Subscribe to Updates
Get the latest creative news from FooBar about art, design and business.
Author: kannadanewsnow05
ವಿಜಯಪುರ : ಇತ್ತೀಚಿಗೆ ವಿಜಯಪುರ ನಗರದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಆಚರಿಸಲಾಯಿತು.ಈ ಒಂದು ಜಯಂತಿಯಲ್ಲಿ ಒಂದು ಕಡೆ ಶಿವಾಜಿ ಮಹಾರಾಜರ ಭಾವಚಿತ್ರ ಹಿಡಿದುಕೊಂಡು ಯುವಕರು ಕುಣಿದು ಕುಪ್ಪಳಸಿದರೆ ಮತ್ತೊಂದು ಕಡೆ ಗ್ಯಾಂಗ್ ಸ್ಟಾರ್ ಲಾರೆನ್ಸ್ ಬಿಷ್ಣೋಯಿ ಫೋಟೋ ಹಿಡಿದುಕೊಂಡು ಡ್ಯಾನ್ಸ್ ಮಾಡಿರುವ ವಿಡಿಯೋ ಇದೀಗ ವೈರಲ್ ಆಗಿದೆ. ಹೌದು ವಿಜಯಪುರದಲ್ಲಿ ಕೆಲ ಯುವಕರು ಗ್ಯಾಂಗ್ ಸ್ಟಾರ್ ಲಾರೆನ್ಸ್ ಬಿಷ್ಣೋಯಿ ಭಾವ ಚಿತ್ರ ಹಿಡಿದು ನೃತ್ಯ ಮಾಡಿದ್ದು, ಇದೀಗ ಈ ವಿಡಿಯೋ ಭಾರೀ ವೈರಲ್ ಆಗುತ್ತಿದೆ. ವಿಜಯಪುರ ನಗರದಲ್ಲಿ ನಡೆದ ಶಿವಾಜಿ ಜಯಂತಿ ಉತ್ಸವದ ಅಂಗವಾಗಿ ಮೆರವಣಿಗೆ ನಡೆಯಿತು. ಈ ವೇಳೆ ಮೆರವಣಿಗೆಯಲ್ಲಿ ಕೆಲ ಯುವಕರು ಗ್ಯಾಂಗ್ ಸ್ಟಾರ್ ಲಾರೆನ್ಸ್ ಬಿಷ್ಣೋಯಿ ಫೋಟೊ ಹಿಡಿದು ಡಾನ್ಸ್ ಮಾಡಿದ್ದಾರೆ. ಶಿವಾಜಿ ಮಹಾರಾಜರ ಮೆರವಣಿಗೆ ಸಂದರ್ಭದಲ್ಲಿ ಒಂದು ಕಡೆ ಕೇಸರಿ ಧ್ವಜ, ಇನ್ನೊಂದೆಡೆ ಶಿವಾಜಿ ಮಹಾರಾಜರು ಭಾವಚಿತ್ರವಿರುವ ಕೇಸರಿ ಧ್ವಜಗಳ ನಡುವೆ ಗ್ಯಾಂಗ್ ಸ್ಟಾರ್ ಪೊಟೋ ಕೂಡ ಕಂಡು ಬಂದಿದೆ. ವಿಜಯಪುರ ನಗರದ ಗಾಂಧಿ…
ಮಂಡ್ಯ : ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ಕಿರುಕುಳ ತಡೆಗೆ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಜಾರಿ ಮಾಡಿದರೂ ಕೂಡ ಸಿಬ್ಬಂದಿಗಳ ಕಿರುಕುಳ ನಿಲ್ಲುತಿಲ್ಲ.. ಇದೀಗ ಮಂಡ್ಯ ಜಿಲ್ಲೆಯ ವಿಸಿ ನಾಲೆಗೆ ಹಾರಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಡ್ಯದ ಯಲಿಯೂರು ಬಳಿ ನಡೆದಿದೆ. ಹೌದು ಸಾಲದಿಂದ ಬೇಸತ್ತು ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದ್ದು, ಆತ್ಮಹತ್ಯೆ ಮಾಡಿಕೊಂಡವರು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ನಿವಾಸಿಗಳು ಎಂದು ಬಂದಿದೆ. ಮಂಡ್ಯ ತಾಲೂಕಿನ ವಿ ಸಿ ನಾಲಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತರನ್ನು ಮಾಸ್ತಪ್ಪ (65) ಪತ್ನಿ ರತ್ನಮ್ಮ (45) ಮಗಳು ಲಕ್ಷ್ಮಿ (18) ಎಂದು ತಿಳಿದುಬಂದಿದೆ. ಪತ್ನಿ ಮಗಳೊಂದಿಗೆ ಆತ್ಮಹತ್ಯೆಗೆ ಮಾಸ್ತಪ್ಪ ಎನ್ನುವ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ. ಶ್ರೀರಂಗಪಟ್ಟಣದ ಗಂಜಾಂ ನಿವಾಸಿಯಾಗಿರುವ ಮೃತರು ಎಂದು ತಿಳಿದುಬಂದಿದ್ದು, ಮಾಸಪ್ಪ ಆಟೋ ಚಾಲಕರಾಗಿ ಕುಟುಂಬ ನಿರ್ವಹಣೆ ಮಾಡುತ್ತಿದ್ದರು. ಇಬ್ಬರ ಮೃತದೇಹ ಪತ್ತೆಯಾಗಿದ್ದು, ಇನ್ನೊಬ್ಬರ ಮರೆತಮೃತ ದೇಹ ಪತ್ತೆಗಾಗಿ…
ಸೊಲ್ಲಾಪುರ : ಕನ್ನಡದಲ್ಲಿ ಮಾತನಾಡು ಎಂದಿದ್ದಕ್ಕೆ, ಕಳೆದ ಎರಡು ದಿನಗಳ ಹಿಂದೆ ಬೆಳಗಾವಿಯ ಸೂಳೆಬಾವಿ ಹಾಗೂ ಬಾಳೆಕುಂದ್ರಿ ರಸ್ತೆ ಮಾರ್ಗದಲ್ಲಿ ಸಂಚರಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಕಂಡಕ್ಟರ್ ಮಹಾದೇವ್ ಹುಕ್ಕೇರಿ ಮೇಲೆ ಮಹಾರಾಷ್ಟ್ರದ ಪುಂಡರು ಹಲ್ಲೆ ನಡೆಸಿದ್ದರು. ಅದಾದ ಬಳಿಕ ಕರ್ನಾಟಕ ಹಾಗು ಮಹಾರಾಷ್ಟ್ರದಲ್ಲಿ ಹಲವಾರು ಬೆಳವಣಿಗೆ ಆದವು. ಇದೀಗ ಸೋಲಾಪುರದಲ್ಲಿ ಕೆಎಸ್ಆರ್ಟಿಸಿ ಬಸ್ ತಡೆದು ಬಸ್ಗೆ ಕೇಸರಿ ಬಣ್ಣ ಎರಚಿ ಶಿವಸೇನೆ ಪುಂಡರು ಅಟ್ಟಹಾಸ ಮೆರೆದಿದ್ದಾರೆ. ಹೌದು ಶಿವಸೇನೆ ಕಾರ್ಯಕರ್ತರು ಕರ್ನಾಟಕದ ಮತ್ತೊಂದು ಬಸ್ ಅಡ್ಡಗಟ್ಟಿ ದರ್ಪ ಮೆರೆದಿದ್ದಾರೆ.ಮಹಾರಾಷ್ಟ್ರದ ಸೋಲಾಪುರ ಪಟ್ಟಣದಲ್ಲಿ ಶಿವಸೇನೆ ಪುಂಡರ ಅಟ್ಟಹಾಸ ಇದೀಗ ಮಿತಿ ಮೀರಿದ್ದು, ಬಸ್ ಮೇಲೆ ಕೇಸರಿ ಬಣ್ಣ ಬಳಿದು ಪುಂಡಾಟಿಗೆ ಮೆರೆದಿದ್ದಾರೆ. ಅಲ್ಲದೆ ನಿನ್ನೆ ಕೊಳಪುರದಲ್ಲಿ ಕೆಎಸ್ಆರ್ಟಿಸಿ ಸಂಸ್ಥೆಯ ಅಂಬಾರಿ ಬಸ್ ಮೇಲೆ ಜೈ ಮಹಾರಾಷ್ಟ್ರ ಎಂದು ಮಸಿ ಬಳಿದು ಪುಂಡಾಟಿಕೆ ಮೆರೆದಿದ್ದರು. ರಾಜ್ಯದ ಬಸ್ ಮೇಲೆ ಜೈ ಮಹಾರಾಷ್ಟ್ರ ಎಂದು ಬರೆದು ಚಾಲಕ ನಿರ್ವಾಹಕನಿಗೂ ಜೈ ಮಹಾರಾಷ್ಟ್ರ ಅನ್ನುವಂತೆ ಬಲವಂತ ಮಾಡಿದ್ದಾರೆ.…
ಮೈಸೂರು : ಮೈಸೂರಿನ ಉದಯಗಿರಿ ಠಾಣೆ ಮೇಲೆ ಕಲ್ಲು ತೂರಾಟ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಭಟನೆಗೆ ಅವಾಕಾಶ ನೀಡುವಂತೆ ರಾಷ್ಟ್ರೀಯ ಸುರಕ್ಷಾ ಜನಾಂದೋಲನ ಸಮೀಕ್ಷೆ ಹೈಕೋರ್ಟಿಗೆ ರಿಟ್ ಅರ್ಜಿ ಸಲ್ಲಿಸಿತ್ತು. ಇದೀಗ ಮೈಸೂರಿನ ಫುಟ್ಬಾಲ್ ಮೈದಾನದಲ್ಲಿ ಪ್ರತಿಭಟನೆಗೆ ಹೈಕೋರ್ಟ್ ಅನುಮತಿ ನೀಡಿದೆ. ರಿಟ್ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಮೈಸೂರಿನ ಫುಟ್ಬಾಲ್ ಮೈದಾನದಲ್ಲಿ ಪ್ರತಿಭಟನೆಗೆ ಅನುಮತಿ ನೀಡಿದೆ. ಮೈಸೂರು ನಗರ ಪೊಲೀಸ್ ಆಯುಕ್ತರಿಗೆ ಇದೆ ವೇಳೆ ಹೈಕೋರ್ಟ್ ನಿರ್ದೇಶನ ನೀಡಿದ್ದು 1 ಲಕ್ಷ ರೂಪಾಯಿ ಬಾಂಡ್ ನೀಡಲು ಪ್ರತಿಭಟನೆಯ ಆಯೋಜಕರಿಗೆ ನಿರ್ದೇಶನ ನೀಡಲಾಗಿದೆ.ಮಧ್ಯಾಹ್ನ 3:30ರ ಬಳಿಕ ಪ್ರತಿಭಟನೆಗೆ ಅವಕಾಶ ನೀಡಲು ಸೂಚನೆ ನೀಡಿ, ಮೈಸೂರಿನ ಪೊಲೀಸ್ ಆಯುಕ್ತರಿಗೆ ನ್ಯಾ.