Author: kannadanewsnow05

ಕಲಬುರ್ಗಿ : ಕಲ್ಬುರ್ಗಿಯಲ್ಲಿ ಭೀಕರವಾದ ಅಗ್ನಿ ದುರಂತ ಸಂಭವಿಸಿದ್ದು, ಕಲ್ಬುರ್ಗಿ ಜಿಲ್ಲೆಯ ಸೇಡಂ ತಾಲೂಕಿನ ಹೊರವಲಯದಲ್ಲಿರುವ ವಾಸವದತ್ತ ಸಿಮೆಂಟ್ ಕಾರ್ಖಾನೆಯಲ್ಲಿ ದೊಡ್ಡ ಪ್ರಮಾಣದ ಜಮಿನೀನಲ್ಲಿ ಪ್ಲಾಸ್ಟಿಕ್ ತ್ಯಾಜ್ಯವನ್ನು ಅತ್ಯಧಿಕ ಪ್ರಮಾಣದಲ್ಲಿ ಸಂಗ್ರಹಿ ಇಟ್ಟಿದ ಕಸಕ್ಕೆ ಆಕಸ್ಮಿಕ ಬೆಂಕಿ ತಗುಲಿದ್ದು, ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸಲು ಹರಸಾಹಸ ಪಟ್ಟಿರುವ ಘಟನೆ ಶನಿವಾರ ನಡೆದಿದೆ. ಶನಿವಾರ ರಾತ್ರಿ 7ಗಂಟೆಗೆ ಅಲ್ಟ್ರಾಟೆಕ್ (ವಾಸವದತ್ತಾ) ಸಿಮೆಂಟ್ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ ತಗುಲಿದ್ದು, ಕೂಡಲೇ ಕಂಪನಿಯ ಅಗ್ನಿ ಶಾಮಕ ದಳದ 2 ವಾಹನ ಮತ್ತು ಮಳಖೇಡ ಅಲ್ಟ್ರಾಟೇಕ್ ಸಿಮೆಂಟ್ ಕಾರ್ಖಾನೆಯ 1 ವಾಹನ ಹಾಗೂ ಅಗ್ನಿ ಶಾಮಕ ದಳದ 1 ವಾಹನ ಬೆಂಕಿ ನಂದಿಸಲು ತೆರಳಿದ್ದಾಗ ಎಲ್ಲಾ ಕಡೆ ಬೆಂಕಿ ವಿಸ್ತರಣೆಗೊಂಡಿತು. ಅಗ್ನಿ ಶಾಮಕ ದಳದ 4 ವಾಹನಗಳು ಹಾಗೂ ಕಾರ್ಖಾನೆ ಸಿಬ್ಬಂದಿಗಳು ಸೇರಿ ಶನಿವಾರ ರಾತ್ರಿ 7 ಗಂಟೆಯಿಂದ ಬೆಂಕಿ ನಂದಿಸಲು ಎಷ್ಟೇ ಪ್ರಯತ್ನ ಪಟ್ಟರೂ ಇಲ್ಲಿಯವರೆಗೆ ಸಂಪೂರ್ಣ ಬೆಂಕಿ ನಂದಿಸಲುಎಷ್ಟೇ ಪ್ರಯತ್ನ ಪಟ್ಟರೂ ಇಲ್ಲಿಯವರೆಗೆ ಸಂಪೂರ್ಣ…

