Author: kannadanewsnow05

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಭೀಕರವಾದ ಕೊಲೆಯಾಗಿದ್ದು ಯುವತಿಯನ್ನು ಪ್ರೀತಿಸಿದ್ದಾನೆ ಎನ್ನುವ ಒಂದೇ ಒಂದು ಕಾರಣಕ್ಕೆ, ನಡು ರಸ್ತೆಯಲ್ಲಿಯೇ ಯುವಕನನ್ನು ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪರಾರಿಯಾಗಿರುವ ಘಟನೆ ದೊಡ್ಡಬಳ್ಳಾಪುರ ನಗರದ ಯಲಹಂಕ-ಹಿಂದೂಪುರ ರಸ್ತೆಯ ಚರ್ಚ್ ಮುಂಭಾಗದಲ್ಲಿ ಕಳೆದ ರಾತ್ರಿ 10 ಗಂಟೆ ಸುಮಾರಿಗೆ ನಡೆದಿದೆ. ಪವನ್ ಕುಮಾರ್ (30) ಕೊಲೆಯಾದ ಯುವಕ. ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ.ಬಾಬಾ ಪರಿಶೀಲಿಸಿದ್ದಾರೆ. ಡಿವೈಎಸ್​ಪಿ ಪಾಡುರಂಗ ಮತ್ತು ನಗರ ಠಾಣೆ ಪೊಲೀಸ್ ಠಾಣೆ ಇನ್ಸ್​ಪೆಕ್ಟರ್ ಅಮರೇಶಗೌಡ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಕಲೆ ಹಾಕಿದ್ದಾರೆ. ಮೃತ ವ್ಯಕ್ತಿ ಜಾಲಪ್ಪ ಕಾಲೇಜಿನಲ್ಲಿ ಡ್ರೈವರ್ ಕೆಲಸ ಮಾಡುತ್ತಿದ್ದರು. ಕಾಲೇಜಿನ ವಸತಿ ಗೃಹದಲ್ಲಿ ತನ್ನ ತಾಯಿ ಜೊತೆ ವಾಸವಾಗಿದ್ದರು. ಗುರುವಾರ ರಾತ್ರಿ 9 ಗಂಟೆ ಸಮಯದಲ್ಲಿ ಫೋನ್ ಮಾಡಿ ಹೊರಗೆ ಕರೆಸಿಕೊಂಡಿದ್ದಾರೆ. ಆಟೋದಲ್ಲಿ ಬರುತ್ತಿದ್ದ ವೇಳೆ ಕಾರಿನಲ್ಲಿ ಬಂದ ದುಷ್ಕರ್ಮಿಗಳ ಗ್ಯಾಂಗ್ ಆಟೋವನ್ನು…

