Author: kannadanewsnow05

ಉಡುಪಿ : ರಾಜ್ಯದಲ್ಲಿ ಮತ್ತೊಂದು ಘೋರವಾದ ಘಟನೆ ನಡೆದಿದ್ದು, ಉಡುಪಿ ತಾಲೂಕಿನ ಕೊಡವೂರು ಬಳಿ ಹಾಡಹಗಲೇ ಮನೆಗೆ ನುಗ್ಗಿ, ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ನನ್ನು ಬರ್ಬರವಾಗಿ ಕೊಲೆ ಮಾಡಿದ್ದಾರೆ. ಹೌದು ಹಾಡಹಗಲೇ ಮನೆಗೆ ನುಗ್ಗಿ ರೌಡಿ ಶೀಟರ್ ಸೌಫುದ್ದೀನ್ ನನ್ನ ಭೀಕರವಾಗಿ ಹತ್ಯೆ ಗೈಯ್ಯಲಾಗಿದೆ. ಕೊಲೆಯಾದ ಸೌಫುದ್ದೀನ್ ಖಾಸಗಿ ಬಸ್ ಮಾಲೀಕನಾಗಿದ್ದ ಮಣಿಪಾಲದ ನಿವಾಸಿಯಾಗಿ ಅವನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆಗೈದು ಪರಾರಿಯಾಗಿದ್ದಾರೆ.

Read More

ನವದೆಹಲಿ : ರಾಜ್ಯದ ಜನತೆಗೆ ಕೇಂದ್ರ ಸರ್ಕಾರ ಇದೀಗ ಮತ್ತೊಂದು ಸಿಹಿ ಸುದ್ದಿಯೊಂದನ್ನು ನೀಡಿದ್ದು, ಬೆಂಗಳೂರು ಮತ್ತು ಮುಂಬೈ ನಡುವೆ ಹೊಸ ಸೂಪರ್‌ಫಾಸ್ಟ್ ರೈಲಿಗೆ ಕೇಂದ್ರ ರೈಲ್ವೆ ಸಚಿವಾಲಯ ಅನುಮೋದನೆ ನೀಡಿದೆ. ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಕರ್ನಾಟಕದ ಜನರಿಗೆ ಗುಡ್​ ನ್ಯೂಸ್​​ ನೀಡಿದ್ದಾರೆ. ಅದೇನೆಂದರೆ ಬೆಂಗಳೂರು ಟು ಮುಂಬೈಗೆ ಸೂಪರ್‌ ಫಾಸ್ಟ್ ರೈಲು ಘೋಷಣೆ ಮಾಡಿದ್ದಾರೆ. ಈ ವಿಚಾರವಾಗಿ ಮಾತನಾಡಿರುವ ಸಚಿವ ಅಶ್ವಿನಿ ವೈಷ್ಣವ್​​, ಶೀಘ್ರದಲ್ಲೇ ನಾವು ಬೆಂಗಳೂರು ಟು ಮುಂಬೈ ನಡುವೆ ಸೂಪರ್‌ಫಾಸ್ಟ್ ರೈಲು ಪ್ರಾರಂಭಿಸುತ್ತೇವೆ. ಎರಡೂ ನಗರಗಳು ಪ್ರಮುಖ ಆರ್ಥಿಕ ಕೇಂದ್ರಗಳಾಗಿವೆ. ಹಾಗಾಗಿ ಇದು ಪ್ರಮುಖ ಯೋಜನೆ ಆಗಿದೆ ಎಂದು ಹೇಳಿದರು. ಇನ್ನು ಸಂಸದ ತೇಜಸ್ವಿ ಸೂರ್ಯ ಕೂಡ ಈ ವಿಚಾರವಾಗಿ ಮಾತನಾಡಿದ್ದು, ಬೆಂಗಳೂರು ಮತ್ತು ಮುಂಬೈ ನಡುವೆ ಹೊಸ ಸೂಪರ್‌ಫಾಸ್ಟ್ ರೈಲಿಗೆ ಕೇಂದ್ರ ರೈಲ್ವೆ ಸಚಿವಾಲಯ ಅನುಮೋದನೆ ನೀಡಿದೆ. ಆ ಮೂಲಕ ಎರಡೂ ನಗರಗಳ ಜನರ 30 ವರ್ಷಗಳ ಬೇಡಿಕೆ ಈಡೇರಿದೆ ಎಂದಿದ್ದಾರೆ.…

