Author: ಸುರೇಶ್‌

"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಅಂತಾರಾಷ್ಟ್ರೀಯ ಏರ್ಪೋರ್ಟ್ ನಲ್ಲಿ 2.77 ಕೋಟಿ ಮೌಲ್ಯದ ಗಾಂಜಾ ವಶಕ್ಕೆ ಪಡೆಯಲಾಗಿದೆ ಏರ್ಪೋರ್ಟಲ್ಲಿ ಕಷ್ಟಂ ಅಧಿಕಾರಿಗಳು 2.77 ಕೋಟಿ ರೂಪಾಯಿ ಮೌಲ್ಯದ 7.92 ಕೆಜಿ ಗಾಂಜಾ ವಶಕ್ಕೆ ಪಡೆದಿದ್ದಾರೆ. ಪ್ರಯಾಣಿಕ ಬ್ಯಾಂಕಾಕ್ ನಿಂದ ಬೆಂಗಳೂರಿಗೆ ತಪಾಸಣೆಗೆ ಒಳಪಡಿಸಿದ್ದಾರೆ. ಈ ವೇಳೆ ಪ್ರಯಾಣಿಕನ ಬ್ಯಾಕ್ ತಪಾಸನೆ ಸಂದರ್ಭದಲ್ಲಿ ಗಾಂಜಾ ಪತ್ತೆಯಾಗಿದೆ. ಆರೋಪಿಯನ್ನು ವಶಕ್ಕೆ ಪಡೆದು ಕಸ್ಟಮ್ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದಾರೆ. ಎನ್ ಡಿ ಪಿ ಎಸ್ ಕಾಯ್ದೆ ಅಡಿ ಆರೋಪಿ ವಿರುದ್ಧ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿ ಭೀಕರವಾದ ಸರಣಿ ಅಪಘಾತ ಸಂಭವಿಸಿದ್ದು, ಲಾರಿ ಚಾಲಕನ ಅಜಾಗರೂಕತೆಗೆ ಅಪಘಾತ ಸಂಭವಿಸಿದೆ. ಕೂದಲೆಳೆ ಅಂತರದಲ್ಲಿ ವಾಹನ ಸವಾರರು ಬಚಾವ್ ಆಗಿದ್ದಾರೆ. ದೇವನಹಳ್ಳಿಯ ಲಕ್ಷ್ಮಿಪುರ ಗೇಟ್ ಬಳಿ ಈ ಒಂದು ಅಪಘಾತ ಸಂಭವಿಸಿದ್ದು ಸಿಸಿಟಿವಿ ಕ್ಯಾಮೆರಾದಲ್ಲಿ ಈ ಒಂದು ಭೀಕರ ಅಪಘಾತದ ದೃಶ್ಯ ಸೆರೆಯಾಗಿದೆ. ದೊಡ್ಡಬಳ್ಳಾಪುರದಿಂದ ದೇವನಹಳ್ಳಿ ಕಡೆಗೆ ಲಾರಿ ಬರುತ್ತಿತ್ತು ಈ ವೇಳೆ ನಿಯಂತ್ರಣ ತಪ್ಪಿ, ಮುಂದಿರುವ ಟ್ರ್ಯಾಕ್ಟರ್ ಗೆ ಡಿಕ್ಕಿ ಹೊಡೆದು ಪಕ್ಕದ ರಸ್ತೆಗೆ ನುಗ್ಗಿದ್ದು, ಅಲ್ಲದೆ ಎದುರುಗಡೆ ಬರುತ್ತಿದ್ದಂತಹ ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದಿದೆ. ರಸ್ತೆ ಪಕ್ಕದ ಹಳ್ಳಕ್ಕೆ ಬೋಲೇರೋ ಆಹಾರ ಉರುಳಿ ಬಿದ್ದಿದೆ. ಇಷ್ಟೆಲ್ಲಾ ಭೀಕರ ಅಪಘಾತ ಸಂಭವಿಸಿದರೂ ಕೂಡ ಅದೃಷ್ಟವಶಾತ್ ಎಲ್ಲಾ ಚಾಲಕರು ಕೂಡ ಪ್ರಾಣಭಾಯದಿಂದ ಪಾರಾಗಿದ್ದು ಪವಾಡವೇ ಸರಿ ಎನ್ನಲಾಗಿದೆ.

