Author: kannadanewsnow05

ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ 66/11 ಕೆವಿ “ಕಂಠೀರವ” ಉಪಕೇಂದ್ರ ವ್ಯಾಪ್ತಿಯಲ್ಲಿ ದಿನಾಂಕ 25.10.2025 (ಶನಿವಾರ) ರಂದು ಬೆಳಗ್ಗೆ 10:00 ಗಂಟೆಯಿಂದ ಸಂಜೆ 05:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. “ಕಬ್ಬನ್ಪೇಟೆ 5ನೇ ಅಡ್ಡರಸ್ತೆ, 6ನೇ ಅಡ್ಡರಸ್ತೆ, 3ನೇ ಅಡ್ಡರಸ್ತೆ, 4ನೇ ಅಡ್ಡರಸ್ತೆ, ಚೌಳಗಳ್ಳಿ ಎ, ಬಿ, ಸಿ, ಡಿ ಗಲ್ಲಿ, ಆರ್ಬಿಐ, ನೃಪತುಂಗ ರಸ್ತೆ, ಯುವಿಸಿಇ, ಕೃಷಿ ಕಚೇರಿ, ಸರ್ಕಾರಿ ಕಲಾ ಕಾಲೇಜು, ಮಾರ್ಥಾಸ್ ಆಸ್ಪತ್ರೆ, ಸುಂಕಲ್ಪೇಟೆ, ನಗರ್ತ್ಪೇಟೆ ಮುಖ್ಯರಸ್ತೆ, ಕೆಎಎಸ್ ಲೇನ್, ‘ಸಿ’ ಲೇನ್ ‘ಎ’ ಲೇನ್ ‘ಡಿ’ ಲೇನ್ ಪಿಆರ್ಎಸ್ ಲೇನ್, 13ನೇ ಅಡ್ಡರಸ್ತೆ, 14ನೇ ಅಡ್ಡರಸ್ತೆ, ಕಬ್ಬನ್ಪೇಟೆಯ 15ನೇ ಅಡ್ಡರಸ್ತೆ, ಕೆಜಿ ರಸ್ತೆಯ ಒಂದು ಭಾಗ, ಒಟಿಸಿ ರಸ್ತೆ, ಶಾರದಾ ರಂಗಮಂದಿರದ ಹಿಂಭಾಗ, ಎಸ್ಪಿ ರಸ್ತೆ, ಎಸ್ಜೆಪಿ ರಸ್ತೆ, ಧರ್ಮರಾಯ ಸ್ವಾಮಿ ದೇವಸ್ಥಾನ ರಸ್ತೆ, ಆದರ್ಶ ಶಂಗ್ರಿಲ್ಲಾ ಮತ್ತು ಸುತ್ತಮುತ್ತಲಿನ ಪ್ರದೇಶಗಳು. 66/11kV NGEF MUSS ಉಪಕೇಂದ್ರ ವ್ಯಾಪ್ತಿಯಲ್ಲಿ ದಿನಾಂಕ…

Read More

ಬೆಂಗಳೂರು: ಸಾರ್ವಜನಿಕ ವಲಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತವು (ಕೆಎಸ್ಡಿಎಲ್) 2024-25ನೇ ಸಾಲಿನ ಲಾಭದಲ್ಲಿ 135 ಕೋಟಿ ರೂಪಾಯಿಗಳನ್ನು ಶುಕ್ರವಾರ ಸರಕಾರಕ್ಕೆ ಹಸ್ತಾಂತರಿಸಿತು. ಸಂಸ್ಥೆಯ ಪರವಾಗಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಮತ್ತು ಕೆಎಸ್ಡಿಎಲ್ ಅಧ್ಯಕ್ಷ ಅಪ್ಪಾಜಿ ನಾಡಗೌಡ ಅವರು ಈ ಮೊತ್ತದ ಚೆಕ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೀಡಿದರು. ಈ ಕಾರ್ಯಕ್ರಮವು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆಯಿತು. ಸಚಿವ ಪಾಟೀಲರು ಮಾತನಾಡಿ, ಕೆಎಸ್ಡಿಎಲ್ ಸಂಸ್ಥೆಯು ಕಳೆದ ಹಣಕಾಸು ವರ್ಷದಲ್ಲಿ 1,700 ಕೋಟಿ ರೂಪಾಯಿ ವಹಿವಾಟು ನಡೆಸಿ, 451 ಕೋಟಿ ರೂ. ಲಾಭವನ್ನು ಕಂಡಿದೆ. ಇದರ ಪೈಕಿ ನಿಯಮದಂತೆ ಶೇ.30ರಷ್ಟು ಲಾಭಾಂಶವನ್ನು ಸರಕಾರಕ್ಕೆ ಕೊಡಲಾಗಿದೆ. ವಹಿವಾಟು, ಲಾಭ ಮತ್ತು ಲಾಭಾಂಶ ಮೂರರಲ್ಲೂ ಇದು ಸಾರ್ವಕಾಲಿಕ ದಾಖಲೆ ಆಗಿದೆ ಎಂದಿದ್ದಾರೆ. 2022-23ರಲ್ಲಿ ಬಿಜೆಪಿ ಸರಕಾರವಿದ್ದಾಗ ಸಂಸ್ಥೆಯ ವತಿಯಿಂದ ಸರಕಾರಕ್ಕೆ 54 ಕೋಟಿ ರೂಪಾಯಿ ಡಿವಿಡೆಂಡ್ (ಲಾಭಾಂಶ) ಕೊಡಲಾಗಿತ್ತು. 2023-24ರಲ್ಲಿ 108 ಕೋಟಿ ರೂ. ಲಾಭಾಂಶ…

