Author: kannadanewsnow05

ಬಾಗಲಕೋಟೆ : ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಹುಕ್ ಕಟ್ ಆಗಿ ಟ್ರ್ಯಾಕ್ಟರ್ ಪಲ್ಟಿ ಆಗಿದೆ. ಈ ವೇಳೆ ಕಬ್ಬು ಕಟಾವು ಕಾರ್ಮಿಕರ ಇಬ್ಬರು ಮಕ್ಕಳು ಸ್ಥಳದಲ್ಲಿ ಅವನಪ್ಪಿರುವ ಘಟನೆ ಕಮತಗಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಮಹಾರಾಷ್ಟ್ರ ಮುರದ ಕಾರ್ಮಿಕರ ಇಬ್ಬರು ಮಕ್ಕಳು ಸಾವನಪ್ಪಿದ್ದು ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಕಮತಿಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದ್ದು, 8 ವರ್ಷ ಮತ್ತು 10 ವರ್ಷದ ಬಾಲಕರು ಸಾವನ್ನಪ್ಪಿದ್ದಾರೆ. ಮತ್ತಿಬ್ಬರು ಬಾಲಕಿಯರಿಗೆ ಗಂಭೀರವಾದ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳದಲ್ಲಿ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ ಘಟನಾ ಸ್ಥಳಕ್ಕೆ ಅಮೀನಗಡ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡುತ್ತಿದ್ದಾರೆ.

Read More

ಧಾರವಾಡ : ಧಾರವಾಡದಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಚಿಕನ್ ಬಾರ್ಬೆಕ್ಯೂ ಮಾಡಲು ಹಚ್ಚಿದ್ದ ಒಲೆಯ ಹೊಗೆ ರೂಮ್‌ ತುಂಬಾ ಆವರಿಸಿ ಓರ್ವ ಸಾವನ್ನಪ್ಪಿ, 6 ಮಂದಿ ಅಸ್ವಸ್ಥರಾದ ಘಟನೆ ಧಾರವಾಡದಲ್ಲಿ ನಡೆದಿದೆ. ಅಸ್ವಸ್ಥರಾದವರಲ್ಲಿ ಮೂವರ ಸ್ಥಿತಿ ಚಿಂತಾಜನಕವಾಗಿದೆ. ಧಾರವಾಡ ನಗರದ ನಂದಿನಿ ಲೇಔಟ್‌ನಲ್ಲಿ ಈ ಒಂದು ದುರಂತ ಸಂಭವಿಸಿದ್ದು, ಮೃತ ಕಾರ್ಮಿಕನನ್ನು ಬಿಬೆಕ್ ಎಂದು ಗುರುತಿಸಲಾಗಿದ್ದು, ಅಸ್ವಸ್ಥರಾದವರನ್ನು ನರೇಶ್ (45), ನಿತೇಶ್ (18), ಡಿಕೆಶಿ (40), ಸುಧನ್ (30), ಕುಮಾರ್ (50) ಮತ್ತು ಲಕ್ಷ್ಮಣ್ (30) ಎಂದು ಗುರುತಿಸಲಾಗಿದೆ. ಅಸ್ವಸ್ಥರನ್ನೆಲ್ಲಾ ತಕ್ಷಣ ಧಾರವಾಡ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರಲ್ಲಿ ಇಬ್ಬರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಶುಕ್ರವಾರ (ಜ.9) ರಾತ್ರಿ ಈ ಏಳೂ ಜನ ಕೆಲಸಗಾರರು ತಾವು ವಾಸವಿದ್ದ ಮನೆಯಲ್ಲಿ ಬಾರ್ಬೆಕ್ಯೂ ಮಾಡಲು ತಂದೂರಿ ರೊಟ್ಟಿ ಮಾಡುವ ಒಲೆ ಹೊತ್ತಿಸಿದ್ದರು. ರಾತ್ರಿ ಊಟ ಮಾಡಿ ಎಲ್ಲರೂ ಮಲಗಿದ್ದರು. ಆದರೆ, ಒಲೆಯಿಂದ ಹೊಗೆ ಆವರಿಸಿ ಏಳೂ ಜನರಿಗೆ ಉಸಿರಾಟದ ತೊಂದರೆಯಾಗಿದೆ. ಬೆಳಗಿನವರೆಗೂ ಏಳೂ ಜನ…