Read More

ತುಮಕೂರು : ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಪದಗ್ರಹಣ ಮಾಡಿದ್ದು ಅಲ್ಲದೆ ಇದೇ ಸಂದರ್ಭದಲ್ಲಿ 13 ಸಚಿವರು ಕೂಡ ಪದಗ್ರಹಣ ಮಾಡಿದರು. ಇದೀಗ ಜೂನ್ 23 ಅಥವಾ 25 ರಂದು ಸಂಪುಟ ವಿಸ್ತರಣೆ ಆಗುವ ವಿಶ್ವಾಸ ಇದೆ ಎಂದು ಶಾಸಕ ಟಿಬಿ ಜಯಚಂದ್ರ ತಿಳಿಸಿದರು. ತುಮಕೂರಿನಲ್ಲಿ ಮಾತನಾಡಿದ ಅವರು ದೆಹಲಿ ವಿಶೇಷ ಪ್ರತಿನಿಧಿಯಾಗಿ ಅನೇಕ ಸಭೆಗಳನ್ನು ನಾನು ಮಾಡಿದ್ದೇನೆ. ನಾನು ಕೂಡ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದೇನೆ. ಎಲ್ಲೋ ಒಂದು ಕಡೆ ಸಚಿವ ಸ್ಥಾನ ಸಿಗುತ್ತೆ ಎಂಬ ವಿಶ್ವಾಸವಿದೆ. ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ನಾನು ಸಹ ಮನವಿ ಮಾಡಿದ್ದೇನೆ. ರಾಜಕೀಯದಲ್ಲಿ ಯಾರೂ ಗ್ರೀನ್ ಸಿಗ್ನಲ್ ಮತ್ತು ಪಾಸಿಟಿವ್ ಕೊಡಲ್ಲ ವರಿಷ್ಠರು ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂಬ ವಿಶ್ವಾಸವಿದೆ. ರಾಜ್ಯ ಜಿಲ್ಲೆ ಮತ್ತು ಕ್ಷೆತ್ರಕ್ಕೆ ಯಾವ ರೀತಿ ಕೆಲಸ ಮಾಡಬೇಕು ಎಂಬ ಅರಿವು ಇದೆ ಎಂದು ತುಮಕೂರಿನಲ್ಲಿ ಕಾಂಗ್ರೆಸ್ ಶಾಸಕ ಟಿ ಬಿ ಜಯಚಂದ್ರ ಹೇಳಿಕೆ ನೀಡಿದರು.

Read More

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮಾದಕ ವಸ್ತುಗಳ ಜಾಲದ ವಿರುದ್ಧ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ನಗರದ ಪ್ರತ್ಯೇಕ ಕಡೆಗಳಲ್ಲಿ ನಡೆದ ಎರಡು ಪ್ರಮುಖ ದಾಳಿಗಳಲ್ಲಿ ಒಟ್ಟು 2 ಕೋಟಿ 90 ಲಕ್ಷ ರೂಪಾಯಿಗೂ ಅಧಿಕ ಮೌಲ್ಯದ ಡ್ರಗ್ಸ್ ಅನ್ನು ವಶಪಡಿಸಿಕೊಳ್ಳಲಾಗಿದ್ದು, ಮೂವರು ಅಂತರರಾಜ್ಯ ಹಾಗೂ ಅಂತರರಾಷ್ಟ್ರೀಯ ಡ್ರಗ್ ಪೆಡ್ಲರ್‌ಗಳನ್ನು ಸಲಾಖೆಗಳ ಹಿಂದೆ ತಳ್ಳಲಾಗಿದೆ. ಹೆಬ್ಬಾಳ ಪೊಲೀಸರ ಬಲೆಗೆ ಬಿದ್ದ ಇಮ್ರಾನ್ ಪಾಷಾ ಮೊದಲ ಪ್ರಕರಣದಲ್ಲಿ, ನಗರದ ಹೆಬ್ಬಾಳ ಠಾಣೆಯ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಕೋಟ್ಯಂತರ ರೂಪಾಯಿ ಮೌಲ್ಯದ ಡ್ರಗ್ಸ್ ಸೀಜ್ ಮಾಡಿದ್ದಾರೆ. ಹೈಡ್ರೋ ಗಾಂಜಾ ಮಾರಾಟ ದಂಧೆಯಲ್ಲಿ ತೊಡಗಿದ್ದ ಪ್ರಮುಖ ಆರೋಪಿ ಇಮ್ರಾನ್ ಪಾಷಾ ಎಂಬಾತನನ್ನು ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ. ಬಂಧಿತನಿಂದ ಬರೋಬ್ಬರಿ 2.20 ಕೋಟಿ ರೂಪಾಯಿ ಮೌಲ್ಯದ ಸುಮಾರು 3 ಕೆಜಿ 180 ಗ್ರಾಂ ತೂಕದ ಅತ್ಯಂತ ದುಬಾರಿ ಹೈಡ್ರೋ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಮಹಾರಾಷ್ಟ್ರದಿಂದ ಹರಿದು ಬರುತ್ತಿತ್ತು ಮಾದಕ ದ್ರವ್ಯ ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಬಂಧಿತ ಆರೋಪಿ…

