Subscribe to Updates
Get the latest creative news from FooBar about art, design and business.
Author: kannadanewsnow05
ದಾವಣಗೆರೆ : ಕಳೆದ ಕೆಲವು ತಿಂಗಳ ಹಿಂದೆ ಬೆಳಗಾವಿಯಲ್ಲಿರುವ ಕಿರು ಮೃಗಾಲಯದಲ್ಲಿ ನಿಗೂಢವಾಗಿ 25ಕ್ಕೂ ಹೆಚ್ಚು ಕೃಷ್ಣಮೃಗಗಳು ಸಾವನ್ನಪ್ಪಿದ್ದವು. ಇದೀಗ ಚುಕ್ಕಿ ಜಿಂಕೆಗಳು ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯ ಆನಗೋಡು ಗ್ರಾಮದ ಬಳಿ ಇರುವ ಇಂದಿರಾ ಪ್ರಿಯದರ್ಶಿನಿ ಕಿರು ಮೃಗಾಲಯದಲ್ಲಿ ನಡೆದಿದೆ. ಕಳೆದ ಮೂರೇ ದಿನದಲ್ಲಿ ನಾಲ್ಕು ಚುಕ್ಕಿ ಜಿಂಕೆಗಳು ಸಾವನ್ನಪ್ಪಿದ್ದು, ಮೃಗಾಯಲದಲ್ಲಿ ಹೆಮರಾಜಿಕ್ ಸೆಫ್ಟಿಸೆಮಿಯಾ ಎಂಬ ಸಾಂಕ್ರಾಮಿಕ ರೋಗ ಹರಡಿರಬಹುದು ಎಂದು ವೈದ್ಯರು ಶಂಕಿಸಿದ್ದಾರೆ. ಮೃಗಾಲಯದಲ್ಲಿ ಸದ್ಯ 170 ಚುಕ್ಕೆ ಜಿಂಕೆಗಳಿದ್ದು, ಅವುಗಳನ್ನು ಉಳಿಸಿಕೊಳ್ಳಲು ವೈದ್ಯರು ರೋಗನಿರೋಧಕ ಚಿಕಿತ್ಸೆ ಆರಂಭಿಸಿದ್ದಾರೆ. ಇನ್ನೂ ಚಿಕಿತ್ಸೆ ನಡೆಯುತ್ತಿರುವ ಹಿನ್ನೆಲೆ ಅರಣ್ಯ ಇಲಾಖೆ ಅಧಿಕಾರಿಗಳು ತಾತ್ಕಾಲಿಕವಾಗಿ ಸಾರ್ವಜನಿಕರ ವೀಕ್ಷಣೆಗೆ ನಿರ್ಬಂಧ ಹೇರಿದ್ದಾರೆ.
ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಪಿಯುಸಿ ವಿದ್ಯಾರ್ಥಿಯ ಮೃತದೇಹ ಪತ್ತೆಯಾಗಿದ್ದು, ಸಾನಾ ಕಾಲೇಜಿನ ಹಾಸ್ಟೆಲ್ ನಲ್ಲಿ ಅಯಾನ್ ಸುಂಕದ ಎನ್ನುವ ವಿದ್ಯಾರ್ಥಿಯ ಮೃತದೇಹ ಪತ್ತೆಯಾಗಿದೆ. ಹುಬ್ಬಳ್ಳಿಯ ಭೈರಿದೇವರಕೊಪ್ಪ ಬಳಿ ಇರುವ ಕಾಲೇಜಿನಲ್ಲಿ ಮೃತದೇಹ ಪತ್ತೆಯಾಗಿದೆ. ಹಾಸ್ಟೆಲ್ ಮೂರನೇ ಮಹಡಿಯೇ ಕೆಳಗೆ ಅಯಾನ್ ಶವ ಪತ್ತೆಯಾಗಿದೆ. ಸೈನ್ಸ್ ವಿಭಾಗದಲ್ಲಿ ಅಯಾನ್ ಸುಂಕದ ಓದುತ್ತಿದ್ದ. ಎಂದು ಹೇಳಲಾಗುತ್ತಿದೆ. ಕೊಪ್ಪಳ ಜಿಲ್ಲೆಯ ಕಮಲೂರು ಮೂಲದ ಆಯಾನ್ ಸುಂಕದೆಂದು ತಿಳಿದು ಬಂದಿದ್ದು, ಆತನ ಮೃತ ದೇಹವನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.
