Author: kannadanewsnow05

ಬೆಂಗಳೂರು : ಬೆಂಗಳೂರಿನಲ್ಲಿ ಅನಧಿಕೃತ ಕಟ್ಟಡಗಳ ಹಾವಳಿ ಇನ್ನು ನಿಂತಿಲ್ಲ. ಸಂಪೂರ್ಣವಾಗಿ ನಿಯಮ ಉಲ್ಲಂಘಿಸಿ 5 ಅಂತಸ್ತಿನ ಕಟ್ಟಡ ನಿರ್ಮಾಣ ಮಾಡಲಾಗಿದೆ. ಈಗ ಬೆಂಗಳೂರಿನಲ್ಲಿ 5 ಅಂತಸ್ತಿನ ಕಟ್ಟಡ ಒಂದು ವಾಲಿದೆ. ಬೆಂಗಳೂರಿನ ಕೋರಮಂಗಲದ ವೆಂಕಟಾಪುರದಲ್ಲಿ ಈ ಒಂದು ಘಟನೆ ನಡೆದಿದೆ. ಸುಮಾರು 750 ಚದರ ಅಡಿ ಜಾಗದಲ್ಲಿ ಹೊಸ ಕಟ್ಟಡ ನಿರ್ಮಾಣ ಮಾಡಲಾಗಿತ್ತು. ನಿಯಮ ಗಾಳಿಗೆ ತೂರಿ ಐದು ಅಂತಸ್ತು ಕಟ್ಟಡ ನಿರ್ಮಾಣ ಮಾಡಲಾಗಿದೆ ಕೋರಮಂಗಲದ ವೆಂಕಟಪುರದಲ್ಲಿ ಇದೀಗ ಆತಂಕ ಸೃಷ್ಟಿಯಾಗಿದೆ. 15 ಎಂಟು ಐವತ್ತು ಅಡಿ ಅಥವಾ 750 ಚದರ ಅಡಿ ಜಾಗದಲ್ಲಿ 5 ಅಂತಸ್ತಿನ ಕಟ್ಟಡ ನಿರ್ಮಾಣ ಮಾಡಲಾಗಿದೆ. ನೆಲಮಹಡಿ ಸೇರಿದಂತೆ 5 ಮಹಡಿಯ ಕಟ್ಟದ ನಿರ್ಮಾಣ ಮಾಡಲಾಗಿದ್ದು ಕೋರಮಂಗಲ ಒಂದನೇ ಬ್ಲಾಕ್ ನಲ್ಲಿರುವ ವೆಂಕಟಪುರದಲ್ಲಿ ಈ ಒಂದು ಕಟ್ಟಡ ನಿರ್ಮಿಸಲಾಗಿದೆ. ಬಿಟಿಎಂ ಲೇಔಟ್ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವೆಂಕಟಪುರದಲ್ಲಿ ಅಪಾಯಕಾರಿ ಕಟ್ಟಡ ನಿರ್ಮಾಣ ಹಿನ್ನೆಲೆ ತೆರವು ಕಾರ್ಯಾಚರಣೆ ನಡೆಸಲಾಗುತ್ತಿದೆ. ಸದ್ಯ ಮಡಿವಾಳ ಠಾಣೆ ಪೊಲೀಸರು ಸ್ಥಳದಲ್ಲೇ…

