Author: kannadanewsnow05

ಬೆಂಗಳೂರು : ಜನೌಷಧಿ ಕೇಂದ್ರಗಳ ಸ್ಥಾಪನೆ ವಿಚಾರದಲ್ಲಿ ಒಂದು ಮಳಿಗೆಯಿಂದ ಮತ್ತೊಂದು ಮಳಿಗೆಯ ವ್ಯವಹಾರಕ್ಕೆ ಅಡ್ಡಿಯಾಗಲಿದೆ ಎಂಬ ಕಾರಣಕ್ಕಾಗಿ ಮಧ್ಯಪ್ರವೇಶಿಸಲಾಗದು ಎಂದು ಹೈಕೋರ್ಟ್​ ತಿಳಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಶೀಲಾ ಭಟ್ ಎಂಬುವರಿಗೆ ಜನೌಷಧಿ ಕೇಂದ್ರ ತೆರೆಯಲು ಅನುಮತಿಸಿರುವುದನ್ನು ಪ್ರಶ್ನಿಸಿ, ಅದೇ ಜಿಲ್ಲೆಯ ಪುತ್ತೂರು ತಾಲೂಕಿನ ಸವಿನಯ ಎಂಬುವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಈ ಆದೇಶ ನೀಡಿದೆ. ಅರ್ಜಿದಾರರಾಗಿರುವ ಸವಿನಯ ಎಂಬುವರು ಶೀಲಾ ಭಟ್ ಎಂಬುವರಿಗೆ ಜನೌಷಧ ಕೇಂದ್ರ ತೆರೆಯಲು ಅನುಮತಿ ನೀಡಿರುವುದನ್ನು ಪ್ರಶ್ನಿಸಿದ್ದು, ಆದರೆ, ಸವಿನಯ ಅವರಿಗೆ ಜನೌಷಧಿ ಕೇಂದ್ರ ಸ್ಥಾಪಿಸಲು ತಾತ್ವಿಕ ಒಪ್ಪಿಗೆ ಮಾತ್ರ ನೀಡಲಾಗಿದೆ. ಹೀಗಾಗಿ ತನಗೆ ಮಂಜೂರಾಗಿರುವ ಕೇಂದ್ರಕ್ಕೂ ಶೀಲಾ ಭಟ್​​ಗೆ ಮಂಜೂರಾಗಿರುವ ಕೇಂದ್ರದ ನಡುವಿನ ಅಂತರ ಒಂದು ಕಿಲೋ ಮೀಟರ್ ಒಳಗಿದೆ ಎಂಬುದಾಗಿ ವಾದಿಸುವ ಹಕ್ಕು ಹೊಂದಿಲ್ಲ. ಹೀಗಾಗಿ, ಶೀಲಾ ಭಟ್​ಗೆ ಜನೌಷಧಿ ಕೇಂದ್ರ ತೆರೆಯಲು ಅನುಮತಿಸಿರುವುದರಲ್ಲಿ ಯಾವುದೇ ದೋಷ ಹುಡುಕಲಾಗದು ಎಂದು ಪೀಠ…

Read More

ಬೆಂಗಳೂರು : ಬಿಜೆಪಿ ಶಾಸಕ ಮುನಿರತ್ನಗೆ ಬಿಗ್ ಶಾಕ್ ಎದುರಾಗಿದ್ದು, ಲಂಚ ಸ್ವೀಕಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಂಗಳೂರಿನ ವೈಯ್ಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ಈ ಕುರಿತು ಕೆಎಸ್ ದಾಖಲಾಗಿತ್ತು. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಕ್ಷಮ ಪ್ರಾಧಿಕಾರದಿಂದ ತನಿಖೆಗೆ ಗ್ರೀನ್ ಸಿಗ್ನಲ್ ನೀಡಿದೆ. ಹೌದು ಮುನಿರತ್ನ ವಿರುದ್ಧ ತನಿಖೆಗೆ ಇದೀಗ ಗ್ರೀನ್ ಸಿಗ್ನಲ್ ದೊರಕಿದೆ. ಮುನಿರತ್ನ ವಿರುದ್ಧದ ತನಿಖೆಗೆ ಪ್ರಾಧಿಕಾರ ಅನುಮತಿ ನೀಡಿದೆ. ಬೆಂಗಳೂರಿನ ವೈಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಪ್ರಕರಣದ ತನಿಖೆಗೆ ಸಕ್ಷಮ ಪ್ರಾಧಿಕಾರದಿಂದ ಅನುಮತಿ ದೊರೆತಿದೆ. 36 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು 20 ಲಕ್ಷ ಲಂಚ ಸ್ವೀಕಾರ ಮಾಡಿದ್ದಾರೆ ಎನ್ನುವ ಆರೋಪದ ಹಿನ್ನೆಲೆಯಲ್ಲಿ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ 1998ರ ಅಡಿ ಪ್ರಕರಣ ದಾಖಲಾಗಿತ್ತು. ಪ್ರಾಥಮಿಕ ಹಂತದ ತನಿಖೆಯಲ್ಲಿ ಆರೋಪ ಸಹ ಸಾಬೀತು ಆಗಿತ್ತು. ಮುನಿರತ್ನ ಅಪರಾಧ ಎಸಗಿರುವುದು ಸಾಬೀತಾಗಿತ್ತು. ಸಿಐಡಿ ಡಿಜಿಪಿ ಸಕ್ಷಮ ಪ್ರಾಧಿಕಾರದಿಂದ ಅನುಮತಿ ಪಡೆದಿದ್ದರು. ಸಿಐಡಿ ಪೊಲೀಸ್ ಮಹಾನಿರ್ದೇಶಕರ ಕೋರಿಕೆಯ ಮೇರೆಗೆ ಇದೀಗ…

Read More

ಧಾರವಾಡ : ರಾಜ್ಯದಲ್ಲಿ ಭಾರಿ ಮಳೆ ಸುರಿಯುತ್ತಿದ್ದು ಬೆಂಗಳೂರು ಮಹಾನಗರ ಸೇರದಂತೆ ರಾಜ್ಯದ ಇತರೆ ಜಿಲ್ಲೆಗಳಲ್ಲಿ ಭಾರಿ ಮಳೆಯಿಂದಾಗಿ ಹಲವಾರು ಅವಾಂತರಗಳು ಸೃಷ್ಟಿಯಾಗಿವೆ. ಇದೀಗ ಧಾರವಾಡದಲ್ಲಿ ಸಿಡಿಲು ಬಡಿದು ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಹಿರೇನರ್ತಿ ಗ್ರಾಮದಲ್ಲಿ ಸಿಡಿಲು ಬಡಿದು ಯುವಕ ಸಾವನ್ನಪ್ಪಿದ್ದಾನೆ. ಹಿರೇ ಹರಕುಣಿ ಗ್ರಾಮದ ಮೈಲಾರಪ್ಪ ಕೊಣಕಲ್ (20) ಮೃತ ಯುವಕ ಎಂದು ತಿಳಿದುಬಂದಿದೆ. ಜಾನುವಾರು ಮೈ ತೊಳೆಯಲು ತೆರಳಿದ್ದಾಗ ಸಿಡಿಲು ಬಡಿದಿದೆ. ಈ ವೇಳೆ ಮೈಲಾರಪ್ಪ ಸ್ಥಳದಲ್ಲಿ ಸಾವಣಪ್ಪಿದ್ದಾನೆ.ಘಟನೆ ಕುರಿತಂತೆ ಕುಂದಗೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ದುಬೈ ನಿಂದ ಅಕ್ರಮವಾಗಿ 12 ಕೋಟಿ ಮೌಲ್ಯದ 14 ಕೆಜಿಗೂ ಅಧಿಕ ಚಿನ್ನ ಸಾಗಾಟ ಮಾಡಿದ ಪ್ರಕರಣದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ನಟಿ ರನ್ಯಾ ರಾವ್ ಗೆ ಇದೀಗ ಬಿಗ್ ರಿಲೀಫ್ ಸಿಕ್ಕಿದೆ. ಕೋರ್ಟ್ ಇದೀಗ ನಟಿ ರನ್ಯಾ ರಾವ್ಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಹೌದು ದುಬೈ ನಿಂದ ರನ್ಯಾ ರಾವ್ 12 ಕೋಟಿ ಮೌಲ್ಯದ ಸುಮಾರು 14 ಕೆಜಿ ಚಿನ್ನವನ್ನು ಅಕ್ರಮವಾಗಿ ತಂದಿದ್ದರು ಈ ವೇಳೆ ಖಚಿತ ಮಾಹಿತಿಯ ಮೇರೆಗೆ ಡಿ ಆರ್ ಐ ಅಧಿಕಾರಿಗಳು ಅವರನ್ನು ಅರೆಸ್ಟ್ ಮಾಡಿದ್ದರು. ಇದೀಗ ಇಂದು ಬೆಂಗಳೂರಿನ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯವು ನಟಿ ರನ್ಯಾರಾವ್ ಸೇರಿದಂತೆ ಮೂವರು ಆರೋಪಿಗಳಿಗೆ ಷರತ್ತು ಬದ್ಧ ಜಾಮೀನು ನೀಡಿದೆ. ಜಾಮೀನು ಸಿಕ್ಕರೂ ಬಿಡುಗಡೆ ಇಲ್ಲ! ಹೌದು ನಟಿ ರಮ್ಯಾಗೆ ಕೋರ್ಟ್ ಇಂದ ಜಾಮೀನು ಸಿಕ್ಕರು ಸದ್ಯಕ್ಕೆ ಬಿಡುಗಡೆ ಇಲ್ಲ. ಗೋಲ್ಡ್ ಸ್ಮಗ್ಲಿಂಗ್ ಕೇಸ್ ನಲ್ಲಿ ಜಾಮೀನು ಸಿಕ್ಕರು ನಟಿ…