ಬೆಂಗಳೂರು : ಕನ್ನಡದ ಅತ್ಯುನ್ನತ ರಿಯಾಲಿಟಿ ಶೋ ಗಳಲ್ಲಿ ಒಂದಾಗಿದ್ದ ಬಿಗ್ ಬಾಸ್ ಸೀಸನ್ 12 ಕ್ಕೆ ನಿನ್ನೆ ತೆರೆ ಬಿದ್ದಿದೆ. ಇವಂದು ಫಿನಾಲೆಯಲ್ಲಿ ಗಿಲ್ಲಿ ನಟ ವಿಜೇತರಾಗಿ ಹೊರಹೊಮ್ಮಿದ್ದು ಬಿಗ್ ಬಾಸ್ ಕಪ್ ಜೊತೆಗೆ 50 ಲಕ್ಷ ರೂಪಾಯಿ ಬಹುಮಾನ ಕೂಡ ಗೆದ್ದಿದ್ದಾರೆ. ಈ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಗಿಲ್ಲಿ ನಟ, ತುಂಬಾ ಖುಷಿ ಆಯ್ತು ನನಗೆ. ನಂಬೋಕೆ ಆಗ್ತಿಲ್ಲ. ಹೊರಗಡೆ ಬಂದ್ಮೇಲೆ ಇದೆಲ್ಲ ನಿಜನಾ ಅನ್ನಿಸ್ತಿದೆ. ಬಂದಿರೋ 50 ಲಕ್ಷದಲ್ಲಿ ಯಾವುದಾದ್ರೂ ಜಮೀನು ತಗೊಂಡು ವ್ಯವಸಾಯ ಏನಾದ್ರೂ ಮಾಡ್ಬೇಕು ಎಂದು ಆಶಯ ವ್ಯಕ್ತಪಡಿಸಿದರು. ದೊಡ್ಡಮ್ಮ ದೊಡ್ಡಮ್ಮ ದ್ವಾಸೆ ಕೊಡು ಹಾಡನ್ನ ಸ್ಕೂಲ್ಗೆ ಹೋಗುವಾಗ ಕಲಿತಿದ್ದು, ಅದು ಹಾಗೆ ಮನೇಲಿ ಹೇಳಿದ್ದು. ಆಮೇಲೆ ಇಷ್ಟು ಫೇಮಸ್ ಆಯ್ತು ಆ ಹಾಡು. ಮಕ್ಕಳಿಗೆಲ್ಲ ಇಷ್ಟ ಆಗಿದೆ ಅನ್ನೋದು ಆಚೆ ಬಂದ್ಮೇಲೆ ಗೊತ್ತಾಯ್ತು ಎಂದು ಖುಷಿ ವ್ಯಕ್ತಪಡಿಸಿದರು. ಕಾವ್ಯ ಜೊತೆ ಮದುವೆ ಎಲ್ಲ ಏನೂ ಇಲ್ಲ. ಎಂಟ್ರಿ ಕೊಡುವಾಗ ಜಂಟಿಯಾಗಿ ನಾನು ಮತ್ತು…
ಮೂಲ ನಕ್ಷತ್ರದವರಿಗೆ ಯೆ,ಯೊ,ಬ,ಬಿ ಇವರಿಗೆ ನೀಮ್ಮಗೆ ಎಷ್ಟೇ ಸಮಸ್ಯೆಗಳು ಇದರು ಬಗ್ಗೆ ಆರಿಯುತ್ತದೆ. ಇದು ಹರಿ ವಾಕ್ ಸತ್ಯ ನೀವು ತಾಮ್ರದ ರ್ಸಪಗಳನು ತೆಗೆದುಕೊಂಡು ಪ್ರತಿ ಮಂಗಳವಾರ ಒಂದು ಶುಕ್ರವಾರ ಒಂದು ಹೀಗೆ 5 ಮಂಗಳವಾರ 5 ಶುಕ್ರವಾರ ಒಂದು ಕೆಂಪು ವಸ್ತ್ರದಲ್ಲಿ ಪೂಜೆ ಮಾಡಿ ಗಂಟು ಕಟ್ಟಿ ಇಡಿ5 ಮಂಗಳವಾರ 5 ಶುಕ್ರವಾರವಾದ ಮೇಲೆ ಯಾವುದಾದರೂ ಪುಣೆಯ ಕ್ಷೇತ್ರ ಶಿವನ ದೇವಾಲಯವೆ ಆಗಬೇಕು ಅಲ್ಲಿ ಹುಂಡಿಗೆ ಹಾಕಿ ಇಲ್ಲವೆಂದರೆ ಎಲ್ಲಾದರೂ ಹೋಮ ಮಾಡುತ್ತಿದರೆ ಹೋಮಕ್ಕೆ ಹಾಕಿ ಮನೆಗೆ ಬಂದು ಬಿಡಿ ನಂತರ ನೋಡಿ ಬದಲಾವಣೆ ನಂತರ ನನಗೆ ತಿಳಿಸಿ. ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ವಿದ್ವಾನ್ ವಿದ್ಯಾಧರ್ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ…