Read More

ಹಿರಿಯೂರು : ಹೊಸದುರ್ಗ ಶಾಸಕ ಬಿಜಿ. ಗೋವಿಂದಪ್ಪನವರ ಮೇಲೆ ನೀರಾವರಿ ಹೋರಾಟ ಸಮಿತಿ ಪದಾಧಿಕಾರಿಗಳು ಗುರುವಾರ ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ವಾಣಿ ವಿಲಾಸ ಸಾಗರ ಜಲಾಶಯ ಗೇಟ್ ಅನ್ನು ಹೊಸದುರ್ಗ ಶಾಸಕರು ತಾವೇ ಮುಂದೆ ನಿಂತು ಜಿಲ್ಲಾಧಿಕಾರಿಗಳ ಅನುಮತಿ ಇಲ್ಲದೇ ಓಪನ್ ಮಾಡಿಸಿದ್ದು, ಈ ಅಧಿಕಾರವನ್ನು ಅವರಿಗೆ ಕೊಟ್ಟವರು ಯಾರು? ಎಂದು ಪ್ರಶ್ನಿಸಿದ ಹೋರಾಟಗಾರರು ಶಾಸಕರು ತಮ್ಮ ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆಂದು ಆರೋಪಿಸಿದ ಅವರು ಹೀಗೆ ಆದರೆ ಕಾನೂನು ಸುವ್ಯವಸ್ಥೆ ಮೇಲೆ ಹೊಡೆತ ಬೀಳಲಿದೆ. ವಿವಿ ಸಾಗರ ಜಲಾಶಯ ರಾಜ್ಯ ಸರ್ಕಾರದ ಅಧೀನದಲ್ಲಿದ್ದು, ಜಿಲ್ಲಾಧಿಕಾರಿಗಳು ಜಲಾಶಯ ಸಮಿತಿ ಅಧ್ಯಕ್ಷರಾಗಿದ್ದಾರೆ. ಜಲಾಶಯದ ಗೇಟ್ ತೆಗೆಸುವ, ಮುಚ್ಚುವ ಮತ್ತು ಅದಕ್ಕೆ ಸಂಬಂಧಪಟ್ಟಂತ ಕೆಲಸಗಳನ್ನು ಮಾಡಿಸುವ ಅಧಿಕಾರ ಜಿಲ್ಲಾಧಿಕಾರಿಗಳು ಹೊಂದಿದ್ದಾರೆ. ಆದರೆ ಶಾಸಕರು ತಾವೇ ಮುಂದೆ ನಿಂತು ಗೇಟ್ ಓಪನ್ ಮಾಡಿಸಿದ್ದು ಅತ್ಯಂತ ದುರದೃಷ್ಟಕರ ಎಂದು ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ. ಈ ಸಂದರ್ಭದಲ್ಲಿ ದೂರು ನೀಡಿರುವ ನೀರಾವರಿ ಹೋರಾಟ…