Read More

ಯಾದಗಿರಿ : ಸಹೋದರಿಯನ್ನು ನೋಡಲು ಯುವಕನೊಬ್ಬ ಬೈಕ್ ಮೇಲೆ ತೆರಳುತ್ತಿದ್ದ ವೇಳೆ ವಿದ್ಯುತ್ ತಂತಿಯೊಂದು ಬಿದ್ದು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಇಂದು ಯಾದಗಿರಿ ನಗರದ ಎಪಿಎಂಸಿ ಯಾರ್ಡ್ ಬಳಿ ನಡೆದಿದೆ. ಮೃತ ಯುವಕನನ್ನು ಖಾಜಾ ಪಟೇಲ್ (20) ಎಂದು ತಿಳಿದುಬಂದಿದೆ.ಯುವಕ ವಡಿಗೇರಾ ತಾಲೂಕಿನ ಬಬಲಾದ ಗ್ರಾಮದ ನಿವಾಸಿಯಾಗಿದ್ದು, ತನ್ನ ಸಹೋದರಿಯನ್ನು ನೋಡಲು ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ವಿದ್ಯುತ್ ತಂತಿ ಮೈಮೇಲೆ ಬಿದ್ದಿದೆ. ಕೂಡಲೆ ಯುವಕ ಸ್ಥಳದಲ್ಲೇ ಉಸಿರು ಚೆಲ್ಲಿದ್ದಾನೆ. ಹೈವೋಲ್ವೇಜ್ ಲೈನ್ ಆಗಿದ್ದ ಕಾರಣ ವಿದ್ಯುತ್ ತಂತಿ ಯುವಕನ ಬೆನ್ನಿನೊಳಗೆ ಹೊಕ್ಕಿದೆ. ಘಟನೆಗೆ ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯವೇ ಇದಕ್ಕೆ ಕಾರಣ ಎಂದು ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ. ಸ್ಥಳಕ್ಕೆ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More

ಬೆಂಗಳೂರು : ಕರ್ನಾಟಕ ಸಹಕಾರಿ ಅಫೆಕ್ಸ್‌ ಬ್ಯಾಂಕ್‌ನಿಂದ 439 ಕೋಟಿ ರೂ. ಸಾಲ ಪಡೆದು ಷರತ್ತುಗಳನ್ನು ಉಲ್ಲಂಘಿಸಿದ ಆರೋಪದಲ್ಲಿ ಬಿಜೆಪಿ ಶಾಸಕ ಮತ್ತು ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ವಿರುದ್ಧ ವಿಶೇಷ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಲು ಸಿಐಡಿಗೆ ಹೈಕೋರ್ಟ್‌ ಅನುಮತಿ ನೀಡಿದೆ. ಪ್ರಕರಣ ಸಂಬಂಧ ಸಲ್ಲಿಕೆಯಾಗಿರುವ ಆರೋಪ ಪಟ್ಟಿಯಲ್ಲಿ ಜಾರಕಿಹೊಳಿ ಅವರನ್ನು ದೋಷಮುಕ್ತಗೊಳಿಸಲಾಗಿದಿಯೇ? ಇಲ್ಲವೇ, ಆರೋಪಿಯನ್ನಾಗಿಸಲಾಗಿದೆಯೇ ಎಂದು ವಿಚಾರಣೆ ವೇಳೆ ಸರ್ಕಾರದ ಪರ ವಕೀಲರನ್ನು ನ್ಯಾಯಪೀಠ ಪ್ರಶ್ನಿಸಿತು. ಇದಕ್ಕೆ ವಕೀಲರು, ಪ್ರಕರಣ ಸಂಬಂಧ 2,000 ಪುಟಗಳ ಆರೋಪ ಪಟ್ಟಿ ಸಿದ್ಧಪಡಿಸಿದ್ದು, ಅರ್ಜಿದಾರರನ್ನು ಆರೋಪಿಯನ್ನಾಗಿಸಲಾಗಿದೆ ಎಂದು ಪೀಠಕ್ಕೆ ತಿಳಿಸಿದರು. ಇದಕ್ಕೆ ಅರ್ಜಿದಾರರ ಪರ ವಕೀಲರು ಆಕ್ಷೇಪ ವ್ಯಕ್ತಿಪಡಿಸಿ, ಪ್ರಕರಣ ಸಂಬಂಧ ಸಲ್ಲಿಕೆಯಾಗಿರುವ ಎಫ್‌ಐಆರ್‌ ಪ್ರಶ್ನಿಸಿ ಈ ಅರ್ಜಿ ಸಲ್ಲಿಕೆ ಮಾಡಲಾಗಿದೆ. ಅರ್ಜಿ ವಿಚಾರಣಾ ಸಂದರ್ಭದಲ್ಲಿ ಆರೋಪ ಪಟ್ಟಿ ಸಲ್ಲಿಕೆಯಾಗಿದೆ. ಆರೋಪ ಪಟ್ಟಿ ಸಲ್ಲಿಸಿರುವುದರಿಂದ ಪ್ರಸ್ತುತ ಅರ್ಜಿಯ ಮೂಲ ಉದ್ದೇಶ ವಿಫಲವಾಗಲಿದೆ ಎಂದು ವಾದ ಮಂಡಿಸಿದರು.