Read More

ನವದೆಹಲಿ : ಭಾರತಕ್ಕೆ ಭೇಟಿ ನೀಡಿರುವ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಇಂದು ದೆಹಲಿಯ ರಾಜಘಾಟ್ ನಲ್ಲಿರುವ ಮಹಾತ್ಮ ಗಾಂಧಿ ಸಮಾಧಿಗೆ ನಮನ ಸಲ್ಲಿಸಿದರು. ಬಳಿಕ ಹೈದರಾಬಾದ್ ಹೌಸ್ ನಲ್ಲಿ ಪ್ರಧಾನಿ ಮೋದಿ ಹಾಗೂ ಪುಟಿನ್ ನಡುವೆ ದ್ವಿಪಕ್ಷಿಯ ಮಾತುಕತೆ ನಡೆಯಲಿದೆ. ಈ ವೇಳೆ ದೆಹಲಿಯ ರಾಜಘಾಟ್ ನಲ್ಲಿ ಮಹಾತ್ಮ ಗಾಂಧೀಜಿ ಅವರಿಗೆ ಪುಟಿನ್ ಅವರು ಪುಷ್ಪ ನಮನ ಸಲ್ಲಿಸಿ ಗಾಂಧೀಜಿ ಸಮಾಧಿಗೆ ನಮಿಸಿದರು. ಬಳಿಕ ವಿಸಿಟರ್ ನಲ್ಲಿ ಶಾಂತಿಗಾಗಿ ಮಹಾತ್ಮ ಗಾಂಧೀಜಿ ಹೊಸ ಸಂದೇಶ ನೀಡಿದ್ದಾರೆ. ಮಹಾತ್ಮ ಗಾಂಧೀಜಿ ಆದರ್ಶಗಳು ಇಂದಿಗೂ ಜೀವಂತವಾಗಿವೆ. ಗಾಂಧೀಜಿ ಆದರ್ಶದಿಂದ ಭಾರತ ಮತ್ತು ರಷ್ಯಾ ಉತ್ತಮ ಸಂಬಂಧ ಹೊಂದಿದೆ. ಮಹಾತ್ಮ ಗಾಂಧೀಜಿ ಇಡೀ ವಿಶ್ವಕ್ಕೆ ಆದರ್ಶರಾಗಿದ್ದಾರೆ. ಇಡೀ ಜಗತ್ತು ಸಮಾನತೆ, ಗೌರವ ಅಹಿಂಸೆಯ ತತ್ವ ಬಯಸಿದೆ ಎಂದು ವಿಸಿಟರ್ ಪುಸ್ತಕದಲ್ಲಿ ಪುಟಿನ್ ಬರೆದಿದ್ದಾರೆ. ಇಂದು ರಷ್ಯಾ ಅಧ್ಯಕ್ಷ ಪುಟಿನ್ ಅವರು ದೆಹಲಿಯ ರಾಜ್ ಘಾಟ್ ನಲ್ಲಿರುವ ಮಹಾತ್ಮ ಗಾಂಧೀಜಿ ಅವರ ಸಮಾಧಿಗೆ ಭೇಟಿ ನೀಡಿ…

Read More

ನವದೆಹಲಿ : ಭಾರತಕ್ಕೆ ಭೇಟಿ ನೀಡಿರುವ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಇಂದು ದೆಹಲಿಯ ರಾಜಘಾಟ್ ನಲ್ಲಿರುವ ಮಹಾತ್ಮ ಗಾಂಧಿ ಸಮಾಧಿಗೆ ನಮನ ಸಲ್ಲಿಸಿದರು. ಬಳಿಕ ಹೈದರಾಬಾದ್ ಹೌಸ್ ನಲ್ಲಿ ಪ್ರಧಾನಿ ಮೋದಿ ಹಾಗೂ ಪುಟಿನ್ ನಡುವೆ ದ್ವಿಪಕ್ಷಿಯ ಮಾತುಕತೆ ನಡೆಯಲಿದೆ. ಇಂದು ರಷ್ಯಾ ಅಧ್ಯಕ್ಷ ಪುಟಿನ್ ಅವರು ದೆಹಲಿಯ ರಾಜ್ ಘಾಟ್ ನಲ್ಲಿರುವ ಮಹಾತ್ಮ ಗಾಂಧೀಜಿ ಅವರ ಸಮಾಧಿಗೆ ಭೇಟಿ ನೀಡಿ ನಮನ ಸಲ್ಲಿಸಿದರು. ಬಳಿಕ ದೆಹಲಿಯ ಹೈದರಾಬಾದ್ ಹೌಸಿಗೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ತೆರಳಿದ್ದಾರೆ. ಕೆಲವೇ ಕ್ಷಣಗಳಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಪುಪುಟಿನ್ ನಡುವೆ ಹಲವು ಮಹತ್ವದ ಒಪ್ಪಂದ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ರಾಷ್ಟ್ರಪತಿ ಭವನದಲ್ಲಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಿಗೆ ಗಾರ್ಡ್ ಆಫ್ ಆನರ್ ನೀಡಲಾಯಿತು.ಬಳಿಕ ರಾಷ್ಟ್ರಪತಿ ಭವನದ ಮುಂಭಾಗದಲ್ಲಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮತ್ತು ಅಧ್ಯಕ್ಷೆ ದ್ರೌಪದಿ ಮುರ್ಮು ಹಸ್ತಲಾಘವ ಮಾಡಿದ್ದಾರೆ. ರಷ್ಯಾ ಅಧ್ಯಕ್ಷರು ಮತ್ತು ಪ್ರಧಾನಿ…

