Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದ ಮತ್ತೊಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕರು ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ದೂರು ನೀಡಿದ್ದಾರೆ.ಹೌದು ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಲೋಕಾಯುಕ್ತ ಕ್ಲೀನ್ ಚಿಟ್ ನೀಡಿದೆ. ಈ ಮೂಲಕ ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ ಎನ್ನುವಾಗಲೇ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ. ಮುಡಾ ಆಸ್ತಿಯ ಅಕ್ರಮ ಡಿನೋಟಿಫಿಕೇಷನ್ ಕುರಿತು ಸಿದ್ದರಾಮಯ್ಯ ಹಾಗೂ ಬಸವೇಗೌಡ ವಿರುದ್ಧ ತನಿಖೆಗೆ ಅನುಮತಿ ನೀಡುವಂತೆ ಕೋರಿಬಿಜೆಪಿ ಮುಖಂಡ ಎನ್.ಆರ್.ರಮೇಶ್, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಪತ್ರ ಬರೆದಿದ್ದಾರೆ ಎಂದು ತಿಳಿದುಬಂದಿದೆ. ದೂರಿನಲ್ಲಿ ಏನಿದೆ? ಮೈಸೂರು ಜಿಲ್ಲೆಯ ಹಿಣಕಲ್ ಗ್ರಾಮದ ಸರ್ವೆ ನಂ.70/4ಎ ಜಾಗವನ್ನು ಮುಡಾ ಸ್ವಾಧೀನಪಡಿಸಿಕೊಂಡಿತ್ತು. ಈ ಭೂಮಿಯನ್ನು ಡಿನೋಇಫಿಕೇಷನ್ ಮಾಡುವಲ್ಲಿ ಸಿಎಂ ಕಾನೂನು ಉಲ್ಲಂಘನೆ ಮಾಡಿದ್ದಾರೆ. ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿ ಎನ್.ಆರ್.ರಮೇಶ್ ದೂರು ನೀಡಿದ್ದಾರೆ ಎಂದು ತಿಳಿದುಬಂದಿದೆ.
ಚಿಕ್ಕಬಳ್ಳಾಪುರ : ರಾಜ್ಯದಲ್ಲಿ ಮಹಿಳೆಯ ಮೇಲೆ ಕೆಲವು ದುಷ್ಕರ್ಮಿಗಳು ರಾಕ್ಷಸಿಯ ವರ್ತನೆ ತೋರಿದ್ದು, ಮಹಿಳೆಯನ್ನು ಕೋಣೆಯಲ್ಲಿ ಕೂಡಿಹಾಕಿ ರಾತ್ರಿ ಇಡಿ ಚಿತ್ರಹಿಂಸೆ ನೀಡಿ ಕಣ್ಣುಗುಡ್ಡೆ ಕಿತ್ತು ಭೀಕರವಾಗಿ ಹಲ್ಲೆ ನಡೆಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ಜಗನಹಳ್ಳಿ ಎಂಬ ಗ್ರಾಮದಲ್ಲಿ ನಡೆದಿದೆ. ಹೌದು ಕಣ್ಣು ಗುಡ್ಡೆ ಕಿತ್ತು ಬರುವಂತೆ ಮಹಿಳೆಯ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆದಿದೆ. ಕಿಡ್ನ್ಯಾಪ್ ಮಾಡಿ ತೋಟದ ಮನೆಯಲ್ಲಿ ಕೂಡಿಹಾಕಿ ಭೀಕರವಾಗಿ ಹಲ್ಲೆ ನಡೆಸಲಾಗಿದೆ ಅನ್ನುವ ಆರೋಪ ಹೇಳಿ ಬಂದಿದೆ. ತೋಟದ ಮನೆಯಲ್ಲಿ ಕೂಡಿಹಾಕಿ ಮಹಿಳೆಗೆ ರಾತ್ರಿ ಇಡಿ ಹಿಂಸೆ ನೀಡಿದ್ದಾರೆ. ಮುಖದಲ್ಲಿ ರಕ್ತ ಸುರಿಯುವಂತೆ ದುಷ್ಕರ್ಮಿಗಳು ಮನಬಂದಂತೆ ಥಳಿಸಿದ್ದಾರೆ. ಬ್ಯಾಟ್, ರಾಡ್ ಗಳಿಂದ ಮುಖ ಮೋತಿಯನ್ನು ನೋಡದೆ ಭೀಕರವಾಗಿ ಹಲ್ಲೆ ನಡೆಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆ ಗುಡಿಬಂಡೆ ತಾಲ್ಲೂಕಿನ ಜಗನಹಳ್ಳಿ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ. ಗಂಗರಾಜು ಎರಡನೇ ಪತ್ನಿ ಸಂಗೀತ ಮೇಲೆ ಈ ಒಂದು ಭೀಕರವಾಗಿ ಹಲ್ಲೆ ನಡೆಸಲಾಗಿದೆ. ಮೊದಲ ಪತ್ನಿಯ ಕಡೆಯವರೇ ಈ…
ಬೆಂಗಳೂರು : ಬೆಂಗಳೂರಿನಲ್ಲಿ ಬಿಬಿಎಂಪಿ ಕಾರ್ಯಕ್ರಮದಲ್ಲಿ ಕನ್ನಡ ಮಾಯವಾಗಿರುವ ವಿಚಾರವಾಗಿ ಟ್ವೀಟ್ ಮೂಲಕ ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಆರ್ ಅಶೋಕ್ ಕಿಡಿಕಾರಿದ್ದಾರೆ. ಕಾಂಗ್ರೆಸ್ ಸರ್ಕಾರದಿಂದ ಕನ್ನಡದ ಕಗ್ಗೊಲೆ ನಡೆಯುತ್ತಿದೆ ನಾಡ ದ್ರೋಹಿ ಕಾಂಗ್ರೆಸ್ ಸರ್ಕಾರ ಕನ್ನಡದ ಅಸ್ಮಿತಿಗೆ ಕೊಳ್ಳಿ ಇಟ್ಟಿದೆ ಎಂದು ಆಕ್ರೋಶ ಹೊರ ಹಾಕಿದ್ದಾರೆ. ಟ್ವೀಟ್ ನಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದಿರುವ ಅವರು, ಕೆಪಿಎಸ್ಸಿ ಪ್ರಶ್ನೆ ಪತ್ರಿಕೆಗಳಲ್ಲಿ ಕನ್ನಡ ವ್ಯಾಕರಣ ತಪ್ಪಾಗಿ ಮುದ್ರಿಸಿ ಕನ್ನಡದ ಕಗ್ಗಲಿ ಮಾಡಿದ್ದಾಯ್ತು ಕನ್ನಡ ಶಾಲೆಗಳನ್ನು ಮುಚ್ಚಿಸಿ ಕನ್ನಡ ಕಲಿಕೆಗೆ ಎಳ್ಳುನೀರು ಬಿಟ್ಟಿದ್ದಾಯ್ತು, ಈಗ ಬಿಬಿಎಂಪಿ ಕಚೇರಿಯಲ್ಲಿ ಡಾ. ರಾಜಕುಮಾರ್ ಗಾಜಿನಮನೆಯಲ್ಲಿ ‘ನಮ್ಮ ರಸ್ತೆ ನಮ್ಮ ಹೆಮ್ಮೆ’ ಕಾರ್ಯಕ್ರಮದಲ್ಲಿ ಕನ್ನಡವೇ ಮಾಯವಾಗಿದೆ ಎಂದು ಆರ್ ಅಶೋಕ್ ಕಿಡಿ ಕಾರಿದ್ದಾರೆ. ಕರುನಾಡಲ್ಲಿ ಕನ್ನಡವನ್ನು ಶಾಶ್ವತವಾಗಿ ಅಳಿಸಿ ಹಾಕುವುದು ಮಾತ್ರ ಗ್ಯಾರಂಟಿ ಎಂದು ಟ್ವೀಟ್ ಮೂಲಕ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. https://twitter.com/RAshokaBJP/status/1892452027935904171?t=1BMPEQqo1rnU8lb293gTvw&s=19
ಬೆಂಗಳೂರು : ಕಳೆದ ಡಿಸೆಂಬರ್ ನಲ್ಲಿ ಬೆಳಗಾವಿಯ ಸುವರ್ಣಸೌಧದಲ್ಲಿ ಬಿಜೆಪಿ ಎಂಎಲ್ಸಿ ಸಿಟಿ ರವಿ ಅವರು, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಪದ ಬಳಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಕರಣ ರದ್ದುಕೋರಿ ಸಿಟಿ ರವಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಇಂದು ಹೈಕೋರ್ಟ್ ನಲ್ಲಿ ಅರ್ಜಿ ವಿಚಾರಣೆ ನಡೆದಿದ್ದು, ಪ್ರಕರಣದ ತನಿಖೆಗೆ ನೀಡಿದ ತಡೆಯಾಜ್ಞೆಯನ್ನು ವಿಸ್ತರಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ. ಹೌದು ಸದನದಲ್ಲಿ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಎಂಎಲ್ಸಿ ಸಿಟಿ ರವಿ ಅವಹೇಳನಕಾರಿ ಪದ ಬಳಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಂಎಲ್ಸಿ ಸಿಟಿ ರವಿ ಪ್ರಕರಣದ ರದ್ದು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದರು. ವಿಚಾರಣೆ ವೇಳೆ ಸಿಟಿ ರವಿ ಪರವಾಗಿ ಪ್ರಭುಲಿಂಗ ನಾವದಗಿ ವಾದ ಮಂಡಿಸಿದರು. ಸದನದಲ್ಲಿ ಆಡಿದ ಮಾತುಗಳಿಗೆ ರಕ್ಷಣೆ ಇದೆ.ಸುಪ್ರೀಂ ಕೋರ್ಟ್ ತೀರ್ಪುಗಳನ್ನು ಉಲ್ಲೇಖಿಸಿ ವಾದ ಮಂಡಿಸಲಾಯಿತು.ಓರ್ವ ಮಹಿಳಾ ಸಚಿವೆಯಾಗಿರುವ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಗೌರವವಿದೆ ಎಂದು MLC ಸಿಟಿ ರವಿ ಪರವಾಗಿ ಹಿರಿಯ ವಕೀಲ ಪ್ರಭುಲಿಂಗ…
ತುಮಕೂರು : ಕನ್ನಡ ಚಲನಚಿತ್ರ ರಂಗದ ಖ್ಯಾತ ನಟ ಹಾಗೂ ನಿರ್ಮಾಪಕರದಂತ ಕೆ.ಮಂಜು ಅವರ ಪುತ್ರ ಶ್ರೇಯಸ್ ಅವರ ಕಾರು ಅಪಘಾತಕ್ಕೆ ಈಡಾಗಿದೆ.ಆದರೆ ಈ ಒಂದು ಅಪಘಾತದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಹೌದು ಇಂದು ಶ್ರೇಯಸ್ ನಟಿಸಿರುವ ವಿಷ್ಣುಪ್ರಿಯಾ ಚಲನಚಿತ್ರದ ಪ್ರಮೋಷನ್ ಗೆ ದಾವಣಗೆರೆಗೆ ತೆರಳುತ್ತಿದ್ದ ನಿರ್ಮಾಪಕ ಕೆ ಮಂಜು ಪುತ್ರ ಶ್ರೇಯಸ್ ಅವರ ಕಾರುಬಿಎಂಡಬ್ಲ್ಯು ಕಾರು ಅಪಘಾತಕ್ಕೆ ಒಳಗಾಗಿದೆ. ತುಮಕೂರಿನ ಶಿರಾ ಬಳಿ ಈ ಒಂದು ಅಪಘಾತ ಸಂಭವಿಸಿದೆ. ಆದರೆ, ಈ ಕಾರು ಆಕ್ಸಿಡೆಂಟ್ನಿಂದ ನಟ ಶ್ರೇಯಸ್ ಪ್ರಾಣಪಾಯದಿಂದ ಪಾರಾಗಿದ್ದಾರೆ. ಓವರ್ ಟೇಕ್ ಮಾಡಲು ಬಂದ ಲಾರಿ ಶ್ರೇಯಸ್ ಇದ್ದ ಕಾರಿಗೆ ಗುದ್ದಿಕೊಂಡ ಹೋಗಿದೆ ಅನ್ನೋ ಮಾಹಿತಿ ಇದೆ. ಸಿನಿಮಾ ಪ್ರಮೋಶನ್ಗೆ ಹೋಗುತ್ತಿದ್ದ ನಟ ಶ್ರೇಯಸ್ ಈ ಒಂದು ಅಪಘಾತದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದು, ಆತನ ಜೊತೆಯಲ್ಲಿರುವವರು ಘಟನೆಯಿಂದ ಶಾಕ್ ಗೆ ಒಳಗಾಗಿದ್ದಾರೆ.
ಕೊಪ್ಪಳ : ಸ್ನೇಹಿತರ ಜೊತೆಗೆ ಹಂಪಿ ಪ್ರವಾಸಕ್ಕೆ ಎಂದು ಬಂದಿದ್ದ ಹೈದರಾಬಾದ್ ಮೂಲದ ವೈದ್ಯೆ ನದಿಗೆ ಹಾರಿದ್ದ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಸಾಣಾಪುರದ ಬಳಿ ನಡೆದಿತ್ತು. ಇದೀಗ ವೈದ್ಯೇ ಅನನ್ಯರಾವ್ ಶವವಾಗಿ ಪತ್ತೆಯಾಗಿದ್ದಾರೆ. ಪೊಲೀಸ್ ಮೂಲಗಳ ಪ್ರಕಾರ, ಡಾ. ಅನನ್ಯಾ ರಾವ್ ಮತ್ತು ಇತರೆ ಇಬ್ಬರು ಸ್ನೇಹಿತರಾದ ಸತ್ವಿನ್ ಮತ್ತು ಹಶಿತಾ ಜತೆ ಹಂಪಿಗೆ ಪ್ರವಾಸಕ್ಕೆಂದು ಬಂದಿದ್ದರು.ಇದೇ ಸಂದರ್ಭದಲ್ಲಿ ಅನನ್ಯಾ ರಾವ್ ಸುಮಾರು 25 ಅಡಿ ಎತ್ತರದ ಬಂಡೆಯಿಂದ ನೀರಿಗೆ ಹಾರಿ ಈಜಲು ಬಯಸಿದರು. ಬಂಡೆಯಿಂದ ನೀರಿಗೆ ಹಾರಿದ ಅನನ್ಯಾ ಸ್ವಲ್ಪ ಸಮಯದವರೆಗೆ ನೀರಿನಲ್ಲಿ ಈಜುತ್ತಿದ್ದರು. ಆದರೆ, ಶೀಘ್ರದಲ್ಲೇ ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿ ಕೊಚ್ಚಿಕೊಂಡು ಹೋದರು. ಹೈದರಾಬಾದ್ನ ವಿಕೆಸಿ ಆಸ್ಪತ್ರೆಯಲ್ಲಿ ವೈದ್ಯೆಯಾಗಿ ಸೇವೆ ಸಲ್ಲಿಸುತ್ತಿದ್ದ ಅನನ್ಯ, ರಜೆ ಕಳೆಯಲು ತಮ್ಮ ಸ್ನೇಹಿತರಾದ ಅಶಿತಾ ಮತ್ತು ಸಾತ್ವಿಕ್ ಜೊತೆ ಅನನ್ಯ ಅವರು ಸಣಾಪುರ ಸಮೀಪ ಇರುವ ಖಾಸಗಿ ಗೆಸ್ಟ್ ಹೌಸ್ಗೆ ಮಂಗಳವಾರ ಸಂಜೆ ಬಂದಿದ್ದರು. ಗೆಸ್ಟ್ ಹೌಸ್ ಹಿಂದೆ…
ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ತನಿಖೆಯಲ್ಲಿ ಸಾಕ್ಷಾಧಾರಗಳ ಕೊರತೆ ಇದೆ ಎಂದು ಲೋಕಾಯುಕ್ತ ಪೊಲೀಸರು ಸಿಎಂ ಸಿದ್ದರಾಮಯ್ಯ ಅವರಿಗೆ ಕ್ಲೀನ್ ಚಿಟ್ ನೀಡಿದೆ. ಈ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಲೋಕಾಯುಕ್ತ ಪೊಲೀಸ್ ಟಿ.ಉದೇಶ ಅವರು ಡಾಕುಮೆಂಟ್ಸ್ ಸೇರಿದಂತೆ ಒಟ್ಟು 11 ಸಾವಿರ ಪುಟಗಳ ತನಿಖೆಯ ಅಂತಿಮ ವರದಿಯನ್ನು ಸಲ್ಲಿಸಿದರು. ಪ್ರಕರಣದಲ್ಲಿ ನಿನ್ನೆ ಮಹತ್ವದ ಬೆಳವಣಿಗೆ ನಡೆದಿದ್ದು, ತನಿಖಾ ವರದಿಯಲ್ಲಿ ಲೋಕಾಯುಕ್ತ ಪೊಲೀಸರು ಈ ಒಂದು ಹಗರಣದಲ್ಲಿ ಸಾಕ್ಷ್ಯಾಧಾರಗಳ ಕೊರತೆ ಇದೆ ಎಂದು ಉಲ್ಲೆಖಿಸಿ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ, ಬಾಮೈದ ಮಲ್ಲಿಕಾರ್ಜುನ ಹಾಗೂ ದೇವರಾಜುಗೆ ಲೋಕಾಯುಕ್ತ ಪೊಲೀಸರು ಕ್ಲೀನ್ ಚಿಟ್ ನೀಡಿದ್ದಾರೆ. ಇದೆ ಸಂದರ್ಭದಲ್ಲಿ ದೂರುದಾರ ಸ್ನೇಹಮಯಿ ಕೃಷ್ಣ ಅವರಿಗೂ ಕೂಡ ನಿಮಗೆ ಆಕ್ಷೇಪಣೆಗಳು ಇದ್ದಲ್ಲಿ ಕೋರ್ಟಿಗೆ ಸಲ್ಲಿಸಿ ಎಂದು ಲೋಕಾಯುಕ್ತ ಪೊಲೀಸರು ನೋಟಿಸ್ ನೀಡಿದ್ದಾರೆ. ಇದೀಗಜನಪ್ರತಿನಿಧಿಗಳ ಕೋರ್ಟ್ ನ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರಿಗೆ ಅಂತಿಮ ವರದಿ ಸಲ್ಲಿಸಲಾಯಿತು. ಸುಮಾರು 11 ಸಾವಿರ…
ಮೈಸೂರು : ಕಳೆದ ಕೆಲವು ದಿನಗಳ ಹಿಂದೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯ ಮೇಲೆ ಕಲ್ಲುತೂರಾಟ ನಡೆಸಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಚೋದನಾಕಾರಿ ಭಾಷಣ ಮಾಡಿ ಪರಾರಿಯಾಗಿದ್ದ ಮುಸ್ಲಿಂ ಮುಖಂಡ ಮುಸ್ತಾಕ್ ನನ್ನು ಕೊನೆಗೂ ಸಿಸಿಬಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹೌದು ಮೈಸೂರಿನಲ್ಲಿ ಕಳೆದ 11 ದಿನಗಳ ಹಿಂದೆ ಉದಯಗಿರಿ ಠಾಣೆಯ ಮೇಲೆ ಉದ್ರಿಕ್ತರ ಗುಂಪೊಂದು ಕಲ್ಲುತೂರಾಟ ನಡೆಸಿ ಪೊಲೀಸರ ಮೇಲೆ ಹಲ್ಲೆ ಮಾಡಿದ್ದರು. ಗಲಾಟೆ ನಡೆದು 11 ದಿನಗಳ ಬಳಿಕ ಆರೋಪಿ ಮೌಲ್ವಿ ಮುಸ್ತಾಕ್ ನನ್ನು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಮುಸ್ತಾಕ್ ನನ್ನು ಬಂಧಿಸದ ಹಿನ್ನೆಲೆಯಲ್ಲಿ ಸಾರ್ವಜನಿಕರ ಆಕ್ರೋಶ ಹೆಚ್ಚಾಗಿತ್ತು. ಇದೀಗ ಕೊನೆಗೂ ಮೌಲ್ವಿ ಮುಸ್ತಾಕ್ ನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮುಂಜಾಗ್ರತ ಕ್ರಮವಾಗಿ ಉದಯಗಿರಿ ಠಾಣೆ ಬಳಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಆರೋಪಿ ಮುಸ್ತಾಕ್ ನನ್ನು ಬಂಧಿಸಿ ಇದೀಗ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಬೆಂಗಳೂರು : ಈಗಾಗಲೇ ರಾಜ್ಯ ರಾಜಕಾರಣದಲ್ಲಿ ಒಂದು ಕಡೆ ಬಿಜೆಪಿ ಬಣ ಬಡಿದಾಟ ಶುರುವಾಗಿದ್ದರೆ, ಇನ್ನೊಂದು ಕಡೆ ತೆರೆಮರೆಯಲ್ಲಿ ಕಾಂಗ್ರೆಸ್ ನಲ್ಲಿ ಕೂಡ ಬಣ ಬಡಿದಾಟದ ಶೀತಲ ಸಮರ ಶುರುವಾಗಿದೆ. ಸಿಎಂ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿ ಮುಂದುವರೆಯುತ್ತಾರೆ ಎಂದು ಕೆಲವರು ಹೇಳಿದರೆ, ಕೆಲವು ಕಾರ್ಯಕರ್ತರು ನೆಕ್ಸ್ಟ್ ಸಿಎಂ ಡಿಕೆ ಶಿವಕುಮಾರ್ ಎಂದು ಹೇಳುತ್ತಿದ್ದಾರೆ. ಇದರ ಮಧ್ಯ ಜೆಡಿಎಸ್ ಶಾಸಕ ಜಿಟಿ ದೇವೇಗೌಡ ಡಿಸಿಎಂ ಡಿಕೆ ಶಿವಕುಮಾರ್ ಖಂಡಿತ ಸಿಎಂ ಆಗುತ್ತಾರೆ ಆದರೆ ಅದಕ್ಕೆ ಸಿದ್ದರಾಮಯ್ಯ ಬೆಂಬಲ ಬೇಕು ಎಂದು ತಿಳಿಸಿದರು. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಡಿಸಿಎಂ ಡಿಕೆ ಶಿವಕುಮಾರ್ ಖಂಡಿತ ಸಿಎಂ ಆಗೇ ಆಗುತ್ತಾರೆ. ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಬೇಕಾದರೆ ಸಿಎಂ ಸಿದ್ದರಾಮಯ್ಯರ ಬೆಂಬಲ ಬೇಕು. 10 ಶಾಸಕರನ್ನು ಇಟ್ಟುಕೊಂಡು ಯಾರು ಸಿಎಂ ಆಗಲು ಸಾಧ್ಯವಿಲ್ಲ. ಸಿಎಂ ರಾಜಿನಾಮೆ ಕೊಡುತ್ತಾರೆ ಎಂದು ಕೇಳಿ ಜನರಿಗೂ ಸಾಕಾಗಿದೆ ಬಿಡಿ ಎಂದು ಬೆಂಗಳೂರಿನಲ್ಲಿ ಜೆಡಿಎಸ್ ಶಾಸಕ ಜಿ ಟಿ ದೇವೇಗೌಡ ಹೇಳಿಕೆ…
ಕೊಡಗು : ಕೊಡಗಿನಲ್ಲಿ ಬೆಚ್ಚಿ ಬೀಳಿಸುವಂತಹ ಘಟನೆ ನಡೆದಿದ್ದು, ಕಳೆದ ಮೂರು ತಿಂಗಳಿನಲ್ಲಿ 59 ಅಪ್ರಾಪ್ತೆಯರು ಗರ್ಭಿಣಿ ಆಗಿರುವ ಪ್ರಕರಣಗಳು ವರದಿಯಾಗಿವೆ. ಅಲ್ಲದೆ ಕಳೆದ 9 ತಿಂಗಳಲ್ಲಿ 30 ಬಾಲಕಿಯರು ಗರ್ಭಿಣಿಯಾಗಿದ್ದು, ಅದರಲ್ಲಿ 14 ಬಾಲಕಿಯರಿಗೆ ಈಗಾಗಲೇ ಹೆರಿಗೆ ಆಗಿರುವುದು ಬೆಳಕಿಗೆ ಬಂದಿದ್ದು ಜಿಲ್ಲೆಯ ಜನರಲ್ಲಿ ಆತಂಕ ಮೂಡಿಸಿದೆ. ಹೌದು ಕೊಡಗು ಜಿಲ್ಲೆಯಲ್ಲಿ ಅಪ್ರಾಪ್ತ ಗರ್ಭಿಣಿಯರ ಸಂಖ್ಯೆ ಹೆಚ್ಚಳವಾಗಿದ್ದು, ಕಳೆದ ಮೂರು ತಿಂಗಳಲ್ಲಿ ಜಿಲ್ಲೆಯಲ್ಲಿ 59 ಪ್ರಕರಣಗಳು ದಾಖಲಾಗಿವೆ. 9 ತಿಂಗಳಲ್ಲಿ 30 ಅಪ್ರಾಪ್ತೆಯರು ಗರ್ಭಿಣಿ ಆಗಿರುವುದು ಪತ್ತೆಯಾಗಿದೆ. 30 ಅಪ್ರಾಪ್ತೆಯರ ಪೈಕಿ ಈಗಾಗಲೇ 14 ಬಾಲಕಿಯರಿಗೆ ಹೆರಿಗೆ ಆಗಿದೆ. ಓರ್ವ ಅಪ್ರಾಪ್ತ ಬಾಲಕಿಗೆ ಗರ್ಭಪಾತ ಆಗಿರುವುದು ಕೂಡ ಪತ್ತೆಯಾಗಿದೆ. ವಿರಾಜಪೇಟೆ, ಪೊನ್ನಂಪೇಟೆಯಲ್ಲಿ ಹೆಚ್ಚು ಅಪ್ರಾಪ್ತ ಗರ್ಭಿಣಿಯರು ಪತ್ತೆಯಾಗಿದ್ದಾರೆ. ಅದರಲ್ಲೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದಲ್ಲೇ 43 ಸಂತ್ರಸ್ತೆಯರು ಪತ್ತೆಯಾಗಿದ್ದಾರೆ. 43 ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ. ತೋಟದ ಮನೆಗಳಲ್ಲಿ ಹೆಚ್ಚು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ…