Author: kannadanewsnow05

ಮೈಸೂರು : ಕಳೆದ ಫೆಬ್ರುವರಿಯಲ್ಲಿ ಕೇಂದ್ರ ಸರ್ಕಾರ ದಿನಬಳಕೆ ವಸ್ತುಗಳು ಸೇರಿದಂತೆ ಎಲ್ಲದರ ಮೇಲು ಜಿಎಸ್‌ಟಿ ಹೆಚ್ಚಳ ಮಾಡಿದ್ದು, ಇದೀಗ ಕಳೆದ ಕೆಲವು ದಿನಗಳ ಹಿಂದೆ ಕೇಂದ್ರ ದಿನಬಳಕೆ ವಸ್ತುಗಳ ಮೇಲೆ ಜಿಎಸ್‌ಟಿ ಕಡಿತಗೊಳಿಸಿದೆ. ಇದರಿಂದ ರಾಜ್ಯಕ್ಕೆ 15 ಕೋಟಿ ರೂಪಾಯಿ ನಷ್ಟವಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಮೈಸೂರಿನಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ದಿನಬಳಕೆ ವಸ್ತುಗಳ ಮೇಲಿನ ಜಿಎಸ್​ಟಿ ಕಡಿತ ಮಾಡಿದ ವಿಚಾರವಾಗಿ ಜಿಎಸ್‌ಟಿ ಕಡಿತದಿಂದ ನಮಗೆ 15 ಕೋಟಿ ರೂಪಾಯಿ ನಷ್ಟವಾಗುತ್ತಿದೆ. ಕಡಿಮೆ ಮಾಡಿದನ್ನ ಸ್ವಾಗತಿಸಬೇಕು ನಷ್ಟ ನಾವೇ ಅನುಭವಿಸಬೇಕು. ಎಂಟು ವರ್ಷ ಕೇಂದ್ರ ಸರ್ಕಾರ ಅತಿ ಹೆಚ್ಚು ಜಿಎಸ್‌ಟಿ ವಸೂಲಿ ಮಾಡಿದೆ. ಆ ಹಣವನ್ನು ಈಗ ವಾಪಸ್ ಕೊಡುತ್ತಾರಾ? ಜಾಸ್ತಿ ಮಾಡುವುದು ಇವರೇ ಕಡಿಮೆ ಮಾಡುವುದು ಇವರೇ ಚುನಾವಣೆ ಗೋಸ್ಕರ ಕೇಂದ್ರ ಸರ್ಕಾರ ಜಿಎಸ್‌ಟಿ ಕಡಿತ ಮಾಡಿದೆ. ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ತೆರಿಗೆ ಹಣ ಬಿಡುಗಡೆ ವಿಚಾರವಾಗಿ ರಾಜಕೀಯ ಮೊದಲಿನಿಂದಲೂ ಕೇಂದ್ರದಿಂದ…

