Subscribe to Updates
Get the latest creative news from FooBar about art, design and business.
Author: kannadanewsnow05
ಹೈದ್ರಾಬಾದ್ : ತೆಲಂಗಾಣದಲ್ಲಿ ಬೆಚ್ಚಿ ಬೀಳಿಸೋ ಘಟನೆ ನಡೆದಿದ್ದು, ನಾಗರ್ಕರ್ನೂಲ್ನಲ್ಲಿ ಪರೀಕ್ಷೆ ಬರೆಯಲು ಶಾಲೆಗೆ ಬಂದಿದ್ದ 16 ವರ್ಷದ ಬಾಲಕಿ ಮಗುವಿಗೆ ಜನ್ಮ ನೀಡಿದ್ದಾಳೆ. ಬಾಲಕಿಯರ ವಸತಿ ಶಾಲೆಯ ವಿದ್ಯಾರ್ಥಿನಿಗೆ ಪರೀಕ್ಷಾ ಕೇಂದ್ರಕ್ಕೆ ಹಾಜರಾದಾಗ ತೀವ್ರವಾದ ಹೊಟ್ಟೆ ನೋವು ಕಾಣಿಸಿಕೊಂಡಿದೆ. ಕೂಡಲೇ ಈ ಬಗ್ಗೆ ಸಿಬ್ಬಂದಿಗೆ ಮಾಹಿತಿ ನೀಡಿದ್ದಾಳೆ. ನಂತರ ಆಕೆಯ ತಾಯಿ ಅವಳನ್ನು ಪಟ್ಟಣದ ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದರು. ಈ ವೇಳೆ ವೈದ್ಯರು ಸ್ಕ್ಯಾನ್ ಮಾಡಿಸಲು ಸೂಚಿಸಿದ್ದರು. ಸ್ಕ್ಯಾನಿಂಗ್ ಕೇಂದ್ರದಲ್ಲಿ ಕಾಯುತ್ತಿದ್ದಾಗ, ಬಾಲಕಿ ಶೌಚಾಲಯಕ್ಕೆ ತೆರಳಿದ್ದಳು. ಅಲ್ಲಿ ಅವಳು ಮಗುವಿಗೆ ಜನ್ಮ ನೀಡಿದ್ದಾಳೆ. ಅಲ್ಲಿನ ಸಿಬ್ಬಂದಿ ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ಧಾವಿಸಿ ಬಾಲಕಿ ಮತ್ತು ನವಜಾತ ಶಿಶುವನ್ನು ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರಿಸಿದರು. ತಾಯಿ ಮತ್ತು ಮಗು ಇಬ್ಬರೂ ಸುರಕ್ಷಿತರಾಗಿದ್ದು ಆರೈಕೆಯಲ್ಲಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಬೆಳಗಾವಿ : ಉದ್ಯೋಗದ ನಿರೀಕ್ಷೆಯಲ್ಲಿ ಇರುವವರಿಗೆ ಇದೀಗ ಸಿಹಿ ಸುದ್ದಿ ಇದ್ದು, ಶಿವಬಸವ ನಗರದಲ್ಲಿರುವ ಎಸ್.