Author: kannadanewsnow05

ಜೋಹನ್ಸ್ ಬರ್ಗ್ : ಕಳೆದ ಎರಡು ದಿನಗಳಹಿಂದೆಯಷ್ಟೇ ಆಸ್ಟ್ರೇಲಿಯಾದಲ್ಲಿ ಉಗ್ರರು ಸಾರ್ವಜನಿಕರ ಮೇಲೆ ಗುಂಡಿನ ದಾಳಿ ಎಸಗಿದ ಘಟನೆ ಮರೆಯಾಗುವ ಮುನ್ನವೇ ಸೌತ್ ಆಫ್ರಿಕಾದಲ್ಲಿ ಬಂದೂಕುದಾರಿಗಳಿಂದ ಭೀಕರ ದಾಳಿಯಾಗಿದೆ. ಜೋಹಾನ್ಸ್​ಬರ್ಗ್​ನ ಹೊರವಲಯದ ಚಿನ್ನದ ಗಣಿ ಸಮೀಪ ಇರುವ ಬೆಕ್ಕೆರ್ಸ್​ಡನ್ ಟೌನ್​ಶಿಪ್ ಬಳಿ ಆಗಂತುಕ ಬಂದೂಕುದಾರಿಗಳು ಸಾರ್ವಜನಿಕರ ಮೇಲೆ ದಾಳಿ ಎಸಗಿದ್ದಾರೆ. ಈ ಘಟನೆಯಲ್ಲಿ 9 ಮಂದಿ ಬಲಿಯಾಗಿದ್ದಾರೆ. ಹತ್ತು ಜನರು ಗಾಯಗೊಂಡಿರುವ ಬಗ್ಗೆ ಮಾಹಿತಿ ತಿಳಿದುಬಂದಿದೆ. ಬೆಕ್ಕೆರ್ಸ್ಡಲ್ ಬಾರ್ ಮೇಲೆ ದಾಳಿಕೋರರು ನುಗ್ಗಿ ಸಿಕ್ಕಸಿಕ್ಕವರ ಮೇಲೆ ಗುಂಡಿನ ದಾಳಿ ಎಸಗಿದ್ದಾರೆ. ಸ್ಥಳೀಯ ಕಾಲಮಾನ ರಾತ್ರಿ 1 ಗಂಟೆಯಲ್ಲಿ ಈ ಘಟನೆ ನಡೆದಿದೆ. ಭಾರತೀಯ ಕಾಲಮಾನ ಬೆಳಗ್ಗೆ 4:30ರ ಸಮಯ ಆಗಿರಬಹುದು. ಈ ಗುಂಡಿನ ದಾಳಿಯಲ್ಲಿ ಬಲಿಯಾದ ಒಂಬತ್ತು ಮಂದಿಯಲ್ಲಿ ಮೂವರು ಬಾರ್​ನ ಒಳಗೆಯೇ ಅಸು ನೀಗಿದ್ಧಾರೆ. ಇನ್ನುಳಿದವರು ಹೊರಗೆ ತಪ್ಪಿಸಿಕೊಳ್ಳಲು ಹೋಗುವಾಗ ಗುಂಡೇಟಿನಿಂದ ಸತ್ತಿದ್ದಾರೆ. ಇದೇ ಡಿಸೆಂಬರ್ 6ರಂದು ಸೌತ್ ಆಫ್ರಿಕಾದ ಪ್ರಿಟೋರಿಯಾ ನಗರದ ಬಳಿಯೂ ಪಬ್​ವೊಂದರ ಮೇಲೆ ಕ್ರಿಮಿನಲ್​ಗಳು ದಾಳಿ…