Read More

ಬೆಂಗಳೂರು : ಧರ್ಮಸ್ಥಳ ಬುರುಡೆ ಗ್ಯಾಂಗ್‌ ಷಡ್ಯಂತ್ರದ ಕುರಿತು ಡಿಸಿಎಂ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಬುರುಡೆಯನ್ನ ದೆಹಲಿಗೆ ಎತ್ತಿಕೊಂಡು ಹೋಗಿದ್ದೂ ಗೊತ್ತು, ಸುಪ್ರೀಂ ಕೋರ್ಟ್‌ಗೆ ಹೋಗಿದ್ದೂ ಗೊತ್ತು ಎಂದು ಬಾಂಬ್‌ ಸಿಡಿಸಿದ್ದಾರೆ. ಬೆಂಗಳೂರಲ್ಲಿ ಮಾತನಾಡಿದ ಅವರು, ವಾಸ್ತವಾಂಶ ಜನರಿಗೆ ತಿಳಿಸಬೇಕು ಅನ್ನೋದು ನಮ್ಮ ಆಸೆ ಎಂದು ಅವರು ತಿಳಿಸಿದರು. ರಾಜಕೀಯ ಯಾರೂ ಏನ್ ಬೇಕಾದರೂ ಮಾತಾಡಬಹುದು. ನಾನು ಮಾತಾಡಿದ್ರೆ ಸರ್ಕಾರದ ಹೇಳಿಕೆ ಆಗುತ್ತೆ. ಅಂತಿಮ ವರದಿ ಬರಲಿ, ಮಾತಾಡ್ತೀನಿ. ಹೋಮ್ ಮಿನಿಸ್ಟರ್, ಸಿಎಂ ಅಧಿಕೃತ ಸ್ಟೇಟ್ಮೆಂಟ್ ಮಾಡ್ತಾರೆ. ಬುರುಡೆ ಡೆಲ್ಲಿಗೆ ಎತ್ತಿಕೊಂಡು ಹೋಗಿದ್ದು ಗೊತ್ತೂ, ನಮಗೆ ಆ ಮಾಹಿತಿ ಇದೆ. ಸುಪ್ರೀಂ ಕೋರ್ಟ್‌ಗೆ ಹೋಗಿದ್ದೂ ಗೊತ್ತು. ಪಿಐಎಲ್ ಹಾಕಿದ್ದು ಗೊತ್ತು, ಅಲ್ಲಿ ರಿಜೆಕ್ಟ್ ಆಗಿದ್ದು ಗೊತ್ತು. ಆದ್ರೆ ಪೊಲೀಸ್ ಇಲಾಖೆ ಅವರು ತನಿಖೆ ಮಾಡ್ತಿದ್ದಾರೆ, ವರದಿ ಕೊಡ್ತಾರೆ ಎಂದು ತಿಳಿಸಿದರು. ಇನ್ನು ದಕ್ಷಿಣ ಕನ್ನಡ ಎಸ್ಪಿಗೆ ದೂರು ನೀಡುವುದಕ್ಕೆ ಮುನ್ನವೇ ಚಿನ್ನಯ್ಯನ ಮೂಲಕ ಬುರುಡೆ ಗ್ಯಾಂಗ್‌ ಸುಪ್ರೀಂ ಕೋರ್ಟ್‌ಗೆ…

