Author: kannadanewsnow05

ವಿಜಯಪುರ : ಕಳೆದ ಕೆಲವು ದಿನಗಳ. ಹಿಂದೆ ವಿಜಯಪುರ ಜಿಲ್ಲೆಯ ಚಡಚಣ ಪಟ್ಟಣದಲ್ಲಿ ಎಸ್‌ಬಿಐ ಬ್ಯಾಂಕ್ ಗೆ ದರೋಡೆಕೋರರು ನುಗ್ಗೆ ಬ್ಯಾಂಕ್ ಮ್ಯಾನೇಜರ್ ಸಿಬ್ಬಂದಿಗಳನ್ನು ಕೈ ಕಾಲು ಕಟ್ಟಿ ಕೋಟ್ಯಾಂತರ ರೂಪಾಯಿ, ಚಿನ್ನಾಭರಣ ನಗದು ದೋಚಿ ಪರಾರಿಯಾಗಿದ್ದರು. ಇದೀಗ ದರೋಡೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಹಾರಾಷ್ಟ್ರದ ಸೋಲಾಪುರ ಜಿಲ್ಲೆಯ ಮಂಗಳವೇಡ ತಾಲೂಕಿನಹುಲಜಂತಿ ಗ್ರಾಮದ ಪಾಳು ಬಿದ್ದ ಮನೆಯ ಮೇಲ್ಚಾವಣಿಯಲ್ಲಿ ಬ್ಯಾಗ್ ಪತ್ತೆಯಾಗಿದೆ. ಬ್ಯಾಗ್ ನಲ್ಲಿ 6 ಕೆಜಿ 55 ಗ್ರಾಂ ಚಿನ್ನಾಭರಣ, 41.4 ಲಕ್ಷ ನಗದು ಪತ್ತೆಯಾಗಿದೆ. ಮನೆಯ ಮೇಲೆ ಓರ್ವ ದರೋಡೆಕೋರ ಬ್ಯಾಗ್ ಬಚ್ಚಿಟ್ಟು ಪರಾರಿಯಾಗಿದ್ದಾನೆ. ಗ್ರಾಮದ ಜನರು ಮಂಗಳವೇಡ ಠಾಣೆಯ ಪೊಲೀಸರಿಗೆ ಈ ಕುರಿತು ಮಾಹಿತಿ ನೀಡಿದ್ದಾರೆ. 136 ಪ್ಯಾಕೆಟ್ ಗಳಲ್ಲಿಗಳಲ್ಲಿದ್ದ ಚಿನ್ನಾಭರಣ ಪತ್ತೆಯಾದ ಬ್ಯಾಗಿನಲ್ಲಿ ಇವೆ ಒಟ್ಟು. 1.4 ಕೋಟಿ ಚಿನ್ನ, 20 ಕೆಜಿ ಚಿನ್ನಾಭರಣ ದರೋಡೆಯಾಗಿತ್ತು. ಸದ್ಯ ಪತ್ತೆಯಾದ ಬ್ಯಾಗ್ ನಲ್ಲಿ ಚಿನ್ನಾಭರಣ ಮತ್ತು 1.30 ಲಕ್ಷ ನಗದು ಸಿಕ್ಕಿದೆ. ದರೋಡೆ ನಡೆದ ದಿನ ಸೆಪ್ಟೆಂಬರ್ 16ರಂದು…