Read More

ಬೆಂಗಳೂರು : ಆಸ್ತಿ ವಿಚಾರವಾಗಿ ತಂದೆ ಹಾಗು ಮಗನ ನಡುವೆ ಗಲಾಟೆ ನಡೆದಿದೆ. ಈ ವೇಳೆ ಗಲಾಟೆ ವಿಕೋಪಕ್ಕೆ ತಿರುಗಿ ತಂದೆ ಮಗನ ಮೇಲೆ ಫೈರಿಂಗ್ ನಡೆಸಿದ್ದಾರೆ. ಮಗ ಹಾಗು ತಂದೆಯ ನಡುವೆ ಆಸ್ತಿ ವಿಚಾರವಾಗಿ ಗಲಾಟೆ ನಡೆದು, ತಂದೆ ಮಗನ ಮೇಲೆ ಗನ್ ನಿಂದ ಶೂಟ್ ಮಾಡಿದ್ದಾರೆ. ತಲೆಗೆ ಶೂಟ್ ಮಾಡಿದ್ದು, ಹರೀಶ್ (30) ತಲೆಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮಗನ ಮೇಲೆ ತಂದೆ ಸುರೇಶ್ ಫೈರಿಂಗ್ ಮಾಡಿದ್ದಾರೆ. ಹಳೆ ಲೋಡ್ ಗನ್ ನಿಂದ ಶೂಟ್ ಮಾಡಿದ್ದಾರೆ. ತಕ್ಷಣ ಸ್ಥಳೀಯರು ಹರೀಶ್ ನನ್ನ ಆಸ್ಪತ್ರೆಗೆ ದಾಖಲಿಸಿದ್ದಾರೆ. ತಂದೆ ಸುರೇಶ್ ಮದ್ಯ ಸೇವಿಸಿ ಜಮೀನು ಮಾರಾಟ ಮಾಡಿದ್ದರು. ಇದ್ದ ಜಮೀನು ಮಾರಾಟ ಮಾಡಲು ಹರೀಶ್ ಗೆ ಕಿರುಕುಳ ನೀಡಿದ್ದಾರೆ. ಇದೆ ವಿಚಾರವಾಗಿ ಗಲಾಟೆ ನಡೆದಿದೆ. ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಮರಳೆನಹಳ್ಳಿಯಲ್ಲಿ ನಡೆದಿದೆ.

