Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಇನ್ನೇನು ಕೆಲವೇ ದಿನಗಳಲ್ಲಿ ಬಹು ನಿರೀಕ್ಷಿತ ರಿಷಬ್ ಶೆಟ್ಟಿ ನಟನೆಯ ಕಾಂತಾರ ಚಾಪ್ಟರ್-1 ಬಿಡುಗಡೆಯಾಗಲಿದೆ. ಈಗಾಗಲೇ ಟ್ರೈಲರ್ ಹೊರಬರಲು ಮುಹೂರ್ತ ಫಿಕ್ಸ್ ಆಗಿದೆ. ದೊಡ್ಡಮಟ್ಟದಲ್ಲಿ ಸಿನಿಮಾ ಪ್ರಮೋಷನ್ ಪ್ಲ್ಯಾನ್ ನಡೀತಿದೆ. ಹೌದು ಇಡೀ ಭಾರತೀಯ ಚಿತ್ರರಂಗವೇ ‘ಕಾಂತಾರ’ ಹೊಸ ಅಧ್ಯಾಯ ಸಂಭ್ರಮಿಸಲಿದೆ. ಅದಕ್ಕಾಗಿ ಸ್ಟಾರ್ ನಟರು ಹೊಂಬಾಳೆ ಜೊತೆ ಕೈ ಜೋಡಿಸುತ್ತಿದ್ದಾರೆ. ಈ ಬಗ್ಗೆ ಕಾಂತಾರಾ ಚಾಪ್ಟರ್-1 ಟ್ರೈಲರ್ ಲಾಂಚ್ಗೆ ದಿನಾಂಕ, ಸಮಯ ನಿಗದಿಪಡಿಸಿರುವ ಬಗ್ಗೆ ಹೊಂಬಾಳೆ ಫಿಲ್ಮ್ಸ್ ತನ್ನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಅಧಿಕೃತ ಮಾಹಿತಿ ಪ್ರಕಟಿಸಿದೆ. ಸೆಪ್ಟೆಂಬರ್ 22ರ ಸೋಮವಾರ ಮಧ್ಯಾಹ್ನ 12:45 ಗಂಟೆಗೆ ‘ಕಾಂತಾರ ಚಾಪ್ಟರ್-1’ ಸಿನಿಮಾ ಟ್ರೈಲರ್ ಬಿಡುಗಡೆ ಆಗಲಿದೆ. ಬೆಂಗಳೂರಿನ ಒರಾಯನ್ ಮಾಲ್ನಲ್ಲಿ ದೊಡ್ಡ ಈವೆಂಟ್ ಮಾಡಿ ಟ್ರೈಲರ್ ರಿಲೀಸ್ ಮಾಡುವ ಸಾಧ್ಯತೆಯಿದೆ. ಇನ್ನು ಹೃತಿಕ್ ರೋಷನ್ ಹಿಂದಿ ವರ್ಷನ್ ಟ್ರೈಲರ್ ಅನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಲಿದ್ದಾರೆ. ಅದೇ ರೀತಿ, ತೆಲುಗಿಗೆ ಪ್ರಭಾಸ್, ಮಲಯಾಳಂಗೆ ಪೃಥ್ವಿರಾಜ್ ಸುಕುಮಾರನ್, ತಮಿಳಿಗೆ ಶಿವಕಾರ್ತಿಕೇಯನ್ ಪ್ರಚಾರಕ್ಕೆ ಸಾಥ್…
