Subscribe to Updates
Get the latest creative news from FooBar about art, design and business.
Author: kannadanewsnow05
ಚಾಮರಾಜನಗರ : ಕಳೆದ ಕೆಲವು ದಿನಗಳ ಹಿಂದೆ ಚಾಮರಾಜನಗರ ಜಿಲ್ಲೆಯ ಮಾದಪ್ಪನ ಬೆಟ್ಟದಲ್ಲಿ 5 ಹುಲಿಗಳಿಗೆ ವಿಷ ಉಣಿಸಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ನಡೆದಿತ್ತು, ಇದೀಗ ಆ ಮತ್ತೊಂದು ಘಟನೆ ವರದಿಯಾಗಿದ್ದು, ಮಾದಪ್ಪನ ಬೆಟ್ಟದಲ್ಲಿ ಹುಲಿಯ ಅರ್ಧ ಕಳೆಬರ ಪತ್ತೆ ಆಗಿರುವ ಘಟನೆ ನಡೆದಿದೆ. ಮಲೆ ಮಹದೇಶ್ವರ ಬೆಟ್ಟದ ಪಚೆದೊಡ್ಡಿ ಗ್ರಾಮದ ಹತ್ತಿರ ಹುಲಿಯ ಅರ್ಧ ಕಳೆಬರಹ ಪತ್ತೆಯಾಗಿದೆ. ಹುಲಿಯ ಅರ್ಧ ಕಳೆಬರ ಹುದಗಿಸಿಟ್ಟಿದ್ದು ಪತ್ತೆಯಾಗಿದೆ. ಹುಲಿಯ ತಲೆ, ಭುಜ ಮುಂಗಾಲುಗಳು ಮಾತ್ರ ಪತ್ತೆಯಾಗಿದ್ದು, ಉಳಿದ ಭಾಗಗಳು ನಾಪತ್ತೆಯಾಗಿವೆ. ಈ ಕುರಿತು ಅಧಿಕಾರಿಗಳು ಶೋಧ ನಡೆಸುತ್ತಿದ್ದಾರೆ. ಹುಲಿಯ ಕಳ್ಳ ಬೇಟೆ ಆಡಿರುವ ಬಗ್ಗೆ ಅಧಿಕಾರಿಗಳಿಗೆ ಅನುಮಾನ ವ್ಯಕ್ತವಾಗಿದೆ. ಇನ್ನು ಹುಲಿ ನಿಗೂಢ ಸಾವಿನ ತನಿಖೆಗೆ ಈಶ್ವರ ಖಂಡ್ರೆ ಆದೇಶ ನೀಡಿದ್ದಾರೆ. ಪಿಸಿಸಿಎಫ್ ಸ್ಮಿತಾ ಬಿಜ್ಜುರು ನೇತೃತ್ವದಲ್ಲಿ ತನಿಖೆಗೆ ಆದೇಶ ನೀಡಿದ್ದಾರೆ. ಎಂಟು ದಿನಗಳಲ್ಲಿ ಘಟನೆ ಕುರಿತು ವರದಿ ಸಲ್ಲಿಸುವಂತೆ ಈಶ್ವರ ಖಂಡ್ರೆ ಖಡಕ್ ಸೂಚನೆ ಕೊಟ್ಟಿದ್ದಾರೆ. ಹುಲಿ ಹಂತಕರನ್ನು ಪತ್ತೆ…
ಶಿವಮೊಗ್ಗ : ರಾಜ್ಯದಲ್ಲಿ ಕಳೆದ ಸೆಪ್ಟೆಂಬರ್ 22 ರಿಂದ ಸಾಮಾಜಿಕ ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಆರಂಭವಾಗಿದ್ದು ಆರಂಭದಲ್ಲಿ ಸರ್ವರ್ ಹಾಗೂ ಕೆಲವು ತಾಂತ್ರಿಕ ದೋಷಗಳು ಕಂಡು ಬಂದು ಸಮೀಕ್ಷೆ ಕುಂಟಿತವಾಗಿತ್ತು ಇದೀಗ ರಾಜ್ಯದಲ್ಲಿ 56 ರಷ್ಟು ಸಮೀಕ್ಷೆ ಪೂರ್ಣಗೊಂಡಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಸ್ಪಷ್ಟಪಡಿಸಿದ್ದಾರೆ. ಶಿವಮೊಗ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಜಾತಿ ಜಾತಿ ನಡುವೆ ಬೆಂಕಿ ಹಚ್ಚುತ್ತಿದ್ದಾರೆ ಎನ್ನುವ ಆರೋಪದ ವಿಚಾರವಾಗಿ ಬಿಜೆಪಿ ನಾಯಕರಿಗೆ ಈ ರೀತಿ ಹೇಳೋದಕ್ಕೆ ನಾಚಿಕೆ ಆಗಬೇಕು. ಸಂವಿಧಾನದ ಮೇಲೆ ಪ್ರಮಾಣ ಮಾಡಿ ಜಾತಿಗಣತಿ ವಿರೋಧಿಸುತ್ತಿದ್ದಾರೆ. ಈಗ ಶೇಕಡ 56 ರಷ್ಟು ಸಮೀಕ್ಷೆ ಆಗಿದೆ ಎಂದು ಸ್ಪಷ್ಟಪಡಿಸಿದರು. ಸಾಮಾಜಿಕ ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಯಶಸ್ವಿ ಆಗಲಿದೆ. ಪ್ರಣಾಳಿಕೆಯಲ್ಲಿ ಜಾತಿ ಗಣತಿ ಮಾಡುವುದಾಗಿ ಉಲ್ಲೇಖ ಮಾಡಿದ್ದೆವು. ಯಡಿಯೂರಪ್ಪರಿಂದಲೇ ಜಾತಿಗಳ ನಡುವೆ ಭೇದ ಭಾವ ಆಗಿದ್ದು ಬಿ.ವೈ ವಿಜಯೇಂದ್ರ ಹಿಂದುಳಿದ ವರ್ಗದವರ ಅಭಿವೃದ್ಧಿ ಬೇಡವಾಗಿದೆ ಎಂದು ಶಿವಮೊಗ್ಗದಲ್ಲಿ ಬಿವೈ ವಿಜಯೇಂದ್ರ ವಿರುದ್ಧ…
ಬೆಂಗಳೂರು : ಬೆಂಗಳೂರಲ್ಲಿ ಗಣೇಶ ಉತ್ಸವ ವೇಳೆ ಬೆಚ್ಚಿ ಬೀಳಿಸಿದ್ದ ಸರಗಳ್ಳನನ್ನ ಇದೀಗ ಅರೆಸ್ಟ್ ಮಾಡಲಾಗಿದೆ. ಸರಗಳ್ಳ ಕೆಂಗೇರಿಯ ಪ್ರವೀಣನ್ನು ಇದೀಗ ಗಿರಿನಗರ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ರಾಮನಗರ ಮೂಲದ ಮತ್ತೋರ್ವ ಕಳ್ಳ ಯೋಗಾನಂದಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಸೆಪ್ಟೆಂಬರ್ 14ರ ರಾತ್ರಿ 5 ಕಡೆ ಪ್ರವೀಣ್ ಮತ್ತು ಯೋಗಾನಂದ ಸರಗಳು ತರ ಮಾಡಿದ್ದರು. ಗಿರಿನಗರ, ಹನುಮಂತನಗರ ಕೋಣನಕುಂಟೆಯಲ್ಲಿ ಸರಗಳ್ಳತನ ಮಾಡಿದ್ದರು. ಮಹಿಳೆಯರ ಕುತ್ತಿಗೆಗೆ ಲಾಂಗ್ ಇಟ್ಟು ದುಷ್ಟರು ಸರಗಳ್ಳತನ ಮಾಡಿದ್ದರು. ಈ ವೇಳೆ ಮಹಿಳೆ ಒಬ್ಬರು ವಿರೋಧ ವ್ಯಕ್ತಪಡಿಸಿದಕ್ಕೆ ಮಹಿಳೆ ಮೇಲೆ ಲಾಂಗ್ ಬೀಸಿದ್ದರು. ಸರಗಳ ಲಾಂಗ್ ಏಟಿಗೆ ಮಹಿಳೆಯ ಕೈಬೆರಳು ತುಂಡಾಗಿದ್ದವು. ಇದೀಗ ಗಿರಿನಗರಠಾಣೆ ಪೊಲೀಸರು ಪ್ರವೀಣ್ ನನ್ನ ಅರೆಸ್ಟ್ ಮಾಡಲಾಗಿದೆ. ಪ್ರವೀಣ್ ಅನ್ನು ಬಂಧಿಸುತ್ತಿದ್ದಂತೆ ಯೋಗಾನಂದ ಪರಾರಿ ಆಗಿದ್ದಾನೆ. ಸೆಂಟ್ರಲ್ ರೈಲಿನಲ್ಲಿ ಪ್ರವೀಣ್ ಮತ್ತು ಯೋಗಾನಂದ ಪರಸ್ಪರ ಪರಿಚಯವಾಗಿದ್ದಾರೆ. ಜೈಲಿನಿಂದ ಹೊರಬಂದ ನಂತರವೂ ಇಬ್ಬರೂ ಸರಗೊಳ್ಳತನ ಮುಂದುವರಿಸಿದರು.
ಬೆಂಗಳೂರು : ಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸುವಂತಹ ಘಟನೆ ನಡೆದಿದ್ದು, ಸೈಕೋ ಪಾತ್ ಪತಿರಾಯ ಒಬ್ಬ ಬೆಡ್ ರೂಮ್ನಲ್ಲಿ ಸೀಕ್ರೆಟ್ ಕ್ಯಾಮರಾ ಫಿಕ್ಸ್ ಮಾಡಿದ್ದಾನೆ. ಅಲ್ಲದೇ ಪತ್ನಿ ಜೊತೆಗೆ ಲೈಂಗಿಕ ಕ್ರಿಯೆ ರೆಕಾರ್ಡ್ ಮಾಡಿದ ಈ ಪಾಪಿ ಪತಿಯ ವಿರುದ್ಧ ಪತ್ನಿ ಪೊಲೀಸರಿಗೆ ದೂರು ನೀಡಿದ್ದಾರೆ. ಪತಿ ಸಯ್ಯದ್ ಇನಾಮುಲ್ ಹಕ್ ವಿರುದ್ಧ ಪತ್ನಿ ದೂರು ದಾಖಲಿಸಿದ್ದಾರೆ. ಖಾಸಗಿ ವಿಡಿಯೋ ಇಟ್ಟುಕೊಂಡು ಪತ್ನಿಗೆ ಸಯ್ಯದ್ ಬ್ಲಾಕ್ ಮೇಲ್ ಮಾಡುತ್ತಿದ್ದ. ಸ್ನೇಹಿತರೊಂದಿಗೆ ಮಲಗುವಂತೆ ಆತ ಒತ್ತಾಯ ಮಾಡುತ್ತಿದ್ದ ಅಲ್ಲದೆ ಪತ್ನಿಯ ಖಾಸಗಿ ವಿಡಿಯೋವನ್ನು ತನ್ನ ಸ್ನೇಹಿತರಿಗೂ ಕೂಡ ಹಂಚಿದ ಆರೋಪ ಕೇಳಿ ಬಂದಿದೆ. ದುಬೈನಲ್ಲಿರುವ ತನ್ನ ಸ್ನೇಹಿತರಿಗೆ ಫೋಟೋ ಮತ್ತು ವಿಡಿಯೋಗಳನ್ನು ಈತ ಶೇರ್ ಮಾಡಿದ್ದಾನೆ ಎನ್ನುವ ಆರೋಪ ಕೇಳಿ ಬಂದಿದೆ. ಕಳೆದ ವರ್ಷ ಸೆಪ್ಟೆಂಬರ್ ನಲ್ಲಿ ಸೈಯದ್ ಮಹಿಳೆಯನ್ನು ಮದುವೆಯಾಗಿದ್ದ. ಆದರೆ ಈ ಮದುವೆ ಮೊದಲೇ ಈಗಾಗಲೇ ಆತನಿಗೆ ಮದುವೆ ಆಗಿತ್ತು ಎಂದು ಹೇಳಲಾಗುತ್ತಿದೆ. ಆದರೆ ಮೊದಲನೇ ಮದುವೆ ಆಗಿದ್ದು ತಿಳಿಸದೆ ಎರಡನೇ…
ನಾಳೆ, ಗುರುವಾರ, ಅಕ್ಟೋಬರ್ 2, ಗುರುವರಾಯ ವಿಜಯದಶಮಿ. ಇದರ ಜೊತೆಗೆ, ಈ ದಿನದಂದು, ಪೆರುಮಾಳ್ಗೆ ಸೇರಿದ ತಿರುವೋಣ ನಕ್ಷತ್ರವೂ ಬರುತ್ತದೆ. ಇದೇ ದಿನದಂದು, ಅತ್ಯಂತ ಶಕ್ತಿಶಾಲಿ ಅಭಿಜಿತ್ ನಕ್ಷತ್ರ ಸಮಯವೂ ಬರುತ್ತದೆ. ಈ ಶಕ್ತಿಶಾಲಿ ದಿನದಂದು, ಈ ಶಕ್ತಿಶಾಲಿ 24 ನಿಮಿಷಗಳಲ್ಲಿ, ನಾವು ಈ ವಿಶ್ವಕ್ಕೆ ಮಾಡುವ ಯಾವುದೇ ಪ್ರಾರ್ಥನೆಯೂ ಈಡೇರುತ್ತದೆ. ನಿಮ್ಮ ಜೀವನದ ಕಷ್ಟಗಳು ದೂರವಾಗುತ್ತವೆ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ,…
ಬೆಂಗಳೂರು : ನವೆಂಬರ್ ನಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗುತ್ತಾರೆ ಎಂದು ಸಂಸದ ಎಲ್.ಆರ್ ಶಿವರಾಮೇಗೌಡ ಹೇಳಿಕೆ ನೀಡಿದ್ದರು. ಅದಾದ ಬಳಿಕ ಇದೀಗ ಶಾಸಕ ಡಾ. ರಂಗನಾಥ್ ಕೂಡ ಡಿಕೆ ಶಿವಕುಮಾರ್ ಶೀಘ್ರದಲ್ಲಿ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಕುಣಿಗಲ್ ಕ್ಷೇತ್ರದ ಶಾಸಕ ಡಾಕ್ಟರ್ ರಂಗನಾಥ್ ಮಾತನಾಡಿ, ಕಾಂಗ್ರೆಸ್ ಪಕ್ಷ 140 ಸ್ಥಾನ ಗೆಲ್ಲಲು ಡಿಕೆ ಶಿವಕುಮಾರ್ ಅವರ ಸಾಕಷ್ಟು ಶ್ರಮವಿದೆ. ಡಿಕೆ ಶಿವಕುಮಾರ್ ಗೆ ಸ್ಥಾನಮಾನ ಕೊಡಲು ಹೈಕಮಾಂಡ್ ಚಿಂತನೆ ಮಾಡಬೇಕು.ಡಿಕೆ ಶಿವಕುಮಾರ್ ಒಂದಲ್ಲ ಒಂದು ದಿನ ಮುಖ್ಯಮಂತ್ರಿ ಆಗುತ್ತಾರೆ. ಹೈಕಮಾಂಡ್ ನಿರ್ಧಾರಕಾಗಿ ಪಕ್ಷದ ಕಾರ್ಯಕರ್ತರು ಕಾಯುತ್ತಿದ್ದಾರೆ. ಕಾರ್ಯಕರ್ತರು ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗುವ ಅಪೇಕ್ಷೆ ಪಡುತ್ತಿದ್ದಾರೆ. ರಾಜಕೀಯ ಅನ್ನೋದು ಕೃಷಿ ಇದ್ದಹಾಗೆ ಕೃಷಿಯಲ್ಲಿ ರಾಜಕೀಯದಲ್ಲಿ ಸಮಸ್ಯೆ ಬಗೆಹರಿಯಬೇಕು. ರಾಜಕೀಯದಲ್ಲಿ ಜನರ ಸಮಸ್ಯೆ ಬಗೆಹರಿಯಬೇಕು ಡಿಕೆ ಶಿವಕುಮಾರ್ ಹಾರ್ಡ್ಶಿಪ್ ನಂಬಿ ಕೆಲಸ ಮಾಡುತ್ತಾರೆ. ಬೆಳಗ್ಗೆ 8 ಗಂಟೆಯಿಂದ ಮಧ್ಯರಾತ್ರಿವರೆಗೂ ಕೆಲಸ ಮಾಡುತ್ತಾರೆ. ಡಿಕೆ ಶಿವಕುಮಾರ್ ಅವರಿಗೆ ಭಗವಂತನ…
