Subscribe to Updates
Get the latest creative news from FooBar about art, design and business.
Author: kannadanewsnow05
ಹೊನ್ನಾವರದಿಂದ ಕೇವಲ 15 ಕಿಲೋ ಮೀಟರ್ ಹಾಗೂ ಮುರ್ಡೇಶ್ವರದಿಂದ 23 ಕಿಲೋ ಮೀಟರ್ ದೂರದಲ್ಲಿರುವ ಈ ಪವಿತ್ರ ಪುಣ್ಯಧಾಮಕ್ಕೆ ಇಡಗುಂಜಿ ಎಂದು ಹೆಸರು ಹೇಗೆ ಬಂತು ಗೊತ್ತೆ. ಇಡಾ ಎಂದರೆ ಎಡ, ಕುಂಜು ಎಂದರೆ ಗಿಡಗಂಟೆಗಳಿಂದ ತುಂಬಿರುವ ಅರಣ್ಯಪ್ರದೇಶ. ಶರಾವತಿಯ ಎಡ ಭಾಗದಲ್ಲಿರುವ ಅರಣ್ಯದ ರಮಣೀಯತೆಗೆ ಮನಸೋತು ನಾರದ ಮರ್ಷಿಗಳು ಈ ಹೆಸರು ಇಟ್ಟರೆಂದು ಸ್ಥಳ ಪುರಾಣ ಹೇಳುತ್ತದೆ. ದೈವಜ್ಞ ಪಂಡಿತ್ ಶ್ರೀ ವಿದ್ಯಾಧರ್ ನಕ್ಷತ್ರಿ ಪ್ರಧಾನ್ ತಾಂತ್ರಿಕ್ ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ವಿದ್ಯಾಧರ್ ನಕ್ಷತ್ರಿ ಪ್ರಧಾನ ತಾಂತ್ರಿಕ ತಪ್ಪದೆ ಕರೆ ಮಾಡಿ 9686268564 ಇತಿಹ್ಯ: ಪ್ರಾಚೀನ ಕಾಲದಲ್ಲಿ ಇಲ್ಲಿ ವಾಲಖಿಲ್ಯಾದಿ ಋಷಿಗಳೂ…
ಬೆಂಗಳೂರು : ಕನ್ನಡ ಚಿತ್ರರಂಗದ ಖ್ಯಾತ ನಿರ್ಮಾಪಕ ಗೋವಿಂದು (68) ಅವರು ಇಂದು ನಿಧನರಾಗಿದ್ದಾರೆ. ಹುಲಿಯ, ಚಲಿಸುವ ಮೋಡಗಳು ಚಿತ್ರಗಳನ್ನು ಇವರು ನಿರ್ಮಿಸಿದ್ದರು. ಗಂಟಲು ಕ್ಯಾನ್ಸರ್ ನಿಂದ ನಿರ್ಮಾಪಕ ಗೋವಿಂದ ಬಳಲುತ್ತಿದ್ದರು. ಬೆಂಗಳೂರಿನ ಬನಶಂಕರಿ ಚಿತಾಗಾರದಲ್ಲಿ ಮಧ್ಯಾಹ್ನ 1 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ.
ಬೆಂಗಳೂರು : ಬೆಂಗಳೂರಲ್ಲಿ ಕೃತಿಕಾ ರೆಡ್ಡಿ ಕೊಲೆ ಕೇಸ್ ಗೆ ಸಂಬಂಧಿಸಿದಂತೆ ಇದೀಗ ಮತ್ತೊಂದು ಟ್ವಿಸ್ಟ್ ಸಿಕ್ಕಿದ್ದು, ಪಾಪಿ ಪತಿ ಮಹೇಂದ್ರ ಕೃತಿಕಾಳನ್ನು ಕೊಂದ ನಂತರ ವಾಟ್ಸ್ ಅಪ್ ನಲ್ಲಿ ‘i have killed krutika’ ಎಂದು ಮೆಸೇಜ್ ಮಾಡಿರೋದು ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಪೊಲೀಸರು ಡಾಟಾ ರಿಟ್ರಿವ್ ಮಾಡಿದ್ದು, ಕೃತಿಕಾ ಕೊಲೆಯ ಬಳಿಕ ಮಹೇಂದ್ರ ವಾಟ್ಸ್ ಅಪ್ ಮೆಸೇಜ್ ಮಾಡಿದ್ದ. ತನ್ನ ಪತ್ನಿಯನ್ನು ಕೊಂದಿದ್ದಾಗಿ ಮೆಸೇಜ್ ಮಾಡಿದ್ದಾನೆ. ಒಬ್ಬರಿಗೆ ಮೆಸೇಜ್ ಮಾಡಿರೋದು ಚಾಟಿಂಗ್ ಹಿಸ್ಟರಿ ಲಭ್ಯವಾಗಿದೆ. ಪ್ರಕರಣ ಸಂಬಂಧ ಪೊಲೀಸರು ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದಾರೆ. ಪ್ರಕರಣ ಹಿನ್ನೆಲೆ? ವೈದ್ಯೆಯಾಗಿದ್ದ ಪತ್ನಿ ಕೃತಿಕಾ ರೆಡ್ಡಿಯನ್ನು ಕೊಲೆ ಮಾಡಿದ್ದ ಹಂತಕ ಡಾಕ್ಟರ್ ಮಹೇಂದ್ರ ರೆಡ್ಡಿಯ ಕರಾಳ ಮುಖ ತನಿಖೆಯ ವೇಳೆ ಬಯಲಾಗುತ್ತಿದೆ. ವೃತ್ತಿಯಲ್ಲೂ ಇಬ್ಬರೂ ವೈದ್ಯರಾಗಿದ್ದರೂ ಕೂಡ ಪತ್ನಿಯನ್ನು ಯಾಕೆ ಕೊಲೆ ಮಾಡಿದ ಎಂಬ ವಿಚಾರ ಈಗ ಬೆಳಕಿಗೆ ಬಂದಿದೆ. ಮಹೇಂದ್ರ ರೆಡ್ಡಿ ಮದುವೆಗೂ ಮುನ್ನ ಮತ್ತು ಮದುವೆ ನಂತರವು ಬೇರೆ…
ರಾಯಚೂರು : ಆರ್ಎಸ್ಎಸ್ ದೇಶಭಕ್ತಿಯನ್ನು ಮೂಡಿಸುವ ಸಂಸ್ಥೆಯಾಗಿದ್ದು, ಇದರಲ್ಲಿ ಭಾಗಿಯಾಗಿ ದೇಶದ ಸಮಗ್ರತೆ ಹೋರಾಡಬೇಕು. ಆರ್ಎಸ್ಎಸ್ ಯಾವುದೇ ರಾಜಕೀಯ ಪಕ್ಷವಾಗಲೀ, ದೇಶದ್ರೋಹಿ ಸಂಘಟನೆಯಾಗಲಿ ಅಲ್ಲ. ಇದು ದೇಶದ ಭದ್ರತೆ, ಐಕ್ಯತೆ ಮತ್ತು ದೇಶದ ಅಭಿಮಾನವನ್ನು ಮೂಡಿಸುವ ಸಂಸ್ಥೆಯಾಗಿದೆ ಎಂದು ಮಂತ್ರಾಲಯ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ಮಹತ್ವದ ಹೇಳಿಕೆ ನೀಡಿದ್ದಾರೆ. ಆರ್ಎಸ್ಎಸ್ಗೆ ಹೋಗಬಾರದು ಎಂದು ಹೇಳುವುದು ಸಂವಿಧಾನದ ವಿರುದ್ಧವಾಗುತ್ತದೆ. ಸಂವಿಧಾನವು ಪ್ರತಿಯೊಬ್ಬರಿಗೂ ವ್ಯಕ್ತಿ ಸ್ವಾತಂತ್ರ್ಯವನ್ನು ನೀಡಿದೆ. ದೇಶದ ಭಾವನೆಯನ್ನು ಹೊಂದಿರುವ ಯಾರಾದರೂ ಸ್ವ ಇಚ್ಛೆಯಿಂದ ಆರ್ಎಸ್ಎಸ್ನಲ್ಲಿ ಭಾಗಿಯಾಗಬಹುದು ಎಂದು ಶ್ರೀ ಸುಬುಧೇಂದ್ರ ತೀರ್ಥರು ಸ್ಪಷ್ಟಪಡಿಸಿದರು. ಶ್ರೀಗಳ ಈ ಹೇಳಿಕೆ ರಾಜ್ಯದಲ್ಲಿ ಆರ್ಎಸ್ಎಸ್ಗೆ ಸಂಬಂಧಿಸಿದ ಚರ್ಚೆಗಳಿಗೆ ಹೊಸ ಆಯಾಮವನ್ನು ತಂದಿದೆ ಎಂದರು.
ಬೆಂಗಳೂರು : ನಮ್ಮದು ಏನೇ ಇದ್ದರೂ 2028ಕ್ಕೆ ಸಿಎಂ ಸ್ಥಾನದ ಕ್ಲೈಮ್ ಮಾಡುತ್ತೇವೆ. ಯತೀಂದ್ರ ಹೇಳಿಕೆ ಅದು ಅವರ ವೈಯಕ್ತಿಕ ಅಭಿಪ್ರಾಯ ಎಂದು ಲೋಕೋಪಯೋಗಿ ಇಲಾಖೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಸಿದ್ದರಾಮಯ್ಯ ಪುತ್ರ ಯತೀಂದ್ರ ಹೇಳಿಕೆಗೆ ಸಂಬಂಧಿಸಿದಂತೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಎಲ್ಲರನ್ನು ಜೊತೆಗೆ ಕರೆದುಕೊಂಡು ಹೋಗುವ ಕೆಲಸ ಮಾಡುತ್ತೇವೆ. ಏನೇ ಆಗಲಿ ಅದನ್ನು ಪಕ್ಷ ನಿರ್ಧಾರ ಮಾಡಲಿದೆ. ಸಿದ್ದರಾಮಯ್ಯನವರ ನಂತರ ಪಕ್ಷವನ್ನು ಮುನ್ನಡೆಸುವ ವಿಚಾರಕ್ಕೆ, ಎಲ್ಲವನ್ನೂ ಕಾದು ನೋಡೋಣ ಎಂದು ತಿಳಿಸಿದರು. ಎಲ್ಲವನ್ನೂ ಕಾಕತಿಯಲ್ಲಿ ನಿಂತು ನಿರ್ಧಾರ ಮಾಡಲು ಸಾಧ್ಯವಿಲ್ಲ. ಡಿಸೆಂಬರ್ ಕ್ರಾಂತಿಯ ಬಗ್ಗೆ ನಮಗೆ ಗೊತ್ತೇ ಇಲ್ಲ. ಯತಿಂದ್ರ ಅವರು ಅವರ ವೈಯಕ್ತಿಕ ಹೇಳಿಕೆ ನೀಡಿದ್ದಾರೆ. ಅಂತಿಮವಾಗಿ ಯಾರು ನಾಯಕ ಎನ್ನುವುದನ್ನು ಪಕ್ಷದ ಶಾಸಕರು ನಿರ್ಧಾರ ಮಾಡುತ್ತಾರೆ. ಅಹಿಂದ ನಾಯಕತ್ವ ಇಲ್ಲದೇ ಪಕ್ಷ ಸಂಘಟನೆ ಮಾಡಲು ಸಾಧ್ಯವಿಲ್ಲ ಎಂದು ಹೇಳಿದರು.
ಬೆಂಗಳೂರು : ಬೆಂಗಳೂರಿನಲ್ಲಿ ಪಶ್ಚಿಮ ಬಂಗಾಳ ಮೂಲದ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ, ರಾತ್ರೋರಾತ್ರಿ ಮಹಿಳೆ ಮನೆಗೆ ನುಗ್ಗಿ 6 ಆರೋಪಿಗಳು ದುಷ್ಕೃತ್ಯ ಎಸಗಿದ್ದಾರೆ. ಬೆಂಗಳೂರು ಉತ್ತರ ತಾಲೂಕಿನ ಗಂಗೋಂಡನಹಳ್ಳಿಯಲ್ಲಿ ಬಾಡಿಗೆ ಮನೆಯಲ್ಲಿ ಈ ಒಂದು ಕೃತ್ಯ ಎಸಗಿದ್ದಾರೆ. ಸದ್ಯಕ್ಕೆ ಮಾದನಾಯಕನಹಳ್ಳಿ ಠಾಣೆ ಪೊಲೀಸರು ಪೊಲೀಸರು ಪ್ರಕರಣ ಸಂಬಂಧ 6 ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ನವೀನ್, ಕಾರ್ತಿಕ್, ಶುಯೋಗ, ಸೀನ, ಜಂಗ್ಲಿ ಮತ್ತು ಪೃಥ್ವಿ ಬಂಧಿತ ಆರೋಪಿಗಳು ಎಂದು ತಿಳಿದುಬಂದಿದೆ. ಇನ್ನು A1 ಆರೋಪಿ ಮಿಥುನ್ ಗಾಗಿ ಶೋಧ ಮುಂದುವರೆಸಿದ್ದಾರೆ. ಪಿಣ್ಯ ಪೊಲೀಸರ ಇನ್ಫಾರ್ಮರ್ಸ್ ಎಂದು ಆರೋಪಿಗಳು ಮನೆಗೆ ನುಗ್ಗಿದ್ದಾರೆ. ಮನೆಯಲ್ಲಿ ಗಾಂಜಾ ಮಾರಾಟ, ವೇಶ್ಯಾವಾಟಿಕೆ ನಡೆಸುತ್ತಿದ್ದಾರೆ ಎಂದು ದಾಳಿ ಮಾಡಿದ್ದಾರೆ. ಮನೆಗೆ ನುಗ್ಗಿ ಸಂತ್ರಸ್ತ ಮಹಿಳೆಯ 14 ವರ್ಷದ ಮಗನ ಮೇಲೆ ಹಲ್ಲೆ ಮಾಡಿದ್ದಾರೆ. ಮನೆಯಲ್ಲಿದ್ದ ಮಕ್ಕಳು, ಸಂತ್ರಸ್ತೆಯ ಸ್ನೇಹಿತೆಯ ಮೇಲು ಹಲ್ಲೆ ನಡೆಸಿದ್ದಾರೆ. ಹಲ್ಲೆಯ ಬಳಿಕ ಪಕ್ಕದ ಮನೆಯ ರೂಮ್ಗೆ ಎಳೆದೋಯ್ದು ರೇಪ್ ಮಾಡಿದ್ದಾರೆ. ಇಬ್ಬರು…
ರಾಯಚೂರು : ಆರ್ ಎಸ್ ಎಸ್ ಪ್ರಮುಖರು, ಹಾಗು ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಹಿನ್ನೆಲೆಯಲ್ಲಿ ರಾಯಚೂರು ಜಿಲ್ಲೆಯ ಲಿಂಗಸುಗೂರು ಪಟ್ಟಣದಲ್ಲಿ ಆರೋಪಿ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಅಮೀರ್ ಹುಸೇನ್ ವಿರುದ್ಧ ಇದೀಗ ಎಫ್ ಐ ಆರ್ ದಾಖಲಾಗಿದೆ. Faisal Kst ಎಂಬ ಫೇಸ್ಬುಕ್ ಖಾತೆಯಿಂದ ಅಮೀರ್ ಹುಸೇನ್ ಆರ್ ಎಸ್ ಎಸ್ ಪ್ರಮುಖರು ಹಾಗೂ ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಂಚಿಕೊಂಡಿದ್ದ. ಹನುಮಂತ ಎಂಬುವವರು ನೀಡಿದ ದೂರಿನ ಮೇರೆಗೆ ಪೊಲೀಸರು FIR ದಾಖಲಿಸಿಕೊಂಡಿದ್ದಾರೆ.
ಬೆಂಗಳೂರು : ಡಿಸಿಎಂ ಡಿಕೆ ಶಿವಕುಮಾರ್ ನಿನ್ನೆ ಮಂತ್ರಾಲಯಕ್ಕೆ ಭೇಟಿ ನೀಡಿ ಶ್ರೀ ಗುರು ರಾಘವೇಂದ್ರ ಸ್ವಾಮಿಗಳಿಗೆ ವಿಶೇಷ ಪೂಜೆ ಸಲ್ಲಿಸಿ, ಸಂಕಲ್ಪ ಪೂರೈಸಿದರು. ನೆಕ್ಸ್ಟ್ ಸಿಎಂ ಆಗಲು ಸಂಕಲ್ಪ ತೊಟ್ಟಿದ್ದಾರೆ ಎಂದು ಮಠದ ಆಚಾರ್ಯ ಒಬ್ಬರು ಮಾಧ್ಯಮಗಳಿಗೆ ಹೇಳಿದ್ದಾರೆ. ಇದರ ನಡುವೆ ಎಂಎಲ್ಸಿ ಯತಿಂದ್ರ ಸಿದ್ದರಾಮಯ್ಯ ನಮ್ಮ ತಂದೆ ರಾಜಕೀಯ ಕೊನೆಗಾಲದಲ್ಲಿ ಇದ್ದಾರೆ. ಹಾಗಾಗಿ ವೈಚಾರಿಕವಾಗಿ ಮತ್ತು ಪ್ರಗತಿಪರವಾದ ಸಿದ್ಧಾಂತ ಇಟ್ಟುಕೊಂಡವರಿಗೆ ನಾಯಕತ್ವ ವಹಿಸಿಕೊಳ್ಳಲು ಒಬ್ಬರು ಬೇಕು. ಸತೀಶ್ ಜಾರಕಿಹೊಳಿ ಅಂತಹ ನಾಯಕರು ಜವಾಬ್ದಾರಿ ವಹಿಸಿಕೊಳ್ಳುತ್ತಾರೆ ಎಂದು ಅಹಿಂದ ದಾಳ ಉರುಳಿಸಿದ್ದಾರೆ. ಇದರ ಮಧ್ಯ ಇದೀಗ ನವೆಂಬರ್ ನಲ್ಲಿ ಬಹುದೊಡ್ಡ ಕ್ರಾಂತಿ ಅಗಲಿದೆ ಎಂದು ಕೆಲವು ನಾಯಕರು ಈಗಾಗಲೇ ಭವಿಷ್ಯ ನುಡಿದಿದ್ದರು. ಅದರಂತೆ ನವೆಂಬರ್ ನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕರ್ನಾಟಕಕ್ಕೆ ಆಗಮಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ನವೆಂಬರ್ 15 ರಿಂದ 20 ರ ಒಳಗಾಗಿ ರಾಜ್ಯ ಸಚಿವ ಸಂಪುಟ ಪುನಾರಚನೆ ಆಗಲಿದೆ ಎಂದು ಹೇಳಲಾಗುತ್ತಿದೆ. ಹೌದು ನವೆಂಬರ್ 15…
ಕಲಬುರ್ಗಿ : ಬಿಜೆಪಿಯ ಮುಖಂಡೆ ದಿವ್ಯ ಹಾಗರಗಿ ಮನೆಯ ಮೇಲೆ ಇಂದು ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಕಲ್ಬುರ್ಗಿಯ ಹಳೆ ಜೇವರ್ಗಿ ರಸ್ತೆಯಲ್ಲಿರುವ ದಿವ್ಯ ಹಾಗರಗಿಯ ಮನೆಯ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದು, ದಿವ್ಯ ಹಾಗರಗಿ ಮನೆಯಲ್ಲಿ ಇಸ್ಪೀಟ್ ಆಡುತ್ತಿದ್ದರು ಎಂಬ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ್ದಾರೆ. ಹೌದು ಪಿಎಸ್ಐ ನೇಮಕಾತಿ ಹಗರಣದ ಆರೋಪಿಯಾಗಿರುವ ದಿವ್ಯಾ ಹಾಗರಗಿ ಮನೆಯಲ್ಲಿ ಇಂದು ಇಸ್ಪೀಟ್ ಆಡುತ್ತಿದ್ದರು. ಈ ವೇಳೆ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು ದಿವ್ಯ ಹಾಗರಗಿ ಮನೆಯ ಮೇಲೆ ದಾಳಿ ಮಾಡಿದ್ದಾರೆ. ದಾಳಿಯ ವೇಳೆ 6 ಜನ ಜೂಜು ಕೋರಕೋನ್ನು ಅರೆಸ್ಟ್ ಮಾಡಿದ್ದು ಅಲ್ಲದೆ 42,000 ನಗದು ಹಣವನ್ನು ಜಪ್ತಿ ಮಾಡಿಕೊಂಡಿದ್ದಾರೆ.
ಬೆಂಗಳೂರು : ಬೆಂಗಳೂರಿನಲ್ಲಿ ಪಶ್ಚಿಮ ಬಂಗಾಳ ಮೂಲದ ಮಹಿಳೆಯ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ, ರಾತ್ರೋರಾತ್ರಿ ಮಹಿಳೆ ಮನೆಗೆ ನುಗ್ಗಿ ಐವರು ಆರೋಪಿಗಳು ದುಷ್ಕೃತ್ಯ ಎಸಗಿದ್ದಾರೆ. ಬೆಂಗಳೂರು ಉತ್ತರ ತಾಲೂಕಿನ ಗಂಗೋಂಡನಹಳ್ಳಿಯಲ್ಲಿ ಬಾಡಿಗೆ ಮನೆಯಲ್ಲಿ ಈ ಒಂದು ಕೃತ್ಯ ಎಸಗಿದ್ದಾರೆ ಎಂದು ಬೆಂಗಳೂರು ಗ್ರಾಮಾಂತರ ಎಸ್ ಪಿ ಸಿ.ಕೆ ಬಾಬಾ ಹೇಳಿಕೆ ನೀಡಿದ್ದಾರೆ. ಪಿಣ್ಯ ಪೊಲೀಸರ ಇನ್ಫಾರ್ಮರ್ಸ್ ಎಂದು ಆರೋಪಿಗಳು ಮನೆಗೆ ನುಗ್ಗಿದ್ದಾರೆ. ಮನೆಯಲ್ಲಿ ಗಾಂಜಾ ಮಾರಾಟ, ವೇಶ್ಯಾವಾಟಿಕೆ ನಡೆಸುತ್ತಿದ್ದಾರೆ ಎಂದು ದಾಳಿ ಮಾಡಿದ್ದಾರೆ. ಮನೆಗೆ ನುಗ್ಗಿ ಸಂತ್ರಸ್ತ ಮಹಿಳೆಯ 14 ವರ್ಷದ ಮಗನ ಮೇಲೆ ಹಲ್ಲೆ ಮಾಡಿದ್ದಾರೆ. ಮನೆಯಲ್ಲಿದ್ದ ಮಕ್ಕಳು, ಸಂತ್ರಸ್ತೆಯ ಸ್ನೇಹಿತೆಯ ಮೇಲು ಹಲ್ಲೆ ನಡೆಸಿದ್ದಾರೆ. ಹಲ್ಲೆಯ ಬಳಿಕ ಪಕ್ಕದ ಮನೆಯ ರೂಮ್ಗೆ ಎಳೆದೋಯ್ದು ರೇಪ್ ಮಾಡಿದ್ದಾರೆ. ಇಬ್ಬರು ಪುರುಷರನ್ನು ಕಟ್ಟಿಹಾಕಿ ಹಲ್ಲೆ ನಡೆಸಿ ಐವರು ಕೃತ್ಯ ಎಸೆಗಿದ್ದಾರೆ. ಮಾಹಿತಿ ಬಂದ ಕೂಡಲೇ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ಮಾಡಿದ್ದಾರೆ. ಸಂತ್ರಸ್ತ ಮಹಿಳೆಯ ಮೊಬೈಲ್ ಮತ್ತು ಐವತ್ತು ಸಾವಿರ…