Read More

ಹಾವೇರಿ : ಮನೆಯಲ್ಲಿ ಪುಟ್ಟ ಮಕ್ಕಳು ಆಟ ಆಡುತ್ತಿರುವಾಗ ಪೋಷಕರು ಆದಷ್ಟು ಎಚ್ಚರ ವಹಿಸಬೇಕು ಇಲ್ಲವಾದರೆ ಹಲವು ದುರಂತಗಳು ಸಂಭವಿಸುತ್ತವೆ ಇದೀಗ ಇಂತಹದ್ದೇ ದುರಂತ ಹಾವೇರಿಯಲ್ಲಿ ನಡೆದಿದ್ದು ಮನೆಯ ಮುಂದೆ ಆಟವಾಡುವಾಗ ಬಕೆಟ್ನಲ್ಲಿ ತಲೆಕೆಳಗಾಗಿ ಬಿದ್ದು ಒಂದು ವರ್ಷದ ಮಗು ಸಾವನ್ನಪ್ಪಿರುವ ದುರ್ಘಟನೆ ಸಂಭವಿಸಿದೆ. ಹೌದು ಆಟವಾಡುವಾಗ ನೀರಿನ ಬಕೆಟ್ ಗೆ ಬಿದ್ದು ಮಗು ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಹಾವೇರಿಯ ಶಿವಬಸವ ನಗರದಲ್ಲಿ ಈ ಒಂದು ದುರ್ಘಟನೆ ಸಂಭವಿಸಿದ್ದು, ಬಕೆಟ್ನಲ್ಲಿ ಬಿದ್ದು ದಕ್ಷಿತ್ ಯಳಂಬಳ್ಳಿ ಮಠ (1) ಎನ್ನುವ ಮಗು ಸಾವನ್ನಪ್ಪಿದೆ. ಬಕೆಟ್ನಲ್ಲಿ ತಲೆಕೆಳಗಾಗಿ ಬಿದ್ದಿದ್ದ ದಕ್ಷೀತ್ ಸಾವನಪ್ಪಿದ್ದಾನೆ. ಕೂಡಲೇ ಮಗುವನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿ ಆಗದೆ ಮಗು ಕೊನೆಯುಸಿರೆಳೆದಿದೆ. ಘಟನೆ ಕುರಿತು ಹಾವೇರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಕಿರುತೆರೆ ನಟಿ ದಿವ್ಯ ಸುರೇಶ್ ಅವರಿಂದ ಹಿಟ್ ಅಂಡ್ ರನ್ ಆರೋಪ ಕೇಳಿ ಬಂದಿದೆ.ಅತಿ ವೇಗ ಮತ್ತು ನಿರ್ಲಕ್ಷದ ಚಾಲನೆ ಮಾಡಿದ ಆರೋಪ ಕೇಳಿ ಬಂದಿದ್ದು, ಅಪಘಾತದಲ್ಲಿ ಮಹಿಳೆ ಒಬ್ಬರ ಕಾಲು ಮುರಿತವಾಗಿದೆ ಎಂದು ತಿಳಿದುಬಂದಿದೆ. ಅಕ್ಟೋಬರ್ 4 ರಂದು ರಾತ್ರಿ 1:30ರ ವೇಳೆಗೆ ಈ ಒಂದು ಅಪಘಾತ ಸಂಭವಿಸಿದ್ದು ಬೆಂಗಳೂರಿನ ಬ್ಯಾಟರಾಯನಪುರ ಎಂಎಂ ರಸ್ತೆಯಲ್ಲಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಮಹಿಳೆಯ ಕಾಲು ಮುರಿತವಾಗಿದ್ದು ಅದಾದ ಬಳಿಕ ಸೌಜನ್ಯಕಾದರೂ ನಮ್ಮನ್ನು ಬಂದು ಭೇಟಿಯಾಗಿಲ್ಲ ಎಂದು ಅಪಘಾತಕ್ಕೆ ಈಡಾದ ಮಹಿಳೆಯ ಕುಟುಂಬಸ್ಥರು ದಿವ್ಯಾ ಸುರೇಶ್ ವಿರುದ್ಧ ಆಕ್ರೋಶ ಹೋರ್ ಹಾಕಿದ್ದಾರೆ. ಬೇಡರಾಯನಪುರ ಪೊಲೀಸ್ ಠಾಣೆಯಲ್ಲಿ ದಿವ್ಯ ಸುರೇಶ್ ವಿರುದ್ಧ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಕನ್ನಡ ಬಿಗ್ ಬಾಸ್ ಶೋ ಗೆ ಒಂದೊಲ್ಲೊಂದು ಸಂಕಷ್ಟಗಳು ಎದುರಾಗುತ್ತಲೇ ಇವೆ. ಕಳೆದ ಕೆಲವು ದಿನಗಳ ಹಿಂದೆ ಅಷ್ಟೆ ಬಿಗ್ ಬಾಸ್.ಶೂಟಿಂಗ್ ನಡೆಯುತ್ತಿದ್ದ ಜಾಲಿವುಡ್ ಸ್ಟುಡಿಯೋ ಸರ್ಕಾರದ ನಿಯಮಗಳನ್ನು ಉಲ್ಲಂಘನೆ ಮಾಡಿದ್ದರಿಂದ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (KSPCB)ಯ ಜಾಲಿವುಡ್ ಸ್ಟೂಡಿಯೋವನ್ನು ಮುಚ್ಚಿತ್ತು. ಇದೀಗ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲಹಳ್ಳಿ ಅವರು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ ದೂರು ಸಲ್ಲಿಸಿದ್ದು, KSPCB ಆದೇಶವನ್ನು ಉಲ್ಲಂಘಿಸಿ, ಅಕ್ರಮವಾಗಿ ಮರುಪ್ರಾರಂಭಗೊಂಡಿದೆ ಎಂದು ಗಂಭೀರ ಆರೋಪ ಕೇಳಿಬಂದಿದೆ. ಈ ಕುರಿತು ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಅವರು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷರಿಗೆ ದೂರು ಸಲ್ಲಿಸಿದ್ದಾರೆ. ದಿನೇಶ್ ಕಲ್ಲಹಳ್ಳಿ ಅವರು, ಇ-ಮೇಲ್ ಮೂಲಕ ಕೆಎಸ್‌ಪಿಸಿಬಿ ಅಧ್ಯಕ್ಷರಿಗೆ ನೀಡಿದ ದೂರಿನ ಪ್ರಕಾರ, ಮಾಲಿನ್ಯ ನಿಯಂತ್ರಣ ಮಂಡಳಿಯು 2025ರ ಅಕ್ಟೋಬರ್ 6 ರಂದು ಮುಚ್ಚುವ ಆದೇಶವನ್ನು ಜಾರಿಗೊಳಿಸಿದ್ದರೂ, ರಾಮನಗರ ಜಿಲ್ಲಾಧಿಕಾರಿಯವರು ಯಾವುದೇ ಲಿಖಿತ ಆದೇಶವಿಲ್ಲದೆ ಮೌಖಿಕ ನಿರ್ದೇಶನದ ಮೂಲಕ ಘಟಕವನ್ನು…

