Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಇಂದು ಬೆಂಗಳೂರಿನ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಂಪುಟ ಸಭೆ ನಡೆಯಿತು. ಈ ಒಂದು ಸಂಪುಟ ಸಭೆಯಲ್ಲಿ ದೌರ್ಜನಕ್ಕೆ ಒಳಗಾಗಿ ಮೃತಪಟ್ಟಿರುವ ಎಸ್ಸಿ ಎಸ್ಟಿ ಅವಲಂಬಿತರಿಗೆ ಅನುಕಂಪದ ಆಧಾರದ ಮೇಲೆ ಸರ್ಕಾರಿ ನೌಕರಿ ನೀಡಲು ಸಂಪುಟ ಸಭೆ ಒಪ್ಪಿಗೆ ನೀಡಿದೆ. ಹೌದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ಒಂದು ತೀರ್ಮಾನ ತೆಗೆದುಕೊಳ್ಳಲಾಯಿತು. ದೌರ್ಜನ್ಯಕ್ಕೊಳಗಾಗಿ ಮೃತಪಟ್ಟ ಎಸ್ಸಿ ಎಸ್ಟಿ ವ್ಯಕ್ತಿಯ ಅವಲಂಬಿತರಿಗೆ ಸರ್ಕಾರಿ ನೌಕರಿಗೆ ಸಂಪುಟ ಸಭೆ ಇದೀಗ ಒಪ್ಪಿಗೆ ನೀಡಿದೆ. ಗ್ರೂಪ್ ಸಿ, ಗ್ರೂಪ್ ಡಿ ವೃಂದದ ಹುದ್ದೆಗಳಿಗೆ ಅನುಕಂಪದ ಆಧಾರದಲ್ಲಿ ಸರ್ಕಾರಿ ನೌಕರಿ ನೀಡಲು ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ. DPAR ನಿಯಮಾವಳಿಗೆ ತಿದ್ದುಪಡಿ ಮಾಡಲು ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಯಿತು.
ಬೆಂಗಳೂರು : ರಾಜ್ಯ ಸರ್ಕಾರ ಸೆಪ್ಟೆಂಬರ್ 22ರಂದು ರಾಜ್ಯದಲ್ಲಿ ಜಾತಿಗಣಿತಿ ನಡೆಸಲು ದಿನಾಂಕ ಫಿಕ್ಸ್ ಮಾಡಿದೆ. ಆದರೆ ಜಾತಿ ಗಣತಿಗೆ ಪರ ಮತ್ತು ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ, ಜಾತಿ ಗಣತಿ ಸಮೀಕ್ಷೆ ಕುರಿತಂತೆ ಇಂದು ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಂಪುಟ ಸಭೆಯಲ್ಲಿ ಸುಧೀರ್ಘವಾದ ಚರ್ಚೆ ನಡೆಯಿತು. ಈ ವೇಳೆ ಈ ಒಂದು ಜಾತಿ ಗಣತಿ ಸಮೀಕ್ಷೆ ಮುಂದೊಡುವಂತೆ ಸಚಿವರು ಆಗ್ರಹಿಸಿದರು. ಇದೆ ವೇಳೆ ಸಿಎಂ ಸಿದ್ದರಾಮಯ್ಯ ನನ್ನನ್ನು ಮೇಲ್ವರ್ಗದ ವಿರೋಧಿ ಎಂದು ಆರೋಪಿಸುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.ಬೆಂಗಳೂರಿನ ವಿಧಾನಸೌಧದಲ್ಲಿ ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಂಪುಟ ಸಭೆ ನಡೆಯಿತು. ಸಭೆಯಲ್ಲಿ ದಿನೇ ದಿನೇ ಜಾತಿವಾರು ಗೊಂದಲ ಸೃಷ್ಟಿಯಾಗುತ್ತಿದೆ .ಸಮೀಕ್ಷೆಯ ಸಾಧಕ ಭಾದಕಗಳ ಬಗ್ಗೆ ಸಚಿವರು ಪ್ರಸ್ತಾಪಿಸಿದರು. ಈಗಾಗಲೇ ಜಾತಿ ಗಣತಿ ಸಮೀಕ್ಷೆ ಘೋಷಿಸಿದ್ದೇವೆ ಈಗ ಏನು ಮಾಡಬೇಕು ಎಂಬುದರ ಸಮಾಲೋಚನೆ ನಡೆಯಿತು. ಇದೆ ವೇಳೆ ಸಂಪುಟ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದ್ದು ತಮ್ಮ ವಿರುದ್ಧ ಅನಗತ್ಯ ಆರೋಪ ಮಾಡಲಾಗುತ್ತಿದೆ.…
ಬೆಂಗಳೂರು : ರಸ್ತೆ ಗುಂಡಿ ವಿಚಾರವಾಗಿ ರಾಜ್ಯ ಸರ್ಕಾರದ ವಿರುದ್ಧ ಎಚ್ ಡಿ ಕುಮಾರಸ್ವಾಮಿ ಕಿಡಿ ಕಾರಿದ್ದಾರೆ. ಇದೀಗ ಎಚ್ ಡಿ ಕುಮಾರಸ್ವಾಮಿಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಬರಿ ಟ್ವೀಟ್ ಮಾಡಿಕೊಂಡು ಕೂರೋದಲ್ಲ ನೀನು ಕೇಂದ್ರ ಸಚಿವ ಬೆಂಗಳೂರಿಗೆ ನಿನ್ನ ಕೊಡುಗೆ ಏನಪ್ಪಾ ಎಂದು ಪ್ರಶ್ನಿಸಿದ್ದಾರೆ. ಮೇಕೆದಾಟು ಯೋಜನೆಗೆ ಅನುಮತಿ ಕೊಡಿಸುತ್ತೇನೆ ಅಂತ ಹೇಳಿದ್ದೆ ಎಲ್ಲಿ ಮೇಕದ ಟು ಯೋಜನೆಗೆ ಅನುಮತಿ ಕೊಡಿಸಿದೆ ಬರಿ ಡಿಲೀಟ್ ಮಾಡಿಕೊಂಡು ಕುಳಿತುಕೊಂಡರೆ ಆಗುವುದಿಲ್ಲ ರಸ್ತೆಗುಂಡಿ ಮುಟ್ಟುವುದಕ್ಕೆ ಅಕೌಂಟೆಬಿಲಿಟಿ ಫಿಕ್ಸ್ ಮಾಡಿದ್ದೇನೆ ನಿನ್ನೆ ಮಳೆ ನೋಡಿ ಗಾಬರಿ ಆಯಿತು ರಾತ್ರಿ ಎಲ್ಲ ಎಚ್ಚರವಿದ್ದೇ. ಯಾರೋ ನಾಲ್ಕು ಜನ ಟ್ವೀಟ್ ಮಾಡಿ ಬಿಡುತ್ತಾರೆ. ಮುಂಬೈ ಮತ್ತು ಬೇರಿನಗರದ ಗುಂಡಿಗಳ ಬಗ್ಗೆ ಯಾಕೆ ಬರುತ್ತಿಲ್ಲ? ಟ್ವೀಟ್ ಮೂಲಕ ಬೆದರಿಕೆ ಹಾಕುವವರು ರಾಜಕೀಯಕ್ಕೆ ಬರಲಿ ಆಂಧ್ರಪ್ರದೇಶಕ್ಕೆ ಉದ್ಯಮಿಗಳು ಹೋಗುತ್ತಿಲ್ಲ. ಅದಕ್ಕೆ ಕರೆಯುತ್ತಿದ್ದಾರೆ ಶಾಸಕರಿಗೆ ಕೊಡುವ ಅನುದಾನ ರಸ್ತೆಗಳಿಗೆ ಬಳಸಿ ಅಂತ ಹೇಳಿದ್ದೇವೆ. ರಸ್ತೆಗುಂಡಿಗಳ ವಿಚಾರವಾಗಿ ಬಗ್ಗೆ ಸಿಎಂ…
ದಕ್ಷಿಣಕನ್ನಡ : ಧರ್ಮಸ್ಥಳದಲ್ಲಿ ಶವಗಳನ್ನು ಹೂತು ಹಾಕಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಎಸ್ಐಟಿ ಅಧಿಕಾರಿಗಳು ಬಂಗ್ಲೆ ಗುಡ್ಡದಲ್ಲಿನ ಶೋಧ ಸಂಪೂರ್ಣವಾಗಿ ಮುಕ್ತಾಯಗೊಳಿಸಿದ್ದಾರೆ. ಕಳೆದ ಎರಡು ದಿನಗಳಲ್ಲಿ ಈ ಒಂದು ಬಂಗ್ಲೆಗುಡ್ಡದಲ್ಲಿ 7 ಮಾನವನ ತಲೆ ಬುರುಡೆ ಸೇರಿದಂತೆ ಅಸ್ತಿಪಂಜರದ ಅವಶೇಷಗಳು ಪತ್ತೆಯಾಗಿವೆ. ಇದೀಗ ಶೋಧ ಮುಕ್ತಾಯಗೊಳಿಸಿ ಎಸ್ಐಟಿ ಅಧಿಕಾರಿಗಳು ಕಚೇರಿಗೆ ಮರಳಿದ್ದಾರೆ. ಧರ್ಮಸ್ಥಳ ಪ್ರಕರಣ ದಿನವೊಂದಕ್ಕೆ ಟ್ವಿಸ್ಟ್ ಪಡೆದುಕೊಳ್ಳುತ್ತಿದ್ದು, ಇದೀಗ ಎಸ್ಐಟಿ ಅಧಿಕಾರಿಗಳು ಬಂಗ್ಲೆಗುಡ್ಡದಲ್ಲಿ ಶೋಧ ನಡೆಸಿದ್ದಾರೆ. ಧರ್ಮಸ್ಥಳ ಸಮೀಪದ ಬಂಗ್ಲೆಗುಡ್ಡೆ ಕಾಡಿನಲ್ಲಿ ಸಂಶಯಾಸ್ಪದ ಶವ ಪತ್ತೆ ಪ್ರಕರಣದ ತನಿಖೆ ತೀವ್ರಗೊಂಡಿದೆ. ಅಲ್ಲದೇ ಇದೀಗ ಬುರುಡೆ ಸಹಿತ ಮಾನವನ ಕೆಲವು ಮೂಳೆಗಳು ಸಹ ಪತ್ತೆಯಾಗಿವೆ. ಎಫ್ಎಸ್ಎಲ್ ತಜ್ಞರು ಪತ್ತೆಯಾದ ಮೂಳೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಬಂಗ್ಲೆ ಗುಡ್ಡದಲ್ಲಿ ವಿಠಲ ಗೌಡ ತೋರಿಸಿದ ಜಾಗದಲ್ಲಿ ಬುರುಡೆಗಳು ಮತ್ತು ಅಸ್ತಿ ಪಂಜರಗಳು ಪತ್ತೆಯಾಗಿವೆ ಎನ್ನಲಾಗಿದೆ. 13 ಎಕರೆ ವಿಸ್ತೀರ್ಣದ ಬಂಗ್ಲೆಗುಡ್ಡದಲ್ಲಿ 5 ಕಡೆ ಮಹಜರು ನಡೆದಿದೆ. ಈ ವೇಳೆ 5 ತಲೆಬುರಡೆ, 113 ಮೂಳೆಗಳು ಸಿಕ್ಕಿವೆ…
ಬೆಂಗಳೂರು : ಕುರುಬ ಸಮುದಾಯವನ್ನು ಎಸ್ ಟಿ ಗೆ ಸೇರಿಸುವಂತೆ ಶಿಫಾರಸು ವಿಚಾರವಾಗಿ ಪಿಡಬ್ಲ್ಯೂಡಿ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದು, ಕಳೆದ 20 ವರ್ಷಗಳಿಂದ ಸಾಕಷ್ಟು ಶಿಫಾರಸುಗಳು ಹೋಗಿವೆ. ಬುಡಕಟ್ಟಿಗೆ ಸೇರಿದ ಅಂಶಗಳು ಇದ್ದರೆ ಎಸ್ಟಿಗೆ ಸೇರುತ್ತದೆ ಸರ್ಕಾರ ಶಿಫಾರಸು ಮಾಡಿದ ತಕ್ಷಣ ಆಗುತ್ತದೆ ಅಂತ ಏನಿಲ್ಲ. ಈ ವಿಚಾರದಲ್ಲಿ ಕೇಂದ್ರ ಸರ್ಕಾರ ಕಠಿಣವಾಗಿದ್ದು ಯಾರು ಸಹ ಆತಂಕ ಪಡುವ ಅಗತ್ಯವಿಲ್ಲ ಎಂದು ಸತೀಶ್ ಜಾರಕಿಹೊಳಿ ತಿಳಿಸಿದರು. ಎಸ್ ಟಿ ಗೆ ಹೊಸದಾಗಿ ಜಾತಿಗಳು ಸೇರ್ಪಡೆ ಆದರೆ ಎಸ್ ಟಿ ಮೀಸಲಾತಿ ಪ್ರಮಾಣ ಕೂಡ ಹೆಚ್ಚಳ ಆಗಬೇಕು. ಕೇಂದ್ರ ಸರ್ಕಾರ ಇದೆಲ್ಲವನ್ನು ಸುಮ್ಮನೆ ಮಾಡುವುದಿಲ್ಲ ಯಾವುದು ಸರಿಯಾಗಿದೆ ಅದನ್ನು ಮಾತ್ರ ಕೇಂದ್ರ ಸರ್ಕಾರ ಮಾಡುತ್ತದೆ. ಇಂತಹ ಶಿಫಾರಸುಗಳು 20 ವರ್ಷಗಳಿಂದ ಬರುತ್ತಲೇ ಇವೆ. ಎಸ್ ಟಿ ಗೆ ಹೊಸ ಜಾತಿ ಸೇರಿಸುವುದು ಸುಲಭದ ಕೆಲಸ ಅಲ್ಲ. ಅನೇಕ ಶಿಫಾರಸುಗಳು ದೆಹಲಿ ಬೆಂಗಳೂರು ಅಂತ ಸುತ್ತುತ್ತಲೇ ಇವೆ ತಳವಾರ ಪರಿವಾರ ಎರಡನೇ…
ಬೆಂಗಳೂರು : ರಾಜ್ಯ ಅಷ್ಟೇ ಅಲ್ಲದೆ ಇಡೀ ದೇಶದಲ್ಲೇ ಭಾರಿ ಸದ್ದು ಮಾಡಿದ್ದ ಪಿಎಸ್ಐ ನೇಮಕಾತಿಯಲ್ಲಿ ಅಕ್ರಮ ನಡೆಸಿದ ಆರೋಪ ಪಟ್ಟಣಕ್ಕೆ ಸಂಬಂಧಪಟ್ಟಂತೆ ಇದೀಗ ಪ್ರಕರಣ ರದ್ದು ಕೋರಿ ಅರ್ಜಿ ಸಲ್ಲಿಸಿದ್ದ ಎಡಿಜಿಪಿ ಅಮೃತ್ ಪಾಲ್ ಅರ್ಜಿ ವಜಾಗೊಂಡಿದೆ. ನ್ಯಾ. ಜೆ.ಎಂ ಖಾಜಿ ಅವರಿದ್ದ ಹೈಕೋರ್ಟ್ ಪೀಠ ಈ ಒಂದು ಆದೇಶ ಹೊರಡಿಸಿದೆ. ಅಮೃತ್ ಪಾಲ್ ಪಿಎಸ್ಐ ನೇಮಕಾತಿಯ ಉಸ್ತುವಾರಿ ವಹಿಸಿದ್ದರು. ಸೇಫ್ ಲಾಕ್ ಕಿ ಅಮೃತ್ ಪಾಲ್ ಬಳಿಯೇ ಇತ್ತು. ಈ ಒಂದು ಕಿ ಯನ್ನು ಕಿರಿಯಾಧಿಕಾರಿಗಳಿಗೆ ಕೊಟ್ಟು ದುರುಪಯೋಗ ಮಾಡಲಾಗಿದೆ. ಕೃತ್ಯದ ಸಂಬಂಧ ಲಂಚದ ಹಣದ ಭಾಗವು ರಿಕವರಿಯಾಗಿದೆ. ಹಾಗಾಗಿ ಪ್ರಕರಣ ರದ್ದುಪಡಿಸಿಸದಂತೆ ಎಸ್ ಪಿ ಪಿ ಪ್ರಸನ್ನ ಕುಮಾರ್ ಅವರು ವಾದ ಮಂಡಿಸಿದರು. ವಾದ ಪರಿಗಣಿಸಿ ಎಡಿಜಿಪಿ ಅಮೃತ್ ಪಾಲ್ ಅರ್ಜಿ ವಜಾಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಿತು.
ಬೆಂಗಳೂರು : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿಯಲ್ಲಿ ಯೋಗ ಗುರು ನಿರಂಜನಾ ಮೂರ್ತಿಯನ್ನು ರಾಜರಾಜೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ. ಯೋಗ ಕಲಿಯಲು ಬರುತ್ತಿದ್ದ ಅಪ್ರಾಪ್ತೆಗೆ ಪುಸಲಾಯಿಸಿ ಅಂತಾರಾಷ್ಟ್ರೀಯ ಮಟ್ಟದ ಯೋಗಪಟುವನ್ನಾಗಿ ಮಾಡುವುದಾಗಿ ಆಮಿಷವೊಡ್ಡಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪ ಕೇಳಿಬಂದಿದೆ. ಬಾಲಕಿಯ ಕುಟುಂಬಸ್ಥರು ನೀಡಿದ ದೂರು ಆಧರಿಸಿ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರ್. ಆರ್. ನಗರದ ಸನ್ ಶೈನ್ ಇನ್ಸ್ಟಿಟ್ಯೂಟ್ ಹೆಸರಲ್ಲಿ 2019 ರಿಂದ ಆರೋಪಿ ಯೋಗ ತರಗತಿ ನಡೆಸುತ್ತಿದ್ದರು. ಬಾಲಕಿಯು 2021ರಿಂದ ಯೋಗ ತರಗತಿಗೆ ಸೇರಿದ್ದಳು. ತಮ್ಮ ಯೋಗಗುರುಗಳೊಂದಿಗೆ ಥಾಯ್ಲೆಂಡ್ನಲ್ಲಿ ನಡೆದಿದ್ದ ಯೋಗ ಸ್ಪರ್ಧೆಯಲ್ಲಿ ಭಾಗಿಯಾಗಿದ್ದರು. ಈ ವೇಳೆ ಆರೋಪಿ ಲೈಂಗಿಕ ದೌರ್ಜನ್ಯವೆಸಗಿದ್ದರು ಎಂದು ದೂರಿನಲ್ಲಿ ಆರೋಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 2024ರಲ್ಲಿ ಮತ್ತೆ ಯೋಗ ಸ್ಪರ್ಧೆಯಲ್ಲಿ ಭಾಗವಹಿಸಲು ಬಾಲಕಿಯು ಆರೋಪಿ ಒಡೆತನದ ಯೋಗ ಕೇಂದ್ರಕ್ಕೆ ಮತ್ತೆ ಸೇರಿಕೊಂಡಿದ್ದಳು. ರಾಷ್ಟ್ರಮಟ್ಟದ…
ದಕ್ಷಿಣಕನ್ನಡ : ಧರ್ಮಸ್ಥಳ ಪ್ರಕರಣ ದಿನವೊಂದಕ್ಕೆ ಟ್ವಿಸ್ಟ್ ಪಡೆದುಕೊಳ್ಳುತ್ತಿದ್ದು, ಇದೀಗ ಎಸ್ಐಟಿ ಅಧಿಕಾರಿಗಳು ಬಂಗ್ಲೆಗುಡ್ಡದಲ್ಲಿ ಶೋಧ ನಡೆಸಿದ್ದಾರೆ. ಧರ್ಮಸ್ಥಳ ಸಮೀಪದ ಬಂಗ್ಲೆಗುಡ್ಡ ಕಾಡಿನಲ್ಲಿ ಸಂಶಯಾಸ್ಪದ ಶವ ಪತ್ತೆ ಪ್ರಕರಣದ ತನಿಖೆ ತೀವ್ರಗೊಂಡಿದೆ. ಅಲ್ಲದೇ ಇದೀಗ ಬುರುಡೆ ಸಹಿತ ಮಾನವನ ಕೆಲವು ಮೂಳೆಗಳು ಸಹ ಪತ್ತೆಯಾಗಿವೆ. ಎಫ್ಎಸ್ಎಲ್ ತಜ್ಞರು ಪತ್ತೆಯಾದ ಮೂಳೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಬಂಗ್ಲೆ ಗುಡ್ಡದಲ್ಲಿ ವಿಠಲ ಗೌಡ ತೋರಿಸಿದ ಜಾಗದಲ್ಲಿ ಬುರುಡೆಗಳು ಮತ್ತು ಅಸ್ತಿ ಪಂಜರಗಳು ಪತ್ತೆಯಾಗಿವೆ ಎನ್ನಲಾಗಿದೆ. 13 ಎಕರೆ ವಿಸ್ತೀರ್ಣದ ಬಂಗ್ಲೆಗುಡ್ಡದಲ್ಲಿ 5 ಕಡೆ ಮಹಜರು ನಡೆದಿದೆ. ಈ ವೇಳೆ 5 ತಲೆಬುರಡೆ, 113 ಮೂಳೆಗಳು ಸಿಕ್ಕಿವೆ ಎನ್ನಲಾಗಿದೆ.ಧರ್ಮಸ್ಥಳದ ಬಂಗ್ಲೆ ಗುಡ್ಡದಲ್ಲಿ ಮತ್ತೆ 5 ಕಡೆಗಳಲ್ಲಿ ಮೂಳೆಗಳು ಪತ್ತೆಯಾಗಿವೆ, ಎಸ್ಐಟಿ ಮಹಜರು ವೇಳೆ ಅಸ್ತಿಪಂಜರದ ಅವಶೇಷಗಳು ಪತ್ತೆಯಾಗಿವೆ. ಭೂಮಿಯ ಮೇಲ್ಭಾಗದಲ್ಲಿ ಅಸ್ತಿಪಂಜರದ ಅವಶೇಷಗಳು, ಮೂಳೆಗಳು ಸಿಕ್ಕಿದ್ದು, ಸುಕೋ ಟೀಮ್ ಸಿಕ್ಕ ಜಾಗದಲ್ಲಿ ಮಣ್ಣಿನ ಮಾದರಿ ಯನ್ನು ಸಂಗ್ರಹಿಸಲಾಗಿದೆ ಪೈಪ್ ಗಳಲ್ಲಿ ಮೂಳೆಗಳನ್ನು ಸಂಗ್ರಹಿಸಿದೆ. ತನಿಖಾಧಿಕಾರಿ ಜಿತೇಂದ್ರ ದಯಾಮಾ…
ಬೆಂಗಳೂರು : ಆಳಂದ್ ಕ್ಷೇತ್ರದಲ್ಲಿ ಮತದಾರರ ಹೆಸರು ಡಿಲೀಟ್ ಗೆ ಯತ್ನ ಆರೋಪದ ಕುರಿತು ವಿಪಕ್ಷ ನಾಯಕ ಆರ್ ಅಶೋಕ್ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ರಾಹುಲ್ ಗಾಂಧಿ ಕಾಮನ್ ಸೆನ್ಸ್ ಇಲ್ಲದ ವ್ಯಕ್ತಿ ಎಂದು ಕಿಡಿ ಕಾರಿದ್ದಾರೆ. ಬೆಂಗಳೂರಲ್ಲಿ ಮಾತನಾಡಿದ ಅವರು, ಯಾರೋ ಬರೆದು ಕೊಟ್ಟಿದ್ದನ್ನು ಹೇಳಿ ಅಪಹಾಸಕ್ಕೆ ಈಡಾಗಿದ್ದಾರೆ. ಮಹದೇವಪುರ ಬಗ್ಗೆ ಮಾತನಾಡಿದ ಆರೋಪ ಬೋಗಸ್ ಅಂತ ಆಯ್ತು. ಈಗ ಆಳಂದ್ ಕ್ಷೇತ್ರವನ್ನು ಹಿಡಿದುಕೊಂಡಿದ್ದಾರೆ. ಕೋರ್ಟ್ ಹೇಳಿದರು ಕೋಲಾರ ಜಿಲ್ಲಾಧಿಕಾರಿ ಸಿಸಿಟಿವಿ ವಿಡಿಯೋ ಕೊಟ್ಟಿಲ್ಲ. ರಾಹುಲ್ ಗಾಂಧಿ ಯಾಕೆ ಮಾಲೂರು ಕ್ಷೇತ್ರದ ಬಗ್ಗೆ ಮಾತನಾಡುತ್ತಿಲ್ಲ? ರಾಹುಲ್ ಗಾಂಧಿ ಇದುವರೆಗೂ ಸಿಡಿಸಿದ ಎಲ್ಲವೂ ಠುಸ್ ಪಟಾಕಿ ಪಟಾಕಿ. ಆಯೋಗ ಆರೋಪ ನಿರಾಕರಿಸಿದರು ಕೂಡ ಕಾಂಗ್ರೆಸ್ಸಿಗರಿಗೆ ನೆಮ್ಮದಿ ಇಲ್ಲ. ಸಂಸತ್ ನಲ್ಲಿ ದಾಖಲೆಗಳನ್ನು ಕೊಟ್ಟು ಯಾಕೆ ಚರ್ಚೆ ಮಾಡಲಿಲ್ಲ? ಎಲ್ಲಿ ದಾಖಲೆ ಕೇಳುತ್ತಾರೋ ಅಲ್ಲಿ ಮಾತನಾಡುವುದೇ ಇಲ್ಲ. ಚುನಾವಣಾ ಆಯೋಗದ ವಿರುದ್ಧ ಆರೋಪ ಮಾಡುತ್ತಿದ್ದಾರೆ.…
ಬೆಂಗಳೂರು : ಅಂಗವಿಕಲ ನಕಲಿ ಪ್ರಮಾಣ ಪತ್ರ ನೀಡಿದ್ದ ಆರೋಗ್ಯ ಅಧಿಕಾರಿಯನ್ನು ಇದೀಗ ಪೊಲೀಸರ ಅರೆಸ್ಟ್ ಮಾಡಿದ್ದಾರೆ. ಸುಧಾಕರ್ ಮಂಗಳೂರು ಪ್ರಾಥಮಿಕ ಆರೋಗ್ಯ ಕೇಂದ್ರದ ನೇತ್ರಾಧಿಕಾರಿಯಾಗಿದ್ದು, ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಮಂಗಳೂರು ಪಿ ಎಚ್ ಸಿ ಆಗಿ ಕಾರ್ಯನಿರ್ವಹಿಸುತ್ತಿದ್ದ. ಇದೀಗ ಬೆಂಗಳೂರಿನ ಮಲ್ಲೇಶ್ವರಂ ಠಾಣೆ ಪೊಲೀಸರಿಂದ ಸುಧಾಕರ್ ಬಂಧನವಾಗಿದೆ. ಸುಮಾರು 21 ಜನರಿಗೆ ಸುಧಾಕರ್ ನಕಲಿ ಪ್ರಮಾಣ ಪತ್ರ ನೀಡಿದ್ದಾನೆ ಕಳೆದ ನಾಲ್ಕು ದಿನಗಳ ಹಿಂದೆ ಪೊಲೀಸರು ಸುಧಾಕನನ್ನು ಬಂಧಿಸಿದ್ದಾರೆ ಎಂಬಿಬಿಎಸ್ಸಿ ಪಡೆದವರ ದಾಖಲಾತಿ ಪರಿಶೀಲನೆ ವೇಳೆ ಈ ಒಂದು ಪ್ರಕರಣ ಬೆಳಕಿಗೆ ಬಂದಿದೆ. ಸುಮಾರು 21 ವಿದ್ಯಾರ್ಥಿಗಳು ಅಂಗವಿಕಲರ ಕೋಟದಲ್ಲಿ ಸೀಟ್ ಪಡೆದಿದ್ದರು. ಅಂಗವಿಕಲರ ಪ್ರಮಾಣ ಪತ್ರ ಯುಡಿಐಡಿ ಕಾರ್ಡ್ ಒಂದೇ ರೀತಿ ಸಹಿ ಮಾಡಲಾಗಿತ್ತು. ವಿದ್ಯಾರ್ಥಿಗಳ ದಾಖಲೆ ಪರಿಶೀಲನೆ ವೇಳೆ ಅಕ್ರಮ ನಡೆದಿದ್ದು ಬೆಳಕೆಗೆ ಬಂದಿದೆ. ಸರ್ಕಾರಿ ನೌಕರಿಗು ಕೂಡ ಆತ ನಕಲಿ ಪ್ರಮಾಣ ಪತ್ರ ನೀಡಿರುವ ಅನುಮಾನ ವ್ಯಕ್ತವಾಗಿದೆ. ಈ ವೇಳೆ ಪೊಲೀಸರು ಆರೋಗ್ಯ ಇಲಾಖೆ…