Read More

ತಮಿಳುನಾಡು : ಕನ್ನಡ, ತಮಿಳು, ತೆಲುಗು ಸೇರಿದಂತೆ ಅನೇಕ ಭಾಷೆಗಳಲ್ಲಿ ನಟಿಸಿ ಹೆಸರುವಾಸಿಯಾದ ಖ್ಯಾತ ಬಹುಭಾಷಾ ನಟಿ ತ್ರಿಷಾ ಮನೆಗೆ ಬಾಂಬ್ ಸ್ಪೋಟಿಸುವ ಬೆದರಿಕೆ ಕರೆ ಬಂದಿದೆ. ಹೌದು ಬೆಳ್ಳಂಬೆಳಿಗ್ಗೆ ಪೊಲೀಸರಿಗೆ ವಿಪರೀತ ಕೆಲಸ ಕೊಟ್ಟಿದ್ದಾರೆ ಕೆಲ ದುರುಳರು. ಖ್ಯಾತ ನಟಿ ತ್ರಿಷಾ ಸೇರಿದಂತೆ ಹಲವು ಮನೆಗಳಲ್ಲಿ ಬಾಂಬ್ ಇರಿಸಿರುವುದಾಗಿ ಬೆದರಿಕೆ ಹಾಕಿದ್ದಾರೆ. ಚೆನ್ನೈ ಪೊಲೀಸರು ತ್ರಿಷಾ ಹಾಗೂ ಇನ್ನೂ ಕೆಲವು ಸೆಲೆಬ್ರಿಟಿಗಳು, ರಾಜಕಾರಣಿಗಳ ಮನೆಗಳಿಗೆ ಶ್ವಾನದಳದೊಟ್ಟಿಗೆ ತೆರಳಿ ತನಿಖೆ ನಡೆಸಿದ್ದು, ಬಾಂಬ್ ಕರೆಗಳು ನಕಲಿ ಎಂದು ಸ್ಪಷ್ಟನೆ ನೀಡಿದ್ದಾರೆ. ನಟ ವಿಜಯ್ ಅಭಿಮಾನಿಗಳ ಕೃತ್ಯ? ನಟ ವಿಜಯ್ ಅವರ ಅಭಿಮಾನಿಗಳದ್ದೇ ಈ ಕೆಲಸ ಆಗಿರಬಹುದು ಎಂಬ ಅನುಮಾವನ್ನು ನೆಟ್ಟಿಗರು ವ್ಯಕ್ತಪಡಿಸಿದ್ದಾರೆ. ವಿಜಯ್ ಅವರ ರಾಜಕೀಯ ರ್ಯಾಲಿಯಲ್ಲಿ 41 ಮಂದಿ ಮೃತರಾಗಿದ್ದು, ಪ್ರಕರಣದ ಬಗ್ಗೆ ಸಿಎಂ ಸ್ಟಾಲಿನ್ ಅವರು ಗಂಭೀರವಾದ ಆದೇಶಗಳನ್ನು ಪೊಲೀಸರಿಗೆ ನೀಡಿದ್ದಾರೆ. ವಿಜಯ್ ಪಕ್ಷದ ಕೆಲ ಮುಖಂಡರನ್ನು ಈಗಾಗಲೇ ಬಂಧಿಸಲಾಗಿದೆ. ಇನ್ನು ನಟಿ ತ್ರಿಷಾ, ಮೃತರ ಬಗ್ಗೆ ಪೋಸ್ಟ್…

Read More

ಮೈಸೂರು : ಡಿಸೆಂಬರ್ ನಲ್ಲಿ ಹೊಸ ಮನೆ ಗೃಹ ಪ್ರವೇಶ ಮಾಡುತ್ತೇನೆ. ಗೃಹಪ್ರವೇಶ ಒಂದು ಕಾರ್ಯಕ್ರಮಕ್ಕೆ ಯಾರನ್ನು ಆಹ್ವಾನಿಸುವುದಿಲ್ಲ ಎಂದು ಮೈಸೂರಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದರು. ಹೊಸಮನೆ ಕೆಲಸ ಬಹುತೇಕ ಮುಕ್ತಾಯವಾಗಿದೆ. ಈಗಿರುವ ಮನೆ ನನ್ನದಲ್ಲ ಮರಿಸ್ವಾಮಿ ಅವರದು. ಮರಿಸ್ವಾಮಿ ನನಗೆ ಹಾಗೂ ನನ್ನ ಮಗನಿಗೆ ಅನ್ನದಾತರಾಗಿದ್ದಾರೆ. ನನಗೆ ನನ್ನ ಮಗ ಮತ್ತು ಸ್ನೇಹಿತರಿಗೆ ಊಟ ಹಾಕುವುದು ಮರಿಸ್ವಾಮಿ. ಗೃಹಪ್ರವೇಶ ಮಾಡಿದ ಬಳಿಕ ಹೊಸ ಮನೆಗೆ ಹೋಗುತ್ತೇನೆ. ಜನರನ್ನು ಭೇಟಿ ಮಾಡಲು ಈ ಮನೆ ಬೆಳಸಿಕೊಳ್ಳುತ್ತೇನೆ ಎಂದು ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದರು.

Read More

ಬೆಳಗಾವಿ : ಒಂದೆಡೆ ನಿನ್ನೆ ಮುಂದಿನ ವರ್ಷ ನಾನೇ ದಸರಾ ಉದ್ಘಾಟನೆ ಮಾಡುತ್ತೇನೆ ಎಂದು ಹೇಳುವ ಮೂಲಕ ಪೂರ್ಣವಧಿ ನಾನೇ ಸಿಎಂ ಆಗಿರುತ್ತೇನೆ ಎಂದು ಪರೋಕ್ಷವಾಗಿ ಹೇಳಿದ್ದು, ಇನ್ನೊಂದೆಡೆ ಮುಂದಿನ ನವೆಂಬರ್-ಡಿಸೆಂಬರ್ ತಿಂಗಳೊಳಗೆ ರಾಜ್ಯದಲ್ಲಿ ಕ್ರಾಂತಿ ಆಗುವುದು ನಿಶ್ಚಿತ. ಸಿದ್ದರಾಮಯ್ಯ ಮುಖ್ಯಮಂತ್ರಿ ಹುದ್ದೆ ಕಳೆದುಕೊಳ್ಳುವುದು ನೂರಕ್ಕೆ ನೂರರಷ್ಟು ನಿಜ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಭವಿಷ್ಯ ನುಡಿದರು. ಬೆಳೆ ಹಾನಿ ಸಮೀಕ್ಷೆಗೆ ಭೇಟಿ ನೀಡುವ ಮುನ್ನ ಇಂದು ಬೆಳಗಾವಿ ಪ್ರವಾಸಿ ಮಂದಿರದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಅಧಿಕಾರ ಹಂಚಿಕೆ ಸಂಬಂಧ ಒಪ್ಪಂದ ಆಗಿರುವುದು ನಿಜ. ಈಗ ಜಗಳ ಆರಂಭವಾಗಿದೆ‌. ಈಗಾಗಲೇ ಕ್ರಾಂತಿ ಅಂತ ಹೇಳಿ ಸಚಿವ ರಾಜಣ್ಣ ಮನೆಗೆ ಹೋಗಿದ್ದಾರೆ‌.‌ ಸಿದ್ದರಾಮಯ್ಯ ಅಧಿಕಾರ ಬಿಟ್ಟುಕೊಡಲ್ಲ, ಡಿ.ಕೆ.ಶಿವಕುಮಾರ್ ಹಠ ಬಿಡುತ್ತಿಲ್ಲ. ಕಾಂಗ್ರೆಸ್ ಜಗಳದಲ್ಲಿ ಸರ್ಕಾರ ಪತನವಾದರೆ ನಾವೇನೂ ಸರ್ಕಾರ ಮಾಡಲ್ಲ. ನಾವು ಚುನಾವಣೆಗೆ ಹೋಗಲು ಸಿದ್ದರಿದ್ದೇವೆ‌ ಎಂದರು. ಸಿಎಂ ಸಿದ್ದರಾಮಯ್ಯ ಗ್ಯಾಂಗ್‌ಗೆ ಜಾತಿ ಸಮೀಕ್ಷೆ ಮಾತ್ರ ಮುಖ್ಯ. ಜಾತಿಗಳ ಮಧ್ಯೆ ಬೆಂಕಿ…

