Author: kannadanewsnow05

ದಾವಣಗೆರೆ : ರಾಜ್ಯದಲ್ಲಿ ಆರ್‌ಎಸ್‌ಎಸ್‌ ಚಟುವಟಿಕೆಗಳಿಗೆ ನಿಷೇಧ ಹೇರಬೇಕು ಎಂದು ಸಚಿವ ಪ್ರಿಯಾಂಕ ಖರ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದ ಬಳಿಕ, ಸಚಿವ ಪ್ರಿಯಾಂಕ ಖರ್ಗೆ ಅವರಿಗೆ ನಿರಂತರವಾಗಿ ಬೆದರಿಕೆ ಕರೆಗಳು ಬಂದಿವೆ. ಇದರ ಬೆನ್ನಲ್ಲೆ ಸಚಿವ ಪ್ರಿಯಾಂಕ ಖರ್ಗೆ ಬೆದರಿಕೆ ಹಾಕಿದ ಆರೋಪಿಯನ್ನು ಸೋಲಾಪುರದಲ್ಲಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಇದೀಗ ಬಿಜೆಪಿ ಮಾಜಿ ಸಚಿವ ಎಂಪಿ ರೇಣುಕಾಚಾರ್ಯರಿಗೆ ಪ್ರಿಯಾಂಕ ಖರ್ಗೆ ಬೆಂಬಲಿಗ ಕೊಲೆ ಬೆದರಿಕೆ ಹಾಕಿದ್ದಾನೆ ಎಂದು ತಿಳಿದುಬಂದಿದೆ. ಹೌದು ಮಾಜಿ ಸಚಿವ ರೇಣುಕಾಚಾರ್ಯಗೆ ಕರೆ ಮಾಡಿ ಬೆದರಿಕೆ ಹಾಕಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಎಂಪಿ ರೇಣುಕಾಚಾರ್ಯ ಅವರು ಐಟಿಬಿಟಿ ಸಚಿವ ಪ್ರಿಯಾಂಕ ಖರ್ಗೆ ಬೆಂಬಲಿಗ ನನಗೆ ಬೆದರಿಕೆ ಹಾಕಿದ್ದಾನೆ ಎಂದು ರೇಣುಕಾಚಾರ್ಯ ಹೇಳಿಕೆ ನೀಡಿದ್ದಾರೆ. ನಿನ್ನೆ ಬೆಳಗಾವಿಯಿಂದ ನನಗೆ ವ್ಯಕ್ತಿಯೊಬ್ಬ ಕರೆ ಮಾಡಿ ಬೆದರಿಕೆ ಹಾಕಿದ್ದಾನೆ. ನನ್ನ ತಾಯಿಯ ಮೇಲೆ ಪ್ರಮಾಣ ಮಾಡಿ ಹೇಳುತ್ತೇನೆ ಪ್ರಿಯಾಂಕ ಖರ್ಗೆ ವಿರುದ್ಧ ಮಾತನಾಡಿದರೆ ಹುಷಾರ್ ಎಂದಿದ್ದಾನೆ ಆದರೆ ಮೊಬೈಲ್ ನಂಬರ್…

Read More

ಮೈಸೂರು : ರಾಜ್ಯ ರಾಜಕಾರಣದಲ್ಲಿ ದಿನೊವೊಂದಕ್ಕೆ ಬದಲಾವಣೆ ಆಗಿತ್ತಿದ್ದೂ, ಇನ್ನೊಂದು ಕಡೆ ಸಚಿವ ಸಂಪುಟ ಪುನಾರಚನೆ ಆಗೋದು ಪಕ್ಕಾ ಎಂದು ಹೇಳಲಾಗುತ್ತಿದೆ. ಇದೀಗ ನವೆಂಬರ್ ಕ್ರಾಂತಿ ವಿಚಾರ ನನಗೆ ಗೊತ್ತಿಲ್ಲ. ಐದು ವರ್ಷ ನಮ್ಮ ತಂದೆ ಸಿದ್ದರಾಮಯ್ಯ ಸಿಎಂ ಆಗಿ ಇರಬೇಕು. ಆಗ ರಾಜ್ಯಕ್ಕೆ ಒಳ್ಳೆಯದಾಗುತ್ತದೆ ಎಂದು ವಿಧಾನ ಪರಿಷತ್‌ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನವೆಂಬರ್ ಕ್ರಾಂತಿ ವಿಚಾರ ನನಗೆ ಗೊತ್ತಿಲ್ಲ. ತಂದೆಯವರು ಕೊಟ್ಟಿರುವ ಮಾಹಿತಿ ಪ್ರಕಾರ ಹೈಕಮಾಂಡ್ ಆಗ್ಲಿ ಬೇರೆ ನಾಯಕರಾಗಲಿ ಯಾರು ಕೂಡ ನವೆಂಬರ್ ಆದ ಮೇಲೆ ಅಧಿಕಾರ ಬಿಡಿ ಎಂದು ಹೇಳಿಲ್ಲ. ಹೀಗಾಗಿ ಇವರೆಲ್ಲಾ ಯಾವ ಕ್ರಾಂತಿ ಬಗ್ಗೆ ಮಾತನಾಡುತ್ತಿದ್ದಾರೆ ನನಗೆ ಗೊತ್ತಿಲ್ಲ ಎಂದರು. ರಾಜಕೀಯದಲ್ಲಿ ಯಾವಾಗ ಏನು ಬೇಕಾದರೂ ಆಗಬಹುದು. ಈಗಿನ ಪರಿಸ್ಥಿತಿ ನೋಡಿದರೆ ನಮ್ಮ ತಂದೆ 5 ವರ್ಷ ಸಿಎಂ ಆಗಿ ಇರುತ್ತಾರೆ. ಸಿದ್ದರಾಮಯ್ಯ ಅವರಿಗೆ ಶಾಸಕರ ಬೆಂಬಲ ಇದೆ. ಇಲ್ಲ ಅಂದಿದ್ದರೆ ಶಾಸಕರು ಸುಮ್ಮನೆ…

Read More

ಬೆಂಗಳೂರು : ರಾಜ್ಯದಲ್ಲಿ ಶೈಕ್ಷಣಿಕ ಆರ್ಥಿಕ ಹಾಗು ಸಮಾಜಿಕ ಸಮೀಕ್ಷೆ ನಡೆಯುತ್ತಿದ್ದು, ಈ ಒಂದು ಸಮೀಕೆಗೆ ಸುಧಾಮೂರ್ತಿ ಹಾಗು ನಾರಾಯಣ ಮೂರ್ತಿ ತಮ್ಮ ಮಾಹಿತಿ ನೀಡಲು ನಿರಾಕರಿಸಿದ್ದು, ಈ ವಿಚಾರವಾಗಿ ಶ್ರೀಮಂತಿಕೆಯನ್ನು ಸರಳತೆಯಲ್ಲಿ ಬಚ್ಚಿಡುವುದು, ಸಾಮಾಜಿಕ ಸಮೀಕ್ಷೆಯಿಂದ ಮಾಹಿತಿಯನ್ನು ಮುಚ್ಚಿಡುವುದು ಸ್ವಾರ್ಥ ಮನಸ್ಥಿತಿಯ ಮುಖವಾಡದ ಅನಾವರಣ ಎಂದು ಬಿಕೆ ಹರಿಪ್ರಸಾದ್ ವಾಗ್ದಾಳಿ ನಡೆಸಿದ್ದಾರೆ. ಟ್ವೀಟ್ ನಲ್ಲಿ ದೀನ ದಲಿತರ, ಹಿಂದುಳಿದವರ, ಬಡ ಜನರನ್ನು ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಅಭಿವೃದ್ದಿಪಡಸಿ, ಸಾಮಾಜಿಕ ನ್ಯಾಯ ಕಲ್ಪಿಸಲು ಸರ್ಕಾರ ನಡೆಸುತ್ತಿರುವ ಸಮೀಕ್ಷೆಯಿಂದ ಮಾತ್ರ ಸಾಧ್ಯವೇ ಹೊರತು, ತೋರಣಿಕೆ, ಪ್ರಚಾರದ ಮೋಹದಿಂದ ಕೂಡಿದ ಸಮಾಜಸೇವೆಯಿಂದ ಅಭಿವೃದ್ದಿ ಮಾಡಲು ಸಾಧ್ಯವಿಲ್ಲ. ಸಾಮಾಜಿಕ ವ್ಯವಸ್ಥೆಯಲ್ಲಿ ಸರ್ವ ಜನಾಂಗದವರ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಪರಿಸ್ಥಿತಿಗಳನ್ನು ಅವಲೋಕಿಸಿ, ಬಡವರ್ಗದವರ ಏಳಿಗೆಗಾಗಿ ಸರ್ಕಾರ ಸಮರ್ಪಕವಾದ ನೀತಿಗಳನ್ನು ರೂಪಿಸುವುದು ಸಾಂವಿಧಾನಿಕ ಜವಾಬ್ದಾರಿ. ಆದರೆ ಶ್ರೀಮಂತಿಕೆ, ದೊಡ್ಡಸ್ಥಿಕೆಯ ಚಾದರವನ್ನೇ ಹೊದ್ದು ಮಲಗಿದವರು ಕ್ಷುಲ್ಲುಕ ಕಾರಣಗಳನ್ನು ನೀಡಿ ಸಾಮಾಜಿಕ ಸಮೀಕ್ಷೆಯಿಂದ ಹೊರಗುಳಿಯುವುದು ಅಷ್ಟೇ ಬೇಜವಾಬ್ದಾರಿ. ಸಂಸ್ಥೆಗಳನ್ನು ಜಗದಗಲ ಬೆಳೆಸಲು…

Read More

ಮೈಸೂರು : ಹುಲಿ ಸೆರೆಗಾಗಿ ಕಾಡಿನಲ್ಲಿ ಕೂಂಬಿಂಗ್ ನಡೆಸುತ್ತಿದ್ದ ಸಂದರ್ಭದಲ್ಲೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಹುಲಿ ದಾಳಿ ಮಾಡಿರುವ ಘಟನೆ ಮೈಸೂರು ತಾಲೂಕಿನ ಬಡಗಲಪುರ ಗ್ರಾಮದಲ್ಲಿ ನಡೆದಿದೆ. ಕೂಂಬಿ‌ಂಗ್ ಕಾರ್ಯಾಚರಣೆ ನಡೆಸುವಾಗ ಹುಲಿಯು ಗ್ರಾಮದ ಬೋಳೆಗೌಡನಕಟ್ಟೆ ಕೆರೆ ಬಳಿ ಅವಿತು ಕುಳಿತಿತ್ತು. ಇದನ್ನು ಕಂಡ ಅರಣ್ಯ ಇಲಾಖೆ ಅಧಿಕಾರಿಗಳು ಹುಲಿ ಬಳಿ ಯಾರು ಹೋಗದಂತೆ ಎಚ್ಚರಿಕೆ ನೀಡಿದ್ದರು. ಆದರೆ, ಹುಲಿ ಗಾಬರಿಗೊಂಡು ಕುಮಾರ್ ಎಂಬುವರ ತೋಟದ ಕಡೆಗೆ ಓಡಿದ್ದು, ನಂತರ ಮತ್ತೆ ಅಲ್ಲಿಂದ ನುಗು ಅರಣ್ಯದ ಕಡೆಗೆ ಓಡಿ ಹೋಗಿ ಪೊದೆಯಲ್ಲಿ ಅವಿತು ಕುಳಿತಿತ್ತು. ಹುಲಿ ಸೆರೆಗೆ ಅಭಿಮನ್ಯು, ಭಗೀರಥ ಎಂಬ ಸಾಕಾನೆಗಳನ್ನು ಕರೆಯಿಸಿಕೊಂಡ ಅರಣ್ಯ ಇಲಾಖೆಯು ಸಾಕಾನೆಯನ್ನು ಪೊದೆಗೆ ಬಿಟ್ಟರು. ಇದರಿಂದ ಹೆದರಿದ ಹುಲಿ ಪೊದೆಯಿಂದ ಹೊರ ಬಂದು ಮತ್ತೆ ಕಾಡಿನತ್ತ ಓಡಿತು. ಆಗ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಮಹದೇವ್ ಎಂಬುವರ ಮೇಲೆ ದಾಳಿ ಮಾಡಿದೆ. ಇದರಿಂದಾಗಿ ಮಹದೇವ್ ಅವರಿಗೆ ತುಂಬಾ ರಕ್ತಸ್ರಾವ ಉಂಟಾಗಿ ಸ್ಥಳದಲ್ಲೇ ಕುಸಿದು…

Read More

ಮನೆಗೆ ದೃಷ್ಟಿ ಬಿದ್ದರೆ ಅದನ್ನು ತೆಗೆಯುವ ಸುಲಭ ವಿಧಾನ ಇಲ್ಲಿದೆ ಖ್ಯಾತ ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ಮನೆಯಲ್ಲಿ ಒಳ್ಳೆಯ ಆಚಾರ-ವಿಚಾರಗಳನ್ನು ಪಾಲಿಸಿದರೂ ಕೆಟ್ಟ ದೃಷ್ಟಿಯಿಂದಾಗಿ ಅನಾರೋಗ್ಯ, ಹಣಕಾಸಿನ ಸಮಸ್ಯೆಗಳು, ಕುಟುಂಬ ಕಲಹಗಳು ಉಂಟಾಗಬಹುದು ಎಂದು ಅವರು ಹೇಳಿದ್ದಾರೆ. ಈ ಸಮಸ್ಯೆಗೆ ಪರಿಹಾರವಾಗಿ, ಮಂಗಳವಾರ ಅಥವಾ ಶುಕ್ರವಾರದಂದು ಗೋಧೂಳಿ ಸಮಯದಲ್ಲಿ ಸಂಜೆ 6:30 ರಿಂದ 8:30 ರೊಳಗೆ, ಒಂದು ನಿಂಬೆಹಣ್ಣನ್ನು ಅರ್ಧಕ್ಕೆ ಕತ್ತರಿಸಿ, ಒಂದು ಭಾಗಕ್ಕೆ ಅರಿಶಿನ, ಇನ್ನೊಂದು ಭಾಗಕ್ಕೆ ಕುಂಕುಮವನ್ನು ಲೇಪಿಸಿ, ಮೂರು ಅಥವಾ ಐದು ಉಪ್ಪಿನ ಕಾಳುಗಳನ್ನು ಇಡಬೇಕು. ಎರಡೂ ಕೈಗಳಲ್ಲಿ ಹಿಡಿದು ಮನೆಯ ಬಾಗಿಲ ಬಳಿ ಏಳು ಬಾರಿ ನಿವಾಳಿಸಿ, ”ಸರ್ವದುಷ್ಟ ಗ್ರಹ ನಿವಾರಕಾಯ ಸ್ವಾಹಾ” ಅಥವಾ ”ಸರ್ವದುಷ್ಟ ಗ್ರಹ ಪೀಡ…

Read More

ಉಡುಪಿ : ಉಡುಪಿಯಲ್ಲಿ ಘೋರವಾದ ದುರಂತ ನಡೆದಿದ್ದು, ಪ್ರೇಮಿಗಳಿಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಲೇಬರ್ ಕಾಲೋನಿಯ ಜೋಪಡಿಯಲ್ಲಿ ನಡೆದಿದೆ. ಮಲ್ಲೇಶ್ (23) ಹಾಗು ಪವಿತ್ರಾ (17) ನೇಣಿಗೆ ಶರಣಾಗಿರುವ ಪ್ರೇಮಿಗಳು ಎಂದು ತಿಳಿದುಬಂದಿದೆ. ಮೃತ ಪವಿತ್ರಾ ತಾಯಿ ಮನೆಯಲ್ಲಿ ಇಲ್ಲದ ವೇಳೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಬೆಂಗಳೂರಲ್ಲಿ ವೈದ್ಯ ಪತಿಯಿಂದಲೇ ಡಾಕ್ಟರ್ ಕೃತಿಕಾ ರೆಡ್ಡಿ ಕೊಲೆ ಪ್ರಕರಣಕ್ಕೆ ಇದೀಗ ಟ್ವಿಸ್ಟ್ ದೊರತಿದೆ. ಸಿನಿಮಾ ಸ್ಟೈಲ್ ನಲ್ಲಿ ಕೃತಿಕಾ ರೆಡ್ಡಿ ಕೊಲೆಗೆ ಪತಿ ಮಹೇಂದ್ರ ಪ್ಲಾನ್ ಮಾಡಿದ್ದ. ಆದರೆ ಸಿಕ್ಕಿಬೀಳದಿರಲು ಖತರ್ನಾಕ್ ಸಂಚು ರೂಪಿಸಿದ್ದಾನೆ ಇದೀಗ ವಿಚಾರಣೆ ವೇಳೆ ಸ್ಪೋಟಕ ಅಂಶ ಬಯಲಾಗಿದೆ. ಪೊಲೀಸರ ವಿಚಾರಣೆ ವೇಳೆ ಡಾ. ಮಹೇಂದ್ರ ಅನೆಸ್ಥೆಶಿಯಾ ಕುರಿತಂತೆ ಸಂಪೂರ್ಣವಾಗಿ ತಿಳಿದುಕೊಂಡಿದ್ದ ಇದರಿಂದಲೇ ಕೃತಿಕಾಳನ್ನು ಕೊಲೆ ಮಾಡಿದ್ದಾನೆ. ದೇಹದಲ್ಲಿ ಅನೆಸ್ಥೆಶಿಯ ಹೆಚ್ಚು ಸಮಯ ಇರುವುದಿಲ್ಲ. ಅನಸ್ತೇಶಿಯ ನಾಲ್ಕು ಗಂಟೆಯಲ್ಲಿ 50% ಕಡಿಮೆ ಆಗುತ್ತದೆ 24 ಗಂಟೆ ಕಳೆದರೆ ಅನಸ್ತೇಶಿಯ ಸಂಪೂರ್ಣ ಅಂಶ ನಾಶವಾಗುತ್ತದೆ. ಪೋಸ್ಟ್ಮಾರ್ಟಂಮಾಡಿದರೂ ಕೂಡ ಅನಸ್ತೇಶಿಯಾ ಪತ್ತೆ ಕಂಡುಹಿಡಿಯುವುದು ಕಷ್ಟ. ಹಾಗಾಗಿ ಆತ ಪ್ಲಾನ್ ಮಾಡಿ ಕೃತಿಕಾ ರೆಡ್ಡಿಗೆ ಅನಸ್ತೇಶಿಯ ನೀಡುತ್ತಿದ್ದ ಪ್ರೋಪೋಪೋಲ್ ಅನೆಸ್ಥೆಶಿಯಾ ಕೊಟ್ಟಿದ್ದ ಎಂದು ತಿಳಿದುಬಂದಿದೆ. ಇದೀಗ ಪೊಲೀಸರು ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಹೇಂದ್ರ ರೆಡ್ಡಿಯ ಮೊಬೈಲ್ ಮತ್ತು ಲ್ಯಾಪ್ಟಾಪ್ ಸೀಜ್ ಮಾಡಿದ್ದಾರೆ. ಪತ್ನಿ ಮೆಡಿಕಲ್ ಸರ್ಟಿಫಿಕೇಟ್ಸ್, ಮೊಬೈಲ್…

Read More

ಚೆನ್ನೈ: ಭಾರತದ ಉಪರಾಷ್ಟ್ರಪತಿ ಸಿಪಿ ರಾಧಾಕೃಷ್ಣನ್ ಅವರ ಚೆನ್ನೈನ ಮಾಜಿ ನಿವಾಸವನ್ನು ಗುರಿಯಾಗಿಸಿಕೊಂಡು ಗುರುವಾರ ಸಂಜೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದ್ದು, ನಗರ ಪೊಲೀಸರಿಂದ ತ್ವರಿತ ಪ್ರತಿಕ್ರಿಯೆ ವ್ಯಕ್ತವಾಗಿದೆ. ಗುರುವಾರ ಸಂಜೆ 6:33 ಕ್ಕೆ ಈ ಬೆದರಿಕೆ ಸಂದೇಶ ಕಳುಹಿಸಲಾಗಿದೆ ಎಂದು ತೆನಾಂಪೇಟೆ ಪೊಲೀಸ್ ಜಿಲ್ಲೆಯ ಅಧಿಕಾರಿಗಳು ತಿಳಿಸಿದ್ದಾರೆ. Mylaporemla@gmail.com ವಿಳಾಸದಿಂದ ಬಂದ ಈ ಇಮೇಲ್ ಅನ್ನು ಫೋರ್‌ಶೋರ್ ಎಸ್ಟೇಟ್ ಪೊಲೀಸ್ ಠಾಣೆ ಸೇರಿದಂತೆ ಹಲವಾರು ಅಧಿಕೃತ ಪೊಲೀಸ್ ಇಮೇಲ್ ಐಡಿಗಳಿಗೆ ಕಳುಹಿಸಲಾಗಿದೆ. ಮೈಲಾಪುರದ 5 ನೇ ಟ್ರಸ್ಟ್ ಕ್ರಾಸ್ ಸ್ಟ್ರೀಟ್‌ನಲ್ಲಿರುವ ಉಪರಾಷ್ಟ್ರಪತಿಯವರ ಮನೆಯಲ್ಲಿ ಬಾಂಬ್ ಇರಿಸಲಾಗಿದೆ ಎಂದು ಸಂದೇಶದಲ್ಲಿ ಹೇಳಲಾಗಿತ್ತು. ಆದಾಗ್ಯೂ, ಪ್ರಾಥಮಿಕ ತನಿಖೆಗಳಿಂದ ಉಪರಾಷ್ಟ್ರಪತಿಗಳು ಸುಮಾರು ಒಂದು ವರ್ಷದ ಹಿಂದೆ ಮೈಲಾಪುರ ಆಸ್ತಿಯನ್ನು ಖಾಲಿ ಮಾಡಿದ್ದರು ಎಂದು ತಿಳಿದುಬಂದಿದೆ. ಚೆನ್ನೈಗೆ ಭೇಟಿ ನೀಡಿದ ಸಮಯದಲ್ಲಿ ಅವರು ಪೋಯಸ್ ಗಾರ್ಡನ್‌ನ ಬಿನ್ನಿ ರಸ್ತೆಯಲ್ಲಿರುವ ಬಾಡಿಗೆ ವಸತಿಗೃಹದಲ್ಲಿ ವಾಸಿಸುತ್ತಿದ್ದಾರೆ ಎಂದು ಅಧಿಕಾರಿಗಳು ದೃಢಪಡಿಸಿದರು. ಬೆದರಿಕೆ ಕರೆ ಬಂದ ಕೂಡಲೇ ತೇನಾಂಪೇಟೆ…

Read More

ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಅಪರಾಧ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು ಇದೀಗ ಇಡೀ ರಾಜ್ಯವೇ ಬೆಚ್ಚಿಬಿಳಿಸುವಂತಹ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಹೌದು ಬೆಂಗಳೂರಿನಲ್ಲಿ ಬೆಚ್ಚಿಬಿಳಿಸುವ ಘಟನೆ ನಡೆದಿದ್ದು, ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಾಲಗಿದೆ ಪ್ರತಿಷ್ಠಿತ ಖಾಸಗಿ ಇಂಜಿನಿಯರ್ ಕಾಲೇಜಿನಲ್ಲಿ ಈ ಒಂದು krutyab ನಡೆದಿದೆ. ಸೀನಿಯರ್ ವಿದ್ಯಾರ್ಥಿನಿಯ ಮೇಲೆ ಜೂನಿಯರ್ ವಿದ್ಯಾರ್ಥಿಯೊಬ್ಬ ರೇಪ್ ಮಾಡಿದ್ದಾನೆ. ಕಾಲೇಜಿನ ವಾಶ್ ರೂಮ್ ಗೆ ಎಳೆದೋಯ್ದು ಇದು ಅತ್ಯಾಚಾರ ಎಸಗಿರುವ ಆರೋಪ ಕೇಳಿ ಬಂದಿದೆ. ಸದ್ಯ ಹನುಮಂತನಗರ ಠಾಣೆ ಪೊಲೀಸರು ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ. ಈ ಕುರಿತು ಪ್ರಕರಣದ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Read More

ಬೆಂಗಳೂರು : ಬೆಂಗಳೂರಲ್ಲಿ ದಿನೇ ದಿನೇ ಕ್ರೈಂ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು ಇದೀಗ ಹಾಡ ಹಗಲೇ ವಿದ್ಯಾರ್ಥಿನಿಯ ಭೀಕರ ಕೊಲೆಯಾಗಿದೆ. ವಿದ್ಯಾರ್ಥಿನಿಯ ಕತ್ತು ಕೊಯ್ದು ದುಷ್ಕರ್ಮಿಗಳು ಭೀಕರವಾಗಿ ಕೊಲೆ ಮಾಡಿರುವ ಘಟನೆ ಶ್ರೀರಾಮಪುರ ರೈಲ್ವೆ ಟ್ರ್ಯಾಕ್ ಬಳಿ ಈ ಒಂದು ಭೀಕರ ಹತ್ಯೆ ನಡೆದಿದೆ. ಇಂದು ಮಧ್ಯಾಹ್ನ 3 ಗಂಟೆಗೆ ಈ ಒಂದು ಕೊಲೆ ನಡೆದಿದೆ. ಯುವತಿಯನ್ನು ಬೈಕ್ ನಲ್ಲಿ ಕರೆದು ತಂದ ದುಷ್ಕರ್ಮಿಗಳು ಕತ್ತು ಕೊಯ್ದು ಕೊಲೆ ಮಾಡಿದ್ದಾರೆ. ಈಗಾಗಲೇ ಸ್ಥಳಕ್ಕೆ ಶ್ರೀರಾಮಪುರ ಪೋಲಿಸರು ಭೇಟಿ ನೀಡಿ ಪರಿಶೀಲನೆ ಕೂಡ ಮಾಡಿದ್ದಾರೆ. ವಿದ್ಯಾರ್ಥಿನಿ ಯಾರು? ಯಾವ ಕಾರಣಕ್ಕೆ ದುಷ್ಕರ್ಮಿಗಳು ವಿದ್ಯಾರ್ಥಿನಿಯ ಕೊಲೆ ಮಾಡಿದ್ದಾರೆ ಎನ್ನುವುದರ ಕುರಿತು ಇನ್ನಷ್ಟೇ ಮಾಹಿತಿ ಸಿಗಬೇಕಿದೆ. ಪ್ರಾಥಮಿಕವಾಗಿ ಶ್ರೀರಾಮಪುರ ರೈಲ್ವೆ ಟ್ರ್ಯಾಕ್ ಬಳಿ ಒಂದು ಕೊಲೆ ನಡೆದಿದೆ.

Read More