Read More

ನವದೆಹಲಿ : ಕಳೆದೆರಡು ದಿನಗಳಿಂದ ದೇಶದಲ್ಲಿ ವಿಮಾನ ಹಾರಾಟದಲ್ಲಿ ಉಂಟಾದ ವ್ಯತ್ಯಾಯದಿಂದಾಗಿ ಇಂಡಿಗೋ ಸಂಸ್ಥೆ ಗ್ರಾಹಕರಲ್ಲಿ ಕ್ಷಮೆ ಯಾಚಿಸಿದ್ದು, ಮುಂದಿನ ಕೆಲವು ದಿನಗಳು ಈ ಅಡಚಣೆ ಮುಂದುವರೆಯುವ ಸಾಧ್ಯತೆ ಇದೆ ಎಂದು ತಿಳಿಸಿದೆ. ಅಲ್ಲದೇ ದೇಶಿಯ ಮತ್ತು ಅಂತಾರಾಷ್ಟ್ರೀಯ ವಿಮಾನ ಹಾರಾಟದಲ್ಲಿ ವ್ಯಾಪಕ ಅಡಚಣೆ ಎದುರಿಸುತ್ತಿರುವ ಇಂಡಿಗೋ ಸಂಸ್ಥೆ, ಈ ಕುರಿತು ತಮ್ಮ ಗ್ರಾಹಕರು ಮತ್ತು ಉದ್ಯಮ ಪಾಲುದಾರರಲ್ಲಿ ಕ್ಷಮೆಯಾಚಿಸಿದೆ. ಕಳೆದೆರಡು ದಿನಗಳಿಂದ ಸಾಕಷ್ಟು ವಿಮಾನಗಳ ಹಾರಾಟ ರದ್ದಾಗಿದೆ. ಸಾಮಾನ್ಯಕ್ಕಿಂತ ಹೆಚ್ಚಾಗಿ ದಿನಕ್ಕೆ ಸರಿಸುಮಾರು 170ರಿಂದ 200 ವಿಮಾನಗಳು ರದ್ದಾಗಿದ್ದು, ದೇಶವ್ಯಾಪಿ ಹಲವು ವಿಮಾನ ನಿಲ್ದಾಣದಲ್ಲಿ ಈ ಅಡಚಣೆ ವರದಿಯಾಗಿದೆ. ಏಕಾಏಕಿ ವಿಮಾನಗಳ ಸಂಚಾರ ರದ್ದು ಹಾಗೂ ಪರ್ಯಾಯ ವ್ಯವಸ್ಥೆಯ ಕೊರತೆಯಿಂದಾಗಿ ಪ್ರಯಾಣಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಕ್ಷಮೆಯಾಚಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ ಮಾಡಿರುವ ಇಂಡಿಗೋ, ಸಮಸ್ಯೆ ಅನುಭವಿಸಿದ ಗ್ರಾಹಕರು ಮತ್ತು ನಮ್ಮ ಉದ್ಯಮದ ಪಾಲುದಾರರಲ್ಲಿ ನಾವು ಮನಃಪೂರ್ವಕ ಕ್ಷಮೆ ಯಾಚಿಸುತ್ತೇವೆ. ಇಂಡಿಗೋ ತಂಡಗಳು ಪರಿಸ್ಥಿತಿ ನಿರ್ವಹಿಸಿ, ಸಾಮಾನ್ಯ…

