Subscribe to Updates
Get the latest creative news from FooBar about art, design and business.
Author: kannadanewsnow05
ನವದೆಹಲಿ : ರಾಜ್ಯದ ಹಲವು ಹೋಟೆಲ್ ಗಳಲ್ಲಿ ಇಡ್ಲಿ ತಯ್ಯಾರಿಸುವ ವೇಳೆ ಪ್ಲಾಸ್ಟಿಕ್ ಬಳಕೆ ಮಾಡಲಾಗುತ್ತಿದೆ ಎಂದು ಆರೋಪಿಸಿ ಇತ್ತೀಚಿಗೆ ರಾಜ್ಯ ಸರ್ಕಾರ ಇಡ್ಲಿ ತಯ್ಯಾರಿಕೆ ವೇಳೆ ಪ್ಲಾಸ್ಟಿಕ್ ಬ್ಯಾನ್ ಮಾಡಿತ್ತು. ಇದೀಗ ಕೇಂದ್ರ ಸರ್ಕಾರ ತನಿಖೆ ಮತ್ತು ಕ್ರಮಕ್ಕೆ ಆದೇಶಿಸಿದೆ. ಕರ್ನಾಟಕದ ಕೆಲವು ಹೋಟೆಲ್ಗಳಲ್ಲಿ ಇಡ್ಲಿ ತಯಾರಿಕೆ ವೇಳೆ ಪ್ಲಾಸ್ಟಿಕ್ ಹಾಳೆಗಳನ್ನು ಬಳಸಲಾಗುತ್ತಿದೆ ಎಂಬ ವಿಷಯವನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಸರ್ಕಾರದ ಅಧೀನದ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರವು ತನಿಖೆ ಮತ್ತು ಕ್ರಮಕ್ಕೆ ಆದೇಶಿಸಿದೆ. ಹೋಟೆಲ್ಗಳಲ್ಲಿ ತಯಾರಿಸಲಾಗುವ ಆಹಾರದ ಸುರಕ್ಷತೆ ಹಾಗೂ ನೈರ್ಮಲ್ಯವನ್ನು ಗಮನದಲ್ಲಿಟ್ಟುಕೊಂಡು, * ಇಡ್ಲಿ ಬೇಯಿಸುವಾಗ ಬಳಸಲಾಗುವ ಪ್ಲಾಸ್ಟಿಕ್ ಹಾಳೆಯನ್ನು ನಿಷೇಧಿಸಿ ರಾಜ್ಯ ಸರ್ಕಾರ ಇತ್ತೀಚೆಗೆ ಆದೇಶ ಹೊರಡಿಸಿತ್ತು. ಅದರ ಬೆನ್ನಲ್ಲೇ ಎಫ್ಎಸ್ಎಸ್ ಎಐ, ರಾಜ್ಯ ಆಹಾರ ಸುರಕ್ಷತಾ ಇಲಾಖೆಗೆ ಈ ಸೂಚಿಸಿದೆ.
