Subscribe to Updates
Get the latest creative news from FooBar about art, design and business.
Author: kannadanewsnow05
ನವದೆಹಲಿ : ನಿರ್ಮಾಣ ಹಂತದ ಕಟ್ಟಡ ಕುಸಿದು ಬಿದ್ದು ಮೂವರು ಸಾವನ್ನಪ್ಪಿರುವ ಘಟನೆ ದೆಹಲಿಯ ಪಹರ್ ಗಂಜ ಪ್ರದೇಶದಲ್ಲಿ ಈ ಒಂದು ದುರಂತ ಸಂಭವಿಸಿದೆ. ಕಟ್ಟಡದ ಅವಶೇಷಗಳ ಅಡಿ ಸಿಲುಕಿ ಇಬ್ಬರು ಸಾವನ್ನಪ್ಪಿದ್ದಾರೆ. ಇನ್ನು ಘಟನೆಯಲ್ಲಿ ಓರ್ವನಿಗೆ ಗಂಭೀರವಾದ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆದರೆ ಚಿಕಿತ್ಸೆ ಫಲಿಸದೇ ಆತ ಕೂಡ ಸಾವನ್ನಪ್ಪಿದ್ದಾನೆ. ಪಹರ್ಗಂಜ್ನ ಕೃಷ್ಣ ಹೋಟೆಲ್ ಬಳಿಯ ಅರಾ ಕನ್ಸಾ ರಸ್ತೆಯಲ್ಲಿ, ನಿರ್ಮಾಣ ಹಂತದಲ್ಲಿರುವ ನೆಲಮಾಳಿಗೆಯ ಪಕ್ಕದ ಗೋಡೆ ಕುಸಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಾಲ್ಕು ಅಗ್ನಿಶಾಮಕ ವಾಹನಗಳನ್ನು ತಕ್ಷಣ ಸ್ಥಳಕ್ಕೆ ಕಳುಹಿಸಲಾಗಿದೆ. ಆರಂಭದಲ್ಲಿ ಮೂರು ಜನರನ್ನು ಸಿಲುಕಿಸಿ ರಕ್ಷಿಸಲಾಯಿತು, ಆದರೆ ನಂತರ ಮೂವರೂ ಸಾವನ್ನಪ್ಪಿದ್ದಾರೆ ಎಂದು ಘೋಷಿಸಲಾಯಿತು ಎಂದು ಅವರು ಹೇಳಿದರು. ಹಿಂದಿನ ದಿನ ಈ ಪ್ರದೇಶದಲ್ಲಿ ಇದೇ ರೀತಿಯ ಹವಾಮಾನ ಪರಿಸ್ಥಿತಿ ಇದ್ದ ನಂತರ, ದೆಹಲಿಯ ಕೆಲವು ಭಾಗಗಳು ಮತ್ತು ಉತ್ತರ ಪ್ರದೇಶದ ನೋಯ್ಡಾ ಮತ್ತು ಗಾಜಿಯಾಬಾದ್ನಂತಹ ನೆರೆಯ ನಗರಗಳಲ್ಲಿ ಬಲವಾದ ಗಾಳಿ ಮತ್ತು…
ಉಡುಪಿ : ಕಳೆದ ಕೆಲವು ದಿನಗಳ ಹಿಂದೆ ಅಷ್ಟೇ, ಮಂಗಳೂರಿನಲ್ಲಿ ರೌಡಿಶೀಟರ್ ಹಾಗು ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯ ಭೀಕರವಾಗಿ ಕೊಲೆಯಾಗಿತ್ತು. ಇದೀಗ ಉಡುಪಿಯಲ್ಲಿ ಬುರ್ಖಾಧಾರಿ ಮಹಿಳೆಯರು ಮಕ್ಕಳನ್ನು ಅಪಹರಿಸಲು ಯತ್ನಿಸಿದ್ದಾರೆ. ಈ ವೇಳೆ ತಡೆಯಲು ಬಂದ ತಾಯಿಗೆ ಚಾಕು ಇರಿದಿರುವ ಘಟನೆ ನಡೆದಿದೆ. ಹೌದು ಇಬ್ಬರು ಬುರ್ಖಾಧಾರಿ ಮಹಿಳೆಯರು ಮಗುವನ್ನು ಅಪಹರಿಸಲು ಯತ್ನಿಸಿರುವುದು ಉಡುಪಿಯ ಕಾಪು ತಾಲೂಕಿನ ಬೆಳಪು ಗ್ರಾಮದಲ್ಲಿ ನಡೆದಿದೆ. ಈ ವೇಳೆ, ತಡೆಯಲು ಬಂದ ಮಗುವಿನ ತಾಯಿಗೆ ಬುರ್ಖಾಧಾರಿ ಮಹಿಳೆಯರು ಚಾಕು ಇರಿದಿದ್ದಾರೆ. ಘಟನೆ ಹಿನ್ನೆಲೆ? ಬೆಳಪು ಗ್ರಾಮ ಪಂಚಾಯತ್ ವ್ಯಾಪ್ತಿಯ ಜನತಾ ಕಾಲೋನಿಯಲ್ಲಿ ಈ ಘಟನೆ ನಡೆದಿದೆ. ಕಾಲೋನಿಯ ಮೊಹಮ್ಮದ್ ಅಲಿ ಮನೆಗೆ ಇಬ್ಬರು ಬುರ್ಖಾಧಾರಿಗಳು ಬಂದು, ಶೌಚಾಲಯ ಬಳಸುತ್ತೇವೆ ಎಂದು ಮನೆಗೆ ಪ್ರವೇಶಿಸಿದ್ದರು. ಈ ವೇಳೆ ಓರ್ವ ಬುರ್ಖಾಧಾರಿ ಮಹಿಳೆ ತೊಟ್ಟಿಲಿನಲ್ಲಿ ಮಲಗಿದ್ದ ಮಗುವನ್ನ ಎತ್ತಿಕೊಂಡು ಓಡಿ ಹೋಗಲು ಯತ್ನಿಸಿದ್ದಾಳೆ. ತಕ್ಷಣ ಮಹಿಳೆಯನ್ನು ಮಗುವಿನ ತಾಯಿ ತಾಬರಿಸ್ ತಡೆದಿದ್ದಾರೆ. ಈ ವೇಳೆ ಮಗುವನ್ನು ಬಿಟ್ಟು,…
ಬೆಂಗಳೂರು : ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ ಇದೀಗ ಬೆಂಗಳೂರಿನಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ನಗರದ ಹಲವೆಡೆ ಗುಡುಗು ಮಿಂಚು ಸಹಿತ ಧಾರಾಕಾರ ಮಳೆಯಾಗುತ್ತಿದೆ. ಹೀಗಾಗಿ ಇಂದಿನ ಆರ್ಸಿಬಿ ಮತ್ತು ಕೆಕೆಆರ್ ನಡುವಿನ ಐಪಿಎಲ್ ಪಂದ್ಯ ರದ್ದಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಬೆಂಗಳೂರು ನಗರದ ಶಾಂತಿನಗರ, ರಿಚ್ಮಡ್ ಸರ್ಕಲ್, ಕಾರ್ಪೊರೇಷನ್, ಕಬ್ಬನ್ ಪಾರ್ಕ್, ಚಿನ್ನಸ್ವಾಮಿ ಮೈದಾನ, ವಿಧಾನಸೌಧ, ಕೆಆರ್ ಮಾರ್ಕೆಟ್, ಮೆಜೆಸ್ಟಿಕ್, ರಾಜಾಜಿನಗರ, ಲಾಲ್ ಬಾಗ್, ಜಯನಗರ ಸೇರಿದಂತೆ ಹಲವೆಡೆ ಮಳೆಯಾಗುತ್ತಿದೆ. ಒಂದು ಕಡೆ ವರುಣ ಅಬ್ಬರಿಸುತ್ತಿದ್ದರೆ, ಇನ್ನೊಂದು ಕಡೆ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್ಸಿಬಿ ಮತ್ತು ಕೆಕೆಆರ್ ಪಂದ್ಯ ನಡೆಯಲಿದ್ದು ಇದೀಗ ಭಾರಿ ಮಳೆ ಆಗುತ್ತಿರುವುದರಿಂದ ಟಾಸ್ ವಿಳಂಬವಾಗಿದೆ. ಇದೇ ರೀತಿ ಮಳೆ ಮುಂದುವರೆದರೆ ಪಂದ್ಯ ಬಹುತೇಕ ರದ್ದಾಗುವ ಸಾಧ್ಯತೆ ಇದೆ. ಈ ಬಾರಿ ಆರ್ಸಿಬಿ ಉತ್ತಮ ಫಾರ್ಮ್ ನಲ್ಲಿದ್ದು ಫೈನಲ್ ಗೇರಿ ಕಪ್ಪು ಹಿಡಿಯುವ ತವಕದದೆ. ಆದರೆ ಇಂದು ಪಂದ್ಯ ರದ್ದಾದರೆ ಆರ್ಸಿಬಿ ಅಭಿಮಾನಿಗಳಿಗೆ ನಿರಾಸೆಯಾಗುವುದು ಗ್ಯಾರಂಟಿ.
BREAKING : ಭದ್ರಾಪುರದ ಬಾಲಕಿ ಅತ್ಯಾಚಾರ ಪ್ರಕರಣಕ್ಕೆ ಟ್ವಿಸ್ಟ್ : ಬಾಲಕಿ ಮೇಲೆ ರೇಪ್ ಆಗಿಲ್ಲವೆಂದ ‘FSL’ ರಿಪೋರ್ಟ್!
ಬೆಂಗಳೂರು : ಭದ್ರಾಪುರದ ಹಕ್ಕಿಪಿಕ್ಕಿ ಕಾಲೋನಿ ಬಾಲಕಿ ಕೊಲೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಬಾಲಕಿಯ ಮೇಲೆ ಅತ್ಯಾಚಾರ ನಡೆದಿಲ್ಲ ಎನ್ನುವುದು FSL ವರದಿಯಲ್ಲಿ ದೃಢವಾಗಿದೆ. ಹೌದು ರಾಮನಗರ ತಾಲೂಕಿನ ಬಿಡದಿ ಹೋಬಳಿಯ ಭದ್ರಾಪುರ ಗ್ರಾಮದಲ್ಲಿ ಇತ್ತೀಚಿಗೆ ಬಾಲಕಿಯ ಮೇಲೆ ಅತ್ಯಾಚಾರ ನಡೆದಿತ್ತು. ಇದೀಗ ಬಂದಂತಹ FSL ವರದಿಯ ಪ್ರಕಾರ ಬಾಲಕಿಯ ದೇಹದ ಮೇಲೆ ಯಾವುದೇ ಸುಟ್ಟ ಕಲೆಗಳು ಪತ್ತೆಯಾಗಿಲ್ಲ. ಮೇಲ್ನೋಟಕ್ಕೆ ದಿವ್ಯಾಂಗ ಬಾಲಕಿಗೆ ರೈಲು ಬಡಿದಿರುವುದು ಪತ್ತೆಯಾಗಿದೆ. ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರ ನಿಖರವಾದ ಕಾರಣ ತಿಳಿಯಲಿದೆ. ಮೇ 11ರಂದು ಸಂಜೆ ಮನೆಯಿಂದ 14 ವರ್ಷದ ಬಾಲಕಿ ನಾಪತ್ತೆಯಾಗಿದ್ದಳು. ಮೇ 12ರಂದು ರೈಲ್ವೆ ಹಳಿ ಸಮೀಪ ಬಾಲಕಿಯ ಶವ ಪತ್ತೆಯಾಗಿತ್ತು. ಭದ್ರಾಪುರ ಬಳಿ ರೈಲ್ವೆ ಹಳಿ ಸಮೀಪ ಬಾಲಕಿಯ ಮೃತ ದೇಹ ಪತ್ತೆಯಾಗಿತ್ತು. ಬಿಡದಿ ಠಾಣೆ ಪೊಲೀಸರು ಕೇಸ್ ದಾಖಲಿಸಿ ಕೊಂಡು ತನಿಖೆ ಅರಭಿಸಿದ್ದರು. ಬಾಲಕಿ ಕೊಲೆ ಪ್ರಕರಣ ರಾಜ್ಯದಲ್ಲಿ ಸಾಕಷ್ಟು ಸಂಚಲನ ಮೂಡಿಸಿತ್ತು. ಇದೀಗ FSL ವರದಿಯ ಆಧಾರದಲ್ಲಿ…
ಕೋಲಾರ : ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ಭಾರಿ ಮಳೆ ಆಗುತ್ತಿದ್ದು, ಅಲ್ಲಲ್ಲಿ ವಿದ್ಯುತ್ ಅವಘಡಗಳು ಸೇರಿದಂತೆ ಅನೇಕ ಅವಾಂತರ ಸೃಷ್ಟಿಯಾಗುತ್ತಿವೆ. ಹಾಗಾಗಿ ಸಾರ್ವಜನಿಕರು ಗಾಳಿ ಮಳೆಯಲ್ಲಿ ಆದಷ್ಟು ಎಚ್ಚರದಿಂದರಬೇಕು. ಇದೀಗ ಗಾಳಿ ಮಳೆಯಿಂದ ವಿದ್ಯುತ್ ಕಂಬ ನೆಲಕ್ಕುರಳಿದ್ದನ್ನು ಗಮನಿಸದೇ ಬೈಕ್ ಚಾಲನೆ ಮಾಡಿದ ಸಾರಿಗೆ ನೌಕರ ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಮೃತರನ್ನು ಗ್ರಾಮದ ರೆಡ್ಡಪ್ಪ (58) ಎಂದು ತಿಳಿದುಬಂದಿದೆ.ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ರಾಜೇಂದ್ರ ಹಳ್ಳಿಯಲ್ಲಿಂದು ಮುಂಜಾನೆ ಈ ಘಟನೆ ನಡೆದಿದ್ದು. ಕಳೆದ ರಾತ್ರಿ ಬಿರುಗಾಳಿ ಮಳೆಯಿಂದ ವಿದ್ಯುತ್ ಕಂಬಗಳು ನೆಲಕ್ಕುರುಳಿ ಬಿದ್ದಿದ್ದವು. ತಂತಿಗಳು ರಸ್ತೆಗೆ ಅಡ್ಡಲಾಗಿ ಬಿದ್ದಿತ್ತು. ಇಂದು ಮುಂಜಾನೆ ಎದ್ದು ಎಂದಿನಂತೆ ತೋಟಕ್ಕೆ ತೆರಳುವ ವೇಳೆ ಬೈಕ್ಗೆ ತಂತಿ ಸ್ಪರ್ಶವಾಗಿ ರೆಡ್ಡಪ್ಪ ಸಾವನ್ನಪ್ಪಿದ್ದಾರೆ. ಮುಳಬಾಗಿಲು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಹೂಡಿಕೆ ಮತ್ತು ಕಾನೂನು ಸುವ್ಯವಸ್ಥೆಯನ್ನು ನಾವು ಕಾಪಾಡಬೇಕು. ಹೂಡಿಕೆ ಕಾನೂನು ಸುವ್ಯವಸ್ಥೆ ಇವೆರಡಕ್ಕೂ ಸಂಬಂಧವಿದೆ. ಹೂಡಿಕೆ, ಕಾನೂನು ಸುವ್ಯವಸ್ಥೆ ಬಗ್ಗೆ ಶೀಘ್ರದಲ್ಲಿ ಸಭೆ ಕರೆಯುವೆ. ವಿದ್ಯುತ್, ಬಿ-ಖಾತಾ ಇ-ಖಾತಾ ಬಗ್ಗೆ ಸಭೆ ಕರೆಯುತ್ತೇನೆ ಎಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕೆಲವು ರಾಜ್ಯಗಳಲ್ಲಿ MSME ಇಲಾಖೆ ಪ್ರತ್ಯೇಕವಾಗಿ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ MSME ಪ್ರತ್ಯೇಕ ಇಲಾಖೆ ಮಾಡುವೆ. MSME ಸೂಕ್ಷ್ಮ ಸಣ್ಣ ಮತ್ತು ಮಧ್ಯಮ ಉದ್ಯಮಗಳು. MSME ಪ್ರತ್ಯೇಕ ಸಚಿವರು ಹಾಗು ಅಧಿಕಾರ ವರ್ಗವನ್ನು ಮಾಡುತ್ತೇವೆ. ಎರಡು ಎಕರೆ ಲೀಸ್ ಕಮ್ ಸೇಲ್ ಮಾಡಿಕೊಟ್ಟವರು ಯಾರು? ರಾಜ್ಯದ ಅಭಿವೃದ್ಧಿ ಕೈಗಾರಿಕೆ ಬೆಳವಣಿಗೆಗೆ ನಮ್ಮ ಸರ್ಕಾರ ಬದ್ಧವಾಗಿದೆ. ಹಿಂದೆ ನಡೆದು ಬಂದ ಹಾದಿ ಮುಂದೇನು ಮಾಡಬೇಕೆನ್ನುವ ಗುರಿ ಇಟ್ಟುಕೊಂಡು ಮುಂದೆ ನಡೆಯಿರಿ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಬೆಂಗಳೂರು : ನಗರದ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಶನಿವಾರ ನಡೆಯುವ ಆರ್ಸಿಬಿ-ಕೆಕೆಆರ್ (RCB vs KKR) ಪಂದ್ಯದ ವೇಳೆ ಸ್ಟೇಡಿಯಂ ನುಗ್ಗಿ, ವಿರಾಟ್ ಕೊಹ್ಲಿಯನ್ನು ಹಗ್ ಮಾಡುತ್ತೇನೆ ಎಂದು ಪೋಸ್ಟ್ ಹಾಕಿದ್ದ ಅಭಿಮಾನಿ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ. ಆರ್ಸಿಬಿ-ಕೆಕೆಆರ್ ಪಂದ್ಯದಲ್ಲಿ ಗ್ರೌಂಡ್ಗೆ ನುಗ್ತೀನಿ ಎಂದು ಕಬ್ಜ ಶರಣ್ ಎಂಬ ಯುವಕ ವಿಡಿಯೋ ಪೋಸ್ಟ್ ಹಾಕಿದ್ದ. ಇನ್ಸ್ಟಾಗ್ರಾಂ ಲೈಕ್ಸ್ ಹಾಗೂ ವೀವ್ಸ್ಗಾಗಿ ಹುಚ್ಚಾಟ ಮಾಡಿದ್ದ ಯುವಕನಿಗೆ ಪೊಲೀಸರು ತಕ್ಕ ಪಾಠ ಕಲಿಸಿದ್ದು, ಸ್ಟೇಡಿಯಂಗೆ ನುಗ್ತೀನಿ ಅಂದವನಿಗೆ ಮ್ಯಾಚ್ ನೋಡೋ ಭಾಗ್ಯವೂ ಇಲ್ಲವಾಗಿದೆ. ಇದೀಗ ತಪ್ಪಾಯ್ತು ಎಂದು ವಿಡಿಯೋ ಮಾಡಿರುವ ಶರಣ್, ಮೊನ್ನೆ ನಾನೊಂದು ವಿಡಿಯೋ ಮಾಡಿದ್ದೆ. ಇವತ್ತಿನ ಮ್ಯಾಚ್ನಲ್ಲಿ ಗ್ರೌಂಡ್ಗೆ ನುಗ್ಗಿ ಕೊಹ್ಲಿ ಅವರನ್ನು ಹಗ್ ಮಾಡುವೆ ಎಂದು ಹೇಳಿದ್ದೆ. ಆದರೆ, ಆ ರೀತಿ ಮಾಡಕ್ಕೆ ಆಗಲ್ಲ. ಯಾಕೆಂದರೆ ಇದು ಕಾನೂನು ಬಾಹಿರ. ಈ ರೀತಿ ಸವಾಲು ಹಾಕಿದ್ದಕ್ಕೆ ದಯವಿಟ್ಟು ಕ್ಷಮೆ ಇರಲಿ, ಯಾರೂ ಹೀಗೆ ಮಾಡಬೇಡಿ ಎಂದು ಹೇಳಿದ್ದಾನೆ. ಯುವಕ ಹಾಕಿದ್ದ ವಿಡಿಯೋ…
ಬೆಂಗಳೂರು : ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕದ 22 ಜಿಲ್ಲೆಗಳಲ್ಲಿ ಇಂದಿನಿಂದ 5 ದಿನ ಮಳೆ ಹೆಚ್ಚಾಗಲಿದೆ. ಈ ಜಿಲ್ಲೆಗಳಲ್ಲಿ ಮೇ 22ರವರೆಗೆ ಮಿಂಚು ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದ್ದು, ಯೆಲ್ಲೊ ಅಲರ್ಟ್ ಘೋಷಿಸಿದೆ. ತೆಲಂಗಾಣದಿಂದ ಉತ್ತರ ತಮಿಳುನಾಡಿನವರೆಗೆ ವಿಸ್ತರಿಸಿರುವ ವಾಯುಭಾರ ಕುಸಿತದಿಂದಾಗಿ ಈ ಮಳೆ ಕಾಣಿಸಿಕೊಳ್ಳುತ್ತಿದೆ.ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮಧ್ಯಮದಿಂದ ಭಾರೀ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಮಂಡ್ಯ, ಮೈಸೂರು, ಹಾಸನ, ಕೊಡಗು, ಬೆಳಗಾವಿ, ಬೀದರ್, ರಾಯಚೂರು, ಯಾದಗಿರಿ, ದಾವಣಗೆರೆ ಮತ್ತು ಚಿತ್ರದುರ್ಗ ಮುಂತಾದ ಸ್ಥಳಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ. ಈ ಪ್ರದೇಶಗಳಲ್ಲಿ ಗಂಟೆಗೆ 50–60 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆಯಿದೆ.
