Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಪ್ರಾಣಿ ಹಾಗೂ ಮಾನವ ಸಂಘರ್ಷಗಳ ನಡುವೆ ಅರಣ್ಯ ಸಂರಕ್ಷಣೆಯಲ್ಲಿ ತೊಡಗಿದ ಅರಣ್ಯ ಸಂಧಿಗಳು ತಮ್ಮ ಪ್ರಾಣವನ್ನು ಲೆಕ್ಕಿಸದೆ ಶ್ರಮಿಸುತ್ತಿರುವ ಅರಣ್ಯ ಸಿಬ್ಬಂದಿಗಳಿಗೆ ಅಪಾಯದ ಭತ್ಯೆ ನೀಡಲು ಹೋರಾಟ ಸರ್ಕಾರ ನಿರ್ಧರಿಸಿದೆ ಎಂದು ಅರಣ್ಯ ಇಲಾಖೆಯ ಸಚಿವ ಈಶ್ವರ ಖಂಡ್ರೆ ತಿಳಿಸಿದರು. ಈ ಕುರಿತು ಅರಣ್ಯ ಭವನದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ವನ್ಯಜೀವಿ ದಾಳಿ ಮತ್ತು ಕಳ್ಳಬೇಟೆಗಾರರ ದಾಳಿಯ ಭೀತಿಯ ನಡುವೆಯೂ ಅರಣ್ಯ ಹಾಗೂ ವನ್ಯಜೀವಿ ಸಂರಕ್ಷಣೆ ಮಾಡಲು ಶ್ರಮಿಸುತ್ತಿರುವ ಸಿಬ್ಬಂದಿಗೆ ಅಪಾಯ ಭತ್ಯೆ ನೀಡಲು ಸರ್ಕಾರ ನಿರ್ಧರಿಸಿದೆ ಎಂದು ತಿಳಿಸಿದರು. ಅರಣ್ಯ ಸಿಬ್ಬಂದಿಯ ಬಹು ದಿನಗಳ ಬೇಡಿಕೆಯಾದ ಪೊಲೀಸ್ ಕ್ಯಾಂಟೀನ್ ಮಾದರಿಯ ಕ್ಯಾಂಟೀನ್ ವ್ಯವಸ್ಥೆ ಜಾರಿಗೊಳಿಸಲು ಶ್ರಮಿಸಲಾಗುತ್ತಿದೆ. ಈ ಬಗ್ಗೆ ಮುಖ್ಯಮಂತ್ರಿಯವರ ಗಮನ ಸೆಳೆಯಲಾಗಿದೆ ಎಂದು ಖಂಡ್ರೆ ಹೇಳಿದರು.
ಶನಿ ಮತ್ತು ಶಿವನ ನಡುವಿನ ಸಂಬಂಧ : ದಂತಕಥೆಯ ಪ್ರಕಾರ, ಶನಿಯು ಒಮ್ಮೆ ಶಿವನ ವಾಸಸ್ಥಳವಾದ ಕೈಲಾಸ ಪರ್ವತವನ್ನು ತಲುಪಿದನು. ಆಗ ಶಿವನು ಶನಿಯ ಬಳಿ ಇಲ್ಲಿಗೆ ಬಂದಿರುವ ಕಾರಣವೇನೆಂದು ಕೇಳಿದನು. ಆಗ ಶನಿ ”ಓ ಸ್ವಾಮಿ ನಾಳೆಯಿಂದ ನಾನು ನಿಮ್ಮ ರಾಶಿಗೆ ಬರಲಿದ್ದೇನೆ, ಅಂದರೆ ನಿಮ್ಮ ಮೇಲೆ ನನ್ನ ವಕ್ರ ದೃಷ್ಟಿ ಬೀಳಲಿದೆ ಎಂದು ಹೇಳುತ್ತಾನೆ”. ಶನಿಯ ಈ ಮಾತನ್ನು ಕೇಳಿದ ಶಿವನು ಚಿಂತಿತನಾಗಿ ಶನಿಯ ವಕ್ರ ದೃಷ್ಟಿಯನ್ನು ತಪ್ಪಿಸುವ ಮಾರ್ಗಗಳ ಬಗ್ಗೆ ಯೋಚಿಸಲು ಆರಂಭಿಸಿದನು. ನಂತರ ಶನಿಯ ದೃಷ್ಟಿಯಿಂದ ತಪ್ಪಿಸಿಕೊಳ್ಳಲು ಶಿವನು ಕಾಲು ಭಾಗದಷ್ಟು ದೇಹವನ್ನು ಆನೆಯ ರೂಪಕ್ಕೆ ತೆಗೆದುಕೊಂಡು ಮೃತ್ಯುಲೋಕವನ್ನು ಸೇರಿಕೊಳ್ಳುತ್ತಾನೆ. ಮತ್ತು ಸಂಜೆಯವರೆಗೂ ಆನೆಯ ರೂಪದಲ್ಲಿ ಇರಬೇಕಾಯಿತು. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ…
ಮಹಾರಾಷ್ಟ್ರ : ಮದುವೆಯಾಗಿ ನವ ಉದುವಿನಂತೆ ಗಂಡನ ಮನೆಗೆ ಬಂದಾಗ ಆಕೆಯ ಕನಸಿನಲ್ಲಿಯೂ ಇಂತಹ ಒಂದು ಘಟನೆ ನಡೆಯುತ್ತೆ ಎಂದು ಊಹಿಸಿರಲಿಲ್ಲ. ಹೌದು ಮಹಾರಾಷ್ಟ್ರದ ಥಾಣೆಯಲ್ಲಿ ಮದುವೆಯಾಗಿ ನವವಧು ಮನೆಗೆ ಬಂದಾಗ ಮಗಳ ಸಮಾನದ ಸೊಸೆಯ ಮೇಲೆ ಮಾವ ಹಾಗೂ ಆತನ ಸ್ನೇಹಿತ ಅತ್ಯಾಚಾರ ಎಸಗಿರುವ ಘಟನೆ ವರದಿಯಾಗಿದೆ. ಹೌದು ಮಗನನ್ನು ಮದುವೆಯಾಗಿ ಮನೆಗೆ ಬಂದ ಸೊಸೆಯ ಮೇಲೆ ಮಾವ ಅತ್ಯಾಚಾರವೆಸಗಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. 20 ವರ್ಷದ ಮಹಿಳೆ ಮೇಲೆ 52 ವರ್ಷದ ಮಾವ ಮತ್ತವನ ಸ್ನೇಹಿತ ಅತ್ಯಾಚಾರವೆಸಗಿದ್ದಾರೆ ಎಂದು ಮಹಿಳೆ ಪೊಲೀಸರಿಗೆ ದೂರು ನೀಡಿದ್ದಾಳೆ. ಈ ವಿಚಾರವನ್ನು ಯಾರ ಬಳಿಯಾದರೂ ಹೇಳಿಕೊಂಡರೆ ಆಕೆಯ ಪೋಷಕರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದರು. ಬಳಿಕ ನಿರಂತರ 15 ದಿನಗಳ ಕಾಲ ಆಕೆಗೆ ಚಿತ್ರಹಿಂಸೆ ನೀಡಿದ್ದಾರೆ. ಇಬ್ಬರೂ ಮಲಗಿದ್ದಾಗ ಆಕೆ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾಳೆ. ಆರೋಪಿಗಳಿಬ್ಬರೂ ಪ್ರಸ್ತುತ ತಲೆಮರೆಸಿಕೊಂಡಿದ್ದು, ಪೊಲೀಸ್ ತಂಡ ಅವರಿಗಾಗಿ ಹುಡುಕಾಟ ನಡೆಸುತ್ತಿದೆ ಎಂದು ನಾರ್ಪೋಲಿ ಪೊಲೀಸ್ ಠಾಣೆಯ ಹಿರಿಯ ಇನ್ಸ್ಪೆಕ್ಟರ್ ಭರತ್…
ತಮಿಳುನಾಡು : ‘ಡಿಜಿಟಲ್ ಅರೆಸ್ಟ್’ ಹಗರಣದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಚೆನ್ನೈನ ಎಂಜಿನಿಯರಿಂಗ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕರೊಬ್ಬರನ್ನು ತಮಿಳುನಾಡು ಪೊಲೀಸರ ಸೈಬರ್ ಅಪರಾಧ ವಿಭಾಗ ಬಂಧಿಸಿದೆ. ಆರೋಪಿ ಪರಶುರಾಮನ್ “ಎರಡು ವರ್ಷಗಳ ಕಾಲ ಅನುಮಾನಾಸ್ಪದ ಖಾತೆ ಕಾರ್ಯಾಚರಣೆಗಳು ಮತ್ತು ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ” ಎಂದು ತನಿಖೆಯಿಂದ ತಿಳಿದುಬಂದಿದೆ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಸಂದೀಪ್ ಮಿತ್ತಲ್ ಹೇಳಿದ್ದಾರೆ. ಅವರು ಪ್ರತಿ ವಹಿವಾಟಿಗೆ ₹1.20 ಲಕ್ಷ ಪಡೆಯುತ್ತಿದ್ದರು ಮತ್ತು ಈ ಮೊತ್ತವನ್ನು ತಮ್ಮ ಸಾಲಗಳನ್ನು ತೀರಿಸಲು ಬಳಸುತ್ತಿದ್ದರು ಎಂದು ಶ್ರೀ ಮಿತ್ತಲ್ ಹೇಳಿದರು. ಧರ್ಮಪುರಿ ಜಿಲ್ಲೆಯ ಮೂಲದ ಮತ್ತು ಕೋಡಂಬಾಕಂನ ಆರ್ಕಾಟ್ ರಸ್ತೆಯ ನಿವಾಸಿಯಾದ 35 ವರ್ಷದ ಪರಶುರಾಮನ್, ಅಣ್ಣಾ ವಿಶ್ವವಿದ್ಯಾಲಯದಿಂದ ಎಲೆಕ್ಟ್ರಾನಿಕ್ಸ್ ಮತ್ತು ಎಲೆಕ್ಟ್ರಿಕಲ್ ಎಂಜಿನಿಯರಿಂಗ್ನಲ್ಲಿ ಎಂಇ ಪದವಿ ಪಡೆದಿದ್ದು, ಕೋಡಂಬಾಕಂನ ಎಂಜಿನಿಯರಿಂಗ್ ಕಾಲೇಜಿನಲ್ಲಿ ಕೆಲಸ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಬೆಂಗಳೂರು : ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ನಿನ್ನೆ ಒಂದೇ ದಿನ ರಾಜ್ಯದಲ್ಲಿ ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ತುಮಕೂರಲ್ಲಿ ಇಬ್ಬರು ವ್ಯಕ್ತಿಗಳು ಹಾಗೂ ಕೋಲಾರದಲ್ಲಿ ಓರ್ವ ರೈತ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವರದಿಯಾಗಿದೆ. ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಜಾರಿ ಮಾಡಿದರು ಸಹ ಇದೀಗ ಆತ್ಮಹತ್ಯೆಗಳಿಗೆ ಕಡಿವಾಣ ಬಿದ್ದಿಲ್ಲ. ತುಮಕೂರಲ್ಲಿ ಒಬ್ಬ ಆಟೋ ಚಾಲಕ, ಓರ್ವ ಮಹಿಳೆ ಹಾಗೂ ಕೋಲಾರದಲ್ಲಿ ಓರ್ವ ರೈತ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಿನ್ನೆ ನಡೆದಿದೆ. ಹೌದು ಸುಗ್ರೀವಾಜ್ಞೆ ಜಾರಿ ಬಳಿಕವು ಮೈಕ್ರೋ ಟಾರ್ಚರ್ ನಿಂತಿಲ್ಲ. ಇದೀಗ ಗೃಹ ಸಚಿವರ ತವರಿನಲ್ಲಿ ಫೈನಾನ್ಸ್ ಸಿಬ್ಬಂದಿಗಳು ಕಿರುಕುಳ ನೀಡಿದ್ದಾರೆ ಎಂದು ತುಮಕೂರಿನಲ್ಲಿ ಒಂದೇ ದಿನ ಇಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಅಂಜನಮೂರ್ತಿ (35) ಆತ್ಮಹತ್ಯೆಗೆ ಶರಣಾದವರು. ಅಂಜನಮೂರ್ತಿ ಬಟವಾಡಿಯ ಮಹಾಲಕ್ಷ್ಮೀ ನಗರದ ನಿವಾಸಿ ಎಂದು ತಿಳಿದುಬಂದಿದೆ.ಆಂಜನೇಮೂರ್ತಿ ಆಟೋ ಚಾಲಕನಾಗಿದ್ದು, ಫೈನಾನ್ಸ್ ಕಿರುಕುಳಕ್ಕೆ ವಿಡಿಯೋ ಮಾಡಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ.ಹಣ ನೀಡುವಂತೆ ಫೈನಾನ್ಸ್ ಸಿಬ್ಬಂದಿ ಕಿರುಕುಳ ನೀಡುತ್ತಿದ್ದಾರೆ ನನ್ನ ಕುಟುಂಬಕ್ಕೆ ರಕ್ಷಣೆ…
ಬೆಂಗಳೂರು : ಇತ್ತೀಚಿಗೆ ರಾಜಧಾನಿ ಬೆಂಗಳೂರಿನಲ್ಲಿ ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ, ಅತ್ಯಾಚಾರ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇದೀಗ ಬೆಂಗಳೂರಿನ ವರ್ತೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಾಲ್ಕು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿರುವ ಘಟನೆ ವರದಿಯಾಗಿದೆ. ಹೌದು ಬೆಂಗಳೂರಿನಲ್ಲಿ 4 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿರುವ ಆರೋಪ ಕೇಳಿ ಬಂದಿದೆ. ವರ್ತೂರು ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ನೇಪಾಳ ಮೂಲದ 4 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಲಾಗಿದೆ. ಬಾಲಕಿಯ ತಂದೆ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದಾರೆ ಎಂದು ತಿಳಿದು ಬಂದಿದೆ. ಬಿಹಾರ್ ಮೂಲದ ಯುವಕನಿಂದ ಈ ಒಂದು ನೀಚ ಕೃತ್ಯ ಎಸಗಲಾಗಿದೆ ಎನ್ನುವ ಆರೋಪ ಕೇಳಿ ಬಂದಿದೆ. ಸದ್ಯ ಆರೋಪಿವನ್ನು ಪೊಲೀಸರು ಈಗ ವಶಕ್ಕೆ ಪಡೆದುಕೊಂಡು ವಿಚಾರಣೆಗೆ ಒಳಪಡಿಸಿದ್ದಾರೆ.