Read More

ಮಂಗಳೂರು : ಧರ್ಮಸ್ಥಳ ಬುರುಡೆ ಕೇಸ್​ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಎಸ್ಐಟಿ ಮುಖ್ಯಸ್ಥ ಪ್ರಣವ್ ಮೋಹಂತಿ ಗೃಹ ಸಚಿವ ಜಿ. ಪರಮೇಶ್ವರ್ ಅವರನ್ನು ಭೇಟಿಯಾಗಿ ಮಾಹಿತಿ ನೀಡಿದರು. ಬಳಿಕ ಗೃಹ ಸಚಿವ ಜಿ ಪರಮೇಶ್ವರ್ ಅವರು ಧರ್ಮಸ್ಥಳ ಪ್ರಕರಣದ ಕುರಿತು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಚರ್ಚಿಸಿದರು. ಇನ್ನು ಈ ಪ್ರಕರಣದ ಕುರಿತು, ಎಸ್ಐಟಿ ತನಿಖೆಯಿಂದ ಸತ್ಯ ಹೊರ ಬರುತ್ತಿದ್ದು, ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸುವುದಾಗಿ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವಿರೇಂದ್ರ ಹೆಗ್ಗಡೆ ಹೇಳಿದ್ದಾರೆ. ಧರ್ಮಸ್ಥಳ ದೇಗುಲ ಬೇರೆ ಅಲ್ಲ, ಧರ್ಮಸ್ಥಳದ ಊರಿನವರು ಬೇರೆ ಅಲ್ಲ. ಎಷ್ಟು ನಿಷ್ಠುರವಾಗಿ ನಮ್ಮ ಮೇಲೆ ದಬ್ಬಾಳಿಕೆ ನಡೆದಿದೆ ಅಂತ ನೀವು ನೋಡಿದ್ದೀರಿ. ನನ್ನ ಮೇಲೆ ಯಾಕೆ ಇಷ್ಟು ದ್ವೇಷ ಇದೆ ಎಂದು ಗೊತ್ತಾಗಿಲ್ಲ. ನಾವು ಯಾರನ್ನೂ ಹೀಯಾಳಿಸಿಲ್ಲ, ದ್ವೇಷ ಕೂಡ ಮಾಡಿಲ್ಲ. ಹೀಗಿದ್ದರೂ ಇಷ್ಟು ಶತ್ರುತ್ವ ಯಾಕೆ ಎಂಬುದು ಅರ್ಥವಾಗ್ತಿಲ್ಲ. ನಾವು ತಪ್ಪು ಮಾಡದ ಕಾರಣ ಆತ್ಮವಿಶ್ವಾಸವಿದ್ದು, ಮಂಜುನಾಥ ಸ್ವಾಮಿ ಮತ್ತು ಅಣ್ಣಪ್ಪ ಸ್ವಾಮಿಯೇ…

Read More

ಬೆಂಗಳೂರು : ರಾಜ್ಯದಲ್ಲಿ ಜಾತಿ ಗಣತಿ ನಡೆಸುತ್ತಿದ್ದು ಈ ವೇಳೆ ಸರ್ವರ್ ಸಮಸ್ಯೆ ಹಾಗೂ ಮೊಬೈಲ್ ನಲ್ಲಿ ತಾಂತ್ರಿಕ ದೋಷ ಹಿನ್ನೆಲೆಯಲ್ಲಿ ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ವಿಚಾರವಾಗಿ ಸುದ್ದಿಗೋಷ್ಠಿ ನಡೆಸಿದರು. ಡಿಸಿಗಳು ಹಾಗು ಸಿಇಒಗಳ ಜೊತೆಗೆ ವಿಡಿಯೋ ಸಂವಾದ ನಡೆಸಿದ್ದೇನೆ. ಸಮೀಕ್ಷೆಗೆ ಸಂಬಂಧಿಸಿದ ತಾಂತ್ರಿಕ ಸಮಸ್ಯೆಗಳನ್ನು ನಿವಾರಣೆ ಮಾಡಬೇಕು ವಿಡಿಯೋ ಸಂವಾದ್ದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು. ರಾಜ್ಯದಲ್ಲಿ ಇದುವರೆಗೆ ಶೇಕಡ 4 ರಷ್ಟು ಸಮೀಕ್ಷೆ ಪೂರ್ಣಗೊಂಡಿದೆ. ಸಮೀಕ್ಷೆಯಲ್ಲಿ ಎಲ್ಲರೂ ತೊಡಗಿಸಿಕೊಳ್ಳಲು ಸೂಚನೆ ಕೊಟ್ಟಿದ್ದೇನೆ ಹಿಂದಿನ ಸರ್ವೆ ಗೌರವ ಧನ ಬಿಡುಗಡೆ ಮಾಡಿದ್ದೇವೆ ಬೆಂಗಳೂರು ಸೇರಿ ಎಲ್ಲಾ ಮನೆಗಳಲ್ಲೂ ಸಮೀಕ್ಷೆ ಮಾಡಬೇಕು. ಇನ್ನುಳಿದ ದಿನಗಳಲ್ಲಿ ಸಮೀಕ್ಷೆಯ ಕಾರ್ಯ ಕವರ್ ಮಾಡಬೇಕು ಪ್ರತಿದಿನ ಶೇಕಡ 10 ರಷ್ಟು ಸಮೀಕ್ಷೆ ಆಗಲೇಬೇಕು ನಾವು ಮಾಡುತ್ತೇವೆ ಎಂದು ಎಲ್ಲಾ ಜಿಲ್ಲಾಧಿಕಾರಿಗಳು ಒಪ್ಪಿಕೊಂಡಿದ್ದಾರೆ. ಶಿಕ್ಷಕರ ಕೆಲವು ತಪ್ಪು ಕಲ್ಪನೆಗಳಿಂದ ಸಮೀಕ್ಷೆಗೆ ಸಮಸ್ಯೆ ಆಗಿತ್ತು. ಈಗ ಎಲ್ಲರೂ ಕೂಡ ಒಪ್ಪಿಕೊಂಡು ಸಮೀಕ್ಷೆ…

