Author: kannadanewsnow05

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿಗೆ ಇದೀಗ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. ವಿಬಿ-ಜಿ ರಾಮ್ ಜಿ ಕಾಯ್ದೆ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ ಹೊಸ ಕಾಯ್ದೆಯು ಉದ್ಯೋಗ ಖಾತರಿ ತತ್ವಕ್ಕೆ ಮಾರಕವಾಗಿದೆ. ಈ ಹಿಂದಿನ ಮನರೇಗಾ ಯೋಜನೆ ಅಡಿಯಲ್ಲಿ ಕೇಂದ್ರ ಸರ್ಕಾರದ್ದು 90% ಹಾಗೂ 10% ರಾಜ್ಯದ ಹಂಚಿಕೆಯಾಗಿದ್ದು ಈಗಿನ ಕಾಯ್ದೆಯು ರಾಜ್ಯ ಸರ್ಕಾರದ ಆರ್ಥಿಕತೆಗೆ ಹೊರೆಯಾಗಲಿದೆ. ಹೊಸ ಕಾಯ್ದೆಯು 258 ಮತ್ತು 250ನೇ ವಿಧಿಯ ಉಲ್ಲಂಘನೆಯಾಗಿದೆ. ರಾಜ್ಯಗಳ ಜೊತೆಗೆ ಚರ್ಚೆ ನಡೆಸದೆ ಇದನ್ನು ಜಾರಿಗೆ ತರಲಾಗಿದೆ. ಈ ವಿಧಾನವು ಸಹಕಾರಿ ಒಕ್ಕೂಟದ ನಾಶಕ್ಕೆ ದಾರಿಯಾಗಿದೆ ಹಾಗಾಗಿ ವಿವಿಜಿ ರಾಮ್ ಜಿ ಕಾಯಿದೆ ಸ್ಥಗಿತಗೊಳಿಸುವಂತೆ ಪತ್ರ ಬರೆದಿದ್ದು ಸಮೃದ್ಧ ಭಾರತ ನಿರ್ಮಿಸಬೇಕೆಂದು ಮನವಿ ಮಾಡುತ್ತೇನೆ ಎಂದು ಪ್ರಧಾನಿಗೆ ಪತ್ರ ಬರೆದು ಸಿಎಂ ಸಿದ್ದರಾಮಯ್ಯ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.

Read More

ಬೆಂಗಳೂರು : ಬೆಂಗಳೂರಲ್ಲಿ 3ನೇ ಮಹಡಿಯಿಂದ ಹಾರಿ ಬಯೋಕಾನ್ ಕಂಪನಿ ಉದ್ಯೋಗಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆನಂತ್ ಭಟ್ (35) ಆತ್ಮಹತ್ಯೆಗೆ ಶರಣಾಗಿರುವ ಉದ್ಯೋಗಿ ಎಂದು ತಿಳಿದುಬಂದಿದೆ.ಎಲೆಕ್ಟ್ರಾನಿಕ್ ಸಿಟಿ 2ನೇ ಹಂತಕ್ಸ ಬಯೋಕಾನ್ ಕಂಪನಿಯಲ್ಲಿ ನಡೆದಿದೆ. ಸದ್ಯ ಘಟನಾ ಸ್ಥಳಕ್ಕೆ ಹೆಬ್ಬಗೋಡಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಅನಂತ್ ಮೃತದೇಹವನ್ನು ಎಲೆಕ್ಟ್ರಾನಿಕ್ ಸಿಟಿಯ ಖಾಸಗಿ ಆಸ್ಪತ್ರೆಗೆ ಶಿಫ್ಟ್ ಮಾಡಿದ್ದಾರೆ. ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯಾವ ಕಾರಣಕ್ಕೆ ಅನಂತ್ ಭಟ್ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನುವುದು ತನಿಖೆಯ ನಂತರ ತಿಳಿದುಬರಲಿದೆ.

Read More

ಹುಬ್ಬಳ್ಳಿ : ಇಲ್ಲಿನ ಕೆಎಂಸಿಆರ್‌ಐ ಆಸ್ಪತ್ರೆ ಮೇಲೆ ಲೋಕಾಯುಕ್ತರು ಮಂಗಳವಾರ ದಾಳಿ ಮಾಡಿದ್ದು, ದಾಖಲಾತಿಗಳ ಪರಿಶೀಲನೆ ನಡೆಸುತ್ತಿದ್ದಾರೆ. ಆಸ್ಪತ್ರೆಯಲ್ಲಿ ಔಷಧಿಗಳನ್ನು ಹೊರಗೆ ಬರೆದು ಕೊಡುತ್ತಿರುವ ಬಗ್ಗೆ ದೂರುಗಳಿದ್ದವು. ವ್ಯಕ್ತಿಯೋರ್ವ ಇಂಜೆಕ್ಷನ್‌ಗಾಗಿ ಪರದಾಡಿದ್ದ ವಿಡಿಯೋ ವೈರಲ್ ಆಗಿತ್ತು. ಈ ಬಗ್ಗೆ ಉಪ ಲೋಕಾಯುಕ್ತ ನ್ಯಾಯಮೂರ್ತಿ ಫಣೀಂದ್ರ ಸೂಚನೆ ನೀಡಿದ್ದರು. ಸ್ವಯಂ ದೂರು ದಾಖಲಿಸಿಕೊಂಡು ತನಿಖೆ ನಡೆಸಲು ಸೂಚನೆ ನೀಡಿದ್ದರು. ಈ ವೇಳೆ ಲೋಕಾಯುಕ್ತ ಎಸ್​ಪಿ ಸಿದ್ದಲಿಂಗಪ್ಪ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, ಅಕ್ಟೊಬರ್ ತಿಂಗಳಲ್ಲಿ ರೈತನೋರ್ವ ಔಷಧಿಗಾಗಿ ತಿರುಗಾಡುವ ವಿಡಿಯೋ ವೈರಲ್ ಆಗಿತ್ತು. ಈ ಬಗ್ಗೆ ಉಪ ಲೋಕಾಯುಕ್ತ ನ್ಯಾಯಮೂರ್ತಿ ಸ್ವಯಂ ದೂರು ದಾಖಲಿಸಿಕೊಂಡು ಪ್ರಾಥಮಿಕ ವರದಿ‌ ನೀಡಲು ನಮಗೆ ಸೂಚನೆ ನೀಡಿದ್ದಾರೆ. ಸಾರ್ವಜನಿಕರಿಂದ ದೂರು ಸಹ ಕೊಡಲಾಗಿತ್ತು. ಪ್ರಾಥಮಿಕ ವಿಚಾರಣೆ ಮಾಡಿ ವರದಿ ಕೇಳಿದ್ರು. ಹೀಗಾಗಿ ಶೋಧ ಮಾಡುತ್ತಿದ್ದೇವೆ. ಚಿಕಿತ್ಸೆ ವಿಭಾಗ, ಶುಚಿತ್ವ, ಆಡಳಿತ ವ್ಯವಸ್ಥೆ ಬಗ್ಗೆ ದೂರುಗಳು ಬಂದಿವೆ. ಈಗ ಪರಿಶೀಲನೆ ಮಾಡ್ತಾ ಇದ್ದೇವೆ ಎಂದರು. ಸರ್ಕಾರಿ ವೈದ್ಯರು ಹೊರಗಡೆಗೆ ಚೀಟಿ ಬರೆದುಕೊಡುತ್ತಿಲ್ಲ.…

Read More

ಬೆಂಗಳೂರು : ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯದಲ್ಲಿ ವಿಳಂಬವಾಗುತ್ತಿರುವ ಬಗ್ಗೆ ರಾಜ್ಯಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.ಇದೀಗ ಹೊಸ ವರ್ಷದ ವೇಳೆ ಫಲಾನುಭವಿಗಳ ಖಾತೆಗೆ ಒಂದು ಕಂತಿನ ಹಣ ಬಂದಿದೆ ಎಂದು ತಿಳಿದುಬಂದಿದೆ. ಈ ಬಗ್ಗೆ ಗೃಹಲಕ್ಷ್ಮಿ ಫಲಾನುಭವಿಗಳು ಸಂತಸ ವ್ಯಕ್ತಪಡಿಸಿದ್ದಾರೆ. ಹೌದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದಂತೆ ಹೊಸ ವರ್ಷಕ್ಕೆ ಯಜಮಾನಿಯರಿಗೆ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ಆಗಿದೆ.ಗೃಹಲಕ್ಷ್ಮಿ ಯೋಜನೆಯ 24 ನೇ ಕಂತಿನ 2000 ರೂ ಬೆಳಗಾವಿ ಜಿಲ್ಲೆಯ ಹಲವು ಮಹಿಳೆಯರ ಖಾತೆಗೆ ಜಮಾ ಆಗಿದೆ. ಆದರೆ ಬೆಳಗಾವಿ ಜಿಲ್ಲೆಯ ಹಲವು ಮಹಿಳೆಯರ ಖಾತೆಗೆ ಜಮಾ ಆಗಿದೆ. ಈ ಹಿನ್ನೆಲೆ ಮಹಿಳೆಯರು ಸಂತಸ ವ್ಯಕ್ತಪಡಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಯಡಿ ಹಣ ತಿಂಗಳಿಗೊಮ್ಮೆ ಬಿಡುಗಡೆಯಾಗಬೇಕಾಗಿದ್ದರೂ, ಕೆಲವೊಮ್ಮೆ ತಾಂತ್ರಿಕ ಕಾರಣಗಳಿಂದಾಗಿ ಒಂದೇ ಬಾರಿ ಎರಡು ಅಥವಾ ಮೂರು ತಿಂಗಳ ಹಣವೂ ಜಮಾ ಆಗುತ್ತಿದೆ. ಫೆಬ್ರವರಿ – ಮಾರ್ಚ್ ತಿಂಗಳ ಗೃಹಲಕ್ಷ್ಮಿ ಹಣ ಬಿಡುಗಡೆಯಾಗಿಲ್ಲ. ಪರಿಶೀಲಿಸಿ ಬಿಡುಗಡೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

Read More

ಕಲಬುರ್ಗಿ : ಪಿಎಸ್ಐ ನೇಮಕಾತಿ ಹಗರಣದ ಕಿಂಗ್ ಪಿನ್ ಆದಂತಹ RD ಪಾಟೀಲ್ ಸದ್ಯ ಕಲಬುರ್ಗಿ ಸೆಂಟ್ರಲ್ ಜೈಲಿನಲ್ಲಿದ್ದು, ಸಿಬ್ಬಂದಿಗಳ ಜೊತೆ ಕಿರಿಕ್ ಮಾಡಿರುವ ಆರೋಪ ಹಿನ್ನೆಲೆ RD ಪಾಟೀಲನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕಲ್ಬುರ್ಗಿಯ ಫರಹತಾಬಾದ್ ಪೊಲೀಸರು RD ಪಾಟೀಲನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಕಲ್ಬುರ್ಗಿ ಸೆಂಟ್ರಲ್ ಜೈಲು ಸಿಬ್ಬಂದಿ ತಪಾಸಣೆ ಹೋಗಿದ್ದಾಗ ಆರ್‌ಡಿ ಪಾಟೀಲ್ ಕಿರಿಕ್ ಮಾಡಿದ್ದಾನೆ ಜೈಲು ಸಿಬ್ಬಂದಿ ಕರ್ತವ್ಯಕ್ಕೆ ಅಡ್ಡಿ ಮಾಡಿದ ಹಿನ್ನೆಲೆಯಲ್ಲಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಕಳೆದ ವಾರ ಸಿಬ್ಬಂದಿಗಳ ಜೊತೆಗೆ ಕಿರಿಕ್ ಮಾಡಿದ ಹಿನ್ನೆಲೆ ಜೈಲಾಧಿಕಾರಿಗಳು ಆತನ ವಿರುದ್ಧ ಕೆಎಸ್ ದಾಖಲಿಸಿದ್ದಾರೆ.

Read More

ಬೆಂಗಳೂರು : ಬೆಂಗಳೂರಿನ ಕೋಗಿಲು ಲೇಔಟ್ ನಲ್ಲಿ ಅಕ್ರಮ ಮನೆಗಳ ತೆರವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತರು ಕರ್ನಾಟಕದವರಿದ್ದರೆ ಮಾತ್ರ ಮನೆ ಕೊಡುತ್ತೇವೆ. ಹೊರಗಿನಿಂದ ಬಂದವರಿಗೆ ನಾವು ಮನೆ ಕೊಡಲ್ಲ ಎಂದು ಕೋಗಿಲು ಲೇಔಟ್‌ನಲ್ಲಿ ಅಕ್ರಮ ಮನೆ ತೆರವು ವಿವಾದಕ್ಕೆ ವಸತಿ ಸಚಿವ ಜಮೀರ್ ಅಹ್ಮದ್ ಸ್ಪಷ್ಟನೆ ನೀಡಿದರು. ಕೋಗಿಲು ಲೇಔಟ್ ಅಕ್ರಮ ಮನೆ ತೆರವು ವಿಚಾರಕ್ಕೆ ಪಾಕಿಸ್ತಾನ ಎಂಟ್ರಿಗೆ ಸಚಿವ ಜಮೀರ್ ಕಿಡಿಕಾರಿದ್ದಾರೆ. ಪಾಕಿಸ್ತಾನಕ್ಕೂ ಈ ವಿಷಯಕ್ಕೂ ಏನು ಸಂಬಂಧ? ಪಾಕಿಸ್ತಾನಕ್ಕೂ ನಮಗೂ ಯಾವುದೇ ಸಂಬಂಧವಿಲ್ಲ. ನಮ್ಮ ಬಗ್ಗೆ ಹೇಳೋಕೆ ಅರ‍್ಯಾರು? ನಮ್ಮ ದೇಶದಲ್ಲಿ ನಾವು ಇದ್ದೇವೆ. ಮುಸ್ಲಿಮರನ್ನ ನೋಡಿಕೊಳ್ಳೋಕೆ, ಅವರು ಯಾರು ನಮಗೆ ಹೇಳೋಕೆ. ಮೊದಲು ಪಾಕಿಸ್ತಾನ ಅವರು ಅವರ ದೇಶ ನೋಡಿಕೊಳ್ಳಲಿ. ಪಾಕಿಸ್ತಾನದಲ್ಲಿ ಬಡತನ ಇದೆ. ಮೊದಲು ಅದನ್ನ ನೋಡಿಕೊಳ್ಳಲಿ ಎಂದು ವಾಗ್ದಾಳಿ ನಡೆಸಿದರು. ನಾವು ಯಾರ ಟ್ರ‍್ಯಾಪ್‌ಗೂ ಬೀಳೊಲ್ಲ. ಕೇರಳ ನಿಯೋಗ ಬಂದಿತ್ತು. ಅವರು ಏನು ಮಾಡಿದ್ರು? ಯುಪಿಯಲ್ಲೂ ಬುಲ್ಡೋಜ್ ಆಗಿತ್ತು. ಯಾಕೆ ಅಲ್ಲಿಗೆ ಹೋಗಲಿಲ್ಲ ಅವರು.…

Read More

ಹುಬ್ಬಳ್ಳಿ : ಕೊಪ್ಪಳದಲ್ಲಿ ಜನಿಸಿದ ನವಜಾತ ಶಿಶುವೊಂದಕ್ಕೆ ಕರುಳುಗಳು ಹೊರಗೆ ಬಂದಿದ್ದು, ತುರ್ತು ಚಿಕಿತ್ಸೆಯ ಅಗತ್ಯವಿದೆ. ಮಗುವಿನ ಜೀವ ಉಳಿಸಲು, ಝೀರೋ ಟ್ರಾಫಿಕ್ ಮೂಲಕ ಕೊಪ್ಪಳದಿಂದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಪೊಲೀಸ್ ಇಲಾಖೆ ಹಾಗೂ ಆಂಬುಲೆನ್ಸ್ ಸಿಬ್ಬಂದಿಯ ಸಹಕಾರದಿಂದ ಮಗುವನ್ನು ಸಕಾಲದಲ್ಲಿ ತಲುಪಿಸುವ ಪ್ರಯತ್ನ ಮಾಡಲಾಗಿದೆ. ಆದ್ರೆ ಇದೀಗ ವೈದ್ಯರು ಸಿಬ್ಬಂದಿಗಳ ಶ್ರಮವೆಲ್ಲ ವ್ಯರ್ಥವಾಗಿದೆ. ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಗಂಡು ಮಗು ಸಾವನ್ನಪ್ಪಿದೆ. ಕೇವಲ 10 ಗಂಟೆ ಹಿಂದೆ ಜನಿಸಿದ ಮಗು ಆ ಮಗುವಿನ ಕರಳುಗಳು ಹೊರಗೆ ಬಂದಿದ್ದವು. ಹೀಗಾಗಿ ತುರ್ತು ಚಿಕಿತ್ಸೆ ಅನಿವಾರ್ಯವಾಗಿತ್ತು. ನಿನ್ನೆ ರಾತ್ರಿ ಜನಿಸಿದ ಮಗು ಸಾವು ಬದುಕಿನ ಮಧ್ಯೆ ಹೋರಾಟ ನಡೆಸಿತ್ತು.ಆದರೆ ಇದೀಗ ಚಿಕೆತ್ಸೆ ಫಲಕಾರಿ ಆಗದೆ ಸಾವನ್ನಪ್ಪಿದೆ. ಘಟನೆ ಹಿನ್ನೆಲೆ? ಕೊಪ್ಪಳದಲ್ಲಿ ಶನಿವಾರ ರಾತ್ರಿ 10 ಗಂಟೆ ಹಿಂದೆ ಜನಿಸಿದ ಮಗುವೊಂದನ್ನ ಝೀರೋ ಟ್ರಾಫಿಕ್​ನಲ್ಲಿ ಸುಮಾರು 110 ಕಿ.ಮೀ ದೂರದ ಹುಬ್ಬಳ್ಳಿ ಕಿಮ್ಸ್​ಗೆ ಕರೆದುಕೊಂಡು ಹೋಗಲಾಗಿದೆ. ಕುಕನೂರ ತಾಲೂಕಿನ ಗುತ್ತೂರ…

Read More

ಬೆಂಗಳೂರು : ಸರ್ಕಾರಿ ಶಾಲೆಗಳನ್ನ ಮುಚ್ಚಬೇಡಿ ಎಂಬ ಸಾಹಿತಿ ಬರಗೂರು ರಾಮಚಂದ್ರಪ್ಪ ಮನವಿ ಮಾಡಿದ ವಿಚಾರಕ್ಕೆ ಒಂದೇ‌ ಒಂದು ಮಗು ಇದ್ದರೂ ಸರ್ಕಾರ ಮುಚ್ಚೋದಿಲ್ಲ, ವಿಲೀನವೂ ಮಾಡೋದಿಲ್ಲ ಅಂತ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಪುನರುಚ್ಚಾರ ಮಾಡಿದ್ದಾರೆ. ವಿಧಾನಸೌಧದಲ್ಲಿ ಪ್ರತಿಕ್ರಿಯೆ ‌ನೀಡಿದ ಅವರು, ಶಾಲೆಗಳನ್ನು ವಿಲೀನ ಮಾಡೋ ಅಧಿಕಾರ ನಮಗೆ ಇಲ್ಲ. ನಾವು ವೀಲಿನವೂ ಮಾಡೊಲ್ಲ. ಬರಗೂರು ರಾಮಚಂದ್ರಪ್ಪ ಅವರಿಗೂ ಮಾಹಿತಿ ಕೊಡಲಾಗಿದೆ ಎಂದ ತಿಳಿಸಿದರು. ಸ್ವ-ಇಚ್ಚೆಯಿಂದ KPS ಶಾಲೆಗೆ ವಿಲೀನ ಮಾಡ್ತೀವಿ ಅಂದರೆ ನಾನು ಇಲ್ಲ ಅನ್ನೋಕೆ ಅಗೊಲ್ಲ. ನಾನು ಈಗಾಗಲೇ ಹೇಳಿದ್ದೇನೆ. ಒಂದು ಮಗು ಇದ್ದರೂ ಶಾಲೆ ಮುಚ್ಚೋದಿಲ್ಲ. ಟೀಚರ್ ಇರ್ತಾರೆ, ಮಧ್ಯಾಹ್ನದ ಊಟವೂ ಇರುತ್ತದೆ ಎಂದರು. ಯಾರೇ ಮುಚ್ಚುತ್ತಾರೆ ಅಂತ ಹೇಳಿದರೆ ಅದಕ್ಕೆ ನಾನು ಉತ್ತರ ಕೊಡಲು ಆಗೊಲ್ಲ. ಬರಗೂರು ಅವರಿಗೆ ಹೇಳ್ತೀನಿ. ಬೇರೆ ಅವರ ಮಾತು ಕೇಳಿ ಅವರು ಹೇಳಿಕೆ ಕೊಡಬಾರದು. ಸಿಎಂ ಅವರು ಕೂಡಾ ಮಾತಾಡೋದಾಗಿ ಹೇಳಿದ್ದಾರೆ. KPS ಒಳ್ಳೆಯ ಪ್ರಾಜೆಕ್ಟ್‌ ನಿಲ್ಲಿಸಲು…

Read More

ಬೆಳಗಾವಿ : ಬೆಳಗಾವಿಯಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಸಿಮೆಂಟ್ ತುಂಬಿದ ಲಾರಿ ಪಲ್ಟಿಯಾಗಿ ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನಿಬ್ಬರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಹಾಲಶಿರಗೂರು ಬಳಿ ನಡೆದಿದೆ.ಮೃತ ವಿದ್ಯಾರ್ಥಿಯನ್ನು 5ನೇ ತರಗತಿಯ ಅಮಿತ್ ಕಾಂಬಳೆ (11) ಎಂದು ತಿಳಿದುಬಂದಿದೆ. ಇಬ್ಬರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದು, ಹಾರೂಗೇರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕುಡಚಿಯಿಂದ ಹಾರೂಗೇರಿ ಕಡೆಗೆ ಸಿಮೆಂಟ್ ಲಾರಿ ತೆರಳುತ್ತಿತ್ತು. ತಿರುವಿನಲ್ಲಿ ಲಾರಿ ಪಲ್ಟಿಯಾಗಿದೆ. ಈ ವೇಳೆ ಲಾರಿಯ ಅಡಿ ಸಿಲುಕಿ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ. ಶಾಲೆಗೆ ಹೋಗುತ್ತಿದ್ದ ವಿದ್ಯಾರ್ಥಿಗಳ ಮೇಲೆ ಲಾರಿ ಪಲ್ಟಿಯಾಗಿದೆ. ಈ ವೇಳೆ ಅಮಿತ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಇನ್ನು ಘಟನೆ ಅಂಜಲಿ ಕಾಂಬಳೆ (15) ಅವಿನಾಶ್ ಕಾಂಬಳೆ (14) ಸ್ಥಿತಿ ಗಂಭೀರವಾಗಿದೆ. ಕುಡಚಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಶಿವಮೊಗ್ಗ : ಶಿವಮೊಗ್ಗದಲ್ಲಿ ಭೀಕರ ಮರ್ಡರ್ ಆಗಿದ್ದು, ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ರಸ್ತೆಯಲ್ಲಿಯೇ ವ್ಯಕ್ತಿಯೋರ್ವ ಕೊಲೆಗೀಡಾದ ಘಟನೆ ನಗರದ ಎಪಿಎಂಸಿ ತರಕಾರಿ ಮಾರುಕಟ್ಟೆ ಮುಂಭಾಗ ಮಂಗಳವಾರ ರಾತ್ರಿ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಶಿವಮೊಗ್ಗದ ಕಾಶಿಪುರ ಬಡಾವಣೆಯ ತಮಿಳು ಕ್ಯಾಂಪ್‌ ನಿವಾಸಿ ಅರುಣ್ (26) ಎಂದು ಗುರುತಿಸಲಾಗಿದೆ. ಈತ ಗಾರೆ ಕೆಲಸ ಮಾಡಿಕೊಂಡಿದ್ದ. ನಿನ್ನೆ ರಾತ್ರಿ 8:45ರ ಸುಮಾರಿಗೆ ತನ್ನ ಬೈಕ್​ನಲ್ಲಿ ಎಪಿಎಂಪಿ ತರಕಾರಿ ಮಾರುಕಟ್ಟೆ ಬಳಿಯ ಶ್ರೀನಿಧಿ ವೈನ್ಸ್ ಮುಂಭಾಗ ಬಂದಿದ್ದ. ಬೈಕ್ ನಿಲ್ಲಿಸುತ್ತಿದ್ದಂತೆಯೇ ಹಿಂದಿನಿಂದ ಇನ್ನೊಂದು ಬೈಕ್​ನಲ್ಲಿ ಬಂದ ಇಬ್ಬರು ರಾಡ್​​ನಿಂದ ತಲೆಗೆ ಬಲವಾಗಿ ಹೊಡೆದಿದ್ದಾರೆ. ಇದರಿಂದ ಅರುಣ್​ ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಕುಸಿದು ಬಿದ್ದಿದ್ದಾನೆ.‌ ಹಲ್ಲೆ ನಡೆಸಿದವರು ಕೆಲ‌ಕಾಲ ಅಲ್ಲೇ ನಿಂತು, ಬಳಿಕ ಅರುಣ್​​ ತಂದಿದ್ದ ಬೈಕ್ ಅನ್ನು ಸಹ ತೆಗೆದುಕೊಂಡು ಹೋಗಿದ್ದಾರೆ ಎಂದು ಪೊಲೀಸ್​ ಮೂಲಗಳು ತಿಳಿಸಿವೆ.

Read More