Read More

ಹಾವೇರಿ : ಹಾವೇರಿಯಲ್ಲಿ ಗೃಹಿಣಿ ಒಬ್ಬರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಪತಿಯ ಮನೆಯಲ್ಲಿ ಮಹಿಳೆ ನೇಣು ಬಿಗಿದಿರುವ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಹಾವೇರಿ ಜಿಲ್ಲೆಯ ಶಿಗ್ಗಾವಿಯಲ್ಲಿ ಸುನಿತಾ ದೊಡ್ಡಮನಿ (35) ಎನ್ನುವವರ ಶವ ಪತ್ತೆಯಾಗಿದೆ. ಪತಿಯೇ ವರದಕ್ಷಿಣೆ ಕಿರುಕುಳ ನೀಡಿ ಕೊಲೆ ಮಾಡಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ. ಮದುವೆಯಾಗಿ ಕೇವಲ 9 ತಿಂಗಳು ಮಾತ್ರ ಆಗಿತ್ತು ಅಲ್ಲದೆ ಮಗಳು ಎರಡು ತಿಂಗಳ ಗರ್ಭಿಣಿ ಆಗಿದ್ದಳು. ಪತಿ ಗಿರೀಶ್ ದೊಡ್ಮನೆ ಕೊಲೆ ಮಾಡಿದ್ದಾನೆ ಎಂದು ಪೋಷಕರ ಆರೋಪಿಸಿದ್ದಾರೆ. ಆರೋಪಿಗಳನ್ನು ಬಂಧಿಸುವಂತೆ ಸುನಿತಾ ಪೋಷಕರು ಪ್ರತಿಭಟನೆ ಮಾಡುತ್ತಿದ್ದಾರೆ. ಶಿಗ್ಗಾವಿ ಪೊಲೀಸ್ ಠಾಣೆಯ ಮುಂದೆ ಪೋಷಕರು ಪ್ರತಿಭಟನೆ ಮಾಡುತ್ತಿದ್ದಾರೆ.

Read More

ಬೆಂಗಳೂರು : ಭಾಷಾ ವಿವಾದ ತಾರಕಕ್ಕೆ ಏರುತ್ತಿದ್ದಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಇದೀಗ ಸ್ಪಷ್ಟನೆ ಕೊಟ್ಟಿದ್ದು ಭಾಷಾ ಮಸೂದೆಯಲ್ಲಿ ಭಾಷಾ ಅಲ್ಪಸಂಖ್ಯಾತರ ರಕ್ಷಣೆ ಆಗುತ್ತದೆ ಕನ್ನಡ ತಮಿಳು ಭಾಷಾ ಅಲ್ಪಸಂಖ್ಯಾತರ ಹಕ್ಕು ರಕ್ಷಣೆ ಆಗುತ್ತದೆ ಹಕ್ಕುಗಳ ರಕ್ಷಣೆಯ ಬಗ್ಗೆ ಸೆಕ್ಷನ್ ಏಳರಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ ಮಸೂದೆಯಲ್ಲಿ ರಕ್ಷಣಾತ್ಮಕ ನಿಯಮಗಳನ್ನು ಅಳವಡಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಬರೆದ ಪತ್ರಕ್ಕೆ ಸ್ಪಷ್ಟನೆ ನೀಡಿದ್ದಾರೆ. ರಾಷ್ಟ್ರೀಯ ಶಿಕ್ಷಣ ಪಠ್ಯಕ್ರಮ ಅನ್ವಯ ಲಭವಿರುವ ಭಾಷೆ ಭಾಷೆಯನ್ನು ಆಯ್ಕೆ ಮಾಡಿಕೊಳ್ಳುವ ಸಂಪೂರ್ಣ ಸ್ವತಂತ್ರವಿದೆ. ಬೇರೆಯ ರಾಜ್ಯಗಳು ಅಥವಾ ವಿದೇಶದ ವಿದ್ಯಾರ್ಥಿಗಳು 9 ಮತ್ತು 10ನೇ ತರಗತಿ ಹಾಗೂ ಹೈಯರ್ ಸೆಕೆಂಡರಿ ಹಂತಗಳಲ್ಲಿ ಮಲಯಾಳಂ ಪರೀಕ್ಷೆ ಬರೆಯುವುದು ಕಡ್ಡಾಯಗೊಳಿಸಿಲ್ಲ. ಕೇರಳ ಸರ್ಕಾರದ ಈ ಮಲಯಾಳಂ ನೀತಿಯು ಸಂವಿಧಾನದ 346 ಮತ್ತು 347ನೇ ವಿಧಿಗಳ ಪ್ರಕಾರ ಇದೆ ಎಂದು ತಿಳಿಸಿದ್ದಾರೆ. ಕೇರಳದ ಪ್ರಗತಿ ಯಾವಾಗಲೂ ಸಮಾನತೆ ಮತ್ತು ಸಹೋದರತ್ವದಲ್ಲಿ ನೆಲೆಗೊಂಡಿರುವ ಸಮಗ್ರ ಅಭಿವೃದ್ಧಿಯಲ್ಲಿ ಬೇರೂರಿದೆ. ಜಾತ್ಯತೀತತೆ ಮತ್ತು ಬಹುತ್ವದ ಸಾಂವಿಧಾನಿಕ…