Read More

ಬೆಂಗಳೂರು : ಮಚ್ಚು ಹಿಡಿದು ರೀಲ್ಸ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಬಿಗ್ ಬಾಸ್ ಮಾಜಿ ಸ್ಪರ್ಧಿಗಳಾದ ರಜತ್ ಹಾಗೂ ವಿನಯ್ ಗೌಡ ಜೈಲಿಗೆ ಹೋಗಿ ಬಂದಿದ್ದಾರೆ. ಈ ವೇಳೆ ಪೊಲೀಸರು ಇನ್ಸ್ಟಾಗ್ರಾಮ್ ರಿಲ್ಸ್ ಡಿಲೀಟ್ ಮಾಡುವಂತೆ ಸೂಚಿಸಿದ್ದರು. ಪೊಲೀಸರ ಸೂಚನೆ ಮೇರೆಗೆ ರಜತ್ ರೀಲ್ಸ್ ಡಿಲೀಟ್ ಮಾಡಿದ್ದಾರೆ. ಪ್ರಕರಣ ಹಿನ್ನೆಲೆ? ಬಿಗ್​ಬಾಸ್ ಮಾಜಿ ಸ್ಪರ್ಧಿಗಳಾದ ವಿನಯ್​ಗೌಡ, ರಜತ್ ಕಿಶನ್ ಲಾಂಗ್ ಹಿಡಿದು ರೀಲ್ಸ್​​ ಮಾಡಿ ಪೋಸ್ ಮಾಡಿದ್ದರು. ಈ ವಿಡಿಯೋ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​​ ಆಗುತ್ತಿದ್ದಂತೆ ಈ ಇಬ್ಬರ ವಿರುದ್ಧ ಬೆಂಗಳೂರಿನ ಬಸವೇಶ್ವರ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿತ್ತು. ವಿನಯ್​ಗೌಡ, ರಜತ್ ಕಿಶನ್ ಕೈಯಲ್ಲಿ ಲಾಂಗು, ಕಣ್ಣಿಗೆ ಕೂಲಿಂಗ್ ಗ್ಲಾಸ್​, ಕೈಯಲ್ಲಿ ಲಾಂಗು ಹಿಡಿದು ನಟ ದರ್ಶನ್​ ಅವರ ಅಭಿನಯದ ಮೆಜೆಸ್ಟಿಕ್ ಹಾಡಿಗೆ ಸ್ಲೋ ಮೋಷನ್ ವಾಕ್​ ಮಾಡಿದ್ದರು. ಸಾರ್ವಜನಿಕ ಸ್ಥಳವಾಗಿರುವ ರಸ್ತೆಯಲ್ಲಿ ಲಾಂಗ್ ಹಿಡಿದು ಭಯದ ವಾತಾವರಣ ಸೃಷ್ಟಿಸುವ ರೀಲ್ಸ್ ಮಾಡಿದ್ದರು. ಇದು ಸೋಶಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿತ್ತು.

