Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಸದ್ಯ ರಾಜ್ಯ ಸರ್ಕಾರಕ್ಕೆ ಜಾತಿ ಗಣತಿ ವರದಿ ಬಿಡುಗಡೆ ಕುರಿತು ವಿಕಟಿನ ಪರಿಸ್ಥಿತಿ ಎದುರಾಗಿದೆ ಏಕೆಂದರೆ ಈ ಕುರಿತು ನಾಳೆ ವಿಶೇಷ ಸಂಪುಟ ಸಭೆ ಕರೆಯಲಾಗಿದ್ದು ಸಭೆಯಲ್ಲಿ ಜಾತಿಗಣತಿ ವರದಿ ಕುರಿತಂತೆ ಮಹತ್ವದ ತೀರ್ಮಾನ ಕೈಗೊಳ್ಳಲಾಗುತ್ತದೆ ಇದರ ಬೆನ್ನಲ್ಲೇ ಜಾತಿಗಣತಿ ವರದಿ ಬಿಡುಗಡೆ ಮಾಡದೇ ಹೋದರೆ ಬೀದಿ ಬೀದಿಗಳಲ್ಲಿ ದಂಗೆ ಏಳುತ್ತೇವೆ ಎಂದು ಶೋಷಿತ ಒಕ್ಕೂಟದ ಸಂಚಾಲಕ ರಾಮಚಂದ್ರಪ್ಪ ಎಚ್ಚರಿಕೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸರ್ಕಾರ ಯಾರದೇ ಹಾಗೂ ಯಾವುದೇ ಒತ್ತಾಯಕ್ಕೆ ಮಣಿಯದೆ ರಾಜ್ಯ ಸರ್ಕಾರ ಜಾತಿಗಣತಿ ವರದಿ ಜಾರಿ ಮಾಡಬೇಕು. ಜಾತಿ ಗಣತಿ ವರದಿಯನ್ನು ಸರಕಾರ ಬಿಡುಗಡೆ ಮಾಡಬೇಕು. ಅಕಸ್ಮಾತ್ ವರದಿ ವಾಪಾಸ್ ತಗೊಂಡ್ರೆ ರಾಜ್ಯಾದ್ಯಂತ ಬೀದಿ ಬೀದಿಯಲ್ಲಿ ದಂಗೆ ಏಳುತ್ತೇವೆ ಎಂದು ಶೋಷಿತ ಒಕ್ಕೂಟದ ಸಂಚಾಲಕ ರಾಮಚಂದ್ರಪ್ಪ ಎಚ್ಚರಿಕೆ ನೀಡಿದ್ದಾರೆ. ವರದಿ ವಾಪಸ್ ತಗೊಂಡ್ರೆ ಬೀದಿ ಬೀದಿಯಲ್ಲಿ ದಂಗೆ ಏಳುತ್ತೇವೆ. ವರದಿ ಬಿಡುಗಡೆ ಮಾಡಬಾರದು ಅಂದರೆ ಅವರ ಜಾಗೀರಾ? ನಾವು ಯಾವುದೇ ಹೋರಾಟಕ್ಕೂ ಸಿದ್ಧರಿದ್ದೇವೆ…
ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ 5 ವರ್ಷದ ಬಾಲಕಿಗೆ ಚಾಕ್ಲೆಟ್ ಆಸೆ ತೋರಿಸಿ ಅತ್ಯಾಚಾರಕ್ಕೆ ಯತ್ನಿಸಿ ಬಳಿಕ ಕುತ್ತಿಗೆ ಹಿಚುಕಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಇದೀಗ ಪೊಲೀಸರು ಗುಂಡೇಟಿಗೆ ಬಲಿಯಾದಂತಹ ಆರೋಪಿ ಫೋಟೋವನ್ನು ರಿಲೀಸ್ ಮಾಡಿದ್ದಾರೆ. ಹೌದು