Read More

ಉತ್ತರಪ್ರದೇಶ : ಅಯೋಧ್ಯೆಯ ರಾಮ ಮಂದಿರ ಸಂಕೀರ್ಣದಲ್ಲಿ ಭದ್ರತಾ ವ್ಯವಸ್ಥೆಯಲ್ಲಿನ ಲೋಪ ಬೆಳಕಿಗೆ ಬಂದಿದೆ. ದಕ್ಷಿಣ ಗೋಡೆಯ ಪ್ರದೇಶದಲ್ಲಿ ನಮಾಜ್ ಮಾಡುತ್ತಿದ್ದ ಯುವಕನನ್ನು ಬಂಧಿಸಲಾಯಿತು. ನಮಾಜ್ ಮಾಡದಂತೆ ತಡೆದ ನಂತರ ಯುವಕ ಘೋಷಣೆಗಳನ್ನು ಕೂಗಿದ್ದಾನೆ ಎಂದು ಮೂಲಗಳು ತಿಳಿಸಿವೆ. ಗುಪ್ತಚರ ಸಂಸ್ಥೆಗಳು ಮತ್ತು ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಹೌದು ಬೆಳಿಗ್ಗೆ ಈ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ. ಆದರೆ, ಜಿಲ್ಲಾಡಳಿತ ಈ ವಿಷಯದ ಬಗ್ಗೆ ಇನ್ನೂ ಅಧಿಕೃತ ಹೇಳಿಕೆ ನೀಡಿಲ್ಲ. ರಾಮ ಮಂದಿರ ಟ್ರಸ್ಟ್ ಕೂಡ ಇಡೀ ಘಟನೆಯ ಬಗ್ಗೆ ಮೌನ ವಹಿಸಿದೆ. ಈ ವಿಷಯದ ಸೂಕ್ಷ್ಮತೆಯ ದೃಷ್ಟಿಯಿಂದ, ಯಾವುದೇ ರೀತಿಯ ವದಂತಿ ಅಥವಾ ಕಾನೂನು ಸುವ್ಯವಸ್ಥೆ ಉಂಟಾಗದಂತೆ ಭದ್ರತಾ ಸಂಸ್ಥೆಗಳು ಪ್ರತಿಯೊಂದು ಅಂಶವನ್ನೂ ತನಿಖೆ ನಡೆಸುತ್ತಿವೆ ಎಂದು ಮೂಲಗಳು ತಿಳಿಸಿವೆ. ಪ್ರತ್ಯಕ್ಷದರ್ಶಿಗಳು ಮತ್ತು ಮೂಲಗಳನ್ನು ಉಲ್ಲೇಖಿಸಿ ವರದಿ ಮಾಡಲಾಗಿದ್ದು, ಭದ್ರತಾ ಸಿಬ್ಬಂದಿ ಯುವಕನನ್ನು ತಡೆದಾಗ ಘೋಷಣೆಗಳನ್ನು ಕೂಗಲು ಪ್ರಾರಂಭಿಸಿದ್ದ ಎಂದು ಹೇಳಲಾಗುತ್ತಿದೆ. ಇದರ ಬೆನ್ನಲ್ಲಿಯೇ ಸ್ಥಳದಲ್ಲಿದ್ದ ಭದ್ರತಾ…

Read More

ಬೆಂಗಳೂರು : ಬೆಂಗಳೂರಿನಲ್ಲಿ ಗುರುತು ಪರಿಚಯ ಇಲ್ಲದವರು ಬಂದು ಬಾಡಿಗೆ ಮನೆ ಇದೆ ಅಂತ ಕೇಳುತ್ತಾರೆ. ಇದೀಗ ಗೃಹ ಸಚಿವರು ನಗರದಲ್ಲಿ ಬಾಡಿಗೆ ಕೊಡುವವರ ಮೇಲೆ ಹದ್ದಿನ ಕಣ್ಣು ಇಡುತ್ತೇವೆ, ನಾವು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ. ಮೊನ್ನೆ ಬೆಂಗಳೂರಿನಲ್ಲಿ ಕೆಲ ಬಾಂಗ್ಲಾ ವಲಸಿಗರನ್ನ ಹಿಡಿದಿದ್ದೇವೆ, ಅವರನ್ನು ಕಳುಹಿಸುವ ಪ್ರಕ್ರಿಯೆ ಮಾಡ್ತಿದೀವಿ. ಕೊತ್ತನೂರು, ಲಿಂಗರಾಜಪುರದಲ್ಲಿ ಆಫ್ರಿಕಾದವರು ಜಾಸ್ತಿ ಇದ್ದಾರೆ. ಅಲ್ಲಿ ಬಾಡಿಗೆ ಕೊಡೋರು ಎಚ್ಚರಿಕೆ ವಹಿಸಬೇಕು. ದಾಖಲಾತಿ, ವೀಸಾ ಪರಿಶೀಲಿಸಬೇಕು ಎಂದು ಎಚ್ಚರಿಸಿದ್ದಾರೆ. ಇದೇ ವೇಳೆ ಬಾಂಗ್ಲಾ ವಲಸಿಗರು ಬೆಂಗಳೂರಲ್ಲಿ ಬೀಡುಬಿಟ್ಟ ಆರೋಪ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಬಾರ್ಡರ್ ನೋಡೋರು ಯಾರು? ಕೇಂದ್ರ ಸರ್ಕಾರ. ಅಲ್ಲಿ ರಕ್ಷಣಾ ಇಲಾಖೆ, ಕೇಂದ್ರ ಸರ್ಕಾರ ಇರುತ್ತದೆ. ಅಲ್ಲಿ ಬಿಗಿಯಾದ ಬಂದೋಬಸ್ತ್ ಮಾಡಿ, ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