ಮೈಸೂರು : ಮೈಸೂರಲ್ಲಿ ಭಾರಿ ಅನಾಹುತ ಒಂದು ತಪ್ಪಿದ್ದು, ಆಕಸ್ಮಿಕ ಬೆಂಕಿಯಿಂದ ಮೂರು ಮನೆಗಳು ಸುಟ್ಟು ಕರಕಲಾಗಿರುವ ಘಟನೆ ಮೈಸೂರು ತಾಲೂಕಿನ ಬೋರೆ ಆನಂದೂರಿನಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ. ಅದೃಷ್ಟವಶಾತ್ ,ಮನೆಯಲ್ಲಿ ಯಾರು ಇಲ್ಲದಿದ್ದ ರಿಂದ ಭಾರಿ ಅನಾಹುತ ಒಂದು ತಪ್ಪಿದೆ. ಮೈಸೂರು ತಾಲೂಕಿನ ಬೋರೆ ಆನಂದೂರಿನ ಶನಿವಾರೆಗೌಡ, ವೆಂಕಟೇಶ್ ಗೌಡ ಹಾಗು ಶ್ರೀನಿವಾಸಗೌಡ ಎಂಬುವವರ ಮನೆಗಳು ಬೆಂಕಿಗೆ ಆಹುತಿಯಾಗಿವೆ. ಮೂರು ಮನೆಗಳಲ್ಲಿ ಇದ್ದಂತಹ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾಗಿವೆ. ಸ್ಥಳಕ್ಕೆ ಆಗಮಿಸಿ ಅಭಿಷಾಮಕದಳ ಸಿಬ್ಬಂದಿಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕಲಬುರ್ಗಿ : ರಾಜ್ಯ ಸರ್ಕಾರ ರೈತರಿಗೆ ಸಿಹಿ ಸುದ್ದಿ ಒಂದನ್ನು ನೀಡಿದ್ದು, ಕನಿಷ್ಠ ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ ಹಿಂಗಾರು ಹಂಗಾಮಿನ ಸೂರ್ಯಕಾಂತಿ ಖರೀದಿಗೆ ಕೇಂದ್ರ ಸರ್ಕಾರ ಅನುಮತಿ ನೀಡಿದ್ದು, ಶೀಘ್ರದಲ್ಲಿ ಖರೀದಿ ಆರಂಭ ಮಾಡಲಾಗುವುದು ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ತಿಳಿಸಿದರು. FAQ ಗುಣಮಟ್ಟದ ಸೂರ್ಯಕಾಂತಿಗೆ ಪ್ರತಿ ಕ್ವಿಂಟಾಲ್ಗೆ 7,280 ರೂ.ನಿಗದಿಪಡಿಸಲಾಗಿದ್ದು, ಬಾಗಲಕೋಟ, ಬಳ್ಳಾರಿ, ವಿಜಯಪುರ, ಚಾಮರಾಜನಗರ, ಚಿತ್ರದುರ್ಗ, ಗದಗ, ಕಲಬುರಗಿ, ವಿಜಯನಗರ ಹಾಗೂ ರಾಯಚೂರು ಜಿಲ್ಲೆಗಳ ವ್ಯಾಪ್ತಿಯಲ್ಲಿ ಖರೀದಿ ಕೇಂದ್ರಗಳನ್ನು ತೆರೆಯಲಾಗುವುದು ಎಂದು ಶಿವಾನಂದ ಪಾಟೀಲ ಅವರು ಹೇಳಿದರು. ಪ್ರತಿ ಎಕರೆಗೆ ನಾಲ್ಕು ಕ್ವಿಂಟಾಲ್ನಂತೆ (ಗರಿಷ್ಠ 20 ಕ್ವಿಂಟಾಲ್) ಖರೀದಿ ಮಾಡಲಿದ್ದು, ಖರೀದಿ ಪ್ರಕ್ರಿಯೆ ಆದೇಶ ಹೊರಡಿಸಿದ ದಿನದಿಂದ 90 ದಿನಗಳವರೆಗೆ ನಡೆಯಲಿದೆ. ರೈತರು ತಮ್ಮ ಸಮೀಪದ ಪ್ಯಾಕ್ಸ್, ಎಫ್ಪಿಒ ಮತ್ತು ಟಿಎಪಿಸಿಎಂಎಸ್ಗಳಲ್ಲಿ ರೈತರು ತಮ್ಮ FID ಸಂಖ್ಯೆ ನೀಡಿ ನೋಂದಣಿ ಮಾಡಿಸಿಕೊಂಡು ಸೂರ್ಯಕಾಂತಿ ಮಾರಾಟ ಮಾಡಬಹುದು ಎಂದು ಸಚಿವರು ತಿಳಿಸಿದ್ದಾರೆ.