Read More

ಗದಗ : ಗದಗ ನಲ್ಲಿ ನವ ವಿವಾಹಿತ ನಿಗೂಢವಾಗಿ ಸಾವನಪ್ಪಿದ್ದಾರೆ. ಮದುವೆಯಾದ ನಾಲ್ಕೇ ತಿಂಗಳಿಗೆ ಮಹಿಳೆ ಸಾವನಪ್ಪಿದ್ದಾರೆ. ಗದಗ ಜಿಲ್ಲೆಯ ಬೆಟಗೇರಿಯ ಶರಣಬಸವೇಶ್ವರ ನಗರದಲ್ಲಿ ಈ ಒಂದು ಘಟನೆ ನಡೆದಿದೆ. ಬಳ್ಳಾರಿ ಮೂಲದ ಪೂಜಾ ಅಯ್ಯನಗೌಡ್ರು ಎನ್ನುವ ಮಹಿಳೆ ಸಾವನ್ನಪ್ಪಿರುವ ಮಹಿಳೆ ಎಂದು ತಿಳಿದುಬಂದಿದೆ. ನೇಣು ಬಿಗಿದ ಸ್ಥಿತಿಯಲ್ಲಿ ಪೂಜಾಳ ಮೃತ ದೇಹ ಪತ್ತೆಯಾಗಿದೆ. ಮನೆ ಕೆಟಕಿಗೆ ನೇಣು ಹಾಕಿಕೊಂಡು ಸ್ಥಿತಿಯಲ್ಲಿ ಪೂಜಾ ಮೃತ ದೇಹ ಪತ್ತೆಯಾಗಿದೆ. ಕಳೆದ ನಾಲ್ಕು ತಿಂಗಳ ಹಿಂದೆ ಅಮರೇಶ ಎಂಬಾತನ ಜೊತೆಗೆ ಪೂಜಾಳ ವಿವಾಹವಾಗಿತ್ತು. ಸಾವಿಗೂ ಮುನ್ನ ಪೂಜಾ ಡೆತ್ ನೋಟ್ ಬರೆದಿಟ್ಟಿದ್ದಾಳೆ ಎನ್ನಲಾಗಿದೆ. ನನ್ನ ಸಾವಿಗೆ ಅತ್ತೆ ಮತ್ತು ಭಾವ ವೀರಣ್ಣಗೌಡ ಕಾರಣ ಎಂದು ಬರೆದಿರುವ ಡೆತ್ ನೋಟ್ ಪತ್ತೆಯಾಗಿದೆ ಡೆತ್ ನೋಟ್ ಪತ್ತೆಗುತ್ತಿದ್ದಂತೆ ಪೂಜಾ ಪೋಷಕರು ಆಕ್ರೋಶ ಅವರ ಹಾಕಿದ್ದು ಪೂಜಾ ಅತ್ತೆ ಮತ್ತು ಭಾವನ ವಿರುದ್ಧ ಕಿಡಿ ಕಾರುತ್ತಿದ್ದಾರೆ.