ತುಮಕೂರು : ಮದುವೆಯಾದ ಬಳಿಕ ಕೇವಲ ಒಂದುವರೆ ವರ್ಷದಲ್ಲಿ ಯುವತಿ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಮುದ್ದೇನಹಳ್ಳಿಯಲ್ಲಿ ನಡೆದಿದೆ.ಮೃತ ಯುವತಿಯನ್ನು ಕಲಾವತಿ (28) ಎಂದು ತಿಳಿದುಬಂದಿದೆ. ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಮುದ್ದೇನಹಳ್ಳಿ ಗ್ರಾಮದ ಕಲಾವತಿ ಕಳೆದ ಒಂದುವರೆ ವರ್ಷದ ಹಿಂದೆ ಮದುವೆಯಾಗಿದ್ದಳು. ಆದರೆ ಇಂದು ಕಲಾವತಿ ನಿಗೂಢವಾಗಿ ಸಾವನಪ್ಪಿದ್ದು, ಪತಿಯ ಪೋಷಕರ ವಿರುದ್ಧ ಮೃತಳ ಕುಟುಂಬಸ್ಥರು ಇದೀಗ ಆರೋಪ ಮಾಡುತ್ತಿದ್ದಾರೆ. ಕಲಾವತಿ ಪತಿ ನರಸಿಂಹಮೂರ್ತಿ, ನಾದಿನಿ ರೂಪ ಹಾಗೂ ಮೋಹನ್ ಎಂಬುವರ ಮೇಲೆ ಮೃತಳ ಪೋಷಕರಿಗೆ ಆರೋಪ ಮಾಡಿದ್ದಾರೆ. ಘಟನೆ ಬಳಿಕ ಕಲಾವತಿ ಪತಿಯ ಕುಟುಂಬಸ್ಥರು ಪರಾರಿಯಾಗಿದ್ದಾರೆ. ಫೆಬ್ರುವರಿ 26ರಂದು 112ಕ್ಕೆ ಕರೆ ಮಾಡಿದ್ದ ಕಲಾವತಿ ಮೊಬೈಲ್ ಕಳೆದಿದೆ ಅಂತ ಕಲಾವತಿ ದೂರು ನೀಡಿದ್ದಳು. ಅಂದಿನಿಂದಲೇ ಕಲಾವತಿ ಆಸ್ಪತ್ರೆಗೆ ದಾಖಲಾಗಿದ್ದಳು. ಆಸ್ಪತ್ರೆಯಲ್ಲಿಯೇ ಕಲಾವತಿ ನಿಗೂಢವಾಗಿ ಸವನಪ್ಪಿದ್ದಾಳೆ. ಈ ವೇಳೆ ನಿಮ್ಹಾನ್ಸ್ ಆಸ್ಪತ್ರೆಗೆ ವೈದರು ಹೃದಯಘಾತದಿಂದ ಸಾವನಪ್ಪಿದ್ದಾಳೆ ಎಂದು ತಿಳಿಸಿದ್ದು ಚಿಕ್ಕನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಧಾರವಾಡ : ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳಿಗೆ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಜಾರಿ ಮಾಡಿದರು ಕೂಡ ಯಾವುದೇ ಭಯವಿಲ್ಲದೆ ಸಾಲ ನೀಡಿದವರಿಗೆ ಕಿರುಕುಳ ನೀಡಲು ಮುಂದುವರಿಸಿದ್ದಾರೆ. ಇದೀಗ ಧಾರವಾಡದಲ್ಲಿ ಬಡ್ಡಿ ದಂಧೆ ಕೋರರ ಕಿರುಕುಳಕ್ಕೆ ವ್ಯಕ್ತಿಯೊಬ್ಬ ವಿಷ ಸೇವಿಸಿ ಆತ್ಮಹತ್ಯೆನಿಸಿರುವ ಘಟನೆ ವರದಿಯಾಗಿದೆ. ಬಡ್ಡಿ ದಂಧೆ ಕೊರರ ಕಿರುಕುಳಕ್ಕೆ ಬೇಸತ್ತು ವಿಷ ಸೇವಿಸಿ ಸುನಿಲ್ ಎಂಬಾತ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಧಾರವಾಡ ಜಿಲ್ಲೆಯ ಕುಂದಗೋಳದಲ್ಲಿ ಸುನಿಲ್ ಎನ್ನುವ ವ್ಯಕ್ತಿ ಇದೀಗ ಆತ್ಮಹತ್ಯೆಗೆ ಯತ್ನಿಸಿದ್ದಾನೆ. 