Author: kannadanewsnow05

ಯಾದಗಿರಿ : ಕಳೆದ ಒಂದು ವರ್ಷಗಳಿಂದ ಹೊರಗುತ್ತಿಗೆ ನೌಕರರು ಆಸ್ಪತ್ರೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದು ಒಂದು ವರ್ಷದಿಂದಲೂ ಆರೋಗ್ಯ ಇಲಾಖೆ ವೇತನ ಮಾಡಿಲ್ಲ ಎಂದು ಹೊರಗುತ್ತಿಗೆ ನೌಕರರು ಪರದಾಡುತ್ತಿರುವ ಘಟನೆ ಯಾದಗಿರಿಯಲ್ಲಿ ಬೆಳಕಿಗೆ ಬಂದಿದೆ. ಹೌದು ಹೊರ ಗುತ್ತಿಗೆ ನೌಕರರಿಗೆ ವೇತನ ಪಾವತಿಸದ ಆರೋಗ್ಯ ಇಲಾಖೆಯು ಕಳೆದ 1 ವರ್ಷದಿಂದ ವೇತನ ಪಾವತಿಸಿಲ್ಲ. ವೇತನ ಇಲ್ಲದೆ ಸದ್ಯ ಹೊರಗುತ್ತಿಗೆ ನೌಕರರು 1 ವರ್ಷ ಕೆಲಸ ಮಾಡಿದ್ದಾರೆ. ಸ್ಯಾಲರಿ ಇಲ್ಲದೆ ನೌಕರರು ಪರದಾಡುತ್ತಿದ್ದಾರೆ. ಕುಟುಂಬ ನಿರ್ವಹಣೆಗೆ ಇದೀಗ ಕಷ್ಟ ಎದುರಿಸುತ್ತಿದ್ದಾರೆ. ಕೆಲಸ ಮಾಡಿದರು ಒಂದು ವರ್ಷದಿಂದ ವೇತನ ಪಾವತಿ ಮಾಡಿಲ್ಲ. ಸುಮಾರು 5 ಕೋಟಿ ವೇತನ ಬಾಕಿ ಉಳಿಸಿಕೊಂಡ ಆರೋಗ್ಯ ಇಲಾಖೆಯು ಹೊರಗುತ್ತಿಗೆ ನೌಕರರು 1 ವರ್ಷದಿಂದ ಕೆಲಸ ಮಾಡಿದರೂ ವೇತನ ಪಾವತಿಸಿಲ್ಲ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಈ ನಡೆಯಿಂದ ಯಾದಗಿರಿಯಲ್ಲಿ ಹೊರಗುತ್ತಿಗೆ ನೌಕರರು ಪರದಾಟ ನಡೆಸುತ್ತಿದ್ದಾರೆ. ಈ ಕುರಿತು ಯಾದಗಿರಿ ಡಿಎಚ್ಒ ಡಾಕ್ಟರ್ ಮಹೇಶ್ ಅವರು ಪ್ರತಿಕ್ರಿಯೆ ನೀಡಿ, ತಾಂತ್ರಿಕ…

