Author: kannadanewsnow05

ಚಾಮರಾಜನಗರ : ಕಳೆದ ಕೆಲವು ದಿನಗಳ ಹಿಂದೆ ಆರತಕ್ಷತೆಗೆ ತೆರಳುತ್ತಿದ್ದ ವೇಳೆ ವರನಿಗೆ ವಧುವಿನ ಮಾಜಿ ಪ್ರಿಯಕರ ಚಾಕು ಇರಿದಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಇದೀಗ ಪೊಲೀಸರು ವಧು ಹಾಗೂ ಆಕೆಯ ಪ್ರಿಯಕರ ಸೇರಿದಂತೆ ಮೂವರನ್ನು ಅರೆಸ್ಟ್ ಮಾಡಿದ್ದಾರೆ. ಬಂಧಿರನ್ನ ನಯನಾ ಹಾಗೂ ಈಕೆಯ ಬಾಯ್ ಫ್ರೆಂಡ್ ದರ್ಶನ್ ಮತ್ತು ಅಪ್ರಾಪ್ತನನ್ನು ಬಂಧಿಸಲಾಗಿದ್ದು, ಗೋಕುಲ್ ಹಾಗೂ ಇನ್ನೋರ್ವ ತಲೆ ಮರೆಸಿಕೊಂಡಿದ್ದಾರೆ.ಚಾಕು ಇರಿದ ದರ್ಶನ್ ತಮಟೆ ಬಾರಿಸುವ ಕೆಲಸ ಹಾಗೂ ಪುಸ್ತಕಗಳನ್ನು ಮಾರಾಟ ಮಾಡುವ ಕೆಲಸ ಮಾಡಿಕೊಂಡಿದ್ದನು. ಈ ವೇಳೆ ರವೀಶ್ ನನ್ನ ಮದುವೆ ಆಗಲು ಸೂಚಿಸಿದ್ದ ನಯನಾ ಬಳಿಕ ರವೀಶ್​ನ ಫೋನ್ ಅನ್ನು ದರ್ಶನ್​​ಗೆ ಕೊಟ್ಟು ಬೆದರಿಸುವಂತೆ ಹೇಳಿದ್ದ ನಯನಾ ಮದುವೆ ನಿಲ್ಲಿಸುವಂತೆ ದುಂಬಾಲು ಬಿದ್ದಿದ್ದಳು. ನಯನಾಳ ಮಾತು ಕೇಳಿದ ದರ್ಶನ್ ತನ್ನ ಮೂವರು ಸ್ನೇಹಿತರ ಜೊತೆ ಕಾರಿನಲ್ಲಿ ಬಂದು ವರನನ್ನು ಅಡ್ಡಹಾಕಿ ಚಾಕು ಇರಿದಿದ್ದ. ಅದೃಷ್ಟವಶಾತ್ ತೋಳಿಗಷ್ಟೇ ಗಾಯವಾಗಿ ಪ್ರಾಣಾಪಾಯದಿಂದ ಪಾರಾಗಿದ್ದನು. ವರನಿಗೆ ಚಾಕು ಇರಿದ ಕೇಸ್ ಪತ್ತೆಗೆ ಚಾಮರಾಜನಗರ ಎಸ್ಪಿ…

Read More

ಬೆಂಗಳೂರು : ರಾಜ್ಯದಲ್ಲಿ ಮತ್ತೊಂದು ದರೋಡೆ ಪ್ರಕರಣ ಬೆಳಕಿಗೆ ಬಂದಿದ್ದು, ಬೆಂಗಳೂರಿನ ಬನ್ನೇರುಘಟ್ಟ ಸಮೀಪ ಹಾಡಹಗಲೇ ಸಿನಿಮೀಯ ರೀತಿಯಲ್ಲಿ 31 ಲಕ್ಷದ 38 ಸಾವಿರ ರೂ. ನಗದು ದೋಚಿ ದರೋಡೆಕೋರರು ಪರಾರಿಯಾಗಿದ್ದಾರೆ.  ಬನ್ನೇರುಘಟ್ಟ ಪೊಲೀಸ್ ಠಾಣಾ ವ್ಯಾಪ್ತಿಯ ಸಕಲವಾರ ರಸ್ತೆಯಲ್ಲಿ  ಬೈಕ್ ನಲ್ಲಿ ತೆರಳುತ್ತಿದ್ದ ವ್ಯಕ್ತಿಯನ್ನು ಅಡ್ಡಗಟ್ಟಿದ ದುಷ್ಕರ್ಮಿಗಳ ಗ್ಯಾಂಗ್, ಬರೋಬ್ಬರಿ 31 ಲಕ್ಷದ 38 ಸಾವಿರ ರೂಪಾಯಿ ನಗದನ್ನು ದೋಚಿ ಪರಾರಿಯಾಗಿದೆ. ಸಿನಿಮಾ ಸ್ಟೈಲ್ ನಲ್ಲಿ ದರೋಡೆರ ಹಾಡಹಗಲೇ ರಸ್ತೆ ಮಧ್ಯೆ ಬೈಕ್ ನಿಲ್ಲಿಸಿದ ಖದೀಮರು, ಸಿನಿಮಾ ಸ್ಟೈಲ್ನಲ್ಲಿ ಲಾಂಗ್ ಮತ್ತು ಮಚ್ಚುಗಳನ್ನು ತೋರಿಸಿ ವ್ಯಕ್ತಿಯನ್ನು ಬೆದರಿಸಿ ಹಣವಿದ್ದ ಬ್ಯಾಗ್ ಹಾಗೂ ಅವರ ಬೈಕನ್ನು ಸಹ ಕಿತ್ತುಕೊಂಡು ಪರಾರಿಯಾಗಿದ್ದಾರೆ. ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಪೊಲೀಸರು ಆರೋಪಿಗಳ ಪತ್ತೆಗಾಗಿ ಬಲೆ ಬೀಸಿದ್ದಾರೆ. ಈ ಘಟನೆಯಿಂದಾಗಿ ಸ್ಥಳೀಯ ನಿವಾಸಿಗಳಲ್ಲಿ ಆತಂಕ ಮನೆ ಮಾಡಿದೆ.

Read More

ಬೆಂಗಳೂರು : ಕಾನ್ಫಿಡೆಂಟ್ ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆಗೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅವರಿಗೆ ಮಾನಸಿಕ ಒತ್ತಡ ಹಾಗೂ ಖಿನ್ನತೆ ಇತ್ತು ಎಂದು ಇದೀಗ ಬಯಲಾಗಿದೆ. ಅದು ಅಲ್ಲದೆ ಸಾಮಾಜಿಕ ಜಾಲತಾಣದಲ್ಲಿ ಸಾವಿನ ಕುರಿತಂತೆ ಸಿನಿಮಾ ಮಾಡಲು ಕೂಡ ಸಿಜೆ ರಾಯ್ ನಿರ್ಧರಿಸಿದ್ದರು ಎಂದು ಇದೀಗ ಬಯಲಾಗಿದೆ. ಹೌದು, ಸಿಜೆ ರಾಯ್ ಅವರು ಆತ್ಮಹತ್ಯೆ ಮಾಡಿಕೊಳ್ಳುವ ಹಿಂದಿನ ದಿನ ಮನೋವೈದ್ಯರನ್ನು ಭೇಟಿಯಾಗಿದ್ದರು. ಜಯನಗರದ 8ನೇ ಬ್ಲಾಕ್ ನಲ್ಲಿರುವ ಮನೋವೈದ್ಯರನ್ನು ಸಿಜೆ ರಾಯ್ ಭೇಟಿ ಮಾಡಿದ್ದರು. ವೈದರಿಂದ ಕೌನ್ಸೆಲಿಂಗ್ ಸಹ ಪಡೆದಿದ್ದರು. ಸಾಕಷ್ಟು ಮಾನಸಿಕ ಒತ್ತಡ ಮತ್ತು ಖಿನ್ನತೆಗೆ ಒಳಪಟ್ಟಿದ್ದರು ಎಂದು ಇದೀಗ ತಿಳಿದು ಬಂದಿದೆ ಸಾಮಾಜಿಕ ಜಾಲತಾಣದಲ್ಲಿ ನೋವು ಸಹ ಹಂಚಿಕೊಂಡಿದ್ದರು. ಸಾವಿನ ಕುರಿತು ಸಿನಿಮಾ ನಿರ್ಮಾಣ ಮಾಡಬೇಕು ಇದೀಗ ಗೊತ್ತಾಗಿದೆ. ರಾಯ್ ಅವರಿಗೆ ಸಾಕಷ್ಟು ಒತ್ತಡ ಮಾನಸಿಕತೆ ಕಾಡುತ್ತಿತ್ತು. ಆದರೆ ಯಾವ ವಿಚಾರವಾಗಿ ಮಾನಸಿಕತೆಗೆ ಒಳಗಾಗಿದ್ದರು? ಯಾರಿಂದ ಒತ್ತಡ ಇತ್ತು ಯಾವ ವಿಚಾರವಾಗಿ ಅವರಿಗೆ ಒತ್ತಡ ಇತ್ತು? ಎನ್ನುವುದರ ಕುರಿತು ತಿಳಿದು…

Read More

ಬೆಂಗಳೂರು : ಅಗ್ನಿ ದುರಂತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮೂರು ಸಾವನ್ನಪ್ಪಿದ್ದಾರೆ. ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೂವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಬೆಂಗಳೂರು ದಕ್ಷಿಣ ಜಿಲ್ಲೆಯ ಕನಕಪುರದಲ್ಲಿ ಈ ಒಂದು ಭೀಕರ ಅಗ್ನಿವಗಳ ಸಂಭವಿಸಿತ್ತು. ಮೃತರನ್ನು ಸಿದ್ದರಾಜು (55) ಪತ್ನಿ ಚಂದ್ರಮ್ಮ (50) ಹಾಗೂ ಪುತ್ರ ಪ್ರಶಾಂತ್ (22) ಮೃತರು ಎಂದು ತಿಳಿದು ಬಂದಿದೆ. ಇವರು ಬೆಂಗಳೂರು ದಕ್ಷಿಣ ಜಿಲ್ಲೆಯ ಕನಕಪುರ ನಿವಾಸಿಗಳು ಆಗಿದ್ದು, ಅಮರನಾರಾಯಣ ಬ್ಲಾಕ್ ನಲ್ಲಿ ಈ ಒಂದು ದುರಂತ ಸಂಭವಿಸಿತ್ತು. ಘಟನೆಯ ಹಿನ್ನೆಲೆ ರಾಮನಗರ ಜಿಲ್ಲೆಯ ಕನಕಪುರ ಪಟ್ಟಣದ ಅಮರ ನಾರಾಯಣ ಬ್ಲಾಕ್ ನ ಮನೆಯೊಂದರಲ್ಲಿ ಗ್ಯಾಸ್ ಸೋರಿಕೆಯಾಗಿ ಆಕಸ್ಮಿಕವಾಗಿ ಸ್ಫೋಟ ಸಂಭವಿಸಿ ಬೆಂಕಿ ಹೊತ್ತಿಕೊಂಡಿತ್ತು. ಈ ಘಟನೆಯಲ್ಲಿ ಕುಟುಂಬದ ಸದಸ್ಯರು ತೀವ್ರವಾಗಿ ಸುಟ್ಟಗಾಯಗಳಿಗೆ ಒಳಗಾಗಿದ್ದರು.ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಇಂದು ಚಿಕಿತ್ಸೆಗೆ ಸ್ಪಂದಿಸದೆ ವಿಕ್ಟೋರಿಯಾ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾರೆ.

Read More

ಬೆಂಗಳೂರು : ಕಾನ್ಫಿಡೆಂಟ್ ಗ್ರೂಪ್‌ನ ಮುಖ್ಯಸ್ಥ ಹಾಗೂ ಖ್ಯಾತ ಉದ್ಯಮಿ ಸಿ.ಜೆ.ರಾಯ್ ಅವರ ಪಾರ್ಥಿವ ಶರೀರವನ್ನು ಬೌರಿಂಗ್ ಆಸ್ಪತ್ರೆಯಿಂದ ಪತ್ನಿ ಹಾಗೂ ಮಕ್ಕಳಿಗೆ ಹಸ್ತಾಂತರ ಮಾಡಲಾಗಿದ್ದು, ರಾಯ್ ಅವರ ಇಚ್ಛೆಯಂತೆ ಬನ್ನೇರುಘಟ್ಟದ ಕಾಸಾಗ್ರಾಂಡ್‌ನಲ್ಲಿ ಇಂದು ಕ್ರಿಶ್ಚಿಯನ್ ಸಾಂಪ್ರದಾಯದಂತೆ ಅಂತ್ಯಕ್ರಿಯೆ ನೆರವೇರಿತು. ಆಸ್ಪತ್ರೆ ಬಳಿ ರಾಯ್ ಪತ್ನಿ‌ ಮತ್ತು ಮಕ್ಕಳ ಆಕ್ರಂದನ‌ ಮುಗಿಲು ಮುಟ್ಟಿತ್ತು. ಆಸ್ಪತ್ರೆಯಿಂದ ಹೊರಟ ಆಂಬ್ಯುಲೆನ್ಸ್​ನ್ನು ರಾಯ್ ಅವರ ಕಾನ್ಫಿಡೆಂಟ್ ಕಚೇರಿ ಮುಂದೆ ಕೆಲಕಾಲ ನಿಲ್ಲಿಸಲಾಯಿತು. ಇದೇ ಸಂದರ್ಭದಲ್ಲಿ ಶಾಸಕ ಎನ್.ಎ.ಹ್ಯಾರಿಸ್ ಅವರು ರಾಯ್ ಅವರಿಗೆ ಅಂತಿಮ ನಮನ ಸಲ್ಲಿಸಿದರು. ಕಾನ್ಫಿಡೆಂಟ್ ಗ್ರೂಪ್‌ನ ಮುಖ್ಯಸ್ಥ ಸಿ.ಜೆ.ರಾಯ್ ಅವರು‌ ಜನವರಿ 30ರಂದು ಪಿಸ್ತೂಲ್‌ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಅಶೋಕನಗರ ಠಾಣಾ ವ್ಯಾಪ್ತಿಯ ಲ್ಯಾಂಗ್ ಫೋರ್ಡ್ ಟೌನ್‌ನಲ್ಲಿರುವ ತಮ್ಮದೇ ಕಚೇರಿಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದ ಸಿ.ಜೆ.ರಾಯ್, ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯದಲ್ಲೇ ಸಾವನ್ನಪ್ಪಿದ್ದರು. ಕಚೇರಿಯಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದ ಸಂದರ್ಭದಲ್ಲಿಯೇ ಘಟನೆ ನಡೆದಿತ್ತು. ‘SIT’ ಇಂದ ತನಿಖೆ ಈಗಾಗಲೇ, ಸಿ.ಜೆ.ರಾಯ್…

Read More

ರಾಯಚೂರು : ಇನ್ನೊಂದು ತಿಂಗಳಿನಲ್ಲಿ ಜಾತಿಗಣತಿ ವರದಿ ಬಿಡುಗಡೆ ಮಾಡುತ್ತೇವೆ. ಹೆಚ್ಚು ಅಂದರೆ ಎರಡು ತಿಂಗಳಿನ ಒಳಗಾಗಿ ಜಾತಿಗಣತಿ ವರದಿಯನ್ನು ಬಿಡುಗಡೆ ಮಾಡುತ್ತೇವೆ. ಈಗಾಗಲೇ ಸರ್ವೆ ಆಗಿದೆ ಆ ಬಗ್ಗೆ ವರದಿ ಕೊಟ್ಟ ಮೇಲೆ ಅಂಗೀಕರಿಸಿ ಬಿಡುಗಡೆ ಮಾಡುತ್ತೇವೆ. ಚರ್ಚೆ ಮಾಡಿ ಎಲ್ಲದರ ಕುರಿತು ತೀರ್ಮಾನ ಕೈಗೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದರು. ನಾನು ಯಾವತ್ತೂ ಕೂಡ ಅಧಿಕಾರದ ಹಿಂದೆ ಬಿದ್ದವನಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ತಿಂಥಣಿ ಕಾಗಿನೆಲೆ ಪೀಠದಲ್ಲಿ ಹೇಳಿಕೆ ನೀಡಿದರು. ತಿಂಥಣಿ ಕಾಗಿನೆಲೆ ಪೀಠದ ಸಿದ್ದರಾಮಾನಂದಪುರಿ ಶ್ರೀಗಳ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಮಾತನಾಡಿದರು. ನಾನು ಹೋರಾಟದ ಮೂಲಕ ರಾಜಕೀಯ ಮಾಡುತ್ತಾ ಬಂದವನು. ಮುಂದೆಯೂ ಶಕ್ತಿ ಇರುವವರೆಗೂ ನಾನು ಹೋರಾಟ ಮಾಡುತ್ತೇನೆ. ಧ್ವನಿ ಇಲ್ಲದವರಿಗೆ ಧ್ವನಿಯಾಗಿ ಅವರ ಪರವಾಗಿ ಹೋರಾಟ ಮಾಡುತ್ತೇನೆ ಎಂದು ತಿಂಥಣಿ ಕಾಗಿನೆಲೆ ಪೀಠದಲ್ಲಿ ಮುಖ್ಯಮಂತ್ರಿ  ಸಿದ್ದರಾಮಯ್ಯ ಹೇಳಿಕೆ ನೀಡಿದರು.

Read More

ರಾಯಚೂರು : ನಾನು ಯಾವತ್ತೂ ಕೂಡ ಅಧಿಕಾರದ ಹಿಂದೆ ಬಿದ್ದವನಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ತಿಂಥಣಿ ಕಾಗಿನೆಲೆ ಪೀಠದಲ್ಲಿ ಹೇಳಿಕೆ ನೀಡಿದರು. ತಿಂಥಣಿ ಕಾಗಿನೆಲೆ ಪೀಠದ ಸಿದ್ದರಾಮಾನಂದಪುರಿ ಶ್ರೀಗಳ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ನಾನು ಹೋರಾಟದ ಮೂಲಕ ರಾಜಕೀಯ ಮಾಡುತ್ತಾ ಬಂದವನು. ಮುಂದೆಯೂ ಶಕ್ತಿ ಇರುವವರೆಗೂ ನಾನು ಹೋರಾಟ ಮಾಡುತ್ತೇನೆ. ಧ್ವನಿ ಇಲ್ಲದವರಿಗೆ ಧ್ವನಿಯಾಗಿ ಅವರ ಪರವಾಗಿ ಹೋರಾಟ ಮಾಡುತ್ತೇನೆ ಎಂದು ತಿಂಥಣಿ ಕಾಗಿನೆಲೆ ಪೀಠದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದರು. ಇನ್ನೊಂದು ತಿಂಗಳಿನಲ್ಲಿ ಜಾತಿಗಣತಿ ವರದಿ ಬಿಡುಗಡೆ ಮಾಡುತ್ತೇವೆ. ಹೆಚ್ಚು ಅಂದರೆ ಎರಡು ತಿಂಗಳಿನ ಒಳಗಾಗಿ ಜಾತಿಗಣತಿ ವರದಿಯನ್ನು ಬಿಡುಗಡೆ ಮಾಡುತ್ತೇವೆ. ಈಗಾಗಲೇ ಸರ್ವೆ ಆಗಿದೆ ಆ ಬಗ್ಗೆ ವರದಿ ಕೊಟ್ಟ ಮೇಲೆ ಅಂಗೀಕರಿಸಿ ಬಿಡುಗಡೆ ಮಾಡುತ್ತೇವೆ. ಚರ್ಚೆ ಮಾಡಿ ಎಲ್ಲದರ ಕುರಿತು ತೀರ್ಮಾನ ಕೈಗೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದರು.

Read More

ಬೆಳಗಾವಿ : ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿಯ ಭಾಗದಲ್ಲಿರುವ ಚೋರಘಾಟ್ ನಲ್ಲಿ ಕಳೆದ ಕೆಲವು ದಿನಗಳ ಹಿಂದೆ 400 ಕೋಟಿ ಬೃಹತ್ ದರೋಡೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಪೊಲೀಸರು ಈ ಒಂದು ದರೋಡೆಯ ಪ್ರಮುಖ ಆರೋಪಿ ಆಗಿರುವ ಕಿಶೋರ್ ಸಾಳ್ವೆ ನನ್ನು ಅರೆಸ್ಟ್ ಮಾಡಿದ್ದಾರೆ. ಕಿಶೋರ್ ಸಾಳ್ವೆ, ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಘೋಟಿ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ. ನಂತರ ಆತನನ್ನು ಬಂಧಿಸಲಾಗಿದೆ.ಕಿಶೋರ್ ಸಾಳ್ವೆ ಬಂಧನದೊಂದಿಗೆ ದರೋಡೆ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಎಂಟಕ್ಕೆ ಏರಿಕೆಯಾಗಿದೆ. ಪ್ರಕರಣದ ಗಂಭೀರತೆಯನ್ನು ಮನಗಂಡಿರುವ ಮಹಾರಾಷ್ಟ್ರ ಸರ್ಕಾರ, ತನಿಖೆಯನ್ನು ಕಟ್ಟುನಿಟ್ಟಾಗಿ ಮುಂದುವರೆಸಲು ಸೂಚನೆ ನೀಡಿದೆ. ಪ್ರಕರಣ ಹಿನ್ನೆಲೆ ಬೆಳಗಾವಿ ಜಿಲ್ಲೆಯ ಚೋರ್ಲಾ ಘಾಟ್ ಪ್ರದೇಶದಲ್ಲಿ 2025 ರ ಅಕ್ಟೋಬರ್ 25 ರಂದು ಎರಡು ಕಂಟೇನರ್‌ಗಳಲ್ಲಿದ್ದ ಸುಮಾರು 400 ಕೋಟಿ ರೂ. ಹಣವನ್ನು ದರೋಡೆ ಮಾಡಲಾಗಿತ್ತು ಎಂದು ಮಹಾರಾಷ್ಟ್ರದ ನಾಸಿಕ್ ಮೂಲದ ಉದ್ಯಮಿ ಸಂದೀಪ್ ದತ್ತಾ ಪಾಟೀಲ್ ಇತ್ತೀಚೆಗೆ ಮಹಾರಾಷ್ಟ್​ರ ಪೊಲೀಸರಿಗೆ ದೂರು ನೀಡಿದ್ದರು. ಅದರೊಂದಿಗೆ, ಪ್ರಕರಣ ಬೆಳಕಿಗೆ…

Read More

ವಿಜಯನಗರ : ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲೂಕಿನಲ್ಲಿ ತ್ರಿಬಲ್ ಮರ್ಡರ್ ಕೊಲೆ ಪ್ರಕರಣಕ್ಕೆ ಇದೀಗ ಸ್ಪೋಟಕ ಟ್ವಿಸ್ಟ್ ಸಿಕ್ಕಿದ್ದು ತನಿಖೆಯ ವೇಳೆ ಆರೋಪಿಯಾಗಿರುವ ಅಕ್ಷಯ್ ಪೊಲೀಸರ ಮುಂದೆ ಕೊಲೆ ಮಾಡುವುದಕ್ಕೆ ನಿಜವಾದ ಕಾರಣ ಬಾಯಿಬಿಟ್ಟಿದ್ದಾನೆ. ಆರೋಪಿ ಅಕ್ಷಯ್ ಕೊಲೆ ಮಾಡಿದ್ದು ಮೂವರನ್ನಲ್ಲ, ಬದಲಿಗೆ ನಾಲ್ವರನ್ನು ಎಂಬುದು ಬೆಳಕಿಗೆ ಬಂದಿದೆ. ಜತೆಗೆ, ಇದು ದ್ವೇಷದ ಕೊಲೆಯಲ್ಲ, ಮರ್ಯಾದಾ ಹತ್ಯೆ ಎಂಬುದೂ ಗೊತ್ತಾಗಿದೆ. ಹೌದು ಈ ಪ್ರಕರಣದಲ್ಲಿ ಆರೋಪಿಯಾಗಿರುವ ಅಕ್ಷಯ್, ತಂಗಿಯ ಪ್ರೇಮ ಪ್ರಕರಣ ಮತ್ತು ಆಕೆ ಗರ್ಭಿಣಿಯಾಗಿರುವುದು ತಿಳಿದು ಮರ್ಯಾದಾ ಹತ್ಯೆ ಮಾಡಿರುವುದಾಗಿ ಪೊಲೀಸರ ಮುಂದೆ ಬಾಯ್ಬಿಟ್ಟಿದ್ದಾನೆ. ಅಷ್ಟೇ ಅಲ್ಲದೆ, ತಂಗಿಗೆ ಬೆಂಬಲ ನೀಡಿದ ತಂದೆ, ತಾಯಿಯನ್ನೂ ಕೊಲೆ ಮಾಡಿದ್ದಾನೆ. ಪೊಲೀಸರ ವಿಚಾರಣೆ ವೇಳೆ ಬಾಯ್ಬಿಟ್ಟಿರುವ ಅಕ್ಷಯ್, ಇದು ಕೇವಲ ದ್ವೇಷದ ಕೊಲೆಯಲ್ಲ, ಕುಟುಂಬದ ಗೌರವ ಉಳಿಸಿಕೊಳ್ಳಲು ಮಾಡಿದ ಕೃತ್ಯ ಎಂದು ಹೇಳಿಕೊಂಡಿದ್ದಾನೆ. ನಾಲ್ಕು ತಿಂಗಳ ಹಿಂದೆ ಅಕ್ಷಯ್ ತಂಗಿಯ ಮೊಬೈಲ್ ಪರಿಶೀಲಿಸಿದ ವೇಳೆ ಪಿಯುಸಿ ಓದುತ್ತಿದ್ದ ಯುವಕನೊಂದಿಗೆ ಅವಳು ನಿರಂತರ ಸಂಪರ್ಕದಲ್ಲಿರುವುದು…