ಮಹಾಲಯ ಅಮವಾಸ್ಯೆ (ಪಿತೃಪಕ್ಷದ ಕೊನೆಯ ದಿನ)ವನ್ನು ಅತ್ಯಂತ ಪವಿತ್ರವಾದ ಮತ್ತು ಶ್ರೇಷ್ಠವಾದ ತಿಥಿ ಎಂದು ಶಾಸ್ತ್ರಗಳು ಹೇಳುತ್ತವೆ. ಇದು ಮುಖ್ಯವಾಗಿ ಪಿತೃಗಳಿಗೆ ತರ್ಪಣ, ಶ್ರಾದ್ಧ, ಪಿಂಡಪ್ರದಾನ ಮಾಡುವ ದಿನ. ಈ ದಿನ ಮಾಡಿದ ಕಾರ್ಯಗಳು ಬಹಳ ಪರಿಣಾಮಕಾರಿ. ಮಹಾಲಯ ಅಮಾವಾಸ್ಯೆಯ ಅನುಕೂಲಗಳು: 1. ಪಿತೃಗಳ ಆಶೀರ್ವಾದ: ಈ ದಿನ ಶ್ರಾದ್ಧ–ತರ್ಪಣ ಮಾಡಿದರೆ ಪಿತೃಗಳು ತೃಪ್ತರಾಗಿ ವಂಶಕ್ಕೆ ಕೃಪೆ ಮಾಡುತ್ತಾರೆ. 2. ಅಪರ ಪಿತೃಗಳಿಗೆ ಲಾಭ: ಪೂರ್ವಜರಿಗೆ ಮೋಕ್ಷ ಸಿಗಲು ಸಹಾಯವಾಗುತ್ತದೆ ಎಂದು ನಂಬಿಕೆ. 3. ಕುಟುಂಬದ ಸಮೃದ್ಧಿ: ಪಿತೃಕೃಪೆಯಿಂದ ಧನ, ಧಾನ್ಯ, ಸಂತಾನ, ಆರೋಗ್ಯದಲ್ಲಿ ಸುಧಾರಣೆ. 4. ಪಾಪ ಕ್ಷಯ: ನಿತ್ಯಕರ್ಮಗಳಲ್ಲಿ ಮಾಡದಿದ್ದ ಶ್ರಾದ್ಧವನ್ನು ಈ ದಿನ ಮಾಡಿದರೆ ವಿಶೇಷ ಫಲ ಸಿಗುತ್ತದೆ. 5. ಆಧ್ಯಾತ್ಮಿಕ ಶ್ರೇಯಸ್ಸು: ಜಪ, ದಾನ, ಅನ್ನಸಂತರ್ಪಣೆ ಮಾಡಿದರೆ ದೀರ್ಘಕಾಲದ ಪುಣ್ಯ. * ಅನಾನುಕೂಲಗಳು (ಅಲಕ್ಷ್ಯ ಮಾಡಿದರೆ):* 1. ಪಿತೃದೋಷ: ಈ ದಿನ ಶ್ರಾದ್ಧ, ತರ್ಪಣ, ಸ್ಮರಣೆಗಳನ್ನು ಮಾಡದಿದ್ದರೆ ಪಿತೃಗಳು ಅಸಮಾಧಾನಗೊಂಡು ಕುಲದಲ್ಲಿ ಅಡೆತಡೆಗಳು ಬರಬಹುದು. 2.…
ಬೆಂಗಳೂರು : ಈ ಬಾರಿಯ 2025-26ನೇ ಸಾಲಿನ ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಶನಿವಾರ ಪ್ರಕಟವಾಗಿದೆ.ಆಕ್ಷೇಪಣೆಗಳನ್ನು ಮಂಡಲಿಯ ಇ-ಮೇಲ್ ವಿಳಾಸ: chairpersonkseab@gmail.comಗೆ ಹಾಗೂ ಹಾರ್ಡ್ ಪ್ರತಿಯನ್ನು ಅಧ್ಯಕ್ಷರು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ, 6ನೇ ಅಡ್ಡರಸ್ತೆ, ಮಲ್ಲೇಶ್ವರಂ, ಬೆಂಗಳೂರು-560003 ಇಲ್ಲಿಗೆ ನಿಗದಿತ ಸಮಯದೊಳಗೆ ಕಳುಹಿಸಬೇಕು. ನಿಗದಿಪಡಿಸಿರುವ ಕೊನೆಯ ದಿನಾಂಕದ ನಂತರ ಬರುವ ಯಾವುದೇ ಆಕ್ಷೇಪಣೆಗಳನ್ನು ಪರಿಗಣಿಸುವುದಿಲ್ಲ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ತಿಳಿಸಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ವೆಬ್ಸೈಟ್ www.kseab.karnataka.gov.in ನಲ್ಲಿ ಪರೀಕ್ಷೆ-1, ಪರೀಕ್ಷೆ-2ರ ವೇಳಾಪಟ್ಟಿ ಪ್ರಕಟಿಸಿದೆ. 2026ರ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ-1 ಮತ್ತು 2ರ ತಾತ್ಕಾಲಿಕ ವೇಳಾಪಟ್ಟಿಗಳಿಗೆ ವಿದ್ಯಾರ್ಥಿಗಳು, ಪೋಷಕರು ಹಾಗೂ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಲು ಅಕ್ಟೋಬರ್ 9ರ ವರೆಗೆ ಕಾಲಾವಕಾಶ ನೀಡಲಾಗಿದೆ. ಎಸ್ಎಸ್ಎಲ್ಸಿ ಪರೀಕ್ಷೆ-1: ಮಾ.18 ಪ್ರಥಮ ಭಾಷೆ ಕನ್ನಡ, ತೆಲುಗು, ಹಿಂದಿ,ಮರಾಠಿ, ತಮಿಳು, ಉರ್ದು, ಇಂಗ್ಲಿಷ್,…
ಚಾಮರಾಜನಗರ : ಚುನಾವಣೆಯಲ್ಲಿ ವಿರುದ್ಧವಾಗಿ ಮತ ಹಾಕಿದ್ದಕ್ಕೆ ಬೇಸತ್ತು ಆತ್ಮಹತ್ಯೆಗೆ ಕುಟುಂಬವೊಂದು ಮುಂದಾಗಿದ್ದ ಘಟನೆ ಚಾಮರಾಜನಗರ ತಾಲೂಕಿನ ಬೆಂಡರವಾಡಿ ಗ್ರಾಮದಲ್ಲಿ ಒಂದು ಘಟನೆ ನಡೆದಿದೆ. ಉಪಾರಶೆಟ್ಟಿ ಸಮುದಾಯದ ರವಿ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಲಾಗಿದೆ. ವರ್ಷದ ಹಿಂದೆ ಕೇವಲ 5000 ಚೀಟಿ ಹಣ ಕೊಡುವಂತೆ ರವಿ ಕೇಳಿದ್ದಾನೆ. ರವಿ ಬದಲು ಬೇರೆ ಅವರಿಗೆ ಊರಿನ ಜಮಾನರು ಚೀಟಿ ಹಣ ನೀಡಿದ್ದರು. ಇದನ್ನು ಪ್ರಶ್ನೆಸಿ ಗ್ರಾಮದ ಯಜಮಾನರ ಜೊತೆ ರವಿ ಜಗಳವಾಡಿದ್ದ. ಘಟನೆ ನಡೆದ ಒಂದು ವಾರದಲ್ಲಿ ಸಮುದಾಯದ ಚುನಾವಣೆ ನಡೆದಿತ್ತು. ಚುನಾವಣೆಯಲ್ಲಿ ಯಜಮಾನರ ವಿರೋಧಿ ಬಣ್ಣಕ್ಕೆ ರವಿ ಮತ ಹಾಕಿದ್ದಾನೆ. ಯಜಮಾನರ ವಿರೋಧಿ ಬಣಕ್ಕೆ ಮತ ಹಾಕಿದ್ದಕ್ಕೆ ರವಿ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಲಾಗಿದೆ. ಯಾರು ರವಿ ಕುಟುಂಬಸ್ಥರನ್ನು ಮಾತನಾಡಿಸಿದಂತೆ ಕಟ್ಟಾಜ್ಞೆ ಹೊರಡಿಸಲಾಗಿತ್ತು. ಯಾರಾದ್ರೂ ಮಾತನಾಡಿದಿದ್ದರೆ 10,000 ದಂಡ ವಿಧಿಸುವ ಎಚ್ಚರಿಕೆ ಸಹ ನೀಡಲಾಗಿತ್ತು . ಈ ವೇಳೆ ತಪ್ಪಾಯ್ತು ಕ್ಷಮಿಸಿ ಎಂದು ಬೇಡಿಕೊಂಡರು ಊರಿನ ಯಜಮಾನರು ಇದಕ್ಕೆ ಒಪ್ಪಲಿಲ್ಲ. ಇನ್ನು…
ಬೆಳಗಾವಿ : ಬಸವಣ್ಣನವರು ಲಿಂಗಾಯತ ಧರ್ಮವನ್ನು ಮಾಡಿಲ್ಲ, ಕೆಲವು ಕಂಪನಿಗಳು ಅದನ್ನು ತಯಾರು ಮಾಡಿಕೊಂಡಿವೆ. ಬಸವಣ್ಣನವರು ಹಿಂದೂ ಸಮಾಜದಲ್ಲಿ ಮೌಢ್ಯಗಳ ವಿರುದ್ಧ ಹೋರಾಡಿದ್ದಾರೆಯೇ ಹೊರತು ಲಿಂಗಾಯತ ಧರ್ಮವನ್ನು ಸ್ಥಾಪನೆಯೇ ಮಾಡಿಲ್ಲ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ನೀಡಿದರು. ರಾಯಭಾಗ ತಾಲೂಕಿನ ಹಾರುಗೇರಿಯಲ್ಲಿ ಪಂಚಮಸಾಲಿ ಮೀಸಲಾತಿ ಎಂಟನೇ ಹಂತದ ಹೋರಾಟಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕೆಲವು ಮಠಾಧೀಶರು ವೀರಶೈವ ಲಿಂಗಾಯತ ಎಂದು ಜಾತಿಗಣತಿಯಲ್ಲಿ ಉಲ್ಲೇಖಿಸುವಂತೆ ಹೇಳುತ್ತಿದ್ದಾರೆ. ಆದರೆ ಎಲ್ಲಿಯವರೆಗೆ ಕೇಂದ್ರ ಸರ್ಕಾರ ವೀರಶೈವ ಲಿಂಗಾಯತ ಎಂದು ಅಧಿಕೃತವಾಗಿ ಘೋಷಣೆ ಮಾಡುವುದಿಲ್ಲವೋ ಅಲ್ಲಿಯವರೆಗೆ ಈ ರೀತಿ ನಾವು ಬರೆಸಿದರೆ ಯಾವುದೇ ಅರ್ಥವಿಲ್ಲ. ಕೆಲವು ಮೂರ್ಖರು ಲಿಂಗಾಯತ ಸಮುದಾಯವನ್ನು ತಪ್ಪು ದಾರಿಗೆ ಎಳೆಯುವುದಕ್ಕೆ ಪ್ರಯತ್ನ ಪಡುತ್ತಿದ್ದಾರೆ ಎಂದು ಯತ್ನಾಳ್ ಹರಿಹಾಯ್ದರು. ಧರ್ಮ ಎಂದಲ್ಲಿ ಹಿಂದೂ ಎಂದೇ ಬರೆಸಬೇಕು, ಜಾತಿ ಕಾಲಂನಲ್ಲಿ ಲಿಂಗಾಯತ, ಪಂಚಮಸಾಲಿ ಏನಿದೆಯೋ ಅದನ್ನು ಬರೆಸಬೇಕು, ಸರ್ಕಾರದ ಮೀಸಲಾತಿಯಲ್ಲಿ ವೀರಶೈವ ಲಿಂಗಾಯತ ಎಂಬುದೇ ಇಲ್ಲ, ಆರು ಧರ್ಮಕ್ಕೆ ಮಾತ್ರ ನಮ್ಮ…
ಬೆಂಗಳೂರು : ನಾಳೆಯಿಂದ ರಾಜ್ಯಾದ್ಯಂತ ಜಾತಿ ಗಣತಿ ಆರಂಭವಗಲಿದ್ದು, ಜಾತಿ ಸಮೀಕ್ಷೆಯಲ್ಲಿ ಕ್ರಿಶ್ಚಿಯನ್ ಅಡಿ ವಿವಿಧ ಜಾತಿಗಳನ್ನು ಉಲ್ಲೇಖಿಸಲಾಗುವುದೇ ಎಂಬುದಕ್ಕೆ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಇದರ ಬಗ್ಗೆ ಅಭಿಪ್ರಾಯಗಳನ್ನು ತಿಳಿಸಲಾಗಿದ್ದು, ಅನಗತ್ಯವಿರುವ ಅಂಶಗಳನ್ನು ತೆಗೆದುಹಾಕಲು ಹಿಂದುಳಿದ ವರ್ಗಗಳ ಆಯೋಗವೇ ನಿರ್ಧರಿಸುತ್ತದೆ. ಕ್ರಿಕ್ರಿಶ್ಚಿಯನ್ ಅಡಿ ವಿವಿಧ ಜಾತಿಗಳನ್ನು ನಮೂದಿಸಿದನ್ನು ಆಯೋಗ ಈಗಾಗಲೇ ತೆಗೆದು ಹಾಕಿದೆ ಎಂದು ಸ್ಪಷ್ಟಪಡಿಸಿದರು. ಗದಗದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ನಡೆಸಲು ಉದ್ದೇಶಿಸಿರುವ ಸಮೀಕ್ಷೆಯು ಕೇವಲ ಜಾತಿ ಗಣತಿಯಾಗಿರದೇ, ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯಾಗಿದೆ. ಜನರ ಜಾತಿಯ ವಿವರ ಪಡೆಯುವ ಜೊತೆಗೆ ಅವರ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸ್ಥಿತಿಗತಿಗಳ ವಿವರ ಪಡೆದು, ಅವಕಾಶ ವಂಚಿತರಿಗೆ ಸಮಾನ ಅವಕಾಶ ಕಲ್ಪಿಸಲು ಈ ಸಮೀಕ್ಷೆ ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಜಾತಿ ಗಣತಿ ಮಧ್ಯೆಯೇ ಕುರುಬ ಸಮಾಜವನ್ನು ಎಸ್ಟಿಗೆ ಸೇರಿಸುವ ಬಗ್ಗೆ ಪ್ರತಿಕ್ರಿಯಿಸಿ, ‘ಕುರುಬ ಸಮಾಜವನ್ನು ಎಸ್ಟಿಗೆ ಸೇರಿಸುವ ಶಿಫಾರಸನ್ನು ಹಿಂದಿನ ಬಿಜೆಪಿ ಸರ್ಕಾರವೇ ಮಾಡಿತ್ತು. ಆದರೆ…
