Author: kannadanewsnow05

ಬೆಳಗಾವಿ : ಬೆಳಗಾವಿಯಲ್ಲಿ ಮನಕಲಕುವ ಘಟನೆ ಒಂದು ನಡೆದಿದ್ದು, ಒಂದೇ ದಿನ ದಂಪತಿ ಸಾವನ್ನಪ್ಪಿದ್ದು, ಮೂವರು ಮಕ್ಕಳು ಅನಾಥರಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅರವಳ್ಳಿಯಲ್ಲಿ ನಡೆದಿದೆ. ಅರವಳ್ಳಿ ಗ್ರಾಮದ ದಂಪತಿಗಳಾದ ಕರೆಪ್ಪ (36) ಹಾಗೂ ಮಧುರ (30) ಒಂದೇ ದಿನ ಸಾವನ್ನಪ್ಪಿದ್ದಾರೆ. ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಪತ್ನಿ ಮಧುರ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕ್ರಿಮಿನಾಶಕ ಮಾದರಿ ಸೇವಿಸಿ ಮಧುರ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಮಧುರ ಸಾವನಪ್ಪಿದ್ದು, ಪತ್ನಿ ಸಾವಿನ ವಿಚಾರ ತಿಳಿದು ಬೈಕ್ ನಲ್ಲಿ ಬರುತ್ತಿದ್ದ ಪತಿಗೆ ಅಪಘಾತ ಸಂಭವಿಸಿದೆ. ಬಸ್ ಚಕ್ರಕ್ಕೆ ಸಿಲುಕಿದ್ದಾನೆ. ಈ ಒಂದು ಘಟನೆಯಿಂದ ಗ್ರಾಮದಲ್ಲಿ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. ಮಧುರ ಹಾಗೂ ಕರಪ್ಪಗೆ ಮೂರು ಮಕ್ಕಳಿದ್ದು, ಸದ್ಯ ತಂದೆ ತಾಯಿಯನ್ನು ಕಳೆದುಕೊಂಡು ಮಕ್ಕಳು ಅನಾಥರಾಗಿದ್ದಾರೆ. ಗ್ರಾಮದಲ್ಲಿ ಶೋಕ ಮಡುಗಟ್ಟಿದೆ. ಒಂದೇ ದಿನ ಪತ್ನಿ ಮತ್ತು ಪತಿ ಸಾವಿನ ಸುದ್ದಿ ತಿಳಿದು ಇಡೀ ಗ್ರಾಮವೇ ಶೋಕದಲ್ಲಿ ಮುಳುಗಿದೆ.