Read More

ಬೆಂಗಳೂರು : ದೇವಸ್ಥಾನಕ್ಕೆ ಪೂಜೆಗೆ ಹೋಗಿದ್ದಾಗ ಕುಟುಂಬದ ಮೇಲೆ ಅಟ್ಯಾಕ್ ಮಾಡಲಾಗಿದೆ. ಕುಟುಂಬ ಸಮೇತ ಪೂಜೆ ಮುಗಿಸಿ ಬರುವಾಗ ದಾಳಿ ನಡೆಸಲಾಗಿದೆ. ಕೆಆರ್ ಪುರಂ ನ ಬೆಂಡಿಗಾನಹಳ್ಳಿ ಈ ಒಂದು ಘಟನೆ ನಡೆದಿದ್ದು, ಸಿನಿಮಾ ಸ್ಟೈಲ್ ನಲ್ಲಿ ದೊಣ್ಣೆ ಮತ್ತು ಮಾರಕಾಸ್ತ್ರಗಳಿಂದ ಒಂದು ಕುಟುಂಬದ ಮೇಲೆ ಮತ್ತೊಂದು ಕುಟುಂಬದಿಂದ ಹಲ್ಲೆ ನಡೆದಿದೆ. ಕಾಟೇರಮ್ಮ ದೇವಾಲಯದ ಬಳಿ ಮಾರಣಾಂತಿಕವಾಗಿ ಹಲ್ಲೆ ನಡೆಸಲಾಗಿದೆ. ನಾರಾಯಣಸ್ವಾಮಿ ಕಿರಣ್, ಚಂದ್ರು ಹಾಗು ಹತ್ತು ಜನರಿಂದ ಶ್ರೀನಿವಾಸ್ ಕುಟುಂಬದ ಮೇಲೆ ಹಲ್ಲೆ ನಡೆಸಲಾಗಿದ್ದು, ಘಟನೆಯಲ್ಲಿ ಶ್ರೀನಿವಾಸ್, ಮಂಜುಳಾ, ಗಗನ್ ಮತ್ತು ಗಾನವಿಗೆ ಹಲ್ಲೆಯಿಂದ ಗಾಯಗೊಂಡಿದ್ದಾರೆ. ಸಾರ್ವಜನಿಕರ ಎದುರು ದೊಣ್ಣೆ ಮತ್ತು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಲಾಗಿದೆ. ಶ್ರೀನಿವಾಸ್ ಮತ್ತು ಚಂದ್ರು ಕುಟುಂಬದ ನಡುವೆ ಜಮೀನು ವಿವಾದ ಸಂಬಂಧ ಈ ಒಂದು ಘಟನೆ ನಡೆದಿದೆ. ಜಮೀನು ವಿಚಾರವಾಗಿ ಪ್ರಕರಣ ಕೋರ್ಟ್ ನಲ್ಲಿ ಇತ್ತು. ಚಂದ್ರು ಮತ್ತು ಶ್ರೀನಿವಾಸ್ ಮನೆ ಕಾಂಪೌಂಡ್ ವಿಚಾರಕ್ಕೆ ಪ್ರಕರಣ ದಾಖಲಾಗಿತ್ತು. ಈ ಹಿಂದೆಯೂ ಗಲಾಟೆಯಾಗಿ ಕೌಂಟರ್ ಕೇಸ್…

Read More

ವಿಜಯನಗರ : ವಿಜಯನಗರದಲ್ಲಿ ಇನ್ಸೂರೆನ್ಸ್ ಹಣಕ್ಕಾಗಿ ಗ್ಯಾಂಗ್ ಒಂದು ಖತರ್ನಾಕ್ ಐಡಿಯಾ ಮಾಡಿದ್ದು, ವಿಜಯನಗರದ ವಸೂಲಿ ಗ್ಯಾಂಗಿನ ಖತರ್ನಾಕ್ ಪ್ಲಾನ್ ಅನ್ನು ಪೊಲೀಸರು ಬಯಲು ಮಾಡಿದ್ದಾರೆ. ಹಣಕ್ಕಾಗಿ ಕೊಲೆ ಮಾಡಿ ಅಪಘಾತ ಎಂದು ಪ್ಲಾನ್ ಮಾಡಿದ್ದ ಗ್ಯಾಂಗ್ ಅನ್ನು ಪೊಲೀಸರು ಅರೆಸ್ಟ್ ಮಡಿದ್ದಾರೆ. ಮೊಪೆಡ್ ನಲ್ಲಿ ಹೋಗುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ ಹೊಡೆಸಿದ್ದಾರೆ. ಕಾರಿನಿಂದ ಅಪಘಾತ ನಡೆಸಿ ಗ್ಯಾಂಗ್ ಕೊಲೆ ಮಾಡಿತ್ತು. ಗಂಗಾಧರ ಎಂಬತನನ್ನು ಖದೀಮರು ಕೊಲೆ ಮಾಡಿದ್ದಾರೆ. ಹೊಸಪೇಟೆ ನಗರದ ಕೌಲ್ ಪೇಟೆ ನಿವಾಸಿ ಗಂಗಾಧರ ಕೊಲೆ ಮಾಡಿದ್ದಾರೆ. ಕೊಲೆ ಮಾಡಿ ಅಪಘಾತ ಎಂದು ಬಿಂಬಿಸಿದ್ದಾರೆ. ಹೊಸಪೇಟೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ. ಇನ್ನು ಕೊಲೆಯಾದ ಗಂಗಾಧರನ ಹೆಂಡತಿ ಶಾರದಾ ದೂರು ನೀಡಿದ್ದಾರೆ. ಗಂಗಾಧರ್ ಪತ್ನಿ ನೀಡಿದ ದೂರಿನ ಹಿನ್ನೆಲೆಯಲ್ಲಿ ಪೊಲೀಸರು ತನಿಖೆ ನಡೆಸಿದ್ದಾರೆ. ಮಹಿಳೆ ಸೇರಿ ಒಟ್ಟು ಪೊಲೀಸರು 6 ಜನರನ್ನು ಅರೆಸ್ಟ್ ಮಾಡಿದ್ದಾರೆ ನಕಲಿ ಹೆಂಡತಿ ಹುಲಿಗೆಮ್ಮಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಕೊಪ್ಪಳದ…

