Author: kannadanewsnow05

ಹಾಸನ (ಹೊಯ್ಸಳ ಪಥ): ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ, ಕಂದಾಯ ಸಚಿವರೂ ಆದ ಕೃಷ್ಣ ಬೈರೇಗೌಡ ಅವರು ಜಿಲ್ಲಾ ಆರೋಗ್ಯಾಧಿಕಾರಿ (ಡಿಎಚ್‌ಒ) ಮತ್ತು ಹಿಮ್ಸ್ (HIMS) ನಿರ್ದೇಶಕರೊಂದಿಗೆ ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಸಮಗ್ರ ಮಾಹಿತಿ ಪಡೆದರು. ಈ ಸಂದರ್ಭದಲ್ಲಿ, ಅವರು ಆಧುನಿಕ ಜೀವನಶೈಲಿಯಿಂದ ಬರುವ ರೋಗಗಳ ಬಗ್ಗೆ ವಿಶೇಷ ಗಮನ ಹರಿಸುವಂತೆ ಅಧಿಕಾರಿಗಳಿಗೆ ತಾಕೀತು ಮಾಡಿದರು. ಹೃದಯಾಘಾತ ಮತ್ತು ಮರಣ ಪ್ರಮಾಣದ ಮಾಹಿತಿ: ಸಭೆಯಲ್ಲಿ ಸಚಿವರು ಹೃದಯಾಘಾತ (ಮಯೋಕಾರ್ಡಿಯಲ್ ಇನ್ಫಾರ್ಕ್ಷನ್ – MI) ಪ್ರಕರಣಗಳ ಬಗ್ಗೆ ಮಾಹಿತಿ ಪಡೆದರು. ಹಿಂದಿನ ವರ್ಷಕ್ಕೆ ಹೋಲಿಸಿದರೆ ಜಿಲ್ಲೆಯಲ್ಲಿ ಮರಣ ಪ್ರಮಾಣ (mortality rate) ಕಡಿಮೆಯಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ಕಳೆದ ವರ್ಷ ಒಟ್ಟು ದಾಖಲಾದ ರೋಗಿಗಳಲ್ಲಿ ಮರಣ ಪ್ರಮಾಣ 6.6% ಇದ್ದರೆ, ಈ ವರ್ಷ ಅದು 5.6% ಕ್ಕೆ ಇಳಿದಿದೆ. ವಿಶೇಷವಾಗಿ, ಹೃದಯಾಘಾತದಿಂದಾಗಿ ದಾಖಲಾದ 315 ಪ್ರಕರಣಗಳಲ್ಲಿ ಮರಣ ಪ್ರಮಾಣವು 6.03% ಇದೆ ಎಂದು ಸಚಿವರು ತಿಳಿದುಕೊಂಡರು. ಜೀವನಶೈಲಿ ಕಾಯಿಲೆಗಳ ಮೇಲೆ ಗಮನ…

Read More

ಮೈಸೂರು : ವಿಶ್ವವಿಖ್ಯಾತ ನಾಡಹಬ್ಬ ದಸರಾಕೆ ನಿನ್ನೆ ಸಾಹಿತಿ ಬಾನು ಮುಷ್ತಾಕ್ ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಚಾಲನೆ ನೀಡಿದರು. ಸಿಎಂ ಸಿದ್ದರಾಮಯ್ಯ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಿದ್ದರು. ಇದೀಗ ಚಾಮುಂಡಿ ಬೆಟ್ಟದಲ್ಲಿ ಸೇವೆ ಸಲ್ಲಿಸುತ್ತಿದ್ದ ಅರ್ಚಕರೊಬ್ಬರು ಹೃದಯಘಾತದಿಂದ ಸಾವನಪ್ಪಿದ್ದಾರೆ. ಹೌದು ಮೈಸೂರಿನ ಚಾಮುಂಡಿ ಬೆಟ್ಟದ ಅರ್ಚಕ ಇದೀಗ ನಿಧನರಾಗಿದ್ದಾರೆ. ಚಾಮುಂಡಿ ಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸುತ್ತಿದ್ದ ರಾಜು ಎನ್ನುವ ಅರ್ಚಕರು ದೇವಸ್ಥಾನದಲ್ಲಿ ಶಿವಾರ್ಚಕರಾಗಿದ್ದರು. ಹೃದಯಾಘಾತದಿಂದ ಅರ್ಚಕ ರಾಜು ಸಾವನಪ್ಪಿದ್ದಾರೆ. ಸದ್ಯ ಗರ್ಭಗುಡಿಗೆ ತೆರೆ ಎಳೆದು ಉತ್ಸವ ಮೂರ್ತಿ ದರ್ಶನಕ್ಕೆ ಅವಕಾಶ ಕಲ್ಪಿಸಿದ್ದು, ಇಂದು ರಾತ್ರಿಯವರೆಗೂ ಮೂಲ ವಿಗ್ರಹದ ದರ್ಶನಕ್ಕೆ ನಿಷೇಧಿಸಲಾಗಿದೆ.