ಎನ್ಕೌಂಟರ್ಗೆ ಬಲಿಯಾದ ರಿತೇಶ್ ಕುಮಾರ್ (35) ಭಾವಚಿತ್ರವನ್ನು ಪೊಲೀಸರು ಬಿಡುಗಡೆ ಮಾಡಿದ್ದಾರೆ. ಹುಬ್ಬಳ್ಳಿಯ ಕಿಮ್ಸ್ ಶವಗಾರದಲ್ಲಿ ಹಂತಕನ ಶವ ಅನಾಥವಾಗಿ ಬಿದ್ದಿದೆ. ಕುಟುಂಬಸ್ಥರ ಪತ್ತೆಗೆ ಹುಬ್ಬಳ್ಳಿಯ ಅಶೋಕನಗರ ಪೊಲೀಸ್ ಠಾಣೆಯು ಭಾವಚಿತ್ರ ಸಹಿತ ಪ್ರಕಟಣೆ ಹೊರಡಿಸಿದೆ. ಈತ ಗೋದಿ ಮೈಬಣ್ಣ, ತೆಳ್ಳನೆಯ ಮೈಕಟ್ಟು, ಕೋಲು ಮುಖ, 5.3 ಎತ್ತರ, ಅಗಲ ಹಣೆ ಹೊಂದಿದ್ದಾನೆ. ಅಲ್ಲದೇ, ಈತನ ಬಲಗೈಯಲ್ಲಿ ಹಿಂದಿ ಅಕ್ಷರದಲ್ಲಿ ‘ಓಂ ನಮಃ ಶಿವಾಯ ಜಯ ಸಂಜಯ’ ಎಂಬ ಟ್ಯಾಟು ಗುರುತು ಸಹ ಇದೆ. ಈತನ ಗುರುತು ಪರಿಚಯ ಇದ್ದವರು ಕೂಡಲೇ 0836-2233490 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಲಾಗಿದೆ. ಘಟನೆ ಹಿನ್ನೆಲೆ? ಕೆಲ ದಿನಗಳ ಹಿಂದಷ್ಟೆ 5 ವರ್ಷದ ಬಾಲಕಿ ಮೇಲೆ…
ಹಾವೇರಿ : ಜಾತಿಗಣವತಿ ವರದಿ ಪಾರದರ್ಶವಕಾಗಿ ಆಗಿಲ್ಲ ಎಂದು ಎಲ್ಲರಿಗೂ ಗೊತ್ತಿದೆ. ಹೀಗಾಗಿ ಜಾತಿಗಣತಿ ವರದಿ ಜಾರಿಯಾಗಬಾರದು. ಅಲ್ಲದೆ ವೀರಶೈವ ಲಿಂಗಾಯತ ಸಮುದಾಯದ ಪ್ರತ್ಯೇಕ ಜಾತಿಗಣತಿ ಕಾರ್ಯ ನಡೆಯಲಿದೆ ಎಂದು ರಂಭಾಪುರಿ ಶ್ರೀಗಳು ಹೇಳಿಕೆ ನೀಡಿದರು. ಹಾವೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ವೀರಶೈವ ಲಿಂಗಾಯತ ಜಾತಿ ಗಣತಿಯು ಶಂಕರ ಬಿದರಿ ನೇತೃತ್ವದಲ್ಲಿ ನಡೆಯಲಿದೆ. ವೀರಶೈವ ಲಿಂಗಾಯತ ಒಕ್ಕಲಿಕ ಸಮಾಜವನ್ನು ವಿಭಜಿಸಿದ್ದು ಸರಿಯಲ್ಲ. ರಾಜಕೀಯ ಲಾಭ ಕೆಲ ಸಮುದಾಯಗಳ ಓಲೈಕೆಗೆ ವರದಿ ಜಾರಿಗೆ ಯತ್ನಿಸಲಾಗಿದೆ. ಜಾತಿಗಣತಿ ವರದಿಯನ್ನು ಮರು ಪರಿಶೀಲನೆ ಮಾಡಿ ಜಾರಿಗೊಳಿಸಬೇಕು. ಕಾಂಗ್ರೆಸ್ ಮುಸ್ಲಿಂ ಸಮುದಾಯವನ್ನು ಎತ್ತಿ ಕಟ್ಟುವ ಕೆಲಸ ಮಾಡಬಾರದು. ಬಿಜೆಪಿಯವರು ಹಿಂದೂಗಳನ್ನು ಎತ್ತಿ ಕಟ್ಟುವ ಕೆಲಸ ಮಾಡಬಾರದು ಎಂದು ಹಾವೇರಿ ತಾಲೂಕಿನ ಗುತ್ತಲ ಪಟ್ಟಣದಲ್ಲಿ ರಂಭಾಪುರ ಶ್ರೀ ಹೇಳಿಕೆ ನೀಡಿದರು. ಸರ್ಕಾರ ಪತನ ರಾಜ್ಯದಲ್ಲಿ ಜಾತಿಗಣತಿ ವರದಿ ಜಾರಿಯಾದ್ರೆ ಸರ್ಕಾರ ಪತನವಾಗಲಿದೆ ಎಂದು ಹಾವೇರಿಯಲ್ಲಿ ರಂಭಾಪುರಿ ಶ್ರೀಗಳು ಭವಿಷ್ಯ ನುಡಿದಿದ್ದಾರೆ.ಜಾತಿ ಗಣತಿ ಜಾರಿಯಾದ್ರೆ ಸರ್ಕಾರ ಪತನವಾಗುತ್ತೆ ಅಂತ…
ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿ ಮಾಡಿರುವ 5ಗ್ಯಾರಂಟಿ ಯೋಜನೆಗಳಲ್ಲಿ ಗೃಹಲಕ್ಷ್ಮಿ ಯೋಜನೆ ಕೂಡ ಒಂದು. ಈಗಾಗಲೇ ರಾಜ್ಯದ ಮಹಿಳಾ ಮಣಿಯರ ಖಾತೆಗೆ ಸರ್ಕಾರ ಪ್ರತಿ ತಿಂಗಳು ಬಂದ 2000 ರೂ. ಹಣವನ್ನು ಜಮಾ ಮಾಡುತ್ತಿದೆ. ಈ ಗೃಹ ಲಕ್ಷ್ಮಿ ಹಣವನ್ನ ಕೂಡಿಟ್ಟು ಅನೇಕ ಮಹಿಳೆಯರು ಸದುಪಯೋಗ ಪಡಿಸಿಕೊಂಡಂತಹ ನಿರ್ದರ್ಶನಗಳು ನೋಡಿದ್ದೇವೆ. ಇದೀಗ ಫೆಬ್ರವರಿ ಮತ್ತು ಮಾರ್ಚ್ ತಿಂಗಳ ಲಕ್ಷ್ಮಿ ಯೋಜನೆ ಹಣ ಬಂದಿಲ್ಲ ಎಂದು ಯಜಮಾನಿಯರ ಆರೋಪವಾಗಿತ್ತು. ಈ ಕುರಿತಾಗಿ ಇದೀಗ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತೊಂದು ಅಪ್ಡೇಟ್ ನೀಡಿದ್ದು,ಫೆಬ್ರವರಿ ತಿಂಗಳ ಬಳ ಏಪ್ರಿಲ್ ಎರಡನೇ ವಾರದಂದು ಮಹಿಳೆಯರ ಖಾತೆಗೆ ಜಮಾ ಆಗಲಿದೆ ಎಂದು ಹೇಳಿದ್ರು. ಇದೀಗ ಫೆಬ್ರವರಿ ಹಾಗೂ ಮಾರ್ಚ್ ತಿಂಗಳ ಹಣ ಆದಷ್ಟು ಶೀಘ್ರದಲ್ಲಿ ಮಹಿಳೆಯವರ ಖಾತೆಗೆ ಜಮಾ ಆಗಲಿದೆ ಎಂದು ತಿಳಿದು ಬಂದಿದೆ. ಈಗಾಗಲೇ ಜನವರಿ ತಿಂಗಳ ಗೃಹಲಕ್ಷ್ಮಿ ಹಣವನ್ನು ಕಳೆದ ಯುಗಾದಿ ಹಬ್ಬದ ಸಂದರ್ಭದಲ್ಲಿ ಮಹಿಳೆಯರ ಖಾತೆಗೆ ಜಮೆ ಮಾಡಲಾಗಿತ್ತು.ಫೆಬ್ರವರಿ ಹಾಗೂ ಮಾರ್ಚ್…