Read More

ಬೆಂಗಳೂರು : ಇಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಐತಿಹಾಸಿಕ 9ನೇ ಬಾರಿಗೆ ಕೇಂದ್ರ ಬಜೆಟ್ ಮಂಡನೆ ಮಾಡಿದರು. ಈ ಕುರಿತು ಬಜೆಟ್‌ನಿಂದ ರಾಜ್ಯಕ್ಕೆ ಯಾವ ಅನುಕೂಲ ಆಗಿಲ್ಲ. ಬಜೆಟ್‌ನಿಂದ ನಮ್ಮ ರಾಜ್ಯಕ್ಕೆ ಯಾವುದೇ ದೊಡ್ಡ ಪಾಲು ಬಂದಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ನಾನು ಇಷ್ಟೊತ್ತು ಗಮನಿಸಿದೆ, ಈಗೇನೋ ಯಾವುದೋ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಟ್ಟಿದ್ದಾರೆ. ನಾವು ಮನರೇಗಾ ಹೆಸರಲ್ಲಿ ನಮ್ಮ ಕ್ಷೇತ್ರದಲ್ಲೇ ಮ್ಯಾರಥಾನ್ ಮಾಡಿದ್ದೇವೆ. ಮನರೇಗಾ ಬದಲಾವಣೆ ವಾಪಸ್ ತೆಗೆದುಕೊಳ್ಳಲಿ. ಹಿಂದೆ ಯಾವ ಸ್ಕೀಂ ಇತ್ತು ಅದೇ ಸ್ಕೀಂ ಮುಂದುವರೆಯಲಿ. 60:40 ಯಾವುದೇ ಕಾರಣಕ್ಕೂ ನಡೆಯಲ್ಲ. ಯಾವ ಸರ್ಕಾರವೂ ಬಂಡವಾಳ ಹಾಕಲು ಆಗಲ್ಲ ಎಂದರು. ಬೆಂಗಳೂರಿಗೆ ಹೈಸ್ಪೀಡ್ ರೈಲು ಘೋಷಣೆ ವಿಚಾರದ ಬಗ್ಗೆ ಮಾತನಾಡಿ, ಯಾವ ಹೈಸ್ಪೀಡ್ ರೈಲು ರೀ? ಯಾವ ಸ್ಪೀಡ್ ರೈಲೂ ಬರಲ್ಲ. 50:50 ಅನುಪಾತದಲ್ಲಿ ಮಾಡಲು ಆಗಲ್ಲ, ಬೇಕಿದ್ರೆ 90:10 ಕೊಡಲಿ. ಆಗ ನಾವು 10% ನಾವು ಕೊಡುತ್ತೇವೆ. ಬೇರೆ ರಾಜ್ಯಗಳಿಗೆ…

Read More