Read More

ಬೆಂಗಳೂರು : ವಿಪಕ್ಷ ನಾಯಕ ಆರ್ ಅಶೋಕ್ ಅವರ ವಿರುದ್ಧ ಬಗರ್ ಹುಕುಂ ಭೂಮಿ ಹಂಚಿಕೆಯಲ್ಲಿ ಭ್ರಷ್ಟಾಚಾರ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಪಕ್ಷ ನಾಯಕ ಆರ್ ಅಶೋಕ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಒಂದು ವಾರಗಳ ಕಾಲ ಮುಂದೂಡಿದೆ. ತಮ್ಮ ವಿರುದ್ಧ ತನಿಖೆಗೆ ತಡೆ ಕೋರಿ ಆರ್ ಅಶೋಕ್ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ 1 ವಾರಗಳ ಕಾಲ ಅರ್ಜಿ ವಿಚಾರಣೆ ಮುಂದೂಡಿದೆ. ಪ್ರಕರಣದ ತನಿಖೆಗೆ ತಡೆ ನೀಡಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿತ್ತು . ಹಾಗಾಗಿ ವಿಪಕ್ಷ ನಾಯಕ ಆರ್ ಅಶೋಕ್ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು. ಇದೀಗ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿಯ ಕುರಿತು ವಿಚಾರಣೆ ನಡೆಸಿ 1 ವಾರದ ವರೆಗೆ ವಿಚಾರಣೆಯನ್ನು ಮುಂದೂಡಿ ಆದೇಶ ಹೊರಡಿಸಿತು.

Read More

ಬೆಳಗಾವಿ : ಈಗಾಗಲೇ ನಿನ್ನೆಯಿಂದ ರಾಜ್ಯಾದ್ಯಂತ ಸಾಮಾಜಿಕ ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ಆರಂಭವಾಗಿದ್ದು, ಸಮೀಕ್ಷೆಗೆ ಸರ್ಕಾರ ಈಗಾಗಲೇ ಸರ್ಕಾರಿ ಶಿಕ್ಷಕರನ್ನು ನೇಮಕ ಮಾಡಿದೆ ಆದರೆ ಬೆಳಗಾವಿಯಲ್ಲಿ ಶಿಕ್ಷಣ ಇಲಾಖೆ ಎಡವಟ್ಟು ಮಾಡಿಕೊಂಡಿದ್ದು, ಈಗಾಗಲೇ ತೀರಿಹೋಗಿರುವ ಶಿಕ್ಷಕರ ಹೆಸರನ್ನು ನೇಮಕ ಮಾಡಿ ಎಡವಟ್ಟು ಮಾಡಿದೆ. ಹೌದು ಬೆಳಗಾವಿಯಲ್ಲಿ ಶಿಕ್ಷಣ ಇಲಾಖೆಯಿಂದ ಮಹಾ ಎಡವಟ್ಟು ಆಗಿದ್ದು, ಸತ್ತ ಶಿಕ್ಷಕರ ಹೆಸರನ್ನು ಗಣಿತಿ ಕಾರ್ಯಕ್ಕೆ ಆಯ್ಕೆ ಮಾಡಿದ್ದಾರೆ. ನಿವೃತ್ತಿ ಹೊಂದುತ್ತಿರುವ ಶಿಕ್ಷಕರು ಆಯ್ಕೆಯಾಗಿದ್ದು, 7 ತಿಂಗಳ ಗರ್ಭಿಣಿ, ವಿಶೇಷ ಚೇತನರನ್ನು ಕೂಡ ನೇಮಕ ಮಾಡಿದೆ. ಹಾಗಾಗಿ ಗೊಂದಲ ಸರಿ ಪಡಿಸುವಂತೆ ಶಿಕ್ಷಕರು ಇದೀಗ ಪ್ರತಿಭಟನೆ ನಡೆಸುತ್ತಿದ್ದಾರೆ. ಸಮಸ್ಯೆಗೆ ಸ್ಪಂದಿಸದಿದ್ದರೆ ಗಣತಿಗೆ ಬಹಿಷ್ಕಾರ ಹಾಕುವುದಾಗಿ ಎಚ್ಚರಿಕೆ ನೀಡಿದ್ದಾರೆ.

