Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೇಲಿನಲ್ಲಿರುವ ನಟ ದರ್ಶನ್, ಹಾಸಿಗೆ ದಿಂಬು ಸೇರಿದಂತೆ ಕನಿಷ್ಠ ಸೌಲಭ್ಯ ನೀಡುವಂತೆ ಕೋರಿ ಅರ್ಜಿ ಸಲ್ಲಿಸಿದ್ದರು. ಇಂದು ಬೆಂಗಳೂರಿನ 57ನೇ ಸಿಸಿಎಚ್ ಕೋರ್ಟ್ ನಲ್ಲಿ ವಿಚಾರಣೆ ನಡೆದು, ತಿಂಗಳಿಗೊಮ್ಮೆ ಬಟ್ಟೆ, ಹೊದಿಕೆ ಒದಗಿಸಲು ಮಾತ್ರ 57ನೇ ಸಿಸಿಹೆಚ್ ಕೋರ್ಟ್ ಆದೇಶಿಸಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ ಶೀಘ್ರ ವಿಚಾರಣೆ ಕೋರಿದ ಎಸ್ಪಿಪಿ ಅರ್ಜಿಯನ್ನು ಕೋರ್ಟ್ ಮಾನ್ಯ ಮಾಡಿದೆ. ಅ.31 ರಂದು ದೋಷಾರೋಪ ನಿಗದಿಗೆ ಕೋರ್ಟ್ ಸೂಚನೆ ನೀಡುವ ಮೂಲಕ ದರ್ಶನ್ಗೆ ಡಬಲ್ ಶಾಕ್ ಕೊಟ್ಟಿದೆ. ದರ್ಶನ್ ಮತ್ತು ಪವಿತ್ರ ಗೌಡ ಸೇರಿದಂತೆ 6 ಜನ ಆರೋಪಿಗಳು ವಿಡಿಯೋ ಕಾನ್ಫರೆನ್ಸ್ನಲ್ಲಿ ಹಾಜರಾಗಿದ್ದರೆ ಉಳಿದ ಆರೋಪಿಗಳು ನ್ಯಾಯಾಲಯದಲ್ಲಿ ಖುದ್ದಾಗಿ ಹಾಜರಾಗಿದ್ದರು.a
ಕೊಪ್ಪಳ : ಪತ್ನಿ ಬಿಟ್ಟು ಹೋಗಿದ್ದಕ್ಕೆ ವಿಷ ಕುಡಿದ ಪತಿಗೆ ಉಪಲೋಕಾಯುಕ್ತ ನ್ಯಾ.ವೀರಪ್ಪ ತರಾಟೆ ತೆಗೆದುಕೊಂಡಿದ್ದಾರೆ. ಜಿಲ್ಲಾಸ್ಪತ್ರೆಯಲ್ಲಿ ಉಪಲೋಪಯುಕ್ತ ಬಿ.ವೀರಪ್ಪ ಕ್ಲಾಸ್ ತೆಗೆದುಕೊಂಡಿದ್ದಾರೆ. ವಿಷ ಕುಡಿದು ಏನು ಸಾಧನೆ ಮಾಡುತ್ತೀಯಾ? ಎಂದು ಬೈದು ಬುದ್ಧಿವಾದ ಹೇಳಿದ್ದಾರೆ. ಹೆಂಡತಿ ಬಿಟ್ಟು ಹೋದರೆ ಕೋರ್ಟಿಗೆ ಹೋಗು. ನೀನು ಡ್ರಿಂಕ್ಸ್ ಮಾಡ್ತೀಯಾ?ಯಾವ ಬ್ರಾಂಡ್ ಕುಡಿತಿಯ ಎಂದು ಉಪ ಲೋಕಾಯುಕ್ತ ವೀರಪ್ಪ ಇದೆ ವೇಳೆ ಕೇಳಿದರು. ಕೊಪ್ಪಳದ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿದಾಗ ಈ ಒಂದು ಘಟನೆ ನಡೆದಿದೆ. ಕೊಪ್ಪಳ ಜಿಲ್ಲಾ ಆಸ್ಪತ್ರೆಗೆ ಉಪ ಲೋಕಾಯುಕ್ತ ನ್ಯಾ. ಬಿ. ವೀರಪ್ಪ ಭೇಟಿ ನೀಡಿದಾಗ ಹರಿದ ಹಾಸಿಗೆ ತಲೆದೆಂಬ ನೋಡಿ ಉಪಲೋಕಾಯುಕ್ತ ವೀರಪ್ಪ ಗರಂ ಆದರು. ಅವರು ಆಸ್ಪತ್ರೆಯ ಬೆಡ್ ಪರಿಶೀಲನೆ ನಡೆಸಿದರು. ರೋಗಿಗಳಿಗೆ ಹರಿದ ಬೆಡ್ ತಲೆದೆಂಬು ನೀಡಿರುವುದಕ್ಕೆ ಆಕ್ರೋಶ ಹೊರಹಾಕಿದರು. ಕೊಪ್ಪಳ ಜಿಲ್ಲಾ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿಗಳ ವಿರುದ್ಧ ತೀವ್ರ ಅಸಮಾಧಾನ ಹೊರಹಾಕಿದ್ದಾರೆ.ನಾಳೆಯೊಳಗೆ ರೋಗಿಗಳಿಗೆ ಒಳ್ಳೆಯ ಬೆಡ್ ತಲೆದೆಂಬು ನೀಡಿ ಎಂದು ವೈದ್ಯರಿಗೆ ಸೂಚನೆ…
BREAKING : ಬೆಂಗಳೂರಲ್ಲಿ ನಿಲ್ಲದ ರೋಡ್ ರೇಜ್ ಪ್ರಕರಣ : ಕಾರಿನ ಮಿರರ್ ಟಚ್ ಆಗಿದಕ್ಕೆ ಬೈಕ್ ಸವಾರನನ್ನು ಕೊಂದ ದಂಪತಿ!
ಬೆಂಗಳೂರು : ಬೆಂಗಳೂರಲ್ಲಿ ಮತ್ತೊಂದು ರೋಡ್ ರೇಜ್ ಪ್ರಕರಣ ನಡೆದಿದ್ದು, ಕಾರಿನ ಮಿರರ್ ಗೆ ಬೈಕ್ ಟಚ್ ಆಗಿದ್ದಕ್ಕೆ ಸವಾರರರನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ಕಾರಿನಿಂದ ಬೈಕಿಗೆ ಡಿಕ್ಕಿ ಹೊಡೆಸಿ ಹತ್ಯೆ ಮಾಡಲಾಗಿದೆ. ಬೆಂಗಳೂರಿನ ಪುಟ್ಟೇನಹಳ್ಳಿಯ ಶ್ರೀರಾಮ ಲೇಔಟ್ ನಲ್ಲಿ ಈ ಒಂದು ಘಟನೆ ನಡೆದಿದೆ. ಅಕ್ಟೋಬರ್ 25ರಂದು ದಂಪತಿಯಿಂದ ಬೈಕ್ ಸವಾರನ ಕೊಲೆಯಾಗಿದೆ. ಸದ್ಯ ಘಟನೆಗೆ ಸಂಬಂಧಿಸಿದಂತೆ ಪುಟ್ಟಿನಹಳ್ಳಿಯ ಮನೋಜ್ ಮತ್ತು ಆತನ ಪತ್ನಿ ಆರತಿ ಶರ್ಮಾಳನ್ನು ಪೊಲೀಸರಿಗೆ ಅರೆಸ್ಟ್ ಮಾಡಿದ್ದಾರೆ. ಅಕ್ಟೋಬರ್ 21 ರಾತ್ರಿ 11:30ಕ್ಕೆ ದರ್ಶನ ಮತ್ತು ವರುಣ್ ಹೊರಗಡೆ ಬಂದಿದ್ದರು. ಇದೇ ವೇಳೆ ಕಾರಿನಲ್ಲಿ ಮನೋಜ್ ಮತ್ತು ಆರದಿ ಬರುತ್ತಿದ್ದರು. ಶ್ರೀರಾಮ ಲೇಔಟ್ ಬಳಿ ಕಾರಿನ ಮೇರರಿಗೆ ಬೈಕ್ ಟಚ್ ಆಗಿದೆ. ಬೈಕ್ ಸವಾರರು ದಂಪತಿ ಮನೋಜ್ ಮತ್ತು ಆರತಿಯಿಂದ ಪಾರಾಗಿದ್ದಾರೆ. ಮತ್ತೆ ಮನೋಜ್ ಯುಟರ್ನ್ ತೆಗೆದುಕೊಂಡು ಹೋಗಿ ದಂಪತಿಗಳು ಬೈಕ್ ಪತ್ತೆ ಹಚ್ಚಿದ್ದಾರೆ. ಈ ವೇಳೆ ಹಿಂದಿನಿಂದ ಬೈಕ್ ಗೆ ಕಾರಿನಿಂದ ಡಿಕ್ಕಿ ಹೊಡೆದ…