Read More

ಕಲಬುರ್ಗಿ : ಕಳೆದ 48 ಗಂಟೆಗಳಿಂದ ಕಲ್ಬುರ್ಗಿ ಜಿಲ್ಲೆಯಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ಇದೀಗ ಪ್ರವಾಹದ ನೀರಿನಲ್ಲಿ ಜಾನುವಾರುಗಳು ಕೊಚ್ಚಿ ಹೋಗಿರುವ ಘಟನೆ ಕಲಬುರ್ಗಿಯಲ್ಲಿ ನಡೆದಿದೆ. ಕಲ್ಬುರ್ಗಿಯಲ್ಲಿ ವರುಣನ ಅಬ್ಬರಕ್ಕೆ ಜನ ಜೀವನ ಸಂಪೂರ್ಣ ತತ್ತರಿಸಿ ಹೋಗಿದೆ. ಇದೀಗ ಪ್ರವಾಹದ ನೀರಿನಲ್ಲಿ ಮೂರು ಜಾನುವಾರುಗಳು ಕೊಚ್ಚಿ ಹೋಗಿವೆ. ಕಲ್ಬುರ್ಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಚಂದ್ರಂಪಳ್ಳಿ ಡ್ಯಾಮ್ ಸಂಪೂರ್ಣವಾಗಿ ನೀರಿನಿಂದ ಬೋರ್ಗರೆಯುತ್ತಿದ್ದು ಚಂದ್ರಪ್ಪಳ್ಳಿ ಜಲಾಶಯದಿಂದ ಅಪಾರ ಪ್ರಮಾಣದಲ್ಲಿ ನೀರು ಬಿಡುಗಡೆ ಮಾಡಲಾಗಿದೆ ಈ ವೇಳೆ 3 ಜಾನುವಾರುಗಳು ಪ್ರವಾಹದ ನೀರಿನಲ್ಲಿ ಕೊಚ್ಚಿ ಹೋಗಿವೆ. ಈ ಒಂದು ದೃಶ್ಯ ವೈರಲಾಗಿದೆ.

Read More

ಕೊಡಗು : ಕೊಡಗಿನಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಸಾರಿಗೆ ಬಸ್ ಹಾಗು ಜೆಸಿಬಿ ಮುಖಾಮುಖಿ ಡಿಕ್ಕಿಯಾಗಿ 15 ಜನರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಕೊಡಗು ಜಿಲ್ಲೆಯ ಕುಶಲನಗರ ತಾಲೂಕಿನ ಮಾದಪಟ್ಟಣ ಬಳಿ ಒಂದು ಘಟನೆ ನಡೆದಿದೆ. ಘಟನೆಯಲ್ಲಿ ಹೋಂಗಾರ್ಡ್ಸ್ ಸೇರಿದಂತೆ 15 ಹೆಚ್ಚು ಜನರಿಗೆ ಗಂಭೀರವಾದ ಗಾಯಗಳಾಗಿವೆ. ಮಡಿಕೇರಿ ದಸರಾ ಡ್ಯೂಟಿಗೆ ಹೋಂ ಗಾರ್ಡ್ಸ್ ತೆರಳುತ್ತಿದ್ದರು. ಈ ವೇಳೆ ಸಾರಿಗೆ ಬಸ್ ಜೆಸಿಬಿ ಮುಖಾಮುಖಿ ಡಿಕ್ಕಿಯಾಗಿ ಈ ಅಪಘಾತ ಸಂಭಾವಿಸಿದೆ. ಕೂಡಲೇ ಗಾಯಳುಗಳನ್ನು ಕುಶಾಲನಗರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Read More