Read More

ಬೆಂಗಳೂರು : ನಿನ್ನೆಯಿಂದ ರಾಜ್ಯಾದ್ಯಂತ ಸಾಮಾಜಿಕ ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ಆರಂಭವಾಗಿದ್ದು, ಆದರೆ ಸರ್ವರ್ ಸಮಸ್ಯೆ ಹಾಗೂ ಮೊಬೈಲ್ನಲ್ಲಿ ತಾಂತ್ರಿಕ ಸಮಸ್ಯೆಯಲ್ಲಿ ಇದುವರೆಗೂ ಕೇವಲ ರಾಜ್ಯಾದ್ಯಂತ 10642 ಕುಟುಂಬಗಳ ದತ್ತಾಂಶ ಸಂಗ್ರಹಿಸಲಾಗಿದೆ ಎಂದು ತಿಳಿದುಬಂದಿದೆ. ಇದೆ ವಿಚಾರವಾಗಿ ಬೆಂಗಳೂರಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಸಿಎದ್ದ್ ಸಾಮಾಜಿಕ ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಗೆ ಸರ್ವರ್ ಡೌನ್ ವಿಚಾರವಾಗಿ, ಇಂದು ಮಧ್ಯಾಹ್ನ ಹೈಕೋರ್ಟ್ ನಲ್ಲಿ ಈ ಕುರಿತು ವಿಚಾರಣೆ ನಡೆಯಲಿದೆ ನಂತರ ನೋಡೋಣ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ರಾಜ್ಯಾದ್ಯಂತ ನಿನ್ನೆಯಿಂದ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ ಆರಂಭವಾಗಿದ್ದು, ನಿನ್ನೆ ಒಂದೇ ದಿನ ಕೇವಲ 10,642 ಕುಟುಂಬಗಳ ದತ್ತಾಂಶ ಸಂಗ್ರಹವಾಗಿದೆ ವಿಭಧ ಜಿಲ್ಲೆಗಳಲ್ಲಿ ದತ್ತಾಂಶ ಸಂಗ್ರಹ ಮಾಡುತ್ತಿರುವ ಸಮೀಕ್ಷೆಗಾರರು ಮೊದಲ ದಿನ ಬೆರಳಣಿಕೆ ಎಷ್ಟು ಮಾತ್ರ ದತ್ತಾಂಶ ಸಂಗ್ರಹಿಸಲಾಗಿದೆ 15 ಜಿಲ್ಲೆಗಳಲ್ಲಿ ಹತ್ತಕ್ಕಿಂತ ಕಡಿಮೆ ಮನೆಗಳಲ್ಲಿ ದತ್ತಾಂಶ ಸಂಗ್ರಹಿಸಲಾಗಿದೆ. ಜಿಲ್ಲಾವಾರು ಸಮೀಕ್ಷೆ ನೋಡುವುದಾದರೆ ಹಾವೇರಿಯಲ್ಲಿ 680 ಕುಟುಂಬಗಳ ದತ್ತಾಂಶ ಸಂಗ್ರಹವಾಗಿದೆ. ವಿಜಯಪುರದಲ್ಲಿ ಕೇವಲ 7,…

Read More

ಹಾಸನ : ಹಾಸನದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಕಂದಾಯ ಸಚಿವ ಕೃಷ್ಣ ಬೈರೇಗೌಡರು ಕೃಷಿ ಇಲಾಖೆಯ ಅಧಿಕಾರಿಯೊಬ್ಬರಿಗೆ ತೀವ್ರ ತರಾಟೆ ತೆಗೆದುಕೊಂಡಿದ್ದು, ಅವರ ಆಳವಾದ ಕೃಷಿ ಜ್ಞಾನ ಮತ್ತು ಕಾರ್ಯಕ್ಷಮತೆಯ ಮೇಲಿನ ಬದ್ಧತೆ ಮತ್ತೊಮ್ಮೆ ಸಾಬೀತಾಗಿದೆ. ಕೇವಲ ಲೆಕ್ಕಾಚಾರಗಳು ಮತ್ತು ಅಂಕಿ-ಅಂಶಗಳ ವರದಿಯನ್ನು ಮಂಡಿಸಿದ ಅಧಿಕಾರಿಯ ವಿರುದ್ಧ, ‘ಅಡ್ಡಗೋಡೆ ಮೇಲೆ ದೀಪ ಇಟ್ಟಂತೆ’ ವರದಿ ಕೊಟ್ಟರೆ ಯಾವುದೇ ಪ್ರಯೋಜನವಿಲ್ಲ ಎಂದು ಸಚಿವರು ಗುಡುಗಿದರು. ಅವರ ಈ ನೇರ ಮತ್ತು ಆಕ್ರಮಣಕಾರಿ ಶೈಲಿಯು ಸಭೆಯಲ್ಲಿ ಗಮನ ಸೆಳೆಯಿತು. ಬಿಳಿ ಸುಳಿ ರೋಗದ ನಿಜವಾದ ಸವಾಲು: ೫೬೫೫ ಹೆಕ್ಟೇರ್ ಪ್ರದೇಶದಲ್ಲಿ ಮೆಕ್ಕೆಜೋಳ ಬೆಳೆದು ನಿಂತಿದೆ. ಆದರೆ ಬಿಳಿ ಸುಳಿ ರೋಗ (white whorl disease) ರೈತರ ಬದುಕನ್ನೇ ಬೆಂಕಿ ಹಚ್ಚಿದಂತೆ ಹರಡುತ್ತಿದೆ. ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಬದಲು, ಕೃಷಿ ಅಧಿಕಾರಿ ಕೇವಲ ರೋಗ ಹರಡಿರುವ ವಿಸ್ತೀರ್ಣದ ಬಗ್ಗೆ ಮಾಹಿತಿ ನೀಡಿ ಕೈತೊಳೆದುಕೊಂಡರು. ಇದಕ್ಕೆ ಸಚಿವ ಬೈರೇಗೌಡರ ಪ್ರತಿಕ್ರಿಯೆ ತೀಕ್ಷ್ಣವಾಗಿತ್ತು. “ಇಷ್ಟು ಕೃಷಿ ವಿಶ್ವವಿದ್ಯಾಲಯಗಳು,…