ದೇವದಾಸ್ ಅವರಿದ್ದ ಪೀಠ ಅವರಿದ್ದ ಪೀಠ ಸೂಚನೆ ನೀಡಿದೆ. ಮೈಸೂರಿ ಫುಟ್ಬಾಲ್ ಮೈದಾನದಲ್ಲಿ ಬಿಜೆಪಿ ಪ್ರತಿಭಟನೆಗೆ ಹೈಕೋರ್ಟ್ ಅನುಮತಿ ನೀಡಿದೆ. ಪ್ರತಿಭಟನೆ ಶಾಂತಿಯುತವಾಗಿರಬೇಕು. ಪ್ರತಿಭಟನೆಯ ಸಂಪೂರ್ಣ ಚಿತ್ರೀಕರಣ ಮಾಡಬೇಕು. ಶಾಂತಿಭಂಗವಾಗುವಂತಹ ಪ್ರಚೋದನಕಾರಿ ಹೇಳಿಕೆ ನೀಡಬಾರದು. ಅಕಸ್ಮಾತ್ ಅಹಿತಕರ ಘಟನೆ ನಡೆದರೆ ಅರ್ಜಿದಾರರೇ ಹೊಣೆ…
ತುಮಕೂರು : ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯಲ್ಲಿ ನಡೆದ ಗಲಾಟೆಗೆ ಸಂಬಂಧಿಸಿದಂತೆ ಪೊಲೀಸರು ಅಗತ್ಯ ಕ್ರಮ ಕೈಗೊಂಡಿದ್ದಾರೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು. ನಗರದಲ್ಲಿ ತುಮಕೂರು ಜಿಲ್ಲಾ ಕೆಡಿಪಿ ಪ್ರಗತಿ ಪರಿಶೀಲನೆ ಸಭೆ ನಡೆಸಲು ಜಿಲ್ಲಾ ಪಂಚಾಯತ್ ಸಭಾಂಗಣಕ್ಕೆ ಆಗಮಿಸಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಸೂರು ಉದಯಗಿರಿ ಗಲಾಟೆಗೆ ಯಾರು ಕಾರಣಕರ್ತರಾಗಿದ್ದರು ಅವರನ್ನೆಲ್ಲ ಪೊಲೀಸರು ಬಂಧಿಸಿದ್ದಾರೆ. ತನಿಖೆ ಮುಂದುವರಿದಿದೆ. ಈ ಸಂದರ್ಭದಲ್ಲಿ ಬಿಜೆಪಿಯವರು ಘಟನೆಯನ್ನು ರಾಜಕೀಯ ಅಸ್ತ್ರವಾಗಿ ಉಪಯೋಗ ಮಾಡಿಕೊಂಡು ಇಲ್ಲಸಲ್ಲದ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದರು. ಬಿಜೆಪಿಯವರು ಮೈಸೂರಿನಲ್ಲಿ ಇಂದು ಪ್ರತಿಭಟನೆ ಮಾಡಲು ಅನುಮತಿ ಕೋರಿ ಪೊಲೀಸರಿಗೆ ಮನವಿ ಮಾಡಿದ್ದರು. ಪ್ರತಿಭಟನೆ ನಡೆಸುವುದಕ್ಕೆ ಅನುಮತಿ ನೀಡಲು ಪೊಲೀಸರು ನಿರಾಕರಿಸಿದ್ದಾರೆ. ಈ ವಿಚಾರಚಾಗಿ ಅನುಮತಿ ಕೋರಿ ಹೈಕೋರ್ಟ್ಗೆ ಹೋಗಿದ್ದಾರೆ. ಕೋರ್ಟ್ನಲ್ಲಿ ಏನು ತೀರ್ಮಾನ ಬರುತ್ತದೆಯೇ ನೋಡಬೇಕು ಎಂದು ಹೇಳಿದರು.ಮೈಸೂರು ಗಲಾಟೆ ವಿಚಾರದಲ್ಲಿ ಹೆಚ್ಚು ರಾಜಕೀಯ ಮಾಡುವ ಬದಲು, ಯಾರು ತಪ್ಪು ಮಾಡಿದ್ದಾರೆ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಲು…