ಯಾದಗಿರಿ : ಬೆಂಗಳೂರು ನಗರ ಸೇರಿದಂತೆ ಇಡೀ ರಾಜ್ಯಾದ್ಯಂತ ಭಾರಿ ಮಳೆ ಸುರಿಯುತ್ತಿದ್ದು ಅದರಲ್ಲೂ ಕಲಬುರ್ಗಿ, ವಿಜಯಪುರ,ಯಾದಗಿರಿಯಲ್ಲಿ ಕಳೆದ 48 ಗಂಟೆಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ. ಭಾರಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಕಲ್ಬುರ್ಗಿಯಲ್ಲಿ ಎರಡು ದಿನ ಹಾಗೂ ಯಾದಗಿರಿಯಲ್ಲಿ ಇಂದು ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಹೌದು ಯಾದಗಿರಿಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಇದೀಗ ಇಂದು ಎಲ್ಲ ಶಾಲೆಗೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಯಾದಗಿರಿ ಜಿಲ್ಲೆಯ ಆದಂತ ಭಾರಿ ಮಳೆ ಸುರಿಯುತ್ತಿದ್ದು, ರಜೆ ಘೋಷಣೆ ಮಾಡಿ ಡಿಡಿಪಿಐ ಚನ್ನಬಸಪ್ಪ ಅವರು ಆದೇಶ ಹೊರಡಿಸಿದ್ದಾರೆ. ಅದೇ ರೀತಿಯಾಗಿ ಕಲ್ಬುರ್ಗಿಯಲ್ಲಿ ಸಹ ಕಳೆದ 48 ಗಂಟೆಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ ಇದರಿಂದ ಜನ ಜೀವನ ಸಂಪೂರ್ಣವಾಗಿ ಅಸ್ತವ್ಯಸ್ತವಾಗಿದ್ದು, ಮಕ್ಕಳ ಹಿತ ದೃಷ್ಟಿಯಿಂದ ಮುಂಜಾಗ್ರತ ಕ್ರಮವಾಗಿ ರಜೆ ಘೋಷಿಸಿ ಡಿಸಿ ಎಂದು ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಡಿಡಿಪಿಐ ಸೂರ್ಯಕಾಂತ್ ಮದಾನೆ ರಜೆ ಘೋಷಣೆ ಮಾಡಿ ಸುತ್ತೋಲೆ ಹೊರಡಿಸಿದ್ದಾರೆ.

Read More

ಮೈಸೂರು : ಕನ್ನಡದ ಖ್ಯಾತ ಕಾದಂಬರಿಕಾರ ಎಸ್ ಎಲ್ ಭೈರಪ್ಪನವರ ಚಿತಾಭಸ್ಮ ಇಂದು ವಿಸರ್ಜನೆ ಮಾಡಲಾಯಿತು. ಭೈರಪ್ಪ ಕುಟುಂಬ ಸದಸ್ಯರಿಂದ ಕಾವೇರಿ ನದಿಯಲ್ಲಿ ಭೈರಪ್ಪ ಅವರ ಅಸ್ತಿ ವಿಸರ್ಜನೆ ಮಾಡಲಾಯಿತು. ಶ್ರೀರಂಗಪಟ್ಟಣದ ರಂಗನಾಥ ಸ್ನಾನ ಘಟ್ಟದಲ್ಲಿ ಅಸ್ತಿ ವಿಸರ್ಜನೆ ಮಾಡಲಾಯಿತು. ಈ ವೇಳೆ ಪುತ್ರರಾದ ರವಿಶಂಕರ್, ಉದಯ್ ಶಂಕರ್ ಅವರು ಅಸ್ತಿ ವಿಸರ್ಜಸಿದರು. ಕಳೆದ ಬುಧವಾರ ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿರುವ ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ಹೃದಯಘಾತದಿಂದ ಎಸ್.ಎಲ್ ಭೈರಪ್ಪ ನಿಧನರಾಗಿದ್ದರು. ನಿನ್ನೆ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿರುವ ಚಿರಶಾಂತಿ ಧಾಮದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಹಾಗು ಬ್ರಾಹ್ಮಣ ಸಂಪ್ರದಾಯದಂತೆ ಅಂತ್ಯಕ್ರಿಯೆ ನೆರವೇರಿತ್ತು.