Read More

ಬೆಂಗಳೂರು : ಬೆಂಗಳೂರಲ್ಲಿ ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಿಜೆಪಿ ಶಾಸಕ ಭೈರತಿ ಬಸವರಾಜ್ ಅವರನ್ನು ಬಂಧಿಸದಂತೆ ಹೊರಡಿಸಿರುವ ಮಧ್ಯಂತರ ರಕ್ಷಣಾ ಆದೇಶವನ್ನು ತೆರವುಗೊಳಿಸುವಂತೆ ಸಿಐಡಿ ಪೊಲೀಸರು ಹೈಕೋರ್ಟ್‌ಗೆ ಮನವಿ ಮಾಡಿದ್ದಾರೆ. ಈ ವೇಳೆ ಶಾಸಕ ಬೈರತಿ ಬಸವರಾಜ್‌ ಪರ ಹಿರಿಯ ವಕೀಲ ಸಂದೇಶ್‌ ಚೌಟ ಹಾಜರಾಗಿ, ಪ್ರಕರಣದಲ್ಲಿ ಈಗಾಗಲೇ ಅರ್ಜಿದಾರರ ಬಂಧನ ಮಾಡದಂತೆ ತನಿಖಾಧಿಕಾರಿಗಳಿಗೆ ಸೂಚಿಸಿ ಹೈಕೋರ್ಟ್‌ ಮಧ್ಯಂತರ ರಕ್ಷಣೆ ಮಾಡಿದೆ. ತನಿಖಾಧಿಕಾರಿಗಳು ವಿಚಾರಣೆಗೆ ಹಾಜರಾಗಲು ಸೂಚಿಸಿ ಅರ್ಜಿದಾರರಿಗೆ ಎರಡು ಬಾರಿ ಸಮನ್ಸ್ ನೀಡಿದ್ದರು. ಅದರಂತೆ ಅರ್ಜಿದಾರರ ವಿಚಾರಣೆಗೆ ಹಾಜರಾಗಿ ಅಗತ್ಯ ಸಹಕಾರ ನೀಡಿದ್ದಾರೆ. ಹೀಗಿದ್ದರೂ ತನಿಖೆ/ವಿಚಾರಣೆಗೆ ಸಹರಿಸುತ್ತಿಲ್ಲ. ಬಂಧಿಸಿ ವಿಚಾರಣೆಗೆ ಒಳಪಡಿಸಬೇಕಿದೆ ಎಂದು ಸಿಐಡಿ ಪೊಲೀಸರು ಮಂಡಿಸುತ್ತಿರುವ ವಾದ ಸರಿಯಲ್ಲ ಎಂದು ಪ್ರತಿ ಆಕ್ಷೇಪಣೆ ವ್ಯಕ್ತಪಡಿಸಿದರು. ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ಕೋಕಾ ಕಾಯ್ದೆಯ ಸೆಕ್ಷನ್‌ 3 ಮತ್ತು ಸೆಕ್ಷನ್‌ 4 ಹೇರಲು ಸಿಐಡಿ ಉಪ ಅಧೀಕ್ಷಕರಿಗೆ ಅನುಮತಿ ನೀಡಿ ಸಿಐಡಿ ಪೊಲೀಸ್‌ ಮಹಾ ನಿರ್ದೇಶಕರು…