Read More

ಬೆಂಗಳೂರು : ಗೃಹಲಕ್ಷ್ಮೀ ಯೋಜನೆಯ ಹಣ ಬಿಡುಗಡೆ ವಿಚಾರವಾಗಿ ಇತ್ತೀಚೆಗೆ ಅಧಿವೇಶನದಲ್ಲಿ ಚರ್ಚೆಗೆ ಗ್ರಾಸವಾಗಿತ್ತು. ಗೃಹಲಕ್ಷ್ಮೀ ಯೋಜನೆ ಹಣ ಬಿಡುಗಡೆ ಆಗುತ್ತದೆ ಎಂದು ಕಾಯುತ್ತಿರುವ ಮಹಿಳೆಯರಿಗೆ ಇದೀಗ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗುಡ್​ನ್ಯೂಸ್​​ ನೀಡಿದ್ದಾರೆ. ಸೋಮವಾರದಿಂದ ಶನಿವಾರದ ಒಳಗಡೆ 24ನೇ ಕಂತು ಬಿಡುಗಡೆ ಆಗುತ್ತೆ ಎಂದು ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈಗಾಗಲೇ 24ನೇ ಕಂತಿನ ಹಣ ಬಿಡುಗಡೆಗೆ ಹಣಕಾಸು ಇಲಾಖೆ ಒಪ್ಪಿದೆ. ಮುಂದಿನ ವಾರ ಗೃಹಲಕ್ಷ್ಮೀ ಯೋಜನೆಯ ಹಣ ಬಿಡುಗಡೆ ಆಗುತ್ತದೆ. ಗೃಹಲಕ್ಷ್ಮೀ ಯೋಜನೆಯ 24ನೇ ಕಂತಿನ ಹಣ ಸೋಮವಾರದಿಂದ ಶನಿವಾರದೊಳಗೆ ಬಿಡುಗಡೆಯಾಗಲಿದೆ. ಆ ಮೂಲಕ ಹಣ ಬರುತ್ತದೆ ಎಂದ ಕಾದುಕುಳಿತವರಿಗೆ ಗುಡ್​​ನ್ಯೂಸ್​​ ಕೊಟ್ಟಿದ್ದಾರೆ. ಮುಂದಿನ ವಾರ ಗೃಹಲಕ್ಷ್ಮೀ ಯೋಜನೆಯ ಹಣ ಕೈ ಸೇರಲಿದೆ.