Read More

ಬೆಂಗಳೂರು : ನಿನ್ನೆಯಿಂದ ರಾಜ್ಯಾದ್ಯಂತ ಸಾಮಾಜಿಕ ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ಆರಂಭವಾಗಿದ್ದು, ಆದರೆ ಸರ್ವ ಸಮಸ್ಯೆ ಹಾಗೂ ಮೊಬೈಲ್ನಲ್ಲಿ ತಾಂತ್ರಿಕ ಸಮಸ್ಯೆಯಲ್ಲಿ ಇದುವರೆಗೂ ಕೇವಲ ರಾಜ್ಯಾದ್ಯಂತ 10642 ಕುಟುಂಬಗಳ ದತ್ತಾಂಶ ಸಂಗ್ರಹಿಸಲಾಗಿದೆ ಎಂದು ತಿಳಿದುಬಂದಿದೆ. ಹೌದು ರಾಜ್ಯಾದ್ಯಂತ ನಿನ್ನೆಯಿಂದ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ ಆರಂಭವಾಗಿದ್ದು, ನಿನ್ನೆ ಒಂದೇ ದಿನ ಕೇವಲ 10,642 ಕುಟುಂಬಗಳ ದತ್ತಾಂಶ ಸಂಗ್ರಹವಾಗಿದೆ ವಿಭಧ ಜಿಲ್ಲೆಗಳಲ್ಲಿ ದತ್ತಾಂಶ ಸಂಗ್ರಹ ಮಾಡುತ್ತಿರುವ ಸಮೀಕ್ಷೆಗಾರರು ಮೊದಲ ದಿನ ಬೆರಳಣಿಕೆ ಎಷ್ಟು ಮಾತ್ರ ದತ್ತಾಂಶ ಸಂಗ್ರಹಿಸಲಾಗಿದೆ 15 ಜಿಲ್ಲೆಗಳಲ್ಲಿ ಹತ್ತಕ್ಕಿಂತ ಕಡಿಮೆ ಮನೆಗಳಲ್ಲಿ ದತ್ತಾಂಶ ಸಂಗ್ರಹಿಸಲಾಗಿದೆ. ಜಿಲ್ಲಾವಾರು ಸಮೀಕ್ಷೆ ನೋಡುವುದಾದರೆ ಹಾವೇರಿಯಲ್ಲಿ 680 ಕುಟುಂಬಗಳ ದತ್ತಾಂಶ ಸಂಗ್ರಹವಾಗಿದೆ. ವಿಜಯಪುರದಲ್ಲಿ ಕೇವಲ 7, ಕುಟುಂಬಗಳ ದತ್ತಾಂಶ ಸಂಗ್ರಹವಾಗಿದೆ. ಉತ್ತರ ಕನ್ನಡದಲ್ಲಿ ಕೂಡ 7 ಕುಟುಂಬಗಳ ದತ್ತಾಂಶ ಸಂಗ್ರಹಿಸಲಾಗಿದೆ. ದಾವಣಗೆರೆಯಲ್ಲಿ 7 ಕುಟುಂಬಗಳ ದತ್ತಾಂಶ ಸಂಗ್ರಹವಾಗಿದ್ದು, ಕೊಪ್ಪಳದಲ್ಲಿ 6 ಕುಟುಂಬಗಳ ದತ್ತಾಂಶಸಂಗ್ರಹವಾಗಿದೆ. ಉಡುಪಿಯಲ್ಲಿ ಸಹ 7 ಕುಟುಂಬಗಳ ದತ್ತಾಂಶ ಸಂಗ್ರಹವಾಗಿದೆ.

