Subscribe to Updates
Get the latest creative news from FooBar about art, design and business.
Author: kannadanewsnow05
ಬಾಗಲಕೋಟೆ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಲೋಕಸಭಾ ಚುನಾವಣೆಯಲ್ಲಿ ಮಹದೇವಪುರ ಮತಕ್ಷೇತ್ರದಲ್ಲಿ ಮತಗಳ್ಳತನ ನಡೆದಿದೆ ಎಂದು ಆರೋಪಿಸಿದ್ದರು. ಬಳಿಕ ಆಳಂದ್ ಕ್ಷೇತ್ರದಲ್ಲಿ ಮತಗಳ್ಳತನ ನಡೆದಿದೆ ಎಂದು ಕಾಂಗ್ರೆಸ್ ಶಾಸಕ ಬಿ.ಆರ್ ಪಾಟೀಲ್ ಸಹ ಆರೋಪಿಸಿದ್ದರು. ಕಳೆದ ಕೆಲವು ದಿನಗಳ ಹಿಂದೆ SIT ಸಹ ಮಾಜಿ ಶಾಸಕ ಸುಭಾಷ್ ಗುತ್ತೇದಾರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಇದೀಗ ಬಾಗಲಕೋಟೆಯಲ್ಲಿ ಸಹ ಮತಗಳ್ಳತನ ಆರೋಪ ಕೇಳಿಬಂದಿದೆ. ವೋಟಿಂಗ್ ಲೀಸ್ಟ್ ನಲ್ಲಿ ಅಪ್ರಾಪ್ತರ ಹೆಸರು ಸೇರ್ಪಡೆ ಮಾಡಿದ್ದಾರೆ ಎಂದು ಆರೋಪ ಕೇಳಿಬಂದಿದೆ. ಮುರಡಿ ಗ್ರಾಮದ ಮತಪಟ್ಟಿಯಲ್ಲಿ ಅಪ್ರಾಪ್ತರ ಹೆಸರು ಸೇರ್ಪಡೆ ಮಾಡಲಾಗಿದೆ. 18 ವರ್ಷದೊಳಗಿನ 6 ಅಪ್ರಾಪ್ತರ ಹೆಸರು ಮತಪಟ್ಟಿಗೆ ಸೇರ್ಪಡೆ ಮಾಡಲಾಗಿದೆ. ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ಮುರಡಿ ಗ್ತಾಮದಲ್ಲಿ ನಡೆದಿದೆ. ಶರಣಪ್ಪ ಗೋಣಿ, ಯಲ್ಲಾಲಿಂಗ ಬನ್ನಿ, ಭೀಮಪ್ಪ ಬನ್ನಿ, ಪ್ರದೀಪ್ ಬನ್ನಿ, ಮಂಜುನಾಥ್ ಬನ್ನಿ ಹಾಗು ಮಹಾಂತೇಶ್ ಗೋಣಿ ಎಂಬುವವರ ಹೆಸರು ಸೇರ್ಪಡೆ ಮಾಡಲಾಗಿದೆ. 15, 16, 17 ವಯೋಮಾನದವರ ಹೆಸರು…
ಮೈಸೂರು : ಜನವರಿಯಲ್ಲಿ ಅಹಿಂದ ಸಮಾವೇಶ ನಡೆಸಲಾಗುತ್ತಿದ್ದು, ಅಹಿಂದ ಸಮಾವೇಶದ ಬಗ್ಗೆ ಜೆಡಿಎಸ್ ವರಿಷ್ಠ ದೇವೇಗೌಡ ವ್ಯಂಗ್ಯವಾಡಿದ್ದು ಸಿಎಂ ಸಿದ್ದರಾಮಯ್ಯ ಮೈಸೂರು ನಲ್ಲಿ ಅಹಿಂದ ಸಮಾವೇಶ ಮಾಡುತ್ತಿದ್ದಾರೆ ಅಹಿಂದ ವ್ಯಾಖ್ಯಾನ ಮಾಡಲು ನನಗೆ ಕಷ್ಟವಾಗುತ್ತದೆ. ಅಹಿಂದ ಹೇಳಲು ಸ್ವಲ್ಪ ತಡವರಿಸುತ್ತೇವೆ. ಹೇಳುವುದು ಸಹ ಕಷ್ಟ ಆಗಿದೆ ಎಂದು ವ್ಯಂಗ್ಯವಾಡಿದರು. ಬೆಂಗಳೂರಲ್ಲಿ ಮಾತನಾಡಿದ ಅವರು, ಮಹಿಳೆಯರಿಗೆ ಚುನಾವಣೆಯಲ್ಲಿ ಮೀಸಲಾತಿ ಕೊಟ್ಟವರು ಯಾರು? ಮುಸ್ಲಿಂ ಸಮುದಾಯಕ್ಕೂ ಮೀಸಲಾತಿ ಕೊಟ್ಟಿದ್ದೇನೆ ನಾಯಕ ಸಮುದಾಯಕ್ಕೆ ಮೀಸಲಾತಿ ಕೊಟ್ಟವರು ಯಾರು? ಸಿದ್ದರಾಮಯ್ಯ ಅವರನ್ನು ನಾವು ಗುರುತಿಸಿದ್ದೇವೆ ಅಂತ ಹೇಳುವುದಿಲ್ಲ ನನ್ನ ಬಗ್ಗೆ ಅವರು ಎಷ್ಟಾದರೂ ಟೀಕೆ ಮಾಡಲಿ. ಸಿದ್ದರಾಮಯ್ಯ ಮೊದಲ ಮಗ ಮೃತಪಟ್ಟಾಗ ನಾನು ಮನೆಗೆ ಹೋಗಿದ್ದೆ ಸಿಎಂ ಸಿದ್ದರಾಮಯ್ಯನವರ ಎರಡನೇ ಮಗ ಡಾಕ್ಟರ್ ಆಗಿದ್ದಾರೆ ಯಾವ ಲೇಬಲ್ ಇಟ್ಟುಕೊಂಡು ಅಹಿಂದ ಅಂದ ಮಾತನಾಡುತ್ತೀರಿ? ಎಂದರು. ಕಳೆದ ಚುನಾವಣೆಯಲ್ಲಿ ಎಲ್ಲಿ ಸ್ಪರ್ಧಿಸಬೇಕು ಎಂದು ಚರ್ಚಿಸಿದ್ದರು. ಕೋಲಾರ ಬಾದಾಮಿ ಹೀಗೆ ಎಲ್ಲಿ ನಿಲ್ಲಬೇಕು ಎಂದು ಚರ್ಚೆಯಾಗಿತ್ತು. ಅಹಿಂದ ವೋಟ್ ಹಾಕುತ್ತಾರೆ…
ಬೆಂಗಳೂರು : ನಿನ್ನೆ ರಾಜ್ಯಾದ್ಯಂತ ಸುದೀಪ್ ನಟನೆಯ ಮಾರ್ಕ್ ಹಾಗೂ ಶಿವರಾಜ್ ಕುಮಾರ್, ಉಪೇಂದ್ರ ಹಾಗೂ ರಾಜ ಬಿ ಶೆಟ್ಟಿ ನಟನೆಯ 45 ಚಲನಚಿತ್ರ ಬಿಡುಗಡೆಯಾಗಿದ್ದು, ಬಾಕ್ಸ್ ಆಫೀಸ್ ನಲ್ಲಿ ಸುದೀಪ್ ನಟನೆಯ ಮಾರ್ಕ್ ಸಿನಿಮಾ ಇದೀಗ ಅಬ್ಬರಿಸುತ್ತಿದ್ದು, ಮೊದಲ ದಿನವೇ 15 ಕೋಟಿ 90 ಲಕ್ಷ ಗಳಿಸಿದೆ. ಫಸ್ಟ್ ಡೇ ಕಲೆಕ್ಷನ್ ನಲ್ಲಿ ಮಾರ್ಕ್ ಚಲನಚಿತ್ರ ಧೂಳೆಬ್ಬಿಸಿದೆ. ಇನ್ನು ಇದೇ ವಿಚಾರಕ್ಕೆ ಸಂಬಂಧಪಟ್ಟಂತೆ ನಟ ಕಿಚ್ಚ ಸುದೀಪ್ ಟ್ವೀಟ್ ನಲ್ಲಿ ಸಂತೋಷ ಹಂಚಿಕೊಂಡಿದ್ದಾರೆ. ನಿಮ್ಮ ಬೆಂಬಲವನ್ನು ಕಂಡು ನನಗೆ ಮಾತನಾಡಲು ಪದಗಳೇ ಸಿಗುತ್ತಿಲ್ಲ ಎಂದಿದ್ದಾರೆ. ಮಾರ್ಕ್ ಚಿತ್ರಕ್ಕೆ ಎಲ್ಲೆಡೆಯಿಂದ ಸಿಗುತ್ತಿರುವ ಪ್ರೀತಿ ಮತ್ತು ಮೆಚ್ಚುಗೆ ಕಂಡು ನಾನು ಧನ್ಯನಾಗಿದ್ದೇನೆ. ಇದು ನಿಜಕ್ಕೂ ಅದ್ಭುತ. ಅಭಿಮಾನಿಗಳು ಚಿತ್ರವನ್ನು ಮೆಚ್ಚಿಕೊಳ್ಳುತ್ತಿರುವುದು, ಚಿತ್ರಮಂದಿರಗಳಲ್ಲಿ ಕುಣಿಯುತ್ತಾ, ಸಂಭ್ರಮಿಸುತ್ತಾ, ಕಿರುಚುತ್ತಾ ಚಿಯರ್ ಮಾಡುತ್ತಿರುವ ಅನೇಕ ಪೋಸ್ಟ್ಗಳನ್ನು ನಾನು ನೋಡಿದೆ. ಸಿನಿಮಾ ಮೇಲೆ ನೀವು ತೋರಿಸುತ್ತಿರುವ ಈ ಮಟ್ಟದ ಕ್ರೇಜ್ ಮತ್ತು ಬೆಂಬಲವನ್ನು ಕಂಡು ನನಗೆ ಮಾತನಾಡಲು ಪದಗಳೇ…