Read More

ಕೊಪ್ಪಳ : ರಾಜ್ಯದಲ್ಲಿ ಪಟ್ಟದ ಕುರ್ಚಿಗೆ ಹಗ್ಗಜಗ್ಗಾಟ ಮುಂದುವರೆದಿದ್ದು ಒಂದು ಕಡೆ ಬೆಳಗಾವಿಯಲ್ಲಿ ನಡೆದ ಅಧಿವೇಶನದಲ್ಲಿ ಈಗಲೂ ನಾನೇ ಸಿಎಂ ಮುಂದೆಯೂ ನಾನೇ ಮುಖ್ಯಮಂತ್ರಿ ಆಗಿರುತ್ತೇನೆ. ಹೈಕಮಾಂಡ್ ಎಲ್ಲಿವರೆಗೆ ಹೇಳುತ್ತೋ ಅಲ್ಲಿವರೆಗೂ ನಾನೆ ಸಿಎಂ ಎಂದು ಸಿದ್ದರಾಮಯ್ಯ ಹೇಳುತ್ತಿದ್ದಾರೆ, ಇನ್ನೊಂದು ಕಡೆ ಡಿಕೆ ಶಿವಕುಮಾರ್ ಟೆಂಪಲ್ ರನ್ ಮಾಡುತ್ತಿದ್ದಾರೆ. ಇದರ ಮಧ್ಯ ಶಾಸಕ ಜನಾರ್ದನ ರೆಡ್ಡಿ ಯಾವ ಕ್ಷಣದಲ್ಲಾದರೂ ಡಿಕೆ ಶಿವಕುಮಾರ್ ಗೆ ಅಧಿಕಾರ ಹಸ್ತಾಂತರ ಆಗಲಿದೆ ಎಂದು ಸ್ಪೋಟಕ ಹೇಳಿಕೆ ನೀಡಿದ್ದಾರೆ. ಗಂಗಾವತಿಯಲ್ಲಿ ಮಾತನಾಡಿದ ಅವರು, ಯಾವ ಕ್ಷಣದಲ್ಲಾದರೂ ಡಿಸಿಎಂ ಡಿಕೆ ಶಿವಕುಮಾರ್ ಗೆ ಅಧಿಕಾರ ಹಸ್ತಾಂತರ ಆಗಲಿದೆ. ಸಿದ್ದರಾಮಯ್ಯ ಅಧಿಕಾರ ಹಸ್ತಾಂತರ ಮಾಡಲಿದ್ದಾರೆ ಎಂದು ಗಂಗಾವತಿಯಲ್ಲಿ ಬಿಜೆಪಿ ಶಾಸಕ ಜನಾರ್ದನ ರೆಡ್ಡಿ ಸ್ಫೋಟಕ ಹೇಳಿಕೆ ನೀಡಿದ್ದಾರೆ.ಸಿದ್ದರಾಮಯ್ಯ ಮಾತು ಉಳಿಸಿಕೊಳ್ಳುತ್ತಾರೆ ಅಂತ ಡಿಕೆ ಶಿವಕುಮಾರ್ ಹೇಳುತ್ತಿದ್ದರು. ಹೀಗಾಗಿ ಅಧಿಕಾರ ಹಂಚಿಕೆಗೆ ಸಮಯ ಸನ್ನೀಹೀತವಾಗಿದೆ. ಪ್ರಮಾಣವಚನ ಸ್ವೀಕರಿಸಲು ಡಿಕೆ ಶಿವಕುಮಾರ್ ದೇಗುಲಕ್ಕೆ ಹೋಗುತ್ತಿದ್ದಾರೆ ಡಿನ್ನರ್ ಮೀಟಿಂಗ್ಗಳಿಂದ ಏನು ನಡೆಯುವುದಿಲ್ಲ ಎಂದು ಕೊಪ್ಪಳದ…

Read More

ಬೆಂಗಳೂರು : ಇಂದಿನಿಂದ ರಾಜ್ಯಾದ್ಯಂತ ಮೂರು ದಿನಗಳ ಕಾಲ ನಡೆಯುವ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು.‌ ಗೃಹ ಕಚೇರಿ ಕೃಷ್ಣಾದಲ್ಲಿ ರಾಷ್ಟ್ರೀಯ ಲಸಿಕಾ ದಿನ(ಪಲ್ಸ್ ಪೋಲಿಯೋ) 2025ಗೆ ಸಿಎಂ ಸಿದ್ದರಾಮಯ್ಯ ಮಗುವಿಗೆ ಲಸಿಕೆ ನೀಡುವ ಮೂಲಕ ಚಾಲನೆ ಕೊಟ್ಟರು. ನಿಮ್ಮ ಮನೆಯಲ್ಲಿ 5 ವರ್ಷದೊಳಗಿನ ಪುಟ್ಟ ಮಕ್ಕಳಿದ್ದಲ್ಲಿ‌ ಇಂದಿನಿಂದ ಡಿಸೆಂಬರ್ 24ರ ಒಳಗಾಗಿ ತಪ್ಪದೇ ಸಮೀಪದ ಲಸಿಕಾ ಕೇಂದ್ರಕ್ಕೆ ತೆರಳಿ ಪೋಲಿಯೋ ಲಸಿಕೆ ಹಾಕಿಸಿ, ಪೋಲಿಯೋ ಮುಕ್ತ ಭಾರತ ಅಭಿಯಾನದ ಜೊತೆಯಾಗಿ ಇಂದು ನೀವು ಮಗುವಿಗೆ ಹಾಕಿಸುವ ಎರಡು ಹನಿ‌ ಲಸಿಕೆ, ಅದರ ಭವಿಷ್ಯವನ್ನು ಶಾಶ್ವತ ಅಂಗವೈಕಲ್ಯದಿಂದ ರಕ್ಷಿಸಲಿದೆ ಎಂದರು. ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಜೊತೆ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ‌ಸಚಿವ ದಿನೇಶ್ ಗುಂಡೂರಾವ್, ಭಾರತದಾದ್ಯಂತ ಪೋಲಿಯೋ ಲಸಿಕೆ ಹಾಕುವುದು ಮತ್ತು ಅದರ ಕುರಿತು ಅಭಿಯಾನ ನಡೆಯುತ್ತಿದೆ. ಸತತ ಜಾಗೃತಿಯಿಂದಾಗಿ ಪೋಲಿಯೋ…

