Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಬೆಂಗಳೂರಿನಲ್ಲಿ ಲವ್ ಜಿಹಾದ ಪ್ರಕರಣದ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಅಮೃತಹಳ್ಳಿ ಠಾಣೆ ಪೋಲೀಸರು ಆರೋಪಿ ಮೊಹಮ್ಮದ್ ಇಶಾಕ್ ನನ್ನ ಅರೆಸ್ಟ್ ಮಾಡಿದ್ದಾರೆ. ಮತಾಂತರಕ್ಕೆ ಒಪ್ಪದಿದ್ದಕ್ಕೆ ಪ್ರೀತಿಸಿದ ಯುವತಿಗೆ ಮಹಮ್ಮದ್ ಇಶಾಕ್ ಕೈಕೊಟ್ಟಿದ್ದಾನೆ. ಪ್ರಕರಣ ಅಮೃತ ಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಬರುವ ಕಾರಣ ಹಿನ್ನೆಲೆಯಲ್ಲಿ ಪ್ರಕರಣ ಅಮೃತಹಳ್ಳಿ ಠಾಣೆಗೆ ವರ್ಗಾವಣೆ ಆಗಿತ್ತು. ಪ್ರಕರಣ ಹಿನ್ನೆಲೆ 2024ರ ಅಕ್ಟೋಬರ್ 17ರಂದು ಯುವತಿಗೆ ಮೊಹಮ್ಮದ್ ಇಶಾಕ್ನ ಪರಿಚಯವಾಗಿತ್ತು. ಈ ಪರಿಚಯ ಸ್ನೇಹ ಮತ್ತು ಸ್ನೇಹ ಪ್ರೀತಿಯಾಗಿ ಬದಲಾಗಲು ಹೆಚ್ಚು ಸಮಯ ಬೇಕಿರಲಿಲ್ಲ. 2024ರ ಅಕ್ಟೋಬರ್ 30ರಂದು ಥಣಿಸಂದ್ರದ ಮಾಲ್ನಲ್ಲಿ ಇಬ್ಬರು ಭೇಟಿಯಾಗಿದ್ದರು. ನಂತರ ಯುವತಿ ಜೊತೆ ಇಶಾಕ್ ಸಲುಗೆ ಬೆಳೆಸಿಕೊಂಡಿದ್ದನು. ಮದುವೆ ಸಂಬಂಧ ಮನೆಯವರೊಂದಿಗೆ ಮಾತನಾಡೋದಾಗಿ ಇಶಾಕ್ ನಂಬಿಸಿದ್ದನು. ಒಂದು ದಿನ ದಾಸರಹಳ್ಳಿ ಖಾಸಗಿ ಹೋಟೆಲ್ನಲ್ಲಿ ರೂಮ್ ಬುಕ್ ಮಾಡಿದ್ದ ಇಶಾಕ್, ಯುವತಿಯನ್ನು ಕರೆಸಿಕೊಂಡಿದ್ದನು. ಈ ವೇಳೆ ಮದುವೆಯ ಭರವಸೆ ನೀಡಿ ಆಕೆಯೊಂದಿಗೆ ಸಂಪರ್ಕ ಬೆಳೆಸಿದ್ದಾನೆ. ನಂತರ ಹಲವು ಬಾರಿ ಸಂಪರ್ಕ…
ಬೆಂಗಳೂರು : ಕಿರುತೆರೆ ನಟಿ ದಿವ್ಯ ಸುರೇಶ್ ಅವರಿಂದ ಹಿಟ್ ಅಂಡ್ ರನ್ ಆರೋಪ ಕೇಳಿ ಬಂದಿದೆ.ಅತಿ ವೇಗ ಮತ್ತು ನಿರ್ಲಕ್ಷದ ಚಾಲನೆ ಮಾಡಿದ ಆರೋಪ ಕೇಳಿ ಬಂದಿದ್ದು, ಅಪಘಾತದಲ್ಲಿ ಮಹಿಳೆ ಒಬ್ಬರ ಕಾಲು ಮುರಿತವಾಗಿದೆ ಎಂದು ತಿಳಿದುಬಂದಿದೆ.ಈ ಹಿನ್ನೆಲೆ ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಕ್ಟೋಬರ್ 4 ರಂದು ರಾತ್ರಿ 1:30ರ ವೇಳೆಗೆ ಈ ಒಂದು ಅಪಘಾತ ಸಂಭವಿಸಿದ್ದು ಬೆಂಗಳೂರಿನ ಬ್ಯಾಟರಾಯನಪುರ ಎಂಎಂ ರಸ್ತೆಯಲ್ಲಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಮಹಿಳೆಯ ಕಾಲು ಮುರಿತವಾಗಿದ್ದು ಅದಾದ ಬಳಿಕ ಸೌಜನ್ಯಕಾದರೂ ನಮ್ಮನ್ನು ಬಂದು ಭೇಟಿಯಾಗಿಲ್ಲ ಎಂದು ಅಪಘಾತಕ್ಕೆ ಈಡಾದ ಮಹಿಳೆಯ ಕುಟುಂಬಸ್ಥರು ದಿವ್ಯಾ ಸುರೇಶ್ ವಿರುದ್ಧ ಆಕ್ರೋಶ ಹೋರ ಹಾಕಿದ್ದಾರೆ. ಇದೀಗ ಪೊಲೀಸರು ನಟಿ ದಿವ್ಯಾ ಸುರೇಶ್ ಅವರನ್ನು ಠಾಣೆಗೆ ಕರೆದು ವಿಚಾರಣೆ ನಡೆಸಿದ್ದಾರೆ. ಘಟನೆ ನಡೆದ ಸ್ಥಳದಲ್ಲಿ ಪೊಲೀಸರು ಸಿಸಿಟಿವಿ ಪರಿಶೀಲನೆ ಮಾಡಿದರು. ನಟಿ ದಿವ್ಯ ಸುರೇಶ್ ಕಾರು ಅನ್ನೋದು ಖಚಿತವಾಗಿತ್ತು . ದಿವ್ಯ ಸುರೇಶ್ ಗೆ ಪೊಲೀಸರು ನೋಟಿಸ್…
ಬೆಂಗಳೂರು : ಮನೆಯಲ್ಲಿ ಸಿಲಿಂಡರ್ ಸ್ಪೋಟಗೊಂಡು ಓರ್ವ ವ್ಯಕ್ತಿ ಶ್ರವಣಪ್ಪಿದ್ರು ಬೆಂಗಳೂರಿನ ಕೆಆರ್ ಪುರಂ ತ್ರಿವೇಣಿ ನಗರದಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ. ಗ್ಯಾಸ್ ಅನಿಲ ಸೋರಿಕೆಯಾಗಿ ಸಿಲಿಂಡರ್ ಸ್ಪೋಟಗೊಂಡಿದೆ. ಸಿಲಿಂಡರ್ ಸ್ಫೋಟದ ರಭಸಕ್ಕೆ ಪಕ್ಕದ ಮನೆಗಳಿಗೂ ಹಾನಿ ಆಗಿದೆ. ಕೆಆರ್ ಪುರಂ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ. ಅದೇ ರೀತಿಯಾಗಿ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದ ಬೆಟ್ಟದಪುರ ಗ್ರಾಮದಲ್ಲಿ ಸ್ನಾನಕ್ಕೆ ಎಂದು ತೆರಳಿದ್ದಾಗ ಗ್ಯಾಸ್ ಗೀಸರ್ ಸೋರಿಕೆಯಾಗಿ ಅಕ್ಕ-ತಂಗಿ ಇಬ್ಬರು ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಉತ್ತರಕನ್ನಡ : ರಾಜ್ಯಾದ್ಯಂತ ಮುಂದಿನ ಕೆಲವು ದಿನಗಳ ಕಾಲ ಭಾರಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಈಗಾಗಲೇ ಮುನ್ಸೂಚನೆ ನೀಡಿದೆ. ಇನ್ನು ದಕ್ಷಿಣ ಕರ್ನಾಟಕದಲ್ಲಿ ಈಗಾಗಲೇ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಆಗುತ್ತಿದ್ದು, ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಕಾರವಾರ ತಾಲೂಕಿನ ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಎಲ್ಲಾ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಲಕ್ಷ್ಮಿ ಪ್ರಿಯ ಆದೇಶ ಹೊರಡಿಸಿದ್ದಾರೆ.
ಮೈಸೂರು : ಮೈಸೂರಿನಲ್ಲಿ ಘೋರವಾದ ದುರಂತ ಒಂದು ಸಂಭವಿಸಿದ್ದು, ಸ್ನಾನಕ್ಕೆ ತೆರಳಿದ್ದಾಗ ಗ್ಯಾಸ್ ಗ್ಯಾಸ್ ಗೀಸರ್ ಲೀಕ್ ಲೀಕ್ ಆಗಿ ಅಕ್ಕ ತಂಗಿ ಇಬ್ಬರು ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದ ಬೆಟ್ಟದಪುರ ಎಂಬಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ. ಮೃತರನ್ನ ಗುಲ್ಫಾರ್ಮ್ (23) ಮತ್ತು ಸಿಮ್ರಾನ್ ತಾಜ್ (20) ಎಂದು ತಿಳಿದುಬಂದಿದೆ. ಅಕ್ಕ-ತಂಗಿಯರಾದ ಗುಲ್ಫಾರ್ಮ್, ಸಿಮ್ರಾನ್ ತಾಜ್ ಇಬ್ಬರೂ ಒಟ್ಟಿಗೆ ಸ್ನಾನ ಮಾಡಲು ಹೋಗಿದ್ದಾರೆ. ಆದರೆ ಸ್ನಾನಕ್ಕೆ ಹೋದವರು ಬಹಳ ಸಮಯವಾದರೂ ಹೊರಗೆ ಬಂದಿರಲಿಲ್ಲ. ಇದರಿಂದ ಅನುಮಾನಗೊಂಡ ತಂದೆ ಅಲ್ತಾಫ್ ಬಾಗಿಲು ಬಡಿದಿದ್ದಾರೆ. ಆಗಲೂ ಬಾಗಿಲು ತೆಗೆದಿಲ್ಲ. ತೆರೆದು ನೋಡಿದಾಗ ಮಕ್ಕಳಿಬ್ಬರು ಅರೆಪ್ರಜ್ಞಾವಸ್ಥೆಯಲ್ಲಿರೋದು ಕಂಡು ಶಾಕ್ ಆಗಿದ್ದಾರೆ. ತಕ್ಷಣ ಮಕ್ಕಳನ್ನು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅಷ್ಟರಲ್ಲಿ ಇಬ್ಬರೂ ಮೃತಪಟ್ಟಿದ್ದರು.
ಯಾದಗಿರಿ : ರಾಜ್ಯದಲ್ಲಿ ಸರ್ಕಾರ ಹಾಗೂ ಆರ್ ಎಸ್ ಎಸ್ ವಿರುದ್ಧ ಸಮರ ಮುಂದುವರೆದಿದ್ದು, ಕಲ್ಬುರ್ಗಿ ಜಿಲ್ಲೆಯ ಚಿತ್ತಾಪುರದಲ್ಲಿ ಆರ್ ಎಸ್ ಎಸ್ ಪಥ ಸಂಚಲಕ್ಕೆ ಜಿಲ್ಲಾಡಳಿತ ಬ್ರೇಕ್ ಹಾಕಿತ್ತು. ಈ ವಿಚಾರ ಆರ್ ಎಸ್ ಎಸ್ ಮುಖಂಡರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು, ಕಲ್ಬುರ್ಗಿ ಹೈಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿದೆ.ಇದರ ಮಧ್ಯ ಯಾದಗಿರಿ ಜಿಲ್ಲೆಯ ಗುರುಮಿಠಕಲ್ ನಲ್ಲಿ ಇಂದು ಆರ್ ಎಸ್ ಎಸ್ ಪಥ ಸಂಚಲನಕ್ಕೆ ಬ್ರೇಕ್ ಹಾಕಲಾಗಿದೆ. ಹೌದು ಗುರುಮಿಠಕಲ್ ಆರ್ ಎಸ್ ಎಸ್ ಪಥ ಸಂಚಲನಕ್ಕೆ ಬ್ರೇಕ್ ಹಾಕಲಾಗಿದೆ. ಯಾದಗಿರಿ ಜಿಲ್ಲೆಯಲ್ಲಿ ಇಂದು ಆರ್ ಎಸ್ ಎಸ್ ಪಥಸಂಚಲನ ನಡೆಯಬೇಕಿತ್ತು. ಆರ್ ಎಸ್ ಎಸ್ ಪಥ ಸಂಚಲನಕ್ಕೆ ಜಿಲ್ಲಾಡಳಿತ ಅನುಮತಿ ನೀಡಿಲ್ಲ. ಯಾದಗಿರಿ ಜಿಲ್ಲಾಧಿಕಾರಿ ಹರ್ಷಲ್ ಬೋಯರ್ ಪತಸಂಚಲಕ್ಕೆ ಅನುಮತಿ ನಿರಾಕರಿಸಿದ್ದಾರೆ. ಮೂರು ದಿನ ಮೊದಲೇ ಅರ್ಜಿ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ಸ್ಪಷ್ಟನೆ ನೀಡಿದ್ದಾರೆ. ಸರ್ಕಾರಿ ಪ್ರಾಧಿಕಾರ ಆಸ್ತಿಗಳು ಮತ್ತು ಆವರಣ ಬಳಸಬೇಕಾದರೆ ಲಿಖಿತ ಅರ್ಜಿ ಸಲ್ಲಿಸಬೇಕು…
ಬೆಂಗಳೂರು : ವೃತ್ತಿಯಲ್ಲಿ ಇಂಜಿನಿಯರ್ ಆಗಿರುವ ಹಾಗು ಸಿನಿಮಾ ಮತ್ತು ಕಿರುತೆರೆ ನಟ ಗವಿಸ್ವಾಮಿ ಅವರ ಪುತ್ರ ಆರ್ಯನ್ ಗವಿಸ್ವಾಮಿ ವಸ್ತ್ರದ (22) ಸಾವನಪ್ಪಿದ್ದಾರೆ. ಬೆಂಗಳೂರಿನಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿ ಆಗದೆ ಆರ್ಯನ್ ಸಾವನ್ನಪ್ಪಿದ್ದಾರೆ. ನಟ ಗವಿಸ್ವಾಮಿ ವಸ್ತ್ರದ ಅವರ ಪುತ್ರ ಆರ್ಯನ್(22) ಅವರು ಸಾವಿನಲ್ಲಿ ಸಾರ್ಥಕತೆ ಮೆರೆದಿದ್ದಾರೆ. ಅಪಘಾತಕ್ಕೆ ಒಳಗಾಗಿ ಬೆಂಗಳೂರಿನ ಸ್ಪರ್ಶ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಆರ್ಯನ್ ತನ್ನ ಜನ್ಮ ದಿನದಂದೇ ಸಾವನ್ನಪ್ಪಿರುವುದು ಕುಟುಂಬದಲ್ಲಿ ದುಃಖ, ನೋವು ತರಿಸಿದೆ. ಸಾವಿನಲ್ಲೂ ಸಾರ್ಥಕತೆ ಎರಡು ಕಣ್ಣು, ಎರಡು ಕಿಡ್ನಿ, ಲಿವರ್ ಪ್ರ್ಯಾಂಕ್ರಿಯ್ಸ್, ಹೃದಯದ ಕವಟಗಳನ್ನು ದಾನ ಮಾಡಲಾಗಿದೆ. ಮತ್ತೊಂದು ಜೀವಕ್ಕೆ ಅನುಕೂಲವಾಗಲಿ ಎಂಬ ಕಾರಣಕ್ಕೆ ಮಗನ ಅಂಗಾಂಗಗಳನ್ನು ದಾನ ಮಾಡಲಾಗಿದೆ ಎಂದು ಗವಿಸ್ವಾಮಿ ವಸ್ತ್ರದ ತಿಳಿಸಿದರು. ಆರ್ಯನ್ ಅವರಿಗೆ ಅಜ್ಜಿ, ತಂದೆ, ತಾಯಿ ಇದ್ದಾರೆ. ಶನಿವಾರ ಮಧ್ಯಾಹ್ನ 12 ಗಂಟೆಗೆ ಪಟ್ಟಣದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ.
ಬೆಂಗಳೂರು : ಬೆಂಗಳೂರು ಜನತೆಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಬೆಂಗಳೂರು ನಗರ ಜಿಲ್ಲೆ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಹೊರವಲಯ ಗಡಿಭಾಗದ ಒಂದಷ್ಟು ಪಂಚಾಯಿತಿಗಳು, ಮುನ್ಸಿಪಾಲಿಟಿಗಳು ಭವಿಷ್ಯದಲ್ಲಿ ಬೆಂಗಳೂರು ನಗರದ ಒಳಗೆ ಸೇರುತ್ತವೆಯಾದ್ದರಿಂದ ಈಗಿನಿಂದಲೇ ಮಾನಸಿಕವಾಗಿ ತಯಾರು ಮಾಡಲಾಗುತ್ತಿದೆ. ಈ ಪ್ರದೇಶಗಳಲ್ಲಿಯೂ ಸಹ ಬಿ ಖಾತೆಯಿಂದ ಎ ಖಾತೆ ಪರಿವರ್ತನೆ ವ್ಯವಸ್ಥೆಗೆ ತಯಾರಿ ನಡೆಸಲು ಸೂಚನೆ ನೀಡಿದ್ದೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯ ಸ್ಥಳೀಯ ಸಂಸ್ಥೆಗಳ ಪ್ರಗತಿ ಪರಿಶೀಲನೆ ಸಭೆ ನಂತರ ಮಾತನಾಡಿದ ಅವರು, ಭವಿಷ್ಯದಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಗೆ ಸೇರ್ಪಡೆ ಮಾಡಿಕೊಳ್ಳಬೇಕಾದ ಬೆಂಗಳೂರು ಹೊರವಲಯದ ಪ್ರದೇಶಗಳ ಸಮೀಕ್ಷೆ ನಡೆಸಲು ಸೂಚಿಸಲಾಗಿದೆ. ಬೆಂಗಳೂರು ನಗರ ಜಿಲ್ಲೆಯ 12 ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳ ಸಭೆ ನಡೆಸಲಾಯಿತು. ಭವಿಷ್ಯದಲ್ಲಿ ಬೆಂಗಳೂರು ಬೆಳೆಯಲಿದೆ. ಬಿಎಂಆರ್ಡಿಎ ವ್ಯಾಪ್ತಿಯ ಪ್ರದೇಶಗಳು ಇಂದಲ್ಲ ನಾಳೆ ಬೆಂಗಳೂರು ನಗರದ ಭಾಗವಾಗಲಿವೆ ಎಂದರು. ಈಗಿನಿಂದಲೇ ಅಕ್ರಮ ಕಟ್ಟಡಗಳ ನಿರ್ಮಾಣಕ್ಕೆ ಕಡಿವಾಣ ಹಾಕಬೇಕು…
ಕಲಬುರ್ಗಿ : ನವೆಂಬರ್ 2ರಂದು ಚಿತ್ತಾಪುರದಲ್ಲಿ ಆರ್ಎಸ್ ಪಥ ಸಂಚಲನ ನಡೆಸುವ ಕುರಿತು ಅನುಮತಿ ಕೋರಿ, ಕಲಬುರ್ಗಿ ಹೈಕೋರ್ಟಿಗೆ ರಿಟ್ ಅರ್ಜಿ ಸಲ್ಲಿಸಲಾಗಿತ್ತು. ಇದೀಗ ಇಂದು ಕಲ್ಬುರ್ಗಿ ಹೈಕೋರ್ಟ್ ಪೀಠದಲ್ಲಿ ನಡೆಯಿತು. ಇದೆ ವೇಳೆ ಎಜಿ ಶಶಿಕಿರಣಶೆಟ್ಟಿ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾಗಿದ್ದರು. ಜಿಲ್ಲಾಧಿಕಾರಿ ತಮ್ಮ ವರದಿಯಲ್ಲಿ ಎರಡು ಅಭಿಪ್ರಾಯಗಳನ್ನು ನೀಡಿದ್ದಾರೆ ಜನರಿಗೆ ತೊಂದರೆಯಾಗುವ ಬಗ್ಗೆ ಕಲ್ಬುರ್ಗಿ ಎಸ್ ಪಿ ವರದಿ ನೀಡಿದ್ದಾರೆ ಸಂಚಲನದ ಮಾರ್ಗದಲ್ಲಿ ಸಂಚಾರ ದಟ್ಟಣೆ ಆಗುವ ಸಾಧ್ಯತೆ ಇದೆ ಹೀಗಾಗಿ ಯಾವುದೇ ಸಂಘಟನೆಗಳಿಗೂ ಅನುಮತಿ ನೀಡದಂತೆ ವರದಿ ಇದೆ ಪಥಸಂಚಲನ ಮಾರ್ಗದಲ್ಲಿ ಹೆಚ್ಚಿನ ಜನರು ಸೇರುವ ಸಾಧ್ಯತೆ ಇದೆ. ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆ ಇದೆ ಪರಿಸ್ಥಿತಿ ಸಾಮಾನ್ಯವಾಗಿ ಪತಸಂಚಲನ ನಡೆಸುವುದು ಸೂಕ್ತ ಕೆಲ ವಾರಗಳ ಬಳಿಕ ಪಥಸಂಚಲನ ನಡೆಸುವುದು ಸೂಕ್ತ ಎಂದು ವರದಿ ಇದೆ. ನಾವು ಅರ್ಜಿದಾರರ ಮನವಿಯನ್ನು ತಿರಸ್ಕರಿಸಿಲ್ಲ ಬಾಕಿ ಇರಿಸಿದ್ದೇವೆ ಹೈಕೋರ್ಟಿಗೆ ಅಡ್ವಕೇಟ್ ಜನರಲ್ ಶಶಿಕಿರಣಶೆಟ್ಟಿ ತಿಳಿಸಿದರು. ಸಮಸ್ಯೆ ಬಗೆಹರಿಯುವ ಮಾರ್ಗದ ಬಗ್ಗೆ…
ವಿಜಯಪುರ : ರಾಜ್ಯದಲ್ಲೊಂದು ಬೆಚ್ಚಿಬಿಳಿಸುವಂತಹ ಘಟನೆ ನಡೆದಿದ್ದು ನಡು ರಸ್ತೆಯಲ್ಲಿಯೇ ಪತಿಯೊಬ್ಬ, ತನ್ನ ಪತ್ನಿಗೆ ಮಚ್ಚಿನಿಂದ ಭೀಕರವಾಗಿ ಹಲ್ಲೆ ಮಾಡಿರುವ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದಲ್ಲಿ ನಡೆದಿದೆ. ಹಾಡಹಗಲೇ ಪತ್ನಿಯ ಮೇಲೆ ಪತಿ ಮಚ್ಚಿನಿಂದ ಹಲ್ಲೆ ಮಾಡಿದ್ದಾನೆ. ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದಲ್ಲಿ ಆನಂದ್ ಟಾಕೀಸ್ ಬಳಿ ಪತಿ ಮಚ್ಚಿನಿಂದ ನಡೆಸಿದ್ದಾನೆ. ಸ್ಥಳೀಯರು ಪತ್ನಿಯ ಹಲ್ಲೆ ನಡೆಸಿದ್ದಾನೆ. ಹಲ್ಲೆ ಮಾಡುತ್ತಿರುವುದನ್ನು ಕಂಡು ಸ್ಥಳೀಯರು ಆತನ ಮೇಲೆ ಹಲ್ಲೆ ನಡೆಸಿದ್ದಾರೆ. ಕಾರಣ ಇಲ್ಲದೆ ಪತ್ನಿಯ ಮೇಲೆ ಹಲ್ಲೆ ನಡೆಸುತ್ತಿದ್ದವನ ಮೇಲೆ ಸ್ಥಳೀಯರು ಕೂಡ ಆತನನ್ನು ಹಿಡಿದು ಥಳಿಸಿದ್ದಾರೆ.