Read More

ಉತ್ತರಪ್ರದೇಶ : ಮಕ್ಕಳು ಏನೇ ತಪ್ಪು ಮಾಡಿದರು ಕೂಡ ತಂದೆ-ತಾಯಿ ಆದಂತವರು ಅವರಿಗೆ ಬೈದು, ತಿದ್ದಿ ಬುದ್ದಿ ಹೇಳಬೇಕು. ಅದನ್ನು ಬಿಟ್ಟು ತಮ್ಮ ಕೋಪವನ್ನು ಬುದ್ಧಿ ಕೈಯಲ್ಲಿ ಕೊಟ್ಟರೆ ಅನಾಹುತಗಳೇ ಹೆಚ್ಚು. ಇದೀಗ ಉತ್ತರ ಪ್ರದೇಶದ ಲಕ್ನೋದಲ್ಲಿ ಕೂಡ ಮನೆಯಲ್ಲಿ ಹಣ ಕದಿಯುತ್ತಿದ್ದಳು ಎನ್ನುವ ಒಂದೇ ಕಾರಣಕ್ಕೆ ಹೆತ್ತಮಗಳನ್ನೇ ರಾಕ್ಷಸ ತಂದೆ ಒಬ್ಬ ಕತ್ತು ಹುಸ್ಕಿ ಕೊಲೆ ಮಾಡಿರುವ ಘಟನೆ ವರದಿಯಾಗಿದೆ. ಹೌದು ಮನೆಯಲ್ಲಿ ಹಣ ಕದಿಯುತ್ತಿದ್ದಳೆಂದು ಕಟುಕ ತಂದೆಯೊಬ್ಬ ತನ್ನ 13 ವರ್ಷದ ಮಗಳನ್ನೇ ಕತ್ತು ಹಿಸುಕಿ ಕೊಂದಿರುವ ಘಟನೆ ಉತ್ತರ ಪ್ರದೇಶದ ಬುಲಂದ್‌ಶಹರ್ ಜಿಲ್ಲೆಯಲ್ಲಿ ನಡೆದಿದೆ. ಘಟನೆ ಸಂಬಂಧ 40 ವರ್ಷದ ಆರೋಪಿ ತಂದೆ ಅಜಯ್‌ ಶರ್ಮಾನನ್ನ ಪೊಲೀಸರು ಬಂಧಿಸಿದ್ದಾರೆ. ವಿದ್ಯಾರ್ಥಿನಿ ಸೋನಮ್ (13) ಮೃತಪಟ್ಟ ಮಗಳು ಎಂದು ತಿಳಿದುಬಂದಿದೆ. ಮೃತ ಸೋಮನ್‌ ಗುರುವಾರ ಎಂದಿನಂತೆ ಶಾಲೆಗೆ ಹೋಗಿದ್ದಳು. ಪ್ರತಿದಿನ ಶಾಲೆ ಮುಗಿದ ಬಳಿಕ ಆಕೆಯ ನಾನೇ ಮನೆಗೆ ಕರೆದುಕೊಂಡು ಹೋಗ್ತಿದ್ದೆ. ಆದ್ರೆ ಗುರುವಾರ ಆಕೆಯನ್ನ ಮನೆಗೆ ಕರೆದೊಯ್ಯುವ…

