Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯದೇವನಹಳ್ಳಿ ತಾಲೂಕು ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬೆಂಗಳೂರು ಗ್ರಾಮಾಂತರ ಲೋಕಾಯುಕ್ತ ಡಿ ವೈ ಎಸ್ ಬಿ ಗಿರೀಶ್ ನೇತೃತ್ವದಲ್ಲಿ ಈ ಒಂದು ದಾಳಿ ನಡೆದಿದೆ. ಸರ್ವೆ ಇಲಾಖೆಯ ರೆಕಾರ್ಡ್ ನೀಡುವ ಕಚೇರಿಯ ಬಗ್ಗೆ ಹಲವು ದೂರು ಬಂದ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ. ದಾಖಲೆಗಳನ್ನು ಪಡೆದು ತಹಶೀಲ್ದಾರ ಸಮ್ಮುಖದಲ್ಲಿ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸಿದರು ಸರಿಯಾದ ಸಮಯಕ್ಕೆ ಬಾರದ ಅಧಿಕಾರಿಗಳ ಬಗ್ಗೆ ಮಾಹಿತಿ ಕಲೆಹಾಕಿದ್ದಾರೆ. ತಾಲೂಕು ಕಚರಿಯ ಎಲ್ಲಾ ಕಚೇರಿಗಳಲ್ಲಿ ದಾಖಲೆಗಳ ಪರಿಶೀಲನೆ ನಡೆಸಿದರು.
ಯಾದಗಿರಿ : ಇತ್ತೀಚಿಗೆ ಶಾಲಾ ಬಸ್ ಹರಿದು ಬೆಂಗಳೂರಿನಲ್ಲಿ ಇಬ್ಬರು ಕಂದಮ್ಮಗಳು ಬಲಿಯಾಗಿದ್ದರು. ಇದೀಗ ಯಾದಗಿರಿಯಲ್ಲಿ ಮತ್ತೊಂದು ದುರಂತ ಸಂಭವಿಸಿದ್ದು ಖಾಸಗಿ ಶಾಲಾ ಬಸ್ ಹರಿದು 4 ವರ್ಷದ ಮಗು ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಗಾಜರಕೋಟದಲ್ಲಿ ನಡೆದಿದೆ. ನಿನ್ನೆ ಈ ಒಂದು ಘಟನೆ ನಡೆದಿದ್ದು ಬಸ್ನಿಂದ ಕೆಳಗೆ ಇಳಿಯುತ್ತಿದ್ದಂತೆ ಶಾಲಾ ಬಸ್ ಚಾಲಕ ಬಸ್ ರಿವರ್ಸ್ ತೆಗೆದುಕೊಂಡಿದ್ದಾನೆ. ಈ ವೇಳೆ ಬಸ್ಸಿನ ಚಕ್ರಕ್ಕೆ ಸಿಲುಕಿ 4 ವರ್ಷದ ಪುನೀತ್ ಎಂಬ ಬಾಲಕ ಸಾವನಪ್ಪಿದ್ದಾನೆ. ಗಾಜರ್ ಕೋಟ ಗ್ರಾಮದ ವಿಸಡಂ ಶಾಲೆಯ ವಿದ್ಯಾರ್ಥಿ ಪುನೀತ್ ಸಾವನಪ್ಪಿದ್ದಾನೆ. ಮಗನನ್ನು ಕಳೆದುಕೊಂಡು ಇದೀಗ ಕುಟುಂಬದ ಸದಸ್ಯರ ಆಕ್ರಂದನ ಮುಗಿಲು ಮುಟ್ಟಿದೆ. ಗ್ರಾಮಸ್ಥರು ಮಗುವಿನ ಶವ ಇಟ್ಟು ಪ್ರತಿಭಟನೆ ನಡೆಸುತ್ತಿದ್ದಾರೆ. ಬಸ್ ಚಾಲಕನಿಗೆ ಜೀವಾವಧಿ ಶಿಕ್ಷೆ ನೀಡುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ. ಪೊಲೀಸರ ಮನವೊಲಿಕೆಯ ಬಳಿಕ ಪ್ರತಿಭಟನೆ ಕೈಬಿಟ್ಟರು. ಗುರುಮಠಕಲ್ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.
