Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಬೆಂಗಳೂರಿನ IPL ಫೈನಲ್ ಪಂದ್ಯವನ್ನು ಅಹ್ಮದಾಬಾದ್ ಗೆ ಶಿಫ್ಟ್ ಮಾಡಿದ್ದ ವಿಚಾರಕ್ಕೆ ಸಂಬಂಧಪಟ್ಟಂತೆ ಗೃಹ ಸಚಿವ ಜಿ.ಪರಮೇಶ್ವರ್ ಅವರು, ಭದ್ರತೆ ವಿಚಾರವಾಗಿ ಯಾವುದೇ ದೂರು ಬಂದಿಲ್ಲ ಬೆಂಗಳೂರಲ್ಲಿ 5 ಪಂದ್ಯ ನಡೆದಿದೆ. ಭದ್ರತೆ ವಿಚಾರ ಕಾರಣ ಅಲ್ಲ. RCB ಅಥವಾ ಪೊಲೀಸರಿಂದ ಯಾವುದೇ ದೂರು ಬಂದಿಲ್ಲ ಎಂದು ತಿಳಿಸಿದರು. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ನಲ್ಲಿ 33 ಸಾವಿರ ಆಸನಗಳಿವೆ. ಸ್ಪಾನ್ಸರ್ ಗಳಿಗೆ 7 ರಿಂದ 8 ಸಾವಿರ ಪಾಸ್ ಕೊಡಬೇಕಾಗುತ್ತದೆ. ಹೀಗಾಗಿ ಅವರೇ 7 ರಿಂದ 8 ಸಾವಿರ ಸೀಟ್ ಬ್ಲಾಕ್ ಮಾಡುತ್ತಾರೆ. ಉಳಿಯೋದು 25 ಸಾವಿರ ಸೀಟ್ ಹೀಗಾಗಿ ವರ್ಕೌಟ್ ಆಗಲ್ಲ. ಮೊದ್ಲೇ ಇದೆಲ್ಲವನ್ನು ವರದಿ ಮಾಡಿ ನಿರ್ಧಾರಿಸಿದ್ದಾರೆ ಅನಿಸುತ್ತೆ. ಶಾಸಕರ ಟಿಕೆಟ್ ದುರ್ಬಳಕೆಯಿಂದ ಕೈತಪ್ಪಿದೆಯಾ ಎಂಬ ವಿಚಾರವಾಗಿ ಶಾಸಕರ ಪಾಸ್ ಗು ಪಂದ್ಯ ಸ್ಥಳತಂರಕ್ಕೂ ಸಂಬಂಧ ಇಲ್ಲ ಎಂದು ತಿಳಿಸಿದರು.
ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ್ ಕುಲಕರ್ಣಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ವಿಭಾಗೀಯ ಪೀಠವು ಮೇ 26ಕ್ಕೆ ಮುಂದೂಡಿ ಇಂದು ಆದೇಶ ಹೊರಡಿಸಿದೆ. ತಮ್ಮ ವಿರುದ್ಧದ ಜೀವಾವಧಿ ಶಿಕ್ಷೆಗೆ ತಡೆ ನೀಡಬೇಕು ಹಾಗೂ ಜಾಮೀನು ಮಂಜೂರು ಮಾಡಬೇಕು ಎಂದು ಕೋರಿ ಕುಲಕರ್ಣಿ ಅವರು ನ್ಯಾಯಾಲಯದ ಮೆಟ್ಟಿಲೇರಿದ್ದರು. ಸಿಬಿಐನಿಂದ ಕಾಲಾವಕಾಶದ ಕೋರಿಕೆ: ಇಂದು ಈ ಅರ್ಜಿಯ ವಿಚಾರಣೆ ನಡೆದ ಸಂದರ್ಭದಲ್ಲಿ, ಕೇಂದ್ರ ತನಿಖಾ ದಳದ (CBI) ಪರ ವಕೀಲರು ಹಾಜರಾಗಿ, ಅರ್ಜಿದಾರರು ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ ಆಕ್ಷೇಪಣೆಗಳನ್ನು ಸಲ್ಲಿಸಲು ಕಾಲಾವಕಾಶದ ಅಗತ್ಯವಿದೆ ಎಂದು ನ್ಯಾಯಪೀಠಕ್ಕೆ ಮನವಿ ಮಾಡಿದರು. ತನಿಖಾ ಸಂಸ್ಥೆಯ ಮನವಿಯನ್ನು ಪುರಸ್ಕರಿಸಿದ ಹೈಕೋರ್ಟ್, ಆಕ್ಷೇಪಣೆ ಸಲ್ಲಿಸಲು ಸಮಯ ನೀಡಿ ವಿಚಾರಣೆಯನ್ನು ಮುಂದಿನ ದಿನಾಂಕಕ್ಕೆ ನಿಗದಿಪಡಿಸಿತು. ಸಹ ಆರೋಪಿ ಟಿಂಗರಿಕರ ಅರ್ಜಿಗೂ ಸಿಗದ ಸಮ್ಮತಿ: ಇದೇ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಚನ್ನಕೇಶವ ಟಿಂಗರಿಕರ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆಯನ್ನೂ…
ತೆಲಂಗಾಣ : ಮಹಿಳಾ ಸುರಕ್ಷತೆ ಬಗ್ಗೆ ಮಹಿಳಾ ಅಧಿಕಾರಿಯೊಬ್ಬರು ಮಾರು ವೇಷದಲ್ಲಿ ಬೀದಿಯಲ್ಲಿ ನಿಂತು ಪರಿಶೀಲನೆ ನಡೆಸಿದಾಗ ಅಘಾತಕಾರಿ ಘಟನೆ ನಡೆದಿದ್ದು, ಕೇವಲ ಮೂರು ಗಂಟೆಗಳಲ್ಲಿ ಸುಮಾರು 40 ಮಂದಿ ಅವರಿಗೆ ಕಿರುಕುಳ ನೀಡಿದ್ದಾರೆ. ಈ ಘಟನೆ ನಡೆದಿರುವುದು ಹೈದ್ರಾಬಾದ್ ನಲ್ಲಿ. ತೆಲಂಗಾಣದ ಮಹಿಳಾ ಐಪಿಎಸ್ ಅಧಿಕಾರಿ ಸುಮತಿ ಅವರು ಮೇ 1 ರಂದು ಮಲ್ಕಾಜ್ಗಿರಿ ಪೊಲೀಸ್ ಕಮಿಷನರ್ ಆಗಿ ಅಧಿಕಾರ ವಹಿಸಿಕೊಂಡರು. ಅಂದೇ ಮಧ್ಯರಾತ್ರಿ, ಅವರು ಮಹಿಳಾ ಸುರಕ್ಷತೆಯನ್ನು ಪರೀಕ್ಷಿಸಲು ಮುಂದಾದರು. ಹೈದರಾಬಾದ್ನ ಜನನಿಬಿಡ ದಿಲ್ಸುಖ್ನಗರ ಬಸ್ ನಿಲ್ದಾಣದಲ್ಲಿ ಸಾಮಾನ್ಯ ಮಹಿಳೆಯಂತೆ, ಮಾಮೂಲಿ ಬಟ್ಟೆ ಧರಿಸಿ ನಿಂತಿದ್ದರು. ಯಾವುದೇ ಭದ್ರತೆ, ಮುಖಕ್ಕೆ ಮಾಸ್ಕ್ ಇಲ್ಲದೆ ಮಧ್ಯರಾತ್ರಿ 12:30 ರಿಂದ 3:30 ರವರೆಗೆ ಅಲ್ಲೇ ಇದ್ದರು. ಅವರು ಒಂಟಿಯಾಗಿರುವುದನ್ನು ನೋಡಿ, ಮೂರು ಗಂಟೆಗಳಲ್ಲಿ ಸುಮಾರು 40 ಪುರುಷರು ಕಿರುಕುಳ ನೀಡಲು ಯತ್ನಿಸಿದರು. ‘ರಾತ್ರಿ ಬರ್ತೀಯಾ? ರೇಟ್ ಎಷ್ಟು?’ ಎಂದು ಅಸಭ್ಯವಾಗಿ ಮಾತನಾಡಿಸಿ ಪೇಚಿಗೆ ಸಿಲುಕಿಸಿದರು. ಕಿರುಕುಳ ನೀಡಿದವರಲ್ಲಿ ಡ್ರಗ್ಸ್ ವ್ಯಸನಿಗಳಿಂದ ಹಿಡಿದು,…
ಪಶ್ಚಿಮಬಂಗಾಳ : ಪಶ್ಚಿಮ ಬಂಗಾಳದ ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಮೂಡಿಸಿರುವ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಅವರ ಆಪ್ತ ಸಹಾಯಕ (PA) ಚಂದ್ರನಾಥ್ ಭಟ್ಟಾಚಾರ್ಯ ಅವರ ನಿಗೂಢ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ, ರಾಜ್ಯ ಸರ್ಕಾರವು ಈಗ ತನಿಖೆಯನ್ನು ಚುರುಕುಗೊಳಿಸಲು ವಿಶೇಷ ತನಿಖಾ ತಂಡವನ್ನು (SIT) ರಚನೆ ಮಾಡಿದೆ. SIT ರಚನೆ ಮತ್ತು ತನಿಖೆಯ ಉದ್ದೇಶ ಚಂದ್ರನಾಥ್ ಭಟ್ಟಾಚಾರ್ಯ ಅವರ ಸಾವಿನ ಸುತ್ತ ಹಲವಾರು ಅನುಮಾನಗಳು ವ್ಯಕ್ತವಾಗಿದ್ದವು. ಈ ಹಿನ್ನೆಲೆಯಲ್ಲಿ ಪ್ರಕರಣದ ಆಳವಾದ ತನಿಖೆ ನಡೆಸಲು ಹಿರಿಯ ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ SIT (Special Investigation Team) ಅನ್ನು ರಚಿಸಲಾಗಿದೆ. ಈ ತಂಡವು ಘಟನಾ ಸ್ಥಳದ ಮಹಜರು, ಮರಣೋತ್ತರ ಪರೀಕ್ಷೆಯ ವರದಿ ಹಾಗೂ ಚಂದ್ರನಾಥ್ ಅವರ ಕೊನೆಯ ಕ್ಷಣಗಳ ಸಂಪರ್ಕಗಳ ಬಗ್ಗೆ ಸಮಗ್ರವಾಗಿ ಪರಿಶೀಲನೆ ನಡೆಸಲಿದೆ. ಪ್ರಕರಣದ ಹಿನ್ನೆಲೆ ಕೆಲವು ದಿನಗಳ ಹಿಂದೆ ಸುವೇಂದು ಅಧಿಕಾರಿ ಅವರ ನಂಬಿಕಸ್ತ ಆಪ್ತರೆಂದೇ ಗುರುತಿಸಿಕೊಂಡಿದ್ದ ಚಂದ್ರನಾಥ್ ಅವರ ಮೃತದೇಹವು ಸಂಶಯಾಸ್ಪದ ರೀತಿಯಲ್ಲಿ ಪತ್ತೆಯಾಗಿತ್ತು.…
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಇದೇ ಮೇ 10ರಂದು ರಾಜ್ಯ ರಾಜಧಾನಿ ಬೆಂಗಳೂರಿಗೆ ಭೇಟಿ ನೀಡಲಿದ್ದು, ನಗರದಲ್ಲಿ ಎರಡು ಪ್ರಮುಖ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಪ್ರಮುಖವಾಗಿ ಅಧ್ಯಾತ್ಮಿಕ ಕೇಂದ್ರವಾದ ‘ಆರ್ಟ್ ಆಫ್ ಲಿವಿಂಗ್’ ಸಂಸ್ಥೆಯ ಮೈಲಿಗಲ್ಲಿನ ಸಂಭ್ರಮಾಚರಣೆಗೆ ಅವರು ಸಾಕ್ಷಿಯಾಗಲಿದ್ದಾರೆ. ಆರ್ಟ್ ಆಫ್ ಲಿವಿಂಗ್ 45ರ ಸಂಭ್ರಮ: ಶ್ರೀ ರವಿಶಂಕರ್ ಗುರೂಜಿ ಅವರು ಸ್ಥಾಪಿಸಿದ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯು ಯಶಸ್ವಿಯಾಗಿ 45 ವರ್ಷಗಳನ್ನು ಪೂರೈಸುತ್ತಿದ್ದು, ಇದರ ಜತೆಗೇ ಗುರೂಜಿಯವರ 70ನೇ ಜನ್ಮದಿನದ ಅಂಗವಾಗಿ ಬೃಹತ್ ಸಮಾರಂಭವನ್ನು ಆಯೋಜಿಸಲಾಗಿದೆ. ಈ ದ್ವಿಗುಣ ಸಂಭ್ರಮದ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದು, ಸಂಸ್ಥೆಯ ಅಧ್ಯಾತ್ಮಿಕ ಮತ್ತು ಸಾಮಾಜಿಕ ಕೊಡುಗೆಗಳನ್ನು ಗೌರವಿಸಲಿದ್ದಾರೆ. ನೂತನ ಧ್ಯಾನ ಮಂದಿರ ಲೋಕಾರ್ಪಣೆ: ಈ ಭೇಟಿಯ ವೇಳೆ ಪ್ರಧಾನಿಯವರು ವಿವಿಧ ಸಾಂಪ್ರದಾಯಿಕ ಕಲೆಗಳಿಂದ ಅದ್ಭುತವಾಗಿ ಸಿಂಗಾರಗೊಂಡಿರುವ ನೂತನ ಧ್ಯಾನ ಮಂದಿರವನ್ನು ಉದ್ಘಾಟಿಸಲಿದ್ದಾರೆ. ಮೇ 10ರಿಂದ ಪ್ರಾರಂಭವಾಗಿ ಮೇ 25ರವರೆಗೆ ಆಶ್ರಮದಲ್ಲಿ ನಿರಂತರವಾಗಿ ವಿಶೇಷ ಕಾರ್ಯಕ್ರಮಗಳು, ಸಾಂಸ್ಕೃತಿಕ ವೈಭವ…
ಧಾರವಾಡ : ಧಾರವಾಡದಲ್ಲಿ ಘೋರ ದುರಂತ ಒಂದು ಸಂಭವಿಸಿದ್ದು ನೀರಿನ ಗುಂಡಿಯಲ್ಲಿ ಮುಳುಗಿ ಇಬ್ಬರು ಬಾಲಕರು ಸಾವನ್ನಪಿರುವ ಘಟನೆ ಧಾರವಾಡ ತಾಲೂಕಿನ ಮನಸೂರು ಗ್ರಾಮದಲ್ಲಿ ನಡೆದಿದೆ. ಕುಮಾರ್ ಮುದುಕಣ್ಣನವರ್ (8) ಮತ್ತು ಪ್ರಥಮ್ (8) ಮೃತ ದುರ್ದೈವಿಗಳು ಎಂದು ತಿಳಿದುಬಂದಿದೆ. ಆಟವಾಡುತ್ತ ನೀರಿನ ಗುಂಡಿ ಬಳಿಗೆ ಹೋಗಿದ್ದಾಗ ಈ ದುರಂತ ಸಂಭವಿಸಿದೆ. ಮನೆ ನಿರ್ಮಿಸಲು ತೆಗೆದಿದ್ದ ಗುಂಡಿಯಲ್ಲಿ ಇಬ್ಬರು ಬಾಲಕರು ಬಿದ್ದು ಸಾವನಪ್ಪಿದ್ದಾರೆ. ಧಾರವಾಡ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಮೃತ ಬಾಲಕರ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.
ಬೆಂಗಳೂರು : ಕನ್ನಡ ಚಿತ್ರರಂಗದ ಉದಯೋನ್ಮುಖ ನಟ ಹಾಗೂ ನಿರ್ದೇಶಕ ಜೆ.ಪಿ. ತುಮಿನಾಡು ಅವರು ಹೊಸ ಜೀವನಕ್ಕೆ ಕಾಲಿಟ್ಟಿದ್ದಾರೆ. ‘ಸು ಫ್ರಮ್ ಸೊ’ (Su From So) ಎಂಬ ವಿಭಿನ್ನ ಶೀರ್ಷಿಕೆಯ ಚಿತ್ರದ ಮೂಲಕ ಸ್ಯಾಂಡಲ್ವುಡ್ನಲ್ಲಿ ಗುರುತಿಸಿಕೊಂಡಿದ್ದ ಇವರು, ಇತ್ತೀಚೆಗೆ ವೈವಾಹಿಕ ಜೀವನಕ್ಕೆ ಅಧಿಕೃತವಾಗಿ ನಾಂದಿ ಹಾಡಿದ್ದಾರೆ. ತುಮಿನಾಡು ಅವರ ವಿವಾಹ ಸಮಾರಂಭವು ಅತ್ಯಂತ ಸರಳ ಹಾಗೂ ಸುಂದರವಾಗಿ ನೆರವೇರಿದ್ದು, ಆಪ್ತರು ಮತ್ತು ಕುಟುಂಬಸ್ಥರು ಈ ಸಂಭ್ರಮಕ್ಕೆ ಸಾಕ್ಷಿಯಾದರು. ಜೆ.ಪಿ. ತುಮಿನಾಡು ಅವರು ಕೇವಲ ನಿರ್ದೇಶನ ಮಾತ್ರವಲ್ಲದೆ, ಅಭಿನಯದ ಮೂಲಕವೂ ಪ್ರೇಕ್ಷಕರ ಗಮನ ಸೆಳೆದವರು. ಸದಾ ಸೃಜನಶೀಲ ಕೆಲಸಗಳಲ್ಲಿ ತೊಡಗಿಸಿಕೊಳ್ಳುತ್ತಿದ್ದ ಅವರು, ಇದೀಗ ಸಂಸಾರ ನೌಕೆಯ ಜವಾಬ್ದಾರಿಯನ್ನು ಹೊತ್ತುಕೊಂಡಿದ್ದಾರೆ. ಮದುವೆಯ ಸುಂದರ ಕ್ಷಣಗಳ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಅಭಿಮಾನಿಗಳು ಹಾಗೂ ಚಿತ್ರರಂಗದ ಗಣ್ಯರು ನವಜೋಡಿಗೆ ಶುಭ ಹಾರೈಸುತ್ತಿದ್ದಾರೆ. ಕರಾವಳಿ ಮೂಲದ ಪ್ರತಿಭೆಯಾದ ಜೆ.ಪಿ. ತುಮಿನಾಡು, ತಮ್ಮ ಸಿನಿಮಾಗಳಲ್ಲಿ ಸ್ಥಳೀಯ ಸೊಗಡು ಮತ್ತು ವಿಶಿಷ್ಟ ಕಥಾವಸ್ತುವನ್ನು ಅಳವಡಿಸಿಕೊಳ್ಳುವಲ್ಲಿ ಹೆಸರುವಾಸಿ. ‘ಸು ಫ್ರಮ್…
ಚೆನ್ನೈ: ತಮಿಳುನಾಡು ರಾಜಕೀಯದಲ್ಲಿ ಇಂದು ಅನಿರೀಕ್ಷಿತ ತಿರುವುಗಳು ಕಂಡುಬರುತ್ತಿವೆ. ತಮಿಳಗ ವೆಟ್ರಿ ಕಳಗಂ (TVK) ಪಕ್ಷದ ಮುಖ್ಯಸ್ಥ ಹಾಗೂ ನಟ ವಿಜಯ್ ಅವರು ಇಂದು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಬೇಕಿತ್ತು. ಆದರೆ, ಕೆಲವು ಅನಿವಾರ್ಯ ಕಾರಣಗಳಿಂದಾಗಿ ಈ ಪದಗ್ರಹಣ ಸಮಾರಂಭವನ್ನು ಸದ್ಯಕ್ಕೆ ಮುಂದೂಡಲಾಗಿದೆ. ಈ ಬೆಳವಣಿಗೆ ಬೆನ್ನಲ್ಲೇ, ರಾಜ್ಯದ ಪ್ರಬಲ ವಿರೋಧ ಪಕ್ಷವಾದ AIADMK ಯಲ್ಲಿ ಭಿನ್ನಮತ ಸ್ಫೋಟಗೊಂಡಿದ್ದು, ವಿಜಯ್ ನೇತೃತ್ವದ ಟಿವಿಕೆ ಪಕ್ಷಕ್ಕೆ ಬೆಂಬಲ ನೀಡುವ ವಿಚಾರದಲ್ಲಿ ಪಕ್ಷ ಇಬ್ಬಾಗವಾಗಿದೆ. ಎರಡು ಬಣಗಳಾಗಿ ಸೃಷ್ಟಿಯಾದ AIADMK: ಸದ್ಯ AIADMK ಪಕ್ಷದಲ್ಲಿ ಎಡಪ್ಪಾಡಿ ಪಳನಿಸ್ವಾಮಿ (EPS) ಬಣ ಮತ್ತು ಸಿ.ವಿ. ಷಣ್ಮುಗಂ ಬಣ ಎಂದು ಎರಡು ಗುಂಪುಗಳು ಸೃಷ್ಟಿಯಾಗಿವೆ. ವಿಜಯ್ ಅವರ ಟಿವಿಕೆ ಪಕ್ಷಕ್ಕೆ ಬೆಂಬಲ ನೀಡುವ ವಿಚಾರದಲ್ಲಿ ಉಭಯ ನಾಯಕರ ನಡುವೆ ಭಿನ್ನಾಭಿಪ್ರಾಯ ತಲೆದೂರಿದೆ. ಈ ಪೈಕಿ ಷಣ್ಮುಗಂ ಅವರು ವಿಜಯ್ ಬೆಂಬಲಕ್ಕೆ ನಿಲ್ಲಲು ನಿರ್ಧರಿಸಿದ್ದು, ಇದು ಪಕ್ಷದೊಳಗೆ ದೊಡ್ಡ ಮಟ್ಟದ ಬಣ ರಾಜಕೀಯಕ್ಕೆ ನಾಂದಿ ಹಾಡಿದೆ. ಪಕ್ಷದ ಒಟ್ಟು 47…
ಬೆಂಗಳೂರು: ರಾಜಧಾನಿಯ ಹೊರವಲಯದ ಡಾಬಸ್ಪೇಟೆಯ ಅಂಚೆಮನೆ ಗೇಟ್ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ಭೀಕರ ಸರಣಿ ಅಪಘಾತ ಸಂಭವಿಸಿದೆ. ಈ ಘಟನೆಯಲ್ಲಿ ಸುಮಾರು 10ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿದ ಬಗ್ಗೆ ವರದಿಯಾಗಿಲ್ಲ. ಆರು ವಾಹನಗಳ ನಡುವೆ ಡಿಕ್ಕಿ: ಈ ಸರಣಿ ಅಪಘಾತದಲ್ಲಿ ಒಟ್ಟು ಆರು ವಾಹನಗಳು ಜಖಂಗೊಂಡಿವೆ. ಒಂದು ಬೈಕ್, ಎರಡು ಕಾರುಗಳು, ಒಂದು ಲಾರಿ, ಸರ್ಕಾರಿ ಬಸ್ ಹಾಗೂ ಬೊಲೆರೋ ಜೀಪ್ ಪರಸ್ಪರ ಡಿಕ್ಕಿ ಹೊಡೆದಿದ್ದು, ವಾಹನಗಳು ಜರ್ಜರಿತವಾಗಿವೆ. ವೇಗವಾಗಿ ಬಂದ ವಾಹನವೊಂದು ನಿಯಂತ್ರಣ ತಪ್ಪಿ ಮುಂದಿದ್ದ ವಾಹನಗಳಿಗೆ ಡಿಕ್ಕಿ ಹೊಡೆದಿದ್ದೇ ಈ ಅವಘಡಕ್ಕೆ ಕಾರಣ ಎನ್ನಲಾಗಿದೆ. ಗಾಯಾಳುಗಳ ಆಸ್ಪತ್ರೆಗೆ ದಾಖಲು: ಅಪಘಾತ ಸಂಭವಿಸಿದ ತಕ್ಷಣ ಸ್ಥಳೀಯರು ಹಾಗೂ ದಾರಿಹೋಕರು ನೆರವಿಗೆ ಧಾವಿಸಿದ್ದಾರೆ. ಗಾಯಗೊಂಡ 10ಕ್ಕೂ ಹೆಚ್ಚು ಜನರನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಗಾಯಾಳುಗಳಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದ್ದರೂ, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಕಿಲೋಮೀಟರ್ಗಟ್ಟಲೆ ಟ್ರಾಫಿಕ್ ಜಾಮ್:…
ವಿಜಯಪುರ : ವಿಜಯಪುರದಲ್ಲಿ ಬೀದಿ ನಾಯಿಗಳ ಅಟ್ಟಹಾಸ ಮಿತಿಮೀರಿದ್ದು, ನಡು ರಸ್ತೆಯಲ್ಲಿಯೇ ಪುಟ್ಟ ಮಗುವಿನ ಮೇಲೆ ಎರಡು ಬೀದಿ ನಾಯಿಗಳು ಭೀಕರವಾದ ದಾಳಿ ಮಾಡಿದ್ದು, ರಸ್ತೆಯಿಂದಲೇ ಬಾಲಕನನ್ನು ಎಳೆದೊಯ್ದಿರುವ ಘಟನೆ ವರದಿಯಾಗಿದೆ. ಕೇವಲ ಒಂದೇ ವಾರದಲ್ಲಿ ಹಲವು ಮಕ್ಕಳ ಮೇಲೆ ಬೀದಿ ನಾಯಿಗಳು ದಾಳಿ ಮಾಡಿವೆ. ವಿಜಯಪುರ ನಗರದಲ್ಲಿ ಈ ಒಂದು ಘಟನೆ ನಡೆದಿದ್ದು, ನಿನ್ನೆ ರಾಜಕುಮಾರ್ ಲೇಔಟ್ ನಲ್ಲಿ ಈ ಒಂದು ಘಟನೆ ನಡೆದಿದೆ. ಬಾಲಕನ ಬೆನ್ನಿನಲ್ಲಿ ಎರಡು ಇಂಚಿನಷ್ಟು ಆಳವಾದ ಗಾಯವಾಗಿದ್ದು ಸದ್ಯ ಐಸಿಯುನಲ್ಲಿ ಬಾಲಕನಿಗೆ ಚಿಕಿತ್ಸೆ ನೀಡಲಾಗುತ್ತಿದೆ ರಸ್ತೆಯ ಮೇಲೆ ದಾಳಿ ಮಾಡಿದ ನಾಯಿಗಳು ರಸ್ತೆಯ ಪಕ್ಕದಲ್ಲಿ ಮಗುವನ್ನು ಎಳೆದುಕೊಂಡು ಹೋಗಿದೆ. ಸಿಸಿಟಿವಿ ಕ್ಯಾಮೆರಾದಲ್ಲಿ ಬೆಚ್ಚಿ ಬೀಳಿಸುವ ವಿಡಿಯೋ ಸೆರೆಯಾಗಿದೆ.