Read More

ಬೆಂಗಳೂರು : ಒಂದೆಡೆ ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿಯುತ್ತಿದೆ. ಇನ್ನೊಂದು ಕಡೆ ರಾಜ್ಯ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದು ಎರಡು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಇಂದು ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಸಾಧನಾ ಸಮಾವೇಶ ಹಮ್ಮಿಕೊಂಡಿತ್ತು. ಈ ವಿಚಾರವಾಗಿ ಕೇಂದ್ರ ಸಚಿವ ಹೆಚ್‍ಡಿ ಕುಮಾರಸ್ವಾಮಿ ಸಮಾಜಿಕ ಜಾಲತಾಣ ಟ್ವೀಟ್ ನಲ್ಲಿ, ನಿಮ್ಮ ಸಾಧನಾ ಸಮಾವೇಶ ಮಾಡಿದ್ದು ಸಾಕು, ನಿಮ್ಮ ಸರ್ಕಾರ ಜಾರಿ ಮಾಡಿರುವ ಗ್ಯಾರಂಟಿ ಯೋಜನೆಗಳ ನಾಟಕವು ಸಾಕು. ಮೊದಲು ರಾಜ್ಯದ ಉದ್ದಗಲಕ್ಕೂ ಭಾರಿ ಮಳೆ ಸುರಿಯುತ್ತಿದ್ದು, ಹಲವಾರು ಅವಾಂತರ ಸೃಷ್ಟಿಯಾಗಿವೆ. ಮೊದಲು ಮಳೆಯ ಅನಾಹುತದ ಕಡೆ ಗಮನ ಕೊಡಿ ಎಂದು ಕಿಡಿಕಾರಿದ್ದಾರೆ. ಬೆಳಗ್ಗೆಯಿಂದ ಸಾಧನಾ ಸಮಾವೇಶ ಮಾಡಿದ್ದು ಸಾಕು. ನಿಮ್ಮ ಗ್ಯಾರಂಟಿ ನಾಟಕವೂ ಸಾಕು. ಮೊದಲು ಬೆಂಗಳೂರು ಸೇರಿ ರಾಜ್ಯದ ಉದ್ದಗಲಕ್ಕೂ ಆಗಿರುವ ಮಳೆ ಅನಾಹುತದ ಕಡೆ ಗಮನ ಹರಿಸಿ. ಇಡೀ ರಾಷ್ಟ್ರಕ್ಕೆ ಮಾದರಿ ನಗರ ಆಗಿದ್ದ ಬೆಂಗಳೂರು ದುಸ್ಥಿತಿಯನ್ನು ಸರಿಪಡಿಸಿ. ಕಷ್ಟದಲ್ಲಿರುವ ಜನರಿಗೆ ಸ್ಪಂದಿಸಿ.…