30,000 ಪಡೆದು 2.50 ಲಕ್ಷ ರೂಪಾಯಿ ಬಡ್ಡಿ ಕಟ್ಟಿದರು ಕೂಡ ಸಂತು ಮತ್ತು ಶಿವು ಎನ್ನುವವರು ಕಿರುಕುಳ ನೀಡುತ್ತಿದ್ದರು. ಮತ್ತೆ ಬಡ್ಡಿ ಕಟ್ಟುವಂತೆ ಸುನಿಲಗೆ ಸಂತು ಮತ್ತು ಶಿವು ಎನ್ನುವವರು ಕಿರುಕುಳ ನೀಡುತ್ತಿದ್ದರು.ಈ ಕುರಿತು ಪೊಲೀಸರಿಗೆ ದೂರು ನೀಡಿದ್ದರು ಸಹ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಮಾನಸಿಕವಾಗಿ ಬೆಸತ್ತು ವಿಷ ಸೇವಿಸಿ ಸುನಿಲ್ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಅಸ್ವಸ್ಥ ಸುನಿಲನ್ನು ತಕ್ಷಣ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹುಬ್ಬಳ್ಳಿ ಧಾರವಾಡ ಕುಂದಗೋಳ…
ವಿಜಯಪುರ : ಪ್ರತಿ ವರ್ಷದಂತೆ ಈ ವರ್ಷವೂ ವಿಜಯಪುರ ಜಿಲ್ಲೆಯ ಸಾರವಾಡ ಬಳಿ ಇರುವ ಬಬಲಾದಿ ಸದಾಶಿವ ಮುತ್ಯಾ ಮಠದ ಪೀಠಾಧಿಪತಿ ಸಿದ್ದರಾಮಯ್ಯ ಹೊಳಿಮಠ ಕಾಲಜ್ಞಾನ ಭವಿಷ್ಯ ನುಡಿದ್ದಾರೆ. 2025 ನೇ ಸಾಲಿನ ಭವಿಷ್ಯ ವಾಣಿ ನುಡಿದಿದ್ದಾರೆ. ಸದ್ಯ ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆ ನಡೆಯುವ ಸಂದರ್ಭದಲ್ಲೆ ರಾಜ್ಯ ರಾಜಕೀಯದಲ್ಲಿ ಮಹತ್ತರ ಬದಲಾವಣೆ ಆಗಲಿದೆ ಎಂದು ಸ್ಪೋಟಕ ಭವಿಷ್ಯ ನುಡಿದಿದ್ದಾರೆ. ರಾಜ್ಯ ಹಾಗೂ ದೇಶದ ರಾಜಕೀಯ ಬಗ್ಗೆ ಅಚ್ಚರಿ ಭವಿಷ್ಯ ನುಡಿದಿದ್ದಾರೆ. ಕಲಿಯುಗದ ಆಟ ಸರ್ವನಾಶ ಹೊಂದುವ ಸಮಯ ಬಂದಿತು. ತಿಳಿಯಿರಣ್ಣ. Bಶಿಕ್ಷಣ ಕ್ಷೇತ್ರದಲ್ಲಿ ಹೊಸ ತಿರುವು ಆಗುತ್ತದೆ. ಹಣದ ಹಿಂದೆ ಹೋಗುವವರ ಬಂಧುತ್ವ ಸಮಯ ತಿಳಿಯಿರಣ್ಣ. ಈ ವರ್ಷ ವಿದ್ಯುತ್ ಶಕ್ತಿ ಹಾಗೂ ನೀರಿನ ಕೊರತೆ ಬಹಳ ಆಗುತ್ತದೆ ಎಂದು ಬರದ ಮುನ್ಸೂಚನೆ ನೀಡಿದ ಸದಾಶಿವ ಮುತ್ಯಾನ ಕಾಲಜ್ಞಾನ ಭವಿಷ್ಯ. ರಾಜ್ಯ ರಾಜಕೀಯದಲ್ಲಿ ಮತ್ತಷ್ಟು ಬದಲಾವಣೆ ಆಗುತ್ತದೆ ಸಿಎಂ ಬದಲಾವಣೆ ಚರ್ಚೆ ಬೆನ್ನಲ್ಲೆ ಅಚ್ಚರಿಯ ಭವಿಷ್ಯವಾಣಿ ನುಡಿದಿದ್ದಾರೆ. ಭೂಕಂಪ, ಅಗ್ನಿ…