Read More

ಬೆಂಗಳೂರು : ರಾಜ್ಯದಲ್ಲಿ ಜಾತಿ ಗಣತಿ ನಡೆಸುತ್ತಿದ್ದು ಈ ವೇಳೆ ಸರ್ವರ್ ಸಮಸ್ಯೆ ಹಾಗೂ ಮೊಬೈಲ್ ನಲ್ಲಿ ತಾಂತ್ರಿಕ ದೋಷ ಹಿನ್ನೆಲೆಯಲ್ಲಿ ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇ ವಿಚಾರವಾಗಿ ಸುದ್ದಿಗೋಷ್ಠಿ ನಡೆಸಿದರು. ಡಿಸಿಗಳು ಹಾಗು ಸಿಇಒಗಳ ಜೊತೆಗೆ ವಿಡಿಯೋ ಸಂವಾದ ನಡೆಸಿದ್ದೇನೆ. ಸಮೀಕ್ಷೆಗೆ ಸಂಬಂಧಿಸಿದ ತಾಂತ್ರಿಕ ಸಮಸ್ಯೆಗಳನ್ನು ನಿವಾರಣೆ ಮಾಡಬೇಕು ವಿಡಿಯೋ ಸಂವಾದ್ದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು. ಕಳೆದ ನಾಲ್ಕು ದಿನಗಳಿಂದ ಸರ್ವೆ ಕಾರ್ಯ ಕುಂಠಿತವಾಗಿತ್ತು. ಆದರೆ ಇಂದಿನಿಂದ ಸರ್ವೆ ಕೆಲಸ ಚುರುಕಾಗುತ್ತಿದೆ ಡಿಸಿಗಳು ಹೇಳುವ ಪ್ರಕಾರ 90% ತಾಂತ್ರಿಕ ಸಮಸ್ಯೆ ಪರಿಹಾರವಾಗಿದೆ. ಏನೇನು ತೊಡಕು ಇದ್ದಾವೆ ಅದನ್ನೆಲ್ಲ ನಿವಾರಿಸುವಂತೆ ಸೂಚಿಸಿದ್ದೇನೆ. ರಾಜ್ಯದಲ್ಲಿ ಸಾಮಾಜಿಕ ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ವಿಚಾರವಾಗಿ ಸೆಪ್ಟೆಂಬರ್ 22 ರಿಂದ ಅಕ್ಟೋಬರ್ ಅವರಿಗೆ ಸಮೀಕ್ಷೆ ಕಾರ್ಯ ಮುಗಿಸಲು ತೀರ್ಮಾನಿಸಲಾಗಿದೆ ಎಂದುಳಿದ ವರ್ಗಗಳ ಆಯೋಗ ಕೂಡ ಅದೇ ತೀರ್ಮಾನ ಮಾಡಿತ್ತು ಆದರೆ ಕಳೆದ ನಾಲ್ಕು ದಿನಗಳಿಂದ ಸಮೀಕ್ಷೆ ಸರಿಯಾಗಿ ನಡೆದಿಲ್ಲ.…