ಬೆಂಗಳೂರು : ಬೆಂಗಳೂರಲ್ಲಿ ಮದುವೆಯಾಗುವುದಾಗಿ ನಂಬಿಸಿ ಆಸಾಮಿ ಒಬ್ಬ ತನ್ನ ಪತ್ನಿಯನ್ನೇ ಅಕ್ಕ ಎಂದು ಯುವತಿಗೆ ಪರಿಚಯಿಸಿ ಆಕೆಗೆ ಕೋಟ್ಯಾಂತರ ರೂಪಾಯಿ ಹಣ ವಂಚನೆ ಎಸಗಿದ್ದಾನೆ. ಬೆಂಗಳೂರಿನ ಯುವತಿಗೆ ವಂಚನೆ ಎಸಗಿದ್ದು, ಬೆಂಗಳೂರಲ್ಲಿ ಸಾಫ್ಟ್ವೇರ್ ಇಂಜಿನಿಯರ್ ಆಗಿರುವ ಯುವತಿ ವಂಚನೆಗೆ ಒಳಗಾಗಿದ್ದಾಳೆ. ಇದೀಗ ಕೆಂಗೇರಿ ಠಾಣೆ ಪೊಲೀಸರು ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ. ಪ್ರಕರಣ ಹಿನ್ನೆಲೆ? ಮ್ಯಾಟರ್ ಮೋನಿಯಲ್ಲಿ ಆರುಪಿ ವಿಜಯ್ ರಾಜೇಗೌಡ ಪರಿಚಯವಾಗಿದ್ದ. 2024 ಮಾರ್ಚ್ ನಲ್ಲಿ ವಿಜಯ್ ಯುವತಿಯನ್ನು ಪರಿಚಯ ಮಾಡಿಕೊಂಡಿದ್ದ. ತಾನು ಉದ್ಯಮಿ 715 ಕೋಟಿ ಮಾಡಿದ ಆಸ್ತಿ ಒಡೆಯ ಇದ್ದೇನೆ ಎಂದು ಪರಿಚಯ ಮಾಡಿಕೊಂಡಿದ್ದಾನೆ. ನಿನ್ನನ್ನೇ ಮದುವೆಯಾಗುತ್ತೇನೆ ಎಂದು ಕುಟುಂಬದ ಸದಸ್ಯರನ್ನು ಪರಿಚಯಿಸಿದ. ಕೆಂಗೇರಿ ಬಳಿ ಯುವತಿಯ ಕುಟುಂಬ ಸದಸ್ಯರನ್ನು ಪರಿಚಯಿಸಿದ್ದಾನೆ. ಅಲ್ಲದೆ ಇನ್ನೊಂದು ಬೆಚ್ಚಿ ಬೀಳಿಸೋ ವಿಷಯ ಏನೆಂದರೆ ಆರೋಪಿ ವಿಜಯ್ ತನ್ನ ಪತ್ನಿಯನ್ನು ಅಕ್ಕ ಎಂದು ಯುವತಿಗೆ ಪರಿಚಯಿಸಿದ್ದಾನೆ. ನಂತರ ಆಸ್ತಿ ಸಂಬಂಧ ಜಾರಿ ನಿರ್ದೇಶನಾಲಯದಲ್ಲಿ ಕೇಸ್ ಆಗಿದೆ ಎಂದು ಯುವತಿಗೆ ಆರೋಪಿ ಹೇಳಿ…
ಚಿಕ್ಕಬಳ್ಳಾಪುರ : ಜಿಲ್ಲೆಯ ಎ. ಕೊತ್ತೂರಲ್ಲಿ ದಲಿತರು ಮತ್ತು ಸವರ್ಣಿಯರ ನಡುವೆ ಘರ್ಷಣೆ ಉಂಟಾಗಿದೆ. ಚಿಕ್ಕಬಳ್ಳಾಪುರ ತಾಲೂಕಿನ ಎ ಕುತ್ತೂರು ಗ್ರಾಮದಲ್ಲಿ ಒಂದು ಘಟನೆ ನಡೆದಿದ್ದು, ಗ್ರಾಮ ದೇವತೆ ಮೆರವಣಿಗೆ ಮಾಡುವ ವಿಚಾರದಲ್ಲಿ ಗಲಾಟೆ ನಡೆದಿದೆ. ದಲಿತರು ಉತ್ಸವ ಮೂರ್ತಿ ಹೊರದಂತೆ ಸವರ್ಣೀಯರು ದಲಿತರನ್ನು ತಡೆದಿದ್ದಾರೆ ಜಗಳದಲ್ಲಿ ಕೊನೆಗೆ ದೇವರ ವಿಗ್ರಹವನ್ನು ನಡು ರಸ್ತೆಯಲ್ಲಿ ಜನರು ಬಿಟ್ಟಿದ್ದಾರೆ. ಚಿಕ್ಕಬಳ್ಳಾಪುರ ತಾಲೂಕಿನ ಎ ಕೊತ್ತೂರಿನಲ್ಲಿ ಪರಿಸ್ಥಿತಿ ಉದ್ವಿಗ್ನವಾಗಿದೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿವಮೊಗ್ಗ : ರಾಜ್ಯದಲ್ಲಿ ಒಂದೇ ದಿನ ಗೌರವದ ದುರಂತ ಸಂಭವಿಸಿದ್ದು ಪ್ರತ್ಯೇಕ ಘಟನೆಗಳಲ್ಲಿ ಎರಡು ಜಿಲ್ಲೆಗಳಲ್ಲಿ ಸಂಭವಿಸಿದ ಪ್ರತ್ಯೇಕ ಪ್ರಕರಣದಲ್ಲಿ ಒಟ್ಟು ಆರು ಮಂದಿ ನೀರು ಪಾಲಾಗಿದ್ದಾರೆ. ಶಿವಮೊಗ್ಗ ಹಾಗೂ ದಕ್ಷಿಣ ಕನ್ನಡದಲ್ಲಿ ಒಂದೇ ದಿನ ಆರು ಜನರು ಜಲಸಮಾಧಿಯಾಗಿದ್ದಾರೆ. ಮೊದಲ ಘಟನೆ ನಡೆದಿದ್ದು, ಕಾಲುವೆಯಲ್ಲಿ ಬಟ್ಟೆ ತೊಳೆಯಲು ಹೋದ ಒಂದೇ ಕುಟುಂಬದ ನಾಲ್ವರು ನೀರಿನಲ್ಲಿ ಕೊಚ್ಚಿಕೊಂಡು ಹೋಗಿರುವ ಘಟನೆ ಶಿವಮೊಗ್ಗದ ಭದ್ರಾವತಿ ತಾಲೂಕಿನ ಅರಬಿಳಚಿ ಕ್ಯಾಂಪ್ನಲ್ಲಿ ಭಾನುವಾರ ನಡೆದಿದೆ. ಅರಬಿಳಚಿ ಕ್ಯಾಂಪ್ನ ನಿವಾಸಿ ನೀಲಬಾಯಿ (50), ಮಗ ರವಿ ಕುಮಾರ್ (21), ಮಗಳು ಶ್ವೇತಾ (28) ಹಾಗೂ ಅಳಿಯ ಪರಶುರಾಮ (33) ನೀರು ಪಾಲಾದವರು ಎಂದು ತಿಳಿದುಬಂದಿದೆ. ಹೊಳೆಹೊನ್ನೂರು ಪೊಲೀಸರು ಶಿವಮೊಗ್ಗದಿಂದ ಅಗ್ನಿಶಾಮಕದಳದವರನ್ನು ಕರೆಯಿಸಿ ಹುಡುಕಾಟ ನಡೆಸಿದ್ದಾರೆ. ನಿನ್ನೆ ಕತ್ತಲಾದ ಕಾರಣ ಇಂದು ಹುಡುಕಾಟ ಮುಂದುವರೆಯಲಿದೆ. ರಾಜರಾವ್ ಅವರು ನೀಡಿದ ದೂರಿನಂತೆ ಹೊಳೆಹೊನ್ನೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಜಿಲ್ಲಾ ಹೆಚ್ಚುವರಿ ರಕ್ಷಣಾಧಿಕಾರಿ ಕಾರ್ಯಪ್ಪ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಸ್ನೇಹಿತನನ್ನು…