ಮೈಸೂರು : ಕುಡಿದ ನಶೆಯಲ್ಲಿ ಮನುಷ್ಯ ತಾನು ಏನು ಮಾಡುತ್ತೇನೆ ಎನ್ನುವುದು ತನಗೆ ಅರಿವು ಇರುವುದಿಲ್ಲ. ಇದೀಗ ಇಂಥದ್ದೇ ಘಟನೆ ಮೈಸೂರಿನಲ್ಲಿ ನಡೆದಿದ್ದು, ಕುಡಿದ ನಶೆಯಲ್ಲಿ ಬಂದು ಬಳಿಕ ಮನೆಯವರ ಬಳಿ ಗಲಾಟೆ ಮಾಡಿ ಮತ್ತೆ ಕುಡಿಯೋಕೆ ಹಣ ಕೇಳಿದ್ದಾನೆ, ಈ ವೇಳೆ ಗಲಾಟೆ ಮಧ್ಯದಲ್ಲಿ ಬೀಡಿ ಸೇದಿ ಮನೆಯ ಬೆಡ್ ಮೇಲೆ ಇಟ್ಟ ಪರಿಣಾಮ ಆ ಒಂದು ಚಿಕ್ಕ ಬಿಡಿಎ ಕಡೆಯಿಂದ ಇಡೀ ಮನೆ ಹೊತ್ತಿ ಹೊಡೆದಿರುವ ಘಟನೆ ಮೈಸೂರಿನ ಅಗ್ರಹಾರದ ಮಧುವನ ಬಡಾವಣೆಯಲ್ಲಿ ನಡೆದಿದೆ. ಹೌದು ಕುಡಿದ ಅಮಲಿನಲ್ಲಿ ತನ್ನ ಮನೆಗೆ ತಾನೇ ಬೆಂಕಿ ಇಟ್ಟ ಕಿಡಿಗೇಡಿ, ಮೈಸೂರಿನ ಮಧುವನ ಬಡಾವಣೆಯಲ್ಲಿ ಈ ಒಂದು ಘಟನೆ ನಡೆದಿದೆ. ಬೆಳಿಗ್ಗೆ ಕುಡಿದು ಬಂದು ಮತ್ತೆ ಕೊಡಲು ಹಣ ಕೇಳಿದ್ದ. ಮನೆಯವರ ಜೊತೆ ಗಲಾಟೆ ಮಾಡಿಕೊಂಡು ಬಿಡಿ ಸೇದುತ್ತಿದ್ದ ಗುರು ಎಂಬ ವ್ಯಕ್ತಿ ಕುಡಿದ ನಶೆಯಲ್ಲಿ ಬಿಡಿ ಸೇದಿ ಬೆಡ್ ಮೇಲೆ ಇಟ್ಟಿದ್ದ. ಹಾಸಿಗೆ ಹೊತ್ತಿಕೊಂಡಿದ್ದ ಬೆಂಕಿ ಇಡೀ ಮನೆಗೆ ವ್ಯಾಪಿಸಿದೆ.…
ಮಂಡ್ಯ : ಕೆಎಸ್ಆರ್ಟಿಸಿ ಬಸ್ ಹಾಗೂ ಕಾರಿನ ಮಧ್ಯ ಭೀಕರವಾದಂತಹ ಅಪಘಾತ ಸಂಭವಿಸಿದ್ದು, ಈ ವೇಳೆ ಕಾರಿನ ಚಾಲಕ ಸ್ಥಳದಲ್ಲಿ ಸಾವನಪ್ಪಿದ್ದು ಇನ್ನೂ ಕಾರಿನಲ್ಲಿದ್ದ ಉಳಿದ ಇಬ್ಬರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಬೋರಾಪುರ ಗ್ರಾಮದಲ್ಲಿ ನಡೆದಿದೆ. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಬೋರಾಪುರ ಬಳಿ ಈ ಒಂದು ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಬೆಂಗಳೂರು ಮೂಲದ ಕಾರು ಚಾಲಕ ಮನು ಸ್ಥಳದಲ್ಲೇ ಸಾವನಪ್ಪಿದ್ದಾನೆ. ಇನ್ನು ಕಾರಿನಲ್ಲಿದ್ದ ಮತ್ತಿಬ್ಬರ ಸ್ಥಿತಿ ಗಂಭೀರವಾಗಿದ್ದು, ಮಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮದ್ದೂರು ಟೌನ್ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.
