Subscribe to Updates
Get the latest creative news from FooBar about art, design and business.
Author: kannadanewsnow05
ಬೆಳಗಾವಿ : ಬೆಳಗಾವಿಯಲ್ಲಿ ಭೀಕರವಾದ ಕೊಲೆಯಾಗಿದ್ದು, ಸೊಸೆಗೆ ಮಕ್ಕಳಾಗಲಿಲ್ಲ ಎಂದು ಅತ್ತೆಯೇ ಮಹಿಳೆಯನ್ನು ಕಲ್ಲಿನಿಂದ ಜಜ್ಜಿ, ಭೀಕರವಾಗಿ ಕೊಲೆ ಮಾಡಿರುವ ಧಾರುಣ ಘಟನೆ ಜಿಲ್ಲೆಯ ಅಥಣಿ ತಾಲೂಕಿನ ಮಲಬಾದ್ ಗ್ರಾಮದಲ್ಲಿ ನಡೆದಿದೆ. ಕೊಲೆಯಾದ ಮಹಿಳೆಯನ್ನು ಗ್ರಾಮದ ರೇಣುಕಾ ಸಂತೋಷ ಹೊನಕಾಂಡೆ (27) ಎಂದು ತಿಳಿದುಬಂದಿದೆ. ಸೊಸೆಗೆ ಮಕ್ಕಳಾಗಲಿಲ್ಲವೆಂದು ಕಳೆದ ಶನಿವಾರದಂದು ಮಹಿಳೆಯನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಲಾಗಿದೆ ಎಂಬ ಆರೋಪದ ಹಿನ್ನೆಲೆ ಪತಿ ಸಂತೋಷ ಹೊನಕಾಂಡೆ, ಮಾವ ಕಾಮಣ್ಣ ಹೊನಕಾಂಡೆ, ಅತ್ತೆ ಜಯಶ್ರೀ ಹೊನಕಾಂಡೆಯನ್ನು ಅರೆಸ್ಟ್ ಮಾಡಲಾಗಿದ್ದು, ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿವಮೊಗ್ಗ : ಕೊಲೆ ಆರೋಪಿಯನ್ನು ಬಂಧಿಸಲು ತೆರಳಿದ್ದಾಗ ಆತ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದಾನೆ. ಈ ವೇಳೆ ಪೊಲೀಸರು ಆತನ ಮೇಲೆ ಗುಂಡಿನ ದಾಳಿ ನಡೆಸಿ ಸೆರೆಹಿಡಿದಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹಳೆ ಹೊನ್ನೂರಿನಲ್ಲಿ ನಡೆದಿದೆ. ಕೊಲೆ ಆರೋಪಿ ಮಂಜುನಾಥ್ ಅಲಿಯಾಸ್ ಚಳಿ ಮಂಜ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ. ಹೊಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಒಂದು ಗುಂಡಿನ ದಾಳಿ ನಡೆದಿದೆ. ಬಂಧಿಸಲು ತೆರಳಿದಾಗ ತಪ್ಪಿಸಿಕೊಳ್ಳಲು ಯತ್ನಿಸಿದ್ದ ಹಿನ್ನೆಲೆಯಲ್ಲಿ ಮಂಜನ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಹೊಳೆ ಹೊನ್ನೂರು ಪಿಐಲಕ್ಷ್ಮಿಪತಿ ಆರೋಪಿ ಮಂಜನ ಕಾಲಿಗೆ ಗುಂಡು ಹಾರಿಸಿ ಸೆರೆ ಹಿಡಿದಿದ್ದಾರೆ. ಈ ಘಟನೆಯಲ್ಲಿ ಕಾನ್ಸ್ಟೇಬಲ್ ಪಿಸಿ ಪ್ರಕಾಶ್ ಅವರಿಗೆ ಗಾಯಗಳಾಗಿದ್ದು ಆರೋಪಿಯನ್ನು ಕೂಡಲೇ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೇ 9ರಂದು ಹೇಮಣ್ಣ ಎಂಬುವವರನ್ನು ಹತ್ಯೆ ಮಾಡಲಾಗಿತ್ತು. ಚಳಿ ಮಂಜ ಸೇರಿದಂತೆ ಮೂವರು ಹೇಮಣ್ಣರನ್ನು ಕೊಲೆ ಮಾಡಿದ್ದರು. ಇದೀಗ ಚಳಿ ಮಂಜಣ್ಣನ್ನು ಬಂಧಿಸಲು ಹೋದಾಗ…
ಪಂಜಾಬ್ : ಭಾರತೀಯ ಸೇನೆ ಹಾಗೂ ಭಾರತದ ಗೌಪ್ಯತೆಯ ಕುರಿತಂತೆ ಇತ್ತೀಚಿಗೆ ಪಂಜಾಬ್ ನಲ್ಲಿ ಇಬ್ಬರು ಮಹಿಳಾ ಯೂಟ್ಯೂಬರ್ ಗಳನ್ನು ಅರೆಸ್ಟ್ ಮಾಡಲಾಗಿತ್ತು. ಜ್ಯೋತಿ ಮಲ್ಹೋತ್ರಾ ಹಾಗು ಗುಝಾಲ್ ಎನ್ನುವ ಮಹಿಳೆಯರನ್ನು ಅರೆಸ್ಟ್ ಮಾಡಲಾಗಿತ್ತು. ಇದೀಗ ಭಾರತೀಯ ಸೇನೆಯ ಬಗ್ಗೆ ಪಾಕಿಸ್ತಾನದ ISI ಗೆ ಮಾಹಿತಿ ನೀಡುತ್ತಿದ್ದ ಇಬ್ಬರೂ ಗೂಢಚಾರಿಗಳನ್ನು ಪಂಜಾಬ್ ನಲ್ಲಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಹೌದು ಪಂಜಾಬ್ ನಲ್ಲಿ ಮತ್ತೆ ಇಬ್ಬರು ಗೂಢಚಾರಿಗಳು ಅರೆಸ್ಟ್ ಆಗಿದ್ದು, ಪಾಕಿಸ್ತಾನದ ISI ಗೆ ಭಾರತದ ಸೇನೆಯ ಬಗ್ಗೆ ಮಾಹಿತಿ ನೀಡಿದ ಆರೋಪದ ಹಿನ್ನೆಲೆಯಲ್ಲಿ, ಸೇನಾ ನೆಲೆಗಳ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ನೀಡಿದ ಆರೋಪದ ಅಡಿ ಇಬ್ಬರು ಗೂಢಾಚಾರಿಗಳನ್ನು ಬಂಧಿಸಲಾಗಿದೆ. ಪಂಜಾಬ್ ಪೋಲಿಸರು ಸದ್ಯಕ್ಕೆ ಇಬ್ಬರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದು, ವಿಚಾರಣೆಗೆ ಒಳಪಡಿಸಿದ್ದಾರೆ.
ದಕ್ಷಿಣಕನ್ನಡ : ದಕ್ಷಿಣಕನ್ನಡದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಸರ್ಕಾರಿ ಬಸ್ ಹಾಗು ಲಾರಿ ಪರಸ್ಪರ ಡಿಕ್ಕಿಯಾಗಿ ಇಬ್ಬರು ಚಾಲಕರು ಸೇರಿದಂತೆ ನಾಲ್ವರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿ ಗುಂಡ್ಯದಲ್ಲಿ ನಡೆದಿದೆ. ಅಪಾಯಕಾರಿ ತಿರುವಿನಲ್ಲಿ ಎದುರುನಿಂದ ವೇಗವಾಗಿ ಲಾರಿ ಬರುತ್ತಿತ್ತು ಈ ವೇಳೆ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಬಸಕ್ಕೆ ಕೆಎಸ್ಆರ್ಟಿಸಿ ಬಸ್ ಹಾಗು ಲಾರಿಯ ಮುಂಭಾಗ ಸಂಪೂರ್ಣವಾಗಿ ಜಖಂಗೊಂಡಿದೆ. ಲಾರಿ ಮತ್ತು ಬಸ್ ಚಾಲಕರ ಸ್ಥಿತಿ ಗಂಭೀರವಾಗಿದ್ದು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ ಅಪಘಾತದ ಕುರಿತಂತೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ನವದೆಹಲಿ : ಪಹಲ್ಗಾಮ್ ಉಗ್ರರ ದಾಳಿಯ ಪ್ರತಿಕಾರವಾಗಿ ಭಾರತ ಪಾಕಿಸ್ತಾನದಲ್ಲಿರುವ ಉಗ್ರರ ನೆಲೆಗಳನ್ನು ಧ್ವಂಸಗೊಳಿಸಿದ್ದು ಅಲ್ಲದೆ ನೂರಕ್ಕೂ ಅಧಿಕ ಉಗ್ರರನ್ನು ಕೊಂದಿದೆ. ಇದೀಗ ಪಾಕಿಸ್ತಾನದ ಪರವಾಗಿ ಬೇಹುಗಾರಿಕೆ ನಡೆಸುತ್ತಿದ್ದ ಹರಿಯಾಣದ ಜ್ಯೋತಿ ಮಲ್ಹೋತ್ರಾಳನ್ನು ಅರೆಸ್ಟ್ ಮಾಡಿದ್ದು ವಿಚಾರಣೆ ವೇಳೆ ಸ್ಪೋಟಕ ಮಾಹಿತಿ ಬಹಿರಂಗವಾಗಿದೆ. ಹೌದು ಭಾರತದ ಸೇನಾ ರಹಸ್ಯಗಳು, ಸೂಕ್ಷ್ಮ ಮಾಹಿತಿಯನ್ನು ಪಾಕಿಸ್ತಾನಕ್ಕೆ ಹಂಚಿಕೆ ಮಾಡಿದ ಆರೋಪದಡಿ ಬಂಧಿತಳಾಗಿರುವ ಹರಿಯಾಣ ಮೂಲದ ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾಳ ಮತ್ತಷ್ಟು ದೇಶದ್ರೋಹ ಕೃತ್ಯ ಬಯಲಾಗ್ತಿದೆ. ಇದರ ಮಧ್ಯ ಪುರಿ ಮೂಲದ ಯೂಟ್ಯೂಬರ್ ಪ್ರಿಯಾಂಕಾ ಜೊತೆಗೂ ಜ್ಯೋತಿ ನಂಟಿದೆ ಎನ್ನುವ ರಹಸ್ಯ ಈಗ ಬೆಳಕಿಗೆ ಬಂದಿದೆ. ಒಡಿಶಾದ ಪ್ರಿಯಾಂಕಾ ಸೇನಾಪತಿ ಜೊತೆ ಪುರಿ ದೇಗುಲದ ಸಮಗ್ರ ವಿಡಿಯೋ ಕೂಡ ಮಾಡಿದ್ದಾಳೆ. ಹೀಗಾಗಿ, ಗುಪ್ತ ಇಲಾಖೆ ಅಧಿಕಾರಿಗಳು ಪ್ರಿಯಾಂಕಾಳನ್ನೂ ವಿಚಾರಣೆ ನಡೆಸಿದ್ದಾರೆ ಅಂತ ತಿಳಿದು ಬಂದಿದೆ.ಮೂಲಗಳ ಪ್ರಕಾರ, ಜ್ಯೋತಿ ಮಲ್ಹೋತ್ರಾ 2024ರ ಸೆಪ್ಟೆಂಬರ್ನಲ್ಲಿ ಪುರಿಗೆ ಭೇಟಿ ನೀಡಿದ್ದಳು. ಈ ಸಮಯದಲ್ಲಿ ಜಗನ್ನಾಥ ದೇವಾಲಯ ಮತ್ತು ಅದರ ಸುತ್ತಲಿನ…
ತುಮಕೂರು : ತುಮಕೂರಿಗೆ ಶೀಘ್ರ ಮೆಟ್ರೋ ಯೋಜನೆ ಬರುತ್ತದೆ.ಅದು ಇಡೀ ತುಮಕೂರಿನ ಚಿತ್ರಣವನ್ನೇ ಬದಲಾವಣೆ ಮಾಡುತ್ತದೆ. ಇನ್ನು ಕೆಲವೇ ದಿನಗಳಲ್ಲಿ ತುಮಕೂರು ಬೆಂಗಳೂರಿನ ಎರಡನೇ ನಗರವಾಗಿ ಬೆಳೆಯುವುದು ಗ್ಯಾರಂಟಿ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ತಿಳಿಸಿದರು. ಇಂದು ಜಿಲ್ಲೆಯಲ್ಲಿ ರೇಲ್ವೆ ಕಾಮಗಾರಿ ಪರಿಶೀಲನೆ ನಡೆಸಡಿಯಾ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈಗಾಗಲೇ ಬಿಎಂಆರ್ಸಿಎಲ್ ವರದಿ ಕೊಟ್ಟಿದ್ದು, ನಮ್ಮ ಕಾಲದಲ್ಲೇ ಕಾರ್ಯರೂಪಕ್ಕೆ ತರುವ ಕೆಲಸ ಆಗುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ಕೇಂದ್ರ ಸರ್ಕಾರದಿಂದ ಬರುವ ಎಲ್ಲಾ ಸವಲತ್ತುಗಳು ತುಮಕೂರಿನ ಜನತೆಗೆ ಸಿಗಬೇಕು ಎಂದರು. ಇನ್ನೊಂದು ತಿಂಗಳಿನಲ್ಲಿ ತುಮಕೂರಿನ ಜನತೆಗೆ ಒಂದು ದೊಡ್ಡ ಸುದ್ದಿ ಕೊಡುತ್ತೇನೆ. ಬೆಂಗಳೂರು ಟು ಚೆನ್ನೈ ಕಾರಿಡಾರ್ ಯೋಜನೆ ನಿರ್ಮಾಣ ಮಾಡಲಾಗುತ್ತಿದೆ. ಸುಮಾರು 8484 ಎಕರೆ ಪ್ರದೇಶದಲ್ಲಿ ಪಿಎಂ ಗತಿಶಕ್ತಿ ಯೋಜನೆ ಅಡಿಯಲ್ಲಿ ಇದು ನಿರ್ಮಾಣವಾಗುತ್ತಿದೆ. ಒಟ್ಟು ಮೂರು ಹಂತದಲ್ಲಿ ಅಭಿವೃದ್ಧಿಗೆ ಪ್ರಧಾನಿ ಮೋದಿಯವರಿಂದ ಚಾಲನೆ ಕೊಡಲಾಗಿದೆ. ಈಗ ಮೊದಲನೇಯ ಹಂತದ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ತಿಳಿಸಿದರು.
ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯದ ಇತರೆ ಜಿಲ್ಲೆಗಳಲ್ಲಿ ಇನ್ನೂ ಕೆಲವು ದಿನಗಳ ಕಾಲ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೆ ನಿನ್ನೆ ಸುರಿದ ಭಾರಿ ಮಳೆಗೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಬೇಕಿದ್ದ ಆರ್ಸಿಬಿ ಮತ್ತು ಕೆಕೆಆರ್ ಪಂದ್ಯ ಕೂಡ ರದ್ದಾಗಿದೆ. ಇದೀಗ ಬೆಂಗಳೂರಲ್ಲಿ ಮುಂದಿನ 12 ಗಂಟೆಗಳಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೌದು ಬೆಂಗಳೂರು ನಗರ ಜಿಲ್ಲೆಯ ಎಂಟು ವಲಯದಲ್ಲೂ ಮುಂದಿನ 12 ಗಂಟೆಗಳ ಕಾಲ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಇಂದು ಸಹ ಬೆಂಗಳೂರಿನ ಶಾಂತಿನಗರ, ರಿಚ್ಮಂಡ್ ಸರ್ಕಲ್, ಕಾರ್ಪೊರೇಷನ್ ವೃತ್ತ, ಕೆಆರ್ ಮಾರ್ಕೆಟ್, ಮೆಜೆಸ್ಟಿಕ್, ಜಯನಗರ, ಚಾಮರಾಜಪೇಟೆ, ವಿಜಯನಗರ, ಚಂದ್ರಾಲೇಔಟ್ ರಾಜಾಜಿನಗರ, ಕಾಮಾಕ್ಷಿಪಾಳ್ಯ, ಸುಂಕದಕಟ್ಟೆ, ನಾಗರಬಾವಿ, ಆರ್ ಆರ್ ನಗರ, ನಾಯಂಡಹಳ್ಳಿ, ಬಿಟಿಎಂ ಲೇಔಟ್, ಯಶವಂತಪುರ, ಪೀಣ್ಯ, ಮೈಕೋಲೇಔಟ್ ಹಾಗು ಬೊಮ್ಮನಹಳ್ಳಿ…
ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯದ ಇತರೆ ಜಿಲ್ಲೆಗಳಲ್ಲಿ ಇನ್ನೂ ಕೆಲವು ದಿನಗಳ ಕಾಲ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೆ ನಿನ್ನೆ ಸುರಿದ ಭಾರಿ ಮಳೆಗೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಬೇಕಿದ್ದ ಆರ್ಸಿಬಿ ಮತ್ತು ಕೆಕೆಆರ್ ಪಂದ್ಯ ಕೂಡ ರದ್ದಾಗಿದೆ. ಇದೀಗ ಇಂದು ಮತ್ತೆ ಬೆಂಗಳೂರು ನಗರದಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ಹೌದು ಇಂದು ಸಹ ಬೆಂಗಳೂರು ನಗರದ ಹಲವಡೆ ಧಾರಾಕಾರ ಮಳೆ ಶುರುವಾಗಿದೆ. ಬೆಂಗಳೂರಿನ ಶಾಂತಿನಗರ, ರಿಚ್ಮಂಡ್ ಸರ್ಕಲ್, ಕಾರ್ಪೊರೇಷನ್ ವೃತ್ತ, ಕೆಆರ್ ಮಾರ್ಕೆಟ್, ಮೆಜೆಸ್ಟಿಕ್, ಜಯನಗರ, ಚಾಮರಾಜಪೇಟೆ, ವಿಜಯನಗರ, ಚಂದ್ರಾಲೇಔಟ್ ರಾಜಾಜಿನಗರ, ಕಾಮಾಕ್ಷಿಪಾಳ್ಯ, ಸುಂಕದಕಟ್ಟೆ, ನಾಗರಬಾವಿ, ಆರ್ ಆರ್ ನಗರ, ನಾಯಂಡಹಳ್ಳಿ, ಬಿಟಿಎಂ ಲೇಔಟ್, ಯಶವಂತಪುರ, ಪೀಣ್ಯ, ಮೈಕೋಲೇಔಟ್ ಹಾಗು ಬೊಮ್ಮನಹಳ್ಳಿ ಸೇರಿದಂತೆ ಹಲವಡೆ ಭಾರಿ ಮಳೆ ಆಗುತ್ತಿದೆ. ಇನ್ನು ಭಾರಿ ಮಳೆಯಿಂದಾಗಿ ಕೆಲವು ಪ್ರದೇಶಗಳಲ್ಲಿ ರಸ್ತೆಯಲ್ಲಿ ನೀರು ನಿಂತಿದ್ದು, ವಾಹನ ಸವಾರರು ಪರದಾಟ ನಡೆಸಿದ್ದಾರೆ.
ರಾಯಚೂರು : ಇಂದು ಬೆಳ್ಳಂಬೆಳಗ್ಗೆ ರಾಯಚೂರಿನಲ್ಲಿ ಭೀಕರವಾದ ಕೊಲೆ ನಡೆದಿತ್ತು. ಇದೀಗ ಯುವಕನ ಬರ್ಬರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸದರ್ ಬಜಾರ್ ಠಾಣೆ ಪೋಲಿಸರು ಮೂವರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಕರೀಂ, ಇಬ್ರಾಹಿಂ ಹಾಗೂ ಇಲಿಯಾಸ್ ಬಂಧಿತ ಆರೋಪಿಗಳು ಎಂದು ತಿಳಿದುಬಂದಿದೆ. ಬಂಧಿತ ಪ್ರಮುಖ ಆರೋಪಿ ಕರೀಂ ಮಾಜಿ ಕೌನ್ಸಿಲರ್ ಒಬ್ಬರ ಸಂಬಂಧಿಯಾಗಿದ್ದಾನೆ ಎಂದು ತಿಳಿದುಬಂದಿದೆ. ಇಂದು ಬೆಳಿಗ್ಗೆ ಇಡ್ಲಿ ತಿನ್ನುವಾಗ ಚಾಕುವಿನಿಂದ ಇರಿದು ಸಾದಿಕ್ ನನ್ನು ಭೀಕರವಾಗಿ ಕೊಲೆ ಮಾಡಿದ್ದಾರೆ. ನನಗೆ ಮರ್ಯಾದೆ ಕೊಡಬೇಕು. ಏರಿಯಾದಲ್ಲಿ ನಾನೇ ದೊಡ್ಡವನು. ನನಗೆ ಇಡ್ಲಿ ತಿನ್ನಿಸು ಅಂತ ಸಾದಿಕ್ ಗೆ ಕರೀಂ ಅವಾಜ್ ಹಾಕಿದ್ದಾನೆ. ಈ ವೇಳೆ ಸಾದೀಕ್ ಇದನ್ನು ವಿರೋಧಿಸಿದ್ದಕ್ಕೆ ಕರೀಂ ಮತ್ತು ಆತನ ಸಹಚರರು ಸಾಧಿಕ್ ನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ. ಆದರೆ ಗಾಂಜಾ ಮಾರಾಟ ಬೇಡ ಎಂದಿದ್ದಕ್ಕೆ ಕೊಲೆ ಮಾಡಲಾಗಿದೆ ಎಂದು ಸಾದೀಕ್ ತಂದೆ ಮಾಡಿದ್ದಾರೆ. ಈ ವಿಚಾರವಾಗಿ ಈ ಬಗ್ಗೆಯೂ ತನಿಖೆ ನಡೆಸುತ್ತೇವೆ ಎಂದು ರಾಯಚೂರಿನ…
ನವದೆಹಲಿ : ಪಹಲ್ಗಾಮ್ ದಾಳಿಯ ಪ್ರತಿಕಾರವಾಗಿ ಈಗಾಗಲೇ ಭಾರತ ಆಪರೇಷನ್ ಸಿಂಧೂರ್ ಮೂಲಕ ಪಾಕಿಸ್ತಾನದಲ್ಲಿರುವ ಉಗ್ರರ ನೆಲೆಗಳನ್ನು ದ್ವಂಸಗೊಳಿಸಿ 100ಕ್ಕೂ ಅಧಿಕ ಉಗ್ರರನ್ನು ಕೊಂದು ಸೇಡು ತೀರಿಸಿಕೊಂಡಿದೆ. ಆದರೆ ಈ ಒಂದು ಪಹಲ್ಗಾಮ್ ದಾಳಿಗೂ ಹಾಗೂ ಪಾಕಿಸ್ತಾನದ ಪರವಾಗಿ ಬೇಹುಗಾರಿಕೆ ನಡೆಸುತ್ತಿದ್ದ ಆರೋಪದಲ್ಲಿ ಬಂಧನವಾಗಿರುವ ಹರಿಯಾಣದ ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾಗು, ನಂಟು ಇದೆ ಎನ್ನುವುದು ಬಹಿರಂಗವಾಗಿದೆ. ಹೌದು ಪಾಕಿಸ್ತಾನ ಪರ ಬೇಹುಗಾರಿಕೆ ನಡೆಸಿದ ಆರೋಪದಲ್ಲಿ ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾರನ್ನು ಬಂಧಿಸಲಾಗಿದ್ದು, ತನಿಖೆಯ ವೇಳೆ ಹಲ್ವು ಸ್ಫೋಟಕ ಮಾಹಿತಿಗಳು ಬಯಲಾಗಿವೆ. ಜ್ಯೋತಿ ಮಲ್ಹೋತ್ರಾ ಪಾಕಿಸ್ತಾನದಲ್ಲಿ ಹೈ ಪ್ರೊಫೈಲ್ ಪಾರ್ಟಿಗಳಿಗೆ ಹಾಜರಾಗುತ್ತಿದ್ದಳು. ಗುಪ್ತಚರ ಸಂಸ್ಥೆಗಳಲ್ಲದೇ ಇತರ ಹಿರಿಯ ಅಧಿಕಾರಿಗಳನ್ನು ಭೇಟಿಯಾಗುತ್ತಿದ್ದಳು ಎಂದು ತಿಳಿದುಬಂದಿದೆ. ಅಲ್ಲದೇ ಜ್ಯೋತಿ ಪಾಕಿಸ್ತಾನ ರಾಯಭಾರ ಕಚೇರಿ ಅಧಿಕಾರಿ ಡ್ಯಾನಿಶ್ ಮತ್ತು ಪಾಕಿಸ್ತಾನಿ ಗುಪ್ತಚರ ಅಧಿಕಾರಿಗಳ ಜೊತೆ ಅಕೆ ನಿಕಟ ಸಂಪರ್ಕ ಹೊಂದಿದ್ದು, ಇದೇ ಕಾರಣಕ್ಕೆ ಆಕೆಗೆ ವಿಐಪಿ ಸುಲಭ್ಯ ದೊರೆಯುತ್ತಿತ್ತು.ಜ್ಯೋತಿ ಮಲ್ಹೋತ್ರಾ ಜನವರಿ 2025ರಲ್ಲಿ ಜಮ್ಮು-ಕಾಶ್ಮೀರದ ಪಹಲ್ಗಾಮ್ ಗೂ ಭೇಟಿ…