Read More

ಬೆಂಗಳೂರು : ಆಂಧ್ರಪ್ರದೇಶದ ಕರ್ನೂಲ್‌ನ ಬೆಂಗಳೂರು – ಹೈದರಾಬಾದ್ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ಬಸ್ ಅಪಘಾತದ ಘಟನೆಗೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಹಾಗು ಡಿಸಿಎಂ ಡಿಕೆ ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ. ಟ್ವೀಟ್ ನಲ್ಲಿ ಸಂತಾಪ ಸೂಚಿಸಿ, ಬಸ್ ಅಪಘಾತದಲ್ಲಿ ಬಸ್‌ಗೆ ಬೆಂಕಿ‌ ತಗುಲಿ ಹಲವು ಪ್ರಯಾಣಿಕರು ಪ್ರಾಣ ಕಳೆದುಕೊಂಡ ಸುದ್ದಿ ಕೇಳಿ ಅತೀವ ದುಃಖವಾಯಿತು. ದುರಂತದಲ್ಲಿ ಮಡಿದವರ ಕುಟುಂಬಕ್ಕೆ ನನ್ನ ಸಂತಾಪಗಳು. ಗಾಯಾಳುಗಳು ಆದಷ್ಟು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ ಎಂದಿದ್ದಾರೆ. https://twitter.com/siddaramaiah/status/1981574866039185648?t=jquF_oca5CwiN-BDpOVYww&s=19 ಅದೇ ರೀತಿ ಡಿಸಿಎಂ ಡಿಕೆ ಶಿವಕುಮಾರ್ ಸಹ ಸಂತಾಪ ಸೂಚಿಸಿದ್ದು, ಹೈದರಾಬಾದ್-ಬೆಂಗಳೂರು ಮಾರ್ಗದ ಕರ್ನೂಲ್ ಬಳಿ ಸಂಭವಿಸಿದ ಭೀಕರ ಬಸ್ ಬೆಂಕಿಯಿಂದ ತೀವ್ರ ಆಘಾತ ಮತ್ತು ದುಃಖವಾಗಿದೆ. ಮೃತರ ಕುಟುಂಬಗಳಿಗೆ ನನ್ನ ಹೃತ್ಪೂರ್ವಕ ಸಂತಾಪಗಳು. ಬಾಧಿತ ಎಲ್ಲರೊಂದಿಗೂ ನಾವು ನಿಲ್ಲುತ್ತೇವೆ ಮತ್ತು ಗಾಯಾಳುಗಳು ಬೇಗನೆ ಚೇತರಿಸಿಕೊಳ್ಳಬೇಕೆಂದು ಪ್ರಾರ್ಥಿಸುತ್ತೇವೆ. https://twitter.com/DKShivakumar/status/1981567926647034247?t=D2ulyYf7bzisKiF2P-nMGw&s=19

Read More

ಮಂಗಳೂರು : ಮಂಗಳೂರಿನಲ್ಲಿ ಬಾರ್ ನಲ್ಲಿ ಕ್ಷುಲ್ಲಕ ಕಾರಣಕ್ಕೆ ಇಬ್ಬರಿಗೆ ಚಾಕು ಇರಿದಿರುವ ಘಟನೆ ವರದಿಯಾಗಿದೆ. ಮಂಗಳೂರಿನ ಸೂರತ್ಕಲ್ ನಲ್ಲಿ ದೀಪಕ್ ಬಾರ್ ನಲ್ಲಿ ನಿನ್ನೆ ಈ ಒಂದು ಘಟನೆ ನಡೆದಿದ್ದು ಬಾರ್ ನಲ್ಲಿ ಮದ್ಯ ಸೇವಿಸಿ ಹೊರಬರುವಾಗ ಗಲಾಟೆ ನಡೆದಿದೆ. ಮುಕ್ಷಿದ್ ಹಾಗು ನಿಜಾಮ್ ಎಂಬುವವರಿಗೆ ಚಾಕು ಇರಿಯಲಾಗಿದೆ. ರೌಡಿಶೀಟರ್ ಆದಂತಹ ಗುರುರಾಜ್ ಮತ್ತು ಅಲೆಕ್ಸ್ ಸಂತೋಷ್, ಸುಶಾಂತ್ ಹಾಗೂ ನಿತಿನ್ ಎಂಬುವವರು ಇಬ್ಬರಿಗೆ ಚಾಕು ಇರಿದು ದೃಷ್ಕೃತ್ಯ ಎಸಗಿದ್ದಾರೆ. ಘಟನೆ ಕುರಿತಂತೆ ಮಂಗಳೂರು ಪೊಲೀಸ್ ಕಮಿಷನರ್ ಆರೋಪಿಗಳ ಬಂಧನಕ್ಕೆ ನಾಲ್ಕು ತಂಡ ರಚನೆ ಮಾಡಿದ್ದಾರೆ. ಕಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Read More