Read More

ನವದೆಹಲಿ : ಇರಾನ್ ಇಸ್ರೇಲ್ ಯುದ್ಧದ ನಡುವೆ ಇದೀಗ ಮೊದಲ ಬಾರಿಗೆ ಇರಾನ್ ಪರಮೋಚ್ಚ ನಾಯಕ ಮೊಜ್ತಾಬಾ ಖಮನೈ ಮೊದಲ ಬಾರಿಗೆ ಪ್ರತ್ಯಕ್ಷನಾಗಿದ್ದು, ಯುದ್ಧ ಆರಂಭವಾದ ಬಳಿಕ ಮೊದಲ ಬಾರಿಗೆ ಎಂಟ್ರಿ ಆಗಿರುವ ವಿಡಿಯೋ ವೈರಲ್ ಆಗಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಇಸ್ರೇಲ್ ಹೇಳುವ ಪ್ರಕಾರ ಮೊಜ್ತಾಬಾ ಖಮನೈ ನನ್ನ ಕೊಲೆ ಮಾಡಿದ್ದೇವೆ ಅಥವಾ ತೀವ್ರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುವ ಹಂತದಲ್ಲಿದ್ದಾನೆ ಎಂದು ಹೇಳಿಕೆ ನೀಡಿದ್ದವು. ಆದರೆ IRGC ಮೊಜ್ತಾಬಾ ಖಮನೈ ಅವರ ನಿರ್ದೇಶನದ ಮೇರೆಗೆ ನಾವು ದಾಳಿ ಮಾಡುತ್ತಿದ್ದೇವೆ ಎನ್ನುವಂತಹ ಹೇಳಿಕೆಗಳನ್ನು ಕೊಡುತ್ತಿದ್ದರು ಅದರ ಜೊತೆಗೆ ಇದರ ಮಧ್ಯದಲ್ಲಿ ಅನೇಕ ಆಡಿಯೋಗಳು ಕೂಡ ಬಿಟ್ಟಿದ್ದರು. ಖಮನೈ ಹೇಳಿಕೆ ಕೊಟ್ಟಿದ್ದಾರೆ ಎನ್ನುವ ಆಡಿಯೋ ಆಗಿದ್ದವು. ಆದರೆ ಇದೀಗ ವೈರಲ್ ಆಗಿರುವ ವಿಡಿಯೋ ನೋಡಿದರೆ ಸೈನಿಕರಿಗೆ ಉರಿದುಂಬಿಸುವಂತಹ ಕೆಲಸ ಮಾಡುತ್ತಿದ್ದು ವಾರ್ ರೂಂಗೆ ಗ್ರಾಂಡ್ ಎಂಟ್ರಿ ಕೊಟ್ಟಿದ್ದರೆ. ವಾರ್ ರೂಂಗೆ ನಡೆದುಕೊಂಡು ಬರುತ್ತಿರುವ ಮೊಟ್ಟಮೊದಲ ವಿಡಿಯೋ ವೈರಲಾಗಿದೆ. ಈ ಮೂಲಕ…

Read More

ಕಲಬುರ್ಗಿ : ಕಲ್ಬುರ್ಗಿಯಲ್ಲಿ ಭೀಕರವಾದ ಕೊಲೆ ನಡೆದಿದ್ದು, ಸರ್ಕಾರಿ ಶಾಲಾ ಶಿಕ್ಷಕಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ ಹಂತಕರು ಶವವನ್ನು ಸುಟ್ಟುಹಾಕಿರುವ ಘಟನೆ ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಕಲ್ಮೂಡ ಗ್ರಾಮದಲ್ಲಿ ನಡೆದಿದೆ. ಜ್ಯೋತಿ ಕಪಾಳೆ ಹಿರೇಮಠ (57) ಕೊಲೆಯಾದ ಸರ್ಕಾರಿ ಶಾಲಾ ಶಿಕ್ಷಕಿ ಎಂದು ತಿಳಿದುಬಂದಿದೆ. ಕಲಬುರಗಿ ನಗರದ ಆನಂದ್ ಕಾಲೋನಿ ನಿವಾಸಿಯಾಗಿರುವ ಜ್ಯೋತಿ ಬೀದರ್ ಜಿಲ್ಲೆಯ ಭಾಲ್ಕಿ ತಾಲ್ಲೂಕಿನ ವಂದರಖೇಡ ಗ್ರಾಮದಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದರು. ಬೀದರ್‌ನಲ್ಲೇ ಮನೆ ಮಾಡಿ ಶಾಲೆಗೆ ಹೋಗಿಬರುತ್ತಿದ್ದ ಜ್ಯೋತಿ ವಾರಕ್ಕೊಂದು ಬಾರಿ ಕಲಬುರಗಿಗೆ ಬಂದು ವಾಪಸ್ ತೆರಳುತ್ತಿದ್ದರು. ಕಲಬುರಗಿಯಿಂದ ಬೀದರ್ ತೇರಳುವಾಗ ಮಾರ್ಗ ಮಧ್ಯದ ಕಮಲಾಪುರದ ಕಲ್ಮೂಡನಲ್ಲಿ ಜ್ಯೋತಿಯನ್ನು ಕೊಲೆಮಾಡಿದ್ದಾರೆ. ಬಳಿಕ ದುಷ್ಕರ್ಮಿಗಳು ರಸ್ತೆ ಪಕ್ಕದಲ್ಲಿ ಐದು ಲೀಟರ್ ಪೆಟ್ರೋಲ್ ಹಾಕಿ ಶವವನ್ನು ಸುಟ್ಟಿದ್ದಾರೆ.ಈ ಕುರಿತು ಪೊಲೀಸರು ಅಪರಿಚಿತ ಶವ ಪತ್ತೆ ಪ್ರಕರಣ ದಾಖಲಿಸಿಕೊಂಡಿದ್ದರು. ತನಿಖೆ ವೇಳೆಯಲ್ಲಿ ಕಲಬುರಗಿ ನಿವಾಸಿ ಕೊಲೆಯಾಗಿರೋದು ಬೆಳಕಿಗೆ ಬಂದಿದೆ. ಘಟನೆ ಸಂಬAಧ ಕಮಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ…