ಬೆಂಗಳೂರು : ಇಂದಿಗೆ ಕರ್ನಾಟಕ ರತ್ನ ಡಾ.ಪುನೀತ್ ರಾಜಕುಮಾರ್ ನಮ್ಮನ್ನೆಲ್ಲ ಅಗಲಿ 4 ವರ್ಷ ಕಳೆಯಿತು. ಈ ಹಿನ್ನೆಲೆ ಅವರ ಪುಣ್ಯಸ್ಮರಣೆ ಹಿನ್ನೆಲೆಯಲ್ಲಿ ಕಂಠೀರವ ಸ್ಟುಡಿಯೋದಲ್ಲಿ ರಾಘವೇಂದ್ರ ರಾಜಕುಮಾರ್ ಶಿವರಾಜಕುಮಾರ್ ಸೇರಿದಂತೆ ಕುಟುಂಬ ವರ್ಗದವರು ಪುನೀತ್ ರಾಜಕುಮಾರ್ ಸಮಾಧಿಗೆ ಪೂಜೆ ಸಲ್ಲಿಸಿದರು. ಬಳಿಕ ಮಾಧ್ಯಮಗಳೊಂದಿಗೆ ನಟ ಶಿವರಾಜ್ ಕುಮಾರ್ ಮಾತನಾಡಿ ಪುನೀತ್ ಇಲ್ಲ ಅಂತ ಅಂದುಕೊಂಡರೆ ಕಷ್ಟ ಆಗುತ್ತದೆ. ಅಪ್ಪು ನೆನಪಿನಲ್ಲಿ ಬಾಳಬೇಕು. ನಮ್ಮಲ್ಲಿ ಅವನನ್ನು ತೋರಿಸುವುದಕ್ಕೆ ಪ್ರಯತ್ನ ಮಾಡುತ್ತಿದ್ದೇನೆ. ಅಪ್ಪು ಇದ್ದಾನೆ ಅಂತ ಅಂದುಕೊಂಡು ಮಾತನಾಡುತ್ತೇನೆ. AI ಮೂಲಕ ಶಿವಣ್ಣ ಪುನೀತ್ ಸಿನಿಮಾ ಮಾಡುವ ವಿಚಾರವಾಗಿ ಐ ನಿಂದ ಸಿನಿಮಾ ಮಾಡುವುದಾದರೆ ಅಚ್ಚು ಕಟ್ಟಾಗಿ ಬರಬೇಕು ಹಾಗಿದ್ದಾಗ ಮಾಡೋಣ ಎಂದು ನಟ ಶಿವರಾಜ್ ಕುಮಾರ್ ತಿಳಿಸಿದರು.a
ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆ ವಿಚಾರಕ್ಕೆ ಸಂಬಂಧಪಟ್ಟಂತೆ ಮಾಜಿ ಸಂಸದ ಡಿಕೆ ಸುರೇಶ್ ಅವರು ಪ್ರತಿಕ್ರಿಯೆ ನೀಡಿದ್ದು, ಅಣ್ಣನನ್ನ ಮುಖ್ಯಮಂತ್ರಿ ಮಾಡಬೇಕೆಂಬ ಆಸೆ ನನಗೂ ಇದೆ ಎಂದು ತಿಳಿಸಿದರು. ಬೆಂಗಳೂರಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಹುಲ್ ಗಾಂಧಿ ರಾಜ್ಯಕ್ಕೆ ಆಗಮಿಸುವ ಕುರಿತು, ಅಣ್ಣನನ್ನು ಮುಖ್ಯಮಂತ್ರಿ ಮಾಡಬೇಕೆಂಬ ಆಸೆ ನನಗೂ ಇದೆ. ಅವರ ಹಣೆಯಲ್ಲಿ ಬರೆದಿದ್ರೆ ಸಿಎಂ ಆಗುತ್ತಾರೆ. ನವೆಂಬರ್ 15ರ ಕ್ರಾಂತಿ ಬಗ್ಗೆ ಮಾಹಿತಿ ಇಲ್ಲ ನವೆಂಬರ್ ಅಂದ್ರೆ ನನಗೆ ನೆನಪಾಗೋದು ಕನ್ನಡ ರಾಜ್ಯೋತ್ಸವ. ಸಿದ್ದರಾಮಯ್ಯ ಮತ್ತೆ ಚುನಾವಣೆಯಲ್ಲಿ ಸ್ಪರ್ಧೆಸಿದರೆ ಒಳ್ಳೆಯದು. 98-95 ವಯಸ್ಸು ಆಗಿರುವವರು ರಾಜಕೀಯದಲ್ಲಿ ಇದ್ದಾರೆ. ರಾಜಣ್ಣ ಸಲಹೆ ಅಭಿಪ್ರಾಯಗಳನ್ನು ವರಿಷ್ಟರಿಗೆ ತಿಳಿಸ್ತಾರೆ, ಸ್ವಾಗತ ಎಲ್ಲಾ ಸಂದರ್ಭದಲ್ಲಿ ಎಲ್ಲರನ್ನು ಸಂತೋಷಪಡಿಸಲು ಆಗಲ್ಲ ನಾನು ಯಾವಾಗ್ಲೂ ಎಣ್ಣೆಯನ್ನು ಮೈಗೆ ಹಚ್ಚಿಕೊಳ್ಳುವುದಿಲ್ಲ. ಹೆಚ್ಚುವರಿ ಉಪಮಂತ್ರಿಗಳ ನೇಮಕಕ್ಕೆ ಒತ್ತಾಯ ವಿಚಾರವಾಗಿ, ಎಲ್ಲರ ಸಲಹೆಗಳನ್ನು ಹೈಕಮಾಂಡ್ ಗಮನಿಸುತ್ತೆ. ದಲಿತ ಸಿಎಂ ಚರ್ಚೆ ವಿಚಾರ ಸ್ವಾಗತ, ಸಮಾವೇಶ ಒಳ್ಳೆಯದು ಎಂದು ಮಾಜಿ ಸಂಸದ…
ಚಿಕ್ಕಮಗಳೂರು : ಕೈ ಕಾರ್ಯಕರ್ತರಿಂದಲೇ ನಯನ ಮೋಟಮ್ಮ ಆಪ್ತನ ಮೇಲೆ ಹಲ್ಲೆ ನಡೆಸಲಾಗಿದೆ. ಚಿಕ್ಕಮಗಳೂರಿನ ಆದಿಶಕ್ತಿ ನಗರದಲ್ಲಿ ಈ ಒಂದು ಘಟನೆ ನಡೆದಿದ್ದು ಮನೆಗೆ ನುಗ್ಗಿ ಶಾಸಕಿ ನಯನ ಆಪ್ತ ಆದಿತ್ಯನ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ಮಾಡಿದ್ದಾರೆ. ಕಾಂಗ್ರೆಸ್ ಮುಖಂಡ ರಾಯಿಲ್ ಸೇರಿ ಕಾರ್ಯಕರ್ತರು ಹಲ್ಲೆ ಮಾಡಿದ್ದಾರೆ. ಆದಿತ್ಯ ಮಹಿಳೆಯರು ಸೇರಿ ಕಾಂಗ್ರೆಸ್ ಮುಖಂಡರಿಗೆ ಬ್ಲಾಕ್ ಮೇಲ್ ಮಾಡಿರುವ ಆರೋಪ ಕೇಳಿ ಬಂದಿದ್ದು, ವಿಡಿಯೋ ಮತ್ತು ಆಡಿಯೋ ಇಟ್ಟುಕೊಂಡು ಬ್ಲ್ಯಾಕ್ಮೇಲ್ ಆರೋಪ ಕೇಳಿ ಬಂದಿದೆ. ಯುವತಿಯ ವಿಡಿಯೋ ಇಟ್ಟುಕೊಂಡು ಬ್ಲಾಕ್ಮೇಲ್ ಮಾಡಿರುವ ಆರೋಪ ಕೇಳಿ ಬಂದಿದ್ದು ಮಹಿಳೆ ಚಿಕ್ಕಮಗಳೂರು ನಗರ ಠಾಣೆಯಲ್ಲಿ ದೂರು ನೀಡಿದ್ದಾಳೆ. ಸದ್ಯ ಪೊಲೀಸರು ತುಮಕೂರಿನಲ್ಲಿ ಆದಿತ್ಯನನ್ನು ಅರೆಸ್ಟ್ ಮಾಡಿದ್ದಾರೆ. ಅರೆಸ್ಟ್ ಮಾಡಿ ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.
ಬೆಂಗಳೂರು : ವೈಫೈ ಯೂಸರ್ ನೇಮ್ ನಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ದೇಶ ವಿರೋಧಿ ಯೂಸರ್ ನೇಮ್ ಬಳಕೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಜಿಗಣಿ ಪೊಲೀಸ್ ಠಾಣಾ ವ್ಯಾಪ್ತಿಯ ಕಲ್ಲುಬಾಳುನಲ್ಲಿ ಮೊಬೈಲ್ ವೈಫ್ ಆನ್ ಮಾಡಿದ್ರೆ ಪಾಕಿಸ್ತಾನ್ ಜಿಂದಾಬಾದ್ ಎಂದು ದೇಶದ್ರೋಹಿ ಯೂಸರ್ ನೇಮ್ ತೋರಿಸುತ್ತಿದೆ. ಗ್ರಾಮದಲ್ಲಿ ದೇಶ ವಿರೋಧಿ ಭಯೋತ್ಪಾದಕ ಶಕ್ತಿ ಇದೆ ಎಂದು ಶಂಕಿಸಲಾಗಿದ್ದು, ಜಿಗಣಿ ಪೊಲೀಸ್ ಠಾಣೆಗೆ ಭಜರಂಗದಳ ಕಾರ್ಯಕರ್ತರು ದೂರು ನೀಡಿದ್ದಾರೆ. ಎನ್ ಸಿಆರ್ ದಾಖಲಿಸಿ ಪೊಲೀಸರು ತನಿಖೆಗೆ ಮುಂದಾಗಿದ್ದಾರೆ.
ಬೆಂಗಳೂರು : ಬೆಂಗಳೂರಲ್ಲಿ ಅಪಹರಣ ಪ್ರಕರಣಕ್ಕೆ ಸಂಬಂಧಪಟ್ಟಂತೆ ವ್ಯಕ್ತಿ ಒಬ್ಬರನ್ನು ದುಷ್ಕರ್ಮಿಗಳು ಕಿಡ್ನ್ಯಾಪ್ ಮಾಡಿ ಹಣ ಕೊಡದಿದ್ದರೆ ರೇಣುಕಾಸ್ವಾಮಿ ರೀತಿ ಸಾಯಬೇಕಾಗುತ್ತದೆ ಎಂದು ಧಮ್ಕಿ ಹಾಕಿರುವ ಘಟನೆ ಬೆಂಗಳೂರಿನ ಚಂದ್ರಲೇಔಟ್ ನಲ್ಲಿ ನಡೆದಿದೆ. ಮಂಡ್ಯ ಮೂಲದ ಬಾಗೇಗೌಡನನ್ನು ಕಿಡ್ನಾಪ್ ಮಾಡಿ ಹಲ್ಲೆ ಮಾಡಲಾಗಿದ್ದು ಮಂಜುನಾಥ್ ಹಲಗೂರು ಮತ್ತು ಪರಮೇಶಪ್ಪ ಹಲಗೂರು ನಿಂದ ಈ ಒಂದು ಕೃತ್ಯ ನಡೆದಿದೆ. ಮಂಜುನಾಥ್ ಹಾಗೂ ಬಾಗೇಗೌಡ ಎರಡು ವರ್ಷದಿಂದ ಸ್ನೇಹಿತರು ಗ್ಲೋಬಲ್ ಲಿಮಿಟೆಡ್ ಕಂಪನಿಯಲ್ಲಿ ಇಬ್ಬರು ಹೂಡಿಕೆ ಮಾಡಿದ್ದರು. ಕೊನೆಗೆ ಕಂಪನಿ ನಷ್ಟವಾಗಿ ಆ ಪ್ರಕರಣ ಸದ್ಯ ಸಿಐಡಿ ತನಿಖೆಯಲ್ಲಿ ಇದೆ. ಬಾಗೇಗೌಡನನ್ನು ನಂಬಿ ಹಣ ಹೂಡಿಕೆ ಮಾಡಿದ್ದರಿಂದ ಮಂಜುನಾಥ್ ಬಾಗೇಗೌಡನ ಸಿಟ್ಟಾಗಿದ್ದ ಹಾಗಾಗಿ ಪ್ಲಾನ್ ಮಾಡಿ ಬಾಗೇಗೌಡನನ್ನು ಕರೆಸಿಕೊಂಡಿದ್ದ. ಸನ್ ಶೈನ್ ಹೋಟೆಲ್ ನಲ್ಲಿ ಮಂಜುನಾಥ್ ರೂಮ್ ಬುಕ್ ಮಾಡಿದ್ದ. ಬಳಿಕ ಆಚೆ ಹೋಗಿ ಬರೋಣ ಎಂದು ಗೋದಾಮಿಗೆ ಕರೆದುಕೊಂಡು ಹೋಗಿದ್ದ. ಗೋದಾಮಿನಲ್ಲಿ ಎಂಟು ಜನರ ಜೊತೆ ಮಂಜುನಾಥ್ ಹಲ್ಲೆ ಮಾಡಿದ್ದಾನೆ. ಹಣ ಕೊಡದೆ…
ಬೆಳಗಾವಿ : ಬೆಳಗಾವಿಯಲ್ಲಿ ನೂರಾರು ಮಹಿಳೆಯರಿಗೆ ಕೋಟ್ಯಾಂತರ ರೂಪಾಯಿ ವಂಚನೆ ಎಸಲಾಗಿದ್ದು, ಲೂಸ್ ಅಗರಬತ್ತಿ ಪ್ಯಾಕ್ ಮಾಡಲು ಹೇಳಿ ಕೋಟ್ಯಾಂತರ ರೂಪಾಯಿ ಹಣ ವಂಚನೆ ಎಸಲಾಗಿದೆ. ಮಹಿಳ ಗೃಹ ಉದ್ಯೋಗ ಸಮೂಹ ಬೆಳಗಾವಿ ಎಂಬ ಸಂಘದಿಂದ ಕೋಟ್ಯಾಂತರ ರೂಪಾಯಿ ವಂಚನೆ ಆರೋಪ ಕೇಳಿ ಬಂದಿದ್ದು, ಮಹಾರಾಷ್ಟ್ರ ಮೂಲದ ಬಾಬಾ ಸಾಹೇಬ್ ಕೊಳೇಕರ ವಿರುದ್ಧ ಆರೋಪ ಕೇಳಿ ಬಂದಿದೆ. ಗೃಹಲಕ್ಷ್ಮಿ ಯೋಜನೆಯ ಲಾಭ ಪಡೆಯುತ್ತಿದ್ದ ಮಹಿಳೆಯರೇ ಈತನ ಟಾರ್ಗೆಟ್ ಆಗಿದ್ದರು. ಐಡಿ ಕಾರ್ಡ್ ಮಾಡಲು ಮಹಿಳೆಯರಿಂದ 2500 ರೂಪಾಯಿ ವಸೂಲಿ ಮಾಡಲಾಗಿತ್ತು. ಒಂದೊಂದು ಐಡಿ ಕಾರ್ಡಿಗೆ ರೂ.3,000 ನೀಡುತ್ತೇವೆ ಎಂದು ಆಮೀಷ ಒಡ್ಡಿದ್ದರು. 20 ದಿನಕ್ಕೆ ರೂ.3,000 ಹಣ ನೀಡುತ್ತೇವೆ ಎಂದು ನಂಬಿಸಲಾಗಿತ್ತು.ವಂಚಕನ ಮಾತು ನಂಬಿ ಮಹಿಳೆಯರು ಐಡಿ ಕಾರ್ಡ್ ಖರೀದಿಸಿದ್ದರು. ಒಬ್ಬೊಬ್ಬ ಮಹಿಳೆ ತಲಾ 20 ರಿಂದ 30 ಐಡಿ ಕಾರ್ಡ್ ಖರೀದಿ ಮಾಡಿದ್ದರು. ಸುಮಾರು 12 ಕೋಟಿ ಅಧಿಕವಾಗಿ ಹಣ ಪಡೆದು ಆರೋಪಿ ಪರಾರಿಯಾಗಿದ್ದಾನೆ. ವಂಚನೆ ಬಯಲಾಗುತ್ತಿದ್ದಂತೆ ಮಹಿಳೆಯರು ಡಿಸಿ…