Read More

ಮಂಗಳೂರು : ಇತ್ತೀಚಿಗೆ ಇಡಿ ದೇಶದಲ್ಲಿ ಸೈಬರ್ ವಂಚನೆ, ಡಿಜಿಟಲ್ ಅರೆಸ್ಟ್ ಪ್ರಕರಣಗಳ ಸಂಖ್ಯೆ ಹೆಚ್ಚಿದ್ದು, ಇದೀಗ ಮಂಗಳೂರಲ್ಲಿ ಸಹ ಡಿಜಿಟಲ್ ಅರೆಸ್ಟ್ ಗೆ ಯತ್ನಿಸಲಾಗಿದೆ. ಆದರೆ ಬ್ಯಾಂಕ್ ಮ್ಯಾನೇಜರ್ ನ ಸಮಯ ಪ್ರಜ್ಞೆಯಿಂದ ವೃದ್ಧ ದಂಪತಿಗಳ ಒಟ್ಟು 84 ಲಕ್ಷ ರೂಪಾಯಿ ವಂಚಕರ ಪಾಲಾಗುವುದು ತಪ್ಪಿದೆ. ಆ ಮೂಲಕ ಸೈಬರ್ ವಂಚಕರ ಪ್ಲಾನ್ ಪೂರ್ತಿಉಲ್ಟಾ ಆಗಿದೆ. ಮುಲ್ಕಿಯ ದಾಮಸಕಟ್ಟೆ ನಿವಾಸಿಗಳಾದ ಬೆನ್ಡ್ಡಿಕ್ ಪೆರ್ನಾಂಡಿಸ್ (84 ವರ್ಷ) ಹಾಗೂ ಲಿಲ್ಲಿ ಸಿಸಿಲಿಯ ಫೆರ್ನಾಂಡಿಸ್ (71 ವರ್ಷ) ರವರಿಗೆ ಡಿಸೆಂಬರ್ 1 ರಂದು ಯಾರೋ ಅಪರಿಚಿತರು ಉತ್ತರ ಪ್ರದೇಶದ ಸಿ.ಐ.ಡಿ ಪೊಲೀಸ್ ಎಂಬ ಸೊಗಿನಲ್ಲಿ ಮೊಬೈಲ್ ಫೋನ್ ವಾಟ್ಸ್​ಆ್ಯಪ್​ ಮೂಲಕ ಸಂಪರ್ಕಿಸಿದ್ದರು. ಅವರುಗಳು 6 ಕೋಟಿ ಮೋಸ ಮಾಡಿರುವುದಾಗಿ ಅವರ ವಿರುದ್ದ ವಂಚನೆ ಪ್ರಕರಣ ದಾಖಲಾಗಿರುವುದಾಗಿ ನಂಬಿಸಿ, ಸೈಬರ್ ಕಳ್ಳರು ಡಿಜಿಟಲ್ ಅರೆಸ್ಟ್​​ಗೆ ಒಳಪಡಿಸಿದ್ದರು. ತಮ್ಮ ಖಾತೆಯಲ್ಲಿರುವ ಹಣವನ್ನು ತನಿಖೆಗಾಗಿ ವರ್ಗಾಹಿಸಬೇಕೆಂದು ಸೂಚಿಸಿದ ಮೇರೆಗೆ ಇವರು ಕಿನ್ನಿಗೋಳಿಯ ಕೆನರಾ ಬ್ಯಾಂಕಿನಲ್ಲಿದ್ದ ಅವರ ಖಾತೆಯಿಂದ…

Read More

ಬೆಂಗಳೂರು : ನಟ ದರ್ಶನ ಮತ್ತು ಗ್ಯಾಂಗ್ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹತ್ಯೆ ಪ್ರಕರಣದಲ್ಲಿ ಸಾಕ್ಷಿ ನಾಶಕ್ಕೆ ಹಣ ಸಂಗ್ರಹ ಆರೋಪ ಹಿನ್ನೆಲೆಯಲ್ಲಿ ದರ್ಶನ್ ವಿರುದ್ಧ 82 ಲಕ್ಷ ನಗದು ಸಂಗ್ರಹ ಮಾಡಿದ ಆರೋಪ ಹಿನ್ನೆಲೆ ಹಣಕ್ಕೆ ಸಂಬಂಧಪಟ್ಟಂತೆ ಐಟಿ ಅಧಿಕಾರಿಗಳ ಮುಂದೆ A2 ಆರೋಪಿ ದರ್ಶನ ಹೇಳಿಕೆ ನೀಡಿದ್ದು, ದರ್ಶನ್ ಮತ್ತು ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ ಹಣ ಪತ್ತೆ ಸಂಬಂಧ ಐಟಿ ವಿಚಾರಣೆ ಬಳಿ ಹಣದ ಬಗ್ಗೆ ದರ್ಶನ್ ಹೇಳಿಕೆ ದಾಖಲು ಮಾಡಿಕೊಳ್ಳಲಾಗಿದೆ. ಕೃಷಿ ಮತ್ತು ಪಶು ಸಂಗೋಪನೆಯಿಂದ ಹಣ ಬಂದಿದ್ದಾಗಿ ದರ್ಶನ್ ಐಟಿ ಅಧಿಕಾರಿಗಳ ಮುಂದೆ ಹೇಳಿಕೆ ನೀಡಿದ್ದಾರೆ. ಆದರೆ ಈ ಹಣಕ್ಕೆ ನನ್ನ ಬಳಿ ದಾಖಲೆಗಳು ಇಲ್ಲ. ಈ ಬಗ್ಗೆ ಐಟಿ ರಿಟರ್ನ್ಸ್ ವೇಳೆ ಮಾಹಿತಿ ನೀಡುತ್ತೇನೆ. ಇನ್ನು ಸಾಲಕೊಟ್ಟಿದ್ದು ಸಾಲ ಪಡೆದಿದ್ದರ ಬಗ್ಗೆ ಪ್ರಶ್ನೆಗೆ ಉತ್ತರಿಸಿದ್ದಾರೆ. ಮೋಹನ್ ರಾಜ್ಗೆ ಸಾಲವಾಗಿ ಹಣ ನೀಡಿದ್ದೆ 2024 ಫೆಬ್ರವರಿಯಲ್ಲಿ ಸಾಲ ಕೊಟ್ಟು ಮೇನಲ್ಲಿ ವಾಪಸ್ ಪಡೆದಿದ್ದೆ 3…

Read More

01 ಒಬ್ಬವ್ಯಕ್ತಿತನ್ನಸಾವಿನ ಮೊದಲು ತನ್ನ ಜೀವನದ ಹಳೆಯ ದಿನಗಳನ್ನು ಮೆಲುಕು ಹಾಕಲು ಪ್ರಾರಂಭಿಸುತ್ತಾನೆ. ಅದರ ಮೂಲಕ ಅವರು ತನ್ನ ಜೀವನದ ಒಳ್ಳೆಯ ಮತ್ತು ಕೆಟ್ಟ ಕಾರ್ಯಗಳನ್ನು ನೆನಪಿಸಿಕೊಳ್ಳುತ್ತಾನೆ, ಬೇಡವೆಂದರೂ ತಡೆಯಲಾರ. ಇದರಿಂದ ಅವನ ಮನಸ್ಸು ಚಂಚಲವಾಗುತ್ತದೆ, 02,ಮನುಷ್ಯನಿಗೆ ಮರಣ ಸಮೀಪಿಸುವಾಗ ಆತನಿಗೆ ತಾನು ಮಾಡಿದ ಎಲ್ಲಾ ಕೆಟ್ಟ ಕಾರ್ಯಗಳ ಅರಿವಾಗುತ್ತದೆ ಕೈಯಲ್ಲಿರುವ ರೇಖೆಗಳು ಕೂಡ ಆವ್ಯಕ್ತಿಗೆಸ್ಪಷ್ಟವಾಗಿಕಾಣಿಸುವುದಿಲ್ಲ,ಕೈಯಲ್ಲಿರುವ ರೇಖೆಯು ವ್ಯಕ್ತಿಯ ಸಂಪೂರ್ಣ ಜೀವನವನ್ನು ತೋರಿಸುತ್ತದೆ. ಆದರೆ ವ್ಯಕ್ತಿಯು ಸಾವಿನ ಸಮೀಪದಲ್ಲಿರುವಾಗವಿಚಿತ್ರವಾಗಿ ಮಾತನಾಡುತ್ತಾನೆ. ಅದು ಏಕೆ ಹೀಗೆ ಅಂತ ಆತನ ಮನೆಯವರಿಗೂ ಕೂಡ ತಿಳಿಯೋದಿಲ್ಲ, 03 ಗರುಡ ಪುರಾಣದ ಪ್ರಕಾರ ಒಬ್ಬ ವ್ಯಕ್ತಿಯು ಸತ್ತಾಗ ಅವನು ನಿಗೂಢದ ಬಾಗಿಲನ್ನು ನೋಡುತ್ತಾನೆ,ಕೆಲವರು ಜ್ವಾಲೆಗಳನ್ನು ನೋಡುತ್ತಾರೆ. ಮತ್ತೆಕೆಲವರುಪ್ರಕಾಶಮಾನವಾದ. ಬೆಳಕನ್ನು ನೋಡುತ್ತಾರೆ ಇದು ಅವರವರ ಕರ್ಮದ ಮೇಲೆ ಆಧಾರಿತವಾಗಿದೆ ಎಂದು ಹೇಳಲಾಗುತ್ತದೆ, 04 ,ಒಬ್ಬ ವ್ಯಕ್ತಿಯು ಸಾವಿನ ಸಮೀಪದಲ್ಲಿದ್ದಾಗ ಅವನು ಯಮದೂತನನ್ನು ನೋಡುತ್ತಾನೆ. ಕಾರಣವಿಲ್ಲದೆ ನಗುತ್ತಾನೆ ಅಥವಾ ತುಂಬಾ ದುಕ್ಕಿತ ನಾಗುತ್ತಾನೆ. ನಕರಾತ್ಮಕ ಶಕ್ತಿಯು ನನಗೆ ಬಂದಿದೆ ಎಂದು…