ಬೆಂಗಳೂರು : ತಡರಾತ್ರಿ ಬೆಂಗಳೂರಿನಲ್ಲಿ ಭೀಕರವಾದಂತಹ ಕೊಲೆ ನಡೆದಿದ್ದು ಕಾಂಗ್ರೆಸ್ ಶಾಸಕ ಎನ್ ಎ ಹ್ಯಾರಿಸ್ ಬಲಗೈ ಬಂಟನ ಒರ್ಬರ ಕೊಲೆಯಾಗಿದೆ. ಹೈದರ್ ಅಲಿ ಕೊಲೆಯಾದ ಕಾಂಗ್ರೆಸ್ ಮುಖಂಡ ಎಂದು ತಿಳಿದುಬಂದಿದೆ. ಬೆಂಗಳೂರಿನ ಗರುಡ ಮಾಲ್ ಬಳಿ ಬೈಕ್ ಅಡಗಟ್ಟಿ ಭೀಕರವಾಗಿ ಕೊಲೆ ಮಾಡಲಾಗಿದೆ. ಮದ್ಯ ರಾತ್ರಿ 1 ಗಂಟೆ ಸುಮಾರಿಗೆ ಲಾಂಗು ಮಚ್ಚುಗಳಿಂದ ಕೊಚ್ಚಿ ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಬೆಂಗಳೂರಿನ ಬೌರಿಂಗ್ ಆಸ್ಪತ್ರೆಗೆ ಕರೆದೋಯ್ಯುಷ್ಟ್ರಲ್ಲಿ ಸಾವನ್ನಪ್ಪಿದ್ದಾನೆ. ಘಟನೆಯಲ್ಲಿ ಆತನ ಸ್ನೇಹಿತನಿಗೂ ಕೂಡ ಗಾಯವಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಘಟನೆ ಸಂಬಂಧ ಅಶೋಕ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ವೇಳೆ ಬೌರಿಂಗ್ ಆಸ್ಪತ್ರೆಯಲ್ಲಿ ಬೆಂಬಲಿಗರ ಹೈಡ್ರಾಮಾ ನಡೆದಿದ್ದು ಆಸ್ಪತ್ರೆ ಮುಂದೆ ಸಾವಿರಾರು ಬೆಂಬಲಿಗರು ಆಸ್ಪತ್ರೆಗೆ ನುಗ್ಗುಲು ಯತ್ನಿಸಿದ್ದಾರೆ. ಈ ವೇಳೆ ಪೊಲೀಸರು ಅವರನ್ನು ನಿಯಂತ್ರಿಸಲಾಗಿದೆ. ಕೊಲೆಗೂ 5 ಗಂಟೆ ಮುನ್ನ ಹೈದರ್ ಅಲಿ ರಿಲ್ಸ್ ಮಾಡಿದ್ದ. ಟಗರು ಸಿನಿಮಾದ ಹಾಡನ್ನು ಎಡಿಟ್ ಮಾಡಿ ಹೈದರ್ ಅಲಿ ಪೋಸ್ಟ್ ಮಾಡಿದ…
ಮಂಗಳೂರು : ರಾಜ್ಯ ಸರ್ಕಾರದಿಂದ ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ಪ್ರಗತಿ ಪಥ ಎಂಬ ಹೊಸ ಯೋಜನೆ ಶೀಘ್ರವೇ ಜಾರಿಗೆ ಬರಲಿದೆ. ಉತ್ತರ ಕರ್ನಾಟಕದಲ್ಲಿ ‘ಕಲ್ಯಾಣ ಪಥ’ ಹೆಸರಿನಲ್ಲಿ ಈ ಯೋಜನೆ ಕಾರ್ಯಗತಗೊಳ್ಳ ಲಿದ್ದು, ಮಾರ್ಚ್ 1ರಂದು ಸಿಎಂ ಸಿದ್ದರಾಮಯ್ಯ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಚಾಲನೆ ನೀಡಲಿದ್ದಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಈ ಕುರಿತು ಮಂಗಳೂರಿನಲ್ಲಿ ಮಧ್ಯಮಗಳೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಗ್ರಾಮ ಸಡಕ್ ಯೋಜನೆ ಮಾದರಿಯಲ್ಲಿ ರಾಜ್ಯ ಸರ್ಕಾರದಿಂದ ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ‘ಪ್ರಗತಿ ಪಥ’ ಹಾಗೂ ‘ಕಲ್ಯಾಣ ಪಥ’ ಎಂಬ ಹೊಸ ಯೋಜನೆ ಶೀಘ್ರವೇ ಜಾರಿಗೆ ಬರಲಿದೆ. ಪ್ರಗತಿ ಪಥದಲ್ಲಿ ರಾಜ್ಯದ 7,110 ರಸ್ತೆಗಳನ್ನು 5,190 ಕೋಟಿ ವೆಚ್ಚದಲ್ಲಿ ಹಾಗೂ ಕಲ್ಯಾಣ ಪಥದಡಿ 1,150 ಕಿ.ಮೀ.ರಸ್ತೆಗಳನ್ನು 1 ಸಾವಿರ ಕೋಟಿಗಳಲ್ಲಿ ಅಭಿವೃದ್ಧಿಪಡಿಸಲಾಗುವುದು. ಪ್ರಾಕೃತಿಕ ಹಾನಿಗೆ ಸಂಬಂಧಿಸಿ 189 ಅಸೆಂಬ್ಲಿ ಕ್ಷೇತ್ರಗಳಿಗೆ 1,890 ಕೋಟಿ ಬಿಡುಗಡೆಗೊಳಿಸಲಾಗಿದ್ದು, ಪ್ರತಿ ಕ್ಷೇ ತ್ರಕ್ಕೆ 10 ಕೋಟಿ ಮಂಜೂರುಗೊಳಿಸಲಾಗಿದೆ.ಈಗಾಗಲೇ…
ಶಿವಮೊಗ್ಗ : ರಾಜ್ಯದ ಅತಿಥಿ ಶಿಕ್ಷಕರಿಗೆ ಸಚಿವ ಮಧು ಬಂಗಾರಪ್ಪ ಸಿಹಿ ಸುದ್ದಿ ನೀಡಿದ್ದು, ಶೀಘ್ರದಲ್ಲಿ ಬಾಕಿ ವೇತನ ಬಿಡುಗಡೆ ಮಾಡಲಾಗುತ್ತದೆ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.ಈ ಕುರಿತು ಅವರು ನಿನ್ನೆ ಶಿವಮೊಗ್ಗದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಅತಿಥಿ ಶಿಕ್ಷಕರಿಗೆ ನಾವು ಕೊಡುವುದೇ ಕಡಿಮೆ ಸಂಬಳ. ತಾಂತ್ರಿಕ ಸಮಸ್ಯೆಯಿಂದಾಗಿ ಕೆಲ ತಿಂಗಳದಿಂದ ಅವರಿಗೆ ಸಂಬಳ ಆಗಿರಲಿಲ್ಲ. ಈಗ ಎಲ್ಲಾ ಅತಿಥಿ ಶಿಕ್ಷಕರಿಗೂ ಬಾಕಿ ಇರುವ ವೇತನ ಬಿಡುಗಡೆ ಮಾಡುತ್ತೇವೆ. ಸಂಬಳ ನಿಲ್ಲಿಸುವ ಪ್ರಶ್ನೆ ಇಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು. ಮಕ್ಕಳಿಗೆ ಕೌಶಲ್ಯ ಭರಿತ ಶಿಕ್ಷಣ ನೀಡಲು ಒತ್ತು ನೀಡುತ್ತಿದ್ದೇವೆ. ಕಲಿಕೆಗೆ ಪೂರಕವಾದ ಹೊಸ ವಿಧಾನಗಳನ್ನು ಕೂಡ ಅಳವಡಿಸಿ ಮಕ್ಕಳಲ್ಲಿ ಆಸಕ್ತಿಯನ್ನು ಹೆಚ್ಚಿಸುತ್ತಿದ್ದೇವೆ.