ಬಾಗಲಕೋಟೆ : ರಾಜ್ಯದಲ್ಲಿ ಆನ್ಲೈನ್ ಬೆಟ್ಟಿಂಗ್ಗೆ ಇದೀಗ ಮತ್ತೊಂದು ಬಲಿಯಾಗಿದೆ. ಆನ್ಲೈನ್ ಬೆಟ್ಟಿಂಗ್ ನಿಂದ ಸಾಲದ ಸುಳಿಗೆ ಸಿಲುಕಿ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ಪಟ್ಟಣದ ಚೌಡಯ್ಯ ನಗರದಲ್ಲಿ ಈ ಒಂದು ಘಟನೆ ಸಂಭವಿಸಿದೆ. ಮನೆಯಲ್ಲಿ ನೇಣು ತೆಗೆದುಕೊಂಡು ರಮೇಶ ಬಂಟನೂರು (21) ಆತ್ಮಹತ್ಯೆಗೆ ಶರಣಾರದ ಯುವಕ ಎಂದು ತಿಳಿದು ಬಂದಿದ್ದು, ರಮೇಶ್ ಬಂಟನೂರು ಜಮಖಂಡಿಯ ಖಾಸಗಿ ಕಾಲೇಜಿನಲ್ಲಿ ಬಿಸಿಎ ಪ್ರಥಮ ವರ್ಷದ ವಿದ್ಯಾರ್ಥಿಯಾಗಿದ್ದ. ಆನ್ಲೈನ್ ಬೆಟ್ಟಿಂಗ್ ನಿಂದ ರಮೇಶ್ ಲಕ್ಷಾಂತರ ಸಾಲ ಮಾಡಿಕೊಂಡಿದ್ದ. ಈ ಹಿಂದೆ ರಮೇಶ್ ಮಾಡಿಕೊಂಡಿದ್ದ ಸಾಲವನ್ನು ತಂದೆಯೇ ಎರಡು ಬಾರಿ ತೀರಿಸಿದ್ದರು. ಮತ್ತೆ ಆನ್ಲೈನ್ ಬೆಟ್ಟಿಂಗ್ ಆಡಬೇಡ ಎಂದು ತಂದೆ ಬುದ್ಧಿವಾದ ಸಹ ಹೇಳಿದ್ದರು. ಬೈದು ಬುದ್ಧಿವಾದ ಹೇಳಿದ್ದಕ್ಕೆ ಮನನೊಂದು ರಮೇಶ್ ಆತ್ಮಹತ್ಯೆಗೆ ಶರಣಾಗಿದ್ದಾನೆ. ಸ್ಥಳಕ್ಕೆ ಜಮಖಂಡಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಬೆಂಗಳೂರು : ಬೆಂಗಳೂರಿನಲ್ಲಿ ನಡು ರಸ್ತೆಯಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಕ್ಷಣಾರ್ಧದಲ್ಲಿಯೇ ಹೊತ್ತಿ ಉರಿದಿರುವ ಘಟನೆ ನಡೆದಿದೆ. ನಡುರಸ್ತೆಯಲ್ಲೇ ಬೆಳಗ್ಗೆ 7:30 ರ ಸುಮಾರಿಗೆ ವರ್ಣ ಕಾರು ಧಗಧಗನೆ ಬೆಂಕಿಗೆ ಆಹುತಿಯಾಗಿದೆ. ಯಶವಂತಪುರದಿಂದ ಟಾಟಾ ಇನ್ಸ್ಟಿಟ್ಯೂಟ್ ಕಡೆಗೆ ಹೋಗುವ ರಸ್ತೆಯಲ್ಲಿ ಘಟನೆ ನಡೆದಿದೆ. ಕಾರಿನಲ್ಲಿದ್ದ ಮೂವರು ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ.ಬೆಂಕಿಗಾಹುತಿಯಾದ ವೈಟ್ ಬೋರ್ಡ್ ವರ್ಣ ಕಾರಿನಲ್ಲಿ ಮೂವರು ಪ್ರಯಾಣಿಸುತ್ತಿದ್ದರು. ಕಾರನ್ನು ಸ್ಟಾರ್ಟ್ ಮಾಡಿ ಕೇವಲ ಒಂದು ಕಿಮೀ ದೂರ ಕ್ರಮಿಸಲಾಗಿತ್ತು. ಕಾರಿನ ಇಂಜಿನ್ ಭಾಗದಲ್ಲಿ ಬೆಂಕಿ, ಹೊಗೆ ಕಾಣಿಸೊಕೊಂಡಿದೆ. ಕೂಡಲೇ ಕಾರಿನಲ್ಲಿದ್ದವರು ಇಳಿದು ಬಚಾವ್ ಆಗಿದ್ದಾರೆ. ಬೆಂಕಿಯನ್ನ ನಂದಿಸಲು ಪ್ರಯತ್ನ ಪಟ್ಟರೂ ಸಾಧ್ಯವಾಗಿಲ್ಲ. ಅಗ್ನಿಶಾಮಕದಳ ಸ್ಥಳಕ್ಕೆ ಬರುವ ಹೊತ್ತಿಗೆ ಬೆಂಕಿ ಸಂಪೂರ್ಣ ಕಾರನ್ನು ಆವರಿಸಿತ್ತು. ಕೇವಲ 5 ನಿಮಿಷದಲ್ಲಿ ಸಂಪೂರ್ಣ ಕಾರು ಹೊತ್ತಿ ಉರಿದಿದೆ.