ಬೆಂಗಳೂರು : ಬೆಳಗಾವಿಯಲ್ಲಿ KSRTC ಕಂಡಕ್ಟರ್ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಳೆದ ಹಲವು ದಿನಗಳಿಂದ ಕರ್ನಾಟಕ ಹಾಗೂ ಮಹಾರಾಷ್ಟ್ರ ನಡುವೆ KSRTC ಬಸ್ ಸಂಚಾರ ಸ್ಥಗಿತಗೊಂಡಿತು. ಇದೀಗ ಪರಿಸ್ಥಿತಿ ತಿಳಿಗೊಂಡ ನಂತರ ಮತ್ತೆ ಮಹಾರಾಷ್ಟ್ರಕ್ಕೆ ಕೆಎಸ್ಆರ್ಟಿಸಿ ಬಸ್ ಸಂಚಾರ ಪುನ ಆರಂಭವಾಗಿದೆ ಎಂದು ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮಹಾರಾಷ್ಟ್ರಕ್ಕೆ ಕೆಎಸ್ಆರ್ಟಿಸಿ ಬಸ್ ಸಂಚಾರ ಪುನಾರಂಭವಾಗಿದೆ.ಕಂಡಕ್ಟರ್ ವಿರುದ್ಧ ದಾಖಲಿಸಿದ ಪೋಕ್ಸೋ ಕೇಸ್ ಹಿಂಪಡೆದಿದ್ದಾರೆ. ದೂರು ನೀಡಿದವರಿಗೆ ಒಳ್ಳೆಯ ಬುದ್ಧಿ ಬಂದಿದೆ ಹಾಗಾಗಿ ಕೇಸ್ ಪಡೆದಿದ್ದಾರೆ.ಅದೇ ರೀತಿಯಾಗಿ ಮೇ ತಿಂಗಳಿನಲ್ಲಿ ಬಿಬಿಎಂಪಿ ಚುನಾವಣೆ ನಡೆಯುತ್ತದೆ. ಮೇ ತಿಂಗಳಲ್ಲಿ 100% ಬಿಬಿಎಂಪಿ ಚುನಾವಣೆ ನಡೆಯುವುದು ನಿಶ್ಚಿತ ಎಂದು ಇದೆ ವೇಳೆ ಸಚಿವರು ತಿಳಿಸಿದರು.