Read More

ಉಡುಪಿ : ಉಡುಪಿ ಜಿಲ್ಲೆಯ ಬೈಂದುರು ಕೊಲ್ಲೂರು ಮೂಕಾಂಬಿಕ ದೇವಸ್ಥಾನ ಹೆಸರಲ್ಲಿ ನಕಲಿ ವೆಬ್ಸೈಟ್ ತೆರೆದು ವಂಚನೆ ಎಸುಗುತಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ನಾಸಿರ್ ಹುಸೇನ್ ಎಂದು ತಿಳಿದು ಬಂದಿದೆ. ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕೆ ದೇವಸ್ಥಾನದ ಹೆಸರಿನಲ್ಲಿ ನಕಲಿ ವೆಬ್ಸೈಟ್ ತೆರೆದು ಬಂಧಿತ ಆರೋಪಿ ನಾಸಿರ್ ವಂಚನೆ ಎಸಗುತ್ತಿದ್ದ ರಾಜಸ್ಥಾನದ ತಿಜೋರಿಯ ನಾಸಿರ್ ಹುಸೇನ್. ಈತ ಅಧಿಕೃತ ವೆಬ್ಸೈಟ್ ಹೋಲುವ ರೀತಿಯಲ್ಲಿ ನಕಲಿ ವೆಬ್ಸೈಟ್ ಕ್ರಿಯೇಟ್ ಮಾಡಿದ್ದ ಭಕ್ತರಿಂದ ಮುಂಗಡವಾಗಿ ರೂಮ್ ಬುಕಿಂಗ್ ಮಾಡಿಸಿಕೊಳ್ಳಲಾಗುತ್ತಿತ್ತು. ಸ್ಕ್ಯಾನರ್ ಮೂಲಕ ಹಣವನ್ನು ಪಡೆದು ನಕಲಿ ರಶೀದಿ ವಂಚನೆ ಸಿಗುತ್ತಿದ್ದ ಕ್ಷೇತ್ರದ ಕಾರ್ಯ ನಿರ್ವಹಣಾಧಿಕಾರಿ ದೂರು ಆಧರಿಸಿ ಇದೀಗ ಆರೋಪಿಯನ್ನು ಅರೆಸ್ಟ್ ಮಾಡಲಾಗಿದೆ.