ಮೈಸೂರು : ರಾಜ್ಯದಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಬಲಿಯಾಗಿದೆ. ಕಾಡಾನೆ ದಾಳಿಯಿಂದ ರೈತನೋರ್ವ ಮೃತಪಟ್ಟಿರುವ ಘಟನೆ ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕಿನ ತಲಕಾಡು ಹೋಬಳಿಯ ಪರಿಣಾಮಿಪುರ ಗ್ರಾಮದಲ್ಲಿ ಮಂಗಳವಾರ ಸಂಜೆ ನಡೆದಿದೆ. ಪರಿಣಾಮಿಪುರ ಗ್ರಾಮದ ಗುರುಮಲ್ಲಪ್ಪ (70) ಆನೆ ದಾಳಿಗೆ ಸಿಲುಕಿ ಮೃತ ರೈತ ಎಂದು ತಿಳಿದುಬಂದಿದೆ.ಗುರುಮಲ್ಲಪ್ಪ ಕಬ್ಬಿನ ಗದ್ದೆಗೆ ನೀರು ಹಾಯಿಸುವ ವೇಳೆ ಹಿಂದಿನಿಂದ ಬಂದ ಕಾಡಾನೆ ದಾಳಿ ಮಾಡಿ ತುಳಿದು ಸಾಯಿಸಿದೆ ಎಂದು ಕುಟುಂಬಸ್ಥರು ಹೇಳುತ್ತಿದ್ದು, ಈ ಒಂಟಿ ಸಲಗ ಶಿವನಸಮುದ್ರ, ಸತ್ಯ ಮಂಗಲ ಭಾಗದ ಅರಣ್ಯ ಪ್ರದೇಶದಿಂದ ತಪ್ಪಿಸಿಕೊಂಡು ಬಂದಿರುವ ಸಾಧ್ಯತೆ ಇದೆ ಎಂದು ಅರಣ್ಯಾಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದಾರೆ. ಕಾಡಾನೆ ಕಾಣಿಸಿಕೊಂಡ ಬಳಿಕ ಗ್ರಾಮಸ್ಥರು ದೂರವಾಣಿ ಮೂಲಕ ಅರಣ್ಯ ಇಲಾಖೆಗೆ ಮಾಹಿತಿ ನೀಡಿದರೂ ಅವರು ಸಕಾಲಕ್ಕೆ ಬಾರದಿದ್ದರಿಂದಲೇ ಈ ದುರ್ಘಟನೆ ನಡೆದಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಿರ್ಲಕ್ಷ್ಯ ವಹಿಸಿದ ಅರಣ್ಯ ಇಲಾಖೆಯವರ ಮೇಲೆ ಕ್ರಮ ಜರುಗಿಸಿ ಹಾಗೂ ಮೃತಪಟ್ಟ ವ್ಯಕ್ತಿಯ ಕುಟುಂಬದವರಿಗೆ ಹೆಚ್ಚಿನ ಪರಿಹಾರ ನೀಡಿ…
ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಭೀಕರವಾದ ಕೊಲೆಯಾಗಿದ್ದು ಮಚ್ಚಿನಿಂದ ಕೊಚ್ಚಿ ಪತಿ ಪತ್ನಿಯನ್ನು ಭೀಕರವಾಗಿ ಕೊಲೆ ಮಾಡಿದ್ದಾನೆ. ಬೆಂಗಳೂರಿನ ಗೋವಿಂದರಾಜನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಕೊಲೆ ನಡೆದಿದೆ. ಮಚ್ಚಿನಿಂದ ಕೊಚ್ಚಿ ದೇವಿಕ (50) ಪತ್ನಿಯನ್ನು ಪತಿ ಕುಮಾರ್ ಕೊಲೆ ಕೊಲೆ ಮಾಡಿದ್ದಾನೆ. ಇತ್ತೀಚಿಗೆ ಕುಟುಂಬದ ಸಮೇತ ಕೇರಳ ಪ್ರವಾಸಕ್ಕೆ ತೆರಳಿದ್ದರು. ಈ ವೇಳೆ ಚಾಲಕನ ಜೊತೆಗೆ ಪತ್ನಿ ಮಾತನಾಡಿದ್ದಕ್ಕೆ ಅನುಮಾನ ವ್ಯಕ್ತಪಡಿಸಿದ್ದಾನೆ. ಪತ್ನಿಯ ಮೇಲೆ ಅನುಮಾನ ಹೊಂದಿದ್ದ ಆರೋಪಿ ಪತಿ ಕುಮಾರ್ ನಿನ್ನೆ ರಾತ್ರಿ ಮಲಗಿದ ವೇಳೆ ಮಚ್ಚಿನಿಂದ ಕೊಚ್ಚಿ ದೇವಿಕಾಳನ್ನು ಕೊಲೆ ಮಾಡಿದ್ದಾನೆ ಬಳಿಕ ತಾನು ಕೂಡ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಕೂಡಲೇ ಆರೋಪಿ, ಕುಮಾರ್ನನ್ನು ಮಕ್ಕಳು ತಡೆದಿದ್ದಾರೆ ಸದ್ಯ ಕೊಲೆ ಆರೋಪಿ ಕುಮಾರರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಗೋವಿಂದರಾಜನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಡ್ಯ :- ಜನರ ನಂಬಿಕೆ ವಿಶ್ವಾಸಕ್ಕೆ ಕಳಂಕ ಬಾರದಂತೆ ಸಂಘದ ಮೂಲಕ ಸದಸ್ಯರಿಗೆ ಸಿಗಬಹುದಾದ ಎಲ್ಲಾ ಬಗೆಯ ಸಾಲ ಸೌಲಭ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡುವಂತೆ ನೂತನ ನಿರ್ದೇಶಕರಿಗೆ ಶಾಸಕ ಕೆ.ಎಂ.ಉದಯ್ ಕಿವಿಮಾತು ಹೇಳಿದರು. ಮದ್ದೂರು ತಾಲೂಕಿನ ಬೆಳತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಅವಿರೋಧವಾಗಿ ಆಯ್ಕೆಯಾದ ಕಾಂಗ್ರೆಸ್ ಪಕ್ಷದ 11 ಅಭ್ಯರ್ಥಿಗಳನ್ನು ಅಭಿನಂದಿಸಿ ಮಾತನಾಡಿದರು. ಕೇಂದ್ರ ಮತ್ತು ರಾಜ್ಯ ಸರ್ಕಾರ ರೈತರ ಆರ್ಥಿಕಾಭಿವೃದ್ಧಿಗೆ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು, ಅವುಗಳನ್ನು ಗ್ರಾಮದ ಜನರ ನಂಬಿಕೆ ವಿಶ್ವಾಸಕ್ಕೆ ಕಳಂಕ ಬಾರದಂತೆ ಸಂಘದ ಮೂಲಕ ಸದಸ್ಯರಿಗೆ ಸಿಗಬಹುದಾದ ಎಲ್ಲಾ ಬಗೆಯ ಸಾಲ ಸೌಲಭ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡಬೇಕೆಂದು ತಿಳಿಸಿದರು. ಸಂಘದ ಷೇರುದಾರರು ರಾಜಕೀಯ ಬೆರೆಸದೆ ಒಗ್ಗಟ್ಟಿನಿಂದ 11 ಮಂದಿ ಅಭ್ಯರ್ಥಿಗಳನ್ನು ಅವಿರೋಧವಾಗಿ ಆಯ್ಕೆ ಮಾಡಿರುವುದು ಸಂತಸದ ಸಂಗತಿಯಾಗಿದ್ದು, ನೂತನ ಆಡಳಿತ ಮಂಡಳಿ ಸಂಘದ ಮತ್ತಷ್ಟು ಉನ್ನತಿಕರಣಕ್ಕೆ ಶ್ರಮಿಸಬೇಕೆಂದರು. ಸಂಘದ ಐದು ವರ್ಷಗಳ ಅವಧಿಗೆ ನಡೆದ ಚುನಾವಣೆ ವೇಳೆ…