Read More

ಬೆಂಗಳೂರು : ಬೆಂಗಳೂರಿನಲ್ಲಿ ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಯುವತಿಯನ್ನು ಕೊಲೆ ಮಾಡಲು ಯುವಕ ಸ್ಕೆಚ್ ಹಾಕಿರುವ ಘಟನೆ ವರದಿಯಾಗಿದೆ. ಯುವತಿಯನ್ನು ಕೊಲ್ಲಲು ಹಾಡು ಹಗಲೇ ಯುವಕ ಗನ್ ಹಿಡಿದು ಓಡಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಮಲ್ಲಾಪುರ ಗ್ರಾಮದಲ್ಲಿ ನಡೆದಿದೆ. ಹೌದು ಯುವತಿಯನ್ನು ಕೊಲ್ಲಲು ಆನ್ಲೈನ್ ಮುಖಾಂತರ ಯುವಕ ಏನ್ ಖರೀದಿ ಮಾಡಿದ್ದ ಎನ್ನಲಾಗಿದೆ. ಆದರೆ ಯುವತಿಯ ಸಮಯಪ್ರಜ್ಞೆಯಿಂದ 112ಕ್ಕೆ ಕರೆ ಮಾಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾಳೆ. ಈ ವೇಳೆ ತಕ್ಷಣ ಪೊಲೀಸರು ಗನ್ ಸಮೇತ ಬಿಹಾರ್ ಮೂಲದ ಯುಗಗಳನ್ನು ವಶಕ್ಕೆ ಪಡೆದಿದ್ದಾರೆ. ಯುವಕ ಗನ್ ಹಿಡಿದು ಓಡಾಡುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ಕುರಿತು ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಬೆಂಗಳೂರಿನಲ್ಲಿ ಡೆಂಟಲ್ ವಿದ್ಯಾರ್ಥಿನಿ ಒಬ್ಬಳು ಕಾಲೇಜು ಆಡಳಿತ ಮಂಡಳಿ ಕಿರುಕುಳಕ್ಕೆ ತಳಲಾರದೆ ಸಾವನ್ನಪ್ಪಿರುವ ಘಟನೆ ನಡೆದಿತ್ತು. ಬೊಮ್ಮನಹಳ್ಳಿಯ ಯಶಸ್ವಿನಿ (19) ಎನ್ನುವ ವಿದ್ಯಾರ್ಥಿನಿ ನಿನ್ನೆ ಆತ್ಮಹತ್ಯೆಗೆ ಶರಣಾಗಿದ್ದಳು. ಇದೀಗ ಈ ಒಂದು ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಹೌದು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಯಶಸ್ವಿನಿ ಕಣ್ಣೀರು ಹಾಕಿದ ವಿಡಿಯೋ ವೈರಲ್ ಆಗಿದೆ. ಆತ್ಮಹತ್ಯೆಗೆ ಮುನ್ನ ಯಶಸ್ವಿನಿ ಕಣ್ಣೀರು ಹಾಕಿದ್ದಾಳೆ. ಪರೀಕ್ಷೆಯ ವೇಳೆ ಓಎಂಆರ್ ಶೀಟ್ ಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ್ದಾಳೆ. ಕಾಲೇಜು ಆಡಳಿತ ಮಂಡಳಿ ಕಿರುಕುಳಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವ ಆರೋಪ ಕೇಳಿ ಬಂದಿದ್ದು ಉಪನ್ಯಾಸಕ ಮತ್ತು ಕಾಲೇಜು ಆಡಳಿತ ಮಂಡಳಿ ಕಿರುಕುಳ ನೀಡಿದ್ದಾರೆ. ಬೊಮ್ಮನಹಳ್ಳಿಯ ಆಕ್ಸ್ಫರ್ಡ್ ಕಾಲೇಜಿನಲ್ಲಿ ಯಶಸ್ವಿನಿ ಡೆಂಟಲ್ ಮೂರನೇ ವರ್ಷದಲ್ಲಿ ಓದುತ್ತಿದಳು. ಇನ್ನು ಆತ್ಮಹತ್ಯೆಗೂ ಮುನ್ನ ಯಶಸ್ವಿನಿ ಡೆತ್ ನೋಟ್ ಬರೆದಿಟ್ಟು ಸಾವನಪ್ಪಿದ್ದಾಳೆ. ಡೆತ್ ನೋಟ್ನಲ್ಲಿ ನನ್ನ ಸಾವಿಗೆ ಯಾರು ಕಾರಣ ಅಲ್ಲ ನಾನು ಬದುಕೋಕೆ ಯೋಗ್ಯಲಲ್ಲ ನನ್ನನ್ನು ಕ್ಷಮಿಸಿಬಿಡಿ ನಾನು ಒಳ್ಳೆಯ ಮಗಳಲ್ಲ ಸಾರಿ…