Read More

ಕಲಬುರ್ಗಿ : ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ಭಾರಿ ಚರ್ಚೆಯಾಗುತ್ತಿದ್ದು ಇತ್ತೀಚೆಗೆ ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲೂ ಕೂಡ ಬಿಜೆಪಿ ನಾಯಕರು ಸಿಎಂ ಸಿದ್ದರಾಮಯ್ಯ ಅವರನ್ನು ನಾಯಕತ್ವ ಬದಲಾವಣೆ ವಿಚಾರವಾಗಿ ಕೆಣಕಿದ್ದರು ಅವರಿಗೆ ಈಗಲೂ ನಾನೇ ಸಿಎಂ ಮುಂದೆಯೂ ನಾನೇ ಸಿಎಂ ಆಗಿರುತ್ತೇನೆ ಅಂತ ಖಡಕ್ ತಿರುಗೇಟು ನೀಡಿದ್ದರು. ಇದೀಗ ಕಲ್ಬುರ್ಗಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಪಕ್ಷ ಯಾರೊಬ್ಬ ನಾಯಕನಿಂದ ಬೆಳೆದಿಲ್ಲ ನಾನೇ ಪಕ್ಷ ಕಟ್ಟಿದ್ದೇನೆ ಎಂದು ಯಾರು ಹೇಳಬಾರದು ಕಾಂಗ್ರೆಸ್ ಪಕ್ಷ ಕಾರ್ಯಕರ್ತರಿಂದ ಕಟ್ಟಿದ ಪಕ್ಷ ಅಂದಮೇಲೆ ಎಲ್ಲರ ಪಾತ್ರವೂ ಕೂಡ ಇರುತ್ತದೆ ಯಾರು ಒಬ್ಬರಿಂದಲೇ ಪಕ್ಷ ಇದೆ ಎನ್ನಬಾರದು ಹೈಕಮಾಂಡ್ ಯಾವ ಗೊಂದಲವು ಮಾಡುತ್ತಿಲ್ಲ ಆದರೆ ಇಲ್ಲಿನ ನಾಯಕರು ಗೊಂದಲ ಸೃಷ್ಟಿ ಮಾಡುತ್ತಿದ್ದಾರೆ ಎಂದು ಖಡಕ್ ಸಂದೇಶ ನೀಡಿದ್ದಾರೆ. ಕಾಂಗ್ರೆಸ್ ಪಕ್ಷ ಯಾವಾಗಲೂ ಕೂಡ ಯಾರೇ ಲೀಡರ್ ಬಂದರು, ಕಾಂಗ್ರೆಸ್ ಕಾರ್ಯಕರ್ತರು ಸಪೋರ್ಟ್ ಮಾಡುತ್ತಾರೆ. ಅದಕ್ಕೆ ಯಾರು ನನ್ನಿಂದ ಆಗಿದೆ ನಾನು ಪಕ್ಷ…

Read More

ಬೆಂಗಳೂರು : ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ಬಳಿ ಸರಣಿ ಅಪಘಾತ ಸಂಭವಿಸಿದ್ದು ಕಂಟೇನರ್ ಚಾಲಕನೊಬ್ಬ ಸಿಕ್ಕಸಿಕ್ಕ ವಾಹನೆಗಳಿಗೆ ಡಿಕ್ಕಿ ಹೊಡೆದಿದ್ದಾನೆ. ಸುಮಾರು 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿಯಾಗಿದ್ದು ನಾಲ್ವರಿಗೆ ಗಂಭೀರವಾದ ಗಾಯಗಳಾಗಿವೆ. ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ಬಳಿಯ ಬೆಸ್ತಮಾನ ಹಳ್ಳಿಯಿಂದ ಚಂದಾಪುರದವರಿಗೆ ಈ ಒಂದು ಸರಣಿ ಅಪಘಾತ ಸಂಭವಿಸಿದ್ದು ಪೊಲೀಸರು 14 ಕಿಲೋಮೀಟರ್ ಹಿಂಬಾಲಿಸಿದರು ಕೂಡ ಚಾಲಕ ಕಂಟೆನರ್ ನಿಲ್ಲಿಸಿರಲಿಲ್ಲ. ಬಳಿಕ ಚಂದಾಪುರದಲ್ಲಿ ಸಾರ್ವಜನಿಕರು ಕಲ್ಲು ತೂರಿದಾಗ ಚಾಲಕ ಕಂಟೆನರ್ ನೆಲೆಸಿದ್ದಾನೆ.