Read More

ಬೆಂಗಳೂರು : ರಾಜ್ಯದಲ್ಲಿ ನಿನ್ನೆಯಿಂದ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಆರಂಭವಾಗಿದ್ದು ಕೆಲವು ತಾಂತ್ರಿಕ ದೋಷಗಳಿಂದ ಕೇವಲ ಇದುವರೆಗೂ 10,000 ಜನರ ಸಮೀಕ್ಷೆ ಮಾತ್ರ ಮಾಡಲಾಗಿದೆ ಎಂದು ತಿಳಿದುಬಂದಿದೆ. ಈ ವಿಚಾರವಾಗಿ ಕಾಂಗ್ರೆಸ್ ಎಂಎಲ್ಸಿ ಬಿಕೆ ಹರಿಪ್ರಸಾದ್ ಪ್ರತಿಕ್ರಿಯೆ ನೀಡಿದ್ದು, ಇದು ಜಾತಿಗಣತಿ ಅಲ್ಲ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಅಷ್ಟೇ ಎಂದು ತಿಳಿಸಿದರು. ಬೆಂಗಳೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು ಸಮೀಕ್ಷೆ ವೇಳೆ ಎಲ್ಲರೂ ಅವರವರ ಜಾತಿಗಳ ಹೆಸರು ಬರೆಸಲಿ. ಯಾರೂ ಕೂಡ ಅವರ ಜಾತಿಗಳ ಹೆಸರು ಬರಿಸಲು ಅಡ್ಡಿಪಡಿಸುತ್ತಿಲ್ಲ. ಕಳೆದ 75 ವರ್ಷಗಳಿಂದ ಕೆಲವರು ಮಾತ್ರ ಬೆಣ್ಣೆ ತುಪ್ಪ ತಿನ್ನುತ್ತಿದ್ದಾರೆ. ಅದು ಎಲ್ಲಿ ತಪ್ಪಿ ಹೋಗುತ್ತೋ ಅಂತ ಕೆಲವರು ವಿರೋಧಿಸುತ್ತಿದ್ದಾರೆ. ವಿರೋಧ ಮಾಡುತ್ತಿರುವ ಅವರ ಹೆಸರನ್ನು ಸಿಎಂ ಸಿದ್ದರಾಮಯ್ಯ ಬಹಿರಂಗಪಡಿಸಲಿ. ಜಾತಿ ಹೆಸರಿನಲ್ಲಿ ಕೆಲವರು ಸಾಮ್ರಾಜ್ಯ ಕಟ್ಟಿಕೊಂಡಿದ್ದಾರೆ. ಅದಕ್ಕೆ ತೊಂದರೆ ಆಗುತ್ತದೆ ಎಂದು ರಾಜಕೀಯ ಮಾಡುತ್ತಿದ್ದಾರೆ. ಆರ್ಥಿಕ ಶೈಕ್ಷಣಿಕ ಸಮೀಕ್ಷೆ ಮಾಡುತ್ತೇವೆ ಎಂದು ನಾವು ಹೇಳಿದ್ವಿ. ನಮ್ಮ…

Read More

ಬೆಂಗಳೂರು : ನಿನ್ನೆ ಬೆಂಗಳೂರಿನಲ್ಲಿ 11 ಬಾರಿ ಚಾಕು ಇರಿದು ವಿವಾಹಿತ ಮಹಿಳೆ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಹಂತಕ ಲೋಹಿತಾಶ್ವ ಅಲಿಯಾಸ್ ಲೊಕೇಶನನ್ನು ಅರೆಸ್ಟ್ ಮಾಡಿದ್ದಾರೆ. ನಿನ್ನೆ ಬೆಂಗಳೂರಿನ ಸುಂಕದಕಟ್ಟೆಯಲ್ಲಿ ವಿವಾಹಿತ ಮಹಿಳೆ ರೇಖಾಳನ್ನು ಆರೋಪಿ ಲೋಹಿತಾಶ್ವ 11 ಬಾರಿ ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಿದ್ದ. ತುಮಕೂರು ಜಿಲ್ಲೆಯ ಶಿರಾ ಮೂಲದ ರೇಖಾ (35) ಎನ್ನುವ ವಿವಾಹಿತ ಮಹಿಳೆಯನ್ನು ಲೋಹಿತಾಶ್ವ ಕೊಲೆ ಮಾಡಿದ್ದಾನೆ. ಕೊಲೆಯಾದ ರೇಖಾಳಿಗೆ 12 ವರ್ಷದ ಮಗಳು ಇದ್ದಾಳೆ. ಇನ್ನೂ ಲೋಹಿತಾಶ್ವನಿಗೂ ಕೂಡ ಮದುವೆಯಾಗಿ ಪತ್ನಿಯಿಂದ ಆತ ವಿಚ್ಛೇದನ ಪಡೆದುಕೊಂಡಿದ್ದ. ಬಳಿಕ ರೇಖಾ ಜತೆಗೆ ಆರೋಪಿ ಲೋಹಿತಾಶ್ವ ಮದುವೆಯಾಗಿದ್ದ. ಪೊಲೀಸರ ವಿಚಾರಣೆ ವೇಳೆ ಆಕೆಯ ಮೇಲೆ ಅನುಮಾನಪಟ್ಟು ಕೊಲೆಗೈದಿದ್ದಾಗಿ ಮಾಹಿತಿ ನೀಡಿದ್ದಾನೆ. ರೇಖಾ ಮದುವೆ ಬಳಿಕ ಶಿರಾದಿಂದ ಬೆಂಗಳೂರಿಗೆ ಕರೆಸಿಕೊಂಡಿದ್ದರು. ಆಕೆ ಕೆಲಸ ಮಾಡುತ್ತಿದ್ದ ಕಂಪನಿಯಲ್ಲಿಯೇ ಲೋಹಿತಾಶ್ವನಿಗೆ ಡ್ರೈವರ್ ಕೆಲಸ ಕೊಡಿಸಿದ್ದಳು. ಎರಡನೇ ಮದುವೆ ಆಗಿದ್ದರು ಕೂಡ ಇಬ್ಬರು ಒಂದೇ ಮನೆಯಲ್ಲಿ…