Read More

ಚಿಕ್ಕಮಗಳೂರು : ಚಿಕ್ಕಮಗಳೂರಲ್ಲಿ ಘೋರ ಘಟನೆ ನಡೆದಿದ್ದು, ಭದ್ರಾ ನದಿಯಲ್ಲಿ ಮುಳುಗಿ ಐಟಿ ಕಂಪನಿಯ ಉದ್ಯೋಗಿ ಸಾವನಪ್ಪಿದ್ದಾನೆ. ಈಜಲು ತೆರಳಿದ ವೇಳೆ ನೀರಿನಲ್ಲಿ ಮುಳುಗಿ ಅಭಿಷೇಕ್ (27) ಎಂಬಾತ ಸಾವನಪ್ಪಿದ್ದಾನೆ. ಬಾಳೆಹೊನ್ನೂರು ಸಮೀಪದ ಬನ್ನೂರು ಗ್ರಾಮದ ಬಳಿ ಈ ಒಂದು ಘಟನೆ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಎನ್ ಆರ್ ಪುರ ತಾಲೂಕಿನ ಬನ್ನೂರು ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ಗದಗ ಮೂಲದ ಅಭಿಷೇಕ್ ಎಂಬಾತ ಸ್ನೇಹಿತನ ಮದುವೆಗಾಗಿ ಬಂದಿದ್ದ ಸ್ನೇಹಿತರ ಜೊತೆಗೆ ಹೋಂ ಸ್ಟೇನಲ್ಲಿ ಅಭಿಷೇಕ್ ವಾಸ್ತವ್ಯ ಹೂಡಿದ್ದ. ಬಳಿಕ ಸ್ನೇಹಿತರ ಜೊತೆ ನದಿಯಲ್ಲಿ ಈಜಲು ಹೋಗಿದ್ದಾಗ ಮುಳುಗಿ ಸಾವನಪ್ಪಿದ್ದಾನೆ. ಬೆಂಗಳೂರಿನ ಐಟಿ ಕಂಪನಿಯಲ್ಲಿ ಅಭಿಷೇಕ್ ಕೆಲಸ ಮಾಡುತ್ತಿದ್ದ. ಅಗ್ನಿಶಾಮಕ ದಳ ಸಿಬ್ಬಂದಿಗಳು ಸ್ಥಳಕ್ಕೆ ಬಂದು ಅಭಿಷೇಕ್ ಮೃತ ದೇಹವನ್ನು ಹೊರಗೆ ತೆಗೆದಿದ್ದಾರೆ. ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Read More

ತುಮಕೂರು : ಹೆಜ್ಜೇನು ದಾಳಿಯಿಂದ ರೈತ ಹಾಗೂ ಬಾಲಕನ ಸ್ಥಿತಿ ಗಂಭೀರವಾಗಿದೆ. ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಯಲ್ಕೂರು ಗ್ರಾಮದಲ್ಲಿ ಒಂದು ಘಟನೆ ನಡೆದಿದೆ. ಕೃಷಿ ಕೆಲಸ ಮಾಡುತ್ತಿದ್ದಾಗ ನರಸಿಂಹ ಗೌಡ ಮತ್ತು ಸುಪ್ರೀತ್ ಎಂಬ ಬಾಲಕನ ಮೇಲೆ ಏಕಾಏಕಿ ಹೆಜ್ಜೆನು ದಾಳಿ ನಡೆಸಿವೆ. ಅಜ್ಜ ನರಸಿಂಹ ಗೌಡ ಹಾಗೂ ಸುಪ್ರೀತ್ ಗಂಭೀರವಾದ ಗಾಯಗಳಾಗಿದ್ದು ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹೆಚ್ಚಿನ ಚಿಕಿತ್ಸೆಗಾಗಿ ತುಮಕೂರು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಮುಂದುವರಿಸಲಾಗಿದ್ದು, ಮಿಡಿಗೇಶಿ ಪೊಲೀಸ್ ಠಾಣೆಯಲ್ಲಿ ಘಟನೆ ಕುರಿತಂತೆ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಇರಾನ್ ಇಸ್ರೇಲ್ ಯುದ್ಧದ ಪರಿಣಾಮ ರಾಜ್ಯದ ಹಲವೆಡೆ ಆಟೋಗಳಿಗೆ ಗ್ಯಾಸ್ ಪೂರೈಕೆಯಲ್ಲಿ ಅಭಾವ ಉಂಟಾಗಿದ್ದು, ಈ ಹಿನ್ನೆಲೆ ಚಾಲಕರು ಪರದಾಟ ನಡೆಸುತ್ತಿದ್ದಾರೆ. ಈ ವಿಚಾರವಾಗಿ ಗೃಹ ಸಚಿವ ಜಿ ಪರಮೇಶ್ವರ್ ಕೇಂದ್ರ ಸರ್ಕಾರಕ್ಕೆ ನಾವು ಕೂಡ ಬೇಡಿಕೆ ಇಟ್ಟಿದ್ದೇವೆ. ಕಾಳ ಸಂತೆಯಲ್ಲಿ ಸಿಲಿಂಡರ್ ಏನಾದರು ಮಾರಾಟ ಮಾಡಿದರೆ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ವಿಚಾರವಾಗಿ ಮಾತನಾಡಿದ ಅವರು ಯುದ್ಧದಿಂದ ತೊಂದರೆ ಆಗುತ್ತಿದೆ ಅನ್ನುವುದು ಎಲ್ಲರಿಗೂ ಗೊತ್ತು. ಆದರೆ ನಮಗೆ ಕೊಡಬೇಕಾಗಿರುವುದನ್ನು ಕೊಡಬೇಕು ಅಲ್ವಾ? ಎಲ್ಲಾ ರಾಜ್ಯಗಳಿಗೆ ಕೊಟ್ಟಂತೆ ನಮಗೂ ಪೂರೈಕೆ ಮಾಡಬೇಕು. ನಮಗೂ ಸಿಲಿಂಡರ್ ಹಾಗು ತೈಲ ಬೇಕು. ಆದರೆ ಕಾಳ ಸಂತೆಯಲ್ಲಿ ಸಿಲಿಂಡರ್ ಮಾರಾಟ ಮಾಡಿದರೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ.