ಬೆಂಗಳೂರು : ರಾಜ್ಯದ ವಾಹನ ಸವಾರರಿಗೇ ಮತ್ತೆ ಬಿಗ್ ರಿಲೀಫ್ ಸಿಕ್ಕಿದ್ದು, HSRP ನಂಬರ್ ಪ್ಲೇಟ್ ಅಳವಡಿಕೆಗೆ ಈಗಾಗಲೇ ಹಲವು ಬಾರಿ ಗಡುವು ವಿಸ್ತರಣೆ ಮಾಡಲಾಗಿದೆ. ಇದೀಗ ಮತ್ತೆ ಗುಡುವನ್ನು ವಿಸ್ತರಣೆ ಮಾಡಲಾಗಿದ್ದು, ಈ ಮೂಲಕ ರಾಜ್ಯ ಸರ್ಕಾರವು ವಾಹನ ಸವಾರರಿಗೆ ಗುಡ್ ನ್ಯೂಸ್ ಸಿಕ್ಕಂತಾಗಿದೆ. ಇನ್ನೂ ತುಂಬಾ ಜನರ ವಾಹನ ಸವಾರರು ತಮ್ಮ ವಾಹನಗಳಿಗೆ ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಅನ್ನು ಅಳವಡಿಕೆ ಮಾಡಿಲ್ಲ. ಮತ್ತೆ ಗಡುವು ವಿಸ್ತರಿಸುವಂತೆ ಮನವಿ ಮಾಡಿದ ಹಿನ್ನೆಲೆ ಮಾರ್ಚ್ 31, 2025ರ ವರೆಗೆ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ. ಉಳಿದಂತೆ ದಿನಾಂಕ 17-08-2023ರಲ್ಲಿ ಹೊರಡಿಸಿ ಆದೇಶದಲ್ಲಿ ಬೇರೆ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ತಿಳಿಸಿದೆ. ಇದರ ಮೇಲೂ ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಕೆ ಮಾಡದಿದ್ದರೆ ಮಾಲೀಕತ್ವದ ಬದಲಾವಣೆ, ವಿಳಾಸ ಬದಲಾವಣೆ, ನಕಲಿ ಆರ್ಸಿ, ವಿಮೆ ಹಾಗೂ ಇನ್ನಿತರ ಕೆಲಸಗಳನ್ನು ಮಾಡಲಾಗುವುದಿಲ್ಲ. ಸಾರಿಗೆ ಇಲಾಖೆ ಹೊರಡಿಸಿರುವ ಈ ಸೂಚನೆಯಿಂದ ಅಧಿಕೃತ ಆಗಿಲ್ಲದ ವಾಹನಗಳು ರಸ್ತೆಯಲ್ಲಿ ಸಂಚರಿಸುವುದನ್ನು ಸುಲಭವಾಗಿ ಪತ್ತೆ…
ಬೆಳಗಾವಿ : ರಾಜ್ಯ ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಯೋಜನೆ ಹಣ ಮಹಿಳೆಯರ ಖಾತೆಗೆ ವರ್ಗಾವಣೆ ಅಥವಾ ಮಹಿಳೆಯರ ಖಾತೆಗೆ ಜಮೆ ಆಗುವುದು ವಿಳಂಬವಾಗುತ್ತಲ್ಲೇ ಇದ್ದು. ಇದೀಗ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಮುಂದಿನ 8 ದಿನಗಳಲ್ಲಿ ಯಜಮಾನಿಯರ ಖಾತೆಗೆ ಜಮೆ ಆಗಲಿದೆ ಎಂದು ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟನೆ ನೀಡಿದರು. ಬೆಳಗಾವಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಸ್ತೆ ಅಪಘಾತದಿಂದ ನಾನು ವಿಶ್ರಂತಿ ಪಡೆಯುತ್ತಿದ್ದೆ. ವಿಶ್ರಾಂತಿಯಲ್ಲಿದ್ದ ಕಾರಣಕ್ಕೆ ಹಣ ವಿಳಂಬವಾಗಿದೆ. ಇನ್ನೊಂದು 8 ದಿನಗಳಲ್ಲಿ ಹಣ ಮಹಿಳೆಯರ ಖಾತೆಗೆ ಜಮೆಯಾಗಲಿದೆ ಎಂದು ಹೇಳಿದ್ದಾರೆ. ಕೆಲವು ತಾಂತ್ರಿಕ ದೋಷಗಳಿಂದ ಮಹಿಳೆಯರ ಖಾತೆಗೆ ಕಳೆದ ಮೂರು ತಿಂಗಳಿಂದ ಹಣ ಜಮೆಯಾಗಿಲ್ಲ. ಆದರೆ ಮುಂದಿನ 8 ದಿನಗಳಲ್ಲಿ ಗೃಹಲಕ್ಷ್ಮಿ ಹಣ ಜಮೆ ಆಗುತ್ತದೆ ಎಂದು ಸ್ಪಷ್ಟನೆ ನೀಡಿದರು. ಹೊಸ ಮಾದರಿಯಲ್ಲಿ ಗೃಹ ಲಕ್ಷ್ಮಿಯ ಹಣ ಜಮಾ ಆಗುತ್ತಿದೆ. ಬೆಂಗಳೂರು ಸುತ್ತಮುತ್ತಲಿನ ೫ ತಾಲ್ಲೂಕು ಪಂಚಾಯಿತಿಗಳಿಗೆ ಹಣ ನೀಡಿದ್ದೇವೆ. ಅಲ್ಲಿಂದ ಸಿಡಿಪಿಒ…
ದಕ್ಷಿಣಕನ್ನಡ : ಹೆರಿಗೆ ಆಗಿರಲಿ ಅಥವಾ ಇನ್ಯಾವುದೋ ಆಪರೇಷನ್ ಆಗಿರಲಿ ಶಸ್ತ್ರಚಿಕಿತ್ಸೆ ವೇಳೆ ವೈದ್ಯರು ರೋಗಿಗಳ ಹೊಟ್ಟೆಯಲ್ಲಿ ಕತ್ತರಿ ಸೇರಿದಂತೆ ಹಲವು ವಸ್ತುಗಳನ್ನು ಮರೆತು ಬಿಟ್ಟಿರುವ ದೃಶ್ಯವನ್ನು ಸಿನೆಮಾದಲ್ಲಿ ನೋಡಿರುತ್ತೇವೆ. ಆದರೆ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಮಹಿಳೆಯೊಬ್ಬರಿಗೆ ಸಿಸೇರಿಯನ್ ಬಳಿಕ ಸರ್ಜಿಕಲ್ ಬಟ್ಟೆ ಹೊಟ್ಟೆಯೊಳಗಿಟ್ಟು ವೈದ್ಯರು ಹೊಲಿಗೆ ಹಾಕಿರುವ ಘಟನೆ ಬೆಳಕಿಗೆ ಬಂದಿದೆ. ಹೌದು 2024ರ ನವೆಂಬರ್ 27ರಂದು ಪುತ್ತೂರಿನ ಖಾಸಗಿ ಆಸ್ಪತ್ರೆಗೆ, ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮದ ಬಂಗಾರಡ್ಕದ ಶರಣ್ಯ ಲಕ್ಷ್ಮೀ ಎಂಬವರು ಹೆರಿಗೆಗಾಗಿ ದಾಖಲಾಗಿದ್ದರು. ಅವರಿಗೆ ಸಿಸೇರಿಯನ್ ಶಸ್ತ್ರ ಚಿಕಿತ್ಸೆ ಮೂಲಕ ಹೆರಿಗೆ ಮಾಡಿ, ಡಿಸೆಂಬರ್ 2 ರಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿತ್ತು.ಬಳಿಕ ಮಹಿಳೆಗ ವಿಪರೀತ ಜ್ವರದಿಂದ ಬಳಲಿದ್ದರು. ಈ ಬಗ್ಗೆ ಮಹಿಳೆಯ ಕುಟುಂಬದವರು ಹೆರಿಗೆ ಮಾಡಿಸಿದ ವೈದ್ಯ ಡಾ ಅನಿಲ್ ಬಳಿ ವಿಚಾರಿಸಿದ್ದರು. ಜ್ವರದ ಔಷಧಿ ನೀಡುವಂತೆ ವೈದ್ಯರು ಸೂಚಿಸಿದ್ದರು. ಅದಾದ ನಂತರ ಬಾಣಂತಿಯ ಸಮಸ್ಯೆ ಕಡಿಮೆಯೇ ಆಗದಿರುವುದರಿಂದ ಬಾಣಂತಿಯ ಕುಟುಂಬದವರು ಮಂಗಳೂರಿನ ವೈದ್ಯರನ್ನು ಸಂಪರ್ಕಿಸಿದ್ದರು. ಅಲ್ಲಿ…
ಕೊಪ್ಪಳ : ಬಲ್ಡೊಟ ಫ್ಯಾಕ್ಟರಿ ಸ್ಥಾಪನೆ ವಿರೋಧಿಸಿ ಇಂದು ಕೊಪ್ಪಳ ಬಂದ್ ಮಾಡಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ವ್ಯಾಪಾರಸ್ಥರು ವ್ಯಾಪಾರ ವಹಿವಾಟು ಸಂಪೂರ್ಣ ಬಂದ್ ಮಾಡಿ ಇದೀಗ ಬೆಂಬಲ ನೀಡಲಾಗಿದೆ. ಸ್ವಯಂ ಪ್ರೇರಣೆಯಿಂದ ವ್ಯಾಪಾರಿಗಳು ತಮ್ಮ ವ್ಯಾಪಾರಗಳನ್ನು ಬಂದ್ ಮಾಡಿ ಬೆಂಬಲ ಸೂಚಿಸಿದ್ದಾರೆ. ಪ್ರತಿಭಟನೆಯಲ್ಲಿ ಕನ್ನಡ ಪರ ಸಂಘಟನೆಗಳು, ರೈತಪರ ಸಂಘಟನೆಗಳು ಹಾಗೂ ವ್ಯಾಪಾರಸ್ಥರಿಂದ ಪ್ರತಿಭಟನೆ ಬೃಹತ್ ಮೆರವಣಿಗೆ ನಡೆಯುತ್ತಿದೆ. ಕೊಪ್ಪಳದಲ್ಲಿ ಬಲ್ದೋಟಾ ಫ್ಯಾಕ್ಟರಿ ಆರಂಭಕ್ಕೆ ತಯಾರಿ ಮಾಡಲಾಗಿದ್ದು, ಬೃಹತ್ ಸ್ಟೀಲ್ ಮತ್ತು ಪವರ್ ಪ್ಲಾಂಟ್ ಕಂಪನಿ ಯಾಗಿದೆ.ಬಲ್ದೋಟಾ 54,000 ಕೋಟಿ ಬಂಡವಾಳ ಹೂಡುತ್ತಿರುವ ಈ ಸಂಸ್ಥೆ ವಾರ್ಷಿಕ 10.50 ಮಿಲಿಯನ್ ಟನ್ ಕಬ್ಬಿಣ ಉತ್ಪಾದನೆ ಘಟಕ ಸ್ಥಾಪನೆ ಮಾಡುತ್ತಿದೆ. ಬಲ್ದೋಟಾ ಫ್ಯಾಕ್ಟರಿ ಆರಂಭದಿಂದ ಜನರಿಗೆ ತೊಂದರೆ ಆಗುತ್ತಿದೆ ಎಂದು ಆರೋಪ ಕೇಳಿ ಬಂದಿದೆ. ಜನ ಕ್ಯಾನ್ಸರ್ ಹಾಗೂ ಹಲವಾರು ರೋಗಗಳಿಗೆ ತುತ್ತಾಗುತ್ತಾರೆ ಎಂದು ಕಿಡಿ ಕಾರಲಾಗಿದೆ.