ಜಿ. ಬಾಳೇಕುಂದ್ರಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಮಾ.7 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಜಿಲ್ಲಾಮಟ್ಟದ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್ ಸಿಇಒ ರಾಹುಲ್ ಶಿಂಧೆ ತಿಳಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಂಜೀವಿನಿ KSLRPS, ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ, ಜಿಲ್ಲಾ ಕೌಶಲ್ಯ ಮಿಷನ್, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಹಾಗೂ ಶ್ರೀ ಸಿದ್ದರಾಮೇಶ್ವರ ಶಿಕ್ಷಣ ಸಂಸ್ಥೆ ವತಿಯಿಂದ ಉದ್ಯೋಗ ಮೇಳ ಆಯೋಜಿಸಲಾಗಿದೆ. ಈ ಕುರಿತು ಪತ್ರಿಕಾ ಪ್ರಕಟಣೆ ಮೂಲಕ ಮಾಹಿತಿ ನೀಡಿರುವ ಅವರು, ಉದ್ಯೋಗ ಮೇಳಕ್ಕೆ ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರು ಚಾಲನೆ ನೀಡಲಿದ್ದಾರೆ. ಬೆಳಗಾವಿ ಉತ್ತರ ಶಾಸಕ ಆಸೀಫ್ ಸೇಠ್ ಅಧ್ಯಕ್ಷತೆ ವಹಿಸಲಿದ್ದಾರೆ. ಉದ್ಯೋಗ…
ಮಂಗಳೂರು : ಮಂಗಳೂರಿನ ನೇತ್ರಾವತಿ ನದಿ ತೀರದಲ್ಲಿ ನೂರಾರು ಆಧಾರ್ ಕಾರ್ಡ್ಗಳು ಪತ್ತೆಯಾಗಿವೆ. ಇದರಿಂದ ಸಾರ್ವಜನಿಕರು ಆಘಾತಕ್ಕೊಳಗಾಗಿದ್ದು, ಅಂಚೆ ಇಲಾಖೆಯ ನಿರ್ಲಕ್ಷ್ಯವೇ ಇದಕ್ಕೆ ಕಾರಣವೆಂದು ಆರೋಪಿಸಿದ್ದಾರೆ. ಆಧಾರ್ ಕಾರ್ಡ್ಗಳು ತಮಗೆ ತಲುಪದ ಕಾರಣ ಅನೇಕರು ಅಧಿಕಾರಿಗಳ ಬೇಜವಾಬ್ದಾರಿಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಯು.ಟಿ. ಖಾದರ್ ಅವರು ಈ ಘಟನೆಯ ಸಮಗ್ರ ತನಿಖೆಗೆ ಅದೇಶಿಸಿದ್ದಾರೆ. ಪುದು ಗ್ರಾಮದ ಫರಂಗಿಪೇಟೆ ಎಂಬಲ್ಲಿ ನೇತ್ರಾವತಿ ನದಿ ತೀರದಲ್ಲಿ ಮಾರ್ಚ್ 03, 2026ರಂದು ಅಪಾರ ಪ್ರಮಾಣದ ಆಧಾರ್ ಕಾರ್ಡ್ಗಳು ನದಿ ತಟದಲ್ಲಿರುವುದನ್ನು ಕಂಡು ಸಾರ್ವಜನಿಕರು ಸ್ಥಳೀಯ ಪುದು ಗ್ರಾಮ ಪಂಚಾಯತ್ ಅಧ್ಯಕ್ಷರಿಗೆ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಸ್ಥಳೀಯ ಶಾಸಕನಾದ ನನಗೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ಬಂದಿದೆ. ಆಧಾರ್ ಕಾರ್ಡ್ಗಳು ಇಷ್ಟೊಂದು ಪ್ರಮಾಣದಲ್ಲಿ ನದಿ ತಟದಲ್ಲಿ ಪತ್ತೆಯಾಗಲು ಕಾರಣವೇನು? ಮತ್ತು ಇದಕ್ಕೆ ಕಾರಣರಾದವರು ಯಾರೆಂಬುದನ್ನು ತನಿಖೆ ನಡೆಸಿ ಪತ್ತೆ ಹಚ್ಚಿ ತಮ್ಮ ಇಲಾಖೆಯ ಮುಖಾಂತರ ಕೂಡಲೇ ಸೂಕ್ತ ಕಾನೂನು ಕ್ರಮವನ್ನು ಕೈಗೊಳ್ಳಬೇಕೆಂದು ಯು.ಐ.ಡಿ.ಎ.ಐ ಯೋಜನಾ ವ್ಯವಸ್ಥಾಪಕರಿಗೆ ವಿಧಾನ…
ಕಲಬುರ್ಗಿ : ಹೋಳಿ ಹುಣ್ಣಿಮೆಯಂದು ಸಾಮಾನ್ಯವಾಗಿ ಉತ್ತರ ಕರ್ನಾಟಕ ಭಾಗದಲ್ಲಿ ಅಣಕು ಶವಯಾತ್ರೆ ನಡೆಸಿ ಮನೋರಂಜನ ರೀತಿಯಲ್ಲಿ ಹೋಳಿ ಹುಣ್ಣಿಮೆಯನ್ನು ಆಚರಿಸಲಾಗುತ್ತದೆ. ಆದರೆ ಕಲ್ಬುರ್ಗಿಯಲ್ಲಿ ಕೆಲ ಯುವಕರು ಬುರ್ಖಾ ರೀತಿಯ ವೇಷ ಧರಿಸಿ ಅಣುಕು ಶವ ಯಾತ್ರೆ ಮಾಡಿದರಿಂದ ಐವರು ಯುವಕರ ಮೇಲೆ ಇದೀಗ ಪೊಲೀಸರು FIR ದಾಖಲಿಸಿದ್ದಾರೆ. ಹೌದು ಕಲ್ಬುರ್ಗಿ ಜಿಲ್ಲೆಯ ಆಳಂದ ತಾಲೂಕಿನ ನಿಂಬರ್ಗಾ ಗ್ರಾಮದಲ್ಲಿ ಹೋಳಿ ನಿಮಿತ್ತ ನಡೆದ ‘ಅಣಕು ಶವಯಾತ್ರೆ’ಯ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬೆನ್ನಲ್ಲೇ, ಐವರು ಯುವಕರ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಸಾಮಾನ್ಯವಾಗಿ ಉತ್ತರ ಕರ್ನಾಟಕದಲ್ಲಿ ಕಾಮದಹನದ ನಂತರ ದುಷ್ಟ ಸಂಹಾರದ ಪ್ರತೀಕವಾಗಿ ಅಣಕು ಶವಯಾತ್ರೆ ನಡೆಸುವ ಸಂಪ್ರದಾಯವಿದೆ. ಈ ವೇಳೆ ಕೆಲವರು ಮಹಿಳೆಯರ ವೇಷ ಧರಿಸಿ ಅಳುವಂತೆ ನಟಿಸಿ ಹಾಸ್ಯ ಪ್ರದರ್ಶನ ನೀಡುತ್ತಾರೆ. ಆದರೆ, ನಿಂಬರ್ಗಾ ಗ್ರಾಮದಲ್ಲಿ ನಡೆದ ಈ ಬಾರಿಯ ಆಚರಣೆಯಲ್ಲಿ, ಯುವಕನೊಬ್ಬ ಮುಸ್ಲಿಂ ಸಮುದಾಯದ ಮಹಿಳೆಯರು ಧರಿಸುವ ‘ಬುರ್ಕಾ’ ಮಾದರಿಯ ಬಟ್ಟೆ ಧರಿಸಿ ಶವಯಾತ್ರೆಯ ಹಿಂದೆ…
ಬೆಂಗಳೂರು : ಬೆಂಗಳೂರಿನ *ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ (KIA)* ಇತ್ತೀಚೆಗೆ ಜಾಗತಿಕ ಮಟ್ಟದಲ್ಲಿ ಮತ್ತೊಂದು ಮೈಲಿಗಲ್ಲು ಸ್ಥಾಪಿಸಿದೆ. ಏರ್ಪೋರ್ಟ್ ಕೌನ್ಸಿಲ್ ಇಂಟರ್ನ್ಯಾಷನಲ್ (ACI) ನೀಡುವ *’ಅತ್ಯುತ್ತಮ ಆಗಮಸ್ಥಾನ’ (Best Airport at Arrivals Globally)* ಪ್ರಶಸ್ತಿಯನ್ನು ಸತತ *4ನೇ ಬಾರಿಗೆ* ಮುಡಿಗೇರಿಸಿಕೊಂಡಿದೆ. ಈ ಕುರಿತಾದ ಸಮಗ್ರ ಮಾಹಿತಿ ಇಲ್ಲಿದೆ: ಪ್ರಶಸ್ತಿಯ ವಿವರಗಳು * *ಪ್ರಶಸ್ತಿ ನೀಡಿದ ಸಂಸ್ಥೆ:* ಏರ್ಪೋರ್ಟ್ಸ್ ಕೌನ್ಸಿಲ್ ಇಂಟರ್ನ್ಯಾಷನಲ್ (Airports Council International – ACI). * *ವರ್ಗ:* 2025ನೇ ಸಾಲಿನ ಏರ್ಪೋರ್ಟ್ ಸರ್ವಿಸ್ ಕ್ವಾಲಿಟಿ (ASQ) ಪ್ರಶಸ್ತಿಗಳಲ್ಲಿ “ಜಾಗತಿಕವಾಗಿ ಆಗಮನದ ಸಮಯದಲ್ಲಿ ಅತ್ಯುತ್ತಮ ವಿಮಾನ ನಿಲ್ದಾಣ”. * *ವಿಶೇಷತೆ:* ಇದು ಬೆಂಗಳೂರು ವಿಮಾನ ನಿಲ್ದಾಣಕ್ಕೆ ದೊರೆಯುತ್ತಿರುವ ಸತತ 4ನೇ ಗೆಲುವಾಗಿದೆ (2021, 2022, 2023, ಮತ್ತು 2024-25ರ ಅವಧಿ). ಆಯ್ಕೆಗೆ ಪ್ರಮುಖ ಕಾರಣಗಳು ಈ ಪ್ರಶಸ್ತಿಯನ್ನು ಕೇವಲ ಮೂಲಸೌಕರ್ಯ ನೋಡಿ ನೀಡುವುದಿಲ್ಲ, ಬದಲಿಗೆ ನೇರವಾಗಿ *ಪ್ರಯಾಣಿಕರ ಪ್ರತಿಕ್ರಿಯೆ (Feedback)* ಆಧರಿಸಿ ನೀಡಲಾಗುತ್ತದೆ. ಬೆಂಗಳೂರು ಏರ್ಪೋರ್ಟ್ ಈ…
ಬೆಂಗಳೂರು : ಗಲ್ಫ್ ಯುದ್ಧದ ನಡುವೆ ಇದೀಗ ಗ್ರಾಹಕರಿಗೆ ಬಿಗ್ ಶಾಕ್ ಎದುರಾಗಿದ್ದು, ಅಗತ್ಯ ವಸ್ತುಗಳ ಬೆಲೆಯಲ್ಲಿ ಏರಿಕೆ ಆಗುವ ಸಾಧ್ಯತೆ ಇದೆ ಹಾಗಾಗಿ ಅಡುಗೆ ಎಣ್ಣೆ ಸೇರಿದಂತೆ ಅಗತ್ಯ ವಸ್ತು ಬೆಲೆ ಏರಿಕೆ ಆಗಲಿದೆ ಎಂದು ವರ್ತಕರು ಹೇಳಿದ್ದಾರೆ. ಅಡುಗೆ ಎಣ್ಣೆಯದರ ಪ್ರತಿ ಲೀಟರ್ ಗೆ ಐದು ರೂಪಾಯಿ ಏರಿಕೆ ಆಗುವ ಸಾಧ್ಯತೆಯಿದ್ದು ಬೇಡಿಕೆಗೆ ತಕ್ಕಂತೆ ಅಡುಗೆ ಎಣ್ಣೆ ಸರಬರಾಜು ಆಗುತ್ತಿಲ್ಲ ಅಡುಗೆ ಎಣ್ಣೆ ಬಳಿಯಲ್ಲಿ ಮತ್ತಷ್ಟು ಏರಿಕೆ ಆಗಬಹುದು ಎಂದು ತರಗುಪೇಟೆ ಅಡುಗೆ ಎಣ್ಣೆ ವರ್ತಕ ಸತೀಶ್ ಈ ಒಂದು ಹೇಳಿಕೆ ನೀಡಿದ್ದಾರೆ. ಈ ಕುರಿತ ಪ್ರಮುಖ ಅಂಶಗಳು ಇಲ್ಲಿವೆ: ಬೆಲೆ ಏರಿಕೆಗೆ ಪ್ರಮುಖ ಕಾರಣಗಳು ಪೂರೈಕೆಯಲ್ಲಿ ವ್ಯತ್ಯಯ: ಭಾರತವು ತನ್ನ ಒಟ್ಟು ಬಳಕೆಯ ಬಹುಪಾಲು ಅಡುಗೆ ಎಣ್ಣೆಯನ್ನು (ವಿಶೇಷವಾಗಿ ಸೂರ್ಯಕಾಂತಿ ಮತ್ತು ಪಾಮ್ ಆಯಿಲ್) ವಿದೇಶಗಳಿಂದ ಆಮದು ಮಾಡಿಕೊಳ್ಳುತ್ತದೆ. ಗಲ್ಫ್ ಪ್ರದೇಶದಲ್ಲಿನ ಅಸ್ಥಿರತೆಯಿಂದ ಹಡಗುಗಳ ಸಂಚಾರಕ್ಕೆ ಅಡ್ಡಿಯಾಗುವ ಆತಂಕವಿದೆ. ಆಮದು ಸುಂಕದ ಪ್ರಭಾವ: ಇತ್ತೀಚೆಗೆ ಕೇಂದ್ರ ಸರ್ಕಾರವು…
ಬೆಂಗಳೂರು : ಇರಾನ್ ಸರ್ವೋಚ್ಚ ನಾಯಕ ಖಮೇನಿ ಪರ ಹೈಕೋರ್ಟ್ ಆದೇಶ ಉಲ್ಲಂಘಿಸಿ ಪ್ರತಿಭಟನೆ ನಡೆಸಲಾಗಿದೆ ಎಂಬ ಆರೋಪದ ಹಿನ್ನೆಲೆ ಶಾಂತಿನಗರ ಶಾಸಕ ಎನ್ ಹ್ಯಾರಿಸ್ ವಿರುದ್ಧ ದೂರು ಸಲ್ಲಿಕೆಯಾಗಿದೆ. ಹೌದು ಹಿಂದೂ ಸಂಘಟನೆ ಕಾರ್ಯಕರ್ತ ತೇಜಸ್ ಗೌಡ ಶಾಸಕ ಎನ್ ಹ್ಯಾರಿಸ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರು ಹಾಗೂ ಡಿಜಿ ಹಾಗೂ ಐಜಿಪಿಗೆ ದೂರು ಸಲ್ಲಿಸಿದ್ದಾರೆ. ಸದ್ಯ ಇರಾನ್ ನಾಯಕ ಅಲಿ ಖಮೇನಿ ಹತ್ಯೆ ಖಂಡಿಸಿ ಬೆಂಗಳೂರಿನಲ್ಲಿ ನಡೆದ ಪ್ರತಿಭಟನೆ ರಾಜಕೀಯ ಮತ್ತು ಕಾನೂನು ವಿವಾದಕ್ಕೆ ಕಾರಣವಾಗಿದ್ದು,ಕಾಂಗ್ರೆಸ್ ಶಾಸಕ ಎನ್ ಹ್ಯಾರಿಸ್ ನೇತೃತ್ವದಲ್ಲಿ ನಡೆದ ಈ ಪ್ರತಿಭಟನೆ ಹೈಕೋರ್ಟ್ ನಿರ್ದೇಶನ ಉಲ್ಲಂಘಿಸಲಾಗಿದೆ ಎಂಬ ಆರೋಪವಿದೆ. ಯಾವುದೇ ಪ್ರತಿಭಟನೆ, ಹೋರಾಟ, ಧರಣಿ ನಡೆಸುವುದಾದರೂ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿಯೇ ನಡೆಸಬೇಕು ಎಂದು ಹೈಕೋರ್ಟ್ ನಿರ್ದೇಶನವಿದೆ. ಆದರೆ ಕಾಂಗ್ರೆಸ್ ಶಾಸಕ ಹ್ಯಾರಿಸ್ ಅವರು ಹೈಕೋರ್ಟ್ ನಿರ್ದೇಶನ ಉಲ್ಲಂಘಿಸಿ ಪ್ರತಿಭಟನೆ ನಡೆಸಿದ್ದಾರೆ ಎಂದು ಹಿಂದೂ ಕಾರ್ಯಕರ್ತ ತೇಜಸ್ ಗೌಡ ದೂರಿನಲ್ಲಿ…
ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸಿದ ಗೆಜೆಟೆಡ್ ಪ್ರೊಬೇಷನರ್ಸ್ (Group A & B) ಹುದ್ದೆಗಳ ಮುಖ್ಯ ಪರೀಕ್ಷೆಯ ಫಲಿತಾಂಶದಲ್ಲಿ ಅಕ್ರಮ ನಡೆದಿದೆ ಎಂಬ ಗಂಭೀರ ಆರೋಪಗಳ ಹಿನ್ನೆಲೆಯಲ್ಲಿ, ಸರ್ಕಾರ ಮತ್ತು ಆಯೋಗವು ಆಂತರಿಕ ತನಿಖೆ ಹಾಗೂ ಪರಿಶೀಲನೆಗೆ ಮುಂದಾಗಿದೆ. ಈ ಕುರಿತಾದ ಸಮಗ್ರ ಮಾಹಿತಿ ಇಲ್ಲಿದೆ: ಅಕ್ರಮ ಆರೋಪದ ಹಿನ್ನೆಲೆ ಇತ್ತೀಚೆಗೆ ಪ್ರಕಟವಾದ 384 ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆಗಳ ಮುಖ್ಯ ಪರೀಕ್ಷೆಯ ಫಲಿತಾಂಶದಲ್ಲಿ ಈ ಕೆಳಗಿನ ಸಂಶಯಾಸ್ಪದ ಅಂಶಗಳು ಕಂಡುಬಂದಿವೆ ಎಂದು ಅಭ್ಯರ್ಥಿಗಳು ಮತ್ತು ವಿರೋಧ ಪಕ್ಷಗಳು ಆರೋಪಿಸಿವೆ: ಸರಣಿ ಸಂಖ್ಯೆಯ ಅಭ್ಯರ್ಥಿಗಳ ಆಯ್ಕೆ: ಒಂದೇ ಪರೀಕ್ಷಾ ಕೇಂದ್ರದ, ಒಂದೇ ಕೊಠಡಿಯಲ್ಲಿ ಪರೀಕ್ಷೆ ಬರೆದ ಸತತ 10 ರಿಂದ 15 ಅಭ್ಯರ್ಥಿಗಳು ಸಂದರ್ಶನಕ್ಕೆ ಆಯ್ಕೆಯಾಗಿರುವುದು ಅಕ್ರಮದ ಶಂಕೆ ಮೂಡಿಸಿದೆ. ಕುಟುಂಬ ಸದಸ್ಯರ ಆಯ್ಕೆ: ಕೆಲವು ಪ್ರಕರಣಗಳಲ್ಲಿ ಒಂದೇ ಕುಟುಂಬದ ಸದಸ್ಯರು ಒಟ್ಟಾಗಿ ಆಯ್ಕೆಯಾಗಿರುವುದು ಕೂಡ ಚರ್ಚೆಗೆ ಕಾರಣವಾಗಿದೆ. ಪಾರದರ್ಶಕತೆಯ ಕೊರತೆ: ಮೌಲ್ಯಮಾಪನ ಪ್ರಕ್ರಿಯೆಯಲ್ಲಿ ಲೋಪದೋಷಗಳು ನಡೆದಿವೆ ಮತ್ತು…
ಬೆಂಗಳೂರು : ನೇಮಕಾತಿಯಲ್ಲಿ ಒಳಮೀಸಲಾತಿ ಗೊಂದಲ ಬಗ್ಗೆ ಇಂದು ಸಚಿವ ಸಂಪುಟದಲ್ಲಿ ಚರ್ಚಿಸಿ ತೀರ್ಮಾನಿಸೋದಾಗಿ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ. ಒಳಮೀಸಲಾತಿ ಹಂಚಿಕೆಯಲ್ಲಿ ಗೊಂದಲ ಆಗಿದೆ ಅಂತ ಸಮಸ್ಯೆ ಆಗಿದೆ. ರೋಸ್ಟರ್ ಮಾಡುವಾಗ ಒಂದು ವರ್ಗಕ್ಕೆ ಹೆಚ್ಚು ಮೀಸಲಾತಿ ಸಿಗುತ್ತದೆ ಅನ್ನೋದಿದೆ. ಈಗ ಮತ್ತೆ ಸಂಪುಟದಲ್ಲಿ ವಿಷಯದ ಮೇಲೆ ಚರ್ಚೆ ಆಗುತ್ತದೆ. ಅಂತಿಮವಾಗಿ ಸಂಪುಟದಲ್ಲಿ ಏನು ಚರ್ಚೆ ಆಗುತ್ತೋ ಅದರಂತೆ ಮುಂದುವರಿಯುತ್ತೇವೆ. ಎಸ್ಸಿ ಸಮುದಾಯಕ್ಕೆ 17% ಒಳಮೀಸಲಾತಿ ಕೊಡುವ ತೀರ್ಮಾನ ಆಗಿತ್ತು. ಆದರೆ ಅಲೆಮಾರಿಗಳಿಗೆ ಪ್ರತ್ಯೇಕ 1% ಕೊಡಿ ಅಂತ ಬೇಡಿಕೆ ಇದೆ. ಕೋರ್ಟಿನಲ್ಲೂ 56% ಮೀಸಲಾತಿಗೆ ತಡೆ ಕೊಡಲಾಗಿದೆ. ಇದೆಲ್ಲ ದೊಡ್ಡ ಚರ್ಚೆ ನಡೆಸಿ ತೀರ್ಮಾನ ಮಾಡಬೇಕಾದ ವಿಚಾರ. ಭಿನ್ನಾಭಿಪ್ರಾಯಗಳು ಇದ್ದೇ ಇರ್ತವೆ. ಏನೇ ಇದ್ದರೂ ಸಂಪುಟದಲ್ಲಿ ಚರ್ಚೆ ಮಾಡಿ ಎಲ್ಲರ ಹಿತಾಸಕ್ತಿ ನೋಡಿ ತೀರ್ಮಾನ ಆಗುತ್ತೆ ಅಂತ ಭರವಸೆ ವ್ಯಕ್ತಪಡಿಸಿದರು. ಇನ್ನು 56% ಮೀಸಲಾತಿಯಡಿಯೇ ನೇಮಕಾತಿ ಹಾಗೂ ಒಳಮೀಸಲಾತಿ ಕೊಡುವಂತೆ ಒತ್ತಾಯಿಸಿ ಬಿಜೆಪಿಯಿಂದ ಹೋರಾಟದ ಎಚ್ಚರಿಕೆ ವಿಚಾರ ಬಗ್ಗೆ…
ಗದಗ : ಗದಗದಲ್ಲಿ ಭೀಕರವಾದ ಅಪಘಾತ ಸಭವಿಸಿದ್ದು, ಗೂಡ್ಸ್ ವಾಹನ ಮರಕ್ಕೆ ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ, ಎಂಟು ಜನರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಗದಗ ತಾಲೂಕಿನ ಹರ್ತಿ ಬಳಿ ನಡೆದ ಘಟನೆ ನಡೆದಿದೆ. ಮುತ್ತಪ್ಪ ಸುಟಗೇರಿ (35), ನಿಂಗಪ್ಪ ಯಳವತ್ತಿ (36) ಮೃತ ದುರ್ದೈವಿಗಳು. ಗಂಭೀರ ಗಾಯಗೊಂಡವರನ್ನು ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಮೃತ ಹಾಗೂ ಗಾಯಾಳುಗಳು ಗದಗ ತಾಲೂಕಿನ ಹಿರೇಕೊಪ್ಪ ಗ್ರಾಮಸ್ಥರು. ಒಟ್ಟು ಹತ್ತು ಮಂದಿ ಗೋಜನೂರು ಕಾಮಣ್ಣ ಮೆರವಣಿಗೆ ನೋಡಲು ಹೋಗಿದ್ದರು. ಗೋಜನೂರಿನಿಂದ ಹಿರೇಕೊಪ್ಪಕ್ಕೆ ಬರುವ ವೇಳೆ ವಾಹನ ಮರಕ್ಕೆ ಡಿಕ್ಕಿ ಹೊಡೆದಿದೆ. ಚಾಲಕನ ಅಜಾಗರೂಕತೆಯಿಂದ ದುರ್ಘಟನೆ ನಡೆದಿದೆ ಎನ್ನಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗದಗ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.