Read More

ಬೆಂಗಳೂರು: ಮುಖ್ಯಮಂತ್ರಿ ಹಾಗೂ 13 ಸಚಿವರ ಪದಗ್ರಹಣ ಪ್ರಕ್ರಿಯೆಯನ್ನು ಪ್ರಶ್ನಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ಸಲ್ಲಿಸಿದ್ದ ಅರ್ಜಿದಾರನಿಗೆ ಹೈಕೋರ್ಟ್ ಭಾರಿ ಆಘಾತ ನೀಡಿದೆ. ಈ ಅರ್ಜಿಯನ್ನು ಸಂಪೂರ್ಣವಾಗಿ ವಜಾಗೊಳಿಸಿರುವ ಮಾನ್ಯ ನ್ಯಾಯಾಲಯವು, ಕಾನೂನನ್ನು ತಪ್ಪಾಗಿ ಅರ್ಥೈಸಿ ನ್ಯಾಯಾಲಯದ ಸಮಯ ವ್ಯರ್ಥ ಮಾಡಿದ್ದಕ್ಕಾಗಿ ಅರ್ಜಿದಾರನಿಗೆ ಬರೋಬ್ಬರಿ 50,000 ರೂಪಾಯಿಗಳ ದಂಡವನ್ನು ವಿಧಿಸಿ ಆದೇಶ ಹೊರಡಿಸಿದೆ. ಧಾರವಾಡದ ಮಂಗಳಪ್ಪ ಎಂಬವರಿಂದ ಅರ್ಜಿ ಸಲ್ಲಿಕೆ: ಧಾರವಾಡ ಮೂಲದ ಮಂಗಳಪ್ಪ ಎಂಬುವವರೇ ಹೈಕೋರ್ಟ್ ಮೆಟ್ಟಿಲೇರಿದ್ದ ಅರ್ಜಿದಾರರಾಗಿದ್ದಾರೆ. ರಾಜ್ಯ ಸರ್ಕಾರದಲ್ಲಿ ಮುಖ್ಯಮಂತ್ರಿಗಳು ಸೇರಿದಂತೆ 13 ಸಚಿವರು ಅಧಿಕಾರ ಸ್ವೀಕರಿಸಿದ್ದ ಪದಗ್ರಹಣ ಪ್ರಕ್ರಿಯೆಯು ಸಂವಿಧಾನಬಾಹಿರವಾಗಿದೆ ಎಂದು ಆರೋಪಿಸಿ ಅವರು ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ದಾಖಲಿಸಿದ್ದರು. ಆದರೆ ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಪೀಠವು, ಅರ್ಜಿಯಲ್ಲಿ ಯಾವುದೇ ಸತ್ಕಾಲಿಕ ಅಂಶಗಳಿಲ್ಲ ಎಂದು ಅಭಿಪ್ರಾಯಪಟ್ಟಿತು. ಸಂವಿಧಾನದ ನಿಯಮವನ್ನು ತಪ್ಪಾಗಿ ಅರ್ಥೈಸಿದ ಅರ್ಜಿದಾರ: ಅರ್ಜಿದಾರ ಮಂಗಳಪ್ಪ ಅವರು ಭಾರತೀಯ ಸಂವಿಧಾನದ ವಿಧಿ 164(1A) ಅನ್ನು ಸಂಪೂರ್ಣವಾಗಿ ತಪ್ಪಾಗಿ ಅರ್ಥೈಸಿಕೊಂಡು ಈ ಅರ್ಜಿ ಸಲ್ಲಿಸಿದ್ದರು…