Read More

ಕೊಡಗು : ಕೊಡಗು ಜಿಲ್ಲೆಯಲ್ಲಿ ಘೋರವಾದ ದುರಂತ ಒಂದು ಸಂಭವಿಸಿದ್ದು, ತನ್ನ ಸ್ನೇಹಿತನ ಜೊತೆಗೆ ಮೀನು ಹಿಡಿಯಲು ಹೋದ ಸಂದರ್ಭದಲ್ಲಿ ಹಾರಂಗಿ ಹಿನ್ನೀರಿನಲ್ಲಿ ಮುಳುಗಿ ಸವಿಗೀಡಾಗಿರುವ ಘಟನೆ ನಡೆದಿದೆ. ಹೊಸತೋಟ ಬಳಿಯ ಗರಗಂದೂರಿನಲ್ಲಿ ದುರ್ಘಟನೆ ಸಂಭವಿಸಿದೆ. ಮೃತ ಯುವಕನನ್ನು ಸೋಮವಾರಪೇಟೆ ಬಳಿಯ ನಗರೂರು ಗ್ರಾಮದ ಯೋಗೇಶ್(25) ಎಂದು ತಿಳಿದುಬಂದಿದೆ. ಮೃತ ಯೋಗೇಶ್ ಮತ್ತು ಆತನ ಸ್ನೇಹಿತ ಪ್ರದೀಪ್ ಎಂಬುವರು ಕೆಲಸಕ್ಕೆ ರಜೆ ಇದ್ದ ಹಿನ್ನೆಲೆಯಲ್ಲಿ ಮೀನು ಹಿಡಿಯಲು ಹೋದಾಗ ಈ ದುರಂತ ಸಂಭವಿಸಿದೆ. ಸುಂಟಿಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಪತ್ನಿ ಪಾರ್ವತಿ ವಿರುದ್ಧ ಮುಡಾ ಪ್ರಕರಣಕ್ಕೆ ಸಂಬಂಧಪಟ್ಟಂತೆ ಲೋಕಾಯುಕ್ತ ಪೊಲೀಸ್ ಸಲ್ಲಿಸಿರುವ ಬಿ ರಿಪೋರ್ಟ್ ಪ್ರಶ್ನಿಸಿ ದೂರುದಾರ ಸ್ನೇಹಮಯಿ ಕೃಷ್ಣ ಅವರು ಸಲ್ಲಿಸಿರುವ ತಕರಾರು ಅರ್ಜಿಯ ಕುರಿತು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಿತು. ಬಳಿಕ ಜಡ್ಜ್ ಸಂತೋಷ್ ಗಜಾನನ ಭಟ್ ಅವರು, ಲೋಕಾಯುಕ್ತ ಪೊಲೀಸರಿಗೆ ತನಿಖೆ ಮುಂದುವರಿಸುವಂತೆ ಸೂಚನೆ ನೀಡಿ ವಿಚಾರಣೆಯನ್ನು ಮೇ 7ಕ್ಕೆ ಮುಂದೂಡಿ ಅದೇಶಿಸಿದರು. ಈ ವೇಳೆ ಜಡ್ಜ್ ಸಂತೋಷ ಗಜಾನನ ಭಟ್ ಅವರು ಪ್ರಕರಣ ಸಂಬಂಧ ಲೋಕಾಯುಕ್ತ ಪೊಲೀಸರು ತನಿಖೆ ಪೂರ್ಣಗೊಳಿಸದ ಹಿನ್ನೆಲೆಯಲ್ಲಿ, ಪೊಲೀಸರಿಗೆ ತನಿಖೆ ಮುಂದುವರಿಸುವಂತೆ ಸೂಚನೆ ನೀಡಿದರು. ಲೋಕಾಯುಕ್ತ ಪೊಲೀಸರ ಬಿ ರಿಪೋರ್ಟ್ ಬಗ್ಗೆ ಸದ್ಯಕ್ಕೆ ಆದೇಶ ನೀಡಲಿಲ್ಲ. ಅಲ್ಲದೆ ಇಡಿ ಅಧಿಕಾರಿಗಳಿಗೂ ತಕರಾರು ಅರ್ಜಿ ಸಲ್ಲಿಸಬಹುದು ಎಂದು ಇದೆ ವೇಳೆ ಜಡ್ಜ್ ತಿಳಿಸಿದರು. ಬಳಿಕ ಮೇ 7ರಂದು ವಿಚಾರಣೆಯನ್ನು ಮುಂದೂಡಿದರು. ವಿಚಾರಣೆ ಆರಂಭವಾದಾಗ ಪ್ರಕರಣ ಸಂಬಂಧ ಇಂದು ಕೋರ್ಟ್ ಗೆ ದೂರುದಾರ ಸ್ನೇಹಮಯಿ…

Read More

ಬೆಳಗಾವಿ : ಇತ್ತೀಚಿಗೆ ಸೈಬರ್ ವಂಚಕರಿಂದ ಅನೇಕರು ಮೋಸ ಹೋಗಿ ಬೀದಿಗೆ ಬಂದಿದ್ದು ಅಲ್ಲದೇ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಗಳು ಸಹ ನಡೆದಿವೆ. ಇದೀಗ ಇತ್ತೀಚಿಗೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಬೀಡಿ ಗ್ರಾಮದಲ್ಲಿ ವೃದ್ಧ ದಂಪತಿಗಳು ಸೈಬರ್ ವಂಚಕರಿಂದ 50 ಲಕ್ಷ ಹಣ ಕಳೆದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ. ಬಂಧಿತ ಆರೋಪಿಯನ್ನು ಗುಜರಾತ ರಾಜ್ಯದ ಸೂರತ್‌ನ ನಿವಾಸಿ ಚಿರಾಗ್ ಜೀವರಾಜಬಾಯ್ ಲಕ್ಕಡ್ ಎಂದು ತಿಳಿದುಬಂದಿದೆ. ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಆರೋಪಿ ವಿರುದ್ಧ ಅಪರಾಧ ಸಂಖ್ಯೆ 32/2025 ಕಲಂ 66(ಡಿ) ಐಟಿ ಕಾಯ್ದೆ ಮತ್ತು ಕಲಂ 108, 308(2), 319(2), 03(5) ಬಿಎನ್ಎಸ್ ಅಡಿ ಖಾನಾಪುರ ತಾಲೂಕಿನ ನಂದಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.‌ ಪ್ರಕರಣ ಹಿನ್ನೆಲೆ? ಬೀಡಿ ಗ್ರಾಮದ ಕ್ರಿಶ್ಚಿಯನ್ ಓಣಿಯ ನಿವಾಸಿಗಳಾಗಿದ್ದ ನಿವೃತ್ತ ರೈಲ್ವೆ ಉದ್ಯೋಗಿ ಡಿಯಾಗೋ ನಜರತ್ (83) ಮತ್ತು ಅವರ ಪತ್ನಿ ಪ್ಲೇವಿಯಾ ನಜರತ್ (78) ಅವರು ಮಾರ್ಚ್ 27ರಂದು…

Read More

ಬೆಂಗಳೂರು : ರಾಜ್ಯ ಸರ್ಕಾರ ಡೀಸೆಲ್ ಬೆಲೆ ಏರಿಕೆ ಮಾಡಿದ ಬೆನ್ನಲ್ಲೇ, ಇದೀಗ ಲಾರಿ ಚಾಲಕರು ಅನಿರ್ಧಿಷ್ಟಾವಧಿ ಮುಷ್ಕರ ಕೈಗೊಂಡಿದ್ದು ಇಂದು ಮಧ್ಯರಾತ್ರಿ ಇಂದಲೇ ಲಾರಿ ಮುಷ್ಕರ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ, ಕೆಲ ಅಗತ್ಯ ವಸ್ತುಗಳು ಸಿಗೋದು ಬಹುತೇಕ ಡೌಟ್ ಎಂದೇ ಹೇಳಲಾಗುತ್ತಿದೆ. ಹಾಲು, ಔಷಧ, ಹಣ್ಣು ಮತ್ತು ತರಕಾರಿ, ಸಿಲಿಂಡರ್ ಸಾಗಣೆ ವಾಹನ, ಆಂಬುಲೆನ್ಸ್ ಅಗ್ನಿಶಾಮಕ ಸೇವೆ ವಾಹನಗಳ ಸಂಚಾರ ಇರಲಿದೆ. ಆದರೆ ಶೋರೂಮ್ ಗಳಿಗೆ ವಾಹನಗಳ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಅಕ್ಕಿ, ಬೇಳೆ, ದಿನಸಿ ಸೇರಿ ಅಗತ್ಯ ವಸ್ತುಗಳ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಇನ್ನು ಸಿಮೆಂಟ್, ಮರಳು, ಜಲ್ಲಿಕಲ್ಲು, ಕಟ್ಟಡ ನಿರ್ಮಾಣ ಸಾಮಗ್ರಿಗಳಲ್ಲಿ ಕೊರತೆ ಕಂಡುಬರಲಿದೆ. ಪೆಟ್ರೋಲ್ ಡೀಸೆಲ್ ಸಾಗಣೆ ವಾಹನ ನಿಲುಗಡೆಯಿಂದ ಇವೆಲ್ಲ ಸಮಸ್ಯೆಗಳು ಎದುರಾಗಲಿವೆ. ಎರಡು ಅಥವಾ ಮೂರು ದಿನಗಳಲ್ಲಿ ಪೆಟ್ರೋಲ್ ಡೀಸೆಲ್ ಲಭ್ಯತೆಯಲ್ಲಿ ಕೂಡ ಕೊರತೆ ಉಂಟಾಗಲಿದೆ. ನೆರೆ ರಾಜ್ಯಗಳಿಂದ ಬರುವ ಲಾರಿ ಮತ್ತು ಟ್ರಕ್ ಗಳಿಗೆ ತಡೆ ಬೀಳುವುದರಿಂದ ಶೋರೂಮ್ಗಳಿಗೆ ವಾಹನಗಳ ಪೂರೈಕೆಯಲ್ಲೂ…

Read More

ಬೆಂಗಳೂರು : ಜಾತಿ ಗಣತಿ ವಿಚಾರವಾಗಿ ಕಾಂಗ್ರೆಸ್ ಪಕ್ಷದ ಒಕ್ಕಲಿಗ ಶಾಸಕರ ಜೊತೆ ಚರ್ಚಿಸಲು ಡಿಸಿಎಂ ಡಿ.ಕೆ.ಶಿವಕುಮಾರ್ ನಾಳೆ ಸಭೆ ಕರೆದಿದ್ದಾರೆ.ಕಾಂಗ್ರೆಸ್ ಪಕ್ಷದ ಒಕ್ಕಲಿಗ ಸಮುದಾಯದ ಶಾಸಕರ ಜೊತೆ ಚರ್ಚಿಸಿ ಅಭಿಪ್ರಾಯ ಸಂಗ್ರಹಿಸಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು. ಇಂದು ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಜಾತಿ ಗಣತಿ ವರದಿಯನ್ನು ಸಂಪೂರ್ಣವಾಗಿ ನೋಡಿಲ್ಲ, ಅದರ ಅಧ್ಯಯನ ಮಾಡಲಾಗುತ್ತಿದೆ. ನಾಳೆ ಕಾಂಗ್ರೆಸ್ ಪಕ್ಷದ ನಮ್ಮ ಸಮುದಾಯದ ಶಾಸಕರ ಸಭೆ ಕರೆದಿದ್ದೇನೆ. ಅವರ ಜೊತೆ ಚರ್ಚೆ ಮಾಡಿ, ಯಾರ ಮನಸ್ಸಿಗೂ ನೋಯಿಸದೇ ಎಲ್ಲರ ಗೌರವ ಕಾಪಾಡಲು ಸಲಹೆ ನೀಡುತ್ತೇವೆ ಎಂದರು. ಜಾತಿ ಗಣತಿ ವಿಚಾರ ರಾಜ್ಯದಲ್ಲಿ ಭಾರೀ ಚರ್ಚೆಯಾಗುತ್ತಿದೆ. ಈ ಕುರಿತು ಸರ್ಕಾರದ ವಿರುದ್ಧ ಪ್ರತಿಪಕ್ಷಗಳು ಮುಗಿಬಿದ್ದಿವೆ. ಆದರೆ ಸರ್ಕಾರ ಮಾತ್ರ ಜಾತಿ ಗಣತಿಯನ್ನು ಸಮರ್ಥಿಸಿಕೊಳ್ಳುತ್ತಿದೆ. ಜೊತೆಗೆ ಜಾತಿ ಗಣತಿ ಕುರಿತು ಚರ್ಚಿಸಲು ಏ 17 ರಂದು ವಿಶೇಷ ಸಚಿವ ಸಂಪುಟ ಸಭೆ ಕರೆದಿದೆ. ಈ ಸಚಿವ ಸಂಪುಟ ಸಭೆಯಲ್ಲಿ ಸರ್ಕಾರ ಈ…

Read More