Author: kannadanewsnow05

ಗದಗ : ಗದಗ ತಹಸೀಲ್ದಾರ್ ಕಚೇರಿಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದ್ದು, ಬೆಟಿಗೇರಿಯ ನಾಡಕಚೇರಿ ಉಪ ತಹಸೀಲ್ದಾರ್ ಅಮಾನತುಗೊಳಿಸಿ ಜಿಲ್ಲಾಧಿಕಾರಿ ಈ ಕುರಿತು ಆದೇಶ ಹೊರಡಿಸಿದ್ದಾರೆ. ತಹಸಿಲ್ದಾರ್ ಕಚೇರಿಗೆ ಕಾನೂನು ಸಚಿವ ಹೆಚ್ ಕೆ ಪಾಟೀಲ್ ಏಕಾಏಕಿ ಭೇಟಿ ನೀಡಿದ್ದರು. ಕಾನೂನು ಸಚಿವ ಹೆಚ್ ಕೆ ಪಾಟೀಲ್ ದಿಢೀರ್ ಭೇಟಿ ನೀಡಿದ್ದ ವೇಳೆ, ಪತಿ ಬದುಕಿದ್ದರು ಸಹ ವಿಧವಾ ವೇತನ ಮಂಜೂರು ಮಾಡಿದ ಹಿನ್ನೆಲೆಯಲ್ಲಿ, ಪರಿಶೀಲನೆ ವೇಳೆ ದಾಖಲೆ ಸಮೇತ ಅಧಿಕಾರಿ ಸಿಕ್ಕಾಕಿಕೊಂಡಿದ್ದಾರೆ. ಕೂಡಲೇ ಅಧಿಕಾರಿ ಅಮಾನತು ಗೊಳಿಸುವಂತೆ ಸಚಿವ HK ಪಾಟೀಲ್ ಸೂಚನೆ ನೀಡಿದ್ದಾರೆ. ಸಚಿವರ ಸೂಚನೆಯ ಮೇರೆಗೆ ಇದೀಗ ತಹಶೀಲ್ದಾರ್ ಸಸ್ಪೆಂಡ್ಡ್ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

Read More

ರಾಮನಗರ : ರಾಜ್ಯದಲ್ಲಿ ಈಗಾಗಲೇ ಸಾಮಾಜಿಕ ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಆರಂಭವಾಗಿದ್ದು, ಸಮೀಕ್ಷೆ ಮೊದಲ ದಿನದಿಂದಲೇ ಸರ್ವರ್ ಹಾಗೂ ಮೊಬೈಲ್ ತಾಂತ್ರಿಕ ದೋಷಗಳು ಕಂಡುಬಂದಿದ್ದವು. ಹೀಗಾಗಿ ಸಮೀಕ್ಷೆ ಸ್ವಲ್ಪ ಕುಂಠಿತವಾಗಿತ್ತು. ಆದರೆ ಇನ್ನೊಂದಡೆ ಶಿಕ್ಷಕಿ ಒಬ್ಬರು ಕೇವಲ 7 ದಿನಗಳಲ್ಲಿ ಶೇ. 100ರಷ್ಟು ಸಮೀಕ್ಷೆ ಪೂರ್ಣಗೊಳಿಸಿದ್ದಾರೆ. ಹೌದು ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಅಂಬಾಡಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿರುವ ಶಾಂತಮ್ಮ ಅವರು ರಾಜ್ಯ ಸರ್ಕಾರದಿಂದ ಕೈಗೊಳ್ಳಲಾಗಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಕಾರ್ಯವನ್ನು ಕೇವಲ 7 ದಿನಗಳಲ್ಲಿಯೇ ಪೂರ್ಣಗೊಳಿಸಿ ಶೇ.100ರಷ್ಟು ಸಾಧನೆ ಮಾಡಿದ್ದಾರೆ. ಇಂದು ಅವರನ್ನು ಜಿಲ್ಲಾಡಳಿತದ ವತಿಯಿಂದ ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್ ಅವರು ತಮ್ಮ ಕಚೇರಿಯಲ್ಲಿ ಅಭಿನಂದಿಸಿ, ವೈಯಕ್ತಿವಾಗಿ 1,001 ರೂ.ಗಳ ನಗದು ಬಹುಮಾನ ನೀಡಿ ಶ್ರೀಮತಿ ಶಾಂತಮ್ಮ ಅವರ ಕಾರ್ಯವನ್ನು ಪ್ರಶಂಸಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಅಭಿನಂದನಾ ಪತ್ರ ಸಹ ನೀಡಿದ್ದಾರೆ. ಸಮೀಕ್ಷೆಯಲ್ಲಿ ನೀವು ತೋರಿದ ಆಸಕ್ತಿ, ಉತ್ಸಾಹ ಮತ್ತು ಪ್ರಾಮಾಣಿಕ ಪ್ರಯತ್ನವು…

Read More

ಚಿಕ್ಕಬಳ್ಳಾಪುರ : ರಾಜ್ಯದಲ್ಲಿ ಸಾಮಾಜಿಕ ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಯುತ್ತಿದ್ದು, ಈ ಒಂದು ಶೈಕ್ಷಣಿಕ ಸಮೀಕ್ಷೆಗೆ ಸರ್ಕಾರಿ ಶಾಲೆಯ ಶಿಕ್ಷಕರನ್ನು ನೇಮಿಸಲಾಗಿದೆ. ಇದೀಗ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿಯಲ್ಲಿ ಸಮೀಕ್ಷೆ ನಡೆಸುವಾಗಲೇ ಮುಖ್ಯ ಶಿಕ್ಷಕರೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿಯಲ್ಲಿ ಹೆಚ್. ಎಂ ರಾಮಕೃಷ್ಣಪ್ಪ (57) ಎನ್ನುವ ಮುಖ್ಯ ಶಿಕ್ಷಕ ಸಾವನ್ನಪ್ಪಿದ್ದಾರೆ. ರಾಮಕೃಷ್ಣಪ್ಪ ಅವರು ದಿಗಬಕೋಟೆ ಗ್ರಾಮದ ಶಾಲೆಯ ಮುಖ್ಯ ಶಿಕ್ಷಕರಾಗಿದ್ದಾರೆ. ಚಿಂತಾಮಣಿಯ 25ನೇ ವಾರ್ಡ್ನಲ್ಲಿ ಸಮೀಕ್ಷೆ ವೇಳೆ ಅವರಿಗೆ ಏಕಾಏಕಿ ಹೃದಯಾಘಾತ ಆಗಿದೆ ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಿತ್ತಾದರು, ಚಿಕಿತ್ಸೆ ಫಲಿಸದೇ ಹೆಚ್ ಎಂ ರಾಮಕೃಷ್ಣಪ್ಪ ಸಾವನಪ್ಪಿದ್ದಾರೆ. ಕೆಲಸದ ಒತ್ತಡದಿಂದ ಹೃದಯಘಾತವಾಗಿದೆ ಎಂದು ಸಂಬಂಧಿಕರು ಆರೋಪಿಸಿದ್ದಾರೆ.

Read More

ಬಳ್ಳಾರಿ : ಯಾವುದೇ ಕ್ಷಣದಲ್ಲಿ ಆದರೂ ಸಚಿವ ಸಂಪುಟ ವಿಸ್ತರಣೆಯಾಗಲಿದೆ. 10 ದಿನಗಳಲ್ಲಿ ಬಿ.ನಾಗೇಂದ್ರ ಮತ್ತೆ ಸಚಿವರಾಗಲಿದ್ದಾರೆ ಎಂಬುದಾಗಿ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ. ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಯಾವುದೇ ಕ್ಷಣದಲ್ಲಾದರೂ ಸಚಿವ ಸಂಪುಟ ವಿಸ್ತರಣೆ ಆಗಬಹುದು. ನಮ್ಮ ಕೈಯಲ್ಲಿ ನಿರ್ಧಾರ ಇಲ್ಲ. ಹೈಕಮಾಂಡ್ ನೋಡಿಕೊಳ್ಳಲಿದೆ ಎಂದರು. ಬಿ.ನಾಗೇಂದ್ರ ಮತ್ತೆ ಸಚಿವರಾಗುತ್ತಾರೆ. 10 ದಿನಗಳಲ್ಲಿ ಬಿ.ನಾಗೇಂದ್ರಗೆ ಮತ್ತೆ ಸಚಿವ ಸ್ಥಾನ ಸಿಗಲಿದೆ. ಸಿದ್ಧರಾಮಯ್ಯನವರೇ ಐದು ವರ್ಷ ಸಿಎಂ ಆಗಿ ಮುಂದುವರೆಯುತ್ತಾರೆ ಎಂದರು. ಬಳ್ಳಾರಿ ಜಿಲ್ಲೆಯಲ್ಲಿ ಯಾವ ಕೆಲಸಗಳು ಪೆಂಡಿಂಗ್ ಉಳಿದಿಲ್ಲ. ಎಲ್ಲಾ ಕೆಲಸ ಕಾರ್ಯಗಳು ನಡೆಯುತ್ತಿವೆ. ನಾಗೇಂದ್ರ ಮೂಲಕ ಸಮಸ್ಯೆಗಳ ಬಗ್ಗೆ ನನಗೆ ಮಾಹಿತಿ ಬರ್ತಿದೆ. ಸಾಹಿತ್ಯ ಸಮ್ಮೇಳನ ನಡೆಸಲು ನಾಲ್ಕು ಸ್ಥಳ ಗುರುತಿಸಲಾಗಿದೆ. ಬಳ್ಳಾರಿ ಶಾಸಕರೊಂದಿಗೆ ಸೇರಿ ಸ್ಥಳ ಪರಿಶೀಲನೆ ಮಾಡುತ್ತೇನೆ. ಬಳ್ಳಾರಿಯಲ್ಲಿ ಅದ್ಧೂರಿಯಾಗಿ ಸಾಹಿತ್ಯ ಸಮ್ಮೇಳನ ನಡೆಯಲಿದೆ ಎಂದರು.

Read More

ಹುಬ್ಬಳ್ಳಿ : ರಾಜ್ಯದಲ್ಲಿ ಸೆಪ್ಟೆಂಬರ್ 22 ರಿಂದ ಸಾಮಾಜಿಕ ಆರ್ಥಿಕ ಶೈಕ್ಷಣಿಕ ಸಮೀಕ್ಷೆ ಆರಂಭಿಸಲಾಗಿದ್ದು, ಇದೀಗ ಹುಬ್ಬಳ್ಳಿಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ನಿರ್ಲಕ್ಷ್ಯವಹಿಸಿದ ಹಿನ್ನೆಲೆ ಮಹಾನಗರ ಪಾಲಿಕೆಯ ಇಬ್ಬರು ಸಿಬ್ಬಂದಿ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಮಹಾನಗರಪಾಲಿಕೆ ವ್ಯಾಪ್ತಿಯ ಹುಬ್ಬಳ್ಳಿ ಶಹರದಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆಯ ಕಾರ್ಯದಲ್ಲಿ ನಿರ್ಲಕ್ಷ್ಯವಹಿಸಿ, ಕರ್ತವ್ಯಲೋಪ ಮಾಡಿರುವ ಮಹಾನಗರಪಾಲಿಕೆಯ ಇಬ್ಬರು ಸಿಬ್ಬಂದಿಗಳನ್ನು ಅಮಾನತು ಮಾಡಿ, ಮಹಾನಗರ ಪಾಲಿಕೆ ಆಯುಕ್ತ ಡಾ. ರುದ್ರೇಶ ಘಾಳಿ ಅವರು ಆದೇಶಿದ್ದಾರೆ. ಸಮೀಕ್ಷೆಗೆ ನಿಯೋಜನೆಗೊಂಡಿರುವ ಎಲ್ಲ ಸಮೀಕ್ಷೆದಾರಿಗೆ ಅಗತ್ಯ ತರಬೇತಿ ನೀಡಿ, ಅಗತ್ಯ ಮಾರ್ಗದರ್ಶನ ಮಾಡಲಾಗಿದೆ. ಪ್ರತಿಯೊಬ್ಬರು ನೀಡಿರುವ ಸಮೀಕ್ಷಾ ಗುರಿಯನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಬೇಕು. ತಾಂತ್ರಿಕ ಸಮಸ್ಯೆಗಳು ಉಂಟಾದಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸ್ಥಾಪಿಸಿರುವ ಸಹಾಯವಾಣಿಗೆ ಸಂಪರ್ಕಿಸಿ, ಪರಿಹರಿಸಿಕೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ. ಸಮೀಕ್ಷೆಗೆ ಗುರಿ ನಿಗದಿ ಮಾಡಲಾಗಿದೆ. ಕರ್ತವ್ಯಲೋಪ, ನಿರ್ಲಕ್ಷ್ಯ ಮತ್ತು ಸಮೀಕ್ಷೆಯಲ್ಲಿ ಉದಾಸೀನತೆ ತೋರುವ ಅಧಿಕಾರಿ, ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮಕೈಗೊಂಡು ಸರಕಾರಕ್ಕೆ ವರದಿ ಸಲ್ಲಿಸಲಾಗುವುದು. ಕಾಲಮಿತಿಯಲ್ಲಿ…

Read More

ಬೆಂಗಳೂರು : ರಾಜ್ಯದಲ್ಲಿ ಸಾಮಾಜಿಕ ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಈಗಾಗಲೇ ಆರಂಭವಾಗಿದ್ದು ಆರಂಭದಲ್ಲಿ ಸರ್ವರ್ ಸಮಸ್ಯೆ ಹಾಗೂ ಕೆಲವು ತಾಂತ್ರಿಕ ದೋಷಗಳಿಂದ ತುಂಬ ಸಮಸ್ಯೆ ಆಗಿತ್ತು. ಇದೀಗ ಸಮೀಕ್ಷೆ ವೇಗ ಪಡೆದುಕೊಂಡಿದ್ದು, ಈ ವಿಚಾರವಾಗಿ ವಿಪಕ್ಷ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿದೆ. ಇದಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದು ಇದು ಯಾವುದೇ ಜಾತಿ ಧರ್ಮಗಳಿಗೆ ಸೀಮಿತ ಅಲ್ಲ ರಾಜ್ಯದ 7 ಕೋಟಿ ಜನರ ಸಾಮಾಜಿಕ ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಾಗಿದೆ ಎಂದು ತಿಳಿಸಿದರು. ಬೆಂಗಳೂರಲ್ಲಿ ಮಾತನಾಡಿದ ಅವರು, ಜಾತಿ ಗಣತಿಯನ್ನು ವಿರೋಧಿಸಿದ ಬಿಜೆಪಿಗೆ ಸಿಎಂ ಸಿದ್ದರಾಮಯ್ಯ ಇದೀಗ ತಿರುಗೇಟು ನೀಡಿದ್ದಾರೆ. ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಸಮೀಕ್ಷೆ ಆಗಿದ್ದು, ಯಾವುದೇ ಒಂದು ಜಾತಿ ಧರ್ಮಗಳಿಗೆ ಇದು ಸೀಮಿತ ಅಲ್ಲ, 7 ಕೋಟಿ ಜನರ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆಯಾಗಿದೆ. ಇದು ಯಾರ ವಿರುದ್ಧವಾದ ಸಮೀಕ್ಷೆ ಅಲ್ಲವೇ ಅಲ್ಲ ಇದು ಎಲ್ಲರ ಪರವಾಗಿರುವ ಸಮೀಕ್ಷೆ ಎಂದು ತಿಳಿಸಿದ್ದಾರೆ.

Read More

ಬೆಂಗಳೂರು : ರಾಜ್ಯ ಸರ್ಕಾರದ ವಿರುದ್ಧ ಗುತ್ತಿಗೆದಾರರ ಸಂಘ ಮತ್ತೆ ಇದೀಗ ಸಿಡಿದೆದ್ದಿದೆ. ಕಮಿಷನ್ ದುಪ್ಪಟ್ಟು ಹಿನ್ನೆಲೆಯಲ್ಲಿ ಸರ್ಕಾರದ ವಿರುದ್ಧ ಗುತ್ತಿಗೆದಾರರು ಅಸಮಾಧಾನ ಹೊರ ಹಾಕುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದು ಗುತ್ತಿಗೆದಾರರ ಸಂಘ ಇದೀಗ ಆಕ್ರೋಶ ಹೊರಹಾಕಿದೆ. ಕರ್ನಾಟಕ ಸ್ಟೇಟ್ ಕಂಟ್ರಾಕ್ಟರ್ಸ್ ಅಸೋಸಿಯೇಷನ್ ಸಮಸ್ಯೆಯ ಬಗ್ಗೆ ಸಿಎಂ ಸಿದ್ದರಾಮಯ್ಯ ಗೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಕಾಮಗಾರಿ ಕೈಗೊಳ್ಳುವ 8 ಇಲಾಖೆಗಳಿಂದ ಹಣ ಬಂದಿಲ್ಲ. ರಾಜ್ಯ ಗುತ್ತಿಗೆದಾರರ ಸಂಘಕ್ಕೆ ಬಾಕಿ ಹಣ ಬಿಡುಗಡೆ ಆಗಿಲ್ಲ. ಗುತ್ತಿಗೆದಾರರ ಬಾಕಿ ಹಣ ಬಿಡುಗಡೆಗೆ ಇದೀಗ ತೀವ್ರ ಆಗ್ರಹ ಕೇಳಿ ಬರುತ್ತಿದೆ. ಒಟ್ಟು ರಾಜ್ಯ ಸರ್ಕಾರ 33,000 ಕೋಟಿ ಹಣ ಬಾಕಿ ಉಳಿಸಿಕೊಂಡಿದೆ. ಹಿಂದಿನ ಸರ್ಕಾರಕ್ಕಿಂತ ಈಗಿನ ಕಮಿಷನ್ ದುಪ್ಪಟ್ಟು ಆಗಿದೆ ಎರಡು ವರ್ಷಗಳಿಂದ ಸಮಸ್ಯೆ ಇದ್ದು ಬಾಕಿ ಹಣ ಬಿಡುಗಡೆ ಮಾಡಿ ಎಂದು ಅಗ್ರಹಿಸಿದ್ದಾರೆ. ಸರ್ಕಾರದಿಂದ ನಮಗೆ ಯಾವ ಪ್ರಯೋಜನ ಆಗಿಲ್ಲ ಅಂತ ಸೇವ ಸಿದ್ದರಾಮಯ್ಯಗೆ ಪತ್ರ ಬರೆದಿದ್ದಾರೆ. ಇದೆ ವಿಚಾರವಾಗಿ ಬಿಜೆಪಿ ಶಾಸಕ ಅಶ್ವತ್ಥನಾರಾಯಣ್…

Read More

ಬೆಂಗಳೂರು : ರಾಜ್ಯದಲ್ಲಿ ಅಮಾನವೀಯ ಘಟನೆ ಒಂದು ನಡೆದಿದ್ದು, ಮಹಿಳೆಯ ಕೂದಲು ಹಿಡಿದು ಎಳೆದಾಡಿ ಕಾಲಿನಿಂದ ಒದ್ದು ಭೀಕರವಾಗಿ ಹಲ್ಲೆ ಮಾಡಿದ್ದಾರೆ. ಈ ಒಂದು ಘಟನೆ ಬೆಂಗಳೂರು ನಗರ ಆನೇಕಲ್ ಪಟ್ಟಣದ ನಾರಾಯಣಪುರದಲ್ಲಿ ನಡೆದಿದೆ. ಗಂಡನ ಮನೆಯವರು ಮಳೆಯ ಮೇಲೆ ಮೃಗೀಯ ವರ್ತನೆ ತೋರಿದ್ದಾರೆ. ಬೆಂಗಳೂರಿನ ಆನೇಕಲ್ ಪಟ್ಟಣದ ನಾರಾಯಣಪುರದಲ್ಲಿ ಪತಿ ಅರುಣ್, ಅತ್ತೆ ಪ್ರಭಾವತಿ, ಮಾವ ಚೌಡಪ್ಪ ಮೂವರು ಸೇರಿಕೊಂಡು ಮಹಿಳೆಯ ಮೇಲೆ ಹಲ್ಲೆ ಮಾಡಿದ್ದಾರೆ. ಅರುಣ್ ಪತ್ನಿ ಶ್ರೀಲಜಾ ಮೇಲೆ ಗಜೇಂದ್ರ, ನರಸಿಂಹಮೂರ್ತಿ, ಲಕ್ಷ್ಮಿ, ಚೌಡಪ್ಪ ಅವರು ಹಲ್ಲೆ ಮಾಡಿ ಕಾಲಿನಿಂದ ಒದ್ದು ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾರೆ. 5 ವರ್ಷಗಳ ಹಿಂದೆ ಅರುಣ್ ಜೊತೆ ಶ್ರೀಲಜಾ ಮದುವೆಯಾಗಿದ್ದರು. ದಂಪತಿಗಳಿಗೆ ನಾಲ್ಕು ವರ್ಷದ ಹೆಣ್ಣು ಮಗು ಕೂಡ ಇದೆ. ಮದುವೆಯಾದ ಮೇಲು ಕೂಡ ಪತಿ ಹಾಗೂ ಪತಿಯ ಮನೆಯವರು ವರದಕ್ಷಿಣೆ ಕಿರುಕುಳ ನೀಡುತ್ತಿದ್ದರು. ಅಲ್ಲದೆ ಶ್ರೀಲಜಾ ಮೇಲೆ ಅನುಮಾನ ವ್ಯಕ್ತಪಡಿಸುತ್ತಿದ್ದ. ಈ ವೇಳೆ ಹಿರಿಯರ ಸಮ್ಮುಖದಲ್ಲಿ ರಾಜಿ ಪಂಚಾಯತಿ ಕೂಡ…

Read More

ಬೆಂಗಳೂರು : ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣಗೆ ಜೀವಿತಾವಧಿ ಶಿಕ್ಷೆ ನೀಡಿದ ಹಿನ್ನೆಲೆಯಲ್ಲಿ. ಇದೀಗ ತೀರ್ಪು ಪ್ರಶ್ನಿಸಿ ಹೈಕೋರ್ಟಿಗೆ ಪ್ರಜ್ವಲ್ ರೇವಣ್ಣ ಮೇಲ್ಮನವಿ ಸಲ್ಲಿಸಿದ್ದಾರೆ. ಮೇಲ್ಮನವಿ ಅರ್ಜಿಯಲ್ಲಿ ರಾಜಕೀಯ ದುರುದೇಶದಿಂದ ಮಹಿಳೆಯನ್ನು ಅಸ್ತ್ರವಾಗಿಸಿ ಎಫ್ಐಆರ್ ದಾಖಲಿಸಿದ್ದಾರೆ. 2023ರಲ್ಲಿ ಫಾರ್ಮ್ ಹೌಸ್ ಗೃಹಪ್ರವೇಶದಲ್ಲಿ ಮಹಿಳೆ ಪಾಲ್ಗೊಂಡಿದ್ದಾರೆ. ಅತ್ಯಾಚಾರವಾಗಿದ್ದರೆ ಮಹಿಳೆ ಗೃಹಪ್ರವೇಶಕ್ಕೆ ಹೇಗೆ ಬರುತ್ತಿದ್ದರು? ಈ ಮಹಿಳೆಯಿಂದ ಮೂರು ವರ್ಷದ ಬಳಿಕ ಪೊಲೀಸರು ದೂರು ಪಡೆದಿದ್ದಾರೆ ಮಹಿಳೆ ಗುರುತಿಸಿಲ್ಲ. ಬ್ಯಾಟರಿ ಮತ್ತು ಪೇಂಟ್ ಇದ್ದ ರೂಮಿನಲ್ಲಿ ಉಡುಪು ಸಿಕ್ಕಿದಂದು ಹೇಳಿದ್ದಾರೆ. ಲಾಕ್ ಆಗಿದ್ದರೂಮಿನಲ್ಲಿ ವೀರ್ಯಾಣುವಿದ್ದ ಬಟ್ಟೆ ಸಿಗಲು ಸಾಧ್ಯವೇ? ಕೂದಲನ್ನು ಸುತ್ತಿ ಬ್ಯಾಗಿನಲ್ಲಿ ಇಟ್ಟ ರಹಸ್ಯ ತಿಳಿಯುತ್ತಿಲ್ಲ. ಮಹಿಳೆಯ ಸಿಆರ್ಪಿಸಿ 164 ಹೇಳಿಕೆಯನ್ನು ಕೋರ್ಟಿಗೆ ಹಾಜರುಪಡಿಸಿಲ್ಲ. ವಿಡಿಯೋ ಇತ್ತು ಎಂದು ಆರೋಪಿಸಲಾದ ಮೊಬೈಲ್ ಅನ್ನೇ ವಶಕ್ಕೆ ಪಡೆದಿಲ್ಲ. ಎಫ್ಎಸ್ಎಲ್ ವರದಿಯಲ್ಲೂ ವಿರೋಧಭಾಸಗಳಿವೆ ಎಂದು ಮೇಲ್ಮನವಿ ಅರ್ಜಿ ಸಲ್ಲಿಸಿದ್ದಾರೆ. ಶಿಕ್ಷೆ ರದ್ದುಪಡಿಸುವಂತೆ ಹೈಕೋರ್ಟಿಗೆ ಪ್ರಜ್ವಲ್ ಮನವಿ ಮಾಡಿದ್ದಾರೆ.

Read More

ಬೆಂಗಳೂರು : ಖ್ಯಾತ ನಟ, ಹಾಸ್ಯ ರಂಗಕರ್ಮಿ ಯಶವಂತ ಸರ್ ದೇಶಪಾಂಡೆ (55) ಹೃದಯಾಘಾತದಿಂದ ನಿಧನನಾಗಿದ್ದಾರೆ. ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಯಶವಂತ್ ಸರ್ ದೇಶಪಾಂಡೆ, ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಖ್ಯಾತ ನಟ ಹಾಗೂ ರಂಗಭೂಮಿ ನಿರ್ದೇಶಕರಾಗಿ ಇವರು ಸೇವೆ ಸಲ್ಲಿಸಿದ್ದಾರೆ.

Read More