Read More

ಬೆಂಗಳೂರು :  ಖಾತೆ ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಕಳೆದ ಕೆಲವು ದಿನಗಳಿಂದ ನಡೆಯುತ್ತಿದ್ದ ಹಗ್ಗಜಗ್ಗಾಟ ಹಾಗೂ ಅಸಮಾಧಾನಕ್ಕೆ ಕೊನೆಗೂ ತೆರೆ ಬಿದ್ದಿದೆ. ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಸಚಿವ ಕೃಷ್ಣ ಬೈರೇಗೌಡ ಅವರು ಕೊನೆಗೂ ತಮ್ಮ ಖಾತೆಯನ್ನು ವಹಿಸಿಕೊಂಡು ಅಧಿಕೃತವಾಗಿ ಕಾರ್ಯಪ್ರವೃತ್ತರಾಗಿದ್ದಾರೆ. ಆ ಮೂಲಕ ಕಳೆದ 13 ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ಸಚಿವರ ಅಸಮಾಧಾನದ ಪರ್ವ ಸುಖಾಂತ್ಯ ಕಂಡಂತಾಗಿದೆ. ಅಸಮಾಧಾನಕ್ಕೆ ಕಾರಣವೇನಾಗಿತ್ತು? ರಾಜ್ಯ ಸಚಿವ ಸಂಪುಟ ರಚನೆಯಾಗಿ ಖಾತೆಗಳನ್ನು ಹಂಚಿಕೆ ಮಾಡಿದ ಸಂದರ್ಭದಲ್ಲಿ ತಮಗೆ ಪೂರ್ಣಪ್ರಮಾಣದ ಮತ್ತು ಪ್ರಮುಖ ಖಾತೆಯನ್ನು ನೀಡಿಲ್ಲ ಎಂಬ ಕಾರಣಕ್ಕೆ ಕೃಷ್ಣ ಬೈರೇಗೌಡರು ತೀವ್ರ ಅಸಮಾಧಾನಗೊಂಡಿದ್ದರು. ತಮಗೆ ಹಂಚಿಕೆಯಾಗಿದ್ದ ಖಾತೆಯ ಜವಾಬ್ದಾರಿಯನ್ನು ವಹಿಸಿಕೊಳ್ಳಲು ನಿರಾಕರಿಸಿದ್ದ ಅವರು, ಕಳೆದ ಎರಡು ವಾರಗಳಿಂದ ಸರ್ಕಾರದ ಅಧಿಕೃತ ಚಟುವಟಿಕೆಗಳಿಂದ ಹಾಗೂ ಕಚೇರಿಯಿಂದ ದೂರವೇ ಉಳಿಯುವ ಮೂಲಕ ತಮ್ಮ ಪ್ರತಿಭಟನೆಯನ್ನು ದಾಖಲಿಸಿದ್ದರು. ಸುರ್ಜೆವಾಲಾ ಎಂಟ್ರಿ ಮತ್ತು ಸಂಧಾನ ಯಶಸ್ಸು ಸಚಿವರ ಈ ದಿಢೀರ್ ಅಸಮಾಧಾನ ಮತ್ತು ಖಾತೆ ವಹಿಸಿಕೊಳ್ಳದ…

Read More

ನವದೆಹಲಿ: ಕಳೆದ ಮೇ 3 ರಂದು ನಡೆದ ದೇಶದ ಪ್ರತಿಷ್ಠಿತ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್’ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಅತ್ಯಂತ ಮಹತ್ವದ ಹಾಗೂ ಕಠಿಣ ಕ್ರಮವೊಂದನ್ನು ಕೈಗೊಂಡಿದೆ. ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ್ದ ಈ ಅಕ್ರಮವನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಮಾಹಿತಿ ಮತ್ತು ತಂತ್ರಜ್ಞಾನ ಸಚಿವಾಲಯವು, ಜನಪ್ರಿಯ ಸಾಮಾಜಿಕ ಜಾಲತಾಣವಾದ ‘ಟೆಲಿಗ್ರಾಂ’ (Telegram) ಆಪ್ ಬಳಕೆಗೆ ಭಾರತದಲ್ಲಿ ತಾತ್ಕಾಲಿಕವಾಗಿ ನಿರ್ಬಂಧ ಹೇರಿ ಆದೇಶ ಹೊರಡಿಸಿದೆ. ಪ್ರಶ್ನೆ ಪತ್ರಿಕೆ ಸೋರಿಕೆಗೆ ಬಳಕೆಯಾಗಿದ್ದ ಆಪ್: ಮೇ ತಿಂಗಳಲ್ಲಿ ನಡೆದಿದ್ದ ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಹಾಗೂ ಉತ್ತರಗಳು ಪರೀಕ್ಷೆಗೂ ಮುನ್ನವೇ ಟೆಲಿಗ್ರಾಂ ಆಪ್‌ನ ವಿವಿಧ ಗ್ರೂಪ್ ಮತ್ತು ಚಾನಲ್‌ಗಳಲ್ಲಿ ವ್ಯಾಪಕವಾಗಿ ಹರಿದಾಡಿದ್ದವು. ಅತ್ಯಂತ ರಹಸ್ಯವಾಗಿ ಮಾಹಿತಿ ಹಂಚಿಕೊಳ್ಳಲು ಮತ್ತು ದೊಡ್ಡ ಮಟ್ಟದಲ್ಲಿ ಗ್ರೂಪ್‌ಗಳನ್ನು ರಚಿಸಲು ಟೆಲಿಗ್ರಾಂನಲ್ಲಿ ಮುಕ್ತ ಅವಕಾಶವಿರುವುದರಿಂದ, ಪೇಪರ್ ಲೀಕ್ ದಂಧೆಯ ಕಿಲಾಡಿಗಳು ಇದನ್ನೇ ತಮ್ಮ ಅಕ್ರಮಕ್ಕೆ ಪ್ರಮುಖ ಅಸ್ತ್ರವನ್ನಾಗಿ ಮಾಡಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ…

Read More

ಬೆಂಗಳೂರು : ರಾಜಧಾನಿ ಬೆಂಗಳೂರು ಸೇರಿದಂತೆ ಇಡೀ ರಾಜ್ಯದಲ್ಲಿ ನಾಯಿಗಳ ದಾಳಿ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಸಾರ್ವಜನಿಕರಲ್ಲಿ ತೀವ್ರ ಆತಂಕ ಮೂಡಿಸಿದೆ. ಇತ್ತೀಚಿನ ಆರೋಗ್ಯ ಇಲಾಖೆಯ ಅಂಕಿ-ಅಂಶಗಳು ಈ ಭೀತಿಯನ್ನು ಮತ್ತಷ್ಟು ಹೆಚ್ಚಿಸಿದ್ದು, ಪರಿಸ್ಥಿತಿಯ ಗಂಭೀರತೆಗೆ ಕೈಗನ್ನಡಿಯಾಗಿದೆ. ಬೀದಿ ನಾಯಿಗಳ ಹಾವಳಿ ನಿಯಂತ್ರಣಕ್ಕೆ ಸಿಗದ ಮಟ್ಟಿಗೆ ತಲುಪುತ್ತಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ವಿಶೇಷವಾಗಿ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಶ್ವಾನಗಳ ದಾಳಿ ಪ್ರಕರಣಗಳು ಮಿತಿ ಮೀರಿವೆ. ಇಲಾಖೆಯ ವರದಿಯ ಪ್ರಕಾರ, ಕೇವಲ ಬೆಂಗಳೂರು ನಗರವೊಂದರಲ್ಲೇ ಬರೋಬ್ಬರಿ 9,763 ಶ್ವಾನಗಳ ದಾಳಿ ಪ್ರಕರಣಗಳು ಪತ್ತೆಯಾಗಿವೆ. ನಗರದ ಪ್ರಮುಖ ರಸ್ತೆಗಳು, ಪಾರ್ಕ್‌ಗಳು ಮತ್ತು ವಸತಿ ಪ್ರದೇಶಗಳಲ್ಲಿ ಸಂಚರಿಸಲು ಜನಸಾಮಾನ್ಯರು, ಅದರಲ್ಲೂ ಮುಖ್ಯವಾಗಿ ಮಕ್ಕಳು ಮತ್ತು ವೃದ್ಧರು ಭಯಪಡುವಂತ ವಾತಾವರಣ ಸೃಷ್ಟಿಯಾಗಿದೆ. ಕೇವಲ ಬೆಂಗಳೂರು ಮಾತ್ರವಲ್ಲದೆ ಇಡೀ ರಾಜ್ಯಾದ್ಯಂತ ಈ ಸಮಸ್ಯೆ ವ್ಯಾಪಕವಾಗಿದೆ. ಇತ್ತೀಚಿನ ಅಂಕಿ-ಅಂಶಗಳ ಪ್ರಕಾರ, ಕೇವಲ ಒಂದೇ ವಾರದಲ್ಲಿ ರಾಜ್ಯದಲ್ಲಿ ದಾಖಲಾದ ಒಟ್ಟು ನಾಯಿ ಕಡಿತದ ಪ್ರಕರಣಗಳ ಸಂಖ್ಯೆ ಬರೋಬ್ಬರಿ…

Read More

ಹಾಸನ : ಶಾಸಕ ಕೆಎಂ ಶಿವಲಿಂಗೇಗೌಡ ವಿರುದ್ಧ ಕರ ಪತ್ರಹಂಚಿಕೆ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕರಪತ್ರ ಹಂಚಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಇದೀಗ ಶಾಸಕ ಶಿವಲಿಂಗೇಗೌಡ ಹಾಸನ ಜಿಲ್ಲೆಯ ಅರಸೀಕೆರೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಅಖಿಲ ಭಾರತ ವೀರಶೈವ ಮಹಾಸಭಾ ಅರಸೀಕೆರೆ ಘಟಕ ಹೆಸರಲ್ಲಿ ಕರಪತ್ರ ಹಂಚಲಾಗಿತ್ತು. ವೀರಶೈವ ಸಮುದಾಯದ ಬಗ್ಗೆ ಅವಹೇಳನ ಹಾಗೂ ನಿಂದನೆ ಮಾಡಿರುವ ಆರೋಪ ಕೇಳಿ ಬಂದಿದ್ದು, ವೀರಶೈವ ಸಮಾಜವನ್ನು ಕೆಟ್ಟ ದೃಷ್ಟಿಯಲ್ಲಿ ನೋಡುತ್ತಿದ್ದಾರೆ ಎಂದು ಆರೋಪಿಗಳು ಕರಪತ್ರ ಹಂಚಿದ್ದಾರೆ.ಅರಸಿಕೆರೆ ಪಟ್ಟಣದಲ್ಲಿ ಅಪರಿಚಿತರು ಮನೆ ಮನೆಗೆ ಶಿವಲಿಂಗೇಗೌಡ ವಿರುದ್ಧ ಕರಪತ್ರ ಹಂಚಿದ್ದಾರೆ. ಕರಪತ್ರ ಹಚ್ಚಿದವರ ವಿರುದ್ಧ ಇದೀಗ ಕ್ರಮ ಕೈಗಳು ಒಂದು ಆಗ್ರಹಿಸಿ ಶಿವಲಿಂಗೇಗೌಡ ದೂರು ಕೊಟ್ಟಿದ್ದಾರೆ.

Read More

ಕೋಲಾರ : ಕೋಲಾರದಲ್ಲಿ ಸರ್ಕಾರಿ ಶಾಲೆಯ ಮೇಲ್ಚಾವಣಿ ಪ್ಲಾಸ್ಟಿಂಗ್ ಕುಸಿದು ಶಿಕ್ಷಕಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ವರದಿಯಾಗಿದೆ. ಶಿಕ್ಷಕಿ ಯಶೋಧ ಅವರಿಗೆ ಗಂಭೀರವಾದಗಳಾಗಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕೋಲಾರ ನಗರದ ಹಳೆಯ ಮಾಧ್ಯಮಿಕ ಶಾಲೆಯಲ್ಲಿ ಈ ಒಂದು ಘಟನೆ ನಡೆದಿದೆ. ಪಾಠ ಮಾಡುವಾಗ ಶಿಕ್ಷಕಿಯ ಮೇಲೆ ಪ್ಲಾಸ್ಟಿಂಗ್ ಸಿಮೆಂಟ್ ಕುಸಿದು ಬಿದ್ದಿದೆ. ಇತ್ತೀಚಿಗೆ ಅಷ್ಟೇ 25 ಲಕ್ಷ ರೂಪಾಯಿ ವೆಚ್ಚದಲ್ಲಿ ಕಟ್ಟಡವನ್ನು ದುರಸ್ತಿ ಮಾಡಲಾಗಿತ್ತು . ಆದರೂ ಶಾಲಾ ಕೊಠಡಿಯ ಮೇಲ್ಚಾವಣಿಯ ಪ್ಲಾಸ್ಟಿಂಗ್ ಕುಸಿತವಾಗಿದೆ. ಅದೃಷ್ಟವಶಾತ್ ಶಾಲಾ ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Read More