Read More

ಬೆಂಗಳೂರು : ಕ್ರಿಶ್ಚಿಯನ್ ಜಾತಿ ಕಾಲಂನಲ್ಲಿ ಹಿಂದೂ ಜಾತಿಗಳ ಜೋಡಣೆ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಹಾಗೂ ಸಚಿವರ ಸಭೆಯಲ್ಲಿ ಕ್ರಿಶ್ಚಿಯನ್ ಜಾತಿಗಳ ವಿವರ ಸಲ್ಲಿಕೆಯಾಯಿತು. ಕಾಂತರಾಜ್ ಹಾಗು ಜಯಪ್ರಕಾಶ್ ಹೆಗಡೆ ವರದಿಯಲ್ಲಿನ ಅಂಶಗಳನ್ನು ಈ ವೇಳೆ ಪ್ರಸ್ತಾಪಿಸಲಾಯಿತು. ವರದಿಯಲ್ಲಿ ನಮೂದಾಗಿರುವ ಕ್ರಿಶ್ಚಿಯನ್ ಉಪಜಾತಿಗಳ ಮಾಹಿತಿ ನೀಡಿದರು. ಸಿಎಂ ಸಭೆಯಲ್ಲಿ ಆಯೋಗದ ಅಧ್ಯಕ್ಷರು ಹಾಗೂ ಸದಸ್ಯರು ಈ ಕುರಿತು ಮಾಹಿತಿಯನ್ನು ಹಂಚಿಕೊಂಡರು. ಆದಿ ಆಂಧ್ರ ಕ್ರಿಶ್ಚಿಯನ್ 15739, ಆದಿ ದ್ರಾವಿಡ ಕ್ರಿಶ್ಚಿಯನ್ 52,179, ಬಣಜಿಗ ಕ್ರಿಶ್ಚಿಯನ್ 1,674, ಬೆಸ್ತ ಕ್ರಿಶ್ಚಿಯನ್ 1518, ಬ್ರಾಹ್ಮಣ ಕ್ರಿಶ್ಚಿಯನ್ 1541, ಕುರುಬ ಕ್ರಿಶ್ಚಿಯನ್ 2467, ಗೊಲ್ಲ ಕ್ರಿಶ್ಚಿಯನ್ 1606, ನೇಕಾರ ಕ್ರಿಶ್ಚಿಯನ್ 321, ರೆಡ್ಡಿ ಕ್ರಿಶ್ಚಿಯನ್ 3457, ಮಡಿವಾಳ ಕ್ರಿಶ್ಚಿಯನ್ 880, ಮಾದಿಗ ಕ್ರಿಶ್ಚಿಯನ್ 10,028, ಬಂಜಾರ ಕ್ರಿಶ್ಚಿಯನ್ 782, ಅಕ್ಕಸಾಲಿಗ ಕ್ರಿಶ್ಚಿಯನ್ 867, ಬಿಲ್ಲವ ಕ್ರಿಶ್ಚಿಯನ್ 913, ಆದಿ ಕರ್ನಾಟಕ ಕ್ರಿಶ್ಚಿಯನ್ ಜನಸಂಖ್ಯೆ 11,339 ಇರುವ ಬಗ್ಗೆ ಮಾಹಿತಿ ನೀಡಿದರು.  ಹೀಗೆ ನಮೂದಾದ ಕ್ರಿಶ್ಚಿಯನ್ ಜಾತಿಗಳನ್ನೇ…

Read More

ಮೈಸೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಮಾಜಿ ಆಯುಕ್ತ ದಿನೇಶ್ ಕುಮಾರ್ ಅವರನ್ನು ಇಡಿ ತನ್ನ ಕಸ್ಟಡಿಗೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದೆ. ಇದೀಗ ಮುಡಾದ ಮತ್ತೊಂದು ಹಗರಣ ಬಯಲಾಗಿದ್ದು, ವಕ್ರತುಂಡ ಸೊಸೈಟಿಗೆ ಕೋಟ್ಯಾಂತರ ರೂಪಾಯಿ ಹಣ ವರ್ಗಾವಣೆ ಆಗಿರುವುದು ಬೆಳಕಿಗೆ ಬಂದಿದೆ. ಹೌದು ಮೈಸೂರಿನಲ್ಲಿ ವಕ್ರತುಂಡ ಸೊಸೈಟಿಯಲ್ಲಿ ಭಾರಿ ಅಕ್ರಮ ನಡೆದಿದೆ ಇಡಿ ತನಿಖೆಯಲ್ಲಿ ಅಕ್ರಮ ನಡೆದಿರುವುದು ಬಹಿರಂಗವಾಗಿದೆ. ಮುಡಾ ಮಾಜಿ ಅಧ್ಯಕ್ಷ ದಿನೇಶ್ ಕುಮಾರ್ ವಿರುದ್ಧ ಈ ಒಂದು ಆರೋಪ ಕೇಳಿಬಂದಿದ್ದು, 400 ಕೋಟಿ ರೂಪಾಯಿ ಮೌಲ್ಯದ 252 ಸೈಟ್ಗಳನ್ನು ಅಕ್ರಮವಾಗಿ ಹಂಚಿಕೆ ಮಾಡಿರುವ ಆರೋಪ ಕೇಳಿ ಬಂದಿದೆ. ಅಲ್ಲದೆ ವಕ್ರತುಂಡ ಸೊಸೈಟಿಗೆ ಕೋಟ್ಯಂತರ ರೂಪಾಯಿ ಹಣ ವರ್ಗಾವಣೆ ಮಾಡಿರುವುದು ತನಿಖೆಯಲ್ಲಿ ಬಯಲಾಗಿದೆ. ಹಾಗಾಗಿ ಇದೀಗ ಇಡಿ ಅಧಿಕಾರಿಗಳು ಮಾಜಿ ಆಯುಕ್ತ ದಿನೇಶ್ ಕುಮಾರ್ ತೀವ್ರ ವಿಚಾರಣೆಗೆ ಒಳಪಡಿಸಿದೆ.