ಬೆಂಕಿಗೆ ಕಾರು ಆಹುತಿಯಾಗಲು ಕಾರಣವೇನು ಅಂತ ತನಿಖೆಯಿಂದಷ್ಟೇ ತಿಳಿಯಬೇಕಿದೆ. ಯಶವಂತಪುರ ಪೊಲೀಸರು ಸ್ಥಳಕ್ಕೆ ಬಂದು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.
ಬೆಂಗಳೂರು : ವೇತನ ಮತ್ತು ವೇತನ ಪರಿಷ್ಕರಣೆಗೆ ಸಂಬಂಧಿಸಿದ ದೀರ್ಘಕಾಲದಿಂದ ಬಾಕಿ ಇರುವ ಬೇಡಿಕೆಗಳನ್ನು ಈಡೇರಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ, ಕೆಎಸ್ಆರ್ಟಿಸಿ ಸೇರಿದಂತೆ ರಾಜ್ಯದ ನಾಲ್ಕು ಸರ್ಕಾರಿ ಸಾರಿಗೆ ನಿಗಮಗಳ ನೌಕರರು ಜನವರಿ 29 ರಂದು ‘ಬೆಂಗಳೂರು ಚಲೋ’ ಪ್ರತಿಭಟನೆ ನಡೆಸುವುದಾಗಿ ಘೋಷಿಸಿದ್ದಾರೆ. ಜನವರಿ 29 ರಂದು ಬೆಳಗ್ಗೆ 10 ರಿಂದ ಸಂಜೆ 4 ರವರೆಗೆ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ನಡೆಯಲಿದೆ. ಈ ಪ್ರತಿಭಟನೆ ಶಾಂತಿಯುತವಾಗಿರುತ್ತದೆ ಎಂದು ಒಕ್ಕೂಟಗಳು ತಿಳಿಸಿವೆ. ಸಂಘಟನೆಗಳು ಅಧಿಕೃತವಾಗಿ ಮುಷ್ಕರವನ್ನು ಘೋಷಿಸಿಲ್ಲವಾದರೂ, ತಮ್ಮ ಬೇಡಿಕೆಗಳನ್ನು ನಿರಂತರವಾಗಿ ನಿರ್ಲಕ್ಷಿಸುವುದರಿಂದ ಸಾರಿಗೆ ಸೇವೆಗಳ ಮೇಲೆ ಪರಿಣಾಮ ಬೀರಬಹುದು ಎಂದು ಅವರು ಎಚ್ಚರಿಸಿದರು. ಒಂದು ದಿನದ ಅಡಚಣೆ ಕೂಡ ಕರ್ನಾಟಕದಾದ್ಯಂತ ದೈನಂದಿನ ಪ್ರಯಾಣಿಕರ ಮೇಲೆ ಪರಿಣಾಮ ಬೀರಬಹುದು ಎಂದು ಒಕ್ಕೂಟದ ನಾಯಕರು ತಿಳಿಸಿದರು. ಜನವರಿ 29 ರಂದು ಬೆಳಗ್ಗೆ 10 ರಿಂದ ಸಂಜೆ 4 ರವರೆಗೆ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ನಡೆಯಲಿದೆ. ಈ ಪ್ರತಿಭಟನೆ ಶಾಂತಿಯುತವಾಗಿರುತ್ತದೆ…