ತುಮಕೂರು : ತುಮಕೂರಿನಲ್ಲಿ ಬೆಳ್ಳಂ ಬೆಳಗ್ಗೆ ಸರಗಳ್ಳರು ಅಟ್ಟಹಾಸ ಮೆರೆದಿದ್ದು ವೃದ್ಧೆಯ ಕತ್ತಿನಲ್ಲಿ ಇದ್ದ ಚಿನ್ನದ ಸರಕದ್ದು ಪರಾರಿಯಾಗಿರುವ ಘಟನೆ ತುಮಕೂರಿನ ಮೈದಾಳ ರಸ್ತೆಯಲ್ಲಿ ನಡೆದಿದೆ. ಬೆಳಿಗ್ಗೆ 6:30ಕ್ಕೆ ಈ ಒಂದು ಘಟನೆ ನಡೆದಿದೆ ತುಮಕೂರಿನ ಮೈದಾಳ ರಸ್ತೆಯಲ್ಲಿ ವೃದ್ದೆ ಚಿಲ್ಲರೆ ಅಂಗಡೇ ಇಟ್ಟು ವ್ಯಾಪಾರ ಮಾಡುತ್ತಿದ್ದರು. ಗುಟ್ಕಾ ಕೇಳೋ ನೆಪದಲ್ಲಿ ಬಂದು ಏಕಾಏಕಿ ವೃದ್ದೆಯ ಕತ್ತಿಗೆ ಕೈ ಹಾಕಿ ಚಿನ್ನದ ಸರವನ್ನು ಕಿತ್ತು ಅಲ್ಲಿಂದ ಪರಾರಿಯಾಗಿದ್ದಾರೆ. ಬೆಳಗ್ಗೆ ಆದುದರಿಂದ ವೃದ್ದೆ ಪಾರ್ವತಮ್ಮ ಎಷ್ಟೇ ಕೂಗಾಡಿದರು ಅಲ್ಲಿ ಯಾರು ಜನ ಇರಲಿಲ್ಲ.
ವಿಜಯಪುರ : ವಿಜಯಪುರದಲ್ಲಿ ಮತ್ತೆ ಬೀದಿ ನಾಯಿಗಳು ಅಟ್ಟಹಾಸ ಮೆರೆದಿವೆ. ವಿಜಯಪುರ ನಗರದ ಕೆಎಸ್ಆರ್ಟಿಸಿ ಕಾಲೋನಿಯಲ್ಲಿ ಈ ಒಂದು ಘಟನೆ ನಡೆದಿದ್ದು ಮನೆ ಮುಂದೆ ನಿಂತಿದ್ದ ಬಾಲಕಿಯ ಮೇಲೆ ಬೀದಿ ನಾಯಿಗಳು ದಾಳಿ ಮಾಡಿವೆ. ಅನ್ವಿತ ಪಡ್ಡಿ ಎನ್ನುವ ಬಾಲಕಿಯ ಮೇಲೆ ಬಿದ್ದಿ ನಾಯಿಗಳು ದಾಳಿ ಮಾಡಿ ಗಂಭೀರವಾಗಿ ಗಾಯಗೊಳಿಸಿವೆ. ಮಾರಣಾಂತಿಕವಾಗಿ ಐದಾರು ಬೀದಿ ನಾಯಿಗಳು ದಾಳಿ ಮಾಡಿದ್ದು ಈ ವೇಳೆ ತಕ್ಷಣ ಬಾಲಕಿಯನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಅನ್ವಿತಾ ಕಣ್ಣು, ಬೆನ್ನು ಹಾಗೂ ಕಾಲಿಗೆ ಬೀದಿನಾಯಿಗಳು ಕಚ್ಚಿ ಗಾಯಗೊಳಿಸಿವೆ . ವಿಜಯಪುರ ಜಿಲ್ಲಾಸ್ಪತ್ರೆಯಲ್ಲಿ ಬಾಲಕಿ ಅನ್ವಿತಾಗೆ ಇದೀಗ ಚಿಕಿತ್ಸೆ ನೀಡಲಾಗುತ್ತಿದೆ ಬೀದಿ ನಾಯಿಗಳ ಕಾಟಕ್ಕೆ ನಿವಾಸಿಗಳು ಬೇಸತ್ತು ಹೋಗಿದ್ದಾರೆ.