Read More

ಕೆಎನ್ಎನ್ ಡಿಜಿಟಲ್ ಡೆಸ್ಕ್ : ಸಾಮಾನ್ಯವಾಗಿ ಪುಟ್ಟ ಮಕ್ಕಳಿಂದ ಹಿಡಿದು ಎಲ್ಲರಿಗೂ ಕರಿದ ಹಸಿರು ಬಟಾಣಿ ಅಂದ್ರೆ ಎಲ್ಲಿಲ್ಲದ ಇಷ್ಟ. ಅದರಲ್ಲೂ ಮದ್ಯಪ್ರಿಯರಿಗೆ ಅಂತೂ ಸ್ನಾಕ್ಸ್ ರೂಪದಲ್ಲಿ ಹಲವು ತಿಂಡಿ ತಿನಿಸುಗಳು ಬೇಕಾಗುತ್ತವೆ. ಅದರಲ್ಲಿ ಕರಿದ ಹಸಿರು ಬಟಾಣಿ ಕೂಡ ಒಂದು. ಆದರೆ ಇದೀಗ ಈ ಒಂದು ಕರಿದ ಹಸಿರು ಬಟಾಣಿಯಲ್ಲಿ ಅಪಾಯಕಾರಿ ಕೃತಕ ಬಣ್ಣ ಪತ್ತೆಯಾಗಿದೆ ಎಂಬ ಶಂಕೆ ವ್ಯಕ್ತವಾಗಿದ್ದು, ಹೀಗಾಗಿ ಮುಖ್ಯಮಂತ್ರಿ ವಿಶೇಷ ಅಧಿಕಾರಿ ರಾಜ್ಯದ 70 ಕರೆದ ಬಟಾಣಿ ಮಾದರಿ ಸಂಗ್ರಹಿಸಿ ಪ್ರಯೋಗಾಲಯಕ್ಕೆ ರವಾನಿಸಿ ವರದಿ ನೀಡುವಂತೆ ಆರೋಗ್ಯ ಇಲಾಖೆಗೆ ಸೂಚಿಸಿದ್ದಾರೆ. ಹೌದು ಕರಿದ ಹಸಿರು ಬಟಾಣಿ ಯಾರಿಗೆ ಇಷ್ಟ ಇಲ್ಲ ಹೇಳಿ. ಆದರೆ ಈಗ ಬಾಯಿ ಚಪ್ಪರಿಸಿ ತಿನ್ನುವ ಕರಿದ ಹಸಿರು ಬಟಾಣಿಯಲ್ಲಿ ಅಪಾಯಕಾರಿ ಕೃತಕ ಬಣ್ಣ ಹಾಕುತ್ತಾರೆ ಎನ್ನುವ ವಿಡಿಯೋ ಸದ್ಯ ಎಲ್ಲೆಡೆ ಹರಿದಾಡುತ್ತಿದೆ. ಹೀಗಾಗಿ ಇದನ್ನು ಗಂಭೀರವಾಗಿ ತೆಗೆದುಕೊಂಡ ಸಿಎಂ ವಿಶೇಷ ಅಧಿಕಾರಿಯ ಸೂಚನೆಯ ಮೇರೆಗೆ ಆಹಾರ ಸುರಕ್ಷತಾ ಇಲಾಖೆಯ ರಾಜ್ಯದಲ್ಲಿ 70…

Read More

ಬೆಂಗಳೂರು : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಿಂದ ಗೃಹ ಸಾಲ ಕೊಡಿಸಿ ವಂಚಿಸಿದ ಆರೋಪದಡಿ ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿಗೆ ಬಿಗ್ ರಿಲೀಫ್ ಸಿಕ್ಕಿದೆ. ಪ್ರಕರಣದಲ್ಲಿ ಮಾಜಿ ಸಚಿವ ಎಸ್‌.ಎನ್‌.ಕೃಷ್ಣಯ್ಯ ಶೆಟ್ಟಿ ಅವರಿಗೆ ಮೂರು ವರ್ಷ ಜೈಲು ಶಿಕ್ಷೆ ವಿಧಿಸಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೊರಡಿಅಮಾನತ್ತಿನಲ್ಲಿರಿಸಿ ಹೈಕೋರ್ಟ್‌ ಅಮಾನತ್ತಿನಲ್ಲಿರಿಸಿದೆ. ಪ್ರಕರಣದಲ್ಲಿ ತಮ್ಮನ್ನು ದೋಷಿಯಾಗಿ ಪರಿಗಣಿಸಿ ಮೂರು ವರ್ಷ ಜೈಲು ಶಿಕ್ಷೆ ವಿಧಿಸಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು 2025ರ ಫೆ.6ರಂದು ಹೊರಡಿಸಿದ್ದ ಆದೇಶ ರದ್ದು ಕೋರಿ ಮಾಜಿ ಸಚಿವ ಎಸ್‌.ಎನ್‌.ಕೃಷ್ಣಯ್ಯ ಶೆಟ್ಟಿ ಕ್ರಿಮಿನಲ್‌ ಮೇಲ್ಮನವಿ ಸಲ್ಲಿಸಿದ್ದರು. ಪ್ರಕರಣ ಹಿನ್ನೆಲೆ? ಕೃಷ್ಣಯ್ಯ ಶೆಟ್ಟಿ 1993ರಲ್ಲಿ ಬಾಲಾಜಿ ಕೃಪಾ ಎಂಟರ್ಪ್ರೈಸಸ್ ಮಾಲೀಕರಾಗಿದ್ದ ವೇಳೆ ಬಿಟಿಎಸ್, ಕೆಎಸ್‌ಆರ್ಟಿಸಿ, ಬಿಎಸ್‌ಎನ್‌ಎಲ್ ಇತರೆ ಸಾರ್ವಜನಿಕ ಉದ್ದಿಮೆಗಳ 181 ನೌಕರರಿಗೆ ಗೃಹ ನಿರ್ಮಾಣಕ್ಕೆ ಸಾಲ ಕೊಡಿಸುವುದಾಗಿ ಹೇಳಿ ವಂಚಿಸಿದ್ದ ಆರೋಪವಿದೆ. ಬ್ಯಾಂಕಿನಿಂದ ಪಡೆದ ಮೊತ್ತದಲ್ಲಿ 3.53 ಕೋಟಿ ಸಾಲ ತೀರಿಸಿಲ್ಲ. 7.15 ಕೋಟಿ ಸಾಲಕ್ಕೆ ನಕಲಿ ದಾಖಲೆ ಸೃಷ್ಟಿಸಲಾಗಿದೆ…

Read More

ಬೆಂಗಳೂರು : ಕುಡಿಯಲು ಹಣ ಕೊಟ್ಟಿಲ್ಲ ಎಂದು ತಾಯಿಗೆ ಪಾಪಿ ಮಗನೋಬ್ಬ ಚಾಕು ಇರಿದ ಘಟನೆ ಬೆಂಗಳೂರಿನ ಜ್ಞಾನ ಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದೆ. ತಾಯಿ ಜಯಲಕ್ಷ್ಮಿಗೆ ಚಾಕು ಇರಿದ ಪಾಪಿ ಪುತ್ರ ರಾಹುಲ್. ಕುಡಿತದ ಚಟಕ್ಕೆ ಬಿದ್ದಿದ್ದ ರಾಹುಲ್ ಅಲಿಯಾಸ್ ಕಲರ್ಸ್, ಕೂಲಿ ಕೆಲಸ ಮಾಡಿ ತಾಯಿ ಜಯಲಕ್ಷ್ಮಿ ಮಗನ ಖರ್ಚಿಗೆ ಹಣ ಕೊಡುತ್ತಿದ್ದಳು. ಆದರೆ ಕಳೆದ ಎರಡು ಮೂರು ದಿನಗಳಿಂದ ಜಯಲಕ್ಷ್ಮಿ ಮಗನಿಗೆ ಖರ್ಚಿಗೆ ದುಡ್ಡು ಕೊಟ್ಟಿರಲಿಲ್ಲ. ಕುಡಿಯಲು ಹಣ ಕೊಡು ಅಂತ ಆರೋಪಿ ರಾಹುಲ್ ತಾಯಿಗೆ ಪೀಡಿಸುತ್ತಿದ್ದ. ಹಣ ಇಲ್ಲ ಎದ್ದಿದ್ದಕ್ಕೆ ತಾಳಿ ಕೊಡು ಎಂದು ಮಗ ಗಲಾಟೆ ಮಾಡಿದ್ದ. ಗಲಾಟೆ ವೇಳೆ ಚಾಕು ಇರಿದು ಚಿನ್ನದ ಸರ ಕಿತ್ತುಕೊಂಡು ಪರಾರಿಯಾಗಿದ್ದಾನೆ. ಕೂಡಲೇ ಗಾಯಾಳು ಜಯಲಕ್ಷ್ಮಿಯನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಆರೋಪಿ ರಾಹುಲ್ ಅನ್ನು ಬಂಧಿಸಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಘಟನೆ ಕುರಿತು ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಬೆಂಗಳೂರಿನಲ್ಲಿ ಅಕ್ರಮ ಸಂಬಂಧ ಹೊಂದಿದ್ದ ಮಹಿಳೆಯ ಸ್ನೇಹಿತನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರಬರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಕಾಡುಗೋಡಿಯ ಬೆಳ್ತೂರು ಎಂಬಲ್ಲಿ ನಡೆದಿದೆ. ಅಕ್ರಮ ಸಂಬಂಧಕ್ಕೆ ಮಹಿಳೆಯ ಸ್ನೇಹಿತನ ಬರ್ಬರ ಹತ್ಯೆಗೈಯ್ಯಲಾಗಿದೆ. ಬೆಂಗಳೂರಿನ ಕಾಡುಗೋಡಿಯ ಬೆಳ್ತೂರು ಕಾಲೋನಿಯಲ್ಲಿ ಈ ಒಂದು ಭೀಕರ ಕೊಲೆ ನಡೆದಿದೆ. ಮಾರಕಾಸ್ತ್ರಗಳಿಂದ ಕೊಚ್ಚಿ ಕಿಶೋರ್ ಎನ್ನುವ ವ್ಯಕ್ತಿಯನ್ನು ಬರಬರವಾಗಿ ಕೊಲೆ ಮಾಡಲಾಗಿದೆ. ಇನ್ನು ಮಹಿಳೆ ಅರುಂಧತಿಗೆ ಗಂಭೀರವಾದ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಆಕೆಗೆ ಚಿಕಿತ್ಸೆ ನೀಡಲಾಗುತ್ತಿದೆ. ಇಬ್ಬರು ಒಟ್ಟಿಗೆ ಇರುವಾಗ ಮಹಿಳೆಯ ಸಹೋದರ, ಗಂಡ ಹಾಗೂ ಮಗಳಿಂದ ಈ ಒಂದು ಕೃತ್ಯ ಎಸಗಿದ್ದು ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ದಕ್ಷಿಣಕನ್ನಡ : ತೋಟದಲ್ಲಿ ದೋಟಿ ಬಳಸಿ ಸೀಯಾಳ ಕೀಳುತ್ತಿರುವಾಗ ಅಲ್ಯೂಮಿನಿಯಂ ದೋಟಿಗೆ ವಿದ್ಯುತ್‌ ತಂತಿ ಸ್ಪರ್ಶಗೊಂಡು ಕಾರ್ಮಿಕನೊಬ್ಬ ಮೃತಪಟ್ಟ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಬಜತ್ತೂರು ಗ್ರಾಮದ ಕುವೆಚ್ಚಾರ್‌ ಎಂಬಲ್ಲಿ ನಡೆದಿದೆ. ಮೃತ ಕಾರ್ಮಿಕನನ್ನು ವೀರಭದ್ರ (29) ಎಂದು ತಿಳಿದುಬಂದಿದೆ ಕಬ್ಬಿಣದ ರಾಡ್ ನಲ್ಲಿ ತೆಂಗಿನಕಾಯಿ ಕೀಳುವ ಸಂದರ್ಭದಲ್ಲಿ ವಿದ್ಯುತ್ ತಂತಿಗೆ ರಾಡ್ ತಗುಲಿ ಕರೆಂಟ್ ಶಾಕ್ ಹೊಡೆದು ಕಾರ್ಮಿಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತ ವೀರಭದ್ರ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಪಲ್ಲಾಗಟ್ಟೆ ಮನೆ ನಿವಾಸಿ ಗುತ್ಯಪ್ಪ ಎಂಬವರ ಮಗನಾಗಿದ್ದು, ತೋಟದ ಕಾರ್ಮಿಕನಾಗಿ ಕುವೆಚ್ಚಾರ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ. ಕೂಡಲೆ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತ್ತಾದರೂ, ಅಲ್ಲಿ ಅವರು ವೃತಪಟ್ಟರೆಂದು ವೈದ್ಯರು ಘೋಷಿಸಿದರು.ಮೃತ ವೀರಭದ್ರ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಪಲ್ಲಾಗಟ್ಟೆ ಮನೆ ನಿವಾಸಿ ಗುತ್ಯಪ್ಪ ಎಂಬವರ ಮಗನಾಗಿದ್ದು, ತೋಟದ ಕಾರ್ಮಿಕನಾಗಿ ಕುವೆಚ್ಚಾರ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರೆನ್ನಲಾಗಿದೆ.

Read More

ಮೈಸೂರು : ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯ ಮೇಲೆ ಕಲ್ಲುತೂರಾಟ ನಡೆಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಚೋದನಕಾರಿ ಭಾಷಣ ಮಾಡಿದ ಮೌಲ್ವಿ ಮಫ್ತಿ ಮುಸ್ತಾಕ್ ನನ್ನು ಇಂದು ಪೊಲೀಸರು ಮೈಸೂರಿನ 2ನೇ ಹೆಚ್ಚುವರಿ ನ್ಯಾಯಕ್ಕೆ ಹಾಜರುಪಡಿಸಿದ್ದರು ಈ ವೇಳೆ ಜಡ್ಜ್ ಆರೋಪಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಅದೇಶಿಸಿದರು. ಮೌಲ್ವಿ ಮುಸ್ತಾಕ್ ನನ್ನು ಎಂದು ಪೊಲೀಸರು 11 ದಿನಗಳ ಬಳಿಕ ಅರೆಸ್ಟ್ ಮಾಡಿದ್ದರು. ಉದಯಗಿರಿ ಪೊಲೀಸ್ ಠಾಣೆಯ ಮೇಲೆ ಉದ್ರಿಕ್ತರು ಕಲ್ಲು ತೂರಾಟ ನಡೆಸಲು ಈ ಒಂದು ಮೌಲ್ವಿಯ ಪ್ರಚೋದನಕಾರಿ ಭಾಷಣವೇ ಕಾರಣವಾಗಿತ್ತು. 10 ದಿನಗಳಾದರೂ ಆರೋಪಿಯನ್ನು ಬಂಧಿಸದ ಹಿನ್ನೆಲೆಯಲ್ಲಿ ಸಾರ್ವಜನಿಕರು ಪೊಲೀಸರ ವಿರುದ್ಧ ಕಿಡಿಕಾರಿದ್ದರು. ಇಂದು ಮೌಲ್ವಿಯನ್ನು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದರು. ಅರೆಸ್ಟ್ ಮಾಡಿದ ಬಳಿಕ ಮೈಸೂರಿನ 2ನೇ ಸೇಷನ್ಸ್ ಕೋರ್ಟಿಗೆ ಹಾಜರುಪಡಿಸಿದ್ದರು. ಈ ವೇಳೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದ ಕೋರ್ಟ್ ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯ ಮೇಲೆ ಕಲ್ಲೆಸೆದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಲ್ವಿ…

Read More

ಧಾರವಾಡ : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿಗೆ ಸಮನ್ಸ್ ಜಾರಿಗೊಳಿಸಿತ್ತು. ಇದೀಗ ಈ ಒಂದು ಸಮನ್ಸ್ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರು ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದು, ಧಾರವಾಡ ಹೈಕೋರ್ಟ್ ಪೀಠದಲ್ಲಿ ಇಂದು ರಿಟ್ ಅರ್ಜಿ ವಿಚಾರಣೆ ನಡೆಯಿತು.ಅರ್ಜಿಯ ವಿಚಾರಣೆ ನಡೆಸಿದ ನ್ಯಾ.ಎಂ.ನಾಗಪ್ರಸನ್ನ ಅವರು, ಇಡೀ ತನಿಖೆಗೆ ತಡೆಯಾಜ್ಞೆಯನ್ನು ವಿಸ್ತರಿಸಿದೆ. ಸಿಎಂ ಪತ್ನಿ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ್ ತನಿಖೆಗೆ ನೀಡಿದ ತಡೆಯಾಜ್ಞೆ ವಿಸ್ತರಿಸಿದೆ.ಬಳಿಕ ಎರಡು ಕಡೆ ವಾದ ಆಲಿಸಿದ ನ್ಯಾಯಾಧೀಶರು ಆದೇಶವನ್ನು ಕಾಯ್ದಿರಿಸಿದ್ದಾರೆ . ಜಾರಿ ನಿರ್ದೇಶನಾಲಯ ನೀಡಿದ ಸಮನ್ಸ್ ಅನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರು ಹೈಕೋರ್ಟ್ ಅರ್ಜಿ ಸಲ್ಲಿಸಿದ್ದಾರೆ. ಅವರ ಪರವಾಗಿ ಹಿರಿಯ ವಕೀಲ ಸಂದೇಶ ಚೌಟ ಅವರು ವಾದ ಮಂಡಿಸಿದರು. ಅಪರಾಧದ ಸಂಪತ್ತು ಮುಚ್ಚಿಟ್ಟಿದ್ದರೆ ಆಗ ಆಗ ಇಡಿ ವ್ಯಾಪ್ತಿಗೆ ಬರುತ್ತೆ. ಸಂಪತ್ತಿನ ಸ್ವಾಧೀನದಲ್ಲಿದ್ದರೆ, ಅನುಭವಿಸುತ್ತಿದ್ದರೆ ಇಡೀ ವ್ಯಾಪ್ತಿಗೆ…

Read More

ದಾವಣಗೆರೆ : ಟೈಲ್ಸ್ ಸಾಗಿಸುತ್ತಿದ್ದ ಟಾಟಾಏಸ್ ವಾಹನ ಪಲ್ಟಿಯಾಗಿ ಇಬ್ಬರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿ ಬಳಿ NH 48 ರಲ್ಲಿ ಈ ಒಂದು ಅಪಘಾತ ಸಂಭವಿಸಿದೆ. ಮಿತಿಗಿಂತ ಅಧಿಕ ವಸ್ತುಗಳನ್ನು ತುಂಬಿದ್ದರಿಂದ ಟಾಟಾಏಸ್ ವಾಹನದ ಟೈರ್ ಸ್ಫೋಟಗೊಂಡು ಕೋಲ್ಕುಂಟೆ ಗ್ರಾಮದ ಮಹದೇವ (38) ಯರವನಾಗತಿಹಳ್ಳಿ ಕ್ಯಾಂಪ್ನ ಹನುಮಂತ (37) ಮತಪಟ್ಟ ಕಾರ್ಮಿಕರು ಎಂದು ತಿಳಿದುಬಂದಿದೆ. ಮೃತಪಟ್ಟ ಕಾರ್ಮಿಕರ ಕುಟುಂಬಕ್ಕೆ ಪರಿಹಾರ ನೀಡುವಂತೆ ಆಗ್ರಹಿಸಿ ಇದೀಗ ಧರಣಿ ನಡೆಸಲಾಗುತ್ತಿದೆ.ದಾವಣಗೆರೆ ಹದಡಿ ರಸ್ತೆಯ ಸಮ್ಯಕ್ ಸಿರಾಮಿಕ್ ಮುಂದೆ ಮೃತರ ಶವವಿಟ್ಟು ಧರಣಿ ನಡೆಸಲಾಗುತ್ತಿದೆ. ಟೈಲ್ಸ್ ಮತ್ತು ಇಂಟೀರಿಯರ್ ಶಾಪ್ ಮುಂದೆ ಕಾರ್ಮಿಕರ ಶವವಿಟ್ಟು ಪ್ರತಿಭಟನೆ ನಡೆಸುತ್ತಿದ್ದಾರೆ. ಶಾಪ್ ಮಾಲಿಕ ಮೃತಪಟ್ಟ ಕಾರ್ಮಿಕರ ಕುಟುಂಬಸ್ಥರ ನಡುವೆ ಈ ವೇಳೆ ವಾಗ್ವಾದ ನಡೆಯಿತು. ಪರಿಹಾರ ಸಿಗುವವರೆಗೂ ಕಾರ್ಮಿಕರ ಶುಭ ಕೊಂಡಯ್ಯೆಲ್ಲವೆಂದು ಆಕ್ರೋಶ ಹೊರಹಾಕಿದರು ಪ್ರತಿಭಟನಾ ಸ್ಥಳಕ್ಕೆ ವಿದ್ಯಾನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Read More

ಬೆಂಗಳೂರು : ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಯಾವಾಗಲೂ ಅನುದಾನ ದುರ್ಬಳಕೆ ಆಗುತ್ತದೆ. SCSP-TSP ಅನುದಾನವನ್ನು ಕಾಂಗ್ರೆಸ್ ದುರ್ಬಳಕೆ ಮಾಡಿಕೊಂಡಿದೆ ಎಂದು ಬೆಂಗಳೂರಿನಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ ರಾಜ್ಯ ಸರ್ಕಾರದ ವಿರುದ್ಧವಾಗಿ ನಡೆಸಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಮುದಾಯದ ಕಲ್ಯಾಣಕ್ಕೆ ಮೀಸಲಿಟ್ಟಿದ್ದ 15000 ಕೋಟಿ ಹಣ ಈಗ ಗ್ಯಾರಂಟಿ ಯೋಜನೆಗಳಿಗಾಗಿ ಡೈವರ್ಟ್ ಮಾಡಿಕೊಂಡಿದ್ದಾರೆ.ಮಾರ್ಚ್ 7ರಂದು ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡಿಸುತ್ತಾರೆ. ಅಲ್ಲಿಯೂ 20,000 ಕೋಟಿ ಗ್ಯಾರೆಂಟಿಗಾಗಿ ಡೈವರ್ಟ್ ಮಾಡುತ್ತಿದ್ದಾರೆ ಎಂದು ಗಂಭೀರಾವಾಗಿ ಆರೋಪಿಸಿದರು. ಇವತ್ತು ವಿಶೇಷ ಸಭೆ ಮತ್ತು ಕಾರ್ಯಗಾರ ನಡೆಸಿದ್ದೇವೆ. 14 ತಂಡಗಳನ್ನು ರಚಿಸಿ ಜನರಿಗೆ ಜಾಗೃತಿ ಮೂಡಿಸಲು ಸಜ್ಜಾಗಿದ್ದೇವೆ. SCSP-TSP ಸಮಾಜಕ್ಕೆ ಮೀಸಲಿಟ್ಟಿದ್ದ ಹಣ ಅವರಿಗೆ ಬಳಕೆಯಾಗಬೇಕು. ಕಾಂಗ್ರೆಸ್ ಬಜೆಟ್ ನಲ್ಲಿ ಅನುದಾನ ಬಳಿ ದುರ್ಬಳಕೆ ಮಾಡಿಕೊಳ್ಳುತ್ತಿದೆ. ಕಳೆದ ಬಜೆಟ್ ನಲ್ಲೂ 15 ಸಾವಿರದಿಂದ 16 ಸಾವಿರ ಕೋಟಿ ಹಣ ದುರ್ಬಳಕೆ ಮಾಡಿಕೊಂಡಿದೆ. SCSP-TSP ಹಣವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ಈ ಬಾರಿಯೂ ಹಣ ದುರ್ಬಳಕೆ ಮಾಡುತ್ತಾರೆಂಬ ಮಾಹಿತಿ ಇದೆ…

Read More