Read More

ಶಿವಮೊಗ್ಗ : ರಾಜ್ಯದಲ್ಲಿ ಬೆಚ್ಚಿ ಬೀಳಿಸುವ ಘಟನೆ ಒಂದು ನಡೆದಿದ್ದು, ಪುತ್ರಿಯನ್ನು ಮಚ್ಚಿನಿಂದ ಕೊಲೆ ಮಾಡಿ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದ್ದು, ಮಚ್ಚಿನಿಂದ ಕೊಚ್ಚಿ ತಾಯಿ ಸೂಸೈಡ್ ಮಾಡಿಕೊಂಡಿದ್ದಾರೆ. ಶಿವಮೊಗ್ಗದ ಜಿಲ್ಲಾ ಆಸ್ಪತ್ರೆಯ ಕ್ವಾಟರ್ಸ್ ನಲ್ಲಿ ಈ ಒಂದು ಘಟನೆ ನಡೆದಿದೆ. ಕೊಲೆ ಮಾಡಿ 36 ವರ್ಷದ ಶ್ರುತಿ ಪುತ್ರಿ ಪೂರ್ವಿಕಳನ್ನು (11) ಮಚ್ಚಿನಿಂದ ಕೊಂದ ಬಳಿಕ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಶಿವಮೊಗ್ಗದ ಶರಾವತಿ ನಗರದಲ್ಲಿ ಜಿಲ್ಲಾ ಆಸ್ಪತ್ರೆ ಕ್ವಾರ್ಟರ್ ನಲ್ಲಿ ಈ ಘಟನೆ ನಡೆದಿದ್ದು ಪತಿ ರಾಮಣ್ಣ ಕೆಲಸಕ್ಕೆ ತೆರಳಿದ್ದಾಗ ಪುತ್ರಿಯನ್ನು ಕೊಂದು ಶೃತಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಡ್ಯೂಟಿ ಮುಗಿಸಿ ರಾಮಣ್ಣ ಮನೆಗೆ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಮೇಲ್ನೋಟಕ್ಕೆ ಶೃತಿ ಮಾನಸಿಕ ಅಸ್ವಸ್ಥತೆ ಎಂದು ತಿಳಿದುಬಂದಿದೆ. ಈ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಘಟನೆ ಕುರಿತು ಪರಿಶೀಲನೆ ನಡೆಸುತ್ತಿದ್ದಾರೆ.