ಮೈಸೂರು : ಇಲ್ಲಿನ ವಿಶ್ವವಿಖ್ಯಾತ ಅರಮನೆ ಬಳಿ ಬಲೂನ್ಗೆ ತುಂಬುವ ಹೀಲಿಯಂ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಓರ್ವ ಸಾವನ್ನಪ್ಪಿ, ಐವರು ಗಾಯಗೊಂಡಿರುವ ಘಟನೆ ಗುರುವಾರ ರಾತ್ರಿ ಸಂಭವಿಸಿದೆ. ವಿಶ್ವ ವಿಖ್ಯಾತ ಮೈಸೂರು ಅರಮನೆಯ ಬಳಿ ಜಯಮಾರ್ತಾಂಡ ದ್ವಾರದ ಬಳಿ ಈ ಘಟನೆ ನಡೆದಿದೆ. ಬಲೂನ್ಗೆ ಬಳಸುವ ಹೀಲಿಯಂ ಗ್ಯಾಸ್ನ ಸಿಲಿಂಡರ್ ಸ್ಫೋಟಗೊಂಡಿದೆ. ಈ ವೇಳೆ ಇಬ್ಬರು ಸಾವನ್ನಪ್ಪಿದ್ದಾರೆ. ಗಾಯಗೊಂಡಿರುವ ಐವರಲ್ಲಿ ಇಬ್ಬರು ಪರಿಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಕೂಡಲೇ ಕೆ.ಆರ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಉತ್ತರ ಪ್ರದೇಶದ ಕನೌಜ್ ಜಿಲ್ಲೆಯ ಸಲೀಂ ಖಮರುದ್ದೀನ್ (40) ಮೃತ ವ್ಯಕ್ತಿ. ಇದೀಗ ಈ ಒಂದು ಅರಮನೆಯ ಬಳಿ ಇಲಿಂ ಸಿಲಿಂಡರ್ ಸ್ಫೋಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಸಲೀಂ ಜೊತೆಗೆ ಇದ್ದ ಇಬ್ಬರನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಜೊತೆಗೆ ಇಬ್ಬರೂ ಸಹ ಮಾರಾಟಕ್ಕೆ ಬಂದಿದ್ದರು ಎನ್ನಲಾಗಿದೆ ಇದೀಗ ಉತ್ತರ ಪ್ರದೇಶದ ಮೂಲದ ಇಬ್ಬರು ವನ್ನು ಪೊಲೀಸರು ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಸಲೀಂ ಜೊತೆಗೆ ಇಬ್ಬರು ಸಹ ಬಲೂನ್…
ಬೆಳಗಾವಿ : ಬೆಳಗಾವಿಯಲ್ಲಿ ಘೋರ ಘಟನೆ ಒಂದು ನಡೆದಿದ್ದು ಈಜಲು ಹೋಗಿದ್ದ ಬಾಲಕರು ಇಬ್ಬರು ಕಾಲುವೆಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಚುಂಚನೂರು ಬಳಿ ಈ ಒಂದು ದುರಂತ ಸಂಭವಿಸಿದೆ. ಮೃತ ಬಾಲಕರನ್ನು ಬಸವರಾಜ ಸೋಮಣ್ಣವರ್ (10) ಹಾಗೂ ಹನುಮಂತ (10) ಎಂದು ತಿಳಿದುಬಂದಿದೆ ನೀರಿನ ರಭಸ ಹೆಚ್ಚಾಗಿ ಕಾಲುವೆಯಲ್ಲಿ ಬಾಲಕರು ಕೊಚ್ಚಿ ಹೋಗಿದ್ದಾರೆ. ಸದ್ಯ ಇಬ್ಬರು ಬಾಲಕರ ಶವಗಳನ್ನು ಸ್ಥಳೀಯರು ಹಾಗೂ ಪೊಲೀಸರು ಹೊರಗಡೆ ತೆಗೆದಿದ್ದಾರೆ ಕಟಕೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಬೆಂಗಳೂರಲ್ಲಿ ಘೋರ ದುರಂತ ಒಂದು ಸಂಭಾವಿಸಿದ್ದು, ಕಟ್ಟಡದ ಮೂರನೇ ಮಹಡಿಯಿಂದ ಆಯತಪ್ಪಿ ಬಿದ್ದು ವ್ಯಕ್ತಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಪಟ್ಟಣದ ಮುತ್ತುರಿನಲ್ಲಿ ಈ ಒಂದು ಘಟನೆ ಸಂಭವಿಸಿದೆ ದೊಡ್ಡಬಳ್ಳಾಪುರದ ಮುತ್ತೂರು ನಿವಾಸಿಯಾದ ಸೋಮಶೇಖರ (50) ಮೃತ ದುರ್ದೈವಿ ಆಗಿದ್ದು ನೀರಿನ ಟ್ಯಾಂಕ್ ವಾಲ್ ರಿಪೇರಿ ಮಾಡಲು ಹೋಗಿದ್ದಾಗ ದುರಂತ ಸಂಭವಿಸಿದೆ. ಸೋಮಶೇಖರ್ ಬಾಡಿಗೆ ಮನೆಯಲ್ಲಿ ಕುಟುಂಬದ ಜೊತೆಗೆ ವಾಸವಾಗಿದ್ದರು. ಘಟನೆ ಕುರಿತು ದೊಡ್ಡಬಳ್ಳಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದಲ್ಲಿ ಲಾರಿ ಡಿಕ್ಕಿ ಹೊಡೆದು ಬೈಕ್ ನಲ್ಲಿ ಇದ್ದಂತಹ ನಾಲ್ವರು ಯುವಕರು ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೃತರ ಕುಟುಂಬದ ಸದಸ್ಯರಿಗೆ 5 ಲಕ್ಷ ಪರಿಹಾರ ನೀಡಲು ಸಿಎಂ ಸಿದ್ದರಾಮಯ್ಯ ಇದೀಗ ಸೂಚನೆ ನೀಡಿದ್ದಾರೆ. ಅಧಿಕಾರಿಗಳಿಗೆ ಪರಿಹಾರ ವಿತರಣೆಗೆ ಕ್ರಮ ವಹಿಸಲು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಘಟನೆ ಹಿನ್ನೆಲೆ? ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಒಂದೇ ಗ್ರಾಮದ ನಾಲ್ವರು ಯುವಕರು ಮೃತಪಟ್ಟಿದ್ದಾರೆ. ಚಿಕ್ಕಬಳ್ಳಾಪುರ ತಾಲೂಕಿನ ಅಜ್ಜವಾರ ಗೇಟ್ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಅಜ್ಜವಾರ ಗ್ರಾಮದ ನರಸಿಂಹಮೂರ್ತಿ. ನಂದೀಶ್, ಅರುಣ್, ಮನೋಜ್ ಮೃತಪಟ್ಟಿದ್ದಾರೆ. ಕ್ರಿಸ್ಮಸ್ ಹಬ್ಬದ ಹಿನ್ನೆಲೆಯಲ್ಲಿ ಈ ನಾಲ್ವರು ಚಿಕ್ಕಬಳ್ಳಾಪುರ ನಗರದ ಚರ್ಚ್ಗಳಿಗೆ ಭೇಟಿ ನೀಡಿ ಮರಳಿ ಸ್ವಗ್ರಾಮದತ್ತ ಹೊರಟಿದ್ದರು. ಮೃತ ನಾಲ್ವರು ಯುವಕರು ಒಂದೇ ಬೈಕಿನಲ್ಲಿ ಹೊರಟಿದ್ದರು. ಈ ವೇಳೆ ಟಿಪ್ಪರ್ ಲಾರಿ ಅಡ್ಡ ಬಂದಿದ್ದು ಮುಖಾಮುಖಿ ಡಿಕ್ಕಿ ಹೊಡೆದಿದೆ. ಡಿಕ್ಕಿಯಾದ ರಭಸಕ್ಕೆ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದ ಬಳಿಕ ಟಿಪ್ಪರ್…
ಮಂಡ್ಯ : ಕೆಆರ್ ಪೇಟೆ ತಾಲೂಕಿನಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು ರಸ್ತೆಯಲ್ಲಿ ರಾಗಿ ಒಕ್ಕಣಿ ವೇಳೆ ಕಾರು ಪಟ್ಟಿಯಾಗಿದೆ ಕೆಆರ್ ಪೇಟೆ ತಾಲೂಕಿನ ಅಶೋಕನಗರದಲ್ಲಿ ಈ ಒಂದು ಘಟನೆ ಸಂಭವಿಸಿದ್ದು ಕಾರಿನಲ್ಲಿ ಇದ್ದಂತಹ ಇಬ್ಬರಲ್ಲಿ ಒಬ್ಬ ಸ್ಥಳದಲ್ಲೇ ಸಾವನ್ನಪ್ಪಿದ್ದು ಮೃತ ಯುವಕನನ್ನು ಪ್ರಜ್ವಲ್ (19) ಎಂದು ತಿಳಿದುಬಂದಿದ್ದು, ಘಟನೆಯಲ್ಲಿ 26 ವರ್ಷದ ಕಾವ್ಯ ಸ್ಥಿತಿ ಗಂಭೀರವಾಗಿದೆ. ಕೆ ಆರ್ ಪೇಟೆ ಗ್ರಾಮತರ ವ್ಯಾಪ್ತಿಯಲ್ಲಿ ಈ ಒಂದು ಅಪಘಾತ ನಡೆದಿದೆ. ಪ್ರಕರಣದ ಕಲಿಸಿಕೊಂಡ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
ಬೆಂಗಳೂರು : ಬೆಂಗಳೂರಿನಲ್ಲಿ ಜಯದೇವ ಆಸ್ಪತ್ರೆಯಲ್ಲಿ ಸ್ಟಾಫ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದ ಮಮತಾ (39) ಭೀಕರವಾಗಿ ಕೊಲೆಯಾಗಿದ್ದು ಇದೀಗ ಈ ಒಂದು ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅದೇ ಆಸ್ಪತ್ರೆಯಲ್ಲಿ ಸ್ಟಾಪ್ ನರ್ಸ್ ಆಗಿದ್ದ ಸುಧಾಕರ್ ಎಂಬಾತನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಹೌದು ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಜಯದೇವ ಸ್ಟಾಫ್ ನರ್ಸ್ ಸುಧಾಕರ್ ನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಸುಧಾಕರ್ ಮತ್ತು ಮಮತಾ ಜಯದೇವ ಆಸ್ಪತ್ರೆಯಲ್ಲಿ ಸ್ಟಾಫ್ ನರ್ಸ್ ಗಳಾಗಿದ್ದರು. ಕಳೆದ ಒಂದು ವರ್ಷದಿಂದ ಇಬ್ಬರು ಪ್ರೀತಿ ಮಾಡುತ್ತಿದ್ದರು. ವಯಸ್ಸಿನಲ್ಲಿ ಮಮತಾಗಿಂತ ಸುಧಾಕರ್ ಚಿಕ್ಕವನಾಗಿದ್ದ. ಇದು ಸುಧಾಕರ್ ಗೆ ಗೊತ್ತಿರಲಿಲ್ಲ. ಇತ್ತೀಚಿಗೆ ಸುಧಾಕರ್ ಗೆ ಬೇರೆ ಹುಡುಗಿ ಜೊತೆಗೆ ನಿಶ್ಚಿತಾರ್ಥ ಆಗಿತ್ತು. ಎಂಗೇಜ್ಮೆಂಟ್ ವಿಚಾರ ಗೊತ್ತಾಗಿ ಮಮತಾ ಜಗಳ ಮಾಡಿದ್ದಾಳೆ. ನನ್ನ ಮದುವೆ ಆಗುವಂತ ಪಟ್ಟು ಹಿಡಿದಿದ್ದಾಳೆ ಇಲ್ಲದಿದ್ದರೆ ನಿನ್ನ ಹೆಸರು ಬರೆದು ಸಾಯುತ್ತೇನೆ ಎಂದು ಧಮ್ಕಿ ಹಾಕಿದ್ದಾಳೆ . ನಿನ್ನ ಮತ್ತು ನಿನ್ನ ಕುಟುಂಬದವರನ್ನು ಜೈಲಿಗೆ ಕಳಿಸುವುದಾಗಿ…
ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಭೀಕರವಾದ ಅಪಘಾತ ಸಂಭವಿಸಿದ್ದು, ಮರಕ್ಕೆ ಕಾರುಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲಿ ಸಾವನ್ನಪ್ಪಿದ್ದು ನಾಲ್ವರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಬೆಂಗಳೂರಿನ ನೆಲಮಂಗಲ ತಾಲೂಕಿನ ತೋಟಗೇರಿ ಕ್ರಾಸ್ ನಲ್ಲಿ ಈ ಒಂದು ಭೀಕರ ಅಪಘಾತ ಸಂಭವಿಸಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನ ತೋಟಗೆರೆ ಕ್ರಾಸ್ ನಲ್ಲಿ ಗೌರಿಬಿದನೂರು ಮೂಲದ ಹರೀಶ್ (39) ಹಾಗೂ ವೀರಭದ್ರ (80) ಸಾವನ್ನಪ್ಪಿದ್ದಾರೆ ಇನ್ನು ಕಾರಿನಲ್ಲಿ ಇದ್ದಂತಹ ಗೌರಮ್ಮ, ಮೈತ್ರಿ, ಸಿರಿ ಹಾಗೂ ವಂದನಾಗೆ ಗಂಭೀರವಾದ ಗಾಯಗಳಾಗಿದ್ದು ನೆಲಮಂಗಲದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ದಾಸರಹಳ್ಳಿಯಲ್ಲಿ ಗೌರಿಬಿದನೂರು ಮೂಲದ ಕುಟುಂಬ ವಾಸವಿತ್ತು. ಇನ್ನು ಮೃತ ಹರೀಶ್ ಸಾಫ್ಟ್ವೇರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು. ಜಮೀನು ನೋಡಿಕೊಂಡು ವಾಪಸ್ ಆಗುವಾಗ ಈ ಒಂದು ಅಪಘಾತ ಸಂಭವಿಸಿದೆ. ಘಟನೆ ಕುರಿತಂತೆ ಸ್ಥಳಕ್ಕೆ ಮಾದನಾಯಕನಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.