Read More

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು ಮೂರು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ ನವದಂಪತಿಗಳು ಬೈಕ್ನಲ್ಲಿ ಚಲಿಸುತ್ತಿದ್ದರು. ಈ ವೇಳೆ ಕೆಟ್ಟು ನಿಂತ ಟ್ರಾಕ್ಟರ್ ಗೆ ಬೈಕ್ ಡಿಕ್ಕಿ ಹೊಡೆದಿದೆ ಅಪಘಾತದಲ್ಲಿ ನವವಿವಾಹಿತೆ ಸಾವನ್ನಪ್ಪಿದ್ದು ಪತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಗೂಳೂರಲ್ಲಿ ನಡೆದಿದೆ. ರಸ್ತೆಯಲ್ಲಿ ಕೆಟ್ಟು ನಿಂತಿದ್ದ ಟ್ರ್ಯಾಕ್ಟರ್​ಗೆ ನವವಿವಾಹಿತ ದಂಪತಿ ತೆರಳುತ್ತಿದ್ದ ದ್ವಿಚಕ್ರವಾಹನ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ, ಬೈಕ್​ನ ಹಿಂಬದಿಯಲ್ಲಿ ಕುಳಿತಿದ್ದ ನವವಿವಾಹಿತೆ ವರ್ಷಿಣಿ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದು, ಸವಾರ ಸುರೇಂದ್ರ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತ ವರ್ಷಿಣಿ ಬಾಗೇಪಲ್ಲಿ ತಾಲೂಕಿನ ಚೆಂಚುರಾಯನಪಲ್ಲಿ ಗ್ರಾಮದವರು. ಕಳೆದ ಮೂರು ತಿಂಗಳ ಹಿಂದೆಯಷ್ಟೇ ಸುರೇಂದ್ರ ಅವರ ಜೊತೆಗೆ ಮದುವೆಯಾಗಿದ್ದರು.ಅಪಘಾತದಲ್ಲಿ ಗಾಯಗೊಂಡಿದ್ದ ಸುರೇಂದ್ರರನ್ನು ಬಾಗೇಪಲ್ಲಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಸಂಬಂಧ ಬಾಗೇಪಲ್ಲಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

Read More

ಬೆಂಗಳೂರು : ಬೆಂಗಳೂರಲ್ಲಿ ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಬಿಜೆಪಿ ಶಾಸಕ ಭೈರತಿ ಬಸವರಾಜ್ ಗೆ ಬಂಧನದ ಭೀತಿ ಎದುರಾಗಿದ್ದು ಸಿಐಡಿ ಅಧಿಕಾರಿಗಳು ಇದೀಗ ಬೈರತಿ ಬಸವರಾಜ್ ಅವರಗಾಗಿ ತೀವ್ರ ಹುಡುಕಾಟ ನಡೆಸುತ್ತಿದ್ದಾರೆ. ಇದರ ಮಧ್ಯ ಭೈರತಿ ಬಸವರಾಜ್ ಅವರು, ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ಬೆಂಗಳೂರಿನ ಜನಪ್ರತಿನಿದಿಗಳ ವಿಶೇಷ ಕೋರ್ಟ್ ನಲ್ಲಿ ವಿಚಾರಣೆ ನಡೆದಿದೆ. ಮಧ್ಯಂತರ ಜಾಮೀನು ಅರ್ಜಿ ಬಗ್ಗೆ ಅದೇಶಿಸಲು ಇದೀಗ ಕೋರ್ಟ್ ನಿರಾಕರಿಸಿದೆ. ಅಲ್ಲದೇ ಅಭಿಯೋಜಕರಿಗೆ ಆಕ್ಷೇಪಣೆ ಸಲ್ಲಿಸಲು ಕೋರ್ಟ್ ಸೂಚಿಸಿದೆ. ಈ ವೇಳೆ ವಿಚಾರಣೆ ಸೋಮವಾರಕ್ಕೆ ಮುಂದೂಡಿ ಕೋರ್ಟ್ ಆದೇಶಸಿದೆ. ಈ ಒಂದು ಪ್ರಕರಣದಲ್ಲಿ ಭೈರತಿ ಬಸವರಾಜ ಪತ್ತೆಗಾಗಿ ಅಧಿಕಾರಿಗಳು ಮೂರು ತಂಡಗಳನ್ನು ರಚಿಸಿದ್ದಾರೆ. ಗೋವಾ ಮಹಾರಾಷ್ಟ್ರದಲ್ಲಿ ಎರಡು ತಂಡಗಳಿಂದ ಈಗಾಗಲೇ ಹುಡುಕಾಟ ನಡೆಸಲಾಗುತ್ತಿದ್ದು ಇನ್ನೂ ನಿನ್ನೆ ಬೆಳಗಾವಿ ಅಧಿವೇಶನ ಮುಗಿದ ಬಳಿಕ ಭೈರತಿ ಬಸವರಾಜ್ ಯಾವ ರಸ್ತೆಯ ಮೂಲಕ ತೆರಳಿದ್ದಾರೆ ಎನ್ನುವುದರ ಕುರಿತು ಸಿಐಡಿ ಅಧಿಕಾರಿಗಳು ತೀವ್ರ ಶೋಧ ನಡೆಸಿದ್ದಾರೆ.…

Read More

ಬಾಗಲಕೋಟೆ : ಬಾಗಲಕೋಟೆಯಲ್ಲಿ ಅಮಾನವೀಯ ಘಟನೆ ಒಂದು ನಡೆದಿದ್ದು, ವಿಶೇಷ ಚೇತನ ಹಾಗೂ ಬುದ್ಧಿಮಾಂದ್ಯ ಮಕ್ಕಳ ಮೇಲೆ ಶಿಕ್ಷಕನೊಬ್ಬ ಕ್ರೌರ್ಯ ಮೆರೆದಿದ್ದಾನೆ. ಮಕ್ಕಳ ಕಾಲಿನ ಮೇಲೆ ಕಾಲಿಟ್ಟು ಶಿಕ್ಷಕ ಬೆಲ್ಟ್ ನಿಂದ ಭೀಕರವಾಗಿ ಹಲ್ಲೆ ಮಾಡಿದ್ದಾನೆ. ಇದೀಗ ಈ ಒಂದು ಘಟನೆಗೆ ಸಂಬಂಧಿಸಿದಂತೆ ಶಿಕ್ಷಕ ದಂಪತಿಗಳು ಸೇರಿದಂತೆ ಒಟ್ಟು ನಾಲ್ವರನ್ನು ನವನಗರ ಠಾಣೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಹೌದು ಬಾಗಲಕೋಟೆ ನವನಗರದ 45ನೇ ಸೆಕ್ಟರ್ ನಲ್ಲಿ ಇರುವಂತಹ ವಿಶೇಷ ಚೇತನ ಮತ್ತು ಬುದ್ಧಿಮಾಂದ್ಯ ಮಕ್ಕಳ ಶಾಲೆಯಲ್ಲಿ ಈ ಒಂದು ಘಟನೆ ನಡೆದಿದೆ. ದಿವ್ಯ ಜ್ಯೋತಿ ಬುದ್ಧಿಮಾಂದ್ಯ ಮಕ್ಕಳ ವಸತಿ ಶಾಲೆಯಲ್ಲಿ ಮಕ್ಕಳ ಕಾಲ ಮೇಲೆ ಕಾಲಿಟ್ಟು ಬೆಲ್ಟ್ನಿಂದ ಭೀಕರವಾಗಿ ಹಲ್ಲೆ ಮಾಡಿದ್ದಾನೆ ಅಕ್ಷಯ್ ಇಂಗಳ್ಕರ್ ಎಂಬ ನೀಚ ಶಿಕ್ಷಕ ಹಲ್ಲೆ ಮಾಡಿದ್ದಾನೆ. ಇನ್ನು ಈ ಒಂದು ಹಲ್ಲೆ ಮಾಡುತ್ತಿರುವ ವಿಡಿಯೋ ಚಿತ್ರೀಕರಣ ಮಾಡಿದ್ದ ಅಮೀದ ಎಂಬ ಮಹಿಳೆಯನ್ನು ಕೂಡ ಪೊಲೀಸರು ಠಾಣೆಗೆ ಕರೆತಂದಿದ್ದಾರೆ. ಕಾರಣ ಇಷ್ಟೇ ಕೆಲಸ ಮಾಡದೆ ಇದ್ದದ್ದಕ್ಕೆ ಕೋಪಗೊಂಡು…

Read More