Read More

ಚಾಮರಾಜನಗರ : ಕಳೆದ ಕೆಲವು ದಿನಗಳ ಹಿಂದೆ ಚಾಮರಾಜನಗರ ಜಿಲ್ಲೆಯ ಮಾದಪ್ಪನ ಬೆಟ್ಟದಲ್ಲಿ 5 ಹುಲಿಗಳಿಗೆ ವಿಷ ಉಣಿಸಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ನಡೆದಿತ್ತು, ಇದೀಗ ಆ ಮತ್ತೊಂದು ಘಟನೆ ವರದಿಯಾಗಿದ್ದು, ಮಾದಪ್ಪನ ಬೆಟ್ಟದಲ್ಲಿ ಹುಲಿಯ ಅರ್ಧ ಕಳೆಬರ ಪತ್ತೆ ಆಗಿರುವ ಘಟನೆ ನಡೆದಿದೆ. ಮಲೆ ಮಹದೇಶ್ವರ ಬೆಟ್ಟದ ಪಚೆದೊಡ್ಡಿ ಗ್ರಾಮದ ಹತ್ತಿರ ಹುಲಿಯ ಅರ್ಧ ಕಳೆಬರಹ ಪತ್ತೆಯಾಗಿದೆ. ಹುಲಿಯ ಅರ್ಧ ಕಳೆಬರ ಹುದಗಿಸಿಟ್ಟಿದ್ದು ಪತ್ತೆಯಾಗಿದೆ. ಹುಲಿಯ ತಲೆ, ಭುಜ ಮುಂಗಾಲುಗಳು ಮಾತ್ರ ಪತ್ತೆಯಾಗಿದ್ದು, ಉಳಿದ ಭಾಗಗಳು ನಾಪತ್ತೆಯಾಗಿವೆ. ಈ ಕುರಿತು ಅಧಿಕಾರಿಗಳು ಶೋಧ ನಡೆಸುತ್ತಿದ್ದಾರೆ. ಹುಲಿಯ ಕಳ್ಳ ಬೇಟೆ ಆಡಿರುವ ಬಗ್ಗೆ ಅಧಿಕಾರಿಗಳಿಗೆ ಅನುಮಾನ ವ್ಯಕ್ತವಾಗಿದೆ. ಇನ್ನು ಹುಲಿ ನಿಗೂಢ ಸಾವಿನ ತನಿಖೆಗೆ ಈಶ್ವರ ಖಂಡ್ರೆ ಆದೇಶ ನೀಡಿದ್ದಾರೆ. ಪಿಸಿಸಿಎಫ್ ಸ್ಮಿತಾ ಬಿಜ್ಜುರು ನೇತೃತ್ವದಲ್ಲಿ ತನಿಖೆಗೆ ಆದೇಶ ನೀಡಿದ್ದಾರೆ. ಎಂಟು ದಿನಗಳಲ್ಲಿ ಘಟನೆ ಕುರಿತು ವರದಿ ಸಲ್ಲಿಸುವಂತೆ ಈಶ್ವರ ಖಂಡ್ರೆ ಖಡಕ್ ಸೂಚನೆ ಕೊಟ್ಟಿದ್ದಾರೆ. ಹುಲಿ ಹಂತಕರನ್ನು ಪತ್ತೆ…

Read More

ಶಿವಮೊಗ್ಗ : ರಾಜ್ಯದಲ್ಲಿ ಕಳೆದ ಸೆಪ್ಟೆಂಬರ್ 22 ರಿಂದ ಸಾಮಾಜಿಕ ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಆರಂಭವಾಗಿದ್ದು ಆರಂಭದಲ್ಲಿ ಸರ್ವರ್ ಹಾಗೂ ಕೆಲವು ತಾಂತ್ರಿಕ ದೋಷಗಳು ಕಂಡು ಬಂದು ಸಮೀಕ್ಷೆ ಕುಂಟಿತವಾಗಿತ್ತು ಇದೀಗ ರಾಜ್ಯದಲ್ಲಿ 56 ರಷ್ಟು ಸಮೀಕ್ಷೆ ಪೂರ್ಣಗೊಂಡಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಸ್ಪಷ್ಟಪಡಿಸಿದ್ದಾರೆ. ಶಿವಮೊಗ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಜಾತಿ ಜಾತಿ ನಡುವೆ ಬೆಂಕಿ ಹಚ್ಚುತ್ತಿದ್ದಾರೆ ಎನ್ನುವ ಆರೋಪದ ವಿಚಾರವಾಗಿ ಬಿಜೆಪಿ ನಾಯಕರಿಗೆ ಈ ರೀತಿ ಹೇಳೋದಕ್ಕೆ ನಾಚಿಕೆ ಆಗಬೇಕು. ಸಂವಿಧಾನದ ಮೇಲೆ ಪ್ರಮಾಣ ಮಾಡಿ ಜಾತಿಗಣತಿ ವಿರೋಧಿಸುತ್ತಿದ್ದಾರೆ. ಈಗ ಶೇಕಡ 56 ರಷ್ಟು ಸಮೀಕ್ಷೆ ಆಗಿದೆ ಎಂದು ಸ್ಪಷ್ಟಪಡಿಸಿದರು. ಸಾಮಾಜಿಕ ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಯಶಸ್ವಿ ಆಗಲಿದೆ. ಪ್ರಣಾಳಿಕೆಯಲ್ಲಿ ಜಾತಿ ಗಣತಿ ಮಾಡುವುದಾಗಿ ಉಲ್ಲೇಖ ಮಾಡಿದ್ದೆವು. ಯಡಿಯೂರಪ್ಪರಿಂದಲೇ ಜಾತಿಗಳ ನಡುವೆ ಭೇದ ಭಾವ ಆಗಿದ್ದು ಬಿ.ವೈ ವಿಜಯೇಂದ್ರ ಹಿಂದುಳಿದ ವರ್ಗದವರ ಅಭಿವೃದ್ಧಿ ಬೇಡವಾಗಿದೆ ಎಂದು ಶಿವಮೊಗ್ಗದಲ್ಲಿ ಬಿವೈ ವಿಜಯೇಂದ್ರ ವಿರುದ್ಧ…