Read More

ಬೆಂಗಳೂರು : ಮಲ್ಟಿಪ್ಲೆಕ್ಸ್‌ ಸೇರಿ ರಾಜ್ಯ ಎಲ್ಲಾ ಚಿತ್ರಮಂದಿರಗಳಲ್ಲಿ ಎಲ್ಲಾ ಭಾಷೆಯ ಚಿತ್ರಗಳ ಪ್ರದರ್ಶನಕ್ಕೆ ತೆರಿಗೆ ಹೊರತುಪಡಿಸಿ ಗರಿಷ್ಠ 200 ರೂ.ಗಳ ಏಕರೂಪ ದರ ನಿಗದಿಪಡಿಸಿದ ರಾಜ್ಯ ಸರ್ಕಾರ ಹೊರಡಿಸಿದ ಆದೇಶಕ್ಕೆ ಮಧ್ಯಂತರ ತಡೆ ನೀಡುವ ಕುರಿತಂತೆ ಮನವಿಯ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್​ ಏಕ ಸದಸ್ಯ ಪೀಠ ಇಂದು ಈ ಕುರಿತು ಮಧ್ಯಂತರ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದೆ. ಮಲ್ಟಿಪ್ಲೆಕ್ಸ್ ಗಳಲ್ಲಿ ರಾಜ್ಯ ಸರ್ಕಾರ 200 ರೂಪಾಯಿ ಟಿಕೆಟ್ ದರ ನಿಗದಿ ಮಾಡಿತ್ತು. ಇದೀಗ ರಾಜ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಮಲ್ಟಿಪ್ಲೆಕ್ಸ್​ ಅಸೋಸಿಯೇಷನ್‌ ಆಫ್‌ ಇಂಡಿಯಾ, ಹೊಂಬಾಳೆ ಫಿಲಂನ ವಿಜಯ್‌ ಕಿರಗಂದೂರು, ಪಿವಿಆರ್‌ ಐನಾಕ್‌ಸ್‌ ಲಿಮಿಟೆಡ್‌, ವಿಕೆ ಫಿಲಂಸ್‌, ಕೀ ಸ್ಟೋನ್‌ ಎಂಟರ್‌ಟೇನ್ಮೆಂಟ್‌ ಪ್ರವೈಟ್‌ ಲಿಮಿಟೆಡ್‌ ಮತ್ತಿತರರು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ರವಿ ಹೊಸಮನಿ ಅವರಿದ್ದ ಏಕಸದಸ್ಯಪೀಠ ಈ ಆದೇಶ ನೀಡಿದೆ.

Read More