ಬೆಂಗಳೂರು : ಇಂಡಿಯಾ ಜಸ್ಟೀಸ್ ರಿಪೋರ್ಟ್ (IGR) 2025 ರ ಪ್ರಕಾರ, ಕರ್ನಾಟಕವು ನ್ಯಾಯಾಂಗ ಮತ್ತು ಪೊಲೀಸ್ ವ್ಯವಸ್ಥೆಗಳಲ್ಲಿ ಅಗ್ರಸ್ಥಾನ ಪಡೆದಿದೆ. ದಕ್ಷಿಣ ಭಾರತದ ರಾಜ್ಯಗಳು ಉತ್ತಮ ಪ್ರದರ್ಶನ ತೋರಿದರೆ, ಉತ್ತರ ಭಾರತದ ರಾಜ್ಯಗಳು ಹಿಂದುಳಿದಿವೆ. ಆಂಧ್ರಪ್ರದೇಶ ಮತ್ತು ತೆಲಂಗಾಣ ಕ್ರಮವಾಗಿ ಎರಡನೇ ಮತ್ತು ಮೂರನೇ ಸ್ಥಾನಗಳಲ್ಲಿವೆ. ಈ ವರದಿಯು ನ್ಯಾಯ ಒದಗಿಸುವ ಸಾಮರ್ಥ್ಯದಲ್ಲಿ ರಾಜ್ಯಗಳನ್ನು ಶ್ರೇಣೀಕರಿಸುತ್ತದೆ. ಭಾರತ ನ್ಯಾಯ ವರದಿ (ಐಜೆಆರ್) 2025 ರಲ್ಲಿ ಕರ್ನಾಟಕ ತನ್ನ ಅಗ್ರ ಸ್ಥಾನವನ್ನು ಉಳಿಸಿಕೊಂಡಿದೆ, ಕಳೆದ ವರ್ಷ ಹೊಂದಿದ್ದ ಶ್ರೇಯಾಂಕವನ್ನು ಉಳಿಸಿಕೊಂಡಿದೆ. ಪೊಲೀಸ್, ನ್ಯಾಯಾಂಗ, ಕಾರಾಗೃಹಗಳು ಮತ್ತು ಕಾನೂನು ನೆರವಿನಲ್ಲಿ ರಾಜ್ಯಗಳ ಸಾಮರ್ಥ್ಯದ ಆಧಾರದ ಮೇಲೆ ಐಜೆಆರ್ ಸ್ಥಾನ ಪಡೆದಿದೆ. ಕಳೆದ ವರ್ಷ ಐದನೇ ಸ್ಥಾನ ಪಡೆದ ಆಂಧ್ರಪ್ರದೇಶ ಎರಡನೇ ಸ್ಥಾನದಲ್ಲಿದೆ. 2019 ರಲ್ಲಿ ಹನ್ನೊಂದನೇ ಸ್ಥಾನ ಪಡೆದಿದ್ದ ತೆಲಂಗಾಣ ತನ್ನ ಮೂರನೇ ಸ್ಥಾನವನ್ನು ಉಳಿಸಿಕೊಂಡಿದೆ. ಇನ್ನು ಪೊಲೀಸ್, ನ್ಯಾಯಾಂಗ, ಕಾರಾಗೃಹಗಳು ಮತ್ತು ಕಾನೂನು ನೆರವಿನಲ್ಲಿ ರಾಜ್ಯಗಳ ಸಾಮರ್ಥ್ಯದ ಆಧಾರದ ಮೇಲೆ ಐಜೆಆರ್…
ಈ ಅದೃಷ್ಟ ಅನ್ನೋದು ಒಂದು ರೀತಿ ಜಾಕ್ ಪಾಟ್ ಇದ್ದಂತೆ. ಯಾರು ಯಾವಾಗ ಬೇಕಾದರೂ ಶ್ರೀಮಂತರಾಗಬಹುದು, ಯಾವಾಗ ಬೇಕಾದರೂ ಎಲ್ಲವನ್ನು ಕಳೆದುಕೊಂಡು ಬೀದಿಗೆ ಬರಬಹುದು. ಇದೀಗ ಈ ಒಂದು ಅದೃಷ್ಟದ ಘಟನೆ ನಡೆದಿದ್ದು ಚಿಲಿಯಲ್ಲಿ, ತನ್ನ ತಂದೆಯ ಹಳೆಯ ಪಾಸ್ ಬುಕ್ ನಿಂದಲೇ ಅದೃಷ್ಟ ಖುಲಾಯಿಸಿದೆ. ಚಿಲಿಯ ಎಕ್ಸೆಕ್ವಿಯಲ್ ಹಿನೊಜೋಸಾ ತನ್ನ ತಂದೆಯ ಹಳೆಯ ಪಾಸ್ ಬುಕ್ ನಿಂದಲೇ ರಾತ್ರೋರಾತ್ರಿ ಕೋಟ್ಯಾಧಿಪತಿಯಾಗಿದ್ದಾನೆ. ತಂದೆ ಮರಣ ಹೊಂದಿದ ಹತ್ತು ವರ್ಷದ ಬಳಿಕ ಹಿನೊಜೋಸಾ ನಿಗೆ ತನ್ನ ತಂದೆಯ ಪಾಸ್ ಬುಕ್ ವೊಂದು ಸಿಕ್ಕಿದೆ. ಈ ಪಾಸ್ಬುಕ್ ಅನ್ನು 1960-70ರ ದಶಕದ್ದಾಗಿತ್ತು. ಹೌದು, ಮನೆ ಸ್ವಚ್ಛಗೊಳಿಸುತ್ತಿದ್ದಾಗ ಈ ಪಾಸ್ ಬುಕ್ ಸಿಕ್ಕಿದ್ದು, ವೇಸ್ಟ್ ಕಾಗದ ಎಂದುಕೊಂಡು ಅದರ ಬಗ್ಗೆ ಅಷ್ಟೇನು ತಲೆ ಕೆಡಿಸಿಕೊಳ್ಳಲಿಲ್ಲ. ಆಮೇಲೆ ಅದನ್ನು ಸೂಕ್ಷ್ಮವಾಗಿ ಗಮನಿಸಿದಾಗ ತಂದೆಯ ಪಾಸ್ ಬುಕ್ ಎಂದು ತಿಳಿಯಿತು. ಮಗನಿಗೆ ಗೊತ್ತಿಲ್ಲದ್ದಂತೆ ಆತನ ಹೆಸರಿನಲ್ಲಿ 1.40 ಲಕ್ಷ (ಚಿಲಿಯ ಪೈಸೆಗಳಲ್ಲಿ) ಠೇವಣಿ ಇಟ್ಟಿದ್ದರು ಎನ್ನುವುದು ತಿಳಿಯಿತು. ಹೀಗಾಗಿ…
ನವದೆಹಲಿ : ನ್ಯಾಷನಲ್ ಹೆರಾಲ್ಡ್ ಹಣಕಾಸು ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಮುಖ ಪಾತ್ರವಹಿಸಿರುವ ಜಾರಿ ನಿರ್ದೇಶನಾಲಯ (ED) ಇದೀಗ ಕಾಂಗ್ರೆಸ್ ಮುಖಂಡರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದೆ. ಇಂದು ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯಕ್ಕೆ ED ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಗಿದೆ. ಗಾಂಧಿ ಕುಟುಂಬಕ್ಕೆ ಸೇರಿದ 700 ಕೋಟಿ ಮೌಲ್ಯದ ಆಸ್ತಿ ಜಪ್ತಿಗೆ ಸಿದ್ಧತೆ ಮಾಡಿಕೊಂಡಿದ್ದು, ಪ್ರಕರಣದ ವಿಚಾರಣೆಯನ್ನು ಈ ವೇಳೆ ನ್ಯಾಯಾಲಯ ಏಪ್ರಿಲ್ 25ಕ್ಕೆ ಮುಂದೂಡಿತು. ಗಾಂಧಿ ಕುಟುಂಬದ ವಿರುದ್ಧ ಇಡಿಯಿಂದ ಇಂದು ಮೊದಲ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಯಿತು. ಬರೋಬ್ಬರಿ 661 