ಬೆಂಗಳೂರು : ಸ್ಮಾರ್ಟ್ ಮೀಟರ್ ಅಕ್ರಮ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂಧನ ಸಚಿವ ಕೆ ಜೆ ಚಾರ್ಜ್ ಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದ್ದು, ಸ್ಮಾರ್ಟ್ ಮೀಟರ್ ಖರೀದಿ ಗುತ್ತಿಗೆ ನೀಡಿಕೆಯಲ್ಲಿ ಬಹುಕೋಟಿ ಅವ್ಯವಹಾರ ಆರೋಪ ಸಂಬಂಧ ವಿವರಣೆ ಕೋರಿ ರಾಜ್ಯ ಇಂಧನ ಸಚಿವ ಕೆ.ಜೆ.ಜಾರ್ಜ್ ಹಾಗೂ ಕೆಲ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರು ನೋಟಿಸ್ ನೀಡಿದ್ದಾರೆ. ಈ ನೋಟಿಸ್ಗೆ ವಾರದಲ್ಲಿ ಉತ್ತರಿಸುವಂತೆ ಅಧಿಕಾರಿಗಳು ಸೂಚಿಸಿದ್ದಾರೆ. ನೋಟಿಸ್ ಸ್ವೀಕರಿಸಿರುವ ಸಚಿವ ಜಾರ್ಜ್ ಅವರು, ಈ ಗುತ್ತಿಗೆ ಸಂಬಂಧ ತಾವು ಏಕಪಕ್ಷೀಯ ನಿರ್ಧಾರ ಮಾಡಿಲ್ಲ ಎಂದು ಸ್ಪಷ್ಟಡಿಸಿರುವುದಾಗಿ ತಿಳಿದು ಬಂದಿದೆ. ಸ್ಮಾರ್ಟ್ ಮೀಟರ್ ಖರೀದಿ ಗುತ್ತಿಗೆ ಅವ್ಯವಹಾರ ಆರೋಪ ಕುರಿತು ದಾಖಲೆಗಳನ್ನು ಸಂಗ್ರಹಿಸಿ ವರದಿ ನೀಡುವಂತೆ ಲೋಕಾಯುಕ್ತ ಪೊಲೀಸರಿಗೆ ಹೈಕೋರ್ಟ್ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ವಿಚಾರಣೆ ಕೈಗೆತ್ತಿಕೊಂಡ ಲೋಕಾಯುಕ್ತ ಪೊಲೀಸರು, ಅಕ್ರಮದ ಬಗ್ಗೆ ವಿವರಣೆ ಕುರಿತು ಸಚಿವ ಜಾರ್ಜ್ ಹಾಗೂ ಬೆಸ್ಕಾಂ ವ್ಯವಸ್ಥಾಪಕ ಮಹಾಂತೇಶ್ ಬೀಳಗಿ ಸೇರಿದಂತೆ ಇಂಧನ ಇಲಾಖೆ ಕೆಲ ಅಧಿಕಾರಿಗಳಿಗೆ ನೋಟಿಸ್…