Read More

ಬೆಂಗಳೂರು : ಬೆಂಗಳೂರಿನಲ್ಲಿ ದುಷ್ಕರ್ಮಿಗಳು ಬಾರ್ ನಲ್ಲಿ ಕಿರಿಕ್ ಮಾಡಿ, ನಟ ನಿರಂಜನ್ ಕುಮಾರ್ ಮೇಲೆ ಬಿಯರ್ ಬಾಟಲ್ ನಿಂದ ಹಲ್ಲೆ ನಡೆಸಿದ್ದಾರೆ. ಮಾರ್ಚ್ 28ರಂದು ನಡೆದ ಈ ಒಂದು ಹಲ್ಲೆ ಪ್ರಕರಣ ಇದೀಗ ತಡವಾಗಿ ಬೆಳಕಿಗೆ ಬಂದಿದೆ. ಬಾರ್ ನಲ್ಲಿ ಕಿರಿಕ್ ಮಾಡಿ ದುಷ್ಕರ್ಮಿಗಳು ನಟ ನಿರಂಜನ್ ಮೇಲೆ ಬಿಯರ್ ಬಾಟಲಿನಿಂದ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ. ಮಾರ್ಚ್ 28 ರಂದು ನಡೆದಿರುವ ಘಟನೆ ಇದೀಗ ತಡವಾಗಿ ಬೆಳಕಿಗೆ ಬಂದಿದೆ. ಒಡೆಯ ಚಿತ್ರದಲ್ಲಿ ದರ್ಶನ್ ತಮ್ಮನ ಪಾತ್ರದಲ್ಲಿ ನಟ ನಿರಂಜನ್ ನಟಿಸಿದ್ದರು. ಕೆಲಸ ನಿಮಿತ್ಯವಾಗಿ ನಟ ಯಶಸ್ ಸೂರ್ಯ ನಿವಾಸಕ್ಕೆ ನಿರಂಜನ್ ತೆರಳಿದ್ದರು. ಈ ವೇಳೆ ದುಷ್ಕರ್ಮಿಗಳು ಬಿಯರ್ ಬಾಟಲ್ ಇಂದ ಹಲ್ಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಕೆಲಸ ಮುಗಿಸಿ ಮಂತ್ರಿ ಆಲಯನ್ಸ್, ಬಳಿಯ ಬಾರ್ ಗೆ ನಟ ನಿರಂಜನ್ ಬಂದಿದ್ದರು. ನೀರು ಕುಡಿಯಲೆಂದು ಬಾರಿಗೆ ಬಂದಿದ್ದೆ ಅಂತ ನಟ ನಿರಂಜನ್ ಹೇಳಿಕೆ ನೀಡಿದ್ದು ನಿರಂಜನನ್ನು ತಳ್ಳಿದಕ್ಕೆ ಗಲಾಟೆ ಆಗಿದೆ ನೀನು…

Read More

ಹಾವೇರಿ : ಮನೆಯ ಮುಂದೆ ನಿಂತಿದ್ದ 2 ವರ್ಷದ ಮಗುವಿನ ಮೇಲೆ ಟ್ರ್ಯಾಕ್ಟರ್ ಹರಿದು ಮಗು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲ್ಲೂಕಿನ ಹಳೆಬಂಕಾಪುರ ಗ್ರಾಮದಲ್ಲಿ ನಡೆದಿದೆ. ಮೃತ ಮಗುವನ್ನ ರಬೀಯಾ ದೊಡ್ಡಮನಿ (2) ಎಂದು ಗುರುತಿಸಲಾಗಿದೆ. ಮನೆಯ ಮುಂದೆ ನಿಂತಿದ್ದ ಮಗುವಿನ ಮೇಲೆ ಏಕಾಏಕಿ ಟ್ರ್ಯಾಕ್ಟರ್ ಹರಿದು ಸಾವನ್ನಪ್ಪಿದೆ. ಟ್ರ್ಯಾಕ್ಟರ್ ಚಾಲಕ ಪರಾರಿಯಾಗಿದ್ದಾನೆ. ಬಂಕಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