Read More

ನಮ್ಮನ್ನು ಹೆತ್ತು, ಹೊತ್ತು, ಸಾಕಿದ ಮಾತಾಪಿತೃಗಳು, ಅವರ ಮಾತಾಪಿತೃಗಳು ಹಾಗೂ ಮತ್ತವರ ಮಾಪಿತೃಗಳು, ಪ್ರೀತಿ ತೋರಿದ ಜೊತೆಗೆ ಆಗಾಗ ದ್ವೇಷ ಕಾರಿದ ಬಂಧುಗಳು, ನೆರಳಂತೆ ಕಷ್ಟದಲ್ಲಿ ಕಾಪಾಡಿದ ಆಗಾಗ ಕಾಡಿದ ಸ್ನೇಹಿತರು, ಅಕ್ಷರ ಸಂಪತ್ತನ್ನು ಕರುಣಿಸಿ ನಮ್ಮನ್ನು ಉನ್ನತೀಕರಿಸಿದ ಗುರುಗಳಿಗೆ ಪಿಂಡಪ್ರದಾನದ ಜತೆ ತಿಲ ತರ್ಪಣ ನೀಡುವ ಸುಸಮಯ. ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳೋಣ. ಗತಿಸಿದ ಎಲ್ಲಾ ಹಿರಿಯರು ಹಾಗೂ ಗುರುಗಳಿಗೆ ಸದ್ಗತಿ ನೀಡಲಿ ಮತ್ತು ನಮ್ಮನ್ನು ಅನುಗ್ರಹಿಸಲಿ ಎಂದು ಶ್ರೀಮಧ್ವವಲ್ಲಭ ಜನಾರ್ಧನ ರೂಪಿ ಶ್ರೀವಾಸುದೇವನನ್ನು ಬೇಡೋಣ. ಭಾದ್ರಪದ ಮಾಸದ ಹುಣ್ಣಿಮೆಯಿಂದ 15 ದಿನಗಳ ಅವಧಿಯನ್ನು ಮಹಾಲಯ ಪಕ್ಷ ಅಥವಾ ಪಿತೃಪಕ್ಷ ಎನ್ನಲಾಗುತ್ತದೆ. ಗರುಡ ಪುರಾಣದ ಪ್ರಕಾರ ಗತಿಸಿದ ನಮ್ಮ ಹಿರಿಯರು ನಮ್ಮತ್ತ ಗಮನ ಹರಿಸುವ ಸಮಯ. ಹಾಗಾಗಿ ಈ ಹದಿನೈದು ದಿನಗಳ ಕಾಲ ನಿತ್ಯ ಹಿರಿಯರನ್ನು ಸ್ಮರಿಸಿ ಅವರಿಗೆ ಪಿಂಡ ಪ್ರದಾನ ಮತ್ತು ತಿಲ ತರ್ಪಣ ನೀಡಬೇಕು. ಪಿಂಡ ಪ್ರಧಾನ ಸಾಧ್ಯವಾಗದವರು ತಿಲ ತರ್ಪಣ ವನ್ನು ನೀಡಬೇಕು. ಇದು ಸಾಧ್ಯವಾಗದವರು ತಂದೆ ಗತಿಸಿ ಹೋಗಿದ್ದರೆ,…

