Subscribe to Updates
Get the latest creative news from FooBar about art, design and business.
Author: kannadanewsnow05
ಗದಗ : ಪಾಕಿಸ್ತಾನ ಜಿಂದಾಬಾದ್ ಅನ್ನುವ ಕಿಡಿಗೇಡಿ ಗೂಂಡಾ ಮುಸ್ಲಿಮರಿಗೆ ಹೇಳ್ತೇನೆ. ನಿಮಗೆ ಪಾಕಿಸ್ತಾನದ ಬಗ್ಗೆ ಪ್ರೀತಿ ಇದ್ರೆ. ಬಾಗಿಲು ಓಪನ್ ಇದೆ, ನಾವೇ ಟಿಕೆಟ್ ಕೊಟ್ಟು ಕಳುಹಿಸುತ್ತೇವೆ ಅಲ್ಲಿಗೆ ಓಡಿ. ನಮ್ಮ ದೇಶದಲ್ಲಿ ಹುಟ್ಟಿ, ನಮ್ಮದೇ ಅನ್ನ ತಿಂದು, ಸೌಲಭ್ಯಗಳನ್ನು ಪಡೆದು ಪಾಕಿಸ್ತಾನ ಜಿಂದಾಬಾದ್ ಅಂದ್ರೆ ಅಂತಹವರ ಮನೆಗೆ ನುಗ್ಗಿ ಹೊಡೆಯುತ್ತೇವೆ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ. ಗಜೇಂದ್ರಗಡ ಪಟ್ಟಣದಲ್ಲಿ ಏರ್ಪಡಿಸಿದ್ದ ಹಿಂದೂ ಮಹಾ ಗಣೇಶ ಉತ್ಸವ ಧರ್ಮ ಸಭೆ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ ಅವರು, ಹಿಂದೂ ವಿರೋಧಿಗಳು, ದ್ರೋಹಿಗಳು ಯಾರಿದ್ದಾರೆ. ನಮ್ಮ ದೇಶದಲ್ಲಿ ಹುಟ್ಟಿ, ಅನ್ನ ತಿಂದು, ನಮ್ಮ ದೇಶದ ಸೌಲಭ್ಯ ಪಡೆದು ಪಾಕಿಸ್ತಾನ ಜಿಂದಾಬಾದ್ ಅನ್ನುವ ಹರಾಮ್ ಕೋರ್ ಇದ್ದಾರೆ. ಅಂತವರ ವಿರುದ್ಧ ಹೋರಾಟ ನಮ್ಮದು ಎಂದಿದ್ದಾರೆ. ಹಿಂದೂ ಸಮಾಜ ಶಾಂತವಾಗಿ ಸಮಾಧಾನದಿಂದ ಇದೆ. ಅಣ್ಣ, ತಮ್ಮಂದಿರ ಹಾಗೆ ಬದುಕಬೇಕು ಅಂತ 78 ವರ್ಷದಿಂದ ಸಹನೆಯಿಂದ ಇದ್ದೇವೆ. ಈ ದೇಶವನ್ನು ಇಸ್ಲಾಂ, ಕ್ರಿಶ್ಚಿಯನ್…
ಬೆಂಗಳೂರು : ಇನ್ನೇನು ಕೆಲವೇ ಕ್ಷಣಗಳಲ್ಲಿ ಭಾರತ ಮತ್ತು ಪಾಕಿಸ್ತಾನ ಏಷ್ಯಾ ಕಪ್ ಪಂದ್ಯ ಆರಂಭವಾಗಲಿದ್ದು ಇಡೀ ದೇಶಾದ್ಯಂತ ಭಾರತ ಗೆಲ್ಲಲಿ ಎಂದು ಅಭಿಮಾನಿಗಳು ದೇವಸ್ಥಾನಗಳಲ್ಲಿ ಹರಕೆ ಪೂಜೆಗಳನ್ನು ನಡೆಸುತ್ತಿದ್ದಾರೆ. ಆದರೆ ಕಾಂಗ್ರೆಸ್ ಸೇರಿದಂತೆ ಕೆಲವು ಪಕ್ಷಗಳು ಈ ಒಂದು ಪಂದ್ಯಾವಳಿಗೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇದೀಗ ಬೆಂಗಳೂರಿನಲ್ಲಿ ಕೆಪಿಸಿಸಿ ಮಹಿಳಾ ಕಾಂಗ್ರೆಸ್ ಘಟಕದ ರಾಜ್ಯಾಧ್ಯಕ್ಷೆ ಸೌಮ್ಯ ರೆಡ್ಡಿ ಅವರು ಒಂದು ಕೈಯಲ್ಲಿ ಸಿಂಧೂರ ಹಾಗೂ ಒಂದು ಕೈಯಲ್ಲಿ ಮೇಣದಬತ್ತಿ ಹಿಡಿದು ಪಂದ್ಯಾವಳಿ ವಿರೋಧಿಸಿ ಪ್ರತಿಭಟನೆ ನಡೆಸಿದರು. ಈ ವೇಳೆ ಮಾತನಾಡಿದ ಅವರು ಪೈಲ್ಗಾಮ್ ನಲ್ಲಿ ಉಗ್ರವಾದಿಗಳು ಅಮಾಯಕರನ್ನು ಕೊಂದರು. ಈ ಒಂದು ಘಟನೆ ನಡೆದು ಇನ್ನು ಐದಾರು ತಿಂಗಳು ಸಹ ಆಗಿಲ್ಲ. ಕಣ್ಣೀರು ಇನ್ನು ಹರಿತಾ ಇದೆ. ಮೃತರ ಕುಟುಂಬದಲ್ಲಿ ಕಣ್ಣೀರು ಹಾಕುತ್ತಿದ್ದಾರೆ. ಇಂದು 8 ಗಂಟೆಗೆ ಇಂಡಿಯಾ ಮತ್ತು ಪಾಕಿಸ್ತಾನ ನಡುವೆ ಕ್ರಿಕೆಟ್ ಪಂದ್ಯ ನಡೆಸುತ್ತಿದ್ದಾರೆ. ಕೇಂದ್ರ ಗೃಹಮಂತ್ರಿ ಮಗ ಅಮಿತ್ ಷಾ ಅವರ ಮಗ ಜಯ್ ಶಾ…
ಬೆಂಗಳೂರು : ಹಿಂದೂ ಸಮಾಜದಲ್ಲಿ ಅಸಮಾನತೆ ಇದೆ ಎಂದು ಮೈಸೂರಿನಲ್ಲಿ ಹೇಳಿಕೆ ನೀಡಿದ ಸಿಎಂ ಸಿದ್ದರಾಮಯ್ಯ ಅವರಿಗೆ ಸಿ.ಟಿ.ರವಿ ಬಹಿರಂಗ ಪತ್ರ ಬರೆದು, ಅಸಮಾನತೆ ಹಿಂದೂ ಸಮಾಜದಲ್ಲಿ ಮಾತ್ರ ಇದೆಯೇ? ನಿಮ್ಮ ಕಾಂಗ್ರೆಸ್ ಪಕ್ಷದೊಳಗೆಯೇ ಅಸಮಾನತೆ ಇಲ್ವೇ? ಎಂಬ ಪ್ರಶ್ನೆ ಕೇಳಿದ್ದಾರೆ. ಅಸಮಾನತೆ ಬರೀ ಹಿಂದೂ ಸಮಾಜದಲ್ಲಿ ಮಾತ್ರ ಇದೆಯಾ? ಉಳಿದ ಕಡೆಗಳಿಗೆ ಇಲ್ವಾ? ಅಸಮಾನತೆ ಶ್ರೀಮಂತ–ಬಡವರ ನಡುವೆಯೂ ಇದೆ. ವಿದ್ಯಾವಂತ–ಅವಿದ್ಯಾವಂತರ ನಡುವೆಯೂ ಇದೆ. ಒಂದೇ ಜಾತಿಯಲ್ಲಿ ಇದ್ದರೂ ವಿವಿಧ ಅಧಿಕಾರದ ಹುದ್ದೆಯಲ್ಲಿದ್ದವರ ನಡುವೆಯೂ ಇದೆ. ಅಸಮಾನತೆಗೆ ಹಲವು ಮುಖಗಳಿವೆ. ಆರ್ಥಿಕ ಅಸಮಾನತೆ, ಸಾಮಾಜಿಕ ಅಸಮಾನತೆ, ಶೈಕ್ಷಣಿಕ ಅಸಮಾನತೆ, ಅಧಿಕಾರದ ಅಸಮಾನತೆ, ಮತೀಯ ಅಸಮಾನತೆ. ಕ್ರಿಶ್ಚಿಯನ್, ಮುಸ್ಲಿಮರಲ್ಲೂ ಅಸಮಾನತೆ ಇದೆ. ಅಮೆರಿಕದಲ್ಲಿ ವೈಟ್ ಅಂಡ್ ಬ್ಲಾಕ್ ಅನ್ನುವಂತಹ ಅಸಮಾನತೆ ಇದೆ. ಹಿಂದೂ ಸಮಾಜದಲ್ಲಿ ಅಸ್ಪೃಶ್ಯತೆಯ ಅಸಮಾನತೆ ಇದೇ ಅನ್ನುವ ಏಕೈಕ ಕಾರಣ ಕೊಟ್ಟು ಲಕ್ಷಾಂತರ ಸಂಖ್ಯೆಯಲ್ಲಿ ಹಿಂದೂಗಳನ್ನು ಮತಾಂತರ ಮಾಡಲಾಗಿದೆ. ಏಸು ಕ್ರಿಸ್ತರ ಎದುರು ಸಮಾನವಾಗಿ, ಗೌರವಯುತವಾಗಿ ನಡೆಸಿಕೊಳ್ಳುತ್ತೇವೆ ಅಂದವರು ಹಿಂದೂ…
ಮೈಸೂರು : ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ-2025ರ ಪ್ರಮುಖ ಆಕರ್ಷಣೆಗಳಲ್ಲಿ ಒಂದಾದ ವಿದ್ಯುತ್ ದೀಪಾಲಂಕಾರ ಹಾಗೂ ಡ್ರೋನ್ ಪ್ರದರ್ಶನದ ಪೋಸ್ಟರ್ ಹಾಗೂ ದೀಪಾಲಂಕಾರದ ಟೀಸರ್ ಅನ್ನು ಇಂದು ಬಿಡುಗಡೆಗೊಳಿಸಲಾಯಿತು. ಅರಮನೆ ಆಡಳಿತ ಮಂಡಳಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಅವರು, ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಸೆಸ್ಕ್)ದ ವತಿಯಿಂದ ನಡೆಸಲಾಗುವ ದಸರಾ ದೀಪಾಲಂಕಾರ ಹಾಗೂ ಡ್ರೋನ್ ಪ್ರದರ್ಶನದ ಪೋಸ್ಟರ್ ಬಿಡುಗಡೆಗೊಳಿಸಿ, ಟೀಸರ್ ಅನಾವರಣಗೊಳಿಸಿದರು. ದಸರಾ ಮಹೋತ್ಸವದ ಸಂಭ್ರಮಕ್ಕೆ ಹೊಸದಾಗಿ ಸೇರ್ಪಡೆಯಾಗಿರುವ ಡ್ರೋನ್ ಪ್ರದರ್ಶನ ಈ ಬಾರಿ ಮತ್ತಷ್ಟು ಆಕರ್ಷಣೀಯವಾಗಿರಲಿದೆ. ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ಸೆ.28, 29 ಮತ್ತು ಅಕ್ಟೋಬರ್ 1 ಮತ್ತು 2ರಂದು ಡ್ರೋನ್ ಪ್ರದರ್ಶನ ನಡೆಸಲಾಗುತ್ತಿದೆ. ಕಳೆದ ಬಾರಿ 1500 ಡ್ರೋನ್ ಬಳಸಿಕೊಂಡು ಡ್ರೋನ್ ಪ್ರದರ್ಶನ ನಡೆಸಲಾಗಿತ್ತು, ಈ ಬಾರಿ 3000 ಡ್ರೋನ್ ಬಳಸಿಕೊಂಡು ಪ್ರದರ್ಶನ ನಡೆಸಲಾಗುತ್ತಿದೆ. ಎಂದಿನಂತೆ ಈ ಬಾರಿಯೂ ಸೆಸ್ಕ್ ವತಿಯಿಂದ ದೀಪಾಲಂಕಾರ ಮಾಡಲಾಗುತ್ತಿದ್ದು, ನಗರದ 135 ಕಿ.ಮೀ…
ಕೋಲಾರ : ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಮಲ್ಲಪ್ಪನಹಳ್ಳಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಬಾಲಕಿಯ ಶವ ಪತ್ತೆಯಾಗಿದೆ. ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಮಲ್ಲಪ್ಪನಹಳ್ಳಿಯಲ್ಲಿ ಈ ಒಂದು ಘಟನೆ ನಡೆದಿದ್ದು, ಶವ ಸಂಸ್ಕಾರಕ್ಕೆ ಬಾಲಕಿಯ ಶವ ತೆಗೆದುಕೊಂಡ ಹೋದಾಗ ಪೊಲೀಸರು ಮರಣೋತ್ತರ ಪರೀಕ್ಷೆಗಾಗಿ ಬಾಲಕಿಯ ಶವ ಶಿಫ್ಟ್ ಮಾಡಿದ್ದಾರೆ. ಹೌದು ಶವ ಸಂಸ್ಕಾರಕ್ಕೆ ಪೋಷಕರು ಮತ್ತು ಸಂಬಂಧಿಕರು ಕೊಂಡೊಯ್ದಿದ್ದರು. ಸ್ಮಶಾನದಲ್ಲಿ ಶವ ಸಂಸ್ಕಾರ ವೇಳೇ ಪೊಲೀಸರು ತಡೆದು ಶವಾಗಾರಕ್ಕೆ ಶಿಫ್ಟ್ ಮಾಡಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಅರ್ಚನಾ (17) ಎನ್ನುವ ಬಾಲಕಿಯ ಶವ ಶಿಫ್ಟ್ ಮಾಡಲಾಯಿತು. ಪೊಲೀಸರು ಮುಳಬಾಗಿಲು ಸರ್ಕಾರಿ ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ ಮುಳಬಾಗಿಲು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.
ಧಾರವಾಡ : ಧಾರವಾಡ ದಲ್ಲಿ ಲಾರಿ ಕಾರಿನ ಮಧ್ಯ ಭೀಕರವಾದ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಓರ್ವ ವ್ಯಕ್ತಿ ಸಾವನಪ್ಪಿದ್ದು, ಮೂವರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಧಾರವಾಡ ತಾಲೂಕಿನ ಅಮ್ಮಿನಭಾವಿ ಬಳಿ ಸಂಭವಿಸಿದೆ. ಮೂಡಲಗಿ ತಾಲೂಕಿನ ವಿಠಲ ಗಾಣಿಗೇರ (40) ಎನ್ನುವ ವ್ಯಕ್ತಿ ಸಾವನ್ನಪ್ಪಿದ್ದು, ಧಾರವಾಡ ಕೃಷಿ ಮೇಳಕ್ಕೆ ಆಗಮಿಸುತ್ತಿದ್ದಾಗ ಅಪಘಾತ ಸಂಭವಿಸಿದೆ. ಧಾರವಾಡ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಇನ್ನು ಗಾಯಗೊಂಡ ಮೂವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಕೊಪ್ಪಳ : ಬಿಜೆಪಿ ನಾಯಕರ ಪ್ರಚೋದನಾಕಾರಿ ಭಾಷಣ ಹೇಳಿಕೆ ಕುರಿತು ಸಚಿವ ಶಿವರಾಜ್ ತಂಗಡಿಗೆ ಆಕ್ರೋಶ ವ್ಯಕ್ತಪಡಿಸಿದ್ದು, ಮಾಜಿ ಸಂಸದ ಪ್ರತಾಪ್ ಸಿಂಹ ಅಷ್ಟೆ ಅಲ್ಲ ಎಲ್ಲ ಬಿಜೆಪಿ ನಾಯಕರನ್ನು ಗಡಿಪಾರು ಮಾಡಬೇಕು ಎಂದು ಕೊಪ್ಪಳದಲ್ಲಿ ಸಚಿವ ಶಿವರಾಜ್ ತಂಗಡಗಿ ಕಿಡಿಕಾರಿದರು. ಕೊಪ್ಪಳದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಬಿಜೆಪಿಯವರ ಮಕ್ಕಳು ಗಣೇಶ ಉತ್ಸವದಲ್ಲಿ ಕುಣಿಯುತ್ತಾರಾ? ಯಾವ ನಾಯಕರು ಮಕ್ಕಳು ಪ್ರತಿಭಟನೆಯಲ್ಲಿ ಭಾಗಿಯಾಗುತ್ತಾರೆ? ಬಡವರ ಮಕ್ಕಳನ್ನು ಪ್ರಚೋದಿಸಿ ಜಗಳ ಮಾಡಿಸುತ್ತಾರೆ. ಕೊನೆಗೆ ಅನಾಹುತಕ್ಕೀಡಾಗುವುದು ಹಿಂದೂಗಳ ಮಕ್ಕಳು ಎಂದು ಬಿಜೆಪಿ ನಾಯಕರ ವಿರುದ್ಧ ಆಕ್ರೋಶ ಹೊರ ಹಾಕಿದರು
ಮುಂಬೈ : ಬೆಟ್ಟಿಂಗ್ ಪ್ರಕರಣದಲ್ಲಿ ನಟಿ ಊರ್ವಶಿ ರೌಟೇಲಾ ಅವರಿಗೆ ಮತ್ತು ಮಾಜಿ ಸಂಸದೆ ಮಿಮಿ ಚಕ್ರವರ್ತಿ ಅವರಿಗೆ ಇಂದು ED ಅಧಿಕಾರಿಗಳಿಂದ ಸಮನ್ಸ್ ಜಾರಿ ಮಾಡಿದೆ. 1xBet ಆ್ಯಪ್ ಪ್ರಕರಣದಲ್ಲಿ ಇಬ್ಬರನ್ನೂ ED ಪ್ರಧಾನ ಕಚೇರಿಗೆ ಹಾಜರಾಗುವಂತೆ ಕೇಳಲಾಗಿದೆ. ಇದಕ್ಕೂ ಮೊದಲು, ಮಾಜಿ ಕ್ರಿಕೆಟಿಗರಾದ ಸುರೇಶ್ ರೈನಾ ಮತ್ತು ಶಿಖರ್ ಧವನ್ ಅವರನ್ನು ED ವಿಚಾರಣೆ ನಡೆಸಿತ್ತು.
ಬಾಗಲಕೋಟೆ : ಸುಮಾರು 30ಕ್ಕೂ ಹೆಚ್ಚು ಜನರಿಗೆ ಕಚ್ಚಿ ಮಂಗ ಗಾಯಗೊಳಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಆಸಂಗಿ ಗ್ರಾಮದಲ್ಲಿ ಕೊನೆಗೂ ಹುಚ್ಚು ಮಂಗ ಸೆರೆ ಸಿಕ್ಕಿದೆ. ಹೌದು ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಆಸಂಗಿ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ. ಹುಚ್ಚು ಮಂಗವು ಸುಮಾರು 30ಕ್ಕೂ ಹೆಚ್ಚು ಜನರಿಗೆ ಕಚ್ಚಿ ಗಾಯಗೊಳಿಸಿತ್ತು. ಇದೀಗ ಜನರು ಮಂಗನನ್ನು ಹಿಡಿದು ಅರಣ್ಯ ಇಲಾಖೆಗೆ ಒಪ್ಪಿಸಿದ್ದಾರೆ. ಗ್ರಾಮ ಪಂಚಾಯಿತಿ ಸಿಬ್ಬಂದಿ ಮಂಗನ ಸೆರೆ ಹಿಡಿಯುವ ತಂಡದ ಕಾರ್ಯಚರಣೆ ನಡೆಸಿದ್ದು ಜನರ ಮೈ ಮೇಲೆ ಎರಗಿ ಕರಿಮಂಗ ಕಚ್ಚಿ ಗಾಯಗೊಳಿಸಿತ್ತು. ಇದೀಗ ಮಂಗನನ್ನು ಹಿಡಿದು ಜನರು ಅರಣ್ಯ ಇಲಾಖೆಗೆ ಒಪ್ಪಿಸಿದ್ದಾರೆ. ಅರಣ್ಯ ಇಲಾಖೆ ಸಿಬ್ಬಂದಿ ಮಂಗನನ್ನು ಬೋನಿನಲ್ಲಿ ಹಾಕಿಕೊಂಡು ತೆರಳಿದ್ದಾರೆ.
ಕಲಬುರ್ಗಿ : ಕಲಬುರ್ಗಿ ಜಿಲ್ಲೆಯ ಜೇವರ್ಗಿ ಪಟ್ಟಣ ಪ್ರವೇಶಕ್ಕೆ ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಗೆ ನಿರ್ಬಂಧ ವಿಧಿಸಲಾಗಿದೆ. ನಿರ್ಬಂಧ ವಿಧಿಸಿ ಕಲ್ಬುರ್ಗಿ ಸಹಾಯಕ ಆಯುಕ್ತೆ ಸಾಹಿತ್ಯ ಆಲದಕಟ್ಟಿ ಆದೇಶ ಹೊರಡಿಸಿದ್ದಾರೆ. ಜೇವರ್ಗಿ ಪಟ್ಟಣದಲ್ಲಿ ಹಿಂದೂ ಮಹಾ ಗಣಪತಿ ವಿಸರ್ಜನಾ ಮೆರವಣಿಗೆ ಹಮ್ಮಿಕೊಂಡಿದ್ದು ಶೋಭಾ ಯಾತ್ರೆಗೆ ಪ್ರಮೋದನೆ ಮುತಾಲಿಕ್ ಚಾಲನೆ ನೀಡಲು ಬರಬೇಕಿತ್ತು ಪ್ರಚೊದನಕಾರಿ ಭಾಷಣ ಹಾಗೂ ಕೋಮುದ್ವೇಷ ಭಾಷಣದ ಹಿನ್ನೆಲೆಯಲ್ಲಿ ಮುತಾಲಿಕ್ ಗೆ ನಿರ್ಬಂಧ ವಿಧಿಸಲಾಗಿದೆ ನಾಳೆ ಬೆಳಿಗ್ಗೆ 6 ಗಂಟೆವರೆಗೆ ಮುತಾಲಿಕೆಗೆ ನಿರ್ಬಂಧ ವಿಧಿಸಲಾಗಿದೆ.