ಕೋಟಿ ರೂ. ಮುಟ್ಟುಗೊಲು ಇಡೀ ಪ್ರಕರಣದ ಹಿಂದಿನ ಹಿನ್ನೆಲೆ 2014ರಲ್ಲಿ ಡಾ. ಸುಬ್ರಮಣಿಯನ್ ಸ್ವಾಮಿ ದೆಹಲಿ ನ್ಯಾಯಾಲಯದಲ್ಲಿ ಸಲ್ಲಿಸಿದ ಖಾಸಗಿ ದೂರಿನಲ್ಲಿ ದೊರಕಿದ್ದು, ಈ ದೂರಿನ ಆಧಾರದ ಮೇಲೆ 2021ರಲ್ಲಿ ED ತನಿಖೆಯನ್ನು ಪ್ರಾರಂಭಿಸಿತು. ದೂರಿನಲ್ಲಿ, ಕ್ರಿಮಿನಲ್ ಪಿತೂರಿ ಮೂಲಕ ಎಜಿಎಲ್ನ 2,000 ಕೋಟಿ ರೂ.…
ಕಲಬುರ್ಗಿ : ಕಲ್ಯಾಣ ಕರ್ನಾಟಕ ಭಾಗಕ್ಕೆ 5,500 ಶಾಲಾ ಶಿಕ್ಷಕರ ನೇಮಕ ಮಾಡಲಾಗುತ್ತಿದೆ. ಶಿಕ್ಷಣ ಮಟ್ಟ ಸುಧಾರಿಸಲು ಶಿಕ್ಷಕರನ್ನು ನೇಮಕ ಮಾಡುತ್ತಿದ್ದೇವೆ. ಅಷ್ಟೇ ಅಲ್ಲದೆ ನಮ್ಮ ಸಂಪುಟ ಉಪ ಸಮಿತಿ ನಿಗವಹಿಸುತ್ತದೆ. ಪರೀಕ್ಷೆಯಲ್ಲಿ ಪಾರದರ್ಶಕತೆಯನ್ನು ತರುವುದು ನಮ್ಮ ಗುರಿಯಾಗಿದೆ ಎಂದು ಸಚಿವ ಶರಪ್ರಕಾಶ್ ಪಾಟೀಲ್ ತಿಳಿಸಿದರು. ಕಲ್ಬುರ್ಗಿಯಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಲ್ಬುರ್ಗಿಯಲ್ಲಿ ನಾಳೆ ಬೃಹತ್ ಉದ್ಯೋಗ ಮೇಳ ನಡೆಯಲಿದ್ದು ಈ ಒಂದು ಉದ್ಯೋಗ ಮೇಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಎಐಸಿಸಿ ಅಧ್ಯಕ್ಷರು ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಚಾಲನೆ ನೀಡಲಿದ್ದಾರೆ. ಕೌಶಲ್ಯಾಭಿವೃದ್ಧಿ ಇಲಾಖೆಯಿಂದ ಬೃಹತ್ ಉದ್ಯೋಗ ಮೇಳ ನಡೆಯಲಿದೆ. ಉದ್ಯೋಗ ಮೇಳಕ್ಕೆ ಸಿಎಂ ಸಿದ್ದರಾಮಯ್ಯ ಎಐಸಿಸಿ ಅಧ್ಯಕ್ಷರು ಚಾಲನೆ ನೀಡುತ್ತಾರೆ. ಇದು ನಮ್ಮ ಯುವನಿಧಿ ಕಾರ್ಯಕ್ರಮದ ಒಂದು ಭಾಗ ಕೂಡ. ಉದ್ಯೋಗ ಮೇಳದಲ್ಲಿ 250ಕ್ಕೂ ಹೆಚ್ಚು ಕಂಪನಿಗಳು ಭಾಗಿಯಾಗಲಿವೆ ಒಂದು ಲಕ್ಷಕ್ಕೂ ಹೆಚ್ಚು ಉದ್ಯೋಗ ನೀಡಬೇಕು ಕೆಲಸ ಆಗಲಿದೆ. ಆಯ್ಕೆಯಾದವರಿಗೆ ಸ್ಥಳದಲ್ಲಿ ನೇಮಕಾತಿ ಆದೇಶ ಪತ್ರ ವಿತರಣೆ ಮಾಡಲಾಗುತ್ತದೆ…
ಉತ್ತರಪ್ರದೇಶ : ಕಳೆದ ಕೆಲವು ದಿನಗಳ ಹಿಂದೆ ಉತ್ತರ ಪ್ರದೇಶದ ಅಯೋಧ್ಯೆಯ ಶ್ರೀ ರಾಮ ಮಂದಿರ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್ ಸಂದೇಶ ಬಂದಿತ್ತು. ಇದೀಗ ಮತ್ತೊಂದು ಬೆದರಿಕೆ ಇ-ಮೇಲ್ ಸಂದೇಶ ಬಂದಿದ್ದು ಇಮೇಲ್ ನಲ್ಲಿ ಶ್ರೀರಾಮ ಮಂದಿರವನ್ನು ಬಾಂಬ್ ಇಟ್ಟು ಸ್ಪೋಟಿಸುವುದಾಗಿ ಬೆದರಿಕೆ ಇಮೇಲ್ ಸಂದೇಶ ಬಂದಿದೆ. ಹೌದು ರಾಮ ಜನ್ಮಭೂಮಿ ಟ್ರಸ್ಟಿಗೆ ಬಂದಿರುವ ಬೆದರಿಕೆ ಇ-ಮೇಲ್ ಅನ್ನು ಅಧಿಕಾರಿಗಳು ಇದೀಗ ಪರಿಶೀಲನೆ ಮಾಡುತ್ತಿದ್ದಾರೆ. ತಮಿಳುನಾಡು ಮೂಲದಿಂದ ಇ-ಮೇಲ್ ಸಂದೇಶ ಬಂದಿರುವ ಬಗ್ಗೆ ಮಾಹಿತಿ ತಿಳಿದು ಬಂದಿದೆ. ಈ ಕುರಿತು ಇನ್ನಷ್ಟು ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.
ಚಿತ್ರದುರ್ಗ : ಚಿತ್ರದುರ್ಗದಲ್ಲಿ ಘೋರವದ ದುರಂತ ಒಂದು ಸಂಭವಿಸಿದ್ದು ಜಾತ್ರೆಗೆ ಎಂದು ಕ್ರಮಕ್ಕೆ ಆಗಮಿಸಿದ್ದ 9 ವರ್ಷದ ಬಾಲಕಿ ಕೃಷಿ ಹೊಂಡದಲ್ಲಿ ಬಿದ್ದು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಬಿ ದುರ್ಗ ಗ್ರಾಮದಲ್ಲಿ ಈ ದುರ್ಘಟನೆ ಸಂಭವಿಸಿದೆ. ಬಿ.ದುರ್ಗ ಗ್ರಾಮದ ಬಳಿ ಕೃಷಿ ಹೊಂಡದಲ್ಲಿ ಬಿದ್ದು ಬಾಲಕಿ ಸಾವನ್ನಪ್ಪಿದ್ದಾಳೆ. ಚಿತ್ರದುರ್ಗ ತಾಲೂಕಿನ ಲಕ್ಷ್ಮಿಸಾಗರ ಗ್ರಾಮದ ಮೈನಾ (9) ಎನ್ನುವ ಬಾಲಕಿ ಸಾವನ್ನಪ್ಪಿದ್ದಾಳೆ.ಜಾತ್ರೆಗೆ ಎಂದು ಬಿ.ದುರ್ಗ ಗ್ರಾಮಕ್ಕೆ ಬಂದಿದ್ದ ವೇಳೆ ಈ ಒಂದು ಅವಘಡ ಸಂಭವಿಸಿದೆ. ಘಟನೆ ಕುರಿತಂತೆ ಚಿಕ್ಕಜಾಜೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.