Read More

ಬೆಂಗಳೂರು : ಬೆಂಗಳೂರಲ್ಲಿ ಗಣೇಶ ಉತ್ಸವ ವೇಳೆ ಬೆಚ್ಚಿ ಬೀಳಿಸಿದ್ದ ಸರಗಳ್ಳನನ್ನ ಇದೀಗ ಅರೆಸ್ಟ್ ಮಾಡಲಾಗಿದೆ. ಸರಗಳ್ಳ ಕೆಂಗೇರಿಯ ಪ್ರವೀಣನ್ನು ಇದೀಗ ಗಿರಿನಗರ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ರಾಮನಗರ ಮೂಲದ ಮತ್ತೋರ್ವ ಕಳ್ಳ ಯೋಗಾನಂದಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಸೆಪ್ಟೆಂಬರ್ 14ರ ರಾತ್ರಿ 5 ಕಡೆ ಪ್ರವೀಣ್ ಮತ್ತು ಯೋಗಾನಂದ ಸರಗಳು ತರ ಮಾಡಿದ್ದರು. ಗಿರಿನಗರ, ಹನುಮಂತನಗರ ಕೋಣನಕುಂಟೆಯಲ್ಲಿ ಸರಗಳ್ಳತನ ಮಾಡಿದ್ದರು. ಮಹಿಳೆಯರ ಕುತ್ತಿಗೆಗೆ ಲಾಂಗ್ ಇಟ್ಟು ದುಷ್ಟರು ಸರಗಳ್ಳತನ ಮಾಡಿದ್ದರು. ಈ ವೇಳೆ ಮಹಿಳೆ ಒಬ್ಬರು ವಿರೋಧ ವ್ಯಕ್ತಪಡಿಸಿದಕ್ಕೆ ಮಹಿಳೆ ಮೇಲೆ ಲಾಂಗ್ ಬೀಸಿದ್ದರು. ಸರಗಳ ಲಾಂಗ್ ಏಟಿಗೆ ಮಹಿಳೆಯ ಕೈಬೆರಳು ತುಂಡಾಗಿದ್ದವು. ಇದೀಗ ಗಿರಿನಗರಠಾಣೆ ಪೊಲೀಸರು ಪ್ರವೀಣ್ ನನ್ನ ಅರೆಸ್ಟ್ ಮಾಡಲಾಗಿದೆ. ಪ್ರವೀಣ್ ಅನ್ನು ಬಂಧಿಸುತ್ತಿದ್ದಂತೆ ಯೋಗಾನಂದ ಪರಾರಿ ಆಗಿದ್ದಾನೆ. ಸೆಂಟ್ರಲ್ ರೈಲಿನಲ್ಲಿ ಪ್ರವೀಣ್ ಮತ್ತು ಯೋಗಾನಂದ ಪರಸ್ಪರ ಪರಿಚಯವಾಗಿದ್ದಾರೆ. ಜೈಲಿನಿಂದ ಹೊರಬಂದ ನಂತರವೂ ಇಬ್ಬರೂ ಸರಗೊಳ್ಳತನ ಮುಂದುವರಿಸಿದರು.

Read More