ಬೆಂಗಳೂರು : ಬೆಳಗಾವಿಯಲ್ಲಿ ಕಂಡಕ್ಟರ್ ಮೇಲೆ ಹಲ್ಲೆಯನ್ನು ಖಂಡಿಸಿ, ಇದೇ ಮಾರ್ಚ್ 22 ರಂದು ಅಖಂಡ ಕರ್ನಾಟಕ ಬಂದ್ ಗೆ ಕನ್ನಡಪರ ಸಂಘಟನೆಗಳು ಕರೆ ನೀಡಿವೆ. ಆದರೆ ಇದೇ ವೇಳೆ ರಾಜ್ಯದಲ್ಲಿ 7, 8 ಹಾಗೂ 9ನೇ ತರಗತಿ ವಿದ್ಯಾರ್ಥಿಗಳ ಪರೀಕ್ಷೆ ನಡೆಯುತ್ತಿದ್ದು, ಯಾವುದೇ ಕಾರಣಕ್ಕೂ ಪರೀಕ್ಷೆ ಮುಂದೂಡಲು ಸಾಧ್ಯವಿಲ್ಲ ಎಂದು ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ ನೀಡಿದರು. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಮಾರ್ಚ್ ತಿಂಗಳಿನಲ್ಲಿ 7 8 ಹಾಗೂ 9ನೇ ತರಗತಿ ವಿದ್ಯಾರ್ಥಿಗಳ ಪರೀಕ್ಷೆಗಳು ನಡೆಯುತ್ತಿವೆ. ಮಾರ್ಚ್ 22ರಂದು ಕೂಡ ಪರೀಕ್ಷೆ ಇದ್ದು ಕರ್ನಾಟಕ ಬಂದ್ ಮಾಡುವ ಸಲುವಾಗಿ ಪರೀಕ್ಷೆಗಳನ್ನು ಮುಂದೂಡಲು ಸಾಧ್ಯವಿಲ್ಲ. ಈಗಾಗಲೇ ವೇಳಾಪಟ್ಟಿ ಸಿದ್ಧಪಡಿಸಲಾಗಿದ್ದು ಮಕ್ಕಳ ಹಿತ ದೃಷ್ಟಿಯಿಂದ ಪರೀಕ್ಷೆಗಳನ್ನು ಯಾವುದೇ ಕಾರಣಕ್ಕೂ ಮುಂದೂಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು. ಇನ್ನು 1ನೇ ತರಗತಿಗೆ ದಾಖಲಾತಿ ಮಾಡಿಕೊಳ್ಳಲು ಮಗುವಿಗೆ 6 ವರ್ಷವಾಗಿರಬೇಕು ಎಂಬ ನಿಯಮದಲ್ಲಿ ಯಾವುದೇ ಸಡಿಲಿಕೆ ಸಾಧ್ಯವಿಲ್ಲ.ಅನೇಕರು ಈ ಬಗ್ಗೆ ಕೋರ್ಟ್…
ಬೆಂಗಳೂರು : ಸದ್ಯ ರಾಜ್ಯ ರಾಜಕಾರಣದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಕಾಂಗ್ರೆಸ್ ಪಕ್ಷ ತೊರೆಯುತ್ತಾರೆ ಎಂದು ಬಿಜೆಪಿ ಹಲವು ನಾಯಕರು ಒಂದು ಕಡೆ ಹೇಳುತ್ತಿದ್ದರೆ, ಇನ್ನೊಂದು ಕಡೆ ಸಿಎಂ ಬದಲಾವಣೆ ಕುರಿತು ಕಾಂಗ್ರೆಸಿನಲ್ಲೇ ಹಲವು ನಾಯಕರು ಬಹಿರಂಗ ಹೇಳಿಕೆ ನೀಡುತ್ತಿದ್ದಾರೆ. ಇದರ ಮಧ್ಯ ಮಾಜಿ ಸಂಸದ ಡಿಕೆ ಸುರೇಶ್ ನನಗೂ ಒಂದು ಕನಸಿದೆ ಅಣ್ಣ ಡಿಕೆ ಶಿವಕುಮಾರ್ ಸಿಎಂ ಆಗಬೇಕು ಎನ್ನುವ ಆಸೆ ಇದೆ ಎಂದು ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನನಗೂ ಒಂದು ಕನಸು ಇದೆ ನಮ್ಮಣ್ಣ ಸಿಎಂ ಆಗಬೇಕು ಎನ್ನುವ ಆಸೆ ಇದೆ. ಆದರೆ ಸದ್ಯಕ್ಕೆ ಮುಖ್ಯಮಂತ್ರಿ ಸೀಟ್ ಕಾಲಿ ಇಲ್ಲ ಸದ್ಯ ಮುಖ್ಯಮಂತ್ರಿ ಆಗಿ ಸಿದ್ದರಾಮಯ್ಯ ಅವರು ಇದ್ದಾರೆ. ಸೀಟ್ ಖಾಲಿ ಇದ್ದಾಗ ಮಾತ್ರ ಪ್ರಯತ್ನ ಮಾಡಬೇಕು. ಬಲವಂತವಾಗಿ ಎಳೆದು ಸೀಟ್ ಮೇಲೆ ಕೂರಿಸಲು ಆಗಲ್ಲ. ನಮಗೆ ನಂಬಿಕೆ ಇದೆ ನಂಬಿಕೆ ಮೇಲೆ ಜೀವನ ನಡೆಸುತ್ತೇವೆ ಎಂದು ಬೆಂಗಳೂರಿನಲ್ಲಿ ಮಾಜಿ ಸಂಸದ ಡಿಕೆ ಸುರೇಶ್ ಹೇಳಿಕೆ…
ಕೊಪ್ಪಳ : ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದ ಅಡ್ಡೆ ಮೇಲೆ ಗಣಿ ಮತ್ತು ಭೂ ವಿಜ್ಞಾನಿ ಇಲಾಖೆ ಅಧಿಕಾರಿಗಳು ದಾಳಿ ಮಾಡಿದ ವೇಳೆ ಅಧಿಕಾರಿಗಳ ಮೇಲೆಯೇ ದಂಧೆ ಕೋರರು ಹಲ್ಲೆ ಮಾಡಿದ ಘಟನೆ ಕೊಪ್ಪಳ ತಾಲೂಕಿನ ಚಿಕ್ಕ ಸಿಂದೋಗಿ ಸಮೀಪದಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಹಲ್ಲೆಗೊಳಗಾದ ಸಿಬ್ಬಂದಿಯನ್ನು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಸಿಬ್ಬಂದಿ ಸಚಿನ್ ಗೌರಿಪುರ ಎಂದು ತಿಳಿದು ಬಂದಿದೆ.ಟ್ಯಾಕ್ಟರ್ ನಲ್ಲಿ ಮರಳು ಸಾಗಿಸುತ್ತಿದ್ದ ಚಾಲಕನನ್ನು ತಡೆದ ಇಲಾಖೆ ಸಿಬ್ಬಂದಿಗಳು ಮರಳು ತುಂಬಿದ ಟ್ರಾಕ್ಟರ್ ಅನ್ಲೋಡ್ ಮಾಡಲು ಹೇಳಿದಾಗ ಸ್ಥಳದಲ್ಲಿ ಮರಳು ತುಂಬುತ್ತಿದ್ದ ಎಂಟು ಜನರು ಏಕಾಏಕಿ ಇಲಾಖೆಯ ಚಾಲಕ ಸಚಿನ್ ಗೌರಿಪುರ ಎನ್ನುವ ಸಿಬ್ಬಂದಿಯ ಮೇಲೆ ಹಲ್ಲೆ ಮಾಡಿದ್ದಾರೆ. ಈ ಸಿಬ್ಬಂದಿ ಸೇರಿದಂತೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಮೂವರು ಅಧಿಕಾರಿಗಳು ಶುಕ್ರವಾರ ಮಧ್ಯಾಹ್ನ ಚಿಕ್ಕ ಸಿಂದೋಗಿ ಸಮೀಪದ ಹಿರೇಹಳ್ಳದಲ್ಲಿ ನಡೆಯುತ್ತಿದ್ದ ಅಕ್ರಮಣ ಮರಳು ಗಾಣಿಗಾರಿಕೆಯ ಸ್ಥಳಕ್ಕೆ ತೆರಳಿ ಅಕ್ರಮ ಗಣಿಗಾರಿಕೆ ತಡೆಯುವ ಯತ್ನ ನಡೆಸಿದ್ದರು.…