Read More

ಚಾಮರಾಜನಗರ : ಚಾಮರಾಜನಗರದಲ್ಲಿ ಹುಲಿಗಳ ಉಪಟಳ ಇದೀಗ ಮುಂದುವರೆದಿದೆ. ಬರ್ಗಿ ಬಳಿ ಜಮೀನಿನಲ್ಲಿ ಮೇಯುತಿದ್ದ ಹಸುವಿನ ಮೇಲೆ ಹುಲಿ ದಾಳಿ ಮಾಡಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬರ್ಗಿ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ. ಗ್ರಾಮದ ಜಮೀನಿನಲ್ಲಿ ಹಸುವಿನ ಮೇಲೆ ಹುಲಿ ದಾಳಿ ಮಾಡಿದೆ. ಹುಲಿ ದಾಳಿಯಿಂದ ಗ್ರಾಮದ ನಿವಾಸಿಗಳು ಇದೀಗ ಕಂಗಾಲಾಗಿದ್ದಾರೆ. ವಾರದ ಹಿಂದೆಯೇ ಗ್ರಾಮದ ಮುಕ್ತಿ ಕಾಲೋನಿಯಲ್ಲಿ ಹುಲಿ ಕಾಣಿಸಿಕೊಂಡಿತ್ತು. ಪದೇ ಪದೇ ಹುಲಿ ದಾಳಿಯಿಂದ ಗ್ರಾಮಸ್ಥರು ರೋಸಿ ಹೋಗಿದ್ದಾರೆ.

Read More

ಬೆಂಗಳೂರು : ಸಿಡಿ ಫ್ಯಾಕ್ಟರಿ ಇದ್ದಿದ್ದೆ ಹೊಳೆನರಸೀಪುರ ಪದ್ಮನಾಭನಗರದಲ್ಲಿ. ಆ ಫ್ಯಾಕ್ಟರಿಯಲ್ಲಿ ಸಿಡಿ ಯಾರು ಮ್ಯಾನುಫ್ಯಾಕ್ಚರ್ ಮಾಡುತ್ತಿದ್ದಾರೆ ಎಂದು ಮಾಜಿ ಸಂಸದ ಅಡಿಕೆ ಸುರೇಶ್ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ಗಂಭೀರವಾದ ಆರೋಪ ಮಾಡಿದ್ದಾರೆ. ಈ ವಿಚಾರವಾಗಿ ಮಾತನಾಡಿದ ಅವರು ಎಚ್ ಡಿ ಕುಮಾರಸ್ವಾಮಿ ಅವರೇ ನಿಮ್ಮ ಇಲಾಖೆಯಿಂದ ಏನು ಮಾಡಿದ್ದೀರಿ? ಜೆಡಿಎಸ್ ನವರಿಗೆ ಕೆಲಸ ಇಲ್ಲ. ಇಡೀ ದೇಶದಲ್ಲಿ ಅತ್ಯಂತ ಹೀನಾಯವಾದ ಕೃತ್ಯ ಎಂದರೆ ಅದು ಹಾಸನದಲ್ಲಿ ನಡೆದ ದುರ್ಘಟನೆ.ಅದರ ಬಗ್ಗೆ ಒಂದು ವಿಷಾದ ವ್ಯಕ್ತ ಪಡಿಸಲಿಕ್ಕೆ ಆಗದೆ ಇರುವಂತಹ ಜೆಡಿಎಸ್ ಮುಖಂಡರುಗಳು ಯಾರ್ಯಾರು ಬಿಟ್ ಮಾಡುತ್ತಿದ್ದಾರೆ ಅವರಿಗೆ ಇದರ ಬಗ್ಗೆ ಮಾತನಾಡುವುದಕ್ಕೆ ನೈತಿಕತೆ ಏನಿದೆ? ಎಚ್ ಡಿ ಕುಮಾರಸ್ವಾಮಿ ಅವರೇ, ಮೊದಲು ಎಚ್ ಎಂ ಟಿ ಅವರಿಗೆ ನ್ಯಾಯ ಕೊಡಿಸಿ ಎಂದು ಆಕ್ರೋಶ ಹೊರಹಾಕಿದ್ದಾರೆ.

Read More