ಕೊಪ್ಪಳ ತಾಲೂಕಿನಲ್ಲಿ 200ಕ್ಕೂ ಹೆಚ್ಚು ವಿವಿಧ ಫ್ಯಾಕ್ಟರಿಗಳಿವೆ. ಈಗಾಗಲೇ ಫ್ಯಾಕ್ಟರಿಗಳ ಮಾಲಿನ್ಯದಿಂದ ಬದುಕು ದುಸ್ತರವಾಗಿದೆ…
ಬೆಳಗಾವಿ: ಕನ್ನಡಿಗರ ಮೇಲೆ ಮರಾಠಿ ಭಾಷಿಕರ ಪುಂಡಾಟಕ್ಕೆ ಕಡಿವಾಣ ಹಾಕಬೇಕಿದ್ದ ಬೆಳಗಾವಿ ಜಿಲ್ಲಾಧಿಕಾರಿ ಮರಾಠಿ ಪ್ರೇಮ ಮೆರೆಯಲು ಮುಂದಾಗಿದ್ದು ಸದ್ಯ ಇವರ ನಡೆ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದೆ. ಮರಾಠಿಗರ ಬಹುದಿನಗಳ ಬೇಡಿಕೆ ಯಾಗಿದ್ದ ಮರಾಠಿ ಭಾಷಿಕ ಪ್ರದೇಶದಲ್ಲಿ ಮರಾಠಿ ಭಾಷೆಯಲ್ಲೇ ದಾಖಲೆ ನೀಡಲು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಮುಂದಾಗಿದ್ದಾರೆ. ಸದ್ಯ ಇವರ ನಡೆಗೆ ಕನ್ನಡಪರ ಸಂಘಟನೆ ಸದಸ್ಯರು ಸೇರಿದಂತೆ ಗಡಿ ಭಾಗದ ಕನ್ನಡಿಗರು ಜಿಲ್ಲಾಧಿಕಾರಿ ನಡೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳೆದ ಕೆಲ ದಿನಗಳ ಹಿಂದೆ ಎಂಇಎಸ್ ಮುಖಂಡರ ಜತೆ ರಾಷ್ಟ್ರೀಯ ಖ್ಯಾತರ ಆಯೋಗದ ಸದಸ್ಯರು ಜಿಲ್ಲಾಧಿಕಾರಿಯನ್ನು ಭೇಟಿಯಾಗಿ ಮರಾಠಿ ಭಾಷೆಯಲ್ಲೇ ದಾಖಲೆ ನೀಡುವಂತೆ ಮನವಿ ಮಾಡಿದ್ದಾರೆ. ಇದಕ್ಕೆ ಜಿಲ್ಲಾಧಿಕಾರಿ ಸಮ್ಮತಿ ಸೂಚಿಸಿದ್ದಾರೆ ಎಂದು ಮರಾಠಿ ದಿನಪತ್ರಿಕೆಗಳಲ್ಲಿ ವರದಿಯಾಗಿದೆ. ಈ ಕುರಿತು ಪ್ರತಿಕ್ರಿಯೆ ನೀಡಿದ ಕನ್ನಡಪರ ಹೋರಾಟಗಾರ ಅಶೋಕ್ ಚಂದರಗಿ, ಮರಾಠಿ ಭಾಷೆಯಲ್ಲಿ ದಾಖಲೆ ನೀಡುವ ಅಧಿಕಾರ ಕೇವಲ ಸಚಿವ ಸಂಪುಟ ನಿರ್ಧಾರದಿಂದ ಆಗಬೇಕು. ಆದರೆ ಜಿಲ್ಲಾಧಿಕಾರಿ ನನಗೆ ಅಧಿಕಾರ ಇದೆ ಎಂದು…