಿ ಸಂಚಾರ ವ್ಯತ್ಯಯ ಆಗಿದ್ದು, ಕಳೆದ ಒಂದು ಗಂಟೆಯಿಂದ ಮೆಟ್ರೋ ಸಂಚಾರದಲ್ಲಿ ವ್ಯತಯ ಉಂಟಾಗಿದೆ ವಿಜಯನಗರ ಹೊಸಹಳ್ಳಿ ನಿಲ್ದಾಣಗಳ ನಡುವೆ ವ್ಯತ್ಯಯ ಉಂಟಾಗಿದೆ. ತಾಂತ್ರಿಕ ಸಮಸ್ಯೆಯಿಂದ ಮೆಟ್ರೋ ರೈಲು ಕೆಟ್ಟು ನಿಂತಿದೆ ಕೆಟ್ಟು ನಿಂತ ರೈಲನ್ನು ಚೆಲ್ಲಘಟ್ಟ ನಿಲ್ದಾಣಕ್ಕೆ ಸ್ಥಳಾಂತರಿಸಬೇಕು ಆನಂತರ ಮೆಟ್ರೋ ರೈಲು ಸಂಚಾರ ಸಹಜ ಸ್ಥಿತಿಗೆ ಬರಲಿದೆ ಎಂದು ಬಿಎಂಆರ್‌ಸಿಎಲ್ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಚಲ್ಲಘಟ್ಟದಿಂದ ಹೊರಟ ಮೆಟ್ರೋ ರೈಲು 9.20 ರ ಸುಮಾರಿಗೆ ರಾಜರಾಜೇಶ್ವರಿ ಮೆಟ್ರೋ ನಿಲ್ದಾಣದಲ್ಲಿ ನಿಂತಿದ್ದು, ಮುಂದೆ ಚಲಿಸಿಲ್ಲ. ಸುಮಾರು 10 ನಿಮಿಷಗಳಿಂದಲೂ ನಿಲ್ದಾಣದಲ್ಲಿಯೇ ನಿಂತಿದೆ ಎಂದು ಪ್ರಯಾಣಿಕರು ತಿಳಿಸಿದ್ದಾರೆ. ಮೆಟ್ರೋ ರೈಲು ಮುಂದಕ್ಕೆ ಚಲಿಸದೆ ಇರುವ ಬಗ್ಗೆ ಸ್ಥಳದಲ್ಲಿರುವ ಸಿಬ್ಬಂದಿ ಕಾರಣ ನೀಡಿಲ್ಲ. ಬಿಎಂಆರ್​ಸಿಎಲ್ (BMRCL) ಪ್ರತಿಕ್ರಿಯೆಗೆ ಕಾಯಲಾಗುತ್ತಿದೆ. ಮುಂದಿನ ಮಾಹಿತಿ ನೀಡುವ ವರೆಗೂ ಕಾಯಿರಿ ಎಂದು ಪ್ರಯಾಣಿಕರನ್ನು ಉದ್ದೇಶಿಸಿ ರೈಲಿನಲ್ಲಿ…

Read More