ಹಾಸನ : ಕಳೆದ ಕೆಲವು ದಿನಗಳ ಹಿಂದೆ ಅಷ್ಟೇ ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದಲ್ಲಿ ಗಣೇಶ ಮೆರವಣಿಗೆ ವೇಳೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದ ಘಟನೆ ನಡೆದಿತ್ತು. ಈ ಒಂದು ಉಘಟನೆ ಮಾಸುವ ಮುನ್ನವೇ ಹಾಸನದಲ್ಲಿ ಮತ್ತೊಂದು ಘಟನೆ ನಡೆದಿದ್ದು ಗಣೇಶನ ಮೂರ್ತಿಗೆ ಕಿಡಿಗೇಡಿಗಳು ಚಪ್ಪಲಿ ಹಾರ ಹಾಕಿ ವಿಕೃತಿ ಮೆರೆದಿದ್ದಾರೆ. ಹೌದು ಹಾಸನದಲ್ಲಿ ಗಣೇಶನಿಗೆ ಚಪ್ಪಲಿ ಹಾರ ಹಾಕಿ ವಿಕೃತಿ ಮೆರೆಯಲಾಗಿದೆ. ಬೇಲೂರು ಪಟ್ಟಣದಲ್ಲಿ ಕಿಡಿಗೇಡಿಗಳಿಂದ ನೀಚತನ ನಡೆದಿದ್ದು, ಎರಡು ಚಪ್ಪಲಿಗಳಿಗೆ ದಾರ ಕಟ್ಟಿ ಗಣೇಶನ ಮೂರ್ತಿಗೆ ಹಾರ ಹಾಕಿದ್ದಾರೆ. ಪುರಸಭೆ ಆವರಣದಲ್ಲಿರುವ ಶ್ರೀ ವರಸಿದ್ಧಿ ವಿನಾಯಕ ಗಣಪತಿಗೆ ಚಪ್ಪಲಿ ಹಾರ ಹಾಕಿದ್ದಾರೆ. ಮುಂಜಾನೆ ದೇವರ ದರ್ಶನಕ್ಕೆ ಹೋದ ಭಕ್ತರಿಗೆ ಆಘಾತ ಕಾದಿದೆ. ಬೇಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದೆ. ಕಿಡಿಗೇಡಿಗಳನ್ನು ಬಂಧಿಸುವಂತೆ ಇದೀಗ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗುತ್ತಿದೆ.
ಇಂದು ಈ ವರ್ಷದ ಕೊನೆಯ ಸೂರ್ಯ ಗ್ರಹಣ ಗೋಚರಸುತ್ತಿದ್ದೂ, ಮಹಾಲಯ ಅಮಾವಾಸ್ಯೆಯ ದಿನದಂದೇ ಖಂಡಗ್ರಾಸ ಸೂರ್ಯ ಗ್ರಹಣ ಗೋಚರಿಸಲಿದೆ. ಹಾಗಾಗಿ ಇಂದು ಖಗೋಳದಲ್ಲಿ ಮತ್ತೊಂದು ವಿಸ್ಮಯ ನಡೆಯಲಿದೆ. ಕಳೆದ ಕೆಲವು ದಿನಗಳ ಹಿಂದೆ ಅಷ್ಟೆ ಚಂದ್ರ ಗ್ರಹಣ ಗೋಚರವಾಗಿತ್ತು. 