Read More

ನವದೆಹಲಿ : ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿ ವಿಜೇತ ಸಾಹಿತಿ ಬಾನು ಮುಷ್ತಾಕ್ ಅವರಿಂದ ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ವಜಾಗೊಳಿಸಿದ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿದ್ದು, ಇದೀಗ ಸುಪ್ರೀಂ ಕೋರ್ಟ್ ಸಹ ಈ ಒಂದು ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದೆ. ಬಾನು ಮುಷ್ತಾಕ್ ದಸರಾ ಉದ್ಘಾಟನೆ ವಿರೋಧಿಸಿ ಚಾಮುಂಡೇಶ್ವರಿ ಪೂಜೆ ಮಾಡಲು ಹಿಂದೂಯೇತರ ವ್ಯಕ್ತಿಗೆ ಅಹ್ವಾನ ನೀಡಿದ್ದಾರೆ ಎಂದು ಬೆಂಗಳೂರು ನಿವಾಸಿ ಎಚ್.ಎಸ್ ಗೌರವ ಅರ್ಜಿ ಸಲ್ಲಿಸಿದ್ದರು . ವಕೀಲರು ಮೌಖಿಕವಾಗಿ ಅರ್ಜಿಯಲ್ಲಿ ಪ್ರಸ್ತಾಪಿಸಿದರು. ಈ ವೇಳೆ ತುರ್ತು ವಿಚಾರಣೆಗೆ ಪಟ್ಟಿ ಮಾಡಲು ಕೋರಿದರು. ನ್ಯಾ. ವಿಕ್ರಮನಾಥ ಹಾಗು ನ್ಯಾ. ಸಂದೀಪ್ ಮೆಹ್ತ ಅವರಿದ್ದಾ ಪೀಠದಲ್ಲಿ ಇಂದು ಅರ್ಜಿ ವಿಚಾರಣೆ ನಡೆಯಿತು. ನಮ್ಮ ದೇಶದ ಸಂವಿಧಾನ ಪ್ರಸ್ತಾವನೆ ಏನು ಎಂದು ಸುಪ್ರೀಂಕೋರ್ಟ್ ಪ್ರಶ್ನಿಸಿತು. ಬಳಿಕ ಸುಪ್ರೀಂ ಕೋರ್ಟ್ ದ್ವಿಸದಸ್ಯ ಪೀಠ ಈ ಒಂದು ಅರ್ಜಿಯನ್ನು ವಜಾ ಗೊಳಿಸಿ ಆದೇಶ ಹೊರಡಿಸಿದೆ. ಸೆಪ್ಟೆಂಬರ್…

Read More

ಬೆಂಗಳೂರು : ನಾಡಹಬ್ಬ ದಸರಾ ಮಹೋತ್ಸವ ಹಿನ್ನೆಲೆಯಲ್ಲಿ ನಾಳೆಯಿಂದ ರಾಜ್ಯದ ಎಲ್ಲ ಸರ್ಕಾರಿ ಶಾಲೆಗಳಿಗೆ ದಸರಾ ಹಬ್ಬದ ರಜೆ ಘೋಷಣೆ ಮಾಡಲಾಗಿದೆ. ನಾಳೆಯಿಂದ 18 ದಿನಗಳ ಕಾಲ ಹಬ್ಬದ ರಜೆ ಘೋಷಣೆ ಮಾಡಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ನಾಳೆಯಿಂದ ಮುಂದಿನ ಅಕ್ಟೋಬರ್ 7 ರವರೆಗೆ ಸರ್ಕಾರಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಆದರೆ ಅಕ್ಟೋಬರ್ 2ರಂದು ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಕಾರ್ಯಕ್ರಮಗಳಿಗೆ ಹಾಜರಾಗುವುದು ಕಡ್ಡಾಯ ಎಂದು ತಿಳಿಸಿದೆ.ಈ ಬಗ್ಗೆ ಕರ್ನಾಟಕ ಶಿಕ್ಷಣ ಇಲಾಖೆಯು ಮಾಹಿತಿ ನೀಡಿದ್ದು, ಶೈಕ್ಷಣಿಕ ವರ್ಷ ಆರಂಭದಲ್ಲಿಯೇ ರಜೆ ಹಾಗೂ ಕಾರ್ಯ ಚಟುವಟಿಕೆಗಳ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಅದರಂತೆ ದಸರಾ ಸರಜೆಗೆ ಸೆಪ್ಟೆಂಬರ್ 20 ರಿಂದ ಆರಂಭವಾಗಿ ಅಕ್ಟೋಬರ್ 7ರವರೆಗೂ ಇರಲಿದೆ. 2025-26ನೇ ಶೈಕ್ಷಣಿಕ ಸಾಲಿನ ದಸರಾ ರಜೆ ಸೆಪ್ಟೆಂಬರ್ 20ರಿಂದ ಆರಂಭವಾಗಲಿದ್ದು, ಅಕ್ಟೋಬರ್ 7 ರವರೆಗೆ ಇರಲಿದ್ದು, ಶಿಕ್ಷಣ ಇಲಾಖೆಯ ಆದೇಶದ ಪ್ರಕಾರ ಶಾಲಾ ವಿದ್ಯಾರ್ಥಿಗಳಿಗೆ ದಸರಾ ರಜೆಯೂ ಒಟ್ಟು 18…

Read More

ಹುಬ್ಬಳ್ಳಿ : ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಅವರ ಪುತ್ರ ಭೈ ವಿಜಯೇಂದ್ರ ವಿರುದ್ಧ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತೆ ಕಿಡಿಕಾರಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ವಿಜೇಂದ್ರನನ್ನು ಕೆಲವೇ ದಿನಗಳಲ್ಲಿ ಹೈಕಮಾಂಡ್ ತೆಗೆಯಲಿದೆ ಎಂದು ಹೇಳಿಕೆ ನೀಡಿದರು. ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಿಜಯೇಂದ್ರನನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ತೆಗೆದರೆ ಹೊಸ ಪಕ್ಷ ಕಟ್ಟುತ್ತೇನೆ ಅಂತ ಯೆಡಿಯೂರಪ್ಪ ಬೆದರಿಕೆ ಹಾಕುತ್ತಾನೆ. ಬಿ. ವೈ ವಿಜಯೇಂದ್ರರರನ್ನು ತೆಗೆದರೆ ಹೊಸಪಕ್ಷ ಕಟ್ಟುವುದಾಗಿ ಬೆದರಿಕೆ ಹಾಕುತ್ತಾನೆ. ಮೊನ್ನೆ ದೆಹಲಿಯಲ್ಲಿ ಯಡಿಯೂರಪ್ಪ ಗೆ ಮಂಗಳಾರತಿ ಮಾಡಿದ್ದಾರೆ ಎಂದರು. ಮುಸ್ಲಿಮರಿಗೆ ಕೊಟ್ಟ ಮೀಸಲಾತಿ ತೆಗೆದು ಬೇರೆ ಸಮಾಜಕ್ಕೆ ಹಂಚಬೇಕು. ಯಡಿಯೂರಪ್ಪ ಭಯದಿಂದ ಬಿಜೆಪಿ ಹೈಕಮಾಂಡ್ ಹೊರಬರುತ್ತಿದೆ ನಾನು ಬಿಜೆಪಿ ಸೇರಲು ಬಹುತೇಕ ಶಾಸಕರು ಒಲವು ತೋರಿದ್ದಾರೆ. ಅಮಿತ್ ಶಾ ಒಬ್ಬೊಬ್ಬರನ್ನೇ ಕರೆದು ಕೇಳಿದರೆ ಎಲ್ಲರೂ ಹೇಳುತ್ತಾರೆ. ಕೆಲವೇ ದಿನಗಳಲ್ಲಿ ಶಿವಮೊಗ್ಗದಲ್ಲಿ ಹಿಂದೂ ಸಮಾವೇಶ ಮಾಡುತ್ತೇವೆ ಎಂದು ಹುಬ್ಬಳ್ಳಿಯಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ನೀಡಿದರು.

Read More

ಬೆಂಗಳೂರು : ರಾಜ್ಯದ ಜನತೆಗೆ ಸಿಹಿ ಸುದ್ದಿಯೊಂದು ಇದ್ದು, ಕೆಎಂಎಫ್ ಗ್ರಾಹಕರಿಗೆ GST ಪರಿಷ್ಕರಣೆಯಾದ ಬೆನ್ನಲ್ಲೇ ಸೋಮವಾರದಿಂದಲೇ ನಂದಿನಿಯ ಕೆಲ ಉತ್ಪನ್ನಗಳ ದರ ಇಳಿಕೆಯಾಗಲಿದೆ. ಕಳೆದ ಕೆಲವು ದಿನಗಳ ಹಿಂದೆ ಅಷ್ಟೇ ಕೇಂದ್ರ ಸರ್ಕಾರ GST ತೆರಿಗೆಯಲ್ಲಿ ಶೇ. 5 ರಷ್ಟು ಇಳಿಕೆ ಮಾಡಿತ್ತು. ಈ ಹಿನ್ನೆಲೆಯಲ್ಲಿ ನಂದಿನಿ ಹಾಲಿನ ಕೆಲವು ಉತ್ಪನ್ನಗಳ ಮೇಲಿನ ಬೆಲೆ ಇಳಿಕೆಯಾಗಲಿದೆ. ಹೌದು ನಂದಿನಿ ಉತ್ಪನ್ನಗಳಾದ ಬೆಣ್ಣೆ, ತುಪ್ಪ, ಚೀಸ್ ಮೇಲೆ ಮೊದಲು 12% ರಷ್ಟು ತೆರಿಗೆ ವಿಧಿಸಲಾಗುತ್ತಿತ್ತು. ಆದರೆ ಈ ತೆರಿಗೆಯನ್ನು 5%ಕ್ಕೆ ಇಳಿಸಿದ್ದರಿಂದ ಈ ಉತ್ಪನ್ನಗಳ ಬೆಲೆ ಇಳಿಕೆಯಾಗಲಿದೆ. ಪನ್ನಿರ್ ಮತ್ತು ಗುಡ್ ಲೈಫ್ ಹಾಲಿಗೆ ಮೊದಲು 5% ರಷ್ಟು ಜಿಎಸ್‌ಟಿ ವಿಧಿಸಲಾಗುತ್ತಿತ್ತು. ಆದರೆ ಈಗ ಈ ಉತ್ಪನ್ನಗಳ ಮೇಲೆ ಶೂನ್ಯ ತೆರಿಗೆ ಹಾಕಲಾಗುತ್ತದೆ. ಹೀಗಾಗಿ ಈ ವಸ್ತುಗಳ ಬೆಲೆ ಇಳಿಕೆಯಾಗುತ್ತಿದೆ. ಹಾಲು, ಮೊಸರಲ್ಲಿ ಯಾವುದೇ ಬದಲಾವಣೆ ಇಲ್ಲ ಹಾಲು, ಮೊಸರು ಬೆಲೆಯಲ್ಲಿ ಯಾವುದೇ ಬದಲಾವಣೆ ಇಲ್ಲ. ಹಾಲಿಗೆ ಜಿಎಸ್‌ಟಿ ಇಲ್ಲ, ಮೊಸರಿಗೆ…