ಬಜೆಟ್ನಲ್ಲಿ ಶಿಕ್ಷಣ ಇಲಾಖೆಗೆ ಹೆಚ್ಚಿನ ಅನುದಾನ ಕೇಳಿದ್ದೇನೆ. ಪ್ರಮುಖವಾಗಿ ನೂತನ ಕ್ಲಾಸ್ ರೂಮ್ಗಳು ಮತ್ತು ಶಿಕ್ಷಕರ ನೇಮಕಾತಿಯ ಅಗತ್ಯವಿದೆ. ಈ ಬಗ್ಗೆಯೂ ಮುಖ್ಯಮಂತ್ರಿಗಳಿಗೆ ಬೇಡಿಕೆ ಇಟ್ಟಿದ್ದೇನೆ ಕಲ್ಯಾಣ ಕರ್ನಾಟಕದ ನೇಮಕಾತಿಯಲ್ಲಿ ಶೇ.80ರಷ್ಟು ನೇಮಕ ಮಾಡಲು…
ನವದೆಹಲಿ : 2025 ರ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಐದನೇ ಪಂದ್ಯದಲ್ಲಿ ಎ ಗುಂಪಿನ ಎರಡು ಬಲಿಷ್ಠ ತಂಡಗಳು ಮುಖಾಮುಖಿಯಾಗಲಿವೆ. ಟೀಂ ಇಂಡಿಯಾ ಮತ್ತು ಪಾಕಿಸ್ತಾನ ನಡುವಿನ ಜಿದ್ದಾಜಿದ್ದಿನ ಹಣಾಹಣಿ ಇಂದು ದುಬೈನಲ್ಲಿ ನಡೆಯಲ್ಲಿದೆ.ಆದರೆ ಪಂದ್ಯ ಆರಂಭಕ್ಕೂ ಮುನ್ನ ಭಾರತಕ್ಕೆ ಬಿಗ್ ಶಾಕ್ ಎದುರಾಗಿದ್ದು, ರನ್ ಮಷಿನ್ ವಿರಾಟ್ ಕೊಹ್ಲಿ ಕಾಲಿಗೆ ಗಾಯವಾಗಿರುವ ಘಟನೆ ವರದಿಯಾಗಿದೆ. ಹೌದು ಇಂದು ಇಂಡಿಯಾ ಹಾಗೂ ಬದ್ಧವೈರಿ ಪಾಕಿಸ್ತಾನ ನಡುವೆ ಹೈವೊಲ್ಟೇಜ್ ಪಂದ್ಯ ನಡೆಯಲಿದೆ. ಇದರ ನಡುವೆ ಭಾರತಕ್ಕೆ ಮತ್ತೊಂದು ಶಾಕ್ ಎದುರಾಗಿದ್ದು ಪಂದ್ಯಕ್ಕೂ ಮುನ್ನವೇ ವಿರಾಟ್ ಕೊಹ್ಲಿ ಅವರು ಕಾಲಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ವರದಿಯಾಗಿದೆ. ವಿರಾಟ್ ಕೊಹ್ಲಿ ಅವರಿಗೆ ಅಭ್ಯಾಸದ ವೇಳೆ ತಮ್ಮ ಕಾಲಿಗೆ ಗಾಯ ಮಾಡಿಕೊಂಡಿದ್ದು, ಗಾಯವಾಗಿರುವ ಕಾಲಿಗೆ ಐಸ್ ಕ್ಯೂಬ್ ಕಟ್ಟಿಕೊಂಡಿರುವ ಫೋಟೋ ಇದೀಗ ವೈರಲ್ ಆಗಿದೆ. ಒಂದು ಕಡೆ ಇದು ಕೊಹ್ಲಿಗೆ ಕೊನೆ ಚಾಂಪಿಯನ್ ಶಿಪ್ ಲೀಗ್ ಆಗಲಿದೆ ಎಂದು ಹೇಳುತ್ತಿದ್ದರೆ, ಇನ್ನೊಂದು ಕಡೆ ಕಾಲಿಗೆ ಗಾಯ ಆಗಿರೋದು…