Read More

ಕೊಪ್ಪಳ : ರಾಜ್ಯದಲ್ಲಿ ಪ್ರತಿದಿನ ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಅತ್ಯಾಚಾರ ಪ್ರಕರಣಗಳು ನಡೆಯುತ್ತಲೆ ಇವೆ. ಇದೀಗ ಹಾಡಹಗಲೇ ಮಾನಸಿಕ ಅಸ್ವಸ್ಥೆಯ ಮೇಲೆ ಕಾಮುಕನೊಬ್ಬ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ಕೊಪ್ಪಳ ಜಿಲ್ಲೆಯ ಕನಕಗಿರಿ ಬಸ್ ನಿಲ್ದಾಣದಲ್ಲಿ ನಡೆದಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರ ಕ್ಷೇತ್ರದಲ್ಲಿ ಇಂತಹ ನೀತಿ ಕೃತ್ಯ ನಡೆದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಹೌದು ಬಸ್ ನಿಲ್ದಾಣದ ಬಳಿಗಿದ್ದ ಮಾನಸಿಕ ಅಸ್ವಸ್ಥೆಯ ಮೇಲೆ ಕಾಮುಕನೊಬ್ಬ ಅತ್ಯಾಚಾರಕ್ಕೆ ಎತ್ತಿಸಿಯತ್ನಿಸಿದ್ದಾನೆ. ಕೊಪ್ಪಳ ಜಿಲ್ಲೆಯ ಕನಕಗಿರಿ ಪಟ್ಟಣದ ವ್ಯಕ್ತಿಯೊಬ್ಬ ಅತ್ಯಾಚಾರಕ್ಕೆ ಯತ್ನಿಸಿದ್ದು, ಮಾನಸಿಕ ಅಶ್ವಸ್ಥೆಯನ್ನು ಕರೆದೋಯ್ದು ಅತ್ಯಾಚಾರಕ್ಕೆ ಯತ್ನಿಸಿದ ದೃಶ್ಯ ಮೊಬೈಲ್ ನಲ್ಲಿ ಸ್ಥಳೀಯರು ಚಿತ್ರೀಕರಿಸಿದ್ದಾರೆ. ಶಿವರಾಜ್ ತಂಗಡಗಿ ಪ್ರತಿನಿಧಿಸುವ ಕನಕಗಿರಿ ವಿಧಾನಸಭಾ ಕ್ಷೇತ್ರದಲ್ಲಿ ಈ ಒಂದು ಕೃತ್ಯ ನಡೆದಿದೆ. ಜಿಲ್ಲಾ ಉಸ್ತುವಾರಿ ಸಚಿವರ ತವರಲ್ಲಿ ಈ ಒಂದು ಅಭದ್ರತೆ ಕಾಡುತ್ತಿದೆ. ಕನಕಗಿರಿ ಕ್ಷೇತ್ರದಲ್ಲಿ ಮಹಿಳೆಯರಿಗೆ ಭದ್ರತೆ ಇಲ್ವಾ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅತ್ಯಾಚಾರ ವಿರುದ್ಧ…

Read More

ಕಲಬುರ್ಗಿ : ರಾಜ್ಯದಲ್ಲಿ ಇದೀಗ ಭಾರಿ ಮಳೆ ಆಗುತ್ತಿದ್ದು ಬೆಂಗಳೂರು ಮಹಾನಗರ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವರುಣ ಅಬ್ಬರಿಸುತ್ತಿದ್ದಾನೆ. ಇದುವರೆಗೂ ರಾಜ್ಯದಲ್ಲಿ ಮಹಾಮಳೆಗೆ ಒಟ್ಟು ಐದು ಜನರು ಬಲಿಯಾಗಿದ್ದಾರೆ. ಇದೀಗ ಕಲ್ಬುರ್ಗಿಯಲ್ಲಿ ಸಿಡಿಲು ಬಡಿದು ರೈತ ಸಾವನಪ್ಪಿದ್ದಾರೆ. ಹೌದು ಜಮೀನಿನಲ್ಲಿ ಕೆಲಸ ಮಾಡುತ್ತಿರುವಾಗ ಸಿಡಿಲು ಬಡಿದು ರೈತ ನಬಿಲಾಲ್ ಚೌದರಿ ಇದೀಗ ಸಾವನ್ನಪ್ಪಿದ್ದಾರೆ. ಅಫ್ಜಲ್ ಪುರ ತಾಲೂಕಿನ ಕರಜಗಿ ಗ್ರಾಮದಲ್ಲಿ ಈ ಒಂದು ದುರ್ಘಟನೆ ನಡೆದಿದೆ. ರಾಜ್ಯದಲ್ಲಿ ಇದುವರೆಗೂ ಮಹಾಮಳೆಗೆ ಬಲಿಯಾದವರ ಸಂಖ್ಯೆ ಇದೀಗ 6ಕ್ಕೆ ಏರಿಕೆಯಾಗಿದೆ.