Read More

ರಾಯಚೂರು : ರಾಜ್ಯದಲ್ಲಿ ಮತ್ತೊಂದು ಭೀಕರವಾದ ಅಪಘಾತ ಸಂಭವಿಸಿದ್ದು, ಸರ್ಕಾರಿ ಸಾರಿಗೆ ಸಂಸ್ಥೆಯ ಸ್ಲೀಪರ್ ಕೋಚ್ ಬಸ್ ಪಲ್ಟಿಯಾಗಿದ್ದು, ಓರ್ವ ಪ್ರಯಾಣಿಕನ ಕಾಲು ಮುರಿದಿದೆ. ಇನ್ನು 8 ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿರುವ ಘಟನೆ ರಾಯಚೂರಿನ ಹೊರವಲಯದ ಸಾಥಮೈಲ್ ಕ್ರಾಸ್ ಹತ್ತಿರ ಇಂದು ಬೆಳಗ್ಗೆ ಈ ಅವಘಡ ಸಂಭವಿಸಿದೆ. ದಾವಣಗೆರೆಯಿಂದ ರಾಯಚೂರಿಗೆ ಬರುತ್ತಿದ್ದ ಬಸ್ ಇದಾಗಿದೆ. ಏಕಾಏಕಿ ಅಡ್ಡಬಂದ ನಾಯಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಚಾಲಕ ಬಸ್​ ಅನ್ನು ಎಡಕ್ಕೆ ತಿರುವಿದ್ದಾನೆ. ಆಗ ಬಸ್ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಜಮೀನಿಗೆ ಉರುಳಿದೆ ಎಂದು ಹೇಳಲಾಗುತ್ತಿದೆ. ಬಸ್ಸಿನಲ್ಲಿ ಚಾಲಕ, ನಿರ್ವಾಹಕ ಸೇರಿ 16 ಜನರಿದ್ದರು. ರಾಯಚೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಸ್ ಪಲ್ಟಿಯಿಂದ ಬಸ್​ನಲ್ಲಿ ಓರ್ವ ಪ್ರಯಾಣಿಕನ ಕಾಲು ಸಿಲುಕಿ ಒದ್ದಾಡಿದ್ದಾನೆ. ಪೊಲೀಸರು, ಸ್ಥಳೀಯರ ಸಹಾಯದಿಂದ ಪ್ರಯಾಣಿಕನನ್ನು ಹೊರತೆಗೆದು ಆಂಬ್ಯುಲೆನ್ಸ್ ಮೂಲಕ ರಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗೆ ರವಾನಿಸಲಾಗಿದೆ. ಅಲ್ಲದೇ‌ ಬಸ್‌ನಲ್ಲಿದ್ದ ಸುಮಾರು 8 ಜನರಿಗೆ ಸಣ್ಣ ಪುಟ್ಟ…

Read More

ಬೆಂಗಳೂರು : ಬಿಜೆಪಿ  ಶಾಸಕ ದಿನಕರ ಶೆಟ್ಟಿ ಆಯ್ಕೆ ಪ್ರಶ್ನಿಸಿ ಸಲ್ಲಿಸಿದ ಅರ್ಜಿ ಇದೀಗ ವಜಾಗೊಂಡಿದೆ. ಹೈಕೋರ್ಟ್ ಜೆಡಿಎಸ್ ಅಭ್ಯರ್ಥಿ ಸಲ್ಲಿಸಿದ್ದ ಅರ್ಜಿಯನ್ನು ಇದೀಗ ಧಾರವಾಡ ಹೈಕೋರ್ಟ್ ಪೀಠ ವಜಾಗೊಳಿಸಿದೆ. ಕುಮಟಾ ಬಿಜೆಪಿ ಶಾಸಕ ದಿನಕರ ಆಯ್ಕೆಯನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿಯನ್ನು ಧಾರವಾಡ ಹೈಕೋರ್ಟ್ ಪೀಠ ವಜಾಗೊಳಿಸಿ ಆದೇಶ ಹೊರಡಿಸಿದೆ. ಎರಡು ವರ್ಷದ ಹಿಂದೆ ಜೆಡಿಎಸ್ ಅಭ್ಯರ್ಥಿ ಈ ವಿಚಾರವಾಗಿ ಹೈಕೋರ್ಟ್ ಮೆಟ್ಟಿಲು ಏರಿದ್ದರು. ಅಭ್ಯರ್ಥಿ ಸೂರಜ್ ಸೋನಿ ಸಲ್ಲಿಸಿದ ಅರ್ಜಿ ಇದೀಗ ವಜಾಗೊಳಿಸಿದೆ. 2023ರ ವಿಧಾನಸಭೆ ಚುನಾವಣೆಯಲ್ಲಿ ದಿನಕರ ಶೆಟ್ಟಿ ಗೆದ್ದಿದ್ದರು. ಇವರ ಈ ಒಂದು ಆಯ್ಕೆಯನ್ನು ಪ್ರಶ್ನಿಸಿ ಸೂರಜ್ ಸೋನಿ ಎರಡು ವರ್ಷದ ಹಿಂದೆ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ಇದೀಗ ಧಾರವಾಡ ಹೈಕೋರ್ಟ್ ಪೀಠ ಸೂರಜ್ ಸೋನಿ ಸಲ್ಲಿಸಿದ ಅರ್ಜಿ ವಜಾಗೊಳಿಸಿದೆ.

Read More

ಬೆಂಗಳೂರು : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್ಐಟಿಗೆ ರಾಜ್ಯ ಸರ್ಕಾರ ತನಿಖೆ ಮುಂದುವರಿಸುವಂತೆ ಸೂಚನೆ ನೀಡಿದೆ. ಇದರ ಬೆನ್ನಲ್ಲೇ ಇಂದು ಬೆಂಗಳೂರಿನ ಸದಾಶಿವ ನಗರದಲ್ಲಿರುವ ಗೃಹ ಸಚಿವ ಜಿ ಪರಮೇಶ್ವರ್ ನಿವಾಸಕ್ಕೆ ಎಸ್ಐಟಿ ಮುಖ್ಯಸ್ಥ ಪ್ರಣವ್ ಮೋಹಂತಿಯವರು ಇಂದು ಭೇಟಿ ನೀಡಿ ಪ್ರಕರಣದ ಮಾಹಿತಿ ನೀಡಿದರು. ಅದಾದ ಬಳಿಕ ಗೃಹ ಸಚಿವ ಜಿ.ಪರಮೇಶ್ವರ್ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಆಗಿ ಧರ್ಮಸ್ಥಳದ ತನಿಖೆ ಕುರಿತು ಚರ್ಚಿಸಿದ್ದಾರೆ. ನಂತರ SIT ಮುಖ್ಯಸ್ಥ ಪ್ರಣವ್ ಮೋಹಂತಿ ಜೊತೆಗೆ ಮೀಟಿಂಗ್ ಮಾಡಿದ ಸಿಎಂ ಸಿದ್ದರಾಮಯ್ಯ ಪ್ರಕರಣದ ಕುರಿತು ಪ್ರಣವ್ ಸಿಎಂ. ಸಿದ್ದರಾಮಯ್ಯ ಅವರಿಗೆ ಮಾಹಿತಿ ನೀಡಿದರು. ಧರ್ಮಸ್ಥಳ ಬುರುಡೆ ಪ್ರಕರಣದ ಕುರಿತಂತೆ ಎಸ್ಐಟಿ ಮುಖ್ಯಸ್ಥ ಪ್ರಣವ್ ಮಹಾಂತಿ ಗೃಹ ಸಚಿವ ಜಿ ಪರಮೇಶ್ವರ್ ಅವರನ್ನು ಭೇಟಿಯಾಗಿ ತನಿಖಾ ಪ್ರಗತಿಯ ಬಗ್ಗೆ ಮಾಹಿತಿ ನೀಡಿದ್ದಾರೆ. ಪ್ರಕರಣ ಸಂಬಂಧಪಟ್ಟ ಆರೋಪಿ ಚಿನ್ನಯ್ಯ ಪರ ವಕೀಲರು ಸುಪ್ರೀಂಕೋರ್ಟಿಗೆ ಪಿಐಎಲ್ ಸಲ್ಲಿಸಿದರು. ನಿನ್ನೆ ಸುಪ್ರೀಂಕೋರ್ಟ್ ಪಿಐಎಲ್ ಅನ್ನು ವಜಾ ಗೊಳಿಸಿತ್ತು.…

Read More

ವರದಿ : ಸುರೇಶ್ ಹಾಸಿಲ್ಕರ್ ಮೈಸೂರು : ಪದ್ಮಶ್ರೀ, ಪದ್ಮವಿಭೂಷಣ ಪುರಸ್ಕೃತ ಕನ್ನಡದ ಖ್ಯಾತ ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪ ಅವರು, ಇಂದು ಪಂಚಭೂತಗಳಲ್ಲಿ ಲೀನವಾದರು. ಮೈಸೂರು ಬೆಟ್ಟದ ತಪ್ಪಲಿನಲ್ಲಿರುವ ಚಿರಶಾಂತಿಧಾಮದಲ್ಲಿ ಹೊಯ್ಸಳ ಕರ್ನಾಟಕ ಬ್ರಾಹ್ಮಣ ಸಂಪ್ರದಾಯದಂತೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅವರ ಅಂತ್ಯಕ್ರಿಯೆ ನೆರವೇರಿತು. ಇಬ್ಬರು ಪುತ್ರರಾದ ರವಿ ಶಂಕರ್ ಹಾಗು ಉದಯ್ ಶಂಕರ್ ಅಂತಿಮ ವಿಧಿ ವಿಧಾನದ ಬಳಿಕ ಅಂತ್ಯಕ್ರಿಯೆ ನೆರವೇರಿಸಿದರು. ಪುತ್ರಿ ಸಹನಾ ವಿಜಯಕುಮಾರ್, ಸಚಿವರಾದ ಡಾ.ಎಚ್ ಸಿ ಮಹದೇವಪ್ಪ. ವೆಂಕಟೇಶ್. ಪ್ರಹ್ಲಾದ್ ಜೋಶಿ ಸೇರಿದಂತೆ ಹಲವು ಗಣ್ಯರು ಪಾಲ್ಗೊಂಡಿದ್ದಾರೆ. ನಿನ್ನೆ ಎಸ್.ಎಲ್. ಭೈರಪ್ಪ ಅವರ ಪಾರ್ಥಿವ ಶರೀರವನ್ನು ಮೈಸೂರಿಗೆ ತರಲಾಗಿದ್ದು, ಮೈಸೂರಿನ ಕಲಾಮಂದಿರದ ಬಳಿಯ ಕಿಂದರಿ ಜೋಗಿ ಆವರಣದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ನಂತರ ಜೆಎಸ್‌ಎಸ್ ಆಸ್ಪತ್ರೆಗೆ ಪಾರ್ಥಿವ ಶರೀರ ರವಾನಿಸಲಾಗಿತ್ತು. ಇಂದು ಬೆಳಗ್ಗೆ 8:30 ಕ್ಕೆ ಭೈರಪ್ಪ ಅವರ ಮನೆಯಲ್ಲಿ ಅಂತಿಮ ವಿಧಿ ವಿಧಾನ ನಡೆಸಿ ಚಾಮುಂಡಿ ಬೆಟ್ಟದ ತಪ್ಪಲಿನ ರುದ್ರಭೂಮಿಯಲ್ಲಿ…

Read More

ಬಳ್ಳಾರಿ : ಬಳ್ಳಾರಿಯಲ್ಲಿ ಘೋರ ದುರಂತ ಒಂದು ಸಂಭವಿಸಿದ್ದು, ಮನೆಯ ಮುಂದಿನ ಚರಂಡಿಗೆ ಬಿದ್ದು ಮಗು ಸಾವನ್ನಪ್ಪಿದೆ. ಬಳ್ಳಾರಿ ಜಿಲ್ಲೆಯ ಕುರಿಕೊಪ್ಪ ಎಂಬ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ. ಚರಂಡಿಯಲ್ಲಿ ಮಗು ಒದ್ದಾಡಿ, ನರಳಾಡಿ, ಪ್ರಾಣಬಿಟ್ಟ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಮನೆಯ ಮುಂದೆ ಅರವಿಂದ್ ಎನ್ನುವ ಬಾಲಕ ಆಟವಾಡುತ್ತಿದ್ದ. ಈ ವೇಳೆ ಕಾಲು ಜಾರಿ ಚರಂಡಿಗೆ ಬಿದ್ದು ಒದ್ದಾಡಿ ನರಳಾಡಿ ಮಗು ಪ್ರಾಣ ಬಿಟ್ಟಿದೆ. ರಾತ್ರಿ ಇಡಿ ಮಗುವಿಗಾಗಿ ಕುಟುಂಬ ಹುಡುಕಾಡಿದೆ. ಚರಂಡಿಯಲ್ಲಿ ಬಿದ್ದಿದ್ದು ಕುಟುಂಬಸ್ಥರಿಗೆ ಗೊತ್ತಾಗಿಲ್ಲ. ಆದರೆ ಬೆಳಿಗ್ಗೆ ಚರಂಡಿಯಲ್ಲಿ ನೋಡಿದಾಗ ಮಗುವಿನ ಮೃತ ದೇಹ ಪತ್ತೆಯಾಗಿದೆ. ಸದ್ಯ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

Read More

ಬಾಗಲಕೋಟೆ : ಬಾಗಲಕೋಟೆಯಲ್ಲಿ ಘೋರ ದುರಂತ ಒಂದು ನಡೆದಿದ್ದು, ಹಾಸ್ಟೆಲ್ ನಲ್ಲಿ ಪಿಯುಸಿ ವಿದ್ಯಾರ್ಥಿನಿ ಒಬ್ಬಳು ಅನುಮಾನಾಸ್ಪದವಾಗಿ ಸಾವನಪ್ಪಿದ್ದಾಳೆ. ಸೀಮಾ ರಾಥೋಡ್ (17) ಎನ್ನುವ ಬಾಲಕಿ ನೇಣು ಬಿಗಿದ ಸ್ಥಿತಿಯಲ್ಲಿ ಆಕೆಯ ಶವ ಪತ್ತೆಯಾಗಿದೆ. ಬಾಗಲಕೋಟೆ ನಗರದ ವಿದ್ಯಗಿರಿಯಲ್ಲಿರುವ ಹಾಸ್ಟೆಲ್ನಲ್ಲಿ ಈ ಒಂದು ಘಟನೆ ನಡೆದಿದೆ. ನಿನ್ನೆ ಸಂಜೆ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿ ಸೀಮಾ ರಾಠೋಡ್ ಶವ ಪತ್ತೆಯಾಗಿದೆ. ನೇಣು ಬಿಗಿದಿರುವ ಸ್ಥಿತಿ ಕಂಡು ಇತರೆ ವಿದ್ಯಾರ್ಥಿನಿಯರು ಹೆದರಿದ್ದಾರೆ. ಹಾಸ್ಟೆಲ್ನಿಂದ ಕೂಡಲೇ ಹೊರಗಡೆ ಬಂದಿದ್ದಾರೆ. ಪ್ರಥಮ ಪಿಯುಸಿ ಓದುತ್ತಿದ್ದ ಸೀಮಾ ಬಾಗಲಕೋಟೆಯ ವಾಗ್ದೇವಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಕಾಲೇಜಿಗೆ ಸೇರಿದ ಹಾಸ್ಟೆಲ್ ನಲ್ಲಿಯೇ ಸೀಮಾ ಉಳಿದುಕೊಂಡಿದ್ದಾಳೆ . ನಿನ್ನೆ ಸಂಜೆ ಸೀಮಾ ಪೋಷಕರಿಗೆ ಹಾಸ್ಟೆಲ್ ಇಂದ ಕರೆ ಹೋಗಿದೆ. ನಿಮ್ಮ ಮಗಳಿಗೆ ಪಿಟ್ಸ್ ಬಂದಿದೆ ಎಂದು ಪೋಷಕರಿಗೆ ಕರೆ ಹೋಗಿದೆ. ಈಗ ನೇಣು ಹಾಕು ಹಾಕಿಕೊಂಡಿದ್ದಾಳೆ ಅಂತಿದ್ದಾರೆ ಅಂತ ಪೋಷಕರು ಹೇಳಿದ್ದಾರೆ. ಹಾಗಾಗಿ ಮಗಳ ಸಾವಿನ ಬಗ್ಗೆ ಪೋಷಕರಿಗೆ ಅನುಮಾನ…

Read More