Read More

ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಒಂದೇ ಜಿಮ್ ನಲ್ಲಿ ಎರಡು ಲವ್ ಜಿಹಾದ್ ಪ್ರಕರಣ ನಡೆದಿದ್ದು ಈಗಾಗಲೇ ಮೊದಲ ಪ್ರಕರಣದಲ್ಲಿ ಆರೋಪಿ ಸಮೀರ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಇನ್ನು ಎರಡನೇ ಪ್ರಕರಣಕ್ಕೆ ಇದೀಗ ಸಂತ್ರಸ್ತೇ ಯುವತಿ ಸ್ಫೋಟಕ ಹೇಳಿಕೆ ನೀಡಿದ್ದು, ಇದರ ಹಿಂದೆ ಕಾಂಗ್ರೆಸ್ ಮುಖಂಡನ ಕೈವಾಡ ಇದೆ ಎಂದು ಯುವತಿ ಪ್ರಕರಣಕ್ಕೆ ಹೊಸ ತಿರುವು ಕೊಟ್ಟಿದ್ದಾಳೆ. ಇದೀಗ ಯುವತಿ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆರಡು ವಿಡಿಯೋಗಳನ್ನು ಯುವತಿ ಬಿಡುಗಡೆ ಮಾಡಿದ್ದಾರೆ. ಇದರಲ್ಲಿ ಕಾಂಗ್ರೆಸ್​​​​ ಮುಖಂಡನ ಕೈವಾಡ ಇದೆ ಎಂದು ಆರೋಪ ಮಾಡಲಾಗಿದೆ. ಹುಬ್ಬಳ್ಳಿಯ ಕೇಶ್ವಾಪುರದಲ್ಲಿ ದಾಖಲಾಗಿರುವ ಎರಡನೇ ಲವ್ ಜಿಹಾದ್ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಯುವತಿಯು ಮತ್ತೊಮ್ಮೆ ವಿಡಿಯೋ ಮೂಲಕ ಸ್ಪಷ್ಟೀಕರಣ ನೀಡಿದ್ದಾರೆ. ನಿನ್ನೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದ ವಿಡಿಯೋಗಳ ಸತ್ಯಾಸತ್ಯತೆಯನ್ನು ಅವರು ಬಿಚ್ಚಿಟ್ಟಿದ್ದಾರೆ.ನಿನ್ನೆ ವೈರಲ್ ಆಗಿರುವ ವಿಡಿಯೋಗಳು ಸುಮಾರು ಒಂದು ವರ್ಷದ ಹಿಂದಿನವು. ಆರೋಪಿ ಮುಪಿಜ್ ಮಿಯಾನವರ ನನ್ನ ಖಾಸಗಿ ಕ್ಷಣಗಳ ವಿಡಿಯೋವನ್ನು ಇಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ.…

Read More

ವಿಜಯನಗರ : ಬೋಲೇರೋ ಗೂಡ್ಸ್ ವಾಹನ ಡಿಕ್ಕಿಯಾಗಿ ಬೈಕ್ ನಲ್ಲಿ ಇದ್ದಂತಹ ಇಬ್ಬರು ಅರಣ್ಯ ಸಿಬ್ಬಂದಿಗಳು ಸ್ಥಳದಲ್ಲೇ ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ವೆಂಕಟಾಪುರ ಗ್ರಾಮದ ಬಳಿ ಇಂದು ನಡೆದಿದೆ. ಬೋಲೇರೋ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಅರಣ್ಯ ಸಿಬ್ಬಂದಿಗಳು ಸಾವನ್ನಪ್ಪಿದ್ದಾರೆ. ಕಮಲಾಪುರದ ಕೃಷ್ಣ (26) ಹಾಗೂ ವೆಂಕಟಪುರದ ಹನುಮಂತಪ್ಪ (50) ಮೃತ ದುರ್ದೈವಿಗಳು ಎಂದು ತಿಳಿದುಬಂದಿದೆ. ರಾತ್ರಿ ಪಾಳಿಯದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಕೆಲಸ ಮಾಡುತ್ತಿದ್ದರು. ಈ ವೇಳೆ ಗೂಡ್ಸ್ ವಾಹನ ಡಿಕ್ಕಿಯಾಗಿ ಬೈಕ್ ನಲ್ಲಿ ತೆರಳುತ್ತಿದ್ದ ಇಬ್ಬರು ಸಿಬ್ಬಂದಿಗಳು ಸಾವನ್ನಪ್ಪಿದ್ದಾರೆ. ಮೃತರು ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದರು ಸದ್ಯ ಗೂಡ್ಸ್ ವಾಹನ ಹಿಡಿದು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಹಂಪಿ ಸಿಪಿಐ ರಾಜೇಶ್ ಬಟಕುರ್ಕಿ ಭಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಕಮಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More