Read More

ಇನ್ನು ಜೀವನದಲ್ಲಿ ಕಷ್ಟಗಳು ಇದ್ದರೆ,ಶ್ರೀ ಆಂಜನೇಯ ಸ್ವಾಮಿಗೆ ಈ ರೀತಿಯಾಗಿ  ಹರಕೆ ಮಾಡಿಕೊಂಡರೆ ,ಜೀವನದಲ್ಲಿ ಇರುವಂತಹ ಇಂತಹ ಕಷ್ಟಗಳುಇದು ಯಾವ ರೀತಿಯ ಕಷ್ಟವೇ ಆದರೂ ಸರಿ ಆಂಜನೇಯಸ್ವಾಮಿ ಕೃಪೆಯಿಂದ ಎಲ್ಲಾ ಕಷ್ಟಗಳು  ಜೀವನದಲ್ಲಿ ಪರಿಹಾರವಾಗುತ್ತದೆ . ಪಂಡಿತ್  ವಿದ್ಯಾಧರ್ ನಕ್ಷತ್ರಿ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸೃಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ಶ್ರೀ ಕ್ಷೇತ್ರ ಕಟೀಲು ರಕ್ತೇಶ್ವರೀ ದೇವಿಯ ವಿಶೇಷ ಪೂಜಾದೈವಿಕ ವಿಧಿವಿಧಾನದಿಂದ ಪರಿಹಾರ ತಿಳಿಸುತ್ತಾರೆ ಶ್ರೀ ವಿದ್ಯಾಧರ್ ನಕ್ಷತ್ರಿ ಪ್ರಧಾನ್ ತಾಂತ್ರಿಕ್ 9686268564 ಎಲ್ಲಾ ಸಂಕಷ್ಟಗಳು ದೂರವಾಗುವುದು ಖಚಿತ. ಸಾಕ್ಷಾತ್ ಶ್ರೀರಾಮ ಭಕ್ತ ಆಂಜನೇಯನ ಮಹಿಮೆಗಳು ಅಪಾರ. ನಂಬಿ…

Read More

ಕಲಬುರ್ಗಿ : ಜಿಲ್ಲೆಯಲ್ಲಿ ಕಳೆದ 48 ಗಂಟೆಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಜನತೆ ತತ್ತರಿಸಿದ್ದಾರೆ. ಭಾರಿ ಮಳೆ ಹಿನ್ನೆಲೆಯಲ್ಲಿ ಇದೀಗ ಇಲ್ಲಿನ ಶಾಲೆಗಳಿಗೆ 2 ದಿನಗಳ ಕಾಲ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಹವಾಮಾನ ಇಲಾಖೆಯು ಮುಂದಿನ 48 ಗಂಟೆಗಳ ಕಾಲ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದೆ. ಹಾಗಾಗಿ ಮಕ್ಕಳ ಹಿತದೃಷ್ಟಿಯಿಂದ ಮುಂಜಾಗ್ರತ ಕ್ರಮವಾಗಿ ಎರಡು ದಿನಗಳ ಕಾಲ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ. ಅದರಂತೆ ಡಿಡಿಪಿಐ ಸೂರ್ಯಕಾಂತ ಮದಾನೆ ಸುತ್ತೋಲೆ ಹೊರಡಿಸಿದ್ದಾರೆ. ಆರೇಂಜ್ ಅಲರ್ಟ್ ಘೋಷಣೆ ಕಲಬುರಗಿ ಜಿಲ್ಲೆಯಾದ್ಯಂತ ಈಗಾಗಲೇ ಭಾರಿ ಮಳೆಯಾಗುತ್ತಿದ್ದು, ಆರೆಂಜ್‌ ಅಲರ್ಟ್ ಘೋಷಿಸಲಾಗಿದೆ. ಶಾಲೆಗಳಿಗೆ ಈಗಾಗಲೇ ದಸರಾ ರಜೆಯಿದ್ದು, ಜಿಲ್ಲೆಯ ಕೆಲವು ಶಾಲೆಗಳ ಆಡಳಿತ ಮಂಡಳಿ ದಸರಾ ರಜೆಯಿಂದ ವಿನಾಯಿತಿ ಪಡೆದುಕೊಂಡು ಶಾಲೆಗಳನ್ನು ನಡೆಸುತ್ತಿವೆ. ಅಂತಹ ಶಾಲೆಗಳಿಗೆ ಮುಂಜಾಗ್ರತಾ ಕ್ರಮವಾಗಿ ಸೆ.27 ಹಾಗೂ 28ರಂದು ಎರಡು ದಿನ ಕಾಲ ರಜೆ ಘೋಷಿಸಿ ಆದೇಶ ಹೊರಡಿಸಿದ್ದು, ಈ ರಜಾ ಅವಧಿಯ ಪಾಠ ಬೋಧನೆಯನ್ನು…

Read More