15 ದಿನಗಳ ಅಂತರದಲ್ಲಿ ಸೂರ್ಯ ಚಂದ್ರ ಗ್ರಹಣಕ್ಕೆ ಇಂದು ಖಗೋಳ ಸಾಕ್ಷಿಯಾಗುತ್ತಿದೆ ಇಂದು ರಾತ್ರಿ 11 ರಿಂದ ನಾಳೆ ಬೆಳಗಿನ ಜಾವ 3.34 ರವರೆಗೆ ಸೂರ್ಯ ಗ್ರಹಣ ಗೋಚರಿಸಲಿದೆ. ಆದರೆ ಭಾರತದಲ್ಲಿ ಸೂರ್ಯಗ್ರಹಣ ಗೋಚರವಿಲ್ಲ. ನ್ಯೂಜಿಲ್ಯಾಂಡ್, ಅಂಟಾರ್ಟಿಕಾ, ಆಸ್ಟ್ರೇಲಿಯಾದ ಕೆಲವು ಭಾಗಗಳಲ್ಲಿ ಸೂರ್ಯ ಗ್ರಹಣ ಗೋಚರಿಸಲಿದೆ. ಸೂರ್ಯ ಗ್ರಹಣವು ಬಹಳ ಅಪರೂಪದ ಖಗೋಳ ಘಟನೆಯಾಗಿದೆ. ಸೂರ್ಯ ಗ್ರಹಣದಲ್ಲಿ ಭೂಮಿ, ಸೂರ್ಯ ಮತ್ತು ಚಂದ್ರನು ಒಂದೇ ಸಮನಾದ ರೇಖೆಯಲ್ಲಿ ಇರುತ್ತಾರೆ. ಈ ಸಮಯದಲ್ಲಿ ಚಂದ್ರನು ಸೂರ್ಯ ಮತ್ತು ಭೂಮಿಯ ನಡುವೆ ಬಂದು, ಸೂರ್ಯನ ಬೆಳಕನ್ನು ಭೂಮಿಗೆ ತಲುಪದಂತೆ ನಿರ್ಬಂಧಿಸುವ ಘಟನೆಯೇ ಸೂರ್ಯ ಗ್ರಹಣವಾಗಿದೆ. ಈ ಸೂರ್ಯ ಗ್ರಹಣವನ್ನು ಭಾಗಶಃ ಸೂರ್ಯ ಗ್ರಹಣ ಎಂದು…
ಧಾರವಾಡ : ಕನ್ನಡದ ಜಯಪ್ರಿಯ ಯೂಟ್ಯೂಬರ್ ಮುಕಳೆಪ್ಪ ನಕಲಿ ದಾಖಲೆ ನೀಡಿ ಹಿಂದೂ ಯುವತಿಯನ್ನು ಮದುವೆಯಾಗಿದ್ದಾರೆ. ಈ ಪ್ರಕರಣದ ವಿರುದ್ಧ ಬಜರಂಗದಳ ಕಾರ್ಯಕರ್ತರು ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಲವ್ ಜಿಹಾದ್ ಆರೋಪ ಮಾಡಿರುವ ಕಾರ್ಯಕರ್ತರು, ಮುಕಳೆಪ್ಪ ಸುಳ್ಳು ದಾಖಲೆ ನೀಡಿ ಹಿಂದೂ ಯುವತಿಯನ್ನ ಮದುವೆಯಾಗಿದ್ದಾರೆ ಎಂದು ಆರೋಪಿಸಿದ್ದಾರೆ. ಇನ್ನು ಯುವತಿಯ ತಂದೆ ತಾಯಿ, ಮುಕಳೆಪ್ಪ ನನ್ನ ಮಗಳನ್ನು ಟೂರ್ ಗೆ ಕರೆದುಕ್ಕೊಂಡು ಹೋಗುತ್ತಿದ್ದ. ನಾವು ಹಳ್ಳಿಯವರು ಎಲ್ಲೂ ಹೋಗಲ್ಲ. ನನ್ನ ಮಗಳು ದೊಡ್ಡ ಹೆಸರು ಮಾಡಬಹುದು ಅಂತಾ ಮುಕಳೆಪ್ಪನ ಜೊತೆ ವಿಡಿಯೋ ಮಾಡಲು ಹೋಗುತ್ತಿದ್ದಳು. ನಾವು ವಿಡಿಯೋ ಮಾಡಲು ಕಳುಹಿಸಿಕೊಡುತ್ತಿದ್ದೆವು. ಅವನು ಈಗ ನನ್ನ ಮಗಳು