Read More

ಮಂಗಳೂರು : ಮಂಗಳೂರಿನಲ್ಲಿ ಭಾರಿ ಮಳೆ ಸುರಿಯುತ್ತಿದ್ದು ಇದೀಗ ಮಂಗಳೂರಿನ ಬಜೆಪಯ ಆದ್ಯಪಾಡಿಯಲ್ಲಿ ಭೂಕುಸಿತ ಉಂಟಾಗಿದೆ. ಮಂಗಳೂರು ಏರ್ಪೋರ್ಟ್ ಭಾಗದಿಂದ ಮಣ್ಣು ಮತ್ತು ನೀರು ಹರಿದು ಬಂದಿದ್ದು, ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತವಾಗಿದೆ. ಹೌದು ಮಳೆಯಿಂದ ಬಜಪೆ ಬಳಿ ಆದ್ಯಪಾಡಿಯಲ್ಲಿ ಭೂಕುಸಿತ ಉಂಟಾಗಿದ್ದು, ಮಂಗಳೂರು ವಿಮಾನ ನಿಲ್ದಾಣ ಕೆಳಭಾಗದ ಆದ್ಯಪಾಡಿಯಲಿ ಏರ್ಪೋರ್ಟ್ ಭಾಗದಿಂದ ಮಣ್ಣು ಮತ್ತು ನೀರು ಹರಿದು ಬಂದಿದೆ. ಯಾವ ಪ್ರಮಾಣದಲ್ಲಿ ನೀರು ಮಣ್ಣು ಹರಿದು ಬಂದಿದೆ ಎಂದರೆ, ಉಮಾನಾಥ ಸಾಲ್ಯಾನ್ ಎಂಬುವವರ ಮನೆ ಆವರಣ ಸಂಪೂರ್ಣವಾಗಿ ಕೆಸರಿನಲ್ಲಿ ಮುಳುಗಿದೆ. ಮನೆಯ ಮುಂದಿನ ಅಂಗಳದಲ್ಲಿ ಸಂಪೂರ್ಣವಾಗಿ ಕೆಸರು ತುಂಬಿಕೊಂಡಿದೆ. ಈ ಕುರಿತು ಮನೆಯ ಮಾಲೀಕ ಉಮಾನಾಥ ಅವರು ಪ್ರತಿಕ್ರಿಯೆ ನೀಡಿ, ಇತರ ಮಣ್ಣು ನೀರು ಬರುವುದು ಮೊದಲೇನಲ್ಲ, ಕಳೆದ ವರ್ಷದಲ್ಲಿ ಕೂಡ ಇದೇ ರೀತಿ ಮಣ್ಣು ನೀರು ಬಂದು ಸಮಸ್ಯೆ ಉಂಟಾಗಿತ್ತು. ಏರ್ಪೋರ್ಟ್ ಅಧಿಕಾರಿಗಳಿಗೆ ಈ ಕುರಿತು ಮಾಹಿತಿ ನೀಡಿದರು ಅವರು ಯಾವುದೇ ಕ್ರಮ ಕೈಗೊಂಡಿಲ್ಲ. ಮಳೆ ಬಂದಾಗಲೂ ನಮಗೆ ಈ…

