Subscribe to Updates
Get the latest creative news from FooBar about art, design and business.
Author: kannadanewsnow05
ಬಳ್ಳಾರಿ : ಬಳ್ಳಾರಿಯಲ್ಲಿ ಬ್ಯಾನರ್ ವಿಚಾರವಾಗಿ ಗಲಾಟೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಪೊಲೀಸರು ಕಾಂಗ್ರೆಸ್ಸಿನ 10 ಕಾರ್ಯಕರ್ತರನ್ನು ಸಹ ರೆಸ್ಟ್ ಮಾಡಿದ್ದಾರೆ. ಕಾರ್ತಿಕ್ (25), ಮುಕ್ಕಣ್ಣ (28), ಇನಾಯತುಲ್ಲಾ (24), ರಾಜು (20), ಮುಸ್ತಫಾ (22), ಶ್ರೀಕಾಂತ್ (30), ಮೊಹಮ್ಮದ್ ರಸೂಲ್ (35), ಬಾಬು (38), ವೆಂಕಟೇಶ್ (38), ಮುಬಾಶೀರ್ (25) ಬಂಧಿತ ಆರೋಪಿಗಳು ಎಂದು ತಿಳಿದು ಬಂದಿದೆ. ಬಂಧಿತರಿಗೆ ಬ್ರೂಸ್ ಪೇಟೆ ಠಾಣೆ ಪೊಲೀಸರು ಮೆಡಿಕಲ್ ಟೆಸ್ಟ್ ಮಾಡಿಸಿದ್ದಾರೆ. ಮೂವರು ಗನ್ ಮ್ಯಾನ್ ಗಳು ಅರೆಸ್ಟ್ ಇನ್ನು ಬಳ್ಳಾರಿಯಲ್ಲಿ ಬ್ಯಾನರ್ ಗಲಾಟೆಗೆ ಕಾಂಗ್ರೆಸ್ ಕಾರ್ಯಕರ್ತ ಬಲಿ ಪ್ರಕರಣಕ್ಕೆ ಸಂಬಂಧಿಸದಂತೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಸತೀಶ್ ರೆಡ್ಡಿ ಆಪ್ತ ಗುರುಚರಣ್ ಸಿಂಗ್ ಬಂದೂಕಿನಿಂದ ಹಾರಿದ್ದ ಬುಲೆಟ್ ನಿಂದ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಬಳ್ಳಾರಿಯಲ್ಲಿ ಬ್ಯಾನರ್ ಗಲಾಟೆಗೆ ಕಾಂಗ್ರೆಸ್ ಕಾರ್ಯಕರ್ತ ಬಲಿ ಪ್ರಕರಣಕ್ಕೆ ಸಂಬಂಧಿಸದಿಂತೆ ಬ್ರೂಸ್ ಪೇಟೆ ಪೊಲೀಸರು ಮೂವರು ಖಾಸಗಿ ಗನ್ ಮ್ಯಾನ್ ಗಳನ್ನು ಬಂಧಿಸಿದ್ದಾರೆ. ಈ…
ಬೆಂಗಳೂರು : ನಗರದ ಕುಮಾರಕೃಪಾ ರಸ್ತೆಯಲ್ಲಿನ ಚಿತ್ರಕಲಾ ಪರಿಷತ್ನಲ್ಲಿ ಆಯೋಜಿಸಿರುವ ಪ್ರತಿಷ್ಟಿತ 23ನೇ ಚಿತ್ರಸಂತೆಯನ್ನು ಕ್ವಾನ್ವಸ್ ಮೇಲೆ ಬರೆಯುವ ಮೂಲಕ ಸಿಎಂ ಸಿದ್ದರಾಮಯ್ಯ ಇಂದು ಉದ್ಘಾಟಿಸಿದರು. ಈ ಮೂಲಕ 8ನೇ ಬಾರಿ ಚಿತ್ರಸಂತೆಗೆ ಅವರು ಚಾಲನೆ ನೀಡಿದಂತಾಯಿತು. ಬಳಿಕ ಮಾತನಾಡಿದ ಸಿಎಂ, ಅತ್ಯಂತ ಸಂತೋಷದಿದ 23ನೇ ಚಿತ್ರಸಂತೆ ಉದ್ಘಾಟಿಸಿದ್ದೇನೆ. ಇದು ನಾನು 8ನೇ ಬಾರಿ ಚಿತ್ರಸಂತೆಯಲ್ಲಿ ಭಾಗವಹಿಸುತ್ತಿರುವುದು. ಕಲಾವಿದರನ್ನು ಪ್ರೋತ್ಸಾಹಿಸಲು ಚಿತ್ರ ಪ್ರದರ್ಶನ ಹಾಗೂ ಮಾರಾಟದ ವೇದಿಕೆಯನ್ನು ಚಿತ್ರಕಲಾ ಪರಿಷತ್ ಅನೇಕ ವರ್ಷದಿಂದ ಮಾಡುತ್ತಿದೆ. 2003ರಲ್ಲಿ ಆರಂಭವಾಗಿದ್ದ ಚಿತ್ರಸಂತೆ ಇದೀಗ 23ನೇ ಚಿತ್ರಸಂತೆಯಾಗಿದೆ. 22 ರಾಜ್ಯ ಹಾಗೂ 4 ಕೇಂದ್ರಾಡಳಿತ ಪ್ರದೇಶದ ಕಲಾವಿದರು ಭಾಗಿಯಾಗಿದ್ದಾರೆ. ಕಲಾವಿದರು, ಜನರು ಸೇರಲು ಒಂದು ವೇದಿಕೆ ಬೇಕಾಗುತ್ತದೆ. ಅದನ್ನು ಚಿತ್ರಕಲಾ ಪರಿಷತ್ ಮಾಡ್ತಿದೆ. ನಾವು ಸಹಾಯ ಮಾಡುತ್ತಾ ಬಂದಿದ್ದೇವೆ. ಮುಂದೆಯೂ ಸಹಾಯ ಮಾಡ್ತೇವೆ ಎಂದು ಭರವಸೆ ನೀಡಿದರು. ಟ್ವೀಟ್ ನಲ್ಲಿ ಸಹ ಸಿಎಂ ಸಿದ್ದರಾಮಯ್ಯ ಪೋಸ್ಟ್ ಹಂಚಿಕೊಂಡಿದ್ದು, ಬೆಂಗಳೂರಿನ ಕುಮಾರಕೃಪಾ ರಸ್ತೆಯಲ್ಲಿರುವ ಚಿತ್ರಕಲಾ ಪರಿಷತ್ ಆವರಣದಲ್ಲಿ…
ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಚಿಗರಿ ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾಗಿ ಕಾರು ಚಾಲಕ ಸ್ಥಳದಲ್ಲೆ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿಯ ಉಣಕಲ್ ಚಿಗರಿ ಪಥದಲ್ಲಿ ಈ ಒಂದು ಅಪಘಾತ ಸಭವಿಸಿದೆ. ನೆಕ್ಸಾನ್ ಕಾರು ಚಾಲಕ ಗಿರೀಶ್ ಬಣವಿ (62) ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ. ಅಪಘಾತದ ಭೀಕರ ದೃಶ್ಯ ಹಿಂಬದಿ ಕಾರಿನ ಡ್ಯಾಶ್ ಕ್ಯಾಮರಾದಲ್ಲಿ ಸೆರೆಯಾಗಿದೆ. ಮೃತ ಗಿರೀಶ್ ಧಾರವಾಡ ನಗರದ ಸರಸ್ವತಿಪುರ ನಿವಾಸಿ ಎಂದು ತಿಳಿದು ಬಂದಿದ್ದು, ಹುಬ್ಬಳ್ಳಿ ಕಡೆಯಿಂದ ಚಿಗರಿ ಬಸ್ ಧಾರವಾಡ ಕಡೆಗೆ ಹೊರಟಿತ್ತು. ಧಾರವಾಡ ಕಡೆಯಿಂದ ಗಿರೀಶ್ ಅವರು ತಮ್ಮ ನೆಕ್ಸನ್ ಕಾರಿನಲ್ಲಿ ಬರುತ್ತಿದ್ದರು. ಈ ವೇಳೆ ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿ ಹೊಡೆದು ಗಿರೀಶ್ ಸಾವನಪ್ಪಿದ್ದಾರೆ. ಹುಬ್ಬಳ್ಳಿಯ ಉತ್ತರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.
ಬೆಂಗಳೂರು : ಹಾಸನದಲ್ಲಿ ಅಕ್ರಮವಾಗಿ ಕಾಂಪೌಂಡ್ ನಿರ್ಮಿಸಿದ್ದಾರೆಂದು ಆರೋಪಿಸಿ, ಕಾಂಪೌಂಡ್ ಧ್ವಂಸಗೊಳಿಸಿದ ವಿಚಾರಕ್ಕೆ ಸಂಬಂಧಪಟ್ಟಂತೆ ನಟ ಯಶ್ ತಾಯಿ ಪುಷ್ಪಾ ಅರುಣ್ ಕುಮಾರ್ ನಾವು ಒತ್ತುವರಿ ಮಾಡಿಲ್ಲ, ಕಾನೂನು ಪ್ರಕಾರ ಜಾಗ ಪಡೆದಿದ್ದೇವೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ. ಹಾಸನದ ವಿದ್ಯಾನಗರದಲ್ಲಿರುವ ನಿವೇಶನದಲ್ಲಿ ನಿರ್ಮಿಸಿದ್ದ ಕಾಂಪೌಂಡ್ ಅಕ್ರಮವಾಗಿ ನಿರ್ಮಾಣ ಮಾಡಲಾಗಿದೆ ಎನ್ನೋ ಆರೋಪವನ್ನ ಯಶ್ ತಾಯಿ ತಳ್ಳಿಹಾಕಿದ್ದಾರೆ. ತೆರವುಗೊಳಿಸಿದವರ ವಿರುದ್ಧ ಹಾಗೂ ಪಿಡಿಓ ನಟರಾಜ್ ವಿರುದ್ಧ ಕೆಂಡಕಾರಿದ್ದಾರೆ. ಪಿಡಿಓ ನಟರಾಜ್ ಅಂತಾ ಇದ್ದಾರೆ. ಇದೆಲ್ಲ ಅವರ ಕುಮ್ಮಕ್ಕಿನಿಂದ ನಡೀತಿದೆ. ನಾವು ಜಾಗಕ್ಕೆ ಟ್ಯಾಕ್ಸ್ ಕಟ್ಟಿದ್ದೀವಿ. ಎಲ್ಲ ದಾಖಲೆ ನನ್ ಕಡೆ ಇದೆ. ಕಾನೂನು ಮುಖಾಂತರ ಎಲ್ಲದಕ್ಕೂ ಉತ್ತರ ಕೊಡ್ತೀನಿ ಎಂದಿದ್ದಾರೆ. ಜೊತೆಗೆ ಅವರ ಮೇಲೆ ಮಾನಹಾನಿ ಮೊಕದ್ದಮೆ ಹಾಕ್ತೀನಿ. ಅವರು ಇದಕ್ಕೆ ಉತ್ತರ ಕೊಡ್ಬೇಕು. ಯಶ್ ಹೆಸರು ಹೇಳಿಕೊಂಡು ಮೈಲೇಜ್ ತಗೋಳೋಕೆ ನೋಡ್ತಿದ್ದಾರೆ. ಕೋರ್ಟ್ ಆರ್ಡರ್ ನಮ್ಮ ಗಮನಕ್ಕೆ ತಂದಿಲ್ಲ. ನಾನು ಕಾನೂನು ಹೋರಾಟ ಮಾಡ್ತೀನಿ ಎಂದು ಪ್ರತಿಕ್ರಿಯೆ ನೀಡಿದ್ದಾರೆ. ಯಾರು ಖಾಲಿ…
ಬಳ್ಳಾರಿ : ಬಳ್ಳಾರಿಯಲ್ಲಿ ಬ್ಯಾನರ್ ಗಲಾಟೆಗೆ ಕಾಂಗ್ರೆಸ್ ಕಾರ್ಯಕರ್ತ ಬಲಿ ಪ್ರಕರಣಕ್ಕೆ ಸಂಬಂಧಿಸದಂತೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಸತೀಶ್ ರೆಡ್ಡಿ ಆಪ್ತ ಗುರುಚರಣ್ ಸಿಂಗ್ ಬಂದೂಕಿನಿಂದ ಹಾರಿದ್ದ ಬುಲೆಟ್ ನಿಂದ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಬಳ್ಳಾರಿಯಲ್ಲಿ ಬ್ಯಾನರ್ ಗಲಾಟೆಗೆ ಕಾಂಗ್ರೆಸ್ ಕಾರ್ಯಕರ್ತ ಬಲಿ ಪ್ರಕರಣಕ್ಕೆ ಸಂಬಂಧಿಸದಿಂತೆ ಬ್ರೂಸ್ ಪೇಟೆ ಪೊಲೀಸರು ಮೂವರು ಖಾಸಗಿ ಗನ್ ಮ್ಯಾನ್ ಗಳನ್ನು ಬಂಧಿಸಿದ್ದಾರೆ. ಈ ವೇಳೆ ತನಿಖೆ ನಡೆಸಲಾಗಿದ್ದು, ಗುರುಚರಣ್ ಬಂದೂಕಿನಿಂದ ಹಾರಿದ್ದ ಬುಲೆಟ್ ನಿಂದ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. ಖಾಸಗಿ ಗನ್ ಮ್ಯಾನ್ ಗಳಾದ ಮಹೇಂದ್ರ ಸಿಂಗ್, ಗುರುಚರಣ್ ಸಿಂಗ್, ಬಲ್ಜಿತ್ ಸಿಂಗ್ ನನ್ನು ಪೊಲೀಸರು ಬಂಧಿಸಿದ್ದಾರೆ. ಇವರು ಸತೀಶ್ ರೆಡ್ಡಿ ಖಾಸಗಿ ಗನ್ ಮ್ಯಾನ್ ಗಳಾಗಿದ್ದಾರೆ. ಸತೀಶ್ ರೆಡ್ಡಿ ಬಳ್ಳಾರಿ ನಗರ ಶಾಸಕ ಭರತ್ ರೆಡ್ಡಿ ಆಪ್ತರಾಗಿದ್ದಾರೆ..
ಬಳ್ಳಾರಿ : ಬಳ್ಳಾರಿ ಬ್ಯಾನರ್ ಗಲಾಟೆಗೆ ಇದೀಗ ಮತ್ತೊಂದು ಬಿಗ್ ಟ್ವಿಸ್ಟ್ ಸಿಕ್ಕಿದೆ. ಶಾಸಕ ಜನಾರ್ದನ ರೆಡ್ಡಿ ಮನೆ ಮೇಲೆ ದಾಳಿ ಮಾಡಲು ಮೊದಲೇ ಪ್ಲಾನ್ ಮಾಡಿಕೊಳ್ಳಲಾಗಿತ್ತು. ಪ್ಲಾನ್ ಮಾಡಿಕೊಂಡೆ ಪುಂಡರ ಗುಂಪು ಮನೆಯ ಬಳಿ ಬಂದಿತ್ತು. ಪೆಟ್ರೋಲ್ ಬಾಂಬ್ ಮತ್ತು ಬಾಟಲ್ ಗಳನ್ನು ತುಂಬಿಸಿಕೊಂಡು ಬಂದಿದ್ದರು. ಇದಕ್ಕೆ ಆಟೋದಲ್ಲಿ ಪೆಟ್ರೋಲ್ ಬಾಂಬ್ ಬಾಟಲಿಗಳು ತಂದಿರುವ ದೃಶ್ಯ ವೈರಲ್ ಆಗಿದೆ. ಗಲಾಟೆ ಸಂದರ್ಭದಲ್ಲಿ ಪೆಟ್ರೋಲ್ ಬಂ ಮತ್ತು ಬಾಟಲಿಗಳನ್ನು ಬಳಸಿರುವುದು ತನಿಖೆಯಲ್ಲಿ ಬಯಲಾಗಿದೆ. ಇನ್ನು ಬಳ್ಳಾರಿಯಲ್ಲಿ ಬ್ಯಾನರ್ ಗಲಾಟೆಗೆ ಕಾಂಗ್ರೆಸ್ ಕಾರ್ಯಕರ್ತ ಬಲಿ ಪ್ರಕರಣಕ್ಕೆ ಸಂಬಂಧಿಸದಂತೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಸತೀಶ್ ರೆಡ್ಡಿ ಆಪ್ತ ಗುರುಚರಣ್ ಸಿಂಗ್ ಬಂದೂಕಿನಿಂದ ಹಾರಿದ್ದ ಬುಲೆಟ್ ನಿಂದ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಬಳ್ಳಾರಿಯಲ್ಲಿ ಬ್ಯಾನರ್ ಗಲಾಟೆಗೆ ಕಾಂಗ್ರೆಸ್ ಕಾರ್ಯಕರ್ತ ಬಲಿ ಪ್ರಕರಣಕ್ಕೆ ಸಂಬಂಧಿಸದಿಂತೆ ಬ್ರೂಸ್ ಪೇಟೆ ಪೊಲೀಸರು ಮೂವರು ಖಾಸಗಿ ಗನ್ ಮ್ಯಾನ್ ಗಳನ್ನು ಬಂಧಿಸಿದ್ದಾರೆ. ಈ ವೇಳೆ ತನಿಖೆ ನಡೆಸಲಾಗಿದ್ದು,…
ಬೆಂಗಳೂರು : ಬಳ್ಳಾರಿಯಲಿ ಬ್ಯಾನರ್ ಕಟ್ಟುವ ವಿಚಾರವಾಗಿ ಫೈರಿಂಗ್ ಆಗಿ ಕಾಂಗ್ರೆಸ್ ಕಾರ್ಯಕರ್ತ ಸಾವನ್ನಪ್ಪಿರುವ ಘಟನೆಗೆ ಸಂಬಂಧಿಸಿದಂತೆ ಗೃಹ ಸಚಿವ ಜಿ ಪರಮೇಶ್ವರ್, ಮುಖ್ಯಮಂತ್ರಿಗಳ ಜೊತೆ ಪ್ರಕರಣದ ಬಗ್ಗೆ ಚರ್ಚೆ ನಡೆಸಿ, ಅಗತ್ಯಬಿದ್ರೆ ತನಿಖೆಯನ್ನು ಸಿಐಡಿಗೆ ಕೊಡುತ್ತೇವೆ ಎಂದು ತಿಳಿಸಿದ್ದಾರೆ. ಬೆಂಗಳೂರಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೇಸ್ ತನಿಖೆ ಸಿಐಡಿಗೆ ವಹಿಸುವ ವಿಚಾರ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ಮಾತನಾಡ್ತೇನೆ. ಅಗತ್ಯಬಿದ್ದರೆ ಸಿಐಡಿಗೆ ಕೊಡುತ್ತೇವೆ. ಪೊಲೀಸರ ಗನ್ ಹಾಗೂ ರಿವಾಲ್ವರ್ನಿಂದ ಫೈರಿಂಗ್ ಆಗಿಲ್ಲ, ಖಾಸಗಿ ಗನ್ನಿಂದ ಫೈರಿಂಗ್ ಆಗಿದ್ದೆಂದು ಎಡಿಜಿಪಿ ದೃಢಪಡಿಸಿದ್ದಾರೆ. ಕಾನೂನು ಚೌಕಟ್ಟಿನಲ್ಲಿ ಆರೋಪಿಗಳನ್ನು ಬಂಧಿಸ್ತೇವೆ. ಹತ್ಯೆಗೆ ಪೆಟ್ರೋಲ್ ಬಾಂಬ್ ಬಳಕೆ ಮಾಡಿದ್ದಾರೆಂಬ ಆರೋಪವೂ ಇದ್ದು,ತನಿಖೆ ಆದಮೇಲೆ ಅದೆಲ್ಲ ಗೊತ್ತಾಗುತ್ತೆ ಎಂದು ಗೃಹ ಸಚಿವರು ಹೇಳಿದ್ದಾರೆ. ತಮಗೆ ಮತ್ತು ತಮ್ಮ ಕುಟುಂಬಕ್ಕೆ ಭದ್ರತೆ ಕೋರಿ ಸಿಎಂ, ಗೃಹ ಸಚಿವರಿಗೆ ಶಾಸಕ ಜನಾರ್ದನರೆಡ್ಡಿ ಪತ್ರ ಬರೆದ ವಿಚಾರ ಸಂಬಂಧವೂ ಪ್ರತಿಕ್ರಿಯಿಸಿದ ಪರಮೆಶ್ವರ್, ಶಾಸಕರ ಲೆಟರ್ ನನಗೆ ಇನ್ನೂ ತಲುಪಿಲ್ಲ. ಪತ್ರ ಬಂದ…
ಅದರ ನಿಜಾರ್ಥವು ಇಂತಿದೆ: *ಕಾಶಿಗೆ ಹೋದಾಗ,ಕಾಯನ್ನೋ,ಫಲವನ್ನೋ ಬಿಡಬೇಕು ಎಂದು ನಮ್ಮ ಹಿರಿಯರು ಏಕೆ ಹೇಳುತ್ತಾರೆ? ಅದರ ಮರ್ಮವೇನು,ಅಂದರೆ,ರಹಸ್ಯವೇನು? ಹಾಗೆ,ಅಧ್ಯಯನ ಮಾಡಿದರೆ, ನಮ್ಮ ಶಾಸ್ತ್ರಗಳಲ್ಲಿ,ಅಂದರೆ,ವೇದ,ಉಪನಿಷತ್ತು,ಪುರಾಣ,ಸ್ಮೃತಿಗಳಲ್ಲಿ ಎಲ್ಲೂ ಈ ಸಂಗತಿ(ಅಂದರೆ,ಒಂದು ಕಾಯನ್ನು ಮತ್ತು ಒಂದು ಹಣ್ಣನ್ನು ಬಿಡಬೇಕು,ಎಂಬುದನ್ನು) ಹೇಳಿಲ್ಲವಲ್ಲ ಎಂಬುದನ್ನು ಕಂಡುಕೊಂಡೆವು ನಾವು. ಶಾಸ್ತ್ರವು ಹೇಳಿದ ವಿಷಯವನ್ನು,ಆಡುಭಾಷೆಯಲ್ಲಿ,ತಿರುಚಿ ಆದ ಪ್ರಮಾದ ನೋಡಿ ಹೀಗಿದೆ: ಕಾಶೀ ಕ್ಷೇತ್ರದ ವಿಷಯದಲ್ಲಿ ಶಾಸ್ತ್ರಗಳು ಹೇಳುತ್ತಿರುವುದು – ಕಾಶೀ ಕ್ಷೇತ್ರಕ್ಕೆ ಹೋಗಿ,ಗಂಗಾ ಸ್ನಾನ ಮಾಡಿ,ಅಲ್ಲಿ,ಅಂದರೆ,ಆ ಗಂಗೆಯಲ್ಲಿ,ಕಾಯಾಪೇಕ್ಷೆ ಮತ್ತು ಫಲಾಪೇಕ್ಷೆಯನ್ನು ತ್ಯಾಗ ಮಾಡಿ,ಅಂದರೆ,ತೊರೆದು,ನಂತರ,ಭಕ್ತಿಯಿಂದ ವಿಶ್ವನಾಥನ ದರುಶನ ಮಾಡಬೇಕು ಎಂದು. ಇಲ್ಲಿ ಕಾಯಾಪೇಕ್ಷೆ ಅಂತರ ತನ್ನ ಅಥವ ಇತರರ ದೇಹದ ಮೇಲಿನ ಅಪೇಕ್ಷೆ ಹಾಗು ಫಲಾಪೇಕ್ಷೆ ಅಂದರೆ,ಮಾಡಿದ ಕರ್ಮಂಗಳಿಂದ ಉಂಟಾಗುವ ಫಲಗಳ ಅಪೇಕ್ಷೆ ಬಿಡಬೇಕು ಎಂಬುದು ಶಾಸ್ತ್ರವಚನಾರ್ಥವು. ಇವೆರಡನ್ನೂ ಮಾಡಿದ ಕ್ಷಣವೇ,ಜೀವನ್ಮುಕ್ತಿಯು ದೊರೆಯುವುದು ನಿಶ್ಚಿತವಾಗುವುದು,ಆಗ ಕಾಶಿಯ ವಿಶ್ವನಾಥನ ದರುಶನದಿಂದ, ನಿಜಫಲವು (ಅಂದರೆ,ಮುಕ್ತಿಯೇ) ಸಿಗುವುದು ಎಂದರ್ಥವು.ಕಾಲ ಕಳೆದಂತೆ,ಈ ಶಾಸ್ತ್ರವಚನವು,ಅಪಭ್ರಂಶಗೊಂಡು,ಅಂದರೆ ಕಾಶಿಗೆ ಹೋದಾಗ,ಒಂದು ಕಾಯಿ ಅಂದರೆ ತರಕಾರಿಯನ್ನೋ ಮತ್ತು ಒಂದು ಫಲ ಅಂದರೆ,ಯಾವುದೋ ಇಷ್ಟದ ತಿಂಡಿಯನ್ನೋ,ಹಣ್ಣನ್ನೋ,ಒಣಹಣ್ಣನ್ನೋ…
ಬಳ್ಳಾರಿ : ಕಳೆದ ಎರಡು ದಿನಗಳ ಹಿಂದೆ ಬಳ್ಳಾರಿಯಲ್ಲಿ ಬ್ಯಾನರ್ ಕಟ್ಟುವ ವಿಚಾರಕ್ಕೆ ಸಂಬಂಧಪಟ್ಟಂತೆ ಗಲಾಟೆ ನಡೆದು ಫೈರಿಂಗ್ ಆಗಿ ಕಾಂಗ್ರೆಸ್ ಕಾರ್ಯಕರ್ತ ಸಾವನ್ನಪ್ಪಿರುವ ಘಟನೆ ನಡೆದಿತ್ತು. ಈ ಒಂದು ಘಟನೆಗೆ ಸಂಬಂಧಿಸಿದಂತೆ ಬಳ್ಳಾರಿಯ ಬ್ರೂಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಬಿಜೆಪಿ ಶಾಸಕ ಜನಾರ್ಧನ ರೆಡ್ಡಿ ಸೇರಿದಂತೆ ನಾಲ್ವರ ವಿರುದ್ಧ ಸುಮೋಟೋ ಪ್ರಕರಣ ದಾಖಲಾಗಿದೆ. ಹೌದು ಬಳ್ಳಾರಿಯಲ್ಲಿ ಬ್ಯಾನರ್ ಗಲಾಟೆಗೆ ಕಾಂಗ್ರೆಸ್ ಕಾರ್ಯಕರ್ತ ಬಲಿಯಾಗಿದ್ದ ಈ ವಿಚಾರವಾಗಿ ಬ್ರೂಸ್ ಪೇಟೆ ಪೊಲೀಸ್ ಠಾಣೆಯಲ್ಲಿ A1 ಜನಾರ್ಧನರೆಡ್ಡಿ, A2, ಶ್ರೀರಾಮಲು A3 ಸೋಮಶೇಖರ್ ರೆಡ್ಡಿ ಹಾಗೂ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ ಸತೀಶ್ ರೆಡ್ಡಿ A4 ಆರೋಪಿ ಎಂದು ಸುಮೋಟೋ ಕೇಸ್ ದಾಖಲಿಸಿಕೊಳ್ಳಲಾಗಿದೆ. ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಹಾಗೂ ಪೋಲೀಸರ ಮೇಲೆ ಕಲ್ಲುತೂರಾಟ ನಡೆಸಿದ್ದು ಡಿವೈಎಸ್ಪಿ ಚಂದ್ರಕಾಂತ ದೂರಿನ ಮೇರೆಗೆ ರೆಡ್ಡಿ ವಿರುದ್ಧ ಸೋಮೊಟೊ ಕೇಸ್ ದಾಖಲಾಗಿದೆ. ವಾಲ್ಮೀಕಿ ಪುತ್ಥಳಿ ಅನಾವರಣ ನಿಮಿತ್ಯ ಜನಾರ್ಧನ ರೆಡ್ಡಿ ಮನೆ ಬಳಿ ಬ್ಯಾನರ್ ಆಳವಡಿಕೆ ಮಾಡಲಾಗಿತ್ತು.…
ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಚಿಗರಿ ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾಗಿ ಕಾರು ಚಾಲಕ ಸ್ಥಳದಲ್ಲೆ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿಯ ಉಣಕಲ್ ಚಿಗರಿ ಪಥದಲ್ಲಿ ಈ ಒಂದು ಅಪಘಾತ ಸಭವಿಸಿದೆ. ನೆಕ್ಸಾನ್ ಕಾರು ಚಾಲಕ ಗಿರೀಶ್ ಬಣವಿ (62) ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ. ಮೃತ ಗಿರೀಶ್ ಧಾರವಾಡ ನಗರದ ಸರಸ್ವತಿಪುರ ನಿವಾಸಿ ಎಂದು ತಿಳಿದು ಬಂದಿದ್ದು, ಹುಬ್ಬಳ್ಳಿ ಕಡೆಯಿಂದ ಚಿಗರಿ ಬಸ್ ಧಾರವಾಡ ಕಡೆಗೆ ಹೊರಟಿತ್ತು. ಧಾರವಾಡ ಕಡೆಯಿಂದ ಗಿರೀಶ್ ಅವರು ತಮ್ಮ ನೆಕ್ಸನ್ ಕಾರಿನಲ್ಲಿ ಬರುತ್ತಿದ್ದರು. ಈ ವೇಳೆ ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿ ಹೊಡೆದು ಗಿರೀಶ್ ಸಾವನಪ್ಪಿದ್ದಾರೆ. ಹುಬ್ಬಳ್ಳಿಯ ಉತ್ತರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.