ಗಾಯತ್ರಿಗೆ ಮೋಸ ಮಾಡಿದ್ದಾನೆ. ನಮ್ಮ ಹಿಂದೂ ಮಂದಿ ಏನ್ ಶಿಕ್ಷೆ ಕೊಡುತ್ತೀರೋ ಕೊಡಿ. ನನ್ನ ಮಗಳನ್ನ ಕರೆತಂದು ನನಗೆ ಒಪ್ಪಿಸಿ ಎಂದು ಮನವಿ ಮಾಡಿಕೊಂಡಿದ್ದಾರೆ. ತಮ್ಮ ಮಗಳನ್ನು ಪುಸಲಾಯಿಸಿ ಮುಕುಳೆಪ್ಪ ಮದುವೆ ಆಗಿದ್ದಾನೆ. ನಮ್ಮ ಮಗಳು ದೊಡ್ಡ ಮಟ್ಟದಲ್ಲಿ ಬೆಳಿತಾಳೆ…
ವಸಾಯಿ : ಕಳೆದ ಕೆಲವು ದಿನಗಳ ಹಿಂದೆ ಅಷ್ಟೆ ಬೀದರ್ ನಲ್ಲಿ ಮಲತಾಯಿ ಒಬ್ಬಳು ಮಗುವನ್ನು 3ನೇ ಮಹಡಿಯಿಂದ ತಳ್ಳಿ ಕೊಂಡಿದ್ದಳು. 3ನೇ ಮಹಡಿಯಿಂದ ಬಿದ್ದರು ಸ್ವಲ್ಪ ಕಾಲ ಮಗು ಬದುಕಿತ್ತು. ಬಳಿಕ ಸಾವನ್ನಪ್ಪಿತ್ತು. ಇದೀಗ 4ನೇ ಮಹಡಿಯಿಂದ ಬಿದ್ದು ಬದುಕಿದ್ದ 16 ತಿಂಗಳ ಮಗುವೊಂದು ಟ್ರಾಫಿಕ್ ಜಾಂನಲ್ಲಿ ಸಿಲುಕಿ ಮೃತಪಟ್ಟಿರುವ ಆಘಾತಕಾರಿ ಘಟನೆ ಮುಂಬೈನಲ್ಲಿ ನಡೆದಿದೆ. ಗುರುವಾರ ಮಧ್ಯಾಹ್ನ 1.30ರ ವೇಳೆಗೆ ವಸಾಯಿಯ ಫಾತಿಮಾ ಮಂಜಿಲ್ ಎಂಬಲ್ಲಿ ಮಗುವೊಂದು 4ನೇ ಮ ಹಡಿಯಿಂದ ಕೆಳಗೆ ಬಿದ್ದಿದ್ದು, ಹೊಟ್ಟೆ ಮತ್ತು ಕಿಬ್ಬೊಟ್ಟೆಗೆ ತೀವ್ರವಾಗಿ ಪೆಟ್ಟಾಗಿತ್ತು. ತಕ್ಷಣ ಪೋಷಕರು ಕಂದನನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅಲ್ಲಿನ ವೈದ್ಯರು ಮಗುವಿಗೆ ಆಂತರಿಕ ರಕ್ತಸ್ರಾವವಾಗಿರುವುದನ್ನು ಕಂಡು, ದೊಡ್ಡ ಆಸ್ಪತ್ರೆಗೆ ಕರೆದೊಯ್ಯುವಂತೆ ಸೂಚಿಸಿದ್ದಾರೆ. ಅದರಂತೆಯೆ ಪೋಷಕರು ಮಗುವಿನೊಂದಿಗೆ ಮುಂ ಬೈನ ಆಸ್ಪತ್ರೆಗೆ ಕಾರಿನಲ್ಲಿ ಹೊರಟಿದ್ದಾರೆ. ಆದರೆ ಅಹ್ಮದಾ ಬಾದ್-ಮುಂಬೈ ಹೆದ್ದಾರಿಯಲ್ಲಿದ್ದ ಭಾರೀ ಟ್ರಾಫಿಕ್ ಉಂಟಾಗಿ, ಅವರೆಲ್ಲ 4 ತಾಸು ಕಾರಿನಲ್ಲೇ ಕಳೆಯುವಂತಾಗಿದೆ. ಈ ವೇಳೆ ಮಗುವಿನ ಮೈ…