ಬೆಂಗಳೂರು : ಪರಿಷತ್ ಸದಸ್ಯರ ವರ್ತನೆಗೆ ಸಭಾಪತಿ ಬಸವರಾಜ್ ಹೊರಟ್ಟಿ ಬೇಸರ ವ್ಯಕ್ತಪಡಿಸಿದ್ದಾರೆ. ಸಭಾಪತಿ ಸ್ಥಾನದಲ್ಲಿ ಕುಳಿತವರಿಗೆ ತಾಳ್ಮೆ ಹೆಚ್ಚಿರಬೇಕು ಸಭಾಪತಿ ಸ್ಥಾನದಲ್ಲಿ ಮಂಗ್ಯಾನ ತರ ಕೂತಿರುತ್ತೇನೆ. ಮೊದಲು ಶಾಸಕರು ಕೈ ಎತ್ತಿ ಮಾತನಾಡುವುದಕ್ಕೆ ಅವಕಾಶ ಕೇಳುತ್ತಿದ್ದರು. ಈಗ ಏನು ಇಲ್ಲ ಎಂದು ಬಸವರಾಜ್ ಹೊರಟ್ಟಿ ಬೇಸರ ವ್ಯಕ್ತಪಡಿಸಿದ್ದಾರೆ. ನನಗೂ ತಾಳ್ಮೆಯಿಂದ ಇದು ಸಾಕಾಗಿದೆ ದನ ಕಾಯಲು ಹೋಗಿ ಎಂದು ನಾನು ಬೈದಿದ್ದೇನೆ. ಅಷ್ಟಕ್ಕೆ ಅವರು ಕೊಠಡಿಗೆ ಬಂದು ಪ್ರಶ್ನಿಸಿದ್ದಾರೆ ದನ ಕಾಯೋರ ವಿಡಿಯೋ ಅವರಿಗೆ ವಿಡಿಯೋ ತೋರಿಸಿದ್ದೇನೆ ದನ ಕಾಯುವವರೆಗೂ ನಿಮಗೂ ಏನು ವ್ಯತ್ಯಾಸ ಎಂದು ನಾನು ಕೇಳಿದೆ ಬಳಿಕ ಅವರು ಕ್ಷಮೆ ಕೇಳಿ ವಾಪಸು ಹೋದರು ಎಂದು ಬಸವರಾಜ್ ಹೊರಟ್ಟಿ ಮಾತನಾಡಿರೊ ವಿಡಿಯೋ ಈಗ ವೈರಲ್ ಆಗಿದೆ.
ಯಾದಗಿರಿ : ಇತ್ತೀಚಿಗೆ ಶಾಲಾ ಬಸ್ ಹರಿದು ಬೆಂಗಳೂರಿನಲ್ಲಿ ಇಬ್ಬರು ಕಂದಮ್ಮಗಳು ಬಲಿಯಾಗಿದ್ದರು. ಇದೀಗ ಯಾದಗಿರಿಯಲ್ಲಿ ಮತ್ತೊಂದು ದುರಂತ ಸಂಭವಿಸಿದ್ದು ಖಾಸಗಿ ಶಾಲಾ ಬಸ್ ಹರಿದು 4 ವರ್ಷದ ಮಗು ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಗಾಜರಕೋಟದಲ್ಲಿ ನಡೆದಿದೆ. ನಿನ್ನೆ ಈ ಒಂದು ಘಟನೆ ನಡೆದಿದ್ದು ಬಸ್ನಿಂದ ಕೆಳಗೆ ಇಳಿಯುತ್ತಿದ್ದಂತೆ ಶಾಲಾ ಬಸ್ ಚಾಲಕ ಬಸ್ ರಿವರ್ಸ್ ತೆಗೆದುಕೊಂಡಿದ್ದಾನೆ. ಈ ವೇಳೆ ಬಸ್ಸಿನ ಚಕ್ರಕ್ಕೆ ಸಿಲುಕಿ 4 ವರ್ಷದ ಪುನೀತ್ ಎಂಬ ಬಾಲಕ ಸಾವನಪ್ಪಿದ್ದಾನೆ. ಗಾಜರ್ ಕೋಟ ಗ್ರಾಮದ ವಿಸಡಂ ಶಾಲೆಯ ವಿದ್ಯಾರ್ಥಿ ಪುನೀತ್ ಸಾವನಪ್ಪಿದ್ದಾನೆ. ಮಗನನ್ನು ಕಳೆದುಕೊಂಡು ಇದೀಗ ಕುಟುಂಬದ ಸದಸ್ಯರ ಆಕ್ರಂದನ ಮುಗಿಲು ಮುಟ್ಟಿದೆ. ಗ್ರಾಮಸ್ಥರು ಮಗುವಿನ ಶವ ಇಟ್ಟು ಪ್ರತಿಭಟನೆ ನಡೆಸುತ್ತಿದ್ದಾರೆ. ಬಸ್ ಚಾಲಕನಿಗೆ ಜೀವಾವಧಿ ಶಿಕ್ಷೆ ನೀಡುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ. ಪೊಲೀಸರ ಮನವೊಲಿಕೆಯ ಬಳಿಕ ಪ್ರತಿಭಟನೆ ಕೈಬಿಟ್ಟರು. ಗುರುಮಠಕಲ್ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.
ಬೆಂಗಳೂರು : ಬೆಂಗಳೂರಿನಲ್ಲಿ ಬೆಳ್ಳಂ ಬೆಳಿಗ್ಗೆ ಖಾಸಗಿ ಬಸ್ ಒಂದು ಹೊತ್ತಿ ಉರಿದಿದೆ. ಇಂದು ಬೆಳಿಗ್ಗೆ 10: 30ಕೆ ಈ ಒಂದು ಘಟನೆ ನಡೆದಿದ್ದು ಚಂದ್ರಾ ಲೇಔಟ್ ಬಿಎಂಟಿಸಿ ಒಂದು ಘಟನೆ ನಡೆದಿದೆ. ಅದೃಷ್ಟ ವಸಾದ್ ಬಸ್ ನಲ್ಲಿ ಯಾವುದೇ ಪ್ರಯಾಣಿಕರು ಇರಲಿಲ್ಲ. ಸಂಪೂರ್ಣವಾಗಿ ಬಸ್ ಹೊತ್ತಿ ಉರಿದಿದೆ. ಕೆಲಕಾಲ ಸ್ಥಳೀಯರಲ್ಲಿ ಆತಂಕ ಮನೆ ಮಾಡಿತ್ತು. ಚಂದ್ರ ಲೇಔಟ್ ಬಿಎಂಟಿಸಿ ಡಿಪೋ ಬಳಿ ಒಂದು ಘಟನೆ ನಡೆದಿದ್ದು, ಆದರೆ ಕಾರಣ ಏನು ಎಂಬುದು ಇದುವರೆಗೂ ಗೊತ್ತಾಗಿಲ್ಲ. ಈ ಒಂದು ಖಾಸಗಿ ಬಸ್ ಯಾರಿಗೆ ಸೇರಿದೆ ಎಂಬುದು ತಿಳಿದು ಬಂದಿಲ್ಲ ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಬಂದು ಬೆಂಕಿ ನಂದಿಸಿದರು. ಘಟನಾಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡುತ್ತಿದ್ದಾರೆ.