Read More

ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸದ್ಯ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್ ಗೆ ಹಾಸಿಗೆ ದಿಂಬು ಸೇರಿದಂತೆ ಕನಿಷ್ಠ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಿದ್ದಾರೆ. ಇಂದು ಅರ್ಜಿಯ ಸಂಬಂಧ ಬೆಂಗಳೂರಿನ 57ನೇ ಸಿಸಿಎಚ್ ಕೋರ್ಟ್ ವಿಚಾರಣೆ ನಡೆಸಿ ವಿಚಾರಣೆಯನ್ನ ಮತ್ತೆ ಸೆಪ್ಟೆಂಬರ್ 25ಕ್ಕೆ ಮುಂದೂಡಿದೆ. ಇಂದು ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯದಲ್ಲಿ ದರ್ಶನ ಸಲ್ಲಿಸಿರುವ ಅರ್ಜ ಕುರಿತು ವಿಚಾರಣೆ ನಡೆಯಿತು ಈ ವೇಳೆ ಕೊಲೆ ಆರೋಪಿಗಳಾದ ದರ್ಶನ್ ಮತ್ತು ಪವಿತ್ರ ವಿಡಿಯೋ ಕಾನ್ಫರೆನ್ಸ್ ಮೂಲಕ ಕೋರ್ಟಿಗೆ ಹಾಜರಾಗಿದ್ದರು . ವಿಚಾರಣೆಯ ಬಳಿಕ ಕೋರ್ಟ್ ಸೆಪ್ಟೆಂಬರ್ 25ಕ್ಕೆ ಮತ್ತೆ ವಿಚಾರಣೆ ಮುಂದೂಡಿತು ಹಾಗಾಗಿ ನಟ ದರ್ಶನ್ ಗೆ ಹಾಸಿಗೆ ದಿಂಬು ಸೇರಿದಂತೆ ಕನಿಷ್ಠ ಸೌಲಭ್ಯ ನೀಡಿದ ವಿಚಾರವಾಗಿ ಮತ್ತೆ ನಿರಾಸೆಯಾಗಿದೆ. ದೋಷಾರೋಪ ಹೊರಿಸುವ ದಿನಾಂಕವನ್ನು ಕೂಡ ಇಂದು ಕೋರ್ಟ್ ನಿಗದಿಪಡಿಸುವ ಸಾಧ್ಯತೆ ಇತ್ತು. ಕಳೆದ ವಿಚಾರಣೆಯ ವೇಳೆ ದರ್ಶನ್ ಪರ ವಕೀಲರು ಸುಧೀರ್ಘ ವಾದ ವಾದಮಂಡನೆ…

Read More

ಬೆಂಗಳೂರು : ಬೆಂಗಳೂರಲ್ಲಿ ದಿನೇ ದಿನೇ ಟ್ರಾಫಿಕ್ ಸಮಸ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಇದೀಗ, ನಗರದ ಮಾರತಹಳ್ಳಿ ಬೆಳ್ಳಂದೂರು ಸುತ್ತಮುತ್ತ ಸಂಚಾರದಟ್ಟಣೆ ಹೆಚ್ಚಾದ ಹಿನ್ನೆಲೆಯಲ್ಲಿ ಕಾಡುಬಿಸನಹಳ್ಳಿ ತೆರಳುವವರಿಗೆ ರಿಂಗ್ ರಸ್ತೆ ನಿರ್ಬಂಧ ವಿಧಿಸಲಾಗಿದೆ. ಪೊಲೀಸರಿಂದ ಮಾರ್ಗ ಬದಲಾವಣೆ ಮಾಡಲಾಗಿದ್ದು ಕಾಡುಬಿಸನಹಳ್ಳಿ ಕಡೆಗೆ ಸರ್ವಿಸ್ ರಸ್ತೆಯಲ್ಲಿ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಆದರೆ ಬೆಳ್ಳಂದೂರು ಕಡೆಗೆ ಸಂಚರಿಸುವವರಿಗೆ ಸರ್ವಿಸ್ ರಸ್ತೆ ನಿರ್ಬಂಧಿಸಲಾಗಿದೆ. ಕಡ್ಡಾಯವಾಗಿ ರಿಂಗ್ ರಸ್ತೆ ಮೂಲಕವೇ ಸಂಚರಿಸಲು ಸಂಚಾರಿ ಪೊಲೀಸರು ಸೂಚನೆ ನೀಡಿದ್ದಾರೆ. ಈ ಕುರಿತು ಪೂರ್ವಭಾವಿ ಭಾಗ ಸಂಚಾರ ಡಿಸಿಪಿ ಸಾಹಿಲ್ ಬಾಗ್ಲ ಹೇಳಿಕೆ ನೀಡಿದ್ದು ಒಂದು ವಾರ ಪ್ರಾಯೋಗಿಕವಾಗಿ ಸಂಚಾರ ಬದಲಾವಣೆ ಮಾಡಿದ್ದೇವೆ. ಇದನ್ನ ನೋಡಿಕೊಂಡು ಮುಂದೆ ಹೇಗಿರಬೇಕು ಅನ್ನೋದನ್ನ ನಿರ್ಧರಿಸಲಾಗುತ್ತದೆ. https://twitter.com/DCPTrEastBCP/status/1968316300846887052

Read More