Read More

ವಿಜಯನಗರ : ರಾಜ್ಯ ಕಾಂಗ್ರೆಸ್ ಸರ್ಕಾರ ಎರಡು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಇಂದು ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಸಾಧನಾ ಸಮಾವೇಶ ಹಮ್ಮಿಕೊಂಡಿತ್ತು. ಈ ಒಂದು ಸಾಧನ ಸಮಾವೇಶದಲ್ಲಿ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮಾತನಾಡಿ,ಭಾರತ ಪಾಕಿಸ್ತಾನದ ನಡುವೆ ಸಣ್ಣಪುಟ್ಟ ಯುದ್ಧಗಳು ನಡೆದಿವೆ ಎಂದು ಹೇಳಿಕೆ ನೀಡಿದರು. ಭಾರತ ಪಾಕಿಸ್ತಾನದ ನಡುವೆ ಸಣ್ಣಪುಟ್ಟ ಯುದ್ಧಗಳು ನಡೆದಿವೆ. ನಮ್ಮ ಪಾಕ್ ವಿರುದ್ಧ ನಾವೇನು ಘರ್ಷಣೆ ಮಾಡ್ತಿದ್ದೇವೆ. ಪಾಕಿಸ್ತಾನ ಕೆಲಸ ಭಾರತದ ಮೇಲೆ ಗೂಬೆ ಕೂರಿಸುವುದು. ಚೀನಾ ಬೆಂಬಲ ಪಡೆದು ಭಾರತದ ಮೇಲೆ ಪಾಕಿಸ್ತಾನ ದಾಳಿ ನಡೆಸುತ್ತಿದೆ. ಇದನ್ನು ಎಂದು ಕೂಡ ನಮ್ಮ ದೇಶ ಸಹಿಸುವುದಿಲ್ಲ ಎಂದು ಹೇಳಿದರು. ಈ ಘಟನೆ ಬಳಿಕ ನಾವೆಲ್ಲ ಒಗ್ಗಟ್ಟಾಗಿದ್ದೇವೆ ಎಂದು ಬೆಂಗಳೂರಿನಲ್ಲಿ ಹೇಳಿದ್ದೆ. ನಮ್ಮ ವಿರುದ್ಧ ಬಂದರೆ ಒಕ್ಕಟ್ಟಾಗಿ ಹೋರಾಟ ಮಾಡೋಣ. ನಮಗೆ ದೇಶ ಮುಖ್ಯ ಜಾತಿ ಧರ್ಮ ಆಮೇಲೆ. ಆದರೆ ಈಗ ಮೋದಿ ಮೊದಲು ದೇಶ ಆಮೇಲೆ ಆಗಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ಹೊರ…

Read More

ಬೆಂಗಳೂರು : ಮಾಜಿ ಸಂಸದ ಡಿಕೆ ಸುರೇಶ್ ಸಹೋದರಿ ಎಂದು ಹೇಳಿ ಕೋಟ್ಯಾಂತರ ರೂಪಾಯಿ ಚಿನ್ನಾಭರಣ ವಂಚನೆ ಪ್ರಕರಣದಲ್ಲಿ ಇಡಿ ಅಧಿಕಾರಿಗಳು ಐಶ್ವರ್ಯ ಗೌಡಳನ್ನು ಅರೆಸ್ಟ್ ಮಾಡಿದ್ದಾರೆ. ಇಡಿ ಬಂಧನ ಪ್ರಶ್ನಿಸಿ ಐಶ್ವರ್ಯಗೌಡ ಇದೀಗ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದು ವಿಚಾರಣೆ ನಡೆಸಿದ ಬಳಿಕ ನ್ಯಾಯಾಧೀಶರು ಐಶ್ವರ್ಯ ಗೌಡ ಅರ್ಜಿಯ ವಿಚಾರಣೆ 22ಕ್ಕೆ ಮುಂದೂಡಿ ಆದೇಶ ಹೊರಡಿಸಿದರು. ಇಂದು ಇಡಿ ಬಂಧನ ಪ್ರಶ್ನಿಸಿ ಐಶ್ವರ್ಯ ಗೌಡ ಅರ್ಜಿ ಸಲ್ಲಿಸಿದ್ದು, ವಂಚನೆ ಪ್ರಕರಣದಲ್ಲಿ ಐಶ್ವರ್ಯಗೌಡ ಅರೆಸ್ಟ್ ಆಗಿದ್ದಾರೆ. ಬಂಧನಕ್ಕೆ ಸೂಕ್ತ ಕಾರಣ ನೀಡಿಲ್ಲ ಎಂದು ಐಶ್ವರ್ಯ ಗೌಡ ಪರವಾಗಿ ಹಿರಿಯ ವಕೀಲ ಸಂದೇಶ ಚೌಟ ವಾದ ಮಂಡಿಸಿದರು. ವಂಚನೆ ಸೇರಿದಂತೆ ಹಲವು ಆರೋಪಗಳನ್ನು ಐಶ್ವರ್ಯ ಕೂಡ ಎದುರಿಸುತ್ತಿದ್ದಾಳೆ. ಈ ಸಂದರ್ಭದಲ್ಲಿ ಇಡಿ ಪರ ವಕೀಲರಿಂದ ವಾದ ಮಂಡನೆಗೆ ಕಾಲಾವಕಾಶ ಕೋರಲಾಯಿತು. ಬಳಿಕ ವಿಚಾರಣೆಯನ್ನು ಹೈಕೋರ್ಟ್ ಮೇ 22ಕ್ಕೆ ಮುಂದೂಡಿತು.

Read More