ದಕ್ಷಿಣಕನ್ನಡ : ಧರ್ಮಸ್ಥಳದಲ್ಲಿ ದೊರೆತ ಮಾನವನ ಮೂಳೆಗಳು ಹಾಗೂ ಬುರುಡೆಗಳ ಕುರಿತು ಇದೀಗ ಈ ಒಂದು ಪ್ರಕರಣಕ್ಕೆ ಮತ್ತೊಂದು ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಬಂಗ್ಲೆ ಗುಡ್ಡದಲ್ಲಿ ಇದುವರೆಗೂ ದೊರೆತ ಬುರುಡೆ ಮತ್ತು ಮೂಳೆಗಳನ್ನು SIT ಅಧಿಕಾರಿಗಳು FSL ಗೆ ಕಳುಹಿಸಿಯೇ ಇಲ್ಲ ಎನ್ನುವುದು ಬಯಲಾಗಿದೆ. ಹೌದು ಬಂಗ್ಲೆ ಗುಡ್ಡದಲ್ಲಿ ಸಿಕ್ಕಿದ್ದ 7 ಬುರುಡೆ ಹಾಗೂ ಹಲವು ಮೂಳೆಗಳನ್ನು ಎಸ್ಐಟಿ ಅಧಿಕಾರಿಗಳು FSL ಗೆ ಕಳುಹಿಸಿಯೇ ಇಲ್ಲ ಎಂದು ತಿಳಿದುಬಂದಿದೆ . ಸೆಪ್ಟೆಂಬರ್ 6 ರಂದು ಬುರುಡೆ ಮತ್ತು ಮೂಳೆಗಳು ಬಂಗ್ಲೆ ಗುಡ್ಡದಲ್ಲಿ ಪತ್ತೆಯಾಗಿದ್ದವು. ಇದುವರೆಗೂ ಪತ್ತೆಯಾದ ಬುರುಡೆ ಮತ್ತು ಮೂಳೆಗಳು ಯಾರದ್ದು ಎಂದು ಕುತೂಹಲ ಮೂಡಿಸಿದ್ದು, ಎಸ್ಐಟಿಗೆ ಸಲ್ಲಿಕೆಯಾದ ಎಫ್ಎಸ್ಎಲ್ ರಿಪೋರ್ಟ್ ಇದೀಗ ಲಭ್ಯವಾಗಿದೆ. ಈ ಒಂದು ವರದಿಯಲ್ಲಿ ಮೂರು ತಲೆ ಬುರುಡೆ ಮತ್ತು ಮೂಳೆಗಳ ಎಫಎಸ್ಎಲ್ ವರದಿ ಲಭ್ಯವಾಗಿದೆ. ಮೊದಲನೆಯದ್ದು ಚಿನ್ನಯ್ಯ ಕೋರ್ಟಿಗೆ ತಂದಿದ್ದ ಬುರುಡೆ ಇದು ಸುಮಾರು 40 ವರ್ಷದ ಗಂಡಸಿನ ತಲೆ ಬುರುಡೆ ಎಂದು ತಿಳಿದುಬಂದಿದೆ. ಇನ್ನು…
ಬೆಂಗಳೂರು : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಉಸಿರಾಟದ ತೊಂದರೆ ಹಾಗೂ ಜ್ವರ ಕಾಣಿಸಿಕೊಂಡ ಕಾರಣ ಮಂಗಳವಾರ ಸಂಜೆ ಖರ್ಗೆ ಅವರನ್ನು ಬೆಂಗಳೂರಿನ ಎಂಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಗೆ ಆಗಮಿಸುತ್ತಿದ್ದಂತೆ ಹಿರಿಯ ವೈದ್ಯರು, ಹಲವು ಪರೀಕ್ಷೆಗಳನ್ನು ನಡೆಸಿದರು. ಸದ್ಯ ವೈದ್ಯರು ಚಿಕಿತ್ಸೆ ನೀಡುತ್ತಿದ್ದು, ಖರ್ಗೆ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಏನೋ ಇದೇ ವಿಚಾರವಾಗಿ ಸಚಿವ ಪ್ರಿಯಾಂಕ ಖರ್ಗೆ ಸಾಮಾಜಿಕ ಜಾಲತಾಣ ಟ್ವೀಟ್ ನಲ್ಲಿ ಈ ಕುರಿತು ಸ್ಪಷ್ಟನೆ ನೀಡಿದ್ದು, ಹೃದಯ ನಿಯಂತ್ರಕ (pacemaker) ಅಳವಡಿಸಲು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಹೃದಯದ ಅಸಹಜ ಲಯವನ್ನು ಸರಿಪಡಿಸುವ (pacemaker) ಅಳವಡಿಸಲು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ಆರೋಗ್ಯ ಸ್ಥಿರವಾಗಿದ್ದು, ಚೇತರಿಕೆ ಕಾಣುತ್ತಿದ್ದಾರೆ. ಎಲ್ಲರ ಹಾರೈಕೆ ಹಾಗೂ ಕಾಳಜಿಗೆ ಧನ್ಯವಾದಗಳು ಎಂದಿದ್ದಾರೆ. ಪೇಸ್ಮೇಕರ್ ಒಂದು ಸಣ್ಣ ಎಲೆಕ್ಟ್ರಾನಿಕ್ ಸಾಧನವಾಗಿದ್ದು, ಶಸ್ತ್ರ…
ಮೈಸೂರು : ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಹಿನ್ನೆಲೆಯಲ್ಲಿ ಇದೀಗ ಮೈಸೂರು ಅರಮನೆಯಲ್ಲಿ ರಾಜಸಾಂಪ್ರದಾಯದಂತೆ ಯದುವೀರ್ ಒಡೆಯರ್ ಅವರು ಆಯೋಗಗಳಿಗೆ ಪೂಜೆ ನೆರವೇರಿಸಿದರು.ಕರಿಕಲ್ಲು ತೊಟ್ಟಿಯಲ್ಲಿ ಯದುವೀರರಿಂದ ಪೂಜೆ ನಡೆಯುತ್ತಿದ್ದು, ಪಟ್ಟದ ಆನೆ, ಪಟ್ಟದ ಕುದುರೆ, ಪಟ್ಟದ ಒಂಟೆ, ಪಟ್ಟದ ಹಸು, ಅರಮನೆಯಲ್ಲಿರುವ ಐಷಾರಾಮಿ ಕಾರು ಮತ್ತು ಇತರೆ ವಾಹನಗಳಿಗೂ ಪೂಜೆ ಮಾಡಲಾಯಿತು. ಬೆಳಗ್ಗೆ 6 ಗಂಟೆಯಿಂದ ಚಂಡಿಕಾ ಹೋಮ ಆರಂಭವಾಗಿದ್ದು, ಬಳಿಕ 7:55ಕ್ಕೆ ಅರಮನೆಯಿಂದ ಕೋಡಿ ಸೋಮೇಶ್ವರ ದೇವಾಲಯಕ್ಕೆ ಪಲ್ಲಕ್ಕಿಯಲ್ಲಿ ಆಯುಧಗಳನ್ನು ಕೊಂಡೊಯ್ಯಲಾಗಿದೆ. ಬಳಿಕ ಆಯುಧಗಳನ್ನು ಶುಚಿಗೊಳಿಸಿ ವಾಪಸ್ ಅರಮನೆಗೆ ರವಾನಿಸಲಾಗುತ್ತದೆ. ಅರಮನೆಯ ಆನೆಬಾಗಿಲು ಮೂಲಕ ಕಲ್ಯಾಟಮಂಟಪಕ್ಕೆ ಕೊಂಡೊಯ್ದು ಜೋಡಣೆ ಮಾಡಿ, ಸಿಂಹಾಸನಕ್ಕೆ ಜೋಡಿಸಿದ್ದ ಸಿಂಹಕ್ಕೆ ಪೂಜೆ ಮಾಡಲಾಗುತ್ತದೆ. ಆ ನಂತರ ರಾಜಪುರೋಹಿತರ ಮಾರ್ಗದರ್ಶನದಂತೆ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಆಯುಧ ಪೂಜೆ ನೆರವೇರಿಸಿದ್ದಾರೆ. ಇನ್ನೂ ಸಂಜೆ ಖಾಸಗಿ ದರ್ಬಾರ್ ನಡೆಯಲಿದ್ದು, ಬೆಳ್ಳಿದ್ವಾರದಿಂದ ರಾಜರು ಪ್ರವೇಶಿಸುತ್ತಾರೆ. ಈ ಸಂದರ್ಭದಲ್ಲಿ ಹಸ್ತಲಾಘವದ ಮೂಲಕ ಸಿಂಹಾಸನದ ಏಳು ಮೆಟ್ಟಿಲು ಏರುತ್ತಾರೆ. ಸಿಂಹಾಸನವೇರಿ ರಾಜರು…
ಮಂಡ್ಯ : ಒಂದು ಕಡೆ ರಾಜ್ಯದಲ್ಲಿ ಇದೇ ತಿಂಗಳು ಬಹುದೊಡ್ಡ ಕ್ರಾಂತಿ ಆಗಲಿದೆ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಸ್ಪೋಟಕವಾದ ಹೇಳಿಕೆ ನೀಡಿದ್ದು ಇದರ ಮಧ್ಯ ಸಂಸದ ಎಲ್ ಆರ್ ಶಿವರಾಮೇಗೌಡ ಸಹ ಮುಂದಿನ ತಿಂಗಳು ಅಂದರೆ ನವೆಂಬರ್ ನಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಿಎಂ ಆಗಲಿದ್ದಾರೆ ಎಂದು ಸ್ಪೋಟಕ ಭವಿಷ್ಯ ನುಡಿದಿದ್ದಾರೆ. ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಮಾತನಾಡಿದ ಅವರು, ಡಿ.ಕೆ. ಶಿಕುಮಾರ್ ಅವರ ಹೋರಾಟಕ್ಕೆ ಫಲ ಸಿಕ್ಕೇ ಸಿಗುತ್ತದೆ. ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗುವ ಬಗ್ಗೆ ಹೈಕಮಾಂಡ್ ತೀರ್ಮಾನಿಸುತ್ತದೆ. ನವೆಂಬರ್ ನಲ್ಲಿ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗುವ ವಿಶ್ವಾಸವಿದೆ. ಎರಡೂವರೆ ವರ್ಷ ಅಧಿಕಾರ ಹಂಚಿಕೆಯಾಗಿರುವ ಬಗ್ಗೆ ಮಾಹಿತಿ ಇದೆ ಎಂದು ನಾಗಮಂಗಲದಲ್ಲಿ ಶಿವರಾಮೇಗೌಡ ತಿಳಿಸಿದ್ದಾರೆ.