Read More

ಬೆಂಗಳೂರು : ಇದೀಗ ಬೆಂಗಳೂರು ವಿಧಾನಕ್ಕೆ ಡ್ರಗ್ಸ್ ನಗರ ಆಗಿ ಬದಲಾಗುತ್ತಿದೆ ಏಕೆಂದರೆ ಕಳೆದು ಒಂದು ವರ್ಷದಲ್ಲಿ ಬೆಂಗಳೂರಿನಲ್ಲಿ 120 ಕೋಟಿ ಮೌಲ್ಯದ ಮಾದಕ ವಸ್ತುಗಳನ್ನು ಪೊಲೀಸರು ಸೀಜ್ ಮಾಡಿದ್ದಾರೆ. ಹೌದು ಕರ್ನಾಟಕ ರಾಜ್ಯ ಇದೀಗ ಮೆಕ್ಸಿಕೋ ನಗರವನ್ನೇ ಮೀರಿಸುತ್ತಿದೆ ಎನ್ನುವ ಅನುಮಾನ ವ್ಯಕ್ತವಾಗುತ್ತಿದೆ ಶ್ರೀಗಂಧದ ನಾಡು ಈಗ ಮಾದಕ ವಸ್ತುಗಳ ಬೀಡಾಗಿದೆ ಕಳೆದ ವರ್ಷ ಸಿಸಿಬಿ ಪೊಲೀಸರು 90 ಕೋಟಿ ಮೌಲ್ಯದ ಡ್ರಗ್ಸ್ ಮಾಡಿದ್ದರು ಆದರೆ ಈ ವರ್ಷ 120 ಕೋಟಿ ಮೌಲ್ಯದ ಮಾದಕ ವಸ್ತು ಸೀಜ್ ಮಾಡಿದ್ದಾರೆ ಒಟ್ಟು 213 ಕೇಸ್ಗಳು ದಾಖಲಾಗಿದ್ದು 267 ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ ಬಂದಿದ್ದರಿಂದ 43.575 ಕೆಜಿ ಕ್ರಿಸ್ಟಲ್ 27.82 ಕೆಜಿ ಹೈಡ್ರೋಗಾಂಜ ಹಾಗೂ 156.632 ಕೆಜಿ ಗಾಂಜಾ 1.195 ಕೆಜಿ ಮಾಡಿದ್ದಾರೆ. ನೈಜೀರಿಯಾ, ಕಿನ್ಯಾ,ಉಗಾಂಡ, ಘಾನಾ, ತಾಂಜೇನಿಯಾ, ಕ್ಯಾಮೆರೂನ್, ಸುಡಾನ್, ಯೆಮನ್, ಸೆನೇಗಲ್, ಜಾಂಬಿಯಾ ಕಾಂಗೋ ದೇಶದ ಡ್ರಗ್ಸ್ ಪೆಡ್ಲರ್ ಗಳನ್ನು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ವೈಜಾಗ್ ಒಡಿಶಾ ಆಂಧ್ರದಿಂದ…

Read More

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಬೆಚ್ಚಿ ಬೆಳಿಸುವ ಘಟನೆ ನಡೆದಿದ್ದು, ನಡು ರಸ್ತೆಯಲ್ಲಿಯೇ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ದೊಡ್ಡಬಳ್ಳಾಪುರದ ದೀಪಕ್ (30) ಕೊಲೆಗೈದು ದುಷ್ಕರ್ಮಿಗಳು ಪರಾಗಿದ್ದಾರೆ. ರಸ್ತೆಯಲ್ಲಿ ಹೋಗುತ್ತಿದ್ದವನ ಮೇಲೆ ಲಾಂಗು ಮಚ್ಚುಗಳಿಂದ ದುಷ್ಕರ್ಮಿಗಳು ಅಟ್ಯಾಕ್ ಮಾಡಿದ್ದಾರೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಡಿ ಕ್ರಾಸ್ ಬಳಿ ಈ ಒಂದು ಘಟನೆ ನಡೆದಿದೆ. ಕೊಲೆಯಾದ ದೀಪಕ್ ಖಾಸಗಿ ಕಂಪನಿಯಲ್ಲಿ ಚಾಲಕನಾಗಿ ಕೆಲಸ ಮಾಡುತ್ತಿದ್ದ. ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಹುಬ್ಬಳ್ಳಿ : ಇಂಡಿಗೋ ವಿಮಾನಗಳ ಹರಾಟದಲ್ಲಿ ವ್ಯತ್ಯಯ ಹಿನ್ನೆಲೆಯಲ್ಲಿ ಇಂದು ದೇಶಾದ್ಯಂತ 500 ಕ್ಕೂ ಹೆಚ್ಚು ವಿಮಾನಗಳ ಹಾರಾಟ ಸ್ಥಗೀತಗೊಳಿಸಲಾಗಿದೆ. ಇದರ ಮಧ್ಯ ಹುಬ್ಬಳ್ಳಿಯಲ್ಲಿ ಇಂಡಿಗೋ ವಿಮಾನ ಹಾರಾಟ ಸ್ಥಗೀತಾಗೊಂಡ ಹಿನ್ನೆಲೆಯಲ್ಲಿ ಆನ್ಲೈನಲ್ಲಿ ಆರತಕ್ಷತೆ ಆಗಿರೋದು ಹುಬ್ಬಳ್ಳಿಯಲ್ಲಿ ನಡೆದಿದೆ. ಹೌದು ಇಂಡಿಗೋ ವಿಮಾನ ಹಾರಾಟದ ಹಿನ್ನೆಲೆಯಲ್ಲಿ ಇದೀಗ ಸಾಕಷ್ಟು ಪ್ರಯಾಣಿಕರು ತೊಂದರೆ ಅನುಭವಿಸುತ್ತಿದ್ದಾರೆ. ಈ ಹಿನ್ನೆಲೆ ಹುಬ್ಬಳ್ಳಿಯಲ್ಲಿ ವಧು ವರ ಇಲ್ಲದೆ ಆರ್ಥಕ್ಷತೆ ಕಾರ್ಯಕ್ರಮ ನಡೆಯಿತು ಅದು ಅವರ ಇಲ್ಲದೆ ಕುಟುಂಬದಿಂದ ಆನ್ಲೈನ್ ಮುಖಾಂತರ ಆರತಕ್ಷತೆ ಕಾರ್ಯಕ್ರಮ ನಡೆಯಿತು. ಮದು-ಮಕ್ಕಳೇ ಬರಲು ಆಗದೆ ಆನ್ಲೈನ್ ನಲ್ಲಿ ಈ ಒಂದು ಅರತಕ್ಷತೆ ಕಾರ್ಯಕ್ರಮ ನಡೆಯಿತು. ಹುಬ್ಬಳ್ಳಿಯ ಮೇಘ ಹಾಗೂ ಭುವನೇಶ್ವರದ ಸಂಗಮದಾಸ್ ಅವರ ಮದುವೆಯಾಗಿತ್ತು. ಹುಬ್ಬಳ್ಳಿಯಲ್ಲಿ ರಿಸೆಪ್ಶನ್ ಹಮ್ಮಿಕೊಂಡಿದ್ದರು ಆದರೆ ವಿಮಾನಗಳ ಹಾರಾಟ ಸ್ಥಗಿತಗೊಂಡ ಹಿನ್ನೆಲೆಯಲ್ಲಿ ಬರುವುದಕ್ಕೆ ಆಗಲಿಲ್ಲ ಹೀಗಾಗಿ ಹುಬ್ಬಳ್ಳಿಯ ಗುಜರಾತ್ ಭವನದಲ್ಲಿ ಹುಡುಗ ಹುಡುಗಿ ಇಲ್ಲದೇನೇ ಆರತಕ್ಷತೆ ಕಾರ